Headlines

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

ಪರೀಕ್ಷೆ ಮುಗಿದ ಖುಷಿಯಲ್ಲಿ ಪಾರ್ಟಿ ಮಾಡಲು ಹೋಗಿ ಹೆಣವಾದ ಕಾಲೇಜು ವಿದ್ಯಾರ್ಥಿ

ನೊಯ್ಡಾ, ಏಪ್ರಿಲ್ 8: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಆತನ ಮೂವರು ಸ್ನೇಹಿತರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ ಹರ್ಷಿತ್ ಭಟ್ ಎಂದು ಗುರುತಿಸಲಾಗಿದೆ. ನೊಯ್ಡಾದ ಅಮಿಟಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳ ನಂತರ ಪಾರ್ಟಿಗಾಗಿ ಸೂಪರ್‌ನೋವಾ ಬಳಿಯ ನಿರ್ಜನ ಜಾಗಕ್ಕೆ ಹೋಗಿದ್ದರು. ಆಗ ಜಮೀನಿನಲ್ಲಿ ಹರ್ಷಿತ್ ಸ್ನಾನ ಮಾಡಲು ನೀರು…

Read More

‘ರಾಮಾಯಣ’ ಸಿನಿಮಾದ ಹೈಲೈಟ್ ವಿಎಫ್​​ಎಕ್ಸ್ ಅಲ್ಲ, ನಿರ್ದೇಶಕ ಹೇಳಿದ್ದೇನು?

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಭಾರಿ ಅದ್ಧೂರಿ ವಿಎಫ್​​ಎಕ್ಸ್, ಅದ್ಧೂರಿ ಸೆಟ್​​ಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಪೌರಾಣಿಕ ಕತೆಗೆ ಭವ್ಯತೆಯನ್ನು ಸೇರಿಸಿ ಪ್ರೇಕ್ಷಕರಿಗೆ ನೀಡಲಾಗುತ್ತಿದೆ ‘ರಾಮಾಯಣ’ ಸಿನಿಮಾನಲ್ಲಿ. ಹಲವು ಆಸ್ಕರ್​​ಗಳನ್ನು ಗೆದ್ದಿರುವ ಡಿಎನ್​​ಇಜಿ ಸಂಸ್ಥೆ ಈ ಸಿನಿಮಾಕ್ಕೆ ವಿಎಫ್​​ಎಕ್ಸ್ ಮಾಡಿದೆ. ಸಿನಿಮಾಕ್ಕೆ ಇಬ್ಬರು ಆಸ್ಕರ್ ವಿಜೇತ ಸಂಗೀತ ನಿರ್ದೇಶಕರು ಸಂಗೀತ ನೀಡಲಿದ್ದಾರೆ. ರಣ್​​ಬೀರ್, ಯಶ್ ಇನ್ನೂ ಹಲವು ಸ್ಟಾರ್​​ಗಳು ಸಿನಿಮಾನಲ್ಲಿ ನಟಿಸಲಿದ್ದಾರೆ. ಇಷ್ಟೆಲ್ಲ…

Read More

ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ: ದೋಚಿದ್ದು 9.7 ಲಕ್ಷ ಮೌಲ್ಯದ ಆಭರಣ – Kannada News | Bengaluru Hospital Staff Steals Patient’s 9.7 Lakh Gold Jewelry

ಬೆಂಗಳೂರು, ಮೇ 07: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಆಸ್ಪತ್ರೆಯೊಂದರಲ್ಲಿ ಘಟನೆ ಒಟ್ಟು 9.7 ಲಕ್ಷ…

Read More

BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ – Kannada News | BY Vijayendra Visits Dharmasthala: Offers Special Prayers to Lord Manjunatha Amid Cross Voting Controversy

ಮಂಗಳೂರು, ಜೂನ್ 26: ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ…

Read More

ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ! – Kannada News | Doodhganga River Surges 20 Feet Overnight, Submerging Bridges and Threatening Villages in Chikkodi

ಬೆಳಗಾವಿ, ಜುಲೈ 07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೂದ್‌ಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಒಂದೇ ರಾತ್ರಿಯಲ್ಲಿ ದೂದ್‌ಗಂಗಾ ನದಿಯಲ್ಲಿ ಬರೋಬ್ಬರಿ 20 ಅಡಿಗಳಷ್ಟು ನೀರು ಏರಿಕೆ ಆಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರಸ್ತುತ ಹತ್ತು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಮಲ್ಲಿಕವಾಡ ಮತ್ತು ದತ್ತವಾಡ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಯೂ ಸಂಪೂರ್ಣವಾಗಿ ಮುಳುಗಿದ್ದು, ಸೇತುವೆಯ ಮೇಲ್ಭಾಗದಲ್ಲಿ ನೀರು…

Read More

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಬೆಂಗಳೂರು (ಏ. 13): ಸ್ಮಾರ್ಟ್‌ಫೋನ್ (Smartphone) ಸ್ಟೋರೇಜ್ ಖಾಲಿಯಾಗುವುದು ಸಾಮಾನ್ಯ ಸಮಸ್ಯೆ. ನೀವು 1TB ಸ್ಟೋರೇಜ್ ಹೊಂದಿರುವ ಮೊಬೈಲ್ ರೂಪಾಂತರವನ್ನು ಖರೀದಿಸಿದರೂ, ಸ್ವಲ್ಪ ಸಮಯದ ನಂತರ ಆ ಸ್ಟೋರೇಜ್ ಕೂಡ ಸಾಕಾಗುವುದಿಲ್ಲ. ನೀವು ಹಳೆಯ ಫೋನ್ ಹೊಂದಿದ್ದರೆ ಈ ಸಮಸ್ಯೆ ಬಗ್ಗೆ ಕೇಳೋದೇ ಬೇಡ. ಅನೇಕ ಜನರು ಇದರಿಂದ ನಿರಾಶೆಗೊಂಡು ಹೊಸ ಫೋನ್ ಖರೀದಿಸಬೇಕಾಗುತ್ತದೆ. ಈಗ, ಈ ಸಮಸ್ಯೆಯನ್ನು ಪರಿಹರಿಸಲು ಗೂಗಲ್ ಆಟೋಮ್ಯಾಟಿಕ್ ಬ್ಯಾಕಪ್ ಎಂಬ ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಈ ವೈಶಿಷ್ಟ್ಯವು ಸ್ಟೋರೇಜ್-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ….

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಬಿಡುಗಡೆ ಆಯ್ತು ‘ಕೆಡಿ’ಯ ಸೆರಗಿನ ಹಾಡು, ಹಾಟ್ ಅವತಾರದಲ್ಲಿ ನೋರಾ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹೊಸ ಹಾಡೊಂದು ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಸಿನಿಮಾ ಎಂದರೆ ಹಾಡುಗಳು ಪಕ್ಕಾ ಸೂಪರ್ ಹಿಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ‘ಕೆಡಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ. ಇಂದು (ಮಾರ್ಚ್ 14) ‘ಕೆಡಿ’ಯ ಹೊಸ ಹಾಡು ಬಿಡುಗಡೆ ಆಗಿದೆ. ‘ಸೆರಗ ಸರ್ಸೆ’ ಎಂಬ ಈ ಹಾಡಿನ ಪ್ರೋಮೊ ಕೆಲ ದಿನಗಳ ಹಿಂದೆ ಪ್ರೇಮ್ ಹಂಚಿಕೊಂಡಿದ್ದರು. 26 ಸೆಕೆಂಡಿನ…

Read More

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More