Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ ಅಸಮಾಧಾನಗಳು ನಿವಾರಣೆಯಾಗುತ್ತವೆ. ಇಂದು ಪಡೆದ ಅನುಭವಗಳು ಮುಂದಿನ ನಿರ್ಧಾರಗಳಲ್ಲಿ ಹೆಚ್ಚಿನ ಸ್ಪಷ್ಟತೆ ನೀಡುತ್ತವೆ. ಸಮತೋಲನದಿಂದ ಮುಂದುವರಿಯುವ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಬ್ರ್ಯಾಂಡೆಡ್ ವಸ್ತುಗಳತ್ತ ಇಂದು ನಿಮ್ಮ ಮನಸ್ಸು ಹೆಚ್ಚು ಸೆಳೆಯುತ್ತದೆ. ಡಿಸ್ಕೌಂಟ್ ಅಥವಾ ಆಫರ್ ಕಂಡ ತಕ್ಷಣ ಯೋಚಿಸದೆ ಖರೀದಿ ಮಾಡುವ ಪ್ರವೃತ್ತಿ ಹೆಚ್ಚಾಗಬಹುದು. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವವರಾದರೆ ಅಂದುಕೊಂಡಿದಕ್ಕಿಂತ ಹೆಚ್ಚು ಖರ್ಚಾಗಿ, ಬಜೆಟ್ ಮೀರಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಖರ್ಚಿನಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನೀಡಲಿದ್ದಾರೆ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸ್ನೇಹಿತರ ಸಹಕಾರದಿಂದ ಕೆಲವು ಕೆಲಸಗಳು ಸುಗಮವಾಗುತ್ತವೆ. ಆರೋಗ್ಯದಲ್ಲಿ ಸಣ್ಣ ತೊಂದರೆ ಕಂಡರೂ ದಿನಾಂತ್ಯಕ್ಕೆ ಸುಧಾರಣೆ ಕಾಣುತ್ತದೆ. ಹೊಸ ಅವಕಾಶಗಳು ನಿಮ್ಮ ಮುಂದೆ ತೆರೆದುಕೊಳ್ಳುವ ಸೂಚನೆ ಇದೆ, ಆದರೂ ಶೀಘ್ರವಾಗಿ ತೀರ್ಮಾನಿಸಲು ಯತ್ನಿಸಬೇಡಿ. ನಿಮ್ಮ ಸಾಮರ್ಥ್ಯವನ್ನು ಗುರುತಿಸುವವರು ಇಂದು ಎದುರಾಗುವರು, ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ದಿನದ ಅಂತ್ಯದ ವೇಳೆಗೆ ಮಾನಸಿಕ ಶಾಂತಿ ದೊರೆಯತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ – Kannada News | Siddaramaiah Slams Fake Transfer Letter Scandal: Police Probe Karnataka Misinformation

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

Source link

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ ಸಂದೇಶವನ್ನು ವಿಶ್ವಕ್ಕೆ ಸಾರಲಿದೆ. ಸಾರ್ವಜನಿಕರನ್ನು ತಮ್ಮ ಮೊಬೈಲ್ ಫೋನ್ ಟಾರ್ಚ್‌ಗಳನ್ನು ಆನ್ ಮಾಡುವ ಮೂಲಕ ಬೆಳಕಿನ ಉದ್ಘಾಟನೆಯಲ್ಲಿ ಭಾಗಿಯಾಗುವಂತೆ ಕೋರಲಾಯಿತು. ಈ ಉತ್ಸವವು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮರುಕಳಿಸುವ ಮತ್ತು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕದ ಪ್ರಗತಿಯನ್ನು ದೇಶಾದ್ಯಂತ ಸಾರುವ ಉದ್ದೇಶವನ್ನು ಹೊಂದಿದೆ. ನಗಾರಿ ಮತ್ತು ಬೆಳಕಿನ ಸಮಾಗಮವು ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಭವ್ಯ ಕ್ಷಣಕ್ಕೆ ಸಾಕ್ಷಿಯಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು – Kannada News | Gajanoor Horror: Man Stripped, Stoned to Death by Friends in Shivamogga

ಗೆಳೆಯನ್ನು ಕೊಲೆ ಮಾಡಿದ ಸ್ನೇಹಿತರು

ಶಿವಮೊಗ್ಗ, ಫೆ.13: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (Shivamogga) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ಮದ್ಯದ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ.

ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು. ಇಂದು ಬೆಳಿಗ್ಗೆ ಶ್ರೀನಿವಾಸ್ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಬಿ. ಹಾಗೂ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ

ನನ್ನ ತಮ್ಮನನ್ನು ಅವನ ಸ್ನೇಹಿತರೇ ಕೊಂದಿದ್ದಾರೆ, ಅವರಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಮೃತನ ಸಹೋದರಿ ಸುಮಾ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಶ್ರೀನಿವಾಸ್‌ನನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ . ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ – Kannada News | India vs Pakistan T20 WC 2026 Colombo: Rain Threatens Super 8 Decider and Pitch Challenge

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ ಪಂದ್ಯವೆಂದರೆ ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಆದ್ದರಿಂದ, ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಆದರೆ ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದೆ.

ಗುಡುಗು ಸಹಿತ ಮಳೆ

ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿಯ ಪ್ರಕಾರ, ಫೆಬ್ರವರಿ 15 ಮತ್ತು 16 ರಂದು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಅಲ್ಲದೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ದಿನದಂದು ಸುಮಾರು ನಾಲ್ಕು ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ, ಬಿರುಗಾಳಿ ಬೀಸುವ ಸಾಧ್ಯತೆ ಶೇ. 26 ರಷ್ಟು ಇದೆ. ಇದರಿಂದಾಗಿ ಪಂದ್ಯ ವಿಳಂಬವಾಗಬಹುದು ಅಥವಾ ರದ್ದಾಗಬಹುದು.

ಕೊಲಂಬೊ ಪಿಚ್ ಹೇಗಿದೆ?

ಭಾರತ ತಂಡದ ತಂಡ ಯಾವಾಗಲೂ ಬ್ಯಾಟ್ಸ್‌ಮನ್‌ಗಳ ಮೇಲೆ ಅವಲಂಬಿತವಾಗಿದೆ. ಆದರೆ ಕೊಲಂಬೊ ಪಿಚ್ ಹಾಗೆ ಇರುವುದಿಲ್ಲ. ಏಕೆಂದರೆ ಈ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡಲಿದೆ. ಆದ್ದರಿಂದ ಭಾರತ ಈ ಪಂದ್ಯ ಗೆಲ್ಲಲು ಸಾಕಷ್ಟು ಬೆವರು ಹರಿಸಬೇಕಿದೆ. ಏಕೆಂದರೆ ಪಾಕಿಸ್ತಾನ ಉತ್ತಮ ಸ್ಪಿನ್ ದಾಳಿಯನ್ನು ಹೊಂದಿದೆ. ಆದ್ದರಿಂದ ಈ ಪಿಚ್ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಒಂದು ಪರೀಕ್ಷೆಯಾಗಲಿದೆ. ಈ ಪಂದ್ಯದಲ್ಲಿ ಭಾರತ ಚೆನ್ನಾಗಿ ಬ್ಯಾಟಿಂಗ್ ಮಾಡಿದರೆ ಗೆಲುವು ಖಚಿತ. ಆದ್ದರಿಂದ, ಟಾಸ್ ಗೆದ್ದ ನಂತರ ಮೊದಲು ಬ್ಯಾಟಿಂಗ್ ಮಾಡುವುದು ಪ್ರಯೋಜನಕಾರಿಯಾಗಿದೆ. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿ ನೆರವು ಸಿಗಲಿದೆ.

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ

ಭಾರತದ್ದೇ ಮೇಲುಗೈ

ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಎಂಟು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 7 ಪಂದ್ಯಗಳನ್ನು ಭಾರತ ಗೆದ್ದಿದ್ದರೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಮುಖಾಮುಖಿ ದಾಖಲೆಯು ಭಾರತೀಯ ತಂಡದ ಪರವಾಗಿದ್ದರೂ, ಪಾಕ್ ತಂಡವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಈ ಪಂದ್ಯದಲ್ಲಿ ಭಾರತ ತನ್ನ ತಂತ್ರದ ಪ್ರಕಾರ ಆಡಬೇಕಾಗುತ್ತದೆ. ಏಕೆಂದರೆ ಪಿಚ್ ಸ್ಪಿನ್‌ಗೆ ಅನುಕೂಲಕರವಾಗಿರುತ್ತದೆ. ಇದರ ಜೊತೆಗೆ ಇದಕ್ಕೂ ಮೊದಲು, ಶ್ರೀಲಂಕಾದಲ್ಲಿ ಆಡುವಾಗ ಭಾರತ ತಂಡವು ಸಮಸ್ಯೆಗಳನ್ನು ಎದುರಿಸಿತ್ತು. ಆದ್ದರಿಂದ, ಭಾರತ ಜಾಗರೂಕವಾಗಿರಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ! – Kannada News | 20 year old Girl jumped from the 4th floor of Hotel in Delhi after argument with Boyfriend

ನವದೆಹಲಿ, ಫೆಬ್ರವರಿ 13: ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್​ ಫ್ರೆಂಡ್ (Boyfriend) ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕಿಟಕಿಯಿಂದ ಹಾರಿದ್ದಾಳೆ. ಆಕೆ ಹಾರಲು ಯತ್ನಿಸುತ್ತಿರುವುದನ್ನು ನೋಡಿದ ಜನರು ಕೆಳಗೆ ನಿಂತು ಆಕೆಯನ್ನು ಕಾಪಾಡಿದ್ದಾರೆ. ಹೀಗಾಗಿ, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20 ಓವರ್​ಗಳಲ್ಲಿ ಕೇವಲ 130 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ 3 ವಿಕೆಟ್ ಕಳೆದುಕೊಂಡು 19.2 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು.

ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌

ಇಂದಿನಿಂದ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟಿ20 ಪಂದ್ಯಾವಳಿ ಫೆಬ್ರವರಿ 13 ಶುಕ್ರವಾರದಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಪ್ರಾರಂಭವಾಗಿದೆ. 2025 ರ ಮಹಿಳಾ ವಿಶ್ವಕಪ್ ಗೆದ್ದ ಮತ್ತು ಇತ್ತೀಚೆಗೆ ಡಬ್ಲ್ಯೂಪಿಎಲ್ 2026 ಅನ್ನು ಗೆದ್ದ ಸ್ಟಾರ್ ಆಲ್‌ರೌಂಡರ್ ರಾಧಾ ಯಾದವ್ ಈ ಪಂದ್ಯಾವಳಿಯಲ್ಲಿ ಭಾರತೀಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಡಬ್ಲ್ಯೂಪಿಎಲ್ ಎರಡರಲ್ಲೂ ತಮ್ಮ ಛಾಪು ಮೂಡಿಸಿದ ಹಲವಾರು ಇತರ ಆಟಗಾರ್ತಿಯರು ಸಹ ಭಾರತೀಯ ತಂಡದ ಭಾಗವಾಗಿದ್ದಾರೆ. ಆದರೆ ಇದರ ಹೊರತಾಗಿಯೂ ಭಾರತ ಮಹಿಳಾ ತಂಡ ಮೊದಲ ಪಂದ್ಯದಲ್ಲಿಯೇ ಸೋಲನ್ನು ಅನುಭವಿಸಬೇಕಾಯಿತು.

ಭಾರತ ಎ ತಂಡದ ಬ್ಯಾಟಿಂಗ್ ವೈಫಲ್ಯ

ಈ ಪಂದ್ಯದಲ್ಲಿ, ಭಾರತ ಎ ತಂಡ ಮೊದಲು ಬ್ಯಾಟಿಂಗ್ ಮಾಡಿತ್ತಾದರೂ ತಂಡದ ಬ್ಯಾಟಿಂಗ್ ಶೋಚನೀಯವಾಗಿ ವಿಫಲವಾಯಿತು. ಯುಎಇಯಂತಹ ದುರ್ಬಲ ತಂಡದ ವಿರುದ್ಧ ಭಾರತ ಎ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ ಕೇವಲ 130 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು. ಅನುಷ್ಕಾ ಶರ್ಮಾ 47 ರನ್‌ ಕಲೆಹಾಕುವ ಮೂಲಕ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ತನುಜಾ ಕನ್ವರ್ ಕೆಳ ಕ್ರಮಾಂಕದಲ್ಲಿ 34 ರನ್​ಗಳ ಕಾಣಿಕೆ ನೀಡಿದರು. ಇವರಿಬ್ಬರನ್ನು ಹೊರತುಪಡಿಸಿ, ಇತರ 7 ಆಟಗಾರ್ತಿಯರಿಗೆ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ. ಯುಎಇ ಪರ ಸಮೈರಾ 3 ವಿಕೆಟ್‌ ಪಡೆದರು.

IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

ಇಶಾ ಓಜಾ ಸ್ಫೋಟಕ ಬ್ಯಾಟಿಂಗ್

ಈ ಗುರಿ ಬೆನ್ನಟ್ಟಿದ ಯುಎಇ ಪರ ನಾಯಕಿ ಮತ್ತು ಆರಂಭಿಕ ಬ್ಯಾಟರ್ ಇಶಾ ಓಜಾ 61 ಎಸೆತಗಳಲ್ಲಿ ಔಟಾಗದೆ 72 ರನ್ ಗಳಿಸಿ, ಯುಎಇ ಕೇವಲ 19.2 ಓವರ್‌ಗಳಲ್ಲಿ ಈ ಗುರಿ ತಲುಪಲು ಸಹಾಯ ಮಾಡಿದಲ್ಲದೆ ಎಲ್ಲರನ್ನೂ ಅಚ್ಚರಿಗೊಳಿಸಿದರು. ನಾಯಕಿ ರಾಧಾ ಸೇರಿದಂತೆ ಭಾರತೀಯ ಬೌಲರ್‌ಗಳು ಇಶಾ ಓಜಾ ಅವರನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ವಿಫಲರಾದರು. ಅಂತಿಮವಾಗಿ, ಯುಎಇ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತಕ್ಕೆ ಮರೆಯಲಾಗದ ಆಘಾತ ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:36 pm, Fri, 13 February 26

Source link

ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Eating Less, But Acidity Persists? Know Why

ಇತ್ತೀಚಿನ ದಿನಗಳಲ್ಲಿ ಆಮ್ಲೀಯತೆ (Acidity), ಅನಿಲ ಮತ್ತು ಎದೆಯುರಿಯಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗಿ ಕಂಡುಬರುತ್ತಿದೆ. ಇದು ಸಾಮಾನ್ಯವಾಗಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಅಥವಾ ಅತಿಯಾಗಿ ಆಹಾರ ಸೇವನೆ ಮಾಡುವುದರಿಂದ ಉಂಟಾಗುತ್ತದೆ, ಆದರೆ ಯಾವಾಗಲೂ ಇದೆ ಕಾರಣವಲ್ಲ. ಕೆಲವು ಸಂದರ್ಭಗಳಲ್ಲಿ, ಹೊಟ್ಟೆಯ ಆಮ್ಲ ಕಡಿಮೆಯಾಗುವುದು ಕೂಡ ಒಂದು ಕಾರಣವಾಗಬಹುದು. ಸಾಮಾನ್ಯವಾಗಿ ಇದು ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಹೈಡ್ರೋಕ್ಲೋರಿಕ್ ಆಮ್ಲದ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ. ಈ ಆಮ್ಲವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಮತ್ತು ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ವಯಸ್ಸಾಗುವುದು, ಆಂಟಾಸಿಡ್ ಔಷಧಿಗಳ ದೀರ್ಘಕಾಲೀನ ಬಳಕೆ, ಅತಿಯಾದ ಒತ್ತಡ, ಪೌಷ್ಟಿಕಾಂಶದ ಕೊರತೆ, ಸತು ಅಥವಾ ವಿಟಮಿನ್ ಬಿ 12 ಕೊರತೆ ಮತ್ತು ಅನಿಯಮಿತ ಆಹಾರ ಪದ್ಧತಿಗಳಿಂದಾಗಿ ಹೊಟ್ಟೆಯಲ್ಲಿ ಆಮ್ಲದ ಮಟ್ಟ ಕಡಿಮೆಯಾಗಬಹುದು. ಹೊಟ್ಟೆಯು ಸಾಕಷ್ಟು ಆಮ್ಲವನ್ನು ಉತ್ಪಾದಿಸದಿದ್ದಾಗ, ಜೀರ್ಣಕ್ರಿಯೆಯ ಪ್ರಕ್ರಿಯೆಯು ನಿಧಾನವಾಗಬಹುದು ಮತ್ತು ದೇಹವು ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳುವಲ್ಲಿ ತೊಂದರೆಯಾಗಬಹುದು. ಈ ಸ್ಥಿತಿಯು ಕ್ರಮೇಣ ಹಲವಾರು ಜೀರ್ಣಕಾರಿ ಲಕ್ಷಣಗಳಿಗೆ ಕಾರಣವಾಗಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಹೊಟ್ಟೆಯಲ್ಲಿ ಆಮ್ಲದ ಪ್ರಮಾಣ ಕಡಿಮೆಯಾದಾಗ, ಆಹಾರವು ಸರಿಯಾಗಿ ವಿಭಜನೆಯಾಗುವುದಿಲ್ಲ ಮತ್ತು ಜೀರ್ಣವಾಗುವುದಿಲ್ಲ. ಭಾಗಶಃ ಜೀರ್ಣವಾದ ಆಹಾರವು ಹೆಚ್ಚು ಸಮಯದ ವರೆಗೆ ಹೊಟ್ಟೆಯಲ್ಲಿ ಉಳಿಯಬಹುದು, ಇದು ಅನಿಲ ರಚನೆಗೆ ಕಾರಣವಾಗಬಹುದು ಮತ್ತು ಹೊಟ್ಟೆಯಲ್ಲಿ ಒತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಎದೆಯಲ್ಲಿ ಸುಡುವ ಸಂವೇದನೆ, ಹುಳಿ ಬೆಲ್ಚಿಂಗ್ ಮತ್ತು ಗಂಟಲಿನಲ್ಲಿ ಕಿರಿಕಿರಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ಈ ಸಮಸ್ಯೆ ದೀರ್ಘಕಾಲದ ವರೆಗೆ ಮುಂದುವರಿದರೆ, ಹೊಟ್ಟೆಯಲ್ಲಿ ಅಸ್ವಸ್ಥತೆಗೆ ಕಾರಣವಾಗಬಹುದು. ಆದ್ದರಿಂದ, ರೋಗಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ಹೊಟ್ಟೆಯ ಆಮ್ಲೀಯತೆಯು ಕಡಿಮೆ ಇರುವುದು ಮಾತ್ರ ಆಮ್ಲೀಯತೆಗೆ ಕಾರಣವಲ್ಲ. ಕೆಲವು ಸಮಯಗಳಲ್ಲಿ ತಿನ್ನುವುದು, ಹೆಚ್ಚು ಚಹಾ, ಕಾಫಿ ಅಥವಾ ಕಾರ್ಬೊನೇಟೆಡ್ ಪಾನೀಯಗಳನ್ನು ಸೇವಿಸುವುದು, ಹುರಿದ ಮತ್ತು ಸಂಸ್ಕರಿಸಿದ ಆಹಾರಗಳನ್ನು ಸೇವಿಸುವುದು, ನಿರಂತರ ಒತ್ತಡ ಕೂಡ ಈ ಸಮಸ್ಯೆಯನ್ನು ಹೆಚ್ಚಿಸಬಹುದು. ಜೊತೆಗೆ ದೀರ್ಘಕಾಲ ಹಸಿವಿನಿಂದ ಇರುವುದು ಅಥವಾ ಇದ್ದಕ್ಕಿದ್ದಂತೆ ಹೆಚ್ಚು ತಿನ್ನುವುದು ಹೊಟ್ಟೆಯ ಮೇಲೆ ಪರಿಣಾಮ ಬೀರುತ್ತದೆ. ಧೂಮಪಾನ ಮತ್ತು ಮದ್ಯಪಾನವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಕೆಲವು ಔಷಧಿಗಳ ಅಡ್ಡಪರಿಣಾಮ ಮತ್ತು ಹಾರ್ಮೋನುಗಳ ಬದಲಾವಣೆ ಕೂಡ ಅಸಿಡಿಟಿಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ

ಅಸಿಡಿಟಿ ಸಮಸ್ಯೆಯನ್ನು ತಡೆಯುವುದು ಹೇಗೆ?

ಈ ಸಮಸ್ಯೆಯನ್ನು ತಡೆಗಟ್ಟಲು, ನಿಯಮಿತ ಮತ್ತು ಸಮತೋಲಿತ ಆಹಾರ ಸೇವನೆ ಮಾಡಬೇಕು. ಒಂದೇ ಬಾರಿಗೆ ಅತಿಯಾಗಿ ತಿನ್ನುವ ಬದಲು, ದಿನಕ್ಕೆ ಹಲವಾರು ಬಾರಿ ಸ್ವಲ್ಪ ಸ್ವಲ್ಪ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿ. ಹುರಿದ ಮತ್ತು ತುಂಬಾ ಮಸಾಲೆಯುಕ್ತ ಪದಾರ್ಥಗಳನ್ನು ಮಿತಿಗೊಳಿಸಿ. ಊಟ ಮಾಡಿದ ತಕ್ಷಣ ಮಲಗುವುದನ್ನು ತಪ್ಪಿಸಿ ಮತ್ತು ಕನಿಷ್ಠ 30 ನಿಮಿಷಗಳ ಕಾಲ ನಡೆಯಲು ಪ್ರಯತ್ನಿಸಿ. ಒತ್ತಡವನ್ನು ಕಡಿಮೆ ಮಾಡಲು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಯೋಗ ಅಥವಾ ಧ್ಯಾನವನ್ನು ಅಭ್ಯಾಸ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್ ಬಂಡವಾಳ ಹೂಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾ ಆಗಲಿದೆ ಎನ್ನಲಾಗುತ್ತಿದೆ. ಆದರೆ ರಜನೀಕಾಂತ್ ಮಾತ್ರ, ಗೆಳೆಯನಿಗೆ ಯಾವುದೇ ರಿಯಾಯಿತಿ ನೀಡದೆ ಭಾರಿ ದೊಡ್ಡ ಸಂಭಾವನೆಯನ್ನೆ ಸಿನಿಮಾಕ್ಕಾಗಿ ತೆಗೆದುಕೊಳ್ಳುತ್ತಿದ್ದಾರೆ.

ರಜನೀಕಾಂತ್ ನಾಯಕನಾಗಿ ನಟಿಸಲಿರುವ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದು, ಸ್ವತಃ ತಾವೂ ಸಹ ಪ್ರಮುಖವಾದ ಪಾತ್ರವೊಂದರಲ್ಲಿ ನಟಿಸಲಿದ್ದಾರೆ. ಈ ಮೆಗಾ ಪ್ರಾಜೆಕ್ಟ್‌ಗಾಗಿ ರಜಿನಿಕಾಂತ್ ಅವರಿಗೆ ಬರೊಬ್ಬರಿ 225 ಕೋಟಿ ರೂಪಾಯಿ ಸಂಭಾವನೆಯನ್ನು ನಿರ್ಮಾಪಕ ಕಮಲ್ ಹಾಸನ್ ನೀಡಲಿದ್ದಾರೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಬ್ಬ ನಟನಿಗೆ ನೀಡುತ್ತಿರುವ ಅತ್ಯಂತ ಗರಿಷ್ಠ ಸಂಭಾವನೆಗಳಲ್ಲಿ ಒಂದಾಗಲಿದೆ. ಕಮಲ್ ಹಾಸನ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಬಹುನಿರೀಕ್ಷಿತ ಚಿತ್ರಕ್ಕೆ ಯುವ ಪ್ರತಿಭೆ ಲೋಕೇಶ್ ಕನಗರಾಜ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು ಆದರೆ ಅದೀಗ ಸುಳ್ಳಾಗಿದೆ. ಸ್ವತಃ ಲೋಕೇಶ್ ಅವರೇ ತಾವು ಆ ಸಿನಿಮಾ ನಿರ್ದೇಶಿಸುತ್ತಿಲ್ಲ ಎಂದಿದ್ದಾರೆ. ‘ಮಹಾರಾಜ’ ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ನೀಡಿರುವ ನಿತಿಲನ್ ಸ್ವಾಮಿನಾಥನ್ ನಿರ್ದೇಶಿಸಲಿದ್ದಾರೆ ಎನ್ನಲಾಯ್ತು. ಬಳಿಕ ಅದೂ ಸಹ ಸುಳ್ಳಾಗಿದ್ದು ‘ಜೈಲರ್’, ‘ಜೈಲರ್ 2’ ನಿರ್ದೇಶಿಸಿರುವ ನೆಲ್ಸನ್ ದಿಲೀಪ್​​ಕುಮಾರ್ ಅವರು ಇದೀಗ ಈ ಸಿನಿಮಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ಸುಮಾರು 35 ವರ್ಷಗಳ ಹಿಂದೆ ‘ಗಿರಫ್ತಾರ್’ ಸಿನಿಮಾದಲ್ಲಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಕೊನೆಯದಾಗಿ ಒಟ್ಟಿಗೆ ನಟಿಸಿದ್ದರು. ಇದೀಗ 35 ವರ್ಷಗಳ ಬಳಿಕ ಇಬ್ಬರೂ ಒಟ್ಟಿಗೆ ನಟಿಸಲಿರುವುದು ಸಿನಿಮಾ ಪ್ರೇಕ್ಷಕರಿಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾಕ್ಕಾಗಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಸಿನಿಮಾದ ಟೈಟಲ್ ಪ್ರೋಮೊ ಚಿತ್ರೀಕರಣ ನಾಳೆ (ಫೆಬ್ರವರಿ 14) ನಡೆಯಲಿದೆ ಎನ್ನಲಾಗುತ್ತಿದೆ.

ರಜಿನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರಿಗೂ ಸಮಾನ ಪ್ರಾಮುಖ್ಯತೆ ಇರುವ ಕಥೆಯನ್ನು ಸಿದ್ಧಪಡಿಸಲಾಗಿದೆಯಂತೆ. ಸದ್ಯ ರಜಿನಿಕಾಂತ್ ಅವರು ‘ಜೈಲರ್ 2’ ಸಿನಿಮಾನಲ್ಲಿ ಬ್ಯುಸಿಯಾಗಿದ್ದರೆ. ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version