ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಬೆಂಗಳೂರು, ಮೇ 28: ವಿವಿಧ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಡವಿದ್ದ ಕಾಂಗ್ರೆಸ್​​ (Congress) ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್​​ನಲ್ಲಿ ತಲೆದೋರಿದ್ದ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಯಶಸ್ವಿಯಾಗಿ ಬಿಡಿಸಿದೆ. ಸಿಎಂ‌ ಬದಲಾವಣೆ ಎಂಬ ಬೆಟ್ಟದಂತ ಸಮಸ್ಯೆ ಯನ್ನು ವರಿಷ್ಠರು ಯಶ್ವಸಿಯಾಗಿ ನಿರ್ವಹಿಸಿದೆ. ಈ ಹಿಂದೆ ವಿವಿಧ ರಾಜ್ಯ್ಲಲ್ಲಿ ನಾಯಕರ ತಪ್ಪು ನಿರ್ಧಾರದಿಂದ ಪಕ್ಷಕ್ಕೆ ಭಾರಿ ನಷ್ಟ ಉಂಟಾಗಿತ್ತು. ಹಲವು ರಾಜ್ಯಗಳೇ ಕಾಂಗ್ರೆಸ್​​ ಕೈತಪ್ಪಿ ಹೋಗಿತ್ತು ಎನ್ನುವುದು ಇತಿಹಾಸ.

ಪಂಜಾಬ್​​ನಲ್ಲಿ ಅಮರಿಂದರ್ ಸಿಂಗ್ vs ಸಿಧು

ಪಂಜಾಬ್​​ನಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಬದಲಾವಣೆ ಮಾಡಲಾಗಿತ್ತು.ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಕ್ಯಾಪ್ಟರನ್ನು ಇಳಿಸಿ ಚರಣ್‌ಜಿತ್ ಸಿಂಗ್ ಚನ್ನಿಗೆ ವರಿಷ್ಠರು ಪಟ್ಟ ಕಟ್ಟಿದ್ದರು. ಆದರೆ ಸಿಧು ಮತ್ತು ಚನ್ನಿ ನಡುವಿನ ಆಂತರಿಕ ಕಲಹ ಬೀದಿಗೆ ಬಂದ ಪರಿಣಾಮ 2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿತ್ತು.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಮಧ್ಯಪ್ರದೇಶದಲ್ಲಿ ಕಮಲ್​​ನಾಥ್ vs ಸಿಂಧಿಯಾ

ಮಧ್ಯಪ್ರದೇಶದಲ್ಲಿ 2018ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿರಿಯ ನಾಯಕ ಕಮಲ್​​ನಾಥ್ ಅವರಿಗೆ ಸಿಎಂ ಪಟ್ಟ ನೀಡಲಾಗಿತ್ತು. ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಹೈಕಮಾಂಡ್ ಸಂಪೂರ್ಣವಾಗಿ ನಿರ್ಲಕ್ಷಿಸಿದ ಪರಿಣಾಮ ಭಿನ್ನಮತ ತಾರಕಕ್ಕೇರಿ ಸಿಂಧಿಯಾ ತಮ್ಮ ಬೆಂಬಲಿಗ 22 ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆ ಬಳಿಕ ಕಮಲನಾಥ್​​ ನೇತೃತ್ವದ ಸರ್ಕಾರ ಪತನಗೊಂಡು, ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ ಬಿಜೆಪಿ ಮತ್ತೆ ಅಧಿಕಾರ ಹಿಡಿದಿತ್ತು.

ರಾಜಸ್ಥಾನದಲ್ಲಿ ಗೆಹ್ಲೋಟ್ vs ಪೈಲಟ್

ರಾಜಸ್ಥಾನದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದ ಸಚಿನ್ ಪೈಲಟ್​​ಗೆ ಸಿಎಂ ಸ್ಥಾನ ನೀಡದೆ ಹಿರಿಯ ನಾಯಕ ಅಶೋಕ್ ಗೆಹ್ಲೋಟ್​​ಗೆ ಹೈಕಮಾಂಡ್ ಮಣೆ ಹಾಕಿತ್ತು. ಅಧಿಕಾರ ಹಂಚಿಕೆಯ ಸೂತ್ರದ ಗೊಂದಲದಿಂದಾಗಿ ಇಬ್ಬರ ನಡುವೆ ನಿರಂತರ ಶೀತಲ ಸಮರ ನಡೆಯುತ್ತಿತ್ತು. ಸಚಿನ್ ಪೈಲಟ್ ಬಂಡಾಯವೆದ್ದಾಗ ಹೈಕಮಾಂಡ್ ಮಧ್ಯಪ್ರವೇಶಿಸಿ ಡಿಸಿಎಂ ಸ್ಥಾನದಿಂದ ಅವರನ್ನು ವಜಾಗೊಳಿಸಿತ್ತು. ಐದು ವರ್ಷಗಳ ಕಾಲ ಸರಿಪಡಿಸಲಾಗದ ಆಂತರಿಕ ಭಿನ್ನಮತದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಅಸ್ಸಾಂನಲ್ಲಿ ಗೊಗೊಯ್ vs ಹಿಮಂತ್​​

ಅಸ್ಸಾಂ ಕಾಂಗ್ರೆಸ್​​ನಲ್ಲಿ ಈ ಹಿಂದೆ ಭಿನ್ನಮತ ಎದುರಾಗಿದ್ದಾಗ ಅಂದಿನ ಸಿಎಂ ತರುಣ್ ಗೊಗೊಯ್ ವಿರುದ್ಧ ಅಂದು ಕಾಂಗ್ರೆಸ್​​ನಲ್ಲಿದ್ದ ಹಿಮಂತ್​​ ಬಿಸ್ವಾ ಶರ್ಮಾ ಬಂಡಾಯವೆದ್ದಿದ್ದರು. ಆದರೆ ಹೈಕಮಾಂಡ್​​ ಭೇಟಿಗೆ ಬಂದ ಹಿಮಂತ್​​ರನ್ನು ವರಿಷ್ಠರು ನಿರಾಕರಿಸಿದ ಕಾರಣ ತೀವ್ರ ಅಸಮಾಧಾನಗೊಂಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಸ್ಸಾಂನಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ.

ಛತ್ತೀಸ್‌ಗಢದಲ್ಲಿ ಬಘೇಲ್ vs ಸಿಂಗ್ ದೇವ್

2018ರಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡುವರೆ ವರ್ಷಗಳ ನಂತರ ಸಿಎಂ ಬದಲಾವಣೆ ಎಂಬ ಸೂತ್ರ ಹೆಣೆಯಲಾಗಿತ್ತು. ಆದರೆ ಭೂಪೇಶ್ ಬಘೇಲ್ ಅವಧಿ ಮುಗಿದ ನಂತರವೂ ಹೈಕಮಾಂಡ್ ಸಿಎಂ ಬದಲಾವಣೆ ಮಾಡಲು ಧೈರ್ಯ ತೋರಲಿಲ್ಲ. ಟಿ.ಎಸ್.ಸಿಂಗ್ ದೇವ್ ಕಡೆಗಣಿಸಿದ ಪರಿಣಾಮ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು.

ಈ ಎಲ್ಲ ರಾಜ್ಯಗಳಲ್ಲಿ ತನ್ನ ನಿರ್ಧಾರದಿಂದ ಭಾರಿ ನಷ್ಟ ಅನುಭವಿಸಿರುವ ಹಿನ್ನೆಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವೇಳೆ ಚಾಣಾಕ್ಷತೆ ಮೆರೆದಿದೆ. ಸಿದ್ದರಾಮಯ್ಯನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆ ಜೊತೆಗೆ, ಎಲ್ಲ ಸಮುದಾಯಗಳಿಗೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡುವ ನಿರ್ಧಾರ ಮಾಡಿದೆ. ಯಾವುದೇ ರೀತಿಯಲ್ಲಿಯೂ ತಮ್ಮ ನಿರ್ಧಾರ ವೋಟ್​​ ಬ್ಯಾಂಕ್​​ ಅಥವಾ ಪಕ್ಷ ನಾಯಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ತಂತ್ರ ರೂಪಿಸಿಯೇ ಅಂತಿಮ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:20 pm, Thu, 28 May 26

Source link

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ

ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ  ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ.

ಈ ವೇಳೆ ಪ್ರಭುಶಂಕರ್ ಅವರು ರಾಜೀನಾಮೆ ಪತ್ರ ಸ್ವೀಕಾರ ಶಿಷ್ಟಾಚಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಟ್ಟರು. ನಾಳೆ (ಮೇ 29) ಸಂಜೆ ವೇಳೆಗೆ ರಾಜ್ಯಪಾಲರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ತಾವು ಮತ್ತೊಮ್ಮೆ ಬಂದು ರಾಜ್ಯಪಾಲರನ್ನು ಭೇಟಿಯಾಗಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

Source link

ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಬಾಲಿವುಡ್‌ನ ಸ್ಟಾರ್ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ ತಮ್ಮ ಮುದ್ದಾದ ಮಗನ ಪ್ರೈವೆಸಿ ವಿಷಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ಸಿದ್ದಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿಯ ಹಾದಿಯನ್ನೇ ತುಳಿದಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನವಜಾತ ಶಿಶು ವಿಹಾನ್​ನನ್ನು (Vihaan Kaushal) ಪಾಪರಾಜಿಗಳಿಗೆ ಪರಿಚಯಿಸಿರುವ ಈ ದಂಪತಿ, ಮಗನ ಫೋಟೋಗಳನ್ನು ಕ್ಲಿಕ್ಕಿಸದಂತೆ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಏರ್‌ಪೋರ್ಟ್‌ನಲ್ಲಿ ವಿಕ್ಕಿ ಕೌಶಲ್ ಫೋಟೋಗಳಿಗೆ ಪೋಸ್ ನೀಡಿದರು. ಮಗ ವಿಹಾನ್‌ನನ್ನು ಎದೆಗೆ ಅಪ್ಪಿಕೊಂಡಿದ್ದ ಕತ್ರಿನಾ ಕೈಫ್ ಮಾತ್ರ ತಮ್ಮ ಹಾಗೂ ಮಗನ ಫೋಟೋ ಕ್ಲಿಕ್ಕಿಸದಂತೆ ವಿನಂತಿಸಿದರು. ಫೋಟೋ ತೆಗೆಯಲು ನಿರಾಕರಿಸಿದರೂ, ಈ ತಾರಾ ದಂಪತಿ ತಮ್ಮ ಮಗನನ್ನು ಮೊದಲ ಬಾರಿಗೆ ಮಾಧ್ಯಮದವರಿಗೆ ಹತ್ತಿರದಿಂದ ತೋರಿಸಿ ಪರಿಚಯಿಸಿದರು. ‘ಕತ್ರಿನಾ ಅವರು ವಿಕ್ಕಿ ಜೊತೆಯಲ್ಲೇ ಇದ್ದರು. ಆದರೆ ಮಗನೊಂದಿಗೆ ಫೋಟೋ ತೆಗೆಯದಂತೆ ವಿನಂತಿಸಿದರು. ಇದೇ ವೇಳೆ ಅವರು ಮಗನನ್ನು ನಮಗೆ ಪರಿಚಯಿಸಿದರು’ ಎಂದು ಏರ್‌ಪೋರ್ಟ್‌ನಲ್ಲಿದ್ದ ಪಾಪರಾಜಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಯಾವಾಗಲೂ ತಮ್ಮ ವೈಯಕ್ತಿಕ ಜೀವನವನ್ನುಮಾಧ್ಯಮದ ಕ್ಯಾಮೆರಾಗಳಿಂದ ದೂರ ಇಡಲು ಇಷ್ಟಪಡುವ ಕತ್ರಿನಾ ಮತ್ತು ವಿಕ್ಕಿ, ಈ ಬಾರಿ ಮಗನನ್ನು ಮಾಧ್ಯಮಗಳಿಗೆ ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೊತೆಗೆ ವಿಹಾನ್ ಫೋಟೋಗಳನ್ನು ಎಲ್ಲೂ ಪ್ರಕಟಿಸಬಾರದು ಎಂಬ ಸ್ಪಷ್ಟ ನಿಯಮವನ್ನು ತಿಳಿಸುವ ಮೂಲಕ ಮಗನ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಕತ್ರಿನಾ ಮತ್ತು ವಿಕ್ಕಿ ದಂಪತಿ ಗಂಡು ಮಗುವನ್ನು ಬರಮಾಡಿಕೊಂಡಿದ್ದರು. ‘ನಮ್ಮ ಸಂತೋಷದ ಗುಚ್ಛ ಬಂದಿದೆ. ಅಪಾರ ಪ್ರೀತಿ ಮತ್ತು ಕೃತಜ್ಞತೆಯೊಂದಿಗೆ ನಮ್ಮ ಮುದ್ದಾದ ಮಗನನ್ನು ಸ್ವಾಗತಿಸುತ್ತಿದ್ದೇವೆ’ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ತದನಂತರ ಜನವರಿ 7ರಂದು ತಮ್ಮ ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟಿರುವುದಾಗಿ ಅಧಿಕೃತವಾಗಿ ತಿಳಿಸಿದ್ದರು.

ಇದನ್ನೂ ಓದಿ: ಕತ್ರಿನಾ ಕೈಫ್ ಜತೆಗಿನ ಸಂಸಾರ ವಿಕ್ಕಿ ಕೌಶಲ್​ಗೆ ಬೋರ್ ಆಯ್ತಾ? ವಿಡಿಯೋ ವೈರಲ್

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ 2021ರ ಡಿಸೆಂಬರ್ 9ರಂದು ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾದಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮದುವೆಯಾಗುವವರೆಗೂ ತಮ್ಮ ಪ್ರೀತಿಯ ವಿಚಾರವನ್ನು ಈ ಜೋಡಿ ರಹಸ್ಯವಾಗಿಟ್ಟಿತ್ತು. ಅದೇ ರೀತಿ ಈಗ ಮಗನ ಫೋಟೋವನ್ನು ಕೂಡ ಅವರು ಬಹಿರಂಗಪಡಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 4:04 pm, Thu, 28 May 26

Source link

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ ಭಾರತ ತಂಡ, ಇಂಗ್ಲೆಂಡ್‌ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ತನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಚುಟುಕು ವಿಶ್ವಸಮರಕ್ಕೆ ಕಾಲಿಡಬೇಕಿದೆ.

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 4 ಪಂದ್ಯಗಳ ಟಿ20 ಸರಣಿ ಮತ್ತು ಒಂದು ಟೆಸ್ಟ್ ಪಂದ್ಯವನ್ನು ಆಡಲಿದೆ. ಟೀಂ ಇಂಡಿಯಾದ ಪ್ರವಾಸವು ಮೇ 28 ರ ಗುರುವಾರದಿಂದ ಪ್ರಾರಂಭವಾಗಲಿದೆ. ಈ ಟಿ2 ಸರಣಿಯಲ್ಲಿ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿರುತ್ತಾರೆ. ಅಲ್ಲದೆ, ಷಾರ್ಲೆಟ್ ಡೀನ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಈ ಸರಣಿಯ ಮೊದಲ ಟಿ20 ಪಂದ್ಯದ ಪೂರ್ಣ ವಿವರ ಇಂತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಮೇ 28 ರ ಗುರುವಾರ ನಡೆಯಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯುತ್ತದೆ?

ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ನಡೆಯುತ್ತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಪ್ರಾರಂಭವಾಗಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.

Womens T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

ಹೆಡ್ ಟು ಹೆಡ್ ದಾಖಲೆ

ಇಲ್ಲಿಯವರೆಗೆ, ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ 35 ಟಿ20 ಪಂದ್ಯಗಳು ನಡೆದಿವೆ. ಈ 35 ಪಂದ್ಯಗಳಲ್ಲಿ ಇಂಗ್ಲೆಂಡ್ ಮಹಿಳಾ ತಂಡವು 24 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಕೇವಲ 11 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದಾಗ್ಯೂ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿಯನ್ನು ಗೆದ್ದುಕೊಂಡಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:56 pm, Thu, 28 May 26

Source link

ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್; ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್​ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್​ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ ಇಂದು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಿರ್ದೇಶಕನಾದ ಹಿರಿಯ ನಟ ಮೂಗು ಸುರೇಶ್; ‘ಕ್ಷಮೆಯಿರಲಿ ತಂದೆ’ ಬಿಡುಗಡೆಗೆ ಸಿದ್ಧ

ಹಿರಿಯ ನಟ ಮೂಗು ಸುರೇಶ್ (ಎಂ.ಎನ್. ಸುರೇಶ್) ಅವರು ಹಲವು ವರ್ಷಗಳಿಂದ  ಕನ್ನಡ ಚಿತ್ರರಂಗದಲ್ಲಿ (Kannada Film Industry) ಸಕ್ರಿಯರಾಗಿದ್ದಾರೆ. ಹಾಸ್ಯನಟನಾಗಿ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಷ್ಟು ವರ್ಷಗಳ ಅನುಭವದಿಂದ ಅವರು ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೌದು, ಇದೇ ಮೊದಲ ಬಾರಿಗೆ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಡ್ತಿ ಪಡೆದಿದ್ದಾರೆ. ‘ಕ್ಷಮೆಯಿರಲಿ ತಂದೆ’ ಸಿನಿಮಾಗೆ ಮೂಗು ಸುರೇಶ್ (Moogu Suresh) ಅವರು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ಎಂ.ಎನ್. ಸುರೇಶ್ ಅವರು ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿದ್ದಾರೆ. ‘ಕ್ಷಮೆಯಿರಲಿ ತಂದೆ’ ಸಿನಿಮಾಗೆ ಅವರು ಈಗಾಗಲೇ ಶೂಟಿಂಗ್ ಮುಗಿಸಿದ್ದಾರೆ. ಜೂನ್ 12ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಮೋಷನ್ ಪೋಸ್ಟರ್ ಹಾಗೂ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಯಿತು.

ಚಂದನವನದ ಹೆಸರಾಂತ ನಿರ್ದೇಶಕರಾದ ಟಿ.ಎಸ್. ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ಮೇಕಪ್ ರಾಮಕೃಷ್ಣ ಅವರು ‘ಕ್ಷಮೆಯಿರಲಿ ತಂದೆ’ ಚಿತ್ರದ ಸುದ್ದಿಗೋಷ್ಠಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮೋಷನ್ ಪೋಸ್ಟರ್, ಲಿರಿಕಲ್ ವಿಡಿಯೋ ಅನಾವರಣ ಮಾಡಿದರು. ಟ್ರೇಲರ್ ನೋಡಿದ ಅವರು ಸಿನಿಮಾಗೆ ಶುಭ ಹಾರೈಸಿದರು.

‘ಕ್ಷಮೆಯಿರಲಿ ತಂದೆ’ ಸಿನಿಮಾದ ಪೋಷನ್ ಪೋಸ್ಟರ್:

ಎಂ.ಎನ್. ಸುರೇಶ್ ಅವರು ನಿರ್ಮಾಪಕನಾಗಿ ಹಾಗೂ ನಿರ್ದೇಶಕರಾಗಿ ಗೆಲುವು ಪಡೆಯಲಿ ಎಂದು ಎಲ್ಲರೂ ಹಾರೈಸಿದರು. ಈ ವೇಳೆ ಸುರೇಶ್ ಅವರು ಮಾತನಾಡಿದರು. ‘ನಾನು ಕೆಲವು ಸಿನಿಮಾಗಳಿಗೆ ಸಹ-ನಿರ್ಮಾಪಕನಾಗಿದ್ದೆ. ಪೂರ್ಣ‌ಪ್ರಮಾಣದ ನಿರ್ಮಾಪಕನಾಗಿರುವುದು ಈ ಸಿನಿಮಾದಿಂದ. ನಾನು ನಿರ್ದೇಶನ ಮಾಡಬೇಕೆಂದುಕೊಂಡಿರಲಿಲ್ಲ. ನನ್ನ ಕಾರ್ಯವೈಖರಿಯನ್ನು ಹತ್ತಿರದಿಂದ ಬಲ್ಲ ಸ್ನೇಹಿತರು ನೀವೇ ನಿರ್ದೇಶನ ಮಾಡಿ ಅಂತ ಹೇಳಿದರು’ ಎಂದಿದ್ದಾರೆ ಸುರೇಶ್.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು

‘ಇದು ನನ್ನ ಮೊದಲ ನಿರ್ದೇಶನದ ಸಿನಿಮಾ ಆದ್ದರಿಂದ ಬೇರೆಯವರು ದುಡ್ಡು ಹಾಕುವುದು ಬೇಡ ಅಂತ ನಾನು ಕೂಡಿಟ್ಟಿದ್ದ ಹಣವನ್ನೇ ಈ ಸಿನಿಮಾಗೆ ಹಾಕಿ ನಿರ್ಮಾಣ ಮಾಡಿದ್ದೇನೆ. ಇದಕ್ಕೆ ನನ್ನ ಕುಟುಂಬದ ಸಹಕಾರವೂ ಇದೆ. ಶೀರ್ಷಿಕೆಯೇ ತಿಳಿಸುವಂತೆ ಇದೊಂದು ತಂದೆ-ಮಗನ ಬಾಂಧವ್ಯದ ಸಿನಿಮಾ. ಹರೀಶ್ ಅವರು ಕಥೆ ಬರೆದಿದ್ದಾರೆ’ ಎಂದು ಎಂ.ಎನ್. ಸುರೇಶ್ ಅವರು ಮಾಹಿತಿ ನೀಡಿದರು. ಸೂರ್ಯಕಾಂತ್ ಅವರ ಛಾಯಾಗ್ರಹಣ, ಮುತ್ತುರಾಜ್ ಅವರ ಸಂಕಲನ, ಪುಣ್ಯೇಶ್ ಕುಮಾರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IAS Vandana Meena: ಕೋಚಿಂಗ್ ಸೆಂಟರ್ ಮುಖವೇ ನೋಡದೇ, ಕೇವಲ ಯೂಟ್ಯೂಬ್ ನೋಡಿ ಓದಿದ ಹಳ್ಳಿ ಹುಡುಗಿ ಇಂದು IAS ಆಫೀಸರ್!

ಹಳ್ಳಿ ಹುಡುಗಿ ಇಂದು IAS ಆಫೀಸರ್Image Credit source: Instagram/ias_vandanameen

ದೇಶದ ಲಕ್ಷಾಂತರ ಯುವ ಜನತೆ ‘ಯುಪಿಎಸ್‌ಸಿ’ (UPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ IAS ಅಥವಾ IPS ಅಧಿಕಾರಿಗಳಾಗಬೇಕೆಂದು ಕನಸು ಕಾಣುತ್ತಾರೆ. ಆದರೆ, ಈ ಪರೀಕ್ಷೆಯು ದೇಶದಲ್ಲೇ ಅತ್ಯಂತ ಕಠಿಣ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ದುಬಾರಿ ಕೋಚಿಂಗ್ ಸೆಂಟರ್‌ಗಳು, ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ಗಳಿಗೆ ಹೋದರೆ ಮಾತ್ರ ಯುಪಿಎಸ್‌ಸಿ ಪಾಸ್ ಆಗಲು ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ, ಯಾವುದೇ ಕೋಚಿಂಗ್ ಇಲ್ಲದೆ, ಕೇವಲ ಸ್ವಯಂ ಅಧ್ಯಯನ (Self Study) ಮತ್ತು ಯೂಟ್ಯೂಬ್ ಸಹಾಯದಿಂದ ಮೊದಲ ಪ್ರಯತ್ನದಲ್ಲೇ ದೇಶದ ಅತ್ಯುನ್ನತ ಪರೀಕ್ಷೆ ಪಾಸ್ ಮಾಡಿದ ಸಾಧಕಿಯೊಬ್ಬರಿದ್ದಾರೆ. ಅವರೇ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸುತ್ತಿರುವ ಐಎಎಸ್ ವಂದನಾ ಮೀನಾ.

ರಾಜಸ್ಥಾನದ ಹಳ್ಳಿಯೊಂದರಿಂದ ಬಂದು, ಸೀಮಿತ ಸಂಪನ್ಮೂಲಗಳ ನಡುವೆಯೇ ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಕನಸನ್ನು ನನಸಾಗಿಸಿಕೊಂಡ ವಂದನಾ ಅವರ ಯಶೋಗಾಥೆ ನಿಜಕ್ಕೂ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ.

ಹಳ್ಳಿಯಿಂದ ದಿಲ್ಲಿಯವರೆಗೆ ವಂದನಾ ಅವರ ಆರಂಭಿಕ ದಿನಗಳು:

ಐಎಎಸ್ ವಂದನಾ ಮೀನಾ ಮೂಲತಃ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯವರು. ಬಾಲ್ಯದ ಕೆಲವು ವರ್ಷಗಳನ್ನು ಹಳ್ಳಿಯಲ್ಲೇ ಕಳೆದ ನಂತರ, ಇವರ ಕುಟುಂಬ ದಿಲ್ಲಿಗೆ ಸ್ಥಳಾಂತರಗೊಂಡಿತು. ವಂದನಾ ಅವರ ತಂದೆ ಪೃಥ್ವಿರಾಜ್ ಮೀನಾ ಅವರು ದಿಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕುಟುಂಬ ದಿಲ್ಲಿಗೆ ಬಂದ ನಂತರ ವಂದನಾ ಅವರ ಶಿಕ್ಷಣ ಶರವೇಗದಲ್ಲಿ ಸಾಗಿತು.

ಕಾನ್ವೆಂಟ್ ಶಾಲೆಯಿಂದ ದಿಲ್ಲಿ ವಿವಿಯವರೆಗೆ ಶಿಕ್ಷಣ:

ವಂದನಾ ದಿಲ್ಲಿಯ ಪ್ರಸಿದ್ಧ ಸೇಂಟ್ ಕೊಲಂಬಸ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಪ್ರತಿಷ್ಠಿತ ದಿಲ್ಲಿ ವಿಶ್ವವಿದ್ಯಾಲಯದಿಂದ ‘ಗಣಿತ ಗೌರವ’ (Mathematics Honours) ಪದವಿ ಪಡೆದರು. ಬಾಲ್ಯದಿಂದಲೇ ದೇಶ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದ ವಂದನಾ, ಪದವಿ ಮುಗಿಯುತ್ತಿದ್ದಂತೆಯೇ ನಾಗರಿಕ ಸೇವೆಗೆ (Civil Services) ಸೇರಲು ಗಂಭೀರ ಸಿದ್ಧತೆ ಆರಂಭಿಸಿದರು.

ದುಬಾರಿ ಕೋಚಿಂಗ್ ಇಲ್ಲ, ಯೂಟ್ಯೂಬ್‌ ಅತ್ಯುತ್ತಮ ಗುರು:

ಪದವಿ ಮುಗಿದ ನಂತರ ವಂದನಾ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ಆರಂಭಿಸಿದಾಗ, ಅವರು ಲಕ್ಷಾಂತರ ರೂಪಾಯಿ ವೆಚ್ಚದ ಯಾವುದೇ ಕೋಚಿಂಗ್ ಸಂಸ್ಥೆಗಳಿಗೆ ಸೇರಲಿಲ್ಲ. ಬದಲಿಗೆ ಮನೆಯನ್ನೇ ಓದುವ ಕೋಣೆಯನ್ನಾಗಿ ಮಾಡಿಕೊಂಡರು. ಇಂಟರ್ನೆಟ್‌ನಲ್ಲಿ ಸಿಗುವ ಉಚಿತ ಮಾಹಿತಿಯನ್ನು ಬಳಸಿಕೊಂಡರು. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಪ್ರಮುಖ ಅಕಾಡೆಮಿಕ್ ಉಪನ್ಯಾಸಗಳನ್ನು ವೀಕ್ಷಿಸುತ್ತಿದ್ದರು. ಆನ್‌ಲೈನ್ ಇ-ಪುಸ್ತಕಗಳು ಹಾಗೂ ಪಿಡಿಎಫ್ ಮೆಟೀರಿಯಲ್‌ಗಳ ಮೂಲಕ ನೋಟ್ಸ್ ಮಾಡಿಕೊಳ್ಳುತ್ತಿದ್ದರು.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ದಿನಕ್ಕೆ 15-16 ಗಂಟೆಗಳ ಕಠಿಣ ಅಧ್ಯಯನ:

ಮಾಧ್ಯಮ ವರದಿಗಳ ಪ್ರಕಾರ, ಪರೀಕ್ಷೆಯ ಸಿದ್ಧತೆಯ ಸಮಯದಲ್ಲಿ ವಂದನಾ ದಿನಕ್ಕೆ ಸುಮಾರು 15 ರಿಂದ 16 ಗಂಟೆಗಳ ಕಾಲ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದರು. ಸರಿಯಾದ ಸ್ಟ್ರಾಟಜಿ ಮತ್ತು ಕಠಿಣ ಪರಿಶ್ರಮವೇ ಅವರ ಯಶಸ್ಸಿನ ಸೀಕ್ರೆಟ್.

ಮೊದಲ ಪ್ರಯತ್ನದಲ್ಲೇ 330ನೇ ರ‍್ಯಾಂಕ್, ಈಗ ಗುಜರಾತ್‌ನಲ್ಲಿ SDM:

ನಿರಂತರ ಪರಿಶ್ರಮಕ್ಕೆ ಕೊನೆಗೂ ಫಲ ಸಿಕ್ಕಿತು. 2021ರ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಬಂದಾಗ ವಂದನಾ ಅವರ ಹೆಸರು ಸಾಧಕರ ಪಟ್ಟಿಯಲ್ಲಿತ್ತು. ಅವರು ತಮ್ಮ ಮೊದಲ ಪ್ರಯತ್ನದಲ್ಲೇ ಅಖಿಲ ಭಾರತ ಮಟ್ಟದಲ್ಲಿ 330ನೇ ರ‍್ಯಾಂಕ್ ಪಡೆಯುವ ಮೂಲಕ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು.

ಪ್ರಸ್ತುತ ವಂದನಾ ಮೀನಾ ಅವರು ಗುಜರಾತ್‌ನ ಜುನಾಗಢ ಜಿಲ್ಲೆಯ ಕೆಸೋಡ್ ಪ್ರದೇಶದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಆಗಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಫೀಸ್ ಕೊಡಲು ಸಾಧ್ಯವಿಲ್ಲ ಎಂದು ಕಂಗೆಡುವ ಗ್ರಾಮೀಣ ಭಾಗದ ಮತ್ತು ಬಡ ವಿದ್ಯಾರ್ಥಿಗಳಿಗೆ ವಂದನಾ ಮೀನಾ ಅವರ ಈ ಸಾಧನೆ ಒಂದು ಬೆಳಕಿನ ಕಿಂಡಿಯಾಗಿದೆ. ಸಾಧಿಸುವ ಛಲವಿದ್ದರೆ ಸೌಲಭ್ಯಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂಬುದಕ್ಕೆ ಇವರೇ ಸಾಕ್ಷಿ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಹುದ್ದೆ ತೊರೆದ ಸಿದ್ದರಾಮಯ್ಯ: ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು, ಮೇ 28: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಪ್ರಸ್ತುತ ಅಲಭ್ಯವಾಗಿರುವುದರಿಂದ, ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಕೆ ಮಾಡಲಾಗಿದೆ. ಈ ಕಾರಣದಿಂದಾಗಿ ರಾಜೀನಾಮೆ ತಕ್ಷಣಕ್ಕೆ ಅಂಗೀಕಾರವಾಗುವುದಿಲ್ಲವಾದರೂ, ಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ 2902 ದಿನಗಳ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದು, ಈ ಮೂಲಕ ದೇವರಾಜ ಅರಸರ (2792 ದಿನಗಳು) ದಾಖಲೆಯನ್ನು ಮೀರಿ ರಾಜ್ಯ ಕಂಡ ಏಕೈಕ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಸಿದ್ದರಾಮಯ್ಯ ಅವರು, ಈ ಮೂಲಕ ಮುಖ್ಯಮಂತ್ರಿ ಗಾದಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಅವರ ರಾಜಕೀಯ ಮುಂದಿನ ಹಾದಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

10ನೇ ಕ್ಲಾಸ್ ಓದಿದ್ರೆ ಸಾಕು, ಹೆಣ್ಮಕ್ಕಳಿಗೆ ಎಲ್​ಐಸಿ ಬಿಮಾ ಸಖಿ ಯೋಜನೆಯಿಂದ ಮಾಸಿಕ ಆದಾಯ ಮತ್ತು ವೃತ್ತಿಜೀವನ

ಭಾರತದ ಅತಿದೊಡ್ಡ ಜನರಲ್ ಇನ್ಷೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಕೋಟ್ಯಂತರ ಜನರಿಗೆ ಜೀವ ವಿಮೆ ರಕ್ಷಣೆ ಕೊಟ್ಟಿದೆ. ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ಮತ್ತು ರೆಗ್ಯುಲರ್ ಇನ್ಕಮ್ ಕೊಟ್ಟಿದೆ. ಸಾಕಷ್ಟು ಸಂಖ್ಯೆಯ ಏಜೆಂಟ್​ಗಳ ಬಲ ಎಲ್​ಐಸಿಗೆ ಇದೆ. ಇದೇ ವೇಳೆ, ಎಲ್​ಐಸಿಯಲ್ಲಿ ಬಿಮಾ ಸಖಿ ಯೋಜನೆ (LIC Bima Sakhi Yojana) ಮೂಲಕ ಆರ್ಥಿಕ ಅನನುಕೂಲದ ಮಹಿಳೆಯರಿಗೆ ನಿಯಮಿತ ಆದಾಯ ಕೊಡುತ್ತಿದೆ ಮತ್ತು ವೃತ್ತಿ ಆಯ್ಕೆ ಒದಗಿಸಿದೆ.

ಏನಿದು ಎಲ್​ಐಸಿ ಬಿಮಾ ಸಖಿ ಯೋಜನೆ?

ಬಿಮಾ ಸಖಿ ಯೋಜನೆಯಲ್ಲಿ ಎಲ್​ಐಸಿ ಏಜೆಂಟ್ ಆಗಿ ಅಣಿಯಾಗಲು ತರಬೇತಿ ಕೊಡಲಾಗುತ್ತದೆ. ಇದಕ್ಕೆ 10ನೇ ಕ್ಲಾಸ್ ಪಾಸಾದ ಮತ್ತು 18 ವರ್ಷ ಮೇಲ್ಪಟ್ಟ ಹಾಗೂ 70 ವರ್ಷ ಕೆಳಪಟ್ಟ ಮಹಿಳೆಯರು ಅರ್ಹರಾಗಿರುತ್ತಾರೆ. ಈ ತರಬೇತಿ ಅವಧಿ ಮೂರು ವರ್ಷ ಇರುತ್ತದೆ. ಈ ವೇಳೆ, ಅಭ್ಯರ್ಥಿಗಳಿಗೆ ತಿಂಗಳಿಗೆ 7,000 ರೂವರೆಗೂ ಸ್ಟೈಪೆಂಡ್ ಕೊಡಲಾಗುತ್ತದೆ.

ಇದನ್ನೂ ಓದಿ: ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ಅಭ್ಯರ್ಥಿಗಳಿಗೆ ಏನು ತರಬೇತಿ ಕೊಡಲಾಗುತ್ತದೆ?

ಎಲ್​ಐಸಿ ಬಿಮಾ ಸಖಿ ಯೋಜನೆಗೆ ಆಯ್ಕೆಯಾದ ಮಹಿಳೆಯರಿಗೆ ಇನ್ಷೂರೆನ್ಸ್ ಸರ್ವಿಸ್​ಗಳು, ಹಣಕಾಸು ಸಾಕ್ಷರತೆಯ ವಿಚಾರವಾಗಿ ತಿಳಿವಳಿಕೆ ಮೂಡಿಸಲಾಗುತ್ತದೆ. ಎಲ್​ಐಸಿಯ ಎಲ್ಲಾ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ.

ಈ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮಹಿಳೆಯರು ಪೂರ್ಣ ಪ್ರಮಾಣದ ಎಲ್​ಐಸಿ ಏಜೆಂಟ್​ಗಳಾಗಿ ಕೆಲಸ ಮಾಡಲು ಆರಂಭಿಸಬಹುದು. ಎಲ್​ಐಸಿ ಏಜೆಂಟ್ ಆದರೆ ಕಮಿಷನ್ ಮೂಲಕ ಆದಾಯ ಸಿಗುತ್ತದೆ. ಪಾಲಿಸಿ ಪ್ರೀಮಿಯಮ್ ಮೊತ್ತದ ಮೇಲೆ ಆದಾಯ ನಿಂತಿರುತ್ತದೆ.

ಎಲ್​ಐಸಿ ಬಿಮಾ ಸಖಿ ಯೋಜನೆಯಲ್ಲಿ ಮೂರು ವರ್ಷದ ಸ್ಟೈಪೆಂಡ್ ಇರುತ್ತದೆ. ಮೊದಲ ವರ್ಷ ತಿಂಗಳಿಗೆ 7,000 ರೂ ಸ್ಟೈಪೆಂಡ್ ಕೊಡಲಾಗುತ್ತದೆ. ಎರಡನೇ ಮತ್ತು ಮೂರನೇ ವರ್ಷದಲ್ಲಿ ಕ್ರಮವಾಗಿ 6,000 ರೂ ಮತ್ತು 5,000 ರೂ ಸ್ಟೈಪೆಂಡ್ ಕೊಡಲಾಗುತ್ತದೆ. ಆದರೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ನಿರ್ದಿಷ್ಟ ಮೊತ್ತದ ಪಾಲಿಸಿಗಳನ್ನು ಮಾರಾಟ ಮಾಡಬೇಕು. ಆ ಪಾಲಿಸಿಗಳಿಂದ ಕಮಿಷನ್ ಕೂಡ ಸಿಗುತ್ತದೆ.

ಇದನ್ನೂ ಓದಿ: ವಿಚಿತ್ರ ಕಾರಣ..! ಅನುಭವಿ ಗೂಗಲ್ ಉದ್ಯೋಗಿಯ ಅರ್ಜಿ ತಿರಸ್ಕಾರ; ಕಾಲೇಜು ಗ್ರೇಡ್ ಕಡಿಮೆ ಬಂದಿದ್ದಕ್ಕೆ ರಿಜೆಕ್ಟ್

ಮೂರು ವರ್ಷದ ತರಬೇತಿ ಮುಗಿಸಿದ ಮಾತ್ರಕ್ಕೆ ಎಲ್​ಐಸಿ ಏಜೆಂಟ್ ಕೆಲಸ ಸಿಕ್ಕೋದಿಲ್ಲ. ಐಆರ್​ಡಿಎಐನ ವಿಮಾ ಪರೀಕ್ಷೆ ಬರೆದು ಪಾಸಾಗಬೇಕು.

ಎಲ್​ಐಸಿ ಏಜೆಂಟ್ ಆದರೆ ಒಂದು ಪ್ರಮುಖ ಅನುಕೂಲವೆಂದರೆ ಫ್ಲೆಕ್ಸಿಬಲ್ ವರ್ಕಿಂಗ್ ಅವರ್. ದಿನವೆಲ್ಲಾ ಕೆಲಸ ಮಾಡುವ ಅಗತ್ಯ ಇರುವುದಿಲ್ಲ. ಮಧ್ಯ ಮಧ್ಯೆ ಸಾಕಷ್ಟು ಬಿಡುವು ಮಾಡಿಕೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version