ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ? – Kannada News | Will Mamata Banerjee Attend West Bengal BJP CM Suvendu Adhikaris oath taking ceremony

ಕೊಲ್ಕತ್ತಾ, ಮೇ 8: ಇಂದು ಕೊಲ್ಕತ್ತಾದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ (Suvendu Adhikari) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ. ಹಾಗೇ, ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಥಳದಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್. ರವಿ ಅವರು ಮೇ 7ರಂದು ಪಶ್ಚಿಮ ಬಂಗಾಳ ವಿಧಾನಸಭೆಯನ್ನು ಅಧಿಕೃತವಾಗಿ ವಿಸರ್ಜಿಸಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರೇ ಸಂಪುಟವನ್ನು ವಿಸರ್ಜಿಸಿದರು. ಈಗ ಮಮತಾ ಬ್ಯಾನರ್ಜಿ ನಾಳೆ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ: Suvendu Adhikari: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ; ನಾಳೆಯೇ ಪ್ರಮಾಣವಚನ

ಹೊಸ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ನಿರ್ಗಮಿಸುವ ಮುಖ್ಯಮಂತ್ರಿ ಭಾಗವಹಿಸಬೇಕೆಂದು ಯಾವುದೇ ಸ್ಥಿರ ಸಾಂವಿಧಾನಿಕ ನಿಯಮ ಅಥವಾ ಕಠಿಣ ಶಾಸನಬದ್ಧ ಕಾನೂನು ಇಲ್ಲದಿದ್ದರೂ ಸಾಮಾನ್ಯವಾಗಿ ಮಾಜಿ ಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಪ್ರದಾಯವಿದೆ. ನಿರ್ಗಮಿಸುವ ಮುಖ್ಯಮಂತ್ರಿ ಗಣ್ಯರನ್ನು ಸ್ವಾಗತಿಸಲು ಮತ್ತು ಹೊಸ ಸಿಎಂ ಅವರನ್ನು ಅಭಿನಂದಿಸಲು ಹಾಜರಿರುವುದು ವಾಡಿಕೆಯಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

ಆದರೂ ರಾಜಕೀಯ ಭಿನ್ನಾಭಿಪ್ರಾಯ, ಉದ್ವಿಗ್ನ ಸಂಬಂಧಗಳು, ಆರೋಗ್ಯ ಕಾರಣಗಳು ಅಥವಾ ವೇಳಾಪಟ್ಟಿ ಸಮಸ್ಯೆಗಳಿಂದಾಗಿ ನಿರ್ಗಮಿತ ಮುಖ್ಯಮಂತ್ರಿಗಳು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ತಪ್ಪಿಸಿಕೊಂಡ ಹಲವಾರು ಉದಾಹರಣೆಗಳಿವೆ. ಅವರ ಅನುಪಸ್ಥಿತಿಯನ್ನು ಶಿಷ್ಟಾಚಾರದ ಉಲ್ಲಂಘನೆ ಎಂದು ಪರಿಗಣಿಸಲಾಗುವುದಿಲ್ಲ. ಹೀಗಾಗಿ, ನಾಳೆಯ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಆಗಮಿಸುವ ಸಾಧ್ಯತೆ ಇಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DC vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ – Kannada News | Delhi Capitals vs Kolkata Knight Riders IPL 2026 Live Cricket Score DC vs KKR Match on 8th May latest news in Kannada

2026 ರ ಐಪಿಎಲ್ ಟೂರ್ನಿಯ 51 ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ವಾಸ್ತವವಾಗಿ, ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಎರಡೂ ತಂಡಗಳು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ.

Source link

ಹಂಟಾವೈರಸ್ ಎಂದರೇನು? ಇದು ಕೊರೊನಾದ ರೀತಿ ಹರಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? – Kannada News | Can Hantavirus Cause a Pandemic? Doctors Weigh In on Outbreak Risk

ಅಟ್ಲಾಂಟಿಕ್ ಸಮುದ್ರದಲ್ಲಿ ಸಂಚರಿಸುತ್ತಿದ್ದ ಡಚ್ ಎಕ್ಸ್‌ಪಿಡಿಷನ್ ಕ್ರೂಸ್ ಹಡಗಿನಲ್ಲಿ ಹಂಟಾವೈರಸ್ ಸೋಂಕು ಪತ್ತೆಯಾಗಿರುವುದು ಜಗತ್ತಿನ ಆರೋಗ್ಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಡಗಿನಲ್ಲಿ ಒಟ್ಟು 149 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದು, ಇವರಲ್ಲಿ ಇಬ್ಬರು ಭಾರತೀಯ ಸಿಬ್ಬಂದಿಯೂ ಸೇರಿದ್ದಾರೆ. ಈಗಾಗಲೇ ಮೂವರು ಸಾವನ್ನಪ್ಪಿದ್ದು, ಹಲವರು ಸೋಂಕಿಗೆ ಒಳಗಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ. ಹಾಗಾದರೆ ಹಂಟಾವೈರಸ್ (Hantavirus) ಎಂದರೇನು, ಇದು ಕೋವಿಡ್ (COVID-19) ರೀತಿಯಲ್ಲಿಯೇ ಹರಡುತ್ತದೆಯೇ, ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಂಟಾವೈರಸ್ ಎಂದರೇನು?

ಹಂಟಾವೈರಸ್ ಅಥವಾ ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್‌ ಹೊಸ ವೈರಸ್ ಅಲ್ಲ. ಸಾಮಾನ್ಯವಾಗಿ ಇಲಿ, ಹೆಗ್ಗಣ ಮತ್ತು ಪೋಲಿಕೋಲಗಳಂತಹ ಕೃಂತಕಗಳ (rodents) ಮೂಲಕ ಮನುಷ್ಯರಿಗೆ ಹರಡುವ ಗಂಭೀರವಾದ ಸೋಂಕಾಗಿದೆ. ಇದು ಸೋಂಕಿತ ಇಲಿಗಳ ಮೂತ್ರ, ಲಾಲಾರಸ, ಉಗುಳು ಅಥವಾ ಮಲದ ಮೂಲಕ ಮಣ್ಣಿನೊಂದಿಗೆ ಬೆರೆತು, ಒಣಗಿದ ನಂತರ ಗಾಳಿಯಲ್ಲಿ ಹರಡಿದಾಗ ಅದನ್ನು ಉಸಿರಾಡುವುದರಿಂದ ಸೋಂಕು ತಗಲುತ್ತದೆ. ಜೊತೆಗೆ ಸೋಂಕಿತ ಇಲಿ ಕಚ್ಚುವುದರಿಂದ ಅಥವಾ ಅವುಗಳ ಮಲ- ಮೂತ್ರ ನೇರವಾಗಿ ಗಾಯದ ಮೇಲೆ ಬಿದ್ದಾಗ ಸೋಂಕು ನೇರವಾಗಿ ಹರಡಬಹುದು. ಈ ಪ್ರಕರಣದಲ್ಲಿ ಪತ್ತೆಯಾಗಿರುವುದು “ಆಂಡೀಸ್ ಸ್ಟ್ರೇನ್” ಎನ್ನುವ ವಿಶೇಷ ಹಂಟಾವೈರಸ್ ರೂಪವಾಗಿದೆ. ಇದು ಮುಖ್ಯವಾಗಿ ಅರ್ಜೆಂಟಿನಾ ಮತ್ತು ಚಿಲಿ ಭಾಗಗಳಲ್ಲಿ ಕಂಡುಬರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಈ ಸೋಂಕಿನ ಮೂಲ ದಕ್ಷಿಣ ಅರ್ಜೆಂಟಿನಾದ ಪಟಾಗೋನಿಯಾ ಪ್ರದೇಶವಾಗಿರಬಹುದು ಎಂಬ ಅನುಮಾನ ಇದೆ. ಹಡಗಿಗೆ ಏರುವ ಮೊದಲು ಕೆಲವು ಪ್ರಯಾಣಿಕರು ಪಕ್ಷಿ ವೀಕ್ಷಣಾ ಪ್ರವಾಸದಲ್ಲಿ ಭಾಗವಹಿಸಿದ್ದರು. ಆ ಸಮಯದಲ್ಲಿ ಸೋಂಕಿತ ಇಲಿ ಸಂಪರ್ಕದಿಂದ ವೈರಸ್ ಹರಡಿರಬಹುದು ಎಂದು ಶಂಕಿಸಲಾಗಿದೆ.

ಇದು ಕೊರೋನಾ ರೀತಿಯಲ್ಲಿ ಹರಡುತ್ತದೆಯೇ?

ತಜ್ಞರ ಪ್ರಕಾರ, ಹಂಟಾವೈರಸ್ ಸಾಮಾನ್ಯ ಕೊರೋನಾ ವೈರಸ್‌ನಂತೆ ಸುಲಭವಾಗಿ ಗಾಳಿಯ ಮೂಲಕ ಹರಡುವುದಿಲ್ಲ. ಆದರೆ “ಆಂಡೀಸ್” ಪ್ರಭೇದದಲ್ಲಿ ಅತ್ಯಂತ ಹತ್ತಿರದ ಸಂಪರ್ಕದಲ್ಲಿರುವವರ ನಡುವೆ ಮಾನವನಿಂದ ಮಾನವನಿಗೆ ಹರಡುವ ಸಾಧ್ಯತೆ ಇದೆ. ಕುಟುಂಬ ಸದಸ್ಯರು, ಜೊತೆಯಾಗಿ ಇರುವವರು ಅಥವಾ ವೈದ್ಯಕೀಯ ಆರೈಕೆ ನೀಡುವವರಲ್ಲಿ ಸೋಂಕು ಹರಡಿದ ಉದಾಹರಣೆಗಳು ಹಿಂದೆಯೂ ದಾಖಲಾಗಿವೆ.

ಯಾವ ಲಕ್ಷಣಗಳು ಕಾಣಿಸುತ್ತವೆ?

ಜ್ವರ, ದೇಹದ ನೋವು, ದೌರ್ಬಲ್ಯ, ಉಸಿರಾಟದ ತೊಂದರೆ, ಒಣ ಕೆಮ್ಮು ಮತ್ತು ಶ್ವಾಸಕೋಶ ಸಮಸ್ಯೆಗಳು ಮುಖ್ಯ ಲಕ್ಷಣಗಳಾಗಿವೆ. ಗಂಭೀರ ಸ್ಥಿತಿಯಲ್ಲಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಉಂಟಾಗಿ ಜೀವಕ್ಕೆ ಅಪಾಯ ಉಂಟಾಗಬಹುದು.

ವೈದ್ಯರ ಸಲಹೆ;

ಡಾ. ಟೆಡ್ರೋಸ್ ಅಧಾನೊಮ್ ಅವರ ಪ್ರಕಾರ, ಮುಂದಿನ ಕೆಲವು ವಾರಗಳಲ್ಲಿ ಇನ್ನಷ್ಟು ಈ ಪ್ರಕರಣಗಳು ಕಾಣಿಸಬಹುದು. ಆದರೆ ಆತಂಕಕ್ಕಿಂತ ಎಚ್ಚರಿಕೆ ಮುಖ್ಯ. ಹಡಗಿನಲ್ಲಿ ಈಗ ಕ್ವಾರಂಟೈನ್, ಸ್ಕ್ರೀನಿಂಗ್ ಮತ್ತು ಆರೋಗ್ಯ ಮೇಲ್ವಿಚಾರಣೆ ಮುಂದುವರಿದಿದೆ ಎಂದಿದ್ದಾರೆ. ಆರೋಗ್ಯ ತಜ್ಞರ ಸಲಹೆ ಏನೆಂದರೆ, ಇಲಿ ಸಂಪರ್ಕ ತಪ್ಪಿಸುವುದು, ಸ್ವಚ್ಛತೆ ಕಾಪಾಡುವುದು ಮತ್ತು ಜ್ವರ- ಉಸಿರಾಟ ಸಮಸ್ಯೆಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೃಂಗೇರಿ ಕ್ಷೇತ್ರದ ಅಂಚೆ‌ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ – Kannada News | Sringeri Assembly Poll postal vote Row: BJP Leaders Promise Infront of God over Fixing Allegations

ಚಿಕ್ಕಮಗಳೂರು, (ಮೇ 08): ಹೈಕೋರ್ಟ್ ಆದೇಶದಂತೆ 2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) ಅಂಚೆ ಮತಗಳ (ballot paper) ಮರು‌ ಎಣಿಕೆ ಮಾಡಲಾಗಿದ್ದು, ಈ ವೇಳೆ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.ಆದ್ರೆ, ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್​ಗೆ ಸೋಲಾಗಿದ್ದು, ಬಿಜೆಪಿ ಗೆದ್ದು ಬೀಗಿದೆ. ಇದರೊಂದಿಗೆ ಮೂರು ವರ್ಷಗಳ ಬಳಿಕ ಡಿ.ಎನ್.ಜೀವರಾಜ್ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕ್ಷೇತ್ರದಲ್ಲಿ ಆಣೆ-ಪ್ರಮಾಣ ರಾಜಕೀಯ ಶುರುವಾಗಿದೆ. ಹೌದು..2023ರಲ್ಲಿ ಮತ ಏಣಿಕೆ ಕೇಂದ್ರದ ಬಿಜೆಪಿ ಎಜೆಂಟ್ ಅಗಿದ್ದ ಇಬ್ಬರ ಮೇಲೆ ಫಿಕ್ಸ್ ಆರೋಪ ಕೇಳಿಬಂದಿದ್ದು, ಇದೀಗ ಅವರಿಬ್ಬರು ಅಣೆ ಪ್ರಮಾಣ ಮಾಡಿದ್ದಾರೆ.

  • ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಹಿನ್ನೆಲೆ
  • ಬಿಜೆಪಿ ಚುನಾವಣಾ ಏಜೆಂಟ್ ಗಳಿಂದ ದೇವಾಲಯದಲ್ಲಿ ಆಣೆಪ್ರಮಾಣ
  • ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಆಣೆ ಪ್ರಮಾಣ
  • ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ನಂತರದಲ್ಲಿ ನಡೆದ ಅಪಪ್ರಚಾರ ವಿರುದ್ಧ ಚುನಾವಣಾ ಏಜೆಂಟ್ ರಿಂದ ಆಣೆ ಪ್ರಮಾಣ
  • ಸತೀಶ್ ಅದ್ದಡ ಹಾಗೂ ರಾಮಸ್ವಾಮಿ ಶೆಟ್ಟಿಗದ್ದೆ ರಿಂದ ಆಣೆ ಪ್ರಮಾಣ

ಜೀವರಾಜ್ ಗೆಲ್ಲುತ್ತಿದ್ದಂತೆ ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷ ವಿರೋಧಿ ಕೆಲಸ ಮಾಡಿದವರಿಗೆ ಯಾವಾಗ ಗೇಟ್ ಪಾಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದರು. ರಾಮಸ್ವಾಮಿ ಹಾಗೂ ಸತೀಶ್ ಕಾಂಗ್ರೆಸ್ ಜೊತೆ ಕೈ ಸೇರಿಸಿ ಬಿಜೆಪಿ ಸೋಲಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ 2023ರಲ್ಲಿ ಬಿಜೆಪಿ ಪಕ್ಷದಿಂದ‌ ಚುನಾವಣಾ ಮತ ಎಣಿಕೆ ಕೇಂದ್ರದ ಏಜೆಂಟ್ ಆಗಿದ್ದ ರಾಮಸ್ವಾಮಿ ಶೆಟ್ಟಿಗದ್ದೆ ಹಾಗೂ ಸತೀಶ್‌ ಅದ್ದಡ ಕೊಪ್ಪ ತಾಲೂಕಿನ ವೀರಭದ್ರಸ್ವಾಮಿ ಹಾಗೂ ಗಬ್ಬಾನೆ ಬೂತರಾಯನ ದೇಗುಲದಲ್ಲಿ ಪ್ರಮಾಣ ಮಾಡಿದ್ದು 2023ರ ಮತ ಎಣಿಕೆ ಸರಳ ಹಾಗೂ ಪಾರದರ್ಶಕವಾಗಿ ನಡೆದಿದೆ ಎಂದು ನಮಗೆ ಅನ್ನಿಸಿದೆ ಎಂದು ದೇವರ ಮುಂದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ನೋಡಿ: ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

ಅಂದು ರಾಮಸ್ವಾಮಿ ಶೆಟ್ಟಿಗದ್ದೆ ಇವಿಎಂ ಕೌಂಟ್ ನೋಡಿಕೊಳ್ಳುತ್ತಿದ್ದರೆ, ಸತೀಶ್ ಅದ್ದಡ ಅಂಚೆ ಮತಗಳ ಎಣಿಕೆ ನೋಡಿಕೊಳ್ಳುತ್ತಿದ್ದರು. ಇಂದು ಇಬ್ಬರು ದೇವಸ್ಥಾನದಲ್ಲಿ ಮತ ಎಣಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮತ ಎಣಿಕೆ ಪಾರದರ್ಶಕವಾಗಿತ್ತು. ನಮ್ಮ ವಿರುದ್ಧ ಅಪಪ್ರಚಾರ ಮಾಡುವವರಿಗೆ ದೇವರೇ ನೋಡಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಏನಂತ ಆಣೆ ಪ್ರಮಾಣ?

ಬಹಳ ಸರಳ ಹಾಗೂ ಪಾರದರ್ಶಕ ವಾಗಿ ನಡೆದಿದೆ ಅನ್ನಿಸಿತು.ಘಟನೆಗಳ ನಂತರ ಮೇ 2ರಂದು ಮತ್ತೆ ಕೌಟಿಂಗ್ ನಡೆಯಿತು. ಆಗ ಶಾಸಕ ಸ್ಥಾನ ಬದಲಾಯಿತು.ಒಂದಷ್ಟು ಜನ ಸೇರಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಬಳಿ ಹಣ ತೆಗೆದುಕೊಂಡು ಅಲ್ಲಿ ಲ್ಯಾಪ್ಸ್ ಅಗಿದ್ದ ಓಟ್ ಗಳನ್ನ ಕಾಂಗ್ರೆಸ್ ಅಭ್ಯರ್ಥಿ ಗೆ ಹಾಕಲು ನಾನು ಸಹ ಭಾಗಿದಾರ ಅನ್ನೋ ರೀತಿ ಎಲ್ಲ ಮಾತನಾಡುತ್ತಿದ್ದಾರೆ. ಅದ್ರೆ ನನಗೆ ವಿಶ್ವಾಸ ಇದೆ ನಂಬಿಕೆ ನಾನು ಪಕ್ಷದಲ್ಲಿ 1993ರಿಂದ ಕೆಲಸ ಮಾಡಿಕೊಂಡು ಬಂದೋನು. ಇದುವರೆಗೆ ಪಕ್ಷ ದ್ರೋಹ, ವಿಶ್ಚಾಸ ದ್ರೋಹ, ಹಣಕ್ಕಾಗಿ ಕೆಲ್ಸ ಎಲ್ಲಿಯೂ ಮಾಡಿಲ್ಲ. ಅವತ್ತು ಸಹ ಸರಿಯಾಗಿಯೇ ಮಾಡಿದ್ದೀನಿ. ಯಾವುದೇ ಮೋಸನೂ ಮಾಡಿಲ್ಲ. ನಡೆದಂತಹ ಕೌಟಿಂಗ್ ಸಹ ಎಲ್ಲವೂ ಸರಿಯಾಗಿತ್ತು.ನನಗೆ ಹೆದರಿಕೆ ಇಲ್ಲ. ನಾನು ಎಲ್ಲಿಯೂ ತಪ್ಪಲಿ ಭಾಗಿಯಾಗಿಲ್ಲ. ಎನೂ ಹೇಳಿದ್ದಾರೆ ಅದನ್ನ ಭೂತರಾಯ ಸ್ವಾಮಿ ಮುಂದೆ ಹೇಳುತ್ತಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ.ನಾನು ಏನಾದರೂ ತಪ್ಪು ಮಾಡಿದ್ರೆ ನಾನು ನಾಶ ಅಗಿ ಹೊಗಬೇಕು. ಸುಖಾಸುಮ್ಮನೆ ನನ್ನ ಚಾರಿತ್ರ್ಯವದೆ ಮಾಡುತ್ತಿರುವವರು ನಾಶ ಅಗಲಿ ಎಂದು ಕೇಳಿಕೊಳ್ಳಲ್ಲ ಭೂತರಾಯ ನೀನು ನೋಡ್ಕ ಅಂತಾ ಕೇಳಿಕೊಳ್ತೇನೆ ಎಂದು ಪ್ರಮಾಣ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:52 pm, Fri, 8 May 26

Source link

IPL 2026: ಟಾಪ್ 2 ಸ್ಥಾನಕ್ಕಾಗಿ 6 ತಂಡಗಳ ನಡುವೆ ಪೈಪೋಟಿ; ಯಾವ ತಂಡಕ್ಕೆ ಎಷ್ಟು ಗೆಲುವು ಬೇಕು? – Kannada News | IPL 2026 Top 2 Race: Six Teams Vying for Playoff Advantage and Final Path

ಐಪಿಎಲ್ 2026 (IPL 2026) ರ ಲೀಗ್ ಹಂತವು ಇನ್ನೇನು ಮುಗಿಯುವುದಕ್ಕೆ ಬಂತು. ಈಗಾಗಲೇ ಎಲ್ಲಾ ತಂಡಗಳು ತಲಾ 10 ಪಂದ್ಯಗಳನ್ನಾಡಿದ್ದು, ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಕ್ಕೇ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ಜೊತೆಗೆ, ಟಾಪ್-2 ಸ್ಥಾನಕ್ಕಾಗಿನ ಹೋರಾಟವು ಕೂಡ ಇನ್ನಷ್ಟು ಕುತೂಹಲಕಾರಿಯಾಗಿದೆ. ಟಾಪ್-2 ರಲ್ಲಿ ಸ್ಥಾನ ಪಡೆಯುವ ತಂಡಗಳಿಗೆ ಫೈನಲ್ ತಲುಪಲು ಎರಡು ಅವಕಾಶಗಳು ಸಿಗಲಿವೆ. ಅದಕ್ಕಾಗಿಯೇ ಪ್ರತಿ ತಂಡವು ಟಾಪ್ 2ರಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿವೆ. ಪ್ರಸ್ತುತ, ಆರು ತಂಡಗಳು ಟಾಪ್-2 ಸ್ಥಾನಕ್ಕಾಗಿ ಸ್ಪರ್ಧಿಗಳಾಗಿವೆ. ಆದರೆ ಈ ತಂಡಗಳ ನಡುವಿನ ಪ್ರತಿಯೊಂದು ಪಂದ್ಯವು ನಿರ್ಣಾಯಕವಾಗಿರುತ್ತದೆ.

6 ತಂಡಗಳ ನಡುವೆ ಪೈಪೋಟಿ

ಪ್ರಸ್ತುತ, ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಟಾಪ್-2 ಸ್ಥಾನಕ್ಕಾಗಿ ಪೈಪೋಟಿಯಲ್ಲಿವೆ. ಟಾಪ್-2 ತಲುಪಲು ತಂಡಗಳಿಗೆ ಕನಿಷ್ಠ 18 ಅಂಕಗಳು ಬೇಕಾಗುತ್ತವೆ. ಈ ತಂಡಗಳಲ್ಲಿ ಸನ್‌ರೈಸರ್ಸ್ ಟಾಪ್ 2 ರಲ್ಲಿ ಸ್ಥಾ ಪಡೆಯುವ ಸನಿಹದಲ್ಲಿದೆ. ಹಾಗೆಯೇ ಪಂಜಾಬ್ ಮತ್ತು ಆರ್​​ಸಿಬಿ ಕೂಡ ಈ ಸ್ಥಾನಕ್ಕಾಗಿ ಪ್ರಮುಖ ಸ್ಪರ್ಧಿಗಳಾಗಿವೆ. ಏತನ್ಮಧ್ಯೆ, ಗುಜರಾತ್ ಮತ್ತು ರಾಜಸ್ಥಾನ್ ಕೂಡ ಟಾಪ್-2 ರಲ್ಲಿ ಸ್ಥಾನ ಪಡೆಯುವ ಅವಕಾಶವನ್ನು ಹೊಂದಿವೆ. ಈ ಐದು ತಂಡಗಳಿಗೆ ಹೋಲಿಸಿದರೆ ಟಾಪ್ 2 ರಲ್ಲಿ ಸ್ಥಾನ ಪಡೆಯಲು ಸಿಎಸ್​ಕೆಗೆ ಕೊಂಚ ಕಠಿಣವಾದರೂ ಅವಕಾಶವಂತೂ ಇದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡವು ಪ್ರಸ್ತುತ 11 ಪಂದ್ಯಗಳಿಂದ 7 ಗೆಲುವುಗಳೊಂದಿಗೆ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್ ತಂಡವು ಉಳಿದ ಮೂರು ಪಂದ್ಯಗಳಲ್ಲಿ ಎರಡನ್ನು ಗೆಲ್ಲುವ ಮೂಲಕ 18 ಅಂಕಗಳನ್ನು ತಲುಪಬಹುದು. ಏತನ್ಮಧ್ಯೆ, ಪಂಜಾಬ್ ಕಿಂಗ್ಸ್ 10 ಪಂದ್ಯಗಳಿಂದ 13 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಉಳಿದ ನಾಲ್ಕು ಪಂದ್ಯಗಳಿಂದ ಮೂರು ಪಂದ್ಯಗಳನ್ನು ಗೆದ್ದರೆ ಅದರ ಅಂಕ 19 ಆಗುತ್ತದೆ. ಇದು ಮೊದಲ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯಲು ಸಾಕು. ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 18 ಅಂಕಗಳನ್ನು ತಲುಪಲು ಉಳಿದ ನಾಲ್ಕು ಪಂದ್ಯಗಳಿಂದ ತಲಾ ಮೂರು ಪಂದ್ಯಗಳನ್ನು ಗೆಲ್ಲುವುದು ಅಗತ್ಯವಾಗಿದೆ.

ಸಿಎಸ್​ಕೆಗೆ ದೊಡ್ಡ ಸವಾಲು

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಗ್ರ ಎರಡು ಸ್ಥಾನಗಳ ರೇಸ್‌ನಲ್ಲಿ ಉಳಿದಿದ್ದರೂ, ಅಲ್ಲಿಗೆ ತಲುಪುವುದು ಕಷ್ಟಕರವಾದ ಕೆಲಸ. ಪ್ರಸ್ತುತ, ಆಡಿರುವ 10 ಪಂದ್ಯಗಳಿಂದ ಐದು ಗೆಲುವುಗಳೊಂದಿಗೆ 10 ಅಂಕಗಳನ್ನು ಹೊಂದಿದೆ. ಆದ್ದರಿಂದ, ಸಿಎಸ್​ಕೆ ತಂಡ 18 ಅಂಕಗಳನ್ನು ತಲುಪಲು ಉಳಿದಿರುವ ನಾಲ್ಕು ಪಂದ್ಯಗಳನ್ನು ಗೆಲ್ಲಬೇಕಾಗುತ್ತದೆ. ಅದೃಷ್ಟವಶಾತ್, ಸಿಎಸ್​ಕೆ ತಮ್ಮ ಕೊನೆಯ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಸಿಎಸ್​ಕೆ ತನ್ನ ಉತ್ತಮ ಫಾರ್ಮ್ ಅನ್ನು ಹೀಗೆಯೇ ಮುಂದುವರಿಸಿದರೆ, ಅದು ಕೂಡ ಅಗ್ರ ಎರಡು ಸ್ಥಾನಗಳನ್ನು ತಲುಪಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:38 pm, Fri, 8 May 26

Source link

ಬೈನಾನ್ಸ್‌ನಿಂದ ಹೊಸ ‘ವಿತ್‌ಡ್ರಾ ಪ್ರೊಟೆಕ್ಷನ್’: ಬಳಕೆದಾರರ ಕ್ರಿಪ್ಟೋ ಆಸ್ತಿಗಳಿಗೆ ಈಗ ಹೆಚ್ಚುವರಿ ಭದ್ರತೆ – Kannada News | Secure Your Crypto: Binance Rolls Out New Withdrawal Protection Feature

ನವದೆಹಲಿ, ಮೇ 8: ಕ್ರಿಪ್ಟೋಕರೆನ್ಸಿ ಎಕ್ಸ್ಚೇಂಜ್ ಸಂಸ್ಥೆಯಾದ ಬೈನಾನ್ಸ್ (Binance) ತನ್ನ ಬಳಕೆದಾರರ ಸುರಕ್ಷತೆಗಾಗಿ ‘ವಿತ್‌ಡ್ರಾ ಪ್ರೊಟೆಕ್ಷನ್’ (Withdraw Protection) ಎಂಬ ಹೊಸ ಸೆಕ್ಯೂರಿಟಿ ಫೀಚರ್ ಅನ್ನು ಪರಿಚಯಿಸಿದೆ. ಬೈನಾನ್ಸ್ ಬಳಕೆದಾರರು ತಮ್ಮ ಖಾತೆಯಿಂದ ಹಣ ಅಥವಾ ಕ್ರಿಪ್ಟೋವನ್ನು ಬೇರೆಡೆಗೆ ವರ್ಗಾಯಿಸದಂತೆ (Withdrawal) ತಾವೇ ಸ್ವತಃ ತಾತ್ಕಾಲಿಕವಾಗಿ ಲಾಕ್ ಮಾಡಿಕೊಳ್ಳುವ ಸೌಲಭ್ಯ ಇದಾಗಿದೆ. ಬಳಕೆದಾರರು 1 ರಿಂದ 7 ದಿನಗಳವರೆಗೆ ಈ ಲಾಕ್ ಅವಧಿಯನ್ನು ನಿಗದಿಪಡಿಸಬಹುದು.

ವಿತ್​ಡ್ರಾ ಪ್ರೊಟೆಕ್ಷನ್ ಫೀಚರ್​ನ ಪ್ರಮುಖ ಉದ್ದೇಶಗಳೇನು?

  • ಬಲವಂತದ ವರ್ಗಾವಣೆ ತಡೆ: ಇತ್ತೀಚಿನ ದಿನಗಳಲ್ಲಿ ಕ್ರಿಪ್ಟೋ ಬಳಕೆದಾರರನ್ನು ಬೆದರಿಸಿ ಅಥವಾ ಒತ್ತಾಯಪೂರ್ವಕವಾಗಿ ಆಸ್ತಿ ವರ್ಗಾಯಿಸಿಕೊಳ್ಳುವ ಘಟನೆಗಳು (Wrench Attacks) ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ ಈ ವೈಶಿಷ್ಟ್ಯವು ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ.
  • ಖಾತೆಯ ಸುರಕ್ಷತೆ: ಒಂದು ವೇಳೆ ನಿಮ್ಮ ಖಾತೆಗೆ ಬೇರೆಯವರು ಲಾಗ್-ಇನ್ ಆದರೂ ಸಹ, ನೀವು ಲಾಕ್ ಮಾಡಿದ್ದರೆ ಅವರು ತಕ್ಷಣವೇ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ.
  • ಸಮಯದ ಅವಕಾಶ: ಹಣ ಹಿಂಪಡೆಯುವಿಕೆಗೆ ವಿಳಂಬ ಇರುವುದರಿಂದ, ತುರ್ತು ಸಂದರ್ಭಗಳಲ್ಲಿ ಬಳಕೆದಾರರಿಗೆ ಪ್ರತಿಕ್ರಿಯಿಸಲು ಮತ್ತು ಅಧಿಕಾರಿಗಳ ಸಹಾಯ ಪಡೆಯಲು ಸಮಯ ಸಿಗುತ್ತದೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್; ಬೆಂಗಳೂರಿನಲ್ಲಿ ಎಐ ಹ್ಯಾಕಥಾನ್ ಶೋಕೇಸ್

ಈ ಫೀಚರ್ ಹೇಗೆ ಕೆಲಸ ಮಾಡುತ್ತದೆ?

ಬಳಕೆದಾರರು ತಮ್ಮ ಖಾತೆಯ ಸೆಟ್ಟಿಂಗ್ಸ್‌ನಲ್ಲಿ ಇದನ್ನು ಆಕ್ಟಿವೇಟ್ ಮಾಡಬಹುದು. ಒಮ್ಮೆ ಆಕ್ಟಿವೇಟ್ ಮಾಡಿದರೆ, ನಿಗದಿತ ಅವಧಿಯವರೆಗೆ ಹಣ ಹಿಂಪಡೆಯಲು ಸಾಧ್ಯವಿಲ್ಲ.

ಬಳಕೆದಾರರು ಬಯಸಿದರೆ ಅವಧಿಗೂ ಮುನ್ನ ಅನ್-ಲಾಕ್ ಮಾಡುವ ಆಯ್ಕೆಯನ್ನು ಇಟ್ಟುಕೊಳ್ಳಬಹುದು. ಆದರೆ ಇದಕ್ಕೆ ‘ಸೆಕ್ಯೂರಿಟಿ ಕೀ’ ಮತ್ತು ‘ಅಥೆಂಟಿಕೇಟರ್ ಆಪ್’ ನಂತಹ ಕಟ್ಟುನಿಟ್ಟಿನ ದೃಢೀಕರಣಗಳು ಬೇಕಾಗುತ್ತವೆ.

ಬಳಕೆದಾರರು ಇನ್ನೂ ಹೆಚ್ಚಿನ ಭದ್ರತೆ ಬಯಸಿದರೆ ‘ಸ್ಟ್ರಿಕ್ಟ್ ಲಾಕ್‌ಡೌನ್’ ಆಯ್ಕೆ ಮಾಡಬಹುದು. ಇದರಲ್ಲಿ ಅವಧಿಗೂ ಮುನ್ನ ಅನ್-ಲಾಕ್ ಮಾಡಲು ಬಳಕೆದಾರನಿಗೂ ಅಥವಾ ಬೈನಾನ್ಸ್ ಸಂಸ್ಥೆಗೂ ಸಾಧ್ಯವಿರುವುದಿಲ್ಲ.

ಇದನ್ನೂ ಓದಿ: ಗೂಗಲ್​ಗೆ ಆರಂಭದಲ್ಲೇ ಫಂಡಿಂಗ್ ನೀಡಿದ್ದ ರಾಮ್ ಶ್ರೀರಾಮ್; ಭಾರತದ ಈ ಕಂಪನಿಯತ್ತ ಈಗ ಅವರ ಚಿತ್ತ

ಗಮನಿಸಬೇಕಾದ ಅಂಶ ಎಂದರೆ ಈ ವೈಶಿಷ್ಟ್ಯವು ಕೇವಲ ಹಣ ಹಿಂಪಡೆಯುವಿಕೆಯನ್ನು (Withdrawal) ಮಾತ್ರ ನಿರ್ಬಂಧಿಸುತ್ತದೆ. ಲಾಕ್ ಅವಧಿಯಲ್ಲಿಯೂ ಬಳಕೆದಾರರು ಟ್ರೇಡಿಂಗ್ ಮಾಡುವುದು, ಕಾಯಿನ್ ಖರೀದಿಸುವುದು ಅಥವಾ ತಮ್ಮ ಪೋರ್ಟ್‌ಫೋಲಿಯೋ ನೋಡುವುದನ್ನು ಮುಂದುವರಿಸಬಹುದು.

ಕ್ರಿಪ್ಟೋ ಲೋಕದಲ್ಲಿ ಹೆಚ್ಚುತ್ತಿರುವ ಸೈಬರ್ ದಾಳಿ ಮತ್ತು ಭೌತಿಕ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಬೈನಾನ್ಸ್ ಈ ಮಹತ್ವದ ಕ್ರಮ ಕೈಗೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ – Kannada News | Karnataka weather alert moderate rain likely in 10 districts tomorrow

ಬೆಂಗಳೂರು, ಮೇ 08: ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರದ ನಡುವೆಯೂ ಕರಾವಳಿ ಸೇರಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಮೇ 11ರ ವರೆಗೂ ಕೆಲವೆಡೆ ಗುಡುಗು ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಅದಾಗಿಯೂ ಕರಾವಳಿ ಸೇರಿ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬರಲಿದೆ ಎನ್ನಲಾಗಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಹಾಗೆಯೇ ಉತ್ತರ ಒಳನಾಡು ಭಾಗದ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿಯೂ ವರುಣ ಆರ್ಭಟಿಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿಯೂ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.

ಇದನ್ನೂ ಓದಿ:  ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!; ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು

ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್​​, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದ್ಯಾ?

ರಾಜಧಾನಿ ಬೆಂಗಳೂರಲ್ಲಿ ನಾಳೆ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್​​ ಇರಲಿದೆ. ಗಾಳಿಯ ವೇಗ ಗಂಟೆಗೆ 10-16 ಕಿಲೋ ಮೀಟರ್​​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ: ಏನಿದು ಕುಂದಗೋಳ ಮಠದ ವಿವಾದ? – Kannada News | Kundgol Panchagrah Hiremath Property Dispute Resolved: Swamiji Agrees Not to Sell Land

ಹುಬ್ಬಳ್ಳಿ, ಮೇ 08: ಧಾರವಾಡ (dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಪಂಚಗ್ರಹ ಹಿರೇಮಠ (Panchagrah Hiremath) ಐತಿಹಾಸಿಕ ಹಿನ್ನೆಲೆಯುಳ್ಳ ದೊಡ್ಡ ಮಠ. ಆದರೆ ಇದೇ ಮಠದ ಆಸ್ತಿ ವಿಚಾರ ಸ್ವಾಮೀಜಿ ಮತ್ತು ಭಕ್ತರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಮಠದ ಆಸ್ತಿಯನ್ನು ಸೈಟ್ ಮಾಡಿ ಮಾರಾಟ ಮಾಡಲು ಮುಂದಾದ ಸ್ವಾಮೀಜಿ ನಡೆಗೆ ಭಕ್ತರು ಅಸಮಾಧಾನ ಹೊರಹಾಕಿದ್ದರು. ಕಳೆದ ಒಂದು ತಿಂಗಳಿಂದ ನಡೆದಿದ್ದ ಮುಸುಕಿನ ಗುದ್ದಾಟಕ್ಕೆ ಇಂದು ಪಂಚಪೀಠದ ಸ್ವಾಮೀಜಿಗಳು ಭಕ್ತರ ಸಭೆ ನಡೆಸಿ ಸಮಸ್ಯೆಗೆ ತೆರೆ ಎಳೆಯುವ ಕೆಲಸ ಮಾಡಿದರು.

  • ಮಠದ ಆಸ್ತಿ ಮಾರಾಟಕ್ಕೆ ಯತ್ನಿಸಿದ ಸ್ವಾಮೀಜಿ: ಭಕ್ತರು ಆಕ್ಷೇಪ
  • ಪಂಚಪೀಠದ ಜಗದ್ಗುರುಗಳ ಮಧ್ಯಸ್ಥಿಕೆ: ವಿವಾದ ಇತ್ಯರ್ಥ
  • ಆಸ್ತಿ ಮಾರಾಟ ಮಾಡದಿರಲು ಸ್ವಾಮೀಜಿ ಒಪ್ಪಿಗೆ: ಭಕ್ತರಿಗೆ ಲಿಖಿತ ಭರವಸೆ

ಏನಿದು ವಿವಾದ?

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಪಂಚಗ್ರಹ ಹಿರೇಮಠ, ಈ ಭಾಗದ ಸುಪ್ರಸಿದ್ಧ ಮಠ. ಮಠಕ್ಕೆ ಕುಂದಗೋಳ ಸೇರಿದಂತೆ ಜಿಲ್ಲೆಯಲ್ಲಿ ಸಾವಿರಾರು ಭಕ್ತರಿದ್ದಾರೆ. ಮಠ ಕೂಡ ಈ ಹಿಂದಿನಿಂದ ಸಾಮಾಜಿಕ, ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಮಠಕ್ಕೆ ಬಂದ ಎಲ್ಲಾ ಪೀಠಾಧಿಪತಿಗಳು ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು. ಆದರೆ ಇದೇ ಮಠದ ಆಸ್ತಿ ವಿಚಾರ ಮಠದ ಪೀಠಾಧಿಪತಿ ಶಿಥಿಕಂಠೇಶ್ವರ ಸ್ವಾಮೀಜಿ ಮತ್ತು ಭಕ್ತರ ನಡುವಿನ ಗುದ್ದಾಟಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್

ಕುಂದಗೋಳ ಪಟ್ಟಣದ ಹೊರವಲಯದಲ್ಲಿರುವ ಮಠದ 53 ಎಕರೆ ಆಸ್ತಿಯನ್ನು ಮಠದ ಸ್ವಾಮೀಜಿ ಎನ್​​ಎ ಮಾಡಿಸಿ, ಸೈಟ್ ಮಾಡಿ ಮಾರಾಟ ಮಾಡಲು ಮುಂದಾಗಿದ್ದರು. ಈ ವಿಚಾರ ಮಠದ ಕೆಲ ಭಕ್ತರಿಗೆ ಗೊತ್ತಾಗುತ್ತಿದ್ದಂತೆ, ಸ್ವಾಮೀಜಿ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮಠದ ಆಸ್ತಿ ಕೇವಲ ಸ್ವಾಮೀಜಿಗಳಿಗೆ ಸೇರಿದ್ದಲ್ಲ. ಅದು ಮಠಕ್ಕೆ ಭಕ್ತರು ನೀಡಿದ ಆಸ್ತಿ. ಈ ಆಸ್ತಿಯನ್ನು ಸ್ವಾಮೀಜಿಯವರು ಸೈಟ್ ಮಾಡಿ ಮಾರಾಟ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸ್ವತಃ ಧಾರವಾಡ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಈ ಬಗ್ಗೆ ಮನವಿ ಕೂಡ ನೀಡಿದ್ದಾರೆ.

ಕೆಲ ಭಕ್ತರ ಆಕ್ಷೇಪಕ್ಕೆ ಸ್ವಾಮೀಜಿ ತಿರುಗೇಟು ನೀಡಿದ್ದರು. ತಮ್ಮ ಮಠ ವಂಶಪಾರಂಪರೆ ಹೊಂದಿರುವ ಮಠ. ಮಠದ ಆಸ್ತಿ ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದರ ಮೇಲೆ ಭಕ್ತರಿಗೆ ಯಾವುದೇ ಅಧಿಕಾರವಿಲ್ಲ. ಇನ್ನು ಮಠದ ಅಭಿವೃದ್ದಿಗಾಗಿ ಹಣದ ಅವಶ್ಯಕತೆ ಇರುವುದರಿಂದ ಸೈಟ್ ಮಾಡಿ ಕೆಲ ಜಾಗವನ್ನು ಮಾರಾಟ ಮಾಡಲಾಗುತ್ತಿದೆ ಅಂತ ಹೇಳಿದ್ದರು. ಹೀಗಾಗಿ ಕೆಲ ಭಕ್ತರು ಕಾಶಿ ಜಗದ್ಗುರುಗಳ ಗಮನಕ್ಕೆ ತಂದಿದ್ದರು. ಪಂಚಗ್ರಹ ಹಿರೇಮಠ, ಕಾಶಿ ಜಗದ್ಗುರುಗಳ ಖಾಸಾ ಮಠವಾಗಿದ್ದರಿಂದ ಕಾಶಿ ಜಗದ್ಗುರುಗಳಿಗೆ ಪಂಚಗ್ರಹ ಹಿರೇಮಠದ ಸ್ವಾಮೀಜಿ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕುಂದಗೋಳ ಪಟ್ಟಣದ ಪಂಚಗ್ರಹ ಹಿರೇಮಠದಲ್ಲಿ ಕಾಶಿ ಜಗದ್ಗುರುಗಳು, ರಂಬಾಪುರಿ ಪೀಠದ ಜಗದ್ಗುರುಗಳು ಭಕ್ತರು ಹಾಗೂ ಸ್ವಾಮೀಜಿ ಜೊತೆಗೆ ಸಭೆ ಮಾಡಿದರು.

ಮಠದ ಆಸ್ತಿ ಮಾರಾಟ ಮಾಡಲು ಅಲ್ಲ ಪೀಠಾಧಿಪತಿ ಮಾಡಿಲ್ಲ:  ಕಾಶಿ ಜಗದ್ಗುರುಗಳು

ಇಂದು ನಡೆದ ಸಭೆಯಲ್ಲಿ ಕುಂದಗೋಳ ತಾಲೂಕಿನ ಜನಪ್ರತಿನಿಧಿಗಳು, ಅನೇಕ ಮುಖಂಡರು ಹಾಗೂ ಶಿಥಿಕಂಠೇಶ್ವರ ಸ್ವಾಮೀಜಿ ಹಾಗೂ ಭಕ್ತರು ಭಾಗಿಯಾಗಿದ್ದರು. ಈ ಸಮಯದಲ್ಲಿ ಕಾಶಿ ಜಗದ್ಗುರುಗಳು, ಮಠಕ್ಕೆ ತಮ್ಮನ್ನು ಪೀಠಾಧಿಪತಿ ಮಾಡಿದ್ದು, ಮಠದ ಆಸ್ತಿ ಮಾರಾಟ ಮಾಡಲು ಅಲ್ಲ. ಮಠದ ಆಸ್ತಿ ಕಾಶಿ ಪೀಠಕ್ಕೆ ಸೇರಿದ್ದು, ಅದನ್ನು ನೋಡಿಕೊಂಡು ಹೋಗಲು ತಮ್ಮನ್ನು ಮಾತ್ರ ನಿಯೋಜನೆ ಮಾಡಿದೆ ಎಂದರು.

ಆಸ್ತಿ ಮಾರಾಟ ಮಾಡಲ್ಲವೆಂದ ಪಂಚಗ್ರಹ ಹಿರೇಮಠದ ಸ್ವಾಮೀಜಿ

ಇನ್ನು ಅನೇಕ ಮುಖಂಡರು, ಪಂಚಪೀಠದ ಜಗದ್ದುರುಗಳು ಕೈಗೊಳ್ಳುವ ನಿರ್ಣಯಕ್ಕೆ ಬದ್ಧ ಅಂತ ಹೇಳಿದರು. ಇದೇ ಸಮಯದಲ್ಲಿ ಮಾತನಾಡಿದ ಪಂಚಗ್ರಹ ಹಿರೇಮಠದ ಸ್ವಾಮೀಜಿ, ಇನ್ನು ಮುಂದೆ ಆಸ್ತಿ ಮಾರಾಟ ಮಾಡುವುದಿಲ್ಲ. ಪಂಚಪೀಠದ ಜಗದ್ಗುರುಗಳು ಹೇಳಿದಂತೆ ಕೇಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಪೀಠದ ‘ಲೆಕ್ಕಾ’ಚಾರ: 18 ವರ್ಷದ ಲೆಕ್ಕ ಕೊಟ್ಟ ಟ್ರಸ್ಟ್‌; ಕಳ್ಳಲೆಕ್ಕ ಎಂದ ಸ್ವಾಮೀಜಿ ಟೀಂ

ಕಳೆದ ಒಂದು ತಿಂಗಳಿಂದ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿ ವಿಚಾರಕ್ಕೆ ಇಂದು ಪಂಚಪೀಠದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೆರೆ ಎಳೆಯಲಾಗಿದೆ. ಸದ್ಯ ಪಂಚಗ್ರಹ ಹಿರೇಮಠದ ಸ್ವಾಮೀಜಿ ಇನ್ನು ಮುಂದೆ ಯಾವುದೇ ಆಸ್ತಿ ಮಾರಾಟ ಮಾಡುವುದಿಲ್ಲ ಎಂದು ಲಿಖಿತವಾಗಿ ಭಕ್ತರಿಗೆ ಬರೆದುಕೊಟ್ಟಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಈ ಮಾತು ಎಷ್ಟರಮಟ್ಟಿಗೆ ಪಾಲನೆಯಾಗುತ್ತದೆ ಅನ್ನೋದಕ್ಕೆ ಕಾಲವೇ ಉತ್ತರಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್​​ ಕೈ ಹಿಡಿದ ಪಕ್ಷಗಳಾವುವು? – Kannada News | TVK Crossed Magic number For Government Formation In Tamil Nadu, here Is Which party support To Vijay

ಚೆನ್ನೈ, (ಮೇ 08): ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್‌ ನಂಬರ್‌ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು…ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್‌ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್‌ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ವಿಜಯ್ ಸರ್ಕಾರ ರಚನೆಗೆ ಕೊನೆ ಕ್ಷಣದಲ್ಲಿ ಬೆಂಬಲ ಘೋಷಿಸಿದ ಪಕ್ಷಗಳಾವುವು ಎನ್ನುವುದನ್ನು ನೋಡುವುದಾದರೆ, ಕಾಂಗ್ರೆಸ್ 5, ವಿಸಿಕೆ 2, ಸಿಪಿಐ 2, ಸಿಪಿಐಎಂ 2 ಮುಸ್ಲಿಂ ಲೀಗ್​​​ನ ಇಬ್ಬರು ಶಾಸಕರು ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಟಿವಿಕೆಯ 107 ಶಾಸಕರ ಜೊತೆಗೆ ಎಡಪಕ್ಷಗಳ ಬೆಂಬಲದೊದಿಗೆ ವಿಜಯ್ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚು ಅಂದರೆ 121 ಶಾಸಕರ ಬೆಂಬಲ ಸಿಕ್ಕಿದ್ದು, ಈ ಬೆಂಬಲ ಪತ್ರದೊಂದಿಗೆ ವಿಜಯ್ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ಇದರೊಂದಿಗೆ ಕಳೆದ ಮೂರು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ.

ಇದನ್ನೂ ನೋಡಿ: ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

 

Source link

ಕಾಂಗ್ರೆಸ್ ಜೊತೆ ಕೂರುವುದಿಲ್ಲ, ಬೇರೆ ಆಸನ ನೀಡಿ; ಲೋಕಸಭಾ ಸ್ಪೀಕರ್​ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ – Kannada News | DMK MP Kanimozhi seeks separate seating in Lok Sabha after party officially ends alliance with Congress

ನವದೆಹಲಿ, ಮೇ 8: ತಮಿಳುನಾಡಿನಲ್ಲಿ 55 ವರ್ಷಗಳಿಂದ ಡಿಎಂಕೆ ಜೊತೆ ಮೈತ್ರಿಯಲ್ಲಿದ್ದ ಕಾಂಗ್ರೆಸ್ ಈ ಬಾರಿ ವಿಜಯ್ ಅವರ ಟಿವಿಕೆಗೆ (TVK) ಬೆಂಬಲ ಘೋಷಿಸಲು ತಮ್ಮ ದಶಕಗಳ ಮೈತ್ರಿಯನ್ನು ಮುರಿದುಕೊಂಡಿದೆ. ಇದು ಎರಡೂ ಪಕ್ಷಗಳ ನಾಯಕರ ಮೇಲೆ ಪರಿಣಾಮ ಬೀರಿದೆ. ಡಿಎಂಕೆ ಸಂಸದೆ ಕನಿಮೋಳಿ ಅವರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ನಮ್ಮ ಮೈತ್ರಿ ಮುರಿದುಬಿದ್ದಿರುವುದರಿಂದ ನಾವು (ಡಿಎಂಕೆ ಸಂಸದರು) ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಜೊತೆ ಕುಳಿತುಕೊಳ್ಳುವುದಿಲ್ಲ. ನಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಎಂದು ಕೋರಿದ್ದಾರೆ. ಈ ಪತ್ರವು ಕಾಂಗ್ರೆಸ್ ಜೊತೆಗಿನ ಡಿಎಂಕೆ (DMK) ಮೈತ್ರಿ ಅಂತ್ಯಗೊಂಡಿರುವುದನ್ನು ಮತ್ತು ಇಂಡಿಯ ಮೈತ್ರಿಕೂಟದಿಂದ ಡಿಎಂಕೆ ಹಿಂದೆ ಸರಿದಿರುವುದನ್ನು ಸೂಚಿಸುತ್ತದೆ.

ತಮಿಳುನಾಡಿನಾದ್ಯಂತ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದಕ್ಕೆ ಮೇ 4ರಂದು ಮತ ಎಣಿಕೆ ನಡೆದಿದ್ದು, ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) 108 ಸ್ಥಾನಗಳನ್ನು, ಡಿಎಂಕೆ 59 ಸ್ಥಾನಗಳನ್ನು, ಎಐಎಡಿಎಂಕೆ 47 ಸ್ಥಾನಗಳನ್ನು, ಕಾಂಗ್ರೆಸ್ 5 ಸ್ಥಾನಗಳನ್ನು, ಪಿಎಂಕೆ 4 ಸ್ಥಾನಗಳನ್ನು, ಐಯುಎಂಎಲ್ 2 ಸ್ಥಾನಗಳನ್ನು, ಸಿಪಿಐ 2 ಸ್ಥಾನಗಳನ್ನು, ಸಿಪಿಐ (ಎಂ) 2 ಸ್ಥಾನಗಳನ್ನು ಮತ್ತು ವಿಸಿಕೆ 2 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನವನ್ನು ಗೆದ್ದಿವೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಸ್ಥಾನಗಳು ಅಗತ್ಯವಿರುವುದರಿಂದ, ಟಿವಿಕೆ ಇತರೆ ಪಕ್ಷಗಳ ಬೆಂಬಲ ಕೋರಿತ್ತು. ಆಗ ಡಿಎಂಕೆ ಮೈತ್ರಿಕೂಟದಲ್ಲಿದ್ದ ಕಾಂಗ್ರೆಸ್ ತನ್ನ ಮೈತ್ರಿಯನ್ನು ಮುರಿದುಕೊಂಡು ಟಿವಿಕೆಗೆ 5 ಶಾಸಕರ ಬೆಂಬಲ ನೀಡಿತು. ಹೀಗಾಗಿ, ಡಿಎಂಕೆ ಸಂಸದೆ ಕನಿಮೋಳಿ ಕಾಂಗ್ರೆಸ್ ಸಂಸದರ ಜೊತೆ ಸಂಸತ್​​ನಲ್ಲಿ ಕುಳಿತುಕೊಳ್ಳುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಲೋಕಸಭೆಯಲ್ಲಿ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಕೋರಿ ಡಿಎಂಕೆ ಸಂಸದೆ ಕನಿಮೋಳಿ ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. “ಲೋಕಸಭೆಯಲ್ಲಿ ಡಿಎಂಕೆ ಸಂಸದರಿಗೆ ಆಸನ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವಂತೆ ಗೌರವಯುತವಾಗಿ ವಿನಂತಿಸಲು ನಾನು ಈ ಪತ್ರ ಬರೆಯುತ್ತಿದ್ದೇನೆ. ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗಿನ ನಮ್ಮ ಮೈತ್ರಿಯ ಅಂತ್ಯವನ್ನು ಪರಿಗಣಿಸಿ, ನಮ್ಮ ಸಂಸದರು ಅವರ ಹತ್ತಿರದಲ್ಲಿ ನೀಡಲಾಗಿರುವ ಆಸನದಲ್ಲಿ ಕುಳಿತುಕೊಳ್ಳುವುದು ಸೂಕ್ತವಲ್ಲ. ಹೀಗಾಗಿ, ಬೇರೆ ಆಸನದ ವ್ಯವಸ್ಥೆ ಮಾಡಿ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈಗ ಎಲ್ಲರ ಕಣ್ಣುಗಳು ಲೋಕಸಭಾ ಸ್ಪೀಕರ್ ಅವರ ನಿರ್ಧಾರದ ಮೇಲೆ ನೆಟ್ಟಿವೆ. ಅವರು ಈ ವಿನಂತಿಯನ್ನು ಅಂಗೀಕರಿಸಿದರೆ, ಸದನದ ಆಸನ ಪಟ್ಟಿಯಲ್ಲಿ ಬದಲಾವಣೆಯಾಗಲಿದೆ ಮತ್ತು ಡಿಎಂಕೆ ವಿರೋಧ ಪಕ್ಷದ ಪಾಳಯದಲ್ಲಿ ಸ್ವತಂತ್ರ ಬಣವಾಗಿ ಕಾಣಿಸಿಕೊಳ್ಳುತ್ತದೆ. ಈ ಬೆಳವಣಿಗೆಯು ವಿರೋಧ ಪಕ್ಷದ ಒಗ್ಗಟ್ಟಿನ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಡಿಎಂಕೆ ಲೋಕಸಭೆಯಲ್ಲಿ 22 ಮತ್ತು ರಾಜ್ಯಸಭೆಯಲ್ಲಿ 8 ಸಂಸದರನ್ನು ಹೊಂದಿದೆ. ಇಂಡಿಯ ಮೈತ್ರಿಕೂಟವನ್ನು ತೊರೆಯುವ ಡಿಎಂಕೆ ನಿರ್ಧಾರವು ಈ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ನೀಡಲಿದೆ. ಇದು ಹಲವಾರು ಪ್ರಮುಖ ಮಸೂದೆಗಳ ಮೇಲಿನ ಮತದಾನದ ಮೇಲೂ ಪರಿಣಾಮ ಬೀರಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version