Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ?

ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು ದುಬೈ ನಗರಗಳು ಭದ್ರತಾ ಕ್ರಮಗಳು ಕಠಿಣಗೊಂಡಿದ್ದು, ವಿಮಾನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಬೆಳವಣಿಗೆಯಿಂದಾಗಿ ವಿದೇಶ ಪ್ರವಾಸದಲ್ಲಿದ್ದ ಮತ್ತು ಉದ್ಯೋಗ ನಿಮಿತ್ತ ತೆರಳಿದ್ದ ಅನೇಕ ಕನ್ನಡಿಗರು ಅಲ್ಲಿ ಸಿಲುಕಿಕೊಂಡಿದ್ದಾರೆ.

ಬಹ್ರೇನ್​ನಲ್ಲಿ ಸಿಲುಕಿದವರೆಷ್ಟು?

ಬಹ್ರೇನ್ ರಾಜಧಾನಿ ಮನಾಮಾ ನಗರದಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಪಂಜು, ಜಮುನ, ಸುರೇಂದ್ರ ಪ್ರಸಾದ್, ರತೀಶ್ ಹಾಗೂ ಮೈಸೂರು ಮೂಲದ ನೇತ್ರಾವತಿ ಸೇರಿದಂತೆ ಒಟ್ಟು ಆರು ಮಂದಿ ಕನ್ನಡಿಗರು ಸಿಲುಕಿದ್ದಾರೆ. ತಾವು ವಾಸಿಸುತ್ತಿರುವ ಕಟ್ಟಡದ ಪಕ್ಕದಲ್ಲೇ ಬಾಂಬ್ ಸ್ಫೋಟವಾಗುತ್ತಿರುವುದಾಗಿ ಅವರು ತಿಳಿಸಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ತಮ್ಮವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ದುಬೈನಲ್ಲಿ ಸಿಲುಕಿ ಕನ್ನಡಿಗರ ಪರದಟ!

ದುಬೈನಲ್ಲಿ ಕೂಡ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಪ್ರವಾಸದ ವೇಳೆ ಅಲ್ಲೇ ಸಿಲುಕಿಕೊಂಡಿದ್ದಾರೆ. ಅವರು ಉಳಿದಿದ್ದ ಹೋಟೆಲ್ ಸಮೀಪ ಮಿಸೈಲ್ ದಾಳಿ ನಡೆದಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಶಾಸಕ ಬಿ. ನಾಗೇಂದ್ರ ಅವರು ಮುಖ್ಯಮಂತ್ರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರೊಂದಿಗೆ ಮಾತನಾಡಿ ದುಬೈನಲ್ಲಿ ಸಿಲುಕಿರುವ ಜನರ ಕುರಿತು ಮಾಹಿತಿ ನೀಡಿದ್ದಾರೆ. ಮಾರ್ಚ್ 2ರವರೆಗೆ ವಿಮಾನ ಹಾರಾಟ ಇರುವುದಿಲ್ಲವೆಂದು ತಿಳಿಸಲಾಗಿದೆ.

ಇದನ್ನೂ ಓದಿ ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ

ಬಳ್ಳಾರಿಯಿಂದ ಫೆಬ್ರವರಿ 24ರಂದು ದುಬೈ ಪ್ರವಾಸಕ್ಕೆ ತೆರಳಿದ್ದ 35 ಮಂದಿ ಪ್ರವಾಸಿಗರು ವಾಪಸ್ಸಾಗಬೇಕಿದ್ದ ವೇಳೆಯಲ್ಲಿ ಯುದ್ಧ ಭೀತಿ ಹಿನ್ನೆಲೆಯಲ್ಲಿ ಅಲ್ಲೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಒಟ್ಟು 50 ಮಂದಿ ಪ್ರವಾಸಿಗರು ವಿಮಾನ ರದ್ದಾದ ಪರಿಣಾಮ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಣಕಾಸಿನ ತೊಂದರೆಗೂ ಒಳಗಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಗಿರೀಶ್ ಕೆರೂರು, ಫ್ರಾನ್ಸ್ ಮೂಲದ IDEMIA ಕಂಪನಿಯಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿದ್ದು, ದುಬೈ ಮಾರ್ಗವಾಗಿ ಪ್ಯಾರಿಸ್ ತೆರಳಬೇಕಾಗಿತ್ತು. ಆದರೆ ವಿಮಾನ ರದ್ದಾದ ಕಾರಣ ಅವರು ಅಬುಧಾಬಿಯ ಯಾಸ್ ಪ್ಲಾಜಾ ಹೋಟೆಲ್‌ನಲ್ಲಿ ತಂಗಿದ್ದಾರೆ. ಸದ್ಯ ಸುರಕ್ಷಿತರಾಗಿದ್ದರೂ, ಯಾವಾಗ ವಿಮಾನ ಸಂಚಾರ ಪುನರಾರಂಭವಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲವೆಂದು ತಿಳಿಸಿದ್ದಾರೆ.

ಒಟ್ಟಾರೆ ಲಭ್ಯ ಮಾಹಿತಿಯ ಪ್ರಕಾರ ಬಹ್ರೇನ್‌ನಲ್ಲಿ 6 ಮಂದಿ, ದುಬೈನಲ್ಲಿ ಬಳ್ಳಾರಿ ಮೂಲದ 35 ಮಂದಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ 50 ಮಂದಿ ಸೇರಿದಂತೆ ಕನಿಷ್ಠ 90ಕ್ಕೂ ಹೆಚ್ಚು ಕನ್ನಡಿಗರು ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಭಾರತೀಯ ವಿದೇಶಾಂಗ ಇಲಾಖೆ ಸಹಾಯವಾಣಿ ಆರಂಭಿಸಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಸಿಲುಕಿರುವ ಕನ್ನಡಿಗರನ್ನು ಶೀಘ್ರ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂಬುದು ಕುಟುಂಬಸ್ಥರ ಒತ್ತಾಯವಾಗಿದೆ.

ಇದನ್ನೂ ಓದಿ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು ಏರ್​ಪೋರ್ಟ್​ನಲ್ಲಿ 15 ವಿಮಾನಗಳು ರದ್ದು

ಯುದ್ಧದ ಹಿನ್ನೆಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 15 ವಿಮಾನಗಳು ರದ್ದಾಗಿವೆ. ವಿದೇಶಗಳಿಂದ ಆಗಮಿಸಬೇಕಿದ್ದ 09 ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 06 ವಿಮಾನಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ದುಬೈ, ಅಬುಧಾಬಿ, ಜಿದ್ದಾ, ದೋಹಾ, ಡಮಾಮ್ ಹಾಗೂ ರಿಯಾದ್ ಸಂಪರ್ಕಿತ ಪ್ಲೈಟ್ಗಳು ರದ್ದಾಗಿವೆ. ಎಮಿರೇಟ್ಸ್, ಕತಾರ್ ಏರ್ವೇಸ್, ಏರ್ ಇಂಡಿಯಾ ಎಕ್ಸ್ಪ್ರೆಸ್, ಇಂಡಿಗೋ ಮತ್ತು ಎತಿಹಾದ್ ಏರ್ವೇಸ್ ವಿಮಾನಗಳು ಸೇವೆ ನಿಲ್ಲಿಸಿವೆ. ಆಗಮಿಸಬೇಕಿದ್ದ ವಿಮಾನಗಳಲ್ಲಿ 1,533 ಪ್ರಯಾಣಿಕರು ಹಾಗೂ ನಿರ್ಗಮಿಸಬೇಕಿದ್ದ ವಿಮಾನಗಳಲ್ಲಿ 806 ಮಂದಿ ಟಿಕೆಟ್ ಬುಕ್ ಮಾಡಿದ್ದು, ರದ್ದತಿ ಬಗ್ಗೆ ಮುಂಚಿತವಾಗಿ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:21 am, Sun, 1 March 26

Source link

ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..! – Kannada News | All my soldiers are ready for battle: Daren Sammy

“ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಾಗಿದ್ದಾರೆ”… ಹೀಗಂದಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ. ಹೀಗೆ ವಿಂಡೀಸ್ ಪಡೆ ಸಿದ್ಧರಾಗಿರುವುದು ಭಾರತ ತಂಡವನ್ನು ಎದುರಿಸಲು ಎಂಬುದು ವಿಶೇಷ. ಮಾರ್ಚ್ 1 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್​ಗೇರಲಿದೆ.

ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ, ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಿದ್ಧರಾಗಿದ್ದಾರೆ.  ತಂಡವು ಯಾವುದೇ ಸವಾಲನ್ನು ಎದುರಿಸಲು ಸಜ್ಜಾಗಿದ್ದಾರೆ. ಮಾರ್ಚ್ 1 ರಂದು ನಡೆಯಲಿರುವ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಭಾರತ ತಂಡವನ್ನು “ಗೋಲಿಯಾತ್” (ಬಲಿಷ್ಠ ತಂಡ) ಗೆ ಹಾಗೂ ತಮ್ಮ ತಂಡವನ್ನು “ಡೇವಿಡ್” ಗೆ ಹೋಲಿಸಿದ ಸ್ಯಾಮಿ,  2016ರಲ್ಲಿ ಡೇವಿಡ್ (ವೆಸ್ಟ್ ಇಂಡೀಸ್) ಹೇಗೆ ಗೋಲಿಯಾತ್ (ಭಾರತ) ಅನ್ನು ಸೋಲಿಸಿತ್ತೋ ಅದೇ ಇತಿಹಾಸ ಮರುಕಳಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡೇವಿಡ್ ಮತ್ತು ಗೋಲಿಯಾತ್ ಬೈಬಲ್‌ನ (1 ಸ್ಯಾಮ್ಯುಯೆಲ್ 17) ಪ್ರಸಿದ್ಧ ಕಥೆಯಾಗಿದ್ದುಇದು ಸಣ್ಣ ದುರ್ಬಲ ವ್ಯಕ್ತಿ (ಡೇವಿಡ್) ತನ್ನ ಬುದ್ಧಿವಂತಿಕೆ ಮತ್ತು ನಂಬಿಕೆಯಿಂದ ಬಲಿಷ್ಠದೈತ್ಯ ಯೋಧನನ್ನು (ಗೋಲಿಯಾತ್) ಸೋಲಿಸುವ ಅಸಾಧ್ಯ ವಿಜಯವನ್ನು ಚಿತ್ರಿಸುತ್ತದೆ. ಈ ಕಥೆಯು ಸಾಂಕೇತಿಕವಾಗಿ ಪ್ರಸ್ತಾಪಿಸುವ ಮೂಲಕ ವೆಸ್ಟ್ ಇಂಡೀಸ್ ತಂಡವು ಬಲಿಷ್ಠ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲಿದೆ ಎಂದು ಡ್ಯಾರೆನ್ ಸ್ಯಾಮಿ ಹೇಳಿದ್ದಾರೆ.

ಅಂದಹಾಗೆ ಇದೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2016 ರಲ್ಲಿ ಡ್ಯಾರೆನ್ ಸ್ಯಾಮಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಗೆದ್ದಿತ್ತು. ಆ ನೆನಪುಗಳು ತಂಡಕ್ಕೆ ಹೆಚ್ಚಿನ ಶಕ್ತಿ ನೀಡಲಿವೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವಿಂಡೀಸ್ ಪಡೆಯಿಂದ ಪ್ರಚಂಡ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದಿದ್ದಾರೆ.

ಇದನ್ನೂ ಓದಿ: PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ

ಇದೇ ವೇಳೆ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ ಅವರ ಉತ್ತಮ ಬ್ಯಾಟಿಂಗ್ ಫಾರ್ಮ್ ಮತ್ತು ತಂಡದ ಆಳವಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ  ಹೆಮ್ಮೆ ವ್ಯಕ್ತಪಡಿಸಿದ ಸ್ಯಾಮಿ, ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧ ನಮ್ಮ ಬ್ಯಾಟರ್​ಗಳು ಅಬ್ಬರಿಸುವುದನ್ನು ನಿರೀಕ್ಷಿಸಬಹುದು. ಈ ಮೂಲಕ ಭಾರತ ತಂಡಕ್ಕೆ ಸೋಲುಣಿಸಿ ನಾವು ಸೆಮಿಫೈನಲ್​ಗೆ ಪ್ರವೇಶಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On – 10:26 am, Sun, 1 March 26

Source link

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ – Kannada News | Anchors in Tears on Iranian TV as Reports Say Supreme Leader Khamenei Is Dead

ಟೆಹ್ರಾನ್, ಮಾರ್ಚ್​ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ – Kannada News | Unveiling the True Meaning of Athiratha and Maharatha: Ancient Warrior Ranks

ಪ್ರಾಚೀನ ಯುದ್ಧಗಳ ಸಂದರ್ಭದಲ್ಲಿ ಬಳಕೆಯಲ್ಲಿದ್ದ ಅತಿರಥ ಮಹಾರಥ ಪದಗಳ ನಿಜವಾದ ಅರ್ಥವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇವು ಯುದ್ಧದಲ್ಲಿ ಭಾಗವಹಿಸುವ ಯೋಧರ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಳೆಯುವ ಮಾನದಂಡಗಳಾಗಿದ್ದವು. ಯುದ್ಧದಲ್ಲಿ ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಎದುರಾಳಿಗಳೊಂದಿಗೆ ಹೋರಾಡಬಲ್ಲನು ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ವರ್ಗೀಕರಿಸಲಾಗಿದೆ. ಒಟ್ಟು ಐದು ವಿಭಾಗಗಳಿದ್ದು, ಅವು ಕ್ರಮವಾಗಿ ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ.

ಮೊದಲನೆಯದಾಗಿ, ರಥ ಎಂಬ ಪದವು ಏಕಕಾಲದಲ್ಲಿ 5,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವಿರುವ ಯೋಧನನ್ನು ಸೂಚಿಸುತ್ತದೆ. ಶಿಶುಪಾಲ, ಶಕುನಿ, ಸೋಮದತ್ತ ಮತ್ತು ಶಿಖಂಡಿಯಂತಹ ಪಾತ್ರಗಳು ಈ ವರ್ಗಕ್ಕೆ ಸೇರುತ್ತಾರೆ.

ಎರಡನೆಯದು, ಅತಿರಥ. ಈ ಶ್ರೇಣಿಯ ಯೋಧನು ಒಬ್ಬ ರಥನ ಸಾಮರ್ಥ್ಯಕ್ಕಿಂತ 12 ಪಟ್ಟು ಹೆಚ್ಚು ಶಕ್ತಿಯನ್ನು ಹೊಂದಿರುತ್ತಾನೆ. ಅಂದರೆ, ಅತಿರಥನು ಏಕಕಾಲದಲ್ಲಿ 60,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತಾನೆ. ಲವ-ಕುಶರು, ದ್ರುಪದರು ಮತ್ತು ದುರ್ಯೋಧನನಂತಹ ಪ್ರಬಲ ಯೋಧರು ಈ ವರ್ಗಕ್ಕೆ ಸೇರುತ್ತಾರೆ.

ಮೂರನೆಯದಾಗಿ, ಮಹಾರಥ. ಇವರು ಅತಿರಥನಿಗಿಂತ 12 ಪಟ್ಟು ಹೆಚ್ಚು ಶಕ್ತಿಶಾಲಿಗಳು. ಒಬ್ಬ ಮಹಾರಥನು ಒಂದೇ ಸಮಯದಲ್ಲಿ 7,20,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತಾನೆ. ಸಾಕ್ಷಾತ್ ಭಗವಾನ್ ಶ್ರೀರಾಮ, ಶ್ರೀಕೃಷ್ಣ ಮತ್ತು ಅರ್ಜುನನಂತಹ ದೈವಿಕ ಮತ್ತು ಪರಾಕ್ರಮಿ ವೀರರು ಈ ಮಹಾರಥ ಶ್ರೇಣಿಯಲ್ಲಿ ಗುರುತಿಸಲ್ಪಟ್ಟಿದ್ದಾರೆ.

ಇದನ್ನೂ ಓದಿ: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ!

ನಾಲ್ಕನೆಯದು, ಅತಿಮಹಾರಥ. ಈ ಯೋಧರು ಮಹಾರಥರಿಗಿಂತ 12 ಪಟ್ಟು ಅಧಿಕ ಸಾಮರ್ಥ್ಯಶಾಲಿಗಳು. ಅಂದರೆ, ಅತಿಮಹಾರಥರು ಏಕಕಾಲದಲ್ಲಿ 86,40,000 ಜನರೊಂದಿಗೆ ಹೋರಾಡಬಲ್ಲರು. ಹನುಮ ಮತ್ತು ಪರಶುರಾಮರಂತಹ ಅವತಾರಿಗಳು ಮತ್ತು ಅತಿಮಾನುಷ ಶಕ್ತಿಯುಳ್ಳವರು ಈ ಉನ್ನತ ವರ್ಗಕ್ಕೆ ಸೇರುತ್ತಾರೆ.

ಐದನೆಯ ಶ್ರೇಣಿ ಮಹಾಮಹಾರಥ. ಈ ವರ್ಗವು ಅತ್ಯುನ್ನತ ಯೋಧ ಸಾಮರ್ಥ್ಯವನ್ನು ಸೂಚಿಸುತ್ತದೆ, ಇದು ಅತಿಮಹಾರಥರಿಗಿಂತಲೂ ಹೆಚ್ಚಿನ ಶ್ರೇಷ್ಠತೆಯನ್ನು ಪ್ರತಿನಿಧಿಸುತ್ತದೆ.

ಹೀಗೆ, ಅತಿರಥ ಮಹಾರಥ ಎಂಬ ಪದಗಳು ಕೇವಲ ಸುಮ್ಮನೆ ಬಳಸುವ ಶಬ್ದಗಳಲ್ಲ, ಬದಲಿಗೆ ಅವು ಮಹಾ ಪುರುಷರ ಅಸಾಧಾರಣ ಶಕ್ತಿ ಮತ್ತು ಪರಾಕ್ರಮವನ್ನು ಸೂಚಿಸುವ ಐತಿಹಾಸಿಕ ಮತ್ತು ಪೌರಾಣಿಕ ಪದಗಳಾಗಿವೆ. ಈ ಪದಗಳ ನಿಜವಾದ ಅರ್ಥವನ್ನು ಅರಿತುಕೊಂಡು, ನಾವು ಅವುಗಳನ್ನು ಸಕಾರಾತ್ಮಕವಾಗಿ ಬಳಸಬೇಕು. ಏಕೆಂದರೆ, ನಮ್ಮ ಮಾತುಗಳು ನಮ್ಮ ಜೀವನ, ನಮ್ಮ ಮಕ್ಕಳು ಮತ್ತು ಕುಟುಂಬದ ಮೇಲೆ ಆಳವಾದ ಪ್ರಭಾವ ಬೀರುತ್ತವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ! – Kannada News | Ali Khamenei Death: Alipur in Karnataka Mini Iran Mourns Iran’s Supreme Leader; Recall His Visit

ಅಯತೊಲ್ಲಾ ಅಲಿ ಖಮೇನಿImage Credit source: TV9 Network

ಚಿಕ್ಕಬಳ್ಳಾಪುರ, ಮಾರ್ಚ್​ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲು ತೀರ್ಮಾನಿಸಿದ್ದಾರೆ. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ.

ಅವರ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯೂ ಅಲಿಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹತ್ಯೆ ಸುದ್ದಿಯಿಂದ ದುಃಖಿತರಾದ ಶಿಯಾ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಕಂಡುಬಂದವು.

ವಿಡಿಯೋ ನೋಡಿ

ಇಂದು ಮಧ್ಯಾಹ್ನ 3 ಗಂಟೆಗೆ ಅಲಿಪುರ ಗ್ರಾಮದಲ್ಲಿ ಬೃಹತ್ ಶೋಕಾಚರಣೆ ಮೆರವಣಿಗೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್ ಜಾರಿಯಲ್ಲಿದ್ದು, ಜನರು ಶಾಂತಿಯುತವಾಗಿ ಶೋಕಾಚರಣೆ ಮಾಡುತ್ತಿದ್ದಾರೆ.

ಇದಲ್ಲದೆ, ಇರಾನ್‌ನಲ್ಲಿ ಸಿಲುಕಿರುವ ತಮ್ಮ ಬಂಧು ಬಳಗ ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದರು. ಅಯತೊಲ್ಲಾ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಮುದಾಯದವರು ಕಂಬನಿ ಮಿಡಿದರು.

ಅಲಿ ಖಮೇನಿ ಅಲೀಪುರ ಮಸೀದಿಗೆ ಭೇಟಿ ನೀಡಿದ್ದ ಸಂದರ್ಭದ ಸಂಗ್ರಹ ಚಿತ್ರ

ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಇರಾನ್‌ನ ಸರ್ವೋಚ್ಚ ನಾಯಕರಾಗಿ ಸತತ ಅಧಿಕಾರ ಚಲಾಯಿಸಿದ್ದ ಖಮೇನಿ, ಶಿಯಾ ಮುಸ್ಲಿಂ ಸಮುದಾಯದ ಅತ್ಯಂತ ಪ್ರಭಾವಿ ಧರ್ಮಗುರುಗಳಲ್ಲಿ ಒಬ್ಬರಾಗಿದ್ದರು. ಸದ್ಯ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ಸೇನಾ ದಾಳಿಯಲ್ಲಿ ಹತರಾಗಿದ್ದಾರೆ. ಖಮೇನಿ ಸಾವಿನ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲಿಗೆ ಸಂದೇಶ ಪ್ರಕಟಿಸಿದ್ದಾರೆ. ನಂತರ ಇರಾನ್ ಮಾಧ್ಯಮಗಳೂ ಖಮೇನಿ ಸಾವನ್ನು ದೃಢಪಡಿಸಿದ್ದವು. ಅಂತಿಮವಾಗಿ ಇರಾನ್ ಸರ್ಕಾರ ಕೂಡ ಸಾವನ್ನು ದೃಢಪಡಿಸಿದ್ದು, ಪ್ರತೀಕಾರ ಕೈಗೊಳ್ಳುವುದಾಗಿ ಶಪಥ ಮಾಡಿದೆ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು?

ಏತನ್ಮಧ್ಯೆ, ಇರಾನ್ ಮುಂದಿನ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಸಂಭಾವ್ಯ ಉತ್ತರಾಧಿಕಾರಿಗಳಲ್ಲಿ, ಖಮೇನಿ ಎರಡನೇ ಮಗ ಮೊಜ್ತಬಾ ಖಮೇನಿ ಅತ್ಯಂತ ಸಂಭಾವ್ಯ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಹೇಳಿಕೆಗಳು ಇನ್ನಷ್ಟೇ ಪ್ರಕಟವಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:24 am, Sun, 1 March 26

Source link

World Civil Defence Day 2026: ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Civil Defence Day 2026: What is the purpose behind celebrating World Civil Defence Day?

ವಿಶ್ವ ನಾಗರಿಕ ರಕ್ಷಣಾ ದಿನImage Credit source: vecteezy

ಈ ಪ್ರಪಂಚದಲ್ಲಿ ಹಲವಾರು ಅನಿಶ್ಚಿತ ಘಟನೆಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಕೃತಿ ವಿಕೋಪಗಳು ಸಂಭವಿಸಿದರೆ, ಇನ್ನೂ ಕೆಲವೊಮ್ಮೆ ಭಯಾನಕ ಅಪಘಾತ, ಯುದ್ಧಗಳು ಸಂಭವಿಸುತ್ತವೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿವಿಲ್‌ ಡಿಫೆನ್ಸ್‌ (Civil Defence) ಸಿಬ್ಬಂದಿಗಳು ತಮ್ಮ ಜೀವದ ಬಗ್ಗೆ ಕಿಂಚಿತ್ತೂ ಚಿಂತಿಸದೆ ನಾಗರಿಕ ರಕ್ಷಣೆಗಾಗಿ ಧಾವಿಸುತ್ತಾರೆ. ಇಂತಹ ಧೈರ್ಯಶಾಲಿ ಹಿರೋಗಳ ತ್ಯಾಗ, ಸೇವೆಯನ್ನು ಗೌರವಿಸಲು, ಮತ್ತು ಜನಸಾಮಾನ್ಯರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸಲು, ವಿಪತ್ತುಗಳ ಸಂದರ್ಭದಲ್ಲಿ ಆತ್ಮರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್‌  1 ರಂದು ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಶ್ವ ನಾಗರಿಕ ರಕ್ಷಣಾ ದಿನದ ಇತಿಹಾಸವೇನು?

ವಿಶ್ವ ನಾಗರಿಕ ರಕ್ಷಣಾ ದಿನವನ್ನು 1990 ರಲ್ಲಿ ಅಂತರರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆ (ICDO) ಪ್ರಾರಂಭಿಸಿತು. ಮಾರ್ಚ್ 1, 1972 ರಂದು ಅಂತರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆಯಾಗಿ ICDO ಸ್ಥಾಪನೆಯಾದ ದಿನದ ಸ್ಮರಣಾರ್ಥ ಈ ದಿನವನ್ನು ಆಯ್ಕೆ ಮಾಡಲಾಗಿದೆ. ಅಂದಿನಿಂದ ಪ್ರತಿವರ್ಷ ಮಾರ್ಚ್‌ 1 ರಂದು ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ನಾಗರಿಕ ರಕ್ಷಣೆ ಎಂದರೆ ಯುದ್ಧಕಾಲದಲ್ಲಿ ನೆರವು ನೀಡುವುದು ಮಾತ್ರವಲ್ಲ, ಭೂಕಂಪಗಳು, ಪ್ರವಾಹಗಳು, ಬೆಂಕಿ ಅಥವಾ ಸಾಂಕ್ರಾಮಿಕ ರೋಗಗಳು (COVID-19 ನಂತಹ) ನಂತಹ ಬಿಕ್ಕಟ್ಟಿನ ಪರಿಸ್ಥಿತಿಯ ಸಮಯದಲ್ಲಿ ಜನರನ್ನು ರಕ್ಷಿಸುವುದಾಗಿದೆ.

ವಿಶ್ವ ನಾಗರಿಕ ರಕ್ಷಣಾ ದಿನದ ಮಹತ್ವವೇನು?

  • ಈ ದಿನವು ತುರ್ತು ಪರಿಸ್ಥಿತಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಜಾಗೃತಿ ಮೂಡಿಸುತ್ತದೆ.
  • ತುರ್ತು ಸಂದರ್ಭಗಳಲ್ಲಿ ನಾಗರಿಕರನ್ನು ರಕ್ಷಿಸುವ ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿಗಳ ಕಾರ್ಯ, ತ್ಯಾಗವನ್ನು ಹೆಚ್ಚಾಗಿ ಗುರುತಿಸಲಾಗುವುದಿಲ್ಲ, ಆದ್ದರಿಂದ ಅವರ ಕೆಲಸಕ್ಕೆ ಧನ್ಯವಾದ ಹೇಳಲು ಈ ದಿನವನ್ನು ಆಚರಿಸಲಾಗುತ್ತದೆ.
  • ನಾವು ತರಬೇತಿ ಪಡೆದರೆ, ನಮ್ಮ ಸ್ವಂತ ಜೀವಗಳನ್ನು ಮತ್ತು ನಮ್ಮ ನೆರೆಹೊರೆಯವರ ಜೀವಗಳನ್ನು ಉಳಿಸಬಹುದು ಎಂದು ವಿಶ್ವ ನಾಗರಿಕ ರಕ್ಷಣಾ ದಿನವು ನಮಗೆ ಕಲಿಸುತ್ತದೆ.

ಇದನ್ನೂ ಓದಿ: ಫೆಬ್ರವರಿ 28 ರಂದೇ ಏಕೆ ವಿಜ್ಞಾನ ದಿನವನ್ನು ಆಚರಿಸುವುದು? ಇದರ ಹಿನ್ನೆಲೆಯನ್ನು ತಿಳಿಯಿರಿ

ಸಮಾಜಕ್ಕೆ ನಾಗರಿಕ ರಕ್ಷಣಾ ಪಡೆಯ ಕೊಡುಗೆ:

ನಾಗರಿಕ ರಕ್ಷಣಾ ಪಡೆ ಸ್ವಯಂಸೇವಕರು ಪ್ರಪಂಚದಾದ್ಯಂತ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ಪ್ರವಾಹವಾಗಲಿ, ಭೂಕುಸಿತ ಸಂಭವಿಸಲಿ ಅಥವಾ ಯಾವುದೇ ತುರ್ತು ಪರಿಸ್ಥಿತಿ ಸಂಭವಿಸಲಿ, ಈ ಸ್ವಯಂಸೇವಕರು ಸರ್ಕಾರಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತಾರೆ. ವಿಪತ್ತು ಸಂಭವಿಸಿದಾಗ, ಸರ್ಕಾರಿ ಸಹಾಯ ಬರುವ ಮೊದಲು ಸ್ಥಳೀಯ ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿಗಳು ನಾಗರಿಕರ ರಕ್ಷಣೆಗೆ ಪ್ರತಿಕ್ರಿಯಿಸುತ್ತಾರೆ. ಕೊರೊನಾ ಅವಧಿಯಲ್ಲಿ, ಇಡೀ ಜಗತ್ತೇ ಲಾಕ್‌ಡೌನ್ ಆದಾಗ, ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ಬೀದಿಗಿಳಿದು ಆಹಾರ ವಿತರಣೆ, ನೈರ್ಮಲ್ಯೀಕರಣ ಮತ್ತು ರೋಗಿಗಳಿಗೆ ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇಂದು ಇಂತಹ ಸ್ವಯಂ ಸೇವಕರನಿಸ್ವಾರ್ಥ ಸೇವೆಗೆ ನಮನ ಸಲ್ಲಿಸುವ ದಿನ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾಖಲೆ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಸಿಎಂ: ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ – Kannada News | CM Siddaramaiah Set to Present Record 17th Karnataka Budget on March 6; Huge Expectations from State Budget Session 2026

ಸಿದ್ದರಾಮಯ್ಯ ಬಜೆಟ್ (ಸಂಗ್ರಹ ಚಿತ್ರ)

ಬೆಂಗಳೂರು, ಮಾರ್ಚ್ 1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಬಜೆಟ್‌ನಲ್ಲಿ (Karnataka Budget 2026) ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡಲಿದ್ದು, ಜೊತೆಗೆ ಆರ್ಥಿಕ ಹೊರೆ ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಮೂಲಸೌಕರ್ಯ ಅಭಿವೃದ್ಧಿ, ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಹಾಗೂ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಸಾಧ್ಯತೆಯಿದೆ. ಇದು ಅವರ 17ನೇ ದಾಖಲೆಯ ಬಜೆಟ್ ಆಗಿರಲಿದೆ.

ಸಿದ್ದರಾಮಯ್ಯ ಬಜೆಟ್‌ ಮೇಲಿನ ಪ್ರಮುಖ ನಿರೀಕ್ಷೆಗಳು

  • ಗ್ಯಾರಂಟಿ ಯೋಜನೆಗಳಿಗೆ ಮಣೆ: ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯುವನಿಧಿ) ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆ ಇದೆ.
  • ಬಜೆಟ್ ಗಾತ್ರ ಮತ್ತು ಅಭಿವೃದ್ಧಿ: ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ ನೀಡಲು ಬಜೆಟ್ ಗಾತ್ರ ಹೆಚ್ಚಳವಾಗಬಹುದು.
  • ಕಳೆದ ವರ್ಷದ 55,877 ಕೋಟಿ ರೂ. ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಯೋಜನೆ.
  • ಆರ್ಥಿಕ ಶಿಸ್ತು: ಗ್ಯಾರಂಟಿ ಯೋಜನೆಗಳ ಭಾರವನ್ನು ನಿರ್ವಹಿಸಲು ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಆರ್ಥಿಕ ಸಮತೋಲನ ಸಾಧಿಸುವ ಸವಾಲು.
  • ಕೃಷಿ ಮತ್ತು ನೀರಾವರಿ: ನೀರಾವರಿ ಯೋಜನೆಗಳು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು.
  • ಪ್ರಾದೇಶಿಕ ಸಮತೋಲನ: ಕಲ್ಯಾಣ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಅನುದಾನ ನೀಡುವ ಸಾಧ್ಯತೆ.
  • ಕೃಷಿ, ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ, ಹೈನುಗಾರಿಕೆ, ಆರೋಗ್ಯ, ಸಾರಿಗೆ ಸೇರಿದಂತೆ ಹಲ ವಲಯಗಳಿಗೆ ಆದ್ಯತೆ.
  • ನೀರಾವರಿ ಯೋಜನೆಗಳಿಗೆ ಯಾವ ಪ್ರಮಾಣದಲ್ಲಿ ಹಣ ಮೀಸಲಿಡಬಹುದೆಂಬ ನಿರೀಕ್ಷೆ.
  • ಅದರಲ್ಲೂ ಬೆಂಗಳೂರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚು ಆದ್ಯತೆಯ ನಿರೀಕ್ಷೆ.
  • ಬೆಂಗಳೂರಿನ ಮೆಟ್ರೋ, ಡಬಲ್ ಡೆಕ್ಕರ್‌ಗೆ ಗಮನ.
  • ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗೆ ಹೊಸ ಕಾಲೇಜ್ ಗಳ ಘೋಷಣೆ.
  • ಹಿಂದುಳಿದ ವರ್ಗದ ಮಕ್ಕಳಿಗೆ ಯುಪಿಎಸ್ಸಿ ತಯಾರಿಗೆ ಆಶ್ರಯ.
  • ಮತ್ತಷ್ಟು ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮೂಲಕ ಬಲವರ್ಧನೆ.
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ.
  • ಪ್ರವಾಸೋದ್ಯಮಕ್ಕೆ ಪಿಪಿಪಿ ಮಾದರಿಯಲ್ಲಿ ಮೂಲಸೌಕರ್ಯಕ್ಕೆ ಒತ್ತು.
  • ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು/ವಸಾಹತುಗಳ ಮೂಲಭೂತ ಸೌಕರ್ಯಗಳ ಉನ್ನತೀಕರಣ, ಕೈಗಾರಿಕಾ ಪಟ್ಟಣ ಪ್ರಾಧಿಕಾರ ರಚನೆ ನಿರೀಕ್ಷೆ.
  • ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗಾಗಿ ನೂತನ ಕೈಗಾರಿಕಾ ವಸಾಹತುಗಳ ಸ್ಥಾಪನೆ ನಿರೀಕ್ಷೆ.
  • ವಿದ್ಯುತ್ ಮೇಲಿನ‌ತೆರಿಗೆಯನ್ನು ಇಳಿಸುವ ಸಾಧ್ಯತೆ.
  • 100 ಶೇಕಡಾ ನವೀಕರಿಸಬಹುದಾದ ಇಂಧನ ಬಳಸುವ ಕೈಗಾರಿಕೋದ್ಯಮಿಗಳಿಗೆ ಸಬ್ಸಿಡಿ.

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಿಂದ ಅನುದಾನಕ್ಕೆ ಬೇಡಿಕೆ ಇಡಲಾಗಿದೆ. ಅದರ ಅಂಕಿ ಅಂಶಗಳನ್ನು ಗಮನಿಸುವುದಾದರೆ;

ನಗರ ಪಾಲಿಕೆ (ಕೋಟಿ ರೂ.ಗಳಲ್ಲಿ)

  • ಪೂರ್ವ 1,685
  • ಪಶ್ಚಿಮ 1,725
  • ಉತ್ತರ 1,205
  • ದಕ್ಷಿಣ 1,675
  • ಕೇಂದ್ರ 2,047

ರಾಜಧಾನಿ ಬೆಂಗಳೂರಿನ ಆಡಳಿತವನ್ನು ನಾಗರಿಕರ ಬಾಗಿಲಿಗೆ ಕೊಂಡೊಯ್ದು, ಸ್ಥಳೀಯ ಅಭಿವೃದ್ಧಿಗೆ ಒತ್ತು ನೀಡಲೆಂದೇ ರಚನೆಯಾಗಿರುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಂದ ರಾಜ್ಯ ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇದೆ. ಐದು ನಗರ ಪಾಲಿಕೆಗಳು ರಚನೆಯಾಗಿ ಐದು ತಿಂಗಳಾಗಿದ್ದು, ರಾಜ್ಯದ ಬಜೆಟ್‌ ಮಂಡನೆ ನಂತರ ಮಾರ್ಚ್‌ ಎರಡನೇ ವಾರದಲ್ಲಿ ಮೊದಲ ಆಯವ್ಯಯ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸಿವೆ. ಬೃಹತ್‌ ಯೋಜನೆಗಳಿಗೆ ನಗರ ಪಾಲಿಕೆಯೊಳಗೆ ಹೆಚ್ಚಿನ ಅವಕಾಶವಿಲ್ಲ. ಹೀಗಾಗಿ, ರಸ್ತೆ, ಪಾದಚಾರಿ ಮಾರ್ಗ, ಉದ್ಯಾನ, ಶೌಚಾಲಯ, ಕೆರೆ, ತೋಟಗಾರಿಕೆ, ಸೌಂದರ್ಯೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ನಗರ ಪಾಲಿಕೆಗಳು ಸಂಪನ್ಮೂಲ ಕ್ರೋಡೀಕರಣದಲ್ಲಿ ಇನ್ನೂ ನಿರೀಕ್ಷಿತ ಮಟ್ಟವನ್ನು ತಲುಪಿಲ್ಲ. ಪ್ರತಿಯೊಂದು ವಿಭಾಗದ ಹಣವೂ ಜಿಬಿಎ ಖಾತೆಗೇ ಹೋಗುತ್ತಿದ್ದು, ಅಲ್ಲಿಂದ ಹಣ ವರ್ಗಾವಣೆಯಾಗಬೇಕಿದೆ. ಹೀಗಾಗಿ, ಆರ್ಥಿಕ ಸ್ವಾವಲಂಬನೆ ದೂರದ ಮಾತಾಗಿದೆ.

ಇದನ್ನೂ ಓದಿ: Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿಗಳು ಆರೋಪಿಸಿರುವುದರಿಂದ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಸ್ವಂತ ಸಂಪನ್ಮೂಲಗಳ ಕ್ರೋಢೀಕರಣದ ಮೇಲೆ ಗಮನ ಹರಿಸಬಹುದು. ಕಳೆದ ಬಾರಿಯ ಬಜೆಟ್ ಗಾತ್ರ 4,09,549 ರೂ. ಆಗಿದ್ದೂ, 17ನೇ ಬಜೆಟ್ ಗಾತ್ರವೂ ಸಾಮಾನ್ಯವಾಗಿ ಮತ್ತಷ್ಟು ಹಿಗ್ಗುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಜಂಪ್ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,68,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,54,630 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,653 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,463 ರೂ
  • ಚೆನ್ನೈ: 15,550 ರೂ
  • ಮುಂಬೈ: 15,463 ರೂ
  • ದೆಹಲಿ: 15,478 ರೂ
  • ಕೋಲ್ಕತಾ: 15,463 ರೂ
  • ಕೇರಳ: 15,463 ರೂ
  • ಅಹ್ಮದಾಬಾದ್: 15,468 ರೂ
  • ಜೈಪುರ್: 15,478 ರೂ
  • ಲಕ್ನೋ: 15,478 ರೂ
  • ಭುವನೇಶ್ವರ್: 15,463 ರೂ

ಇದನ್ನೂ ಓದಿ: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 638 ರಿಂಗಿಟ್ (14,930 ರುಪಾಯಿ)
  • ದುಬೈ: 582.75 ಡಿರಾಮ್ (14,450 ರುಪಾಯಿ)
  • ಅಮೆರಿಕ: 164.50 ಡಾಲರ್ (14,976 ರುಪಾಯಿ)
  • ಸಿಂಗಾಪುರ: 204.10 ಸಿಂಗಾಪುರ್ ಡಾಲರ್ (14,692 ರುಪಾಯಿ)
  • ಕತಾರ್: 578.50 ಕತಾರಿ ರಿಯಾಲ್ (14,467 ರೂ)
  • ಸೌದಿ ಅರೇಬಿಯಾ: 592 ಸೌದಿ ರಿಯಾಲ್ (14,369 ರುಪಾಯಿ)
  • ಓಮನ್: 61.95 ಒಮಾನಿ ರಿಯಾಲ್ (14,668 ರುಪಾಯಿ)
  • ಕುವೇತ್: 47.61 ಕುವೇತಿ ದಿನಾರ್ (14,193 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 295 ರೂ
  • ಚೆನ್ನೈ: 320 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 320 ರೂ
  • ಅಹ್ಮದಾಬಾದ್: 295 ರೂ
  • ಜೈಪುರ್: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 320 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜನರ ಟೀಕೆ ಬಳಿಕ ಯಶ್ ಜೊತೆ ನಾಯಕಿ ಮುಖ ತೋರಿಸಿದ ‘ಟಾಕ್ಸಿಕ್’ ಚಿತ್ರತಂಡ – Kannada News | Yash and Kiara Advani new song Tabaahi from Toxic movie 2nd poster released

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಮೊದಲ ಹಾಡಿನ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59 ನಿಮಿಷಕ್ಕೆ ‘ತಬಾಹಿ’ (Tabaahi) ಹಾಡು ರಿಲೀಸ್ ಆಗಲಿದೆ. ಈ ವಿಷಯ ತಿಳಿಸಲು ಒಂದು ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಕೇವಲ ಯಶ್ (Yash) ಮುಖ ಮಾತ್ರ ಕಾಣಿಸಿತ್ತು. ಅದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು. ಟೀಕೆ ಎದುರಾಗುತ್ತಿದ್ದಂತೆಯೇ ನಾಯಕಿಯ ಮುಖ ತೋರಿಸಲಾಗಿದೆ.

ಯಶ್ ಮಾತ್ರವಲ್ಲದೇ ಹಲವು ಕಲಾವಿದರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮುಂತಾದವರು ಅಭಿನಯಿಸಿದ್ದಾರೆ. ಆದರೆ ಇತ್ತೀಚೆಗೆ ಬಿಡುಗಡೆ ಆದ ಟೀಸರ್​​ನಲ್ಲಿ ಯಾವುದೇ ನಟಿಯ ಮುಖ ಕಾಣಿಸಿಲ್ಲ. ಹಾಡಿನ ಪೋಸ್ಟರ್​ನಲ್ಲಿ ಕೂಡ ನಾಯಕಿಯ ಮುಖ ಮರೆಮಾಚಲಾಗಿತ್ತು.

ಪ್ರಚಾರದಲ್ಲಿ ಕೇವಲ ಯಶ್ ಅವರನ್ನು ಹೈಲೈಟ್ ಮಾಡಲಾಗುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಯಶ್ ಜೊತೆ ಕಿಯಾರಾ ಅಡ್ವಾಣಿ ಅವರ ಮುಖ ಕೂಡ ಇದರಲ್ಲಿ ಕಾಣಿಸಿದೆ. ಈ ಸಿನಿಮಾದಲ್ಲಿ ಹಲವು ನಟಿಯರು ಅಭಿನಯಿಸಿರುವುದರಿಂದ ಅವರ ಪಾತ್ರಗಳ ಬಗ್ಗೆ ಜನರಿಗೆ ಕೌತುಕ ಹೆಚ್ಚಿದೆ.

ಹೊಸ ಪೋಸ್ಟರ್ ನೋಡಿದ ಕೆಲವರು ಸೂಕ್ಷ್ಮವಾಗಿ ಗಮನಿಸಿದ್ದಾರೆ. ಇದು ಎಐ ಮೂಲಕ ರಚಿಸಿದ ಪೋಸ್ಟರ್ ಎಂಬುದು ನೆಟ್ಟಿಗರು ಅನುಮಾನ. ಯಾಕೆಂದರೆ ಈ ಪೋಸ್ಟರ್​​ನಲ್ಲಿ ಕಿಯಾರಾ ಅಡ್ವಾಣಿ ಅವರ ಕೈ ವಿಚಿತ್ರವಾಗಿ ಕಾಣಿಸಿದೆ. ಸಹಜವಾಗಿ ಇರುವುದಕ್ಕಿಂತಲೂ ಹೆಚ್ಚು ಉದ್ದವಾಗಿದೆ. ಅದನ್ನು ನೋಡಿದ ಬಳಿಕ ಅನುಮಾನ ಮೂಡಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

ಮಾರ್ಚ್ 2ರಂದು ರಿಲೀಸ್ ಆಗಲಿರುವ ಮೊದಲ ಹಾಡಿಗೆ ವಿಶಾಲ್ ಮಿಶ್ರಾ ಅವರು ಸಂಗೀತ ನೀಡಿದ್ದಾರೆ. ಇದರ ಕನ್ನಡ ವರ್ಷನ್​​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಆದ್ದರಿಂದ ಹೈಪ್ ಜಾಸ್ತಿ ಆಗಿದೆ. ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:49 am, Sun, 1 March 26

Source link

PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ – Kannada News | Pakistan vs sri lanka wide ball controversy

ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ಫೀಲ್ಡ್ ಅಂಪೈರ್ ನೀಡಿದ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್‌ನಲ್ಲಿ 28 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆ ಕೊನೆಯ 2 ಎಸೆತಗಳಲ್ಲಿ ಶ್ರೀಲಂಕಾಕ್ಕೆ ಗೆಲ್ಲಲು 6 ರನ್ ಬೇಕಿತ್ತು.

5ನೇ ಎಸೆತವನ್ನು ಶಾಹೀನ್ ಅಫ್ರಿದಿ ಆಫ್-ಸ್ಟಂಪ್‌ನಿಂದ ಬಹಳ ಹೊರಗೆ ಫುಲ್ ಟಾಸ್ ಎಸೆದರು. ಇದಾಗ್ಯೂ ಅಂಪೈರ್ ರಾಡ್ ಟಕರ್ ಅದನ್ನು ‘ಲೀಗಲ್ ಡೆಲಿವರಿ’ (ವೈಡ್ ಅಲ್ಲ) ಎಂದು ಘೋಷಿಸಿದರು.

ಇನ್ನು ಕೊನೆಯ ಎಸೆತವೂ ಸಹ ಆಫ್-ಸ್ಟಂಪ್‌ನ ಗೆರೆಯ ಹತ್ತಿರವೇ ಇತ್ತು. ಶಾನಕ ಅದನ್ನು ವೈಡ್ ಎಂದು ಬಿಟ್ಟರು, ಆದರೆ ಅಂಪೈರ್ ಅದನ್ನೂ ಸಹ ವೈಡ್ ನೀಡಲಿಲ್ಲ. ಪರಿಣಾಮ  ಪಾಕಿಸ್ತಾನ ಈ ಪಂದ್ಯವನ್ನು 5 ರನ್‌ಗಳಿಂದ ಗೆದ್ದುಕೊಂಡಿತು.

ಇತ್ತ ಕೊನೆಯ ಎರಡು ಎಸೆತಗಳಲ್ಲಿ ವೈಡ್ ನೀಡದಿರುವ ಬಗ್ಗೆ  ಶ್ರೀಲಂಕಾ ತಂಡದ ಮುಖ್ಯ ಕೋಚ್ ಸನತ್ ಜಯಸೂರ್ಯ ಅವರು ಪಂದ್ಯದ ನಂತರ ಮೈದಾನಕ್ಕೆ ಬಂದು ಅಂಪೈರ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಟಿವಿಯ ರೀಪ್ಲೇನಲ್ಲಿ ಚೆಂಡು ವೈಡ್ ಗೆರೆಯಿಂದ ಹೊರಗಿದ್ದರೂ ಅಂಪೈರ್ ನೀಡದ ತೀರ್ಪು ವಿವಾದಕ್ಕೆ ಕಾರಣವಾಯಿತು.

ಇದೀಗ ಈ ಶಾಹೀನ್ ಅಫ್ರಿದಿ ಎಸೆದ ಕೊನೆಯ ಎಸೆತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಂಪೈರ್​ ತೀರ್ಪಿನ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅಲ್ಲದೆ ಶ್ರೀಲಂಕಾ ಸೋಲಿಗೆ ಅಂಪೈರ್ ತೀರ್ಪು ಕಾರಣ ಎಂದು ಲಂಕಾ ಕ್ರಿಕೆಟ್ ಅಭಿಮಾನಿಗಳು ಅಸಮಾಧಾನ ಹೊರಹಾಕುತ್ತಿದ್ದಾರೆ.

Published On – 9:38 am, Sun, 1 March 26

Source link

Exit mobile version