ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು – Kannada News | Sandalwood Actor Upendra talks about Vijay Victory And His Political Stand

ಬೆಂಗಳೂರು, (ಮೇ 08): ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ (Vijay) ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್ ಉಪೇಂದ್ರ (Upendra) ಅವರು ಕೊಂಡಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜಕಾರಣದ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ತಮ್ಮ ರಾಜಕೀಯ ನಿಲುವು ಬಗ್ಗೆಯೂ ಮಾತನಾಡಿದ್ದು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

Source link

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru, here Is Stops And Ticket Price Details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇನ್ಮುಂದೆ ಜನರು ಬಿರು ಬೇಸಿಗೆಯಲ್ಲೂ ತಂಪಾಗಿ, ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.

  • ಬೊಂಬೆನಗರಿ ಚನ್ನಪಟ್ಟಣ ಜನರ ಬಹುದಿನದ ಕನಸು ನನಸು
  • ಇಂದಿನಿಂದ ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ಬಂತೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸಂಚಾರ
  • ಬಸ್ ಗಳ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಡಿಕೆ ಸುರೇಶ್.
  • ಇಷ್ಟು ದಿನ ಕೇವಲ ರಾಮನಗರದವರೆಗೂ ಮಾತ್ರ ಬಸ್ ಗಳ ಓಡಾಟವಿತ್ತು, ಇದೀಗ ಚನ್ನಪಟ್ಟಣಕ್ಕೂ ವಿಸ್ತರಣೆ

ಕೆಲಸಕ್ಕೆಂದು ಬೆಂಗಳೂರಿಗೆ ತೆರಳುವವರಿಗೆ ಅನುಕೂಲ

ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿರೋ ಚನ್ನಪಟ್ಟಣದಿಂದ ಪ್ರತಿನಿತ್ಯ ಉದ್ಯೋಗ ಹಾಗೂ ಇತರೆ ಕೆಲಸಗಳಿಗಾಗಿ ಸಾವಿರಾರು ಜನರು ರಾಜಧಾನಿ ಬೆಂಗಳೂರಿಗೆ ಸಂಚಾರಿಸುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳ ಸೌಲಭ್ಯವಿಲ್ಲದೇ ಸಾರ್ವಜನರಿಕರು ಪರದಾಡು ಪರಿಸ್ಥಿತಿ ‌ನಿರ್ಮಾಣವಾಗಿತ್ತು. ಹೀಗಾಗಿ ನಮಗೂ BMTC ಬಸ್ ಸೌಲಭ್ಯ ‌ಕಲ್ಪಿಸಿ ಎಂದು ಮನವಿ ಮಾಡಿದ್ದು. ಇದೀಗ ಜನರ ಮನವಿಗೆ ಸ್ಪಂದಿಸಿರೋ ಸರ್ಕಾರ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸೇವೆ ಓದಗಿಸಿದೆ.

ಇದನ್ನೂ ಓದಿ: ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಅಂದಹಾಗೆ ಈ ಹಿಂದೆ ಬೆಂಗಳೂರು ದಕ್ಷಿಣ ‌ಜಿಲ್ಲೆಯ ರಾಮನಗರದವರೆಗೂ ಮಾತ್ರ ಈ ಬಸ್ ಗಳ ಸೌಲಭ್ಯ ದೊರೆತಿತ್ತು. ರಾಮನಗರದಿಂದ ಕೇವಲ 12 ಕಿಲೋಮೀಟರ್ ಇರೋ ರಾಜಧಾನಿಯಿಂದ 50 ಕಿಲೋಮೀಟರ್ ದೂರದಲ್ಲಿರೋ ಚನ್ನಪಟ್ಟಣಕ್ಕೆ ವಿಸ್ತರಿಸಲು ಮನವಿ ಮಾಡಲಾಗಿತ್ತು. ಅದರಿಂದ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಬಸ್ ಸೌಲಭ್ಯ ಸಿಕ್ಕಿದೆ. ಇನ್ನು ಇವತ್ತು ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಬಸ್ ಗಳ ಓಡಾಟಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಪ್ರತಿನಿತ್ಯ ಎಂಟು ಬಸ್ ಗಳ ಓಡಾಟ ನಡೆಯಲಿದೆ. ಜೊತೆಗೆ ಇದರ ವಿಸ್ತರಣೆಯನ್ನ ಕನಕಪುರ ಸೇರಿ ಜಿಲ್ಲೆಯಾದ್ಯಂತ ಮಾಡಲು ಕೂಡ ಚಿಂತನೆ ಮಾಡಲಾಗಿದೆ.

ದಿನಕ್ಕೆ 44 ಟ್ರಿಪ್‌ಗಳ ಸಂಚಾರ

ಬೆಂಗಳೂರು ಮತ್ತು ಚನ್ನಪಟ್ಟಣದ ನಡುವೆ ಕೇವಲ ಎಸಿ ಬಸ್‌ಗಳ ಸಂಚಾರ ಮಾತ್ರವಲ್ಲದೆ, ದಿನಕ್ಕೆ ಒಟ್ಟು 44 ಟ್ರಿಪ್‌ಗಳನ್ನು ಈ ಬಸ್‌ಗಳು ಕೈಗೊಳ್ಳಲಿವೆ. ಒಟ್ಟು 8 ಐಷಾರಾಮಿ ಎಸಿ ಬಸ್‌ಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಇದರಿಂದಾಗಿ ಪ್ರತಿ ಅರ್ಧ ಅಥವಾ ಒಂದು ಗಂಟೆಗೊಮ್ಮೆ ಪ್ರಯಾಣಿಕರಿಗೆ ಎಸಿ ಬಸ್ ಸೌಲಭ್ಯ ದೊರೆಯಲಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬರುವ ನೂರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೆ ಇದು ವರದಾನವಾಗಲಿದೆ.

ಬಸ್ ಸ್ಟಾಪ್ ಮತ್ತು ಟಿಕೆಟ್ ದರ ವಿವರ

ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಚನ್ನಪಟ್ಟಣಕ್ಕೆ ಪ್ರಯಾಣಿಸಲು ಬಿಎಂಟಿಸಿ 105 ರೂಪಾಯಿ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ರೈಲು ಪ್ರಯಾಣಕ್ಕೆ ಹೋಲಿಸಿದರೆ ಸ್ವಲ್ಪ ದರ ಹೆಚ್ಚಿದ್ದರೂ, ಆರಾಮದಾಯಕ ಪ್ರಯಾಣ ಮತ್ತು ಸಮಯದ ಉಳಿತಾಯವನ್ನು ಗಮನಿಸಿದರೆ ಇದು ಸೂಕ್ತ. ಇನ್ನು ಈ ಬಸ್‌ಗಳು ಚನ್ನಪಟ್ಟಣದಿಂದ ಹೊರಟು ರಾಮನಗರ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ. ಇದರಿಂದ ಈ ಎರಡು ಪ್ರಮುಖ ನಗರಗಳ ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಒಟ್ಟಾರೆ ಚನ್ನಪಟ್ಟಣ ಜನರ ಬಹುದಿನದ ಬೇಡಿಕೆ ಈಡೇರಿದ್ದು, ಸಾರ್ವಜನಿಕರ ಸಂಸತಕ್ಕೂ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ – Kannada News | Puducherry Rangasamy meets Lieutenant Governor stakes claim to form government

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು.

ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಲಾಗುವುದು. ಮೇ 13ರಂದು ರಂಗಸಾಮಿ ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಅಖಿಲ ಭಾರತ ಎನ್ಆರ್ ಕಾಂಗ್ರೆಸ್ ಸ್ಪರ್ಧಿಸಿದ್ದ 16 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಜಯಗಳಿಸಿತು. ಬಿಜೆಪಿ ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ನಾಲ್ಕನ್ನು ಗೆದ್ದಿತು. ಎಐಎಡಿಎಂಕೆ ಮತ್ತು ಲಾಚಿಯಾ ಜನನಾಯಕ ಕಚ್ಚಿ (ಎಲ್‌ಜೆಕೆ), ಇತರ ಎನ್‌ಡಿಎ ಘಟಕಗಳು ತಲಾ ಒಂದು ಸ್ಥಾನದಿಂದ ಜಯ ಗಳಿಸಿದವು. 30 ಸದಸ್ಯರ ವಿಧಾನಸಭೆಯಲ್ಲಿ ಈ ಒಕ್ಕೂಟವು 18 ಸ್ಥಾನಗಳನ್ನು ಹೊಂದಿದೆ. ಇದಲ್ಲದೆ, ಮೂರು ನಾಮನಿರ್ದೇಶಿತ ಸದಸ್ಯರಿರುತ್ತಾರೆ.

ಇದನ್ನೂ ಓದಿ: Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿರೋಧ ಪಕ್ಷದ ಡಿಎಂಕೆ ಐದು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಹೊಸ ಪಕ್ಷ ಟಿವಿಕೆ 2 ಸ್ಥಾನಗಳನ್ನು ಗೆದ್ದಿದೆ. ನಿನ್ನೆ ಮಿತ್ರಪಕ್ಷಗಳ ಶಾಸಕರ ಜಂಟಿ ಸಭೆಯಲ್ಲಿ ರಂಗಸಾಮಿ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗುರುವಾರ ಪುದುಚೇರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್. ರಂಗಸಾಮಿ, ಲೋಕ ಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru here is stops and ticket price details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇನ್ಮುಂದೆ ಜನರು ಬಿರು ಬೇಸಿಗೆಯಲ್ಲೂ ತಂಪಾಗಿ, ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.

  • ಬೊಂಬೆನಗರಿ ಚನ್ನಪಟ್ಟಣ ಜನರ ಬಹುದಿನದ ಕನಸು ನನಸು
  • ಇಂದಿನಿಂದ ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ಬಂತೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸಂಚಾರ
  • ಬಸ್ ಗಳ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಡಿಕೆ ಸುರೇಶ್.
  • ಇಷ್ಟು ದಿನ ಕೇವಲ ರಾಮನಗರದವರೆಗೂ ಮಾತ್ರ ಬಸ್ ಗಳ ಓಡಾಟವಿತ್ತು, ಇದೀಗ ಚನ್ನಪಟ್ಟಣಕ್ಕೂ ವಿಸ್ತರಣೆ

ಕೆಲಸಕ್ಕೆಂದು ಬೆಂಗಳೂರಿಗೆ ತೆರಳುವವರಿಗೆ ಅನುಕೂಲ

ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿರೋ ಚನ್ನಪಟ್ಟಣದಿಂದ ಪ್ರತಿನಿತ್ಯ ಉದ್ಯೋಗ ಹಾಗೂ ಇತರೆ ಕೆಲಸಗಳಿಗಾಗಿ ಸಾವಿರಾರು ಜನರು ರಾಜಧಾನಿ ಬೆಂಗಳೂರಿಗೆ ಸಂಚಾರಿಸುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳ ಸೌಲಭ್ಯವಿಲ್ಲದೇ ಸಾರ್ವಜನರಿಕರು ಪರದಾಡು ಪರಿಸ್ಥಿತಿ ‌ನಿರ್ಮಾಣವಾಗಿತ್ತು. ಹೀಗಾಗಿ ನಮಗೂ BMTC ಬಸ್ ಸೌಲಭ್ಯ ‌ಕಲ್ಪಿಸಿ ಎಂದು ಮನವಿ ಮಾಡಿದ್ದು. ಇದೀಗ ಜನರ ಮನವಿಗೆ ಸ್ಪಂದಿಸಿರೋ ಸರ್ಕಾರ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸೇವೆ ಓದಗಿಸಿದೆ.

ಇದನ್ನೂ ಓದಿ: ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಅಂದಹಾಗೆ ಈ ಹಿಂದೆ ಬೆಂಗಳೂರು ದಕ್ಷಿಣ ‌ಜಿಲ್ಲೆಯ ರಾಮನಗರದವರೆಗೂ ಮಾತ್ರ ಈ ಬಸ್ ಗಳ ಸೌಲಭ್ಯ ದೊರೆತಿತ್ತು. ರಾಮನಗರದಿಂದ ಕೇವಲ 12 ಕಿಲೋಮೀಟರ್ ಇರೋ ರಾಜಧಾನಿಯಿಂದ 50 ಕಿಲೋಮೀಟರ್ ದೂರದಲ್ಲಿರೋ ಚನ್ನಪಟ್ಟಣಕ್ಕೆ ವಿಸ್ತರಿಸಲು ಮನವಿ ಮಾಡಲಾಗಿತ್ತು. ಅದರಿಂದ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಬಸ್ ಸೌಲಭ್ಯ ಸಿಕ್ಕಿದೆ. ಇನ್ನು ಇವತ್ತು ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಬಸ್ ಗಳ ಓಡಾಟಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಪ್ರತಿನಿತ್ಯ ಎಂಟು ಬಸ್ ಗಳ ಓಡಾಟ ನಡೆಯಲಿದೆ. ಜೊತೆಗೆ ಇದರ ವಿಸ್ತರಣೆಯನ್ನ ಕನಕಪುರ ಸೇರಿ ಜಿಲ್ಲೆಯಾದ್ಯಂತ ಮಾಡಲು ಕೂಡ ಚಿಂತನೆ ಮಾಡಲಾಗಿದೆ.

ದಿನಕ್ಕೆ 44 ಟ್ರಿಪ್‌ಗಳ ಸಂಚಾರ

ಬೆಂಗಳೂರು ಮತ್ತು ಚನ್ನಪಟ್ಟಣದ ನಡುವೆ ಕೇವಲ ಎಸಿ ಬಸ್‌ಗಳ ಸಂಚಾರ ಮಾತ್ರವಲ್ಲದೆ, ದಿನಕ್ಕೆ ಒಟ್ಟು 44 ಟ್ರಿಪ್‌ಗಳನ್ನು ಈ ಬಸ್‌ಗಳು ಕೈಗೊಳ್ಳಲಿವೆ. ಒಟ್ಟು 8 ಐಷಾರಾಮಿ ಎಸಿ ಬಸ್‌ಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಇದರಿಂದಾಗಿ ಪ್ರತಿ ಅರ್ಧ ಅಥವಾ ಒಂದು ಗಂಟೆಗೊಮ್ಮೆ ಪ್ರಯಾಣಿಕರಿಗೆ ಎಸಿ ಬಸ್ ಸೌಲಭ್ಯ ದೊರೆಯಲಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬರುವ ನೂರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೆ ಇದು ವರದಾನವಾಗಲಿದೆ.

ಬಸ್ ಸ್ಟಾಪ್ ಮತ್ತು ಟಿಕೆಟ್ ದರ ವಿವರ

ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಚನ್ನಪಟ್ಟಣಕ್ಕೆ ಪ್ರಯಾಣಿಸಲು ಬಿಎಂಟಿಸಿ 105 ರೂಪಾಯಿ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ರೈಲು ಪ್ರಯಾಣಕ್ಕೆ ಹೋಲಿಸಿದರೆ ಸ್ವಲ್ಪ ದರ ಹೆಚ್ಚಿದ್ದರೂ, ಆರಾಮದಾಯಕ ಪ್ರಯಾಣ ಮತ್ತು ಸಮಯದ ಉಳಿತಾಯವನ್ನು ಗಮನಿಸಿದರೆ ಇದು ಸೂಕ್ತ. ಇನ್ನು ಈ ಬಸ್‌ಗಳು ಚನ್ನಪಟ್ಟಣದಿಂದ ಹೊರಟು ರಾಮನಗರ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ. ಇದರಿಂದ ಈ ಎರಡು ಪ್ರಮುಖ ನಗರಗಳ ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಒಟ್ಟಾರೆ ಚನ್ನಪಟ್ಟಣ ಜನರ ಬಹುದಿನದ ಬೇಡಿಕೆ ಈಡೇರಿದ್ದು, ಸಾರ್ವಜನಿಕರ ಸಂಸತಕ್ಕೂ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

DC vs KKR: 51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: KKR Dominates DC in Match 51; Delhi Collapses to 142 with 51 Dot Balls

ಐಪಿಎಲ್ 2026 (IPL 2026) ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (KKR vs DC) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಉತ್ತಮ ಆರಂಭ ಪಡೆದ ಡೆಲ್ಲಿ ತಂಡದ ಇನ್ನಿಂಗ್ಸ್ ಆರಂಭಿಕರು ಔಟಾದ ಬಳಿಕ ಹಳಿ ತಪ್ಪಿತು. ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಕೆಕೆಆರ್ ಬೌಲಿಂಗ್ ವಿಭಾಗ ಪ್ರತಿ ರನ್‌ಗೂ ಡೆಲ್ಲಿ ಬ್ಯಾಟ್ಸ್‌ಮನ್‌ಗಳು ಪರದಾಡುವಂತೆ ಮಾಡಿದರು. ಇದರ ಪರಿಣಾಮವಾಗಿ ಡೆಲ್ಲಿ ಬರೋಬ್ಬರಿ 51 ಡಾಟ್ ಬಾಲ್‌ಗಳನ್ನು ಆಡಿತು. ಅಂದರೆ ಈ 51 ಎಸೆತಗಳಲ್ಲಿ ಡೆಲ್ಲಿಗೆ ಯಾವುದೇ ರನ್ ಬರಲಿಲ್ಲ.

ಡೆಲ್ಲಿ ತಂಡದ ಬ್ಯಾಟಿಂಗ್‌ ವೈಫಲ್ಯ

ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ ಪಡೆದುಕೊಂಡಿತು. ಪಾಥುಮ್ ನಿಸ್ಸಂಕ ಮತ್ತು ಕೆಎಲ್ ರಾಹುಲ್ ಐದು ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 49 ರನ್ ಸೇರಿಸಿದರು. ಪಾಥುಮ್ ನಿಸ್ಸಂಕ 30 ಎಸೆತಗಳಲ್ಲಿ 50 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಕೆಎಲ್ ರಾಹುಲ್ 14 ಎಸೆತಗಳಲ್ಲಿ 23 ರನ್ ಬಾರಿಸಿದರು. ಆದಾಗ್ಯೂ, ಕೆಕೆಆರ್ ತಂಡದ ಬೌಲರ್‌ಗಳು ಮಧ್ಯಮ ಓವರ್‌ಗಳಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದರು. ಮಧ್ಯಮ ಓವರ್‌ಗಳಲ್ಲಿ (7 ರಿಂದ 15 ಓವರ್‌ಗಳು) ಕೆಕೆಆರ್ ಬೌಲರ್​ಗಳು ಪಾರುಪತ್ಯ ಮೆರೆದರು. ಹೀಗಾಗಿ ಡೆಲ್ಲಿ ಕೇವಲ 43 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತು.

ಆದಾಗ್ಯೂ, ಅಂತಿಮ ಓವರ್‌ಗಳಲ್ಲಿ, ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 39 ರನ್ ಗಳಿಸಿ ತಂಡವನ್ನು ಈ ಮೊತ್ತಕ್ಕೆ ಕೊಂಡೊಯ್ದರು. ಆದಾಗ್ಯೂ, ಇತರ ಬ್ಯಾಟ್ಸ್‌ಮನ್‌ಗಳು ಸಂಪೂರ್ಣವಾಗಿ ವಿಫಲರಾದರು. ನಿತೀಶ್ ರಾಣಾ 10 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿದರೆ, ಸಮೀರ್ ರಿಜ್ವಿ 7 ಎಸೆತಗಳಲ್ಲಿ 3 ರನ್, ಟ್ರಿಸ್ಟಾನ್ ಸ್ಟಬ್ಸ್ ಕೂಡ 4 ಎಸೆತಗಳಲ್ಲಿ 2 ರನ್ ಗಳಿಸಿ ಔಟಾದರು. ನಾಯಕ ಅಕ್ಷರ್ ಪಟೇಲ್ 22 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿದರು. ಆಶ್ಚರ್ಯಕರವಾಗಿ, ಡೆಲ್ಲಿ ಈ ಇನ್ನಿಂಗ್ಸ್‌ನಲ್ಲಿ ಒಟ್ಟು 51 ಡಾಟ್ ಬಾಲ್‌ಗಳನ್ನು ಎದುರಿಸಿತು, ಇದು ಈ ಕಡಿಮೆ ಸ್ಕೋರ್‌ಗೆ ಪ್ರಮುಖ ಕಾರಣವಾಗಿತ್ತು. ಇದಲ್ಲದೆ, ಡೆಲ್ಲಿ ಇಡೀ ಇನ್ನಿಂಗ್ಸ್‌ನಲ್ಲಿ ಕೇವಲ 6 ಸಿಕ್ಸರ್‌ಗಳನ್ನು ಮಾತ್ರ ಬಾರಿಸಿತು. ಇದರಲ್ಲಿ ಪಾಥುಮ್ ನಿಸ್ಸಂಕಾ ಮತ್ತು ಅಶುತೋಷ್ ಶರ್ಮಾ ತಲಾ 3 ಸಿಕ್ಸರ್‌ಗಳನ್ನು ಬಾರಿಸಿದರೆ, ಇತರ ಬ್ಯಾಟ್ಸ್‌ಮನ್‌ಗಳಿಂದ ಒಂದೇ ಒಂದು ಸಿಕ್ಸರ್ ಸಿಡಿಯಲಿಲ್ಲ.

DC vs KKR IPL 2026 Live Score: ಕೆಕೆಆರ್​​ 2ನೇ ವಿಕೆಟ್ ಪತನ

ಅನುಕುಲ್, ಕಾರ್ತಿಕ್ ಮಾರಕ ದಾಳಿ

ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಅನುಕುಲ್ ರಾಯ್ ಮತ್ತು ಕಾರ್ತಿಕ್ ತ್ಯಾಗಿ ಮಾರಕ ದಾಳಿ ಸಂಘಟಿಸಿದರು. ಇಬ್ಬರೂ ಬೌಲರ್‌ಗಳು ಅತ್ಯಂತ ಕಡಿಮೆ ಎಕಾನಮಿ ದರದಲ್ಲಿ ರನ್ ಬಿಟ್ಟುಕೊಟ್ಟು ತಲಾ ಎರಡು ವಿಕೆಟ್ ಪಡೆದರು. ವೈಭವ್ ಅರೋರಾ, ಸುನಿಲ್ ನರೈನ್ ಮತ್ತು ಕ್ಯಾಮರೂನ್ ಗ್ರೀನ್ ಕೂಡ ತಲಾ ಒಂದು ವಿಕೆಟ್ ಪಡೆದರು. ವರುಣ್ ಚಕ್ರವರ್ತಿ ವಿಕೆಟ್ ಪಡೆಯದಿದ್ದರೂ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 28 ರನ್ ಬಿಟ್ಟುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:59 pm, Fri, 8 May 26

Source link

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದೀಗ ರಾಜೇಗೌಡ ಸಹ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ತ್ವರಿತ ವಿಚಾರಣೆಗೆ ಕೋರಿಕೆಯನ್ನು ಪರಿಗಣಿಸುವುದಾಗಿ ಹೇಳಿದೆ.

  • ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ವಿವಾದ
  • ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ ಟಿ.ಡಿ ರಾಜೇಗೌಡ
  • ಮರು ಎಣಿಕೆಗೆ ಆದೇಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ
  • ಮೇ 11 ರಂದು ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ವಕೀಲ ದೇವದತ್ ಕಾಮತ್ ಮೂಲಕ ಅರ್ಜಿ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಬಿಜೆಪಿಯ ಡಿಎನ್‌ ಜೀವರಾಜ್ ಅವರು ಹೈಕೋರ್ಟ್​​ ಮೆಟ್ಟಿಲೇರಿದ್ದು, ಸುಮಾರು ಎರಡುವರೆ ವರ್ಷಗಳ ಸತತ ವಿಚಾರಣೆ ಬಳಿಕ ಅಂತಿಮವಾಗಿ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಬಳಿಕ ಕೋರ್ಟ್ ಆದೇಶದಂತೆ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಅವರು ಗೆಲುವು ಸಾಧಿಸಿದ್ದು, ನಿನ್ನೆ (ಮೇ 07) ಪ್ರಮಾಣ ವಚನ ಸ್ವೀಕರಿಸಿದರು.  ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್​​​ನ ರಾಜೇಗೌಡ ಸಹ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ‌ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ

ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಮರುಎಣಿಕೆ ಪ್ರಕ್ರಿಯೆಯನ್ನು ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ರಾಜೇಗೌಡ ಪರ ವಕೀಲ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಈ ವಾದ ಆಲಿಸಿದ ಸುಪ್ರೀಂಕೋರ್ಟ್, ನಾವು ಇಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ. ಆದರೆ ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ ಎಂದು ತಿಳಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಟಿಡಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರನ್ನು 201 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದರು. ಆದ್ರೆ, ಕಾನೂನು ಹೋರಾಟ ನಡೆಸಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ? – Kannada News | Now File BESCOM Electricity Complaints Through Social Media: Here’s How

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ.

ಮುಖ್ಯಾಂಶಗಳು

  • ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು ಸಲ್ಲಿಸಬಹುದು.
  • ಪ್ರತಿ ಜಿಲ್ಲೆಗಳಿಗೆ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಲಭ್ಯ.
  • ಗ್ರಾಹಕರ ನೆರವಿಗೆ ಸನ್ನದ್ಧವಾದ ಬೆಸ್ಕಾಂ.

ದೂರು ನೀಡುವುದೇಗೆ?

ದೂರು ನೀಡುವಾಗ ಗ್ರಾಹಕರು ತಮ್ಮ ಐಡಿ, ನಿಖರವಾದ ವಿಳಾಸ ಮತ್ತು ಸಮಸ್ಯೆಯ ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಬೇಕು. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ತ್ವರಿತ ಪರಿಹಾರ ಪಡೆಯಬಹುದಾಗಿದೆ.

ಬೆಸ್ಕಾಂ ಟ್ವೀಟ್​

ಇನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್​ ಆಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ದೂರುಗಳನ್ನು ಸ್ವೀಕರಿಸಲು ಮುಂದಾಗಿದೆ. ಮಳೆಗಾಲದ ತುರ್ತು ಸಮಯದಲ್ಲಿ 1912 ಸಹಾಯವಾಣಿ ಕರೆ ಸಂಪರ್ಕ ಸಾಧ್ಯವಾಗದಿದ್ದರೆ ಗ್ರಾಹಕರು ಬೆಸ್ಕಾಂನ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್  facebook.com/bescomblr ಮತ್ತು ಎಕ್ಸ್ (ಟ್ವಿಟರ್) x.com/NammaBESCOM ಮೂಲಕ ದೂರು ಸಲ್ಲಿಸಿ ಶೀಘ್ರ ಪರಿಹಾರ ಪಡೆಯಬಹುದಾಗಿದೆ.

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು ನಗರ ಜಿಲ್ಲೆ ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013 ಮತ್ತು ಉತ್ತರ ವೃತ್ತ: 8277884014. ಕೋಲಾರ: 8277884015, ಚಿಕ್ಕಬಳ್ಳಾಪುರ: 8277884016, ಬಿಆರ್​ಸಿ: 8277884017, ತುಮಕೂರು: 8277884019, ದಾವಣಗೆರೆ: 8277884021, ಚಿತ್ರದುರ್ಗ: 8277884020, ರಾಮನಗರ: 8277884018.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:45 pm, Fri, 8 May 26

Source link

DC vs KKR: 250, 500, 1000..! ಐಪಿಎಲ್‌ನಲ್ಲಿ ರಾಹುಲ್ ಐತಿಹಾಸಿಕ ಸಾಧನೆ – Kannada News | KL Rahul’s Historic IPL 2026: 250 T20s, 500 Boundaries and 3 Team 1000 Run Record

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡದ ಪರ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು (PC- DC X).

ಆದಾಗ್ಯೂ ಈ ಪಂದ್ಯ ಕೆಎಲ್ ರಾಹುಲ್​ಗೆ ಬಹಳ ವಿಶೇಷವಾಗಿತ್ತು. ಏಕೆಂದರೆ ರಾಹುಲ್​ಗೆ ಇದು 250 ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿದ ರಾಹುಲ್ 23 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿಗಳು ಸೇರಿದ್ದವು. ಈ 4 ಬೌಂಡರಿಗಳ ಮೂಲಕ ರಾಹುಲ್ ಐಪಿಎಲ್‌ನಲ್ಲಿ ವಿಶೇಷ ಮೈಲಿಗಲ್ಲನ್ನು ದಾಟಿದರು (PC- DC X).

ಈ ನಾಲ್ಕು ಬೌಂಡರಿಗಳೊಂದಿಗೆ ರಾಹುಲ್ ಐಪಿಎಲ್‌ನಲ್ಲಿ 500 ಬೌಂಡರಿಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 7 ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಐಪಿಎಲ್‌ನಲ್ಲಿ ಇದುವರೆಗೆ 156 ಪಂದ್ಯಗಳನ್ನಾಡಿರುವ ರಾಹುಲ್ 232 ಸಿಕ್ಸರ್‌ಗಳನ್ನು ಸಹ ಹೊಡೆದಿದ್ದಾರೆ (PC- DC X).

ಹಾಗೆಯೇ ಈ ಪಂದ್ಯದಲ್ಲಿ 23 ರನ್​ಗಳ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ 1000 ರನ್‌ಗಳನ್ನು ಸಹ ಪೂರ್ಣಗೊಳಿಸಿದರು. ಇದು ಡೆಲ್ಲಿ ಪರ ವೇಗವಾಗಿ 1000 ರನ್‌ಗಳನ್ನು ಪೂರೈಸಿದ ದಾಖಲೆಯಾಗಿದೆ (PC- DC X).

ಕೆಎಲ್ ರಾಹುಲ್ ಈ ಹಿಂದೆ ಪಂಜಾಬ್ ಮತ್ತು ಲಕ್ನೋ ತಂಡಗಳ ಪರವೂ 1000 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ 1000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (PC- DC X).

Published On – 8:48 pm, Fri, 8 May 26

Source link

ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ – Kannada News | Suvendu Adhikari Meets Governor RN Ravi Stakes Claim To Form Government In West Bengal

ಕೊಲ್ಕತ್ತಾ, ಮೇ 8: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ಗಂಟೆಗಳ ಬಳಿಕ ಪಶ್ಚಿಮ ಬಂಗಾಳದ ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ಸಂಜೆ ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು. ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ನಾಳೆ (ಶನಿವಾರ) ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ ಟ್ರೈಟ್ ಹೊಂದಿದ್ದರೆ, ಮಗುವಿಗೆ ಗಂಭೀರ ಥಲಸ್ಸೆಮಿಯಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾರಣದಿಂದ ವಿವಾಹಕ್ಕೂ ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಇದ್ದಾಗ ಯಾವ ರೀತಿ ಲಕ್ಷಣಗಳು ಕಂಡುಬರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥಲಸ್ಸೆಮಿಯಾದ ಪ್ರಮುಖ ಲಕ್ಷಣಗಳು:

ಸಾಮಾನ್ಯವಾಗಿ ಥಲಸ್ಸೆಮಿಯಾ ಇರುವ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಕ್ತಹೀನತೆ, ದೌರ್ಬಲ್ಯ, ಬೇಗ ದಣಿವು, ತೂಕ ಮತ್ತು ಎತ್ತರ ಸರಿಯಾಗಿ ಬೆಳೆಯದಿರುವುದು, ಚರ್ಮ ಬಿಳಿಯಾಗುವುದು ಹಾಗೂ ಉಸಿರಾಟದ ತೊಂದರೆ ಕಾಣಿಸಬಹುದು. ಕೆಲವು ಮಕ್ಕಳಲ್ಲಿ ಮುಖದ ಎಲುಬುಗಳ ಆಕಾರದಲ್ಲೂ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಗಂಭೀರ ಥಲಸ್ಸೆಮಿಯಾ ಹೊಂದಿರುವವರಿಗೆ ನಿಯಮಿತವಾಗಿ ರಕ್ತ ಹೇರಿಕೆ (Blood Transfusion) ಮಾಡಬೇಕಾಗುತ್ತದೆ. ಚಿಕಿತ್ಸೆ ವಿಳಂಬವಾದರೆ ಹೃದಯ, ಯಕೃತ್ತು ಮತ್ತು ಇತರ ಅಂಗಾಂಗಗಳ ಮೇಲೆ ಪರಿಣಾಮ ಬೀಳಬಹುದು.

ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆ:

ವೈದ್ಯರ ಪ್ರಕಾರ, ಥಲಸ್ಸೆಮಿಯಾಗೆ ಸಂಪೂರ್ಣ ಚಿಕಿತ್ಸೆ ಕೆಲವು ಸಂದರ್ಭಗಳಲ್ಲಿ ಮಾತ್ರ ಸಾಧ್ಯ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಮೂಲಕ ಕೆಲವರಿಗೆ ಶಾಶ್ವತ ಪರಿಹಾರ ದೊರೆಯಬಹುದು. ಆದರೆ ಹೆಚ್ಚಿನ ರೋಗಿಗಳಿಗೆ ನಿಯಮಿತ ಚಿಕಿತ್ಸೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗುತ್ತದೆ. ಸಮತೋಲನ ಆಹಾರ, ಐರನ್ ಮಟ್ಟದ ಮೇಲ್ವಿಚಾರಣೆ ಮತ್ತು ಸಮಯಕ್ಕೆ ಸರಿಯಾದ ವೈದ್ಯಕೀಯ ಪರೀಕ್ಷೆಗಳು ರೋಗ ನಿಯಂತ್ರಣದಲ್ಲಿ ಸಹಾಯ ಮಾಡುತ್ತವೆ. ಮುಖ್ಯವಾಗಿ, ಮದುವೆಗೆ ಮೊದಲು ಥಲಸ್ಸೆಮಿಯಾ ಸ್ಕ್ರೀನಿಂಗ್ ಮಾಡಿಸುವುದು ಈ ಕಾಯಿಲೆ ತಡೆಯಲು ಪರಿಣಾಮಕಾರಿ ಮಾರ್ಗವೆಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version