Headlines

ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ – Kannada News | Iranian drone strike hit Kuwait International Airport flight Canceled Amid Iran Attacks

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್…

Read More

March 2026 Horoscope: ಈ ನಾಲ್ಕು ರಾಶಿಯವರಿಗೆ ಮಾರ್ಚ್​​ ತಿಂಗಳಿನಲ್ಲಿ ಲಕ್ಕೋ ಲಕ್ಕು – Kannada News | March 2026 Horoscope: Venus Transit Brings Prosperity and Love for All Rashis

ಮಾರ್ಚ್- 2026 ರಲ್ಲಿ ಶುಕ್ರನು ತನ್ನ ಉಚ್ಚಸ್ಥಾನಕ್ಕೆ ಹೋಗಿ ತಿಂಗಳ ಕೊನೆಯಲ್ಲಿ ಸ್ಥಾನವನ್ನು ಬದಲಿಸುವನು. ಶುಕ್ರ ದಶೆಯವರಿಗೆ ಇದು ಅತ್ಯಂತ ಶುಭ ಕಾಲ‌. ಹಣಕಾಸು ಕೈಸೇರುವುದಲ್ಲದೇ ಅನೇಕ ಭೋಗಗಳು, ಭೋಜನ, ಸಂಚಾರ, ವಿಶ್ರಾಂತಿ, ಸಂಗಾತಿಯ ಜೊತೆ ಆಪ್ತತೆ ಇವೆಲ್ಲ ಇರಲಿದೆ. ಮೇಷ ರಾಶಿ ​ಈ ತಿಂಗಳು ನಿಮಗೆ ಮಿಶ್ರಫಲ ದೊರೆಯಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೂಡಿಕೆಯಲ್ಲಿ ಎಚ್ಚರವಿರಲಿ. ಕುಟುಂಬದವರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ…

Read More

ಇರಾನ್‌ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು, ಪೋಷಕರ ಗೋಳಾಟ

ಟೆಹ್ರಾನ್, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ (Israel Attack) ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ್ಲಿರುವ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ ದಾಳಿ ನಡೆದಿದೆ. ಇದರಿಂದ ಆ ಶಾಲೆಯೊಳಗಿದ್ದ 40 ವಿದ್ಯಾರ್ಥಿನಿಯರ ದೇಹ ಛಿದ್ರವಾಗಿದೆ. ಆ ಶಾಲೆಯ ಅವಶೇಷಗಳಡಿ ತಮ್ಮ ಮಕ್ಕಳ ದೇಹಗಳನ್ನು ಹುಡುಕುತ್ತಾ ಪೋಷಕರು ಗೋಳಾಡುವ ದೃಶ್ಯ ಮನಕಲಕುವಂತಿತ್ತು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – Kannada News | Belagavi Student Heart Attack Death: 2nd PUC Exam Day Tragedy Shocks Chikkodi Village

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ…

Read More

ಜೈಲಿನಲ್ಲಿ ಭೇಟಿಯಾದಾಗ ದರ್ಶನ್ ಹೇಳಿದ್ದೇನು? ಧನ್ವೀರ್ ಮಾತು – Kannada News | Dhanveer Gowda says what Darshan told him when he met in Jail

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ನಿನ್ನೆ (ಫೆಬ್ರವರಿ 27) ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆಗೆ ಕೆಲವು ಸಂಕಷ್ಟಗಳು ಎದುರಾಗಿದ್ದವು, ಬಿಡುಗಡೆ ದಿನ ರಾಜ್ಯದಾದ್ಯಂತ ಎರಡು ಶೋಗಳು ಸಹ ರದ್ದಾದವು. ಕೊನೆಗೂ ಬಿಡುಗಡೆ ಆದ ಬಳಿಕ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ಧನ್ವೀರ್ ಗೌಡ, ಸಿನಿಮಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಆದಾಗ ಅವರು ಏನು ಹೇಳಿದರು ಎಂಬುದನ್ನೂ…

Read More

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್ – Kannada News | T20 World Cup 2026: Pakistan Eliminated in Super 8s; New Zealand Qualifies for Semis

2026 ರ ಟಿ20 ವಿಶ್ವಕಪ್​ನಲ್ಲಿ ಸಿಕ್ಕಿದ್ದ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕೆಂದಿದ್ದರೆ, ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಇದರ ಪರಿಣಾಮವಾಗಿ ಪಾಕ್ ತಂಡಕ್ಕೆ ಸೆಮಿಫೈನಲ್‌ ಬಾಗಿಲು ಅಧಿಕೃತವಾಗಿ ಮುಚ್ಚಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಗ್ರೂಪ್ 2 ರಿಂದ ಎರಡನೇ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ…

Read More

ಈ ರಾಶಿಯವರಿಗೆ ಮಾರ್ಚ್ 01ರಿಂದ 07 ರವರೆಗೆ ಉದ್ಯೋಗದಲ್ಲಿ ದೊಡ್ಡ ಮನ್ನಣೆ – Kannada News | Career Forecast March 1 7: Promotions, Transfers & Opportunities by Zodiac Sign

ಮಾರ್ಚ್ 01ರಿಂದ 07 ರವರೆಗೆ ಮೊದಲ ವಾರವಾಗಿದ್ದು ಉದ್ಯೋಗದಲ್ಲಿ ಕೆಲವರಿಗೆ ಆತಂಕ, ಸಂತೋಷ, ಆಲಸ್ಯ, ಪ್ರಯತ್ನ ಎಲ್ಲವೂ ಮಿಶ್ರವಾಗಿರುವುದು. ಒಂದನ್ನೇ ನಂಬಿ ಇರುವುದು ಬೇಕಾಗಿಲ್ಲ, ಬೇರೆ ಕ್ಷೇತ್ರಗಳ ಜ್ಞಾನವೂ ಮುಖ್ಯ. ಎರಡು ದೋಣಿಯಲ್ಲಿ ಹೋಗುವುದು ಕಷ್ಟ. ​ ಮೇಷ ​ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ಮೇಲಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಸಣ್ಣ ತಪ್ಪುಗಳು ಅವಮಾನಕ್ಕೆ ದಾರಿಯಾಗದಂತೆ ಎಚ್ಚರವಹಿಸಿ. ಭಡ್ತಿಯ ಮಾತುಕತೆಗಳು ಸಕಾರಾತ್ಮಕವಾಗಿ ನಡೆಯಲಿವೆ. ಹೊಸ ಜವಾಬ್ದಾರಿಗಳು ನಿಮ್ಮ ಸ್ಥಾನಮಾನವನ್ನು…

Read More

ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್ – Kannada News | Rajpal Yadav talks about his cheque bounce case

ರಾಜ್​ಪಾಲ್ ಯಾದವ್ (Rajpal Yadav) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ – Kannada News | Bengaluru Sump Tragedy: 3 Dead Due to Chemical Fumes in Rainwater Pit

ಬೆಂಗಳೂರು, ಫೆಬ್ರವರಿ 28: ಮಳೆ ನೀರಿನ ಇಂಗು ಗುಂಡಿಗೆ ಮೂರು ಬಲಿ (death) ಆಗಿರುವಂತಹ ಘಟನೆ ನಗರದ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ. ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಮೃತರು. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆಯೇ ಇಂಗು ಗುಂಡಿ ನಿರ್ಮಿಸಿದ್ದರೂ ಬಳಸುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದವು. ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ …

Read More

ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳ ಸಂಚಾರವು ಜೀವನದ ವಿವಿಧ ಆಯಾಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಧನು ರಾಶಿಯ ಅಧಿಪತಿ ಗುರುವು ಈ ಸಮಯದಲ್ಲಿ ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ವಿಶೇಷ ಶಕ್ತಿಯನ್ನು ನೀಡುತ್ತದೆ. ಧನು ರಾಶಿ: ಮಾರ್ಚ್ 2026ರ ದಶಫಲಗಳ ಸಮೀಕ್ಷೆಯಲ್ಲಿ ​ಧನು ರಾಶಿಯವರಿಗೆ ಈ ತಿಂಗಳು ಸಾಮಾಜಿಕ ಗೌರವ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುವ ಲಕ್ಷಣಗಳಿವೆ. ಆದರೆ, ನಾಲ್ಕನೇ ಮನೆಯಲ್ಲಿರುವ ಶನಿಯ ಪ್ರಭಾವವು ಸ್ವಲ್ಪ ಎಚ್ಚರಿಕೆಯನ್ನು ಬಯಸುತ್ತದೆ. ​ಉತ್ತಮ ಫಲ ನೀಡುವ ದಶೆಗಳು ​ಈ…

Read More