ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ – Kannada News | Deeply Concerned India Reacts To Iran Conflict Urges To Avoid Escalation

ನವದೆಹಲಿ, ಫೆಬ್ರವರಿ 28: ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ (Iran) ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿವೆ. ಅವರು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರತೀಯ ನಾಗರಿಕರು ಸ್ಥಳೀಯ ಭದ್ರತಾ ಮಾರ್ಗದರ್ಶನವನ್ನು ಅನುಸರಿಸಬೇಕು ಮತ್ತು ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್

“ಸಂಘರ್ಷಕ್ಕೊಳಗಾದ ಎಲ್ಲ ಕಡೆಯವರು ಸಂಯಮದಿಂದ ವರ್ತಿಸಬೇಕು, ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಜೈಸ್ವಾಲ್ ಹೇಳಿದ್ದಾರೆ. ಇಸ್ರೇಲ್-ಇರಾನ್-ಅಮೆರಿಕದ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು. ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಜೈಸ್ವಾಲ್ ಹೇಳಿದ್ದಾರೆ.

ಇಂದಿನ ದಾಳಿಯಲ್ಲಿ ಇರಾನ್‌ನ ರಕ್ಷಣಾ ಸಚಿವ ಅಮೀರ್ ನಾಸಿರ್ಜಾದೆ ಮತ್ತು ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಮೊಹಮ್ಮದ್ ಪಕ್‌ಪೂರ್ ಕೊಲ್ಲಲ್ಪಟ್ಟಿದ್ದಾರೆ ಎನ್ನಲಾಗಿದೆ. ತನ್ನ ದೇಶದ ಮೇಲಿನ ದಾಳಿಗೆ ಇರಾನ್ ಕೂಡ ಪ್ರತೀಕಾರದ ದಾಳಿಗಳ ಬಗ್ಗೆ ಎಚ್ಚರಿಕೆ ನೀಡಿದೆ. ಕತಾರ್ ಮತ್ತು ಕುವೈತ್‌ ಸೇರಿದಂತೆ 6 ದೇಶಗಳ ಯುಎಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನ್ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಬುಧಾಬಿ ಮತ್ತು ದುಬೈ ಮೇಲೆಯೂ ದಾಳಿ ಮಾಡಿ ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿದೆ.

ಇದನ್ನೂ ಓದಿ: ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್

ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ, ಜರ್ಮನಿ, ಫ್ರಾನ್ಸ್, ಸ್ವಿಟ್ಜರ್ಲೆಂಡ್ ಮತ್ತು ಇಟಲಿ ಸೇರಿದಂತೆ ಹಲವಾರು ಯುರೋಪಿಯನ್ ರಾಷ್ಟ್ರಗಳು ತುರ್ತು ಸಭೆಗಳನ್ನು ನಡೆಸುತ್ತಾ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ – Kannada News | Iran’s Top Military Leaders Dead in Israel Strikes: Middle East Escalation Feared

ಇರಾನ್‌ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್

ಟೆಹ್ರಾನ್, ಫೆ.28: ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಇಬ್ಬರು ಪ್ರಭಾವಿ ನಾಯಕರು ಹತರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇರಾನ್‌ನ ರಕ್ಷಣಾ ಸಚಿವ (Defence Minister) ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್ ಈ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಎನ್​​​ಎಐ ವರದಿಯನ್ನು ಪ್ರಕಟಿಸಿದೆ. ಇರಾನ್‌ನ ರಾಜಧಾನಿ ಟೆಹ್ರಾನ್ ಮತ್ತು ಪ್ರಮುಖ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಈ ವೇಳೆ ಇರಾನ್‌ನ ಉನ್ನತ ಅಧಿಕಾರಿಗಳು ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆಯೇ ದಾಳಿ ನಡೆದಿದೆ ಎನ್ನಲಾಗಿದೆ.

ಇಸ್ರೇಲ್ ಮಾಧ್ಯಮಗಳು ಈ ಹತ್ಯೆಯನ್ನು ದೃಢಪಡಿಸಿವೆಯಾದರೂ, ಇರಾನ್ ಸರ್ಕಾರವು ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ರಕ್ಷಣಾ ಸಚಿವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕೆಲವು ಮೂಲಗಳು ತಿಳಿಸಿವೆ. ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಸ್ಥಿತಿಯ ಬಗ್ಗೆ ಈಗಾಗಲೇ ಗೊಂದಲವಿರುವ ಬೆನ್ನಲ್ಲೇ, ರಕ್ಷಣಾ ಸಚಿವರ ಹತ್ಯೆಯ ಸುದ್ದಿ ಇರಾನ್ ಸೈನ್ಯಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಈ ಪ್ರಮುಖ ನಾಯಕರ ಹತ್ಯೆಯ ನಂತರ ಇರಾನ್ ದೊಡ್ಡ ಮಟ್ಟದ ಪ್ರತೀಕಾರಕ್ಕೆ ಮುಂದಾಗುವ ಸಾಧ್ಯತೆ ಇದೆ. ಇದರಿಂದಾಗಿ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಈಗಾಗಲೇ ನೀಡಿರುವ ‘ರೆಡ್ ಅಲರ್ಟ್’ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದೆ. ಟೆಹ್ರಾನ್‌ನಲ್ಲಿರುವ ಇರಾನ್‌ನ ರಾಜಕೀಯ ಮತ್ತು ಭದ್ರತಾ ವಲಯದ ಉನ್ನತ ಅಧಿಕಾರಿಗಳು ಸಭೆ ಸೇರಿದ್ದ ಸ್ಥಳವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಇಸ್ರೇಲ್ ಇದನ್ನು “ಮುನ್ನೆಚ್ಚರಿಕೆ ದಾಳಿ” ಎಂದು ಕರೆದಿದೆ.

ಇದನ್ನೂ ಓದಿ: ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರು ಹೇಳಿದ್ದೇನು?

ಈ ಹತ್ಯೆಗಳ ಬಗ್ಗೆ ಇರಾನ್ ಸರ್ಕಾರದಿಂದ ಇನ್ನೂ ಅಧಿಕೃತ ದೃಢೀಕರಣ ಬಂದಿಲ್ಲ. ಆದರೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು, “ನಮಗೆ ತಿಳಿದಿರುವ ಮಟ್ಟಿಗೆ ಸುಪ್ರೀಂ ನಾಯಕ ಖಮೇನಿ ಅವರು ಸುರಕ್ಷಿತವಾಗಿದ್ದಾರೆ” ಎಂದು ಹೇಳುವ ಮೂಲಕ ಪರಿಸ್ಥಿತಿಯ ಗಂಭೀರತೆಯನ್ನು ಒಪ್ಪಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ಇರಾನ್ ಕೂಡ ಇಸ್ರೇಲ್ ಮತ್ತು ಕತಾರ್, ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ಮಳೆಗರೆದಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ‌; ಹೇಳಿದ್ದಿಷ್ಟು – Kannada News | Chikkamagaluru Elephant Conflict: Meeting led by Minister Eshwara Khandre; what was said

ಸಚಿವ ಈಶ್ವರ್ ಖಂಡ್ರೆ Image Credit source: tv9 kannada

ಚಿಕ್ಕಮಗಳೂರು, ಫೆಬ್ರವರಿ 28: ಕಾಫಿನಾಡಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ಕಾಡಾನೆಗಳ ದಾಳಿಗೆ ರೈತರು, ಕಾರ್ಮಿಕರು ಬಲಿ ಆಗುತ್ತಿದ್ದರೆ, ಕಾಡು, ಕೋಣದ ದಾಳಿ ಆತಂಕ ಸೃಷ್ಟಿ ಮಾಡಿದೆ. 7 ದಿನಗಳಲ್ಲಿ ಕಾಡಾನೆ (Wild elephant) ದಾಳಿಗೆ ಇಬ್ಬರು ಬಲಿಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರ ಲಾಠಿಚಾರ್ಜ್ ಕಿಚ್ಚು ಹೆಚ್ಚಿಸಿದ್ದು, ಎಲ್ಲದರ ಮಧ್ಯೆ ಇಂದು ಸಚಿವ ಈಶ್ವರ್ ಖಂಡ್ರೆ (Eshwara Khandre) ಸಭೆ ಮಾಡಿದ್ದಾರೆ.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ, ಕಾಡುಕೋಣ ಆತಂಕ ಸೃಷ್ಟಿ ಮಾಡಿದ್ದರೆ, ಬಯಲುಸೀಮೆ ಭಾಗದಲ್ಲಿ ಚಿರತೆ ಉಪಟಳ ಜನರನ್ನ ಕಂಗಾಲು ಮಾಡಿದೆ. ಹಾಸನದಿಂದ ಬೇಲೂರು ಸಕಲೇಶಪುರ ಮಾರ್ಗವಾಗಿ ಚಿಕ್ಕಮಗಳೂರು ‌ಜಿಲ್ಲೆಯ ಮೂಡಿಗೆರೆ ತಾಲೂಕಿಗೆ 30ಕ್ಕೂ ಹೆಚ್ಚು ಕಾಡಾನೆಗಳು ಎಂಟ್ರಿ ಕೊಟ್ಟಿವೆ. ಬೀಟಮ್ಮ ಗ್ಯಾಂಗ್, ಭುವನೇಶ್ವರಿ ಗ್ಯಾಂಗ್ ಉಪಟಳ ನೀಡುತ್ತಿದ್ದರೆ ಕಾಫಿತೋಟ, ಊರುಗಳಲ್ಲೇ ಕಾಡಾನೆಗಳು ಓಡಾಟ ನಡೆಸುತ್ತಿವೆ. ಜಿಲ್ಲೆಯಲ್ಲೇ ಸಂಚಾರ ಮಾಡುತ್ತಿರುವ ಕಾಡಾನೆಗಳ ಜೊತೆ ಹಾಸನದಿಂದ ಬಂದ ಕಾಡಾನೆಗಳು ಹೊಸ ತಲೆನೋವು ಉಂಟುಮಾಡಿವೆ.

ಇದನ್ನೂ ಓದಿ: ಗೋಣಿಬೀಡು ಬಳಿ ಕಾಫಿತೋಟದಲ್ಲಿ ಬೀಡುಬಿಟ್ಟ ಕಾಡಾನೆ ಭೀಮ

ಇನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 13 ಮಂದಿ ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗಿದ್ದಾರೆ. ಇದಲ್ಲದೆ ಗಾಯಗೊಂಡವರು ಹಲವರು. ಕಳೆದ ಭಾನುವಾರ ಕಾರ್ಮಿಕ ಮಹಿಳೆಯನ್ನ ಕಾಡಾನೆ ಬಲಿ ಪಡೆದಿತ್ತು. ಚಿಕ್ಕಮಗಳೂರು ತಾಲೂಕಿನ ಪುರಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಇಬ್ಬರು ಕಾಡಾನೆಗೆ ಬಲಿಯಾಗಿದ್ದರು. ಮಹಿಳೆ ಬಲಿಯಾಗುತ್ತಿದ್ದಂತೆ ಅಕ್ಷರಶಃ ಮಲೆನಾಡೇ ಕೊತಕೊತ ಅನ್ನೋ ಸ್ಥಿತಿಗೆ ತಲುಪಿತ್ತು. ಅರಣ್ಯ ಸಚಿವರೇ ಬರುವಂತೆ ಪಟ್ಟು ಹಿಡಿದಿದ್ದರು. ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದರು. ಪ್ರತಿಭಟನೆ ಸ್ವರೂಪ ಬದಲಾಗಿ ಕಡಬಗೆರೆ ಪಟ್ಟಣದಲ್ಲಿ ಲಾಠಿಚಾರ್ಜ್ ನಡೆಸಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಮತ್ತೊಂದು ಕಾಡಾನೆ ಸೆರೆಗೆ ಅನುಮತಿ 

ಇಂದು ಸಚಿವ ಈಶ್ವರ್ ಖಂಡ್ರೆ ಮಾತ್ರವಲ್ಲದೆ ಇಡೀ ರಾಜ್ಯದ ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಬಾಳೆಹೊನ್ನೂರಿನ ಕಡ್ಲೇಮಕ್ಕಿಯಲ್ಲಿ ರೈತರು, ಕಾಫಿ ಬೆಳೆಗಾರರು ಸ್ಥಳೀಯರ ಸಮ್ಮುಖದಲ್ಲಿ ಸಂವಾದ ನಡೆಸಿದರು. ಇದಲ್ಲದೆ ಬಾಳೆಹೊನ್ನೂರಿನಲ್ಲಿ ಉಪಟಳ ನೀಡುತ್ತಿರುವ ಮತ್ತೊಂದು ಕಾಡಾನೆ ಸೆರೆಗೂ ಅನುಮತಿ ನೀಡಿದ್ದಾರೆ.

ಬಾಳೆಹೊನ್ನೂರಿನ ನಾರಾಯಣ ಗುರು ಭವನದಲ್ಲಿ ನಡೆದ ಸಂವಾದದಲ್ಲಿ ಸಾಲು ಸಾಲು ಮನವಿ ಮಾಡಲಾಗಿದೆ. ಕಾಡಾನೆ ಹಾವಳಿ ಹೆಚ್ಚಾಗಲು ಕೆಲವು ಯೋಜನೆಯೂ ಕಾರಣ ಅನ್ನೋ ಆರೋಪವೂ ಕೇಳಿಬಂದಿದೆ. ಭದ್ರಾ ನದಿಯ ಹಿನ್ನೀರು ಕಡಿಮೆಯಾದಾಗ ಕಾಡಾನೆಗಳು ನದಿ ದಾಟಿ ಬರುತ್ತವೆ ಎಂದು ಸ್ಥಳೀಯರು ಸಚಿವರಿಗೆ ಮಾಹಿತಿ ನೀಡಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದರು.

ಇದಲ್ಲದೆ ಸೆಕ್ಷನ್ 4, ಒತ್ತುವರಿ ತೆರವು, ಕಾಡಿಗೆ ಬೆಂಕಿ ಬಿದ್ದರೆ ಕ್ರಮವಿಲ್ಲ. ವನ್ಯಮೃಗಗಳಿಂದ ಮಾನವರು ಸಾವನ್ನಪ್ಪಿದರೆ ಪರಿಹಾರ ಹೆಚ್ಚಿಸುವಂತೆ ಆಗ್ರಹಿಸಿದರು. ಇನ್ನೂ ಕಾಡಾನೆ ಉಪಟಳ ತಪ್ಪಿಸಲು ಇನ್ನಷ್ಟು ETF ಸಿಬ್ಬಂದಿಗಳ ನೇಮಕಾತಿಗೂ ಸ್ಥಳೀಯರು ಆಗ್ರಹಿಸಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು 

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ಕಾರ್ಯಪಡೆಗೆ ಬೇಡಿಕೆ ಇದೆ, ಸೂಚನೆಯನ್ನ ನೀಡಿದ್ದೇನೆ. ಮಾ.2ರಂದು 32 ಸಿಬ್ಬಂದಿಯ ಆನೆ ಕಾರ್ಯಪಡೆ ಪ್ರಾರಂಭ ಮಾಡುತ್ತೇವೆ. ಆನೆ ಹಾವಳಿ ತಪ್ಪಿಸಲು ಸಿಎಂರಿಂದ ರೈಲ್ವೆ ಬ್ಯಾರಿಕ್ಯಾಡ್ ಅನುಮೋದನೆ ಪಡೆಯಲು ಪ್ರಯತ್ನ ಮಾಡುತ್ತೇನೆ. ಸೆಕ್ಷನ್ 4 ಬಗ್ಗೆ ಶಾಶ್ವತ‌ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾನವ ಮತ್ತು ಪ್ರಾಣಿ ಸಂಘರ್ಷ ಕಡಿಮೆಯಾಗಬೇಕು, ದುರ್ಘಟನೆಯಾಗದಂತೆ ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !

ಒಟ್ಟಾರೆ ಸಚಿವ ಈಶ್ವರ್ ಖಂಡ್ರೆ ಜಿಲ್ಲೆಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರುಗಳು ಸಭೆಗೆ ಗೈರಾಗಿದ್ದರು. ಈ ಸಭೆ ಪರಿಹಾರದ ಸಭೆಯಾಗುತ್ತೋ, ಮುಂದೇ ರಾಜಕೀಯ ಏಟು ಎದುರೇಟಿನ ವೇದಿಕೆಯಾಗುತ್ತೋ ಎನ್ನುವ ಅನುಮಾನವೂ ಶುರುವಾಗಿದೆ. ಒಟ್ಟಿನಲ್ಲಿ ಕಾಫಿನಾಡಿನಲ್ಲಿ ಸೃಷ್ಟಿಯಾಗಿರುವ ಕಾಡು ಪ್ರಾಣಿಗಳು ಮತ್ತು ಮಾನವ ನಡುವಿನ ಸಂಘರ್ಷ ಅಂತ್ಯವಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರ ಹೇಳಿದ್ದೇನು? – Kannada News | Iran Leader Khamenei’s Death Rumors Amidst Intensifying Israel Iran Conflict

ಟೆಹ್ರಾನ್, ಫೆ.28: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಇತ್ತೀಚೆಗೆ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ. ಕೆಲವು ವರದಿಗಳು ಖಮೇನಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ರಹಸ್ಯ ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳುತ್ತಿವೆ.

ಈ ವದಂತಿಗಳನ್ನು ಇರಾನ್ ಸರ್ಕಾರವು ಸಾರಾಸಗಟಾಗಿ ತಳ್ಳಿಹಾಕಿದೆ. ಇರಾನ್‌ನ ವಿದೇಶಾಂಗ ಸಚಿವರು ಮತ್ತು ಸರ್ಕಾರದ ವಕ್ತಾರರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ನಮ್ಮ ಪರಮೋಚ್ಚ ನಾಯಕ ಅಲಿ ಖಮೇನಿ ಅವರು ಸುರಕ್ಷಿತವಾಗಿದ್ದಾರೆ ಮತ್ತು ಸಂಪೂರ್ಣವಾಗಿ ಜೀವಂತವಾಗಿದ್ದಾರೆ. ಇಸ್ರೇಲ್ ಮಾಧ್ಯಮಗಳು ಸುಳ್ಳು ಸುದ್ದಿ ಹರಡುವ ಮೂಲಕ ಇರಾನ್ ಜನರಲ್ಲಿ ಆತಂಕ ಮೂಡಿಸಲು ಪ್ರಯತ್ನಿಸುತ್ತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ

ಯುದ್ಧದ ಸಮಯದಲ್ಲಿ ಎರಡೂ ದೇಶಗಳ ನಡುವೆ ಕೇವಲ ಕ್ಷಿಪಣಿ ದಾಳಿಯಷ್ಟೇ ಅಲ್ಲದೆ, ‘ಸೈಕಲಾಜಿಕಲ್ ವಾರ್’ (Psychological War) ಕೂಡ ನಡೆಯುತ್ತಿದೆ. ಶತ್ರು ದೇಶದ ನಾಯಕ ಸತ್ತಿದ್ದಾನೆ ಎಂದು ಬಿಂಬಿಸುವ ಮೂಲಕ ಆ ದೇಶದ ಸೈನ್ಯ ಮತ್ತು ಜನರ ಆತ್ಮವಿಶ್ವಾಸವನ್ನು ಕುಗ್ಗಿಸುವುದು ಇಂತಹ ವರದಿಗಳ ಹಿಂದಿನ ತಂತ್ರಗಾರಿಕೆಯಾಗಿರುತ್ತದೆ. ಇನ್ನು ನ್ಯೂಯಾರ್ಕ್ ಟೈಮ್ಸ್ ಬಿಡುಗಡೆ ಮಾಡಿದ ಉಪಗ್ರಹ ಛಾಯಾಚಿತ್ರವು ಟೆಹ್ರಾನ್‌ನಲ್ಲಿರುವ ಖಮೇನಿ ಅವರ ಕಾಂಪೌಂಡ್‌ಗೆ ಹಾನಿಯಾಗಿರುವುದನ್ನು ತೋರಿಸಿದೆ, ಅದು ಅವರ ಅಧಿಕೃತ ನಿವಾಸವಾಗಿಯೂ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ – Kannada News | Sahibzada Farhan Smashes Virat Kohli’s T20 World Cup Record for Most Runs in a Single Edition

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ ಟೀಂ ಇಂಡಿಯಾದ ದಂತಕಥೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದರು.

ವಾಸ್ತವವಾಗಿ 2014 ರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 319 ರನ್ ಬಾರಿಸಿ ಈ ಪಟ್ಟಿಯಲ್ಲಿ ಇದುವರೆಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದರು. ಆದಾಗ್ಯೂ, ಲಂಕಾ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ಫರ್ಹಾನ್ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2026 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಪರ ಬ್ಯಾಟಿಂಗ್​ನಲ್ಲಿ ಅಮೋಘ ಪ್ರದರ್ಶನ ಫರ್ಹಾನ್ ಇದುವರೆಗೆ ಆಡಿರುವ 6 ಇನ್ನಿಂಗ್ಸ್​ಗಳಲ್ಲಿ 78.25 ರ ಸರಾಸರಿಯಲ್ಲಿ 370 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಟೂರ್ನಮೆಂಟ್ ನಲ್ಲಿ ಅವರು ಒಂದು ಶತಕ ಮತ್ತು ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ.

ಫರ್ಹಾನ್ ಕೊಹ್ಲಿ ದಾಖಲೆಯನ್ನು ಮಾತ್ರವಲ್ಲದೆ, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಪಾಕಿಸ್ತಾನಿ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಬಾಬರ್ ಅಜಮ್ ಅವರ ದಾಖಲೆಯನ್ನೂ ಮುರಿದರು. 2021 ರ ಆವೃತ್ತಿಯಲ್ಲಿ ಬಾಬರ್ 303 ರನ್ ಗಳಿಸಿದ್ದರು. ಶ್ರೀಲಂಕಾ ವಿರುದ್ಧ 20 ರನ್‌ಗಳ ಮೈಲಿಗಲ್ಲು ದಾಟಿದ ತಕ್ಷಣ ಫರ್ಹಾನ್ ಈ ವಿಶೇಷ ಸಾಧನೆ ಮಾಡಿದರು.

Published On – 8:40 pm, Sat, 28 February 26

Source link

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು – Kannada News | Ajit Pawar Death Preliminary probe into plane crash flags low visibility at Baramati Airport

ಮುಂಬೈ, ಫೆಬ್ರವರಿ 28: ಜನವರಿ 28ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಾಜಿ ಡಿಸಿಎಂ ಅಜಿತ್ ಪವಾರ್ (Ajit Pawar) ಸಾವನ್ನಪ್ಪಿದ್ದರು. ಈ ಅಪಘಾತ ನಡೆದ ಒಂದು ತಿಂಗಳ ನಂತರ, ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ಅಜಿತ್ ಪವಾರ್ ಅವರ ವಿಮಾನ ಏಕೆ ಅಪಘಾತಕ್ಕೀಡಾಯಿತು ಎಂಬುದರ ಕುರಿತು ಇದು ಮಾಹಿತಿಯನ್ನು ನೀಡಿದೆ. 22 ಪುಟಗಳ ಈ ವರದಿಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ವಿಮಾನವು ನೆಲಕ್ಕೆ ಅಪ್ಪಳಿಸುವ ಮೊದಲು ಮರಕ್ಕೆ ಡಿಕ್ಕಿ ಹೊಡೆದು ನಂತರ ನೆಲಕ್ಕೆ ಅಪ್ಪಳಿಸಿದೆ ಎಂದು ವರದಿ ಹೇಳಿದೆ.

ಅಜಿತ್ ಪವಾರ್ ಅವರ ವಿಮಾನದ ಅಪಘಾತದ ತನಿಖೆಯನ್ನು ವಾಯು ಅಪಘಾತ ತನಿಖಾ ಬ್ಯೂರೋ (AAIB) ನಡೆಸುತ್ತಿದೆ. ಈ ಸಂಸ್ಥೆ ತನ್ನ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ಅಪಘಾತವು ಒಂದೇ ಕಾರಣದಿಂದ ಆಗಿಲ್ಲ. ಹವಾಮಾನ, ಮೂಲಸೌಕರ್ಯ, ಕಾರ್ಯಾಚರಣೆಯ ನಿರ್ಧಾರಗಳೆಲ್ಲವೂ ಸೇರೊ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. CVR/FDR ನ ವಿವರವಾದ ವಿಶ್ಲೇಷಣೆಯ ನಂತರ ಅಪಘಾತದ ಅಂತಿಮ ಕಾರಣಗಳು ಸ್ಪಷ್ಟವಾಗುತ್ತವೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ?

ಬಾರಾಮತಿಯಲ್ಲಿ ಪ್ರತ್ಯೇಕ MET (ಹವಾಮಾನ) ಸೌಲಭ್ಯವಿಲ್ಲ. ವಿಮಾನ ನಿಲ್ದಾಣದ ಗೋಪುರವು ಗೋಚರತೆಯನ್ನು 3000 ಮೀಟರ್ ಎಂದು ಹೇಳಿತ್ತು. ಆದರೆ VFR ಕಾರ್ಯಾಚರಣೆಗಳಿಗೆ ಕನಿಷ್ಠ 5000 ಮೀಟರ್ ಅಗತ್ಯವಿದೆ. ಆದರೆ, ವಿಮಾನ ಅಪಘಾತದ ಸಮಯದಲ್ಲಿ ಗೋಚರತೆ ಕೇವಲ 2000 ಮೀಟರ್ ಆಗಿತ್ತು. ಆದ್ದರಿಂದ, ಹವಾಮಾನ ಮತ್ತು ಗೋಚರತೆಯು ಈ ವಿಮಾನ ಅಪಘಾತಕ್ಕೆ ಹೆಚ್ಚಿನ ಕಾರಣವಾಗಿರಬಹುದು ಎಂದು ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

VFR ಮಿತಿಗಿಂತ ಕಡಿಮೆ ಗೋಚರತೆಯಲ್ಲಿ ಇಳಿಯಲು ಪ್ರಯತ್ನಿಸುವುದು ಒಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ. ಅಲ್ಲದೆ, ಅಜಿತ್ ಪವಾರ್ ಅವರ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವೈಫಲ್ಯದ ಯಾವುದೇ ನೇರ ಪುರಾವೆಗಳು ಇಲ್ಲಿಯವರೆಗೆ ಬೆಳಕಿಗೆ ಬಂದಿಲ್ಲ. ಆದ್ದರಿಂದ ಈಗ CVR/FDR ವಿಶ್ಲೇಷಣೆ ನಿರ್ಣಾಯಕವಾಗಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ – Kannada News | West Asia Tensions: Qatar Missile Attack Video, Indian Expat Warning, Govt Advisory

ದೋಹಾ, ಫೆ.28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಿಡಿ ಈಗ ನೆರೆಯ ದೇಶಗಳಿಗೂ ಹರಡುತ್ತಿದ್ದು, ಕತಾರ್‌ನಿಂದ ಆತಂಕಕಾರಿ ವಿಡಿಯೋವೊಂದು ಹೊರಬಂದಿದೆ. ಆಕಾಶದಿಂದ ಕ್ಷಿಪಣಿಯೊಂದು ವೇಗವಾಗಿ ಬಂದು ಭೂಮಿಗೆ ಅಪ್ಪಳಿಸಿ ಸ್ಫೋಟಗೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಪಕ್ಕಾಕ್ಕೆ ಬನ್ನಿ ಎಂದು ಕಿರುಚುತ್ತಿರುವುದು ಈಗ ಇಡೀ ವಿಶ್ವದ ಗಮನ ಸೆಳೆದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ನೆರೆರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎನ್ನಲಾಗಿದೆ. ಕತಾರ್‌ನಲ್ಲಿರುವ ಅಮೆರಿಕದ ಪ್ರಮುಖ ವಾಯುನೆಲೆಯ ಆಸುಪಾಸಿನಲ್ಲಿ ಈ ಕ್ಷಿಪಣಿ ಬಿದ್ದಿದೆ ಎಂದು ವರದಿಯಾಗಿದೆ. ವಿಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಭಾರತೀಯ ಮೂಲದವನೆಂದು ಅಂದಾಜಿಸಲಾಗಿದ್ದು, ಕ್ಷಿಪಣಿ ತೀರಾ ಹತ್ತಿರದಲ್ಲಿ ಬೀಳುತ್ತಿರುವುದನ್ನು ಕಂಡು ಗಾಬರಿಯಿಂದ ತನ್ನ ಜೊತೆಗಿದ್ದವರಿಗೆ ಪಕ್ಕಕ್ಕೆ ಸರಿಯುವಂತೆ ಹಿಂದಿಯಲ್ಲಿ ಕೂಗಿದ್ದಾರೆ. ಕತಾರ್‌ನಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದಾರೆ. ಯುದ್ಧದ ತೀವ್ರತೆ ಇರಾನ್-ಇಸ್ರೇಲ್ ಗಡಿ ದಾಟಿ ಕತಾರ್ ಮತ್ತು ಯುಎಇ ಅಂತಹ ದೇಶಗಳಿಗೂ ವ್ಯಾಪಿಸುತ್ತಿರುವುದು ಅಲ್ಲಿರುವ ಭಾರತೀಯ ಸಮುದಾಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈಗಾಗಲೇ ಭಾರತ ಸರ್ಕಾರವು ಅಲ್ಲಿರುವ ತನ್ನ ಪ್ರಜೆಗಳಿಗೆ “ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ” ಎಂದು ರೆಡ್ ಅಲರ್ಟ್ ಘೋಷಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್ – Kannada News | KL Rahul Bowls in Ranji Final 2025 26: Hubballi Witness 11 Year Return

2025-26ರ ರಣಜಿ ಟ್ರೋಫಿ ಫೈನಲ್ ಒಂದು ವಿಶಿಷ್ಟ ಮತ್ತು ಅಚ್ಚರಿಯ ದೃಶ್ಯಕ್ಕೆ ಸಾಕ್ಷಿಯಾಯಿತು. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಫೈನಲ್ ಪಂದ್ಯದ ಐದನೇ ಮತ್ತು ಅಂತಿಮ ದಿನದಂದು, ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ ರಾಹುಲ್ ಬ್ಯಾಟ್ಸ್‌ಮನ್ ಆಗಿ ವಿಶೇಷವಾದದ್ದೇನೂ ಮಾಡದಿದ್ದರೂ, ಬೌಲಿಂಗ್ ಮಾಡುವ ಮೂಲಕ ನೆರೆದಿದ್ದ ಅಭಿಮಾನಿಗಳಿಗೆ ಮನರಂಜನೆ ನೀಡಿದರು.

ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‌ಗೆ ಹೆಸರುವಾಸಿಯಾಗಿರುವ ರಾಹುಲ್, ಪಂದ್ಯದ ಕೊನೆಯ ದಿನದಂದು ಬೌಲಿಂಗ್‌ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಪಂದ್ಯ ಕೈಮೀರಿ ಹೋಗಿದ್ದರಿಂದ ಕೆಎಲ್ ರಾಹುಲ್ ಬೌಲಿಂಗ್ ಮಾಡಲು ಮುಂದಾದರು. ಇನ್ನಿಂಗ್ಸ್‌ನ 81ನೇ ಮತ್ತು 83ನೇ ಓವರ್‌ಗಳನ್ನು ಬೌಲ್ ಮಾಡಿದ ರಾಹುಲ್ ಮೊದಲ ಓವರ್‌ನಲ್ಲಿ ಕೇವಲ 3 ರನ್‌ಗಳನ್ನು ಬಿಟ್ಟುಕೊಟ್ಟರೆ ಎರಡನೇ ಓವರ್‌ನಲ್ಲಿ ಕೊಂಚ ದುಬಾರಿಯಾದರು. ಒಟ್ಟಾರೆಯಾಗಿ ಎರಡು ಓವರ್‌ಗಳಲ್ಲಿ 15 ರನ್‌ಗಳನ್ನು ನೀಡಿದ ರಾಹುಲ್ ಯಾವುದೇ ವಿಕೆಟ್‌ ಪಡೆಯಲಿಲ್ಲ.

ವಾಸ್ತವವಾಗಿ ರಾಹುಲ್​ಗೆ ವಿಕೆಟ್ ಪಡೆಯುವ ಅವಕಾಶವಿತ್ತು. ಸಾಹಿಲ್ ಲೋಟ್ರಾ ನೀಡಿದ ಸುಲಭ ಕ್ಯಾಚ್ ಅನ್ನು ಮಾಯಾಂಕ್ ಅಗರ್ವಾಲ್ ಸ್ಲಿಪ್‌ನಲ್ಲಿ ಕೈಬಿಟ್ಟರು. ಆದಾಗ್ಯೂ 11 ವರ್ಷಗಳ ನಂತರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡಿದ ರಾಹುಲ್ ಈ ಹಿಂದೆ 2015 ರಲ್ಲಿ ಬೌಲಿಂಗ್ ಮಾಡಿದ್ದರು. ರಾಹುಲ್ ತಮ್ಮ ವೃತ್ತಿಜೀವನದಲ್ಲಿ ಒಂದೇ ಒಂದು ಪ್ರಥಮ ದರ್ಜೆ ವಿಕೆಟ್ ಪಡೆದಿಲ್ಲ ಎಂಬುದನ್ನು ಗಮನಿಸಬೇಕಾದ ಸಂಗತಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish

ಡಾಗ್ ಸತೀಶ್, ಬಿಗ್​​ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್​​ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್ ಗೌಡ ಮತ್ತು ಬುಜ್ಜಿ ರಜತ್, ಡಾಗ್ ಸತೀಶ್​​ಗೆ ಸ್ಟ್ರಾಂಗ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

ಸತೀಶ್ ಅವರ ಹೆಸರಿನ ಇನ್​​ಸ್ಟಾಗ್ರಾಂ ಪೇಜಿನಲ್ಲಿ ಅವರ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದ್ದು, ಇದೀಗ ಈ ವಿಡಿಯೋ ಸುದೀಪ್ ಅಭಿಮಾನಿಗಳ ಸಿಟ್ಟು ನೆತ್ತಿಗೆ ಏರಿಸಿದೆ. ವಿಡಿಯೋನಲ್ಲಿ ಸತೀಶ್ ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಹಿನ್ನೆಲೆಯಲ್ಲಿ ಸುದೀಪ್ ಅವರ ‘ದಾದ ಯಾರ್ ಗೊತ್ತಾ?’ ಹಾಡು ಹಾಕಲಾಗಿದೆ. ವಿಡಿಯೋ ಮೇಲೆ, ‘ಅಣ್ಣ ಸೂಸು ಮಾಡಿದರೂ ನ್ಯೂಸ್ ಆಗುತ್ತೆ’ ಎಂದಿದೆ. ಸತೀಶ್ ಕಾಲಿನ ಬಳಿ, ‘ಅಣ್ಣ ಯಾರ್ ಗೊತ್ತ?’ ಎಂಬ ಸಾಲು ಬರೆದಿದೆ.

ಸತೀಶ್ ಅವರ ಅಧಿಕೃತ ಖಾತೆಗೂ ಈ ವಿಡಿಯೋ ಟ್ಯಾಗ್ ಆಗಿದ್ದು, ಸುದೀಪ್ ಅವರನ್ನು ಅವಮಾನಿಸಲೆಂದೇ ಹೀಗೆ ಮಾಡಿರುವುದು ವಿಡಿಯೋ ನೋಡಿದರೆ ತಿಳಿಯುತ್ತಿದೆ. ಅಲ್ಲದೆ, ಪರೋಕ್ಷವಾಗಿ ತಾನು ಸುದೀಪ್​ ಗಿಂತಲೂ ದೊಡ್ಡ ಸೆಲೆಬ್ರಿಟಿ ಎಂದು ಬಿಂಬಿಸಿಕೊಳ್ಳುವ ಸತೀಶ್ ಅವರ ಪ್ರಯತ್ನವೂ ಕಾಣುತ್ತಿದೆ. ಇದೀಗ ಈ ವಿಡಿಯೋ ಸುದೀಪ್ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿಗೆ ಹೊಡೆಯಲು ಯತ್ನಿಸಿದ್ದ ಡಾಗ್ ಸತೀಶ್?

ವಿಡಿಯೋಕ್ಕೆ ಕಮೆಂಟ್ ಮಾಡಿರುವ ವಿನಯ್ ಗೌಡ, ‘ಮೊದಲು ಹಾಡು ಡಿಲೀಟ್ ಮಾಡು, ಇಲ್ಲ ಅಂದ್ರೆ ಸ್ವಲ್ಪ ತಾಳು ನಿನ್ನ ಜನ್ನರು ನಾಯಿ ತರ ಹೊಡಿತಾರೆ ಆ ವಿಡಿಯೋ ನಾನ್ ಹಾಕ್ತಿನಿ’ ಎಂದಿದ್ದಾರೆ. ಕಮೆಂಟ್​​ನಲ್ಲಿಯೇ ಸತೀಶ್ ಅನ್ನು ಸಿಟ್ಟಿನಿಂದ ನಿಂದಿಸಿದ್ದಾರೆ ಸಹ. ಇನ್ನು ಅದೇ ವಿಡಿಯೋಕ್ಕೆ ರಜತ್ ಸಹ ಕಮೆಂಟ್ ಮಾಡಿದ್ದು, ‘ವಿಡಿಯೋ ತೆಗೆಯೋ ಕಿತ್ತೋದವನೆ, ಸುದೀಪ್ ಸರ್ ಸಾಂಗ್ ಹೆಂಗೋ ಹಾಕಿದೆ. ಸಾಂಗ್ ಡಿಲೀಟ್ ಆಗ್ಲಿಲ್ಲ ಅಂದ್ರೆ ಇದೆ ನಿಂಗೆ, ಆಟ ಆಡ್ತೀಯ ಕಿತ್ತೋದವನೆ, ಕಾಲ್ ಮಾಡ್ತಿದ್ದೀನಿ ಫೋನ್ ಪಿಕ್ ಮಾಡು’ ಎಂದು ಖಡಕ್ ಆಗಿಯೇ ವಾರ್ನಿಂಗ್ ಮಾಡಿದ್ದಾರೆ.

ವಿನಯ್ ಮತ್ತು ರಜತ್ ಮಾತ್ರವೇ ಅಲ್ಲದೆ, ಮಾಜಿ ಬಿಗ್​​ಬಾಸ್ ಸ್ಪರ್ಧಿ ಧನರಾಜ್ ಇನ್ನೂ ಕೆಲವರು ಸಹ ವಿಡಿಯೋಕ್ಕೆ ಕಮೆಂಟ್ ಮಾಡಿದ್ದು, ಸತೀಶ್​​ಗೆ ಹಿಗ್ಗಾ ಮುಗ್ಗಾ ಬೈದಿದ್ದಾರೆ. ಆದರೆ ಡಾಗ್ ಸತೀಶ್ ಆ ವಿಡಿಯೋವನ್ನು ಡಿಲೀಟ್ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology

ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ಕೆಲ ವಿಮಾನಗಳು ರದ್ದಾಗಿವೆ.

ವಿಮಾನಗಳ ಹಾರಾಟ ರದ್ದು 

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ವಿಮಾನಗಳು ಸೇರಿದಂತೆ ವಿದೇಶದಿಂದ ಬೆಂಗಳೂರಿಗೆ ಬರಬೇಕಿದ್ದ ಕೆಲ ವಿಮಾನಗಳನ್ನು ಸಹ ಕ್ಯಾನ್ಸಲ್ ಮಾಡಲಾಗಿದೆ.

ಇದನ್ನೂ ಓದಿ: ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ದುಬೈ, ಅಬುಧಾಬಿ, ಜಿದ್ದಾಗೆ ತೆರಳಬೇಕಿದ್ದ ವಿಮಾನಗಳು ರದ್ದು ಮಾಡಲಾಗಿದೆ. ಏರ್‌ಲೈನ್ಸ್ ಸಿಬ್ಬಂದಿ ಈಗಾಗಲೇ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಇರಾನ್ ಮೇಲೆ ದಾಳಿ ಹಿನ್ನೆಲೆ ಮತ್ತಷ್ಟು ವಿಮಾನಗಳು ರದ್ದಾಗುವ ಕೂಡ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಯಾವೆಲ್ಲಾ ವಿಮಾನಗಳ ಹಾರಾಟ ರದ್ದು

ರಾತ್ರಿ 8.20ಕ್ಕೆ ದುಬೈಗೆ ತೆರಳಬೇಕಿದ್ದ ಎಮಿರೇಟ್ಸ್ ವಿಮಾನ ಹಾಗೂ ರಾತ್ರಿ 10.10ಕ್ಕೆ ರಿಯಾದ್ ನಗರಕ್ಕೆ, ರಾತ್ರಿ 12.10ಕ್ಕೆ ಅಬುಧಾಬಿಗೆ ಮತ್ತು ರಾತ್ರಿ 12.35ಕ್ಕೆ ಜಿದ್ದಾಗೆ ತೆರಳಬೇಕಿದ್ದ ಇಂಡಿಗೋ ವಿಮಾನಗಳ ಹಾರಾಟ ರದ್ಧು ಮಾಡಲಾಗಿದೆ.

ಇದನ್ನೂ ಓದಿ: ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ

ಇನ್ನು ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿದೇಶಕ್ಕೆ ತೆರಳಬೇಕಿದ್ದ ಕೆಲ ವಿಮಾನಗಳು ಕ್ಯಾನ್ಸಲ್‌ ಮಾಡಲಾಗಿದೆ. ದುಬೈನಿಂದ‌ ಕೆಐಎಬಿಗೆ ರಾತ್ರಿ 2.40ಕ್ಕೆ ಬರಬೇಕಿದ್ದ ಎಮಿರೇಟ್ಸ್‌ ವಿಮಾನ, ದೋಹಾದಿಂದ ರಾತ್ರಿ 2.50ಕ್ಕೆ ಮತ್ತು ದುಬೈನಿಂದ‌ ರಾತ್ರಿ 3.40ಕ್ಕೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ ರದ್ದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:45 pm, Sat, 28 February 26

Source link

Exit mobile version