Lunar Eclipse 2026: ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Effects on Capricorn by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣದ ಕುರಿತು ಮಕರ ರಾಶಿಯವರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಉತ್ತರಾಷಾಢ, ಶ್ರವಣ, ಧನಿಷ್ಠ ನಕ್ಷತ್ರದವರು ಈ ರಾಶಿಗೆ ಸೇರುತ್ತಾರೆ. ಮಕರ ರಾಶಿಯವರಿಗೆ ಈ ಗ್ರಹಣವು ಎಂಟನೇ ಮನೆಯಲ್ಲಿ (ಅಷ್ಟಮ ಸ್ಥಾನ) ಸಂಭವಿಸುತ್ತಿರುವುದರಿಂದ ಕೆಲವು ಜಾಗ್ರತೆಗಳನ್ನು ವಹಿಸುವುದು ಅನಿವಾರ್ಯ. ವಾಹನ ಚಾಲನೆ, ಸಂಭಾಷಣೆ ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರದಿಂದಿರಬೇಕು. ಆತುರದ ನಿರ್ಧಾರಗಳಿಂದ ತೊಂದರೆಗಳು ಎದುರಾಗಬಹುದು. ಗ್ರಹಣದ ಹಿಂದಿನ ದಿನ, ಗ್ರಹಣದ ದಿನ ಮತ್ತು ಮರುದಿನ ದೈವಾರಾಧನೆ ಮಾಡುವುದು ಶುಭಕರ.

ಈ ಅವಧಿಯಲ್ಲಿ ಅನಗತ್ಯ ಅಪವಾದಗಳು, ಉದ್ಯೋಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳು, ಆಪ್ತರಿಂದಲೇ ವಿರೋಧ ಮತ್ತು ಕಾರ್ಯಗಳಲ್ಲಿ ವಿಳಂಬದಂತಹ ಸನ್ನಿವೇಶಗಳು ಎದುರಾಗಬಹುದು. ರೈತಾಪಿ ವರ್ಗದವರಿಗೆ ಅಷ್ಟು ಲಾಭವಿಲ್ಲದೆ ಇರಬಹುದು. ಮಕ್ಕಳ ಮದುವೆ, ಭೂಮಿ ಮತ್ತು ವಿದೇಶಿ ವ್ಯವಹಾರಗಳಲ್ಲಿ ತೊಂದರೆಗಳು ಉಂಟಾಗಬಹುದು. ಇಷ್ಟೆಲ್ಲಾ ಸವಾಲುಗಳ ನಡುವೆಯೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಹನುಮಾನ್ ಚಾಲೀಸಾ ಪಠಣ, ಓಂ ಹಂ ಹನುಮತೇ ನಮಃ ಮಂತ್ರ ಜಪ, ಹನುಮಂತನಿಗೆ ಅಭಿಷೇಕ ಮತ್ತು ಪೂಜೆ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ಗ್ರಹಣಾನಂತರ ಪಂಚೆ, ಟವಲ್, ಉದ್ದಿನಬೇಳೆ ಮತ್ತು ಅಕ್ಕಿ ದಾನ ಮಾಡುವುದು ಉತ್ತಮ. ಆಹಾರದ ವಿಚಾರದಲ್ಲಿ ಜಾಗ್ರತೆ ವಹಿಸುವುದು ಆರೋಗ್ಯಕ್ಕೆ ಹಿತಕರ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ – Kannada News | A big Protest to Take Place against fake document created against Darshan

ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದಾರೆ. ಅವರು ನೀಡಿದ ವಿವರಣೆ ಮೇಲಿನ ವಿಡಿಯೋದಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇರಾನ್ ರಾಜಧಾನಿ ಟೆಹರಾನ್​ ಮೇಲೆ ಇಸ್ರೇಲ್​​ನಿಂದ ಕ್ಷಿಪ್ಪಣಿ ದಾಳಿ: – Kannada News | ​Israel Strikes Tehran: Missile Attacks Escalate Iran Israel Conflict

ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ದಾಳಿImage Credit source: Google

ಟೆಹರಾನ್​, ಫೆಬ್ರವರಿ 28: ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧದ ಕಾರ್ಮೋಡ ಹೆಚ್ಚಿದ್ದು, ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ಅಟ್ಯಾಕ್​​ ನಡೆದಿದ್ದು, ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿದ್ದಾರೆ. ಇರಾನ್​ ಸೇನೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.

ಪೂರ್ವಯೋಜಿತ ದಾಳಿ

2025ರ ಜೂನ್‌ನಲ್ಲಿ 12 ದಿನಗಳ ಕಾಲ ನಡೆದ ಇರಾನ್–ಇಸ್ರೇಲ್ ವಾಯುಯುದ್ಧದ ಬಳಿಕ ಈ ದಾಳಿ ನಡೆದಿದೆ. ಇರಾನ್ ತನ್ನ ಅಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಮುಂದುವರಿಸಿದರೆ ಮತ್ತೆ ದಾಳಿ ನಡೆಸುವುದಾಗಿ ಅಮೆರಿಕಾ ಮತ್ತು ಇಸ್ರೇಲ್ ಮುಂಚೆಯೇ ಎಚ್ಚರಿಸಿದ್ದವು. ಇಂದು (ಶನಿವಾರ) ನಡೆದ ಇಸ್ರೇಲ್ ಕಾರ್ಯಾಚರಣೆ ಅಮೆರಿಕದ ಜೊತೆ ಸಂಯೋಜಿತವಾಗಿತ್ತು ಎಂದು ಇಸ್ರೇಲಿ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಾರ್ಯಾಚರಣೆ ತಿಂಗಳುಗಳ ಕಾಲ ಯೋಜಿತವಾಗಿದ್ದು, ದಾಳಿ ದಿನಾಂಕವನ್ನು ವಾರಗಳ ಹಿಂದೆ ನಿಗದಿಪಡಿಸಲಾಗಿತ್ತು ಎಂದು ಹೇಳಲಾಗಿದೆ. ಈ ತಿಂಗಳಷ್ಟೇ ಅಮೆರಿಕಾ ಮತ್ತು ಇರಾನ್ ಹಲವು ವರ್ಷಗಳ ವಿವಾದವನ್ನು ರಾಜತಾಂತ್ರಿಕವಾಗಿ ಪರಿಹರಿಸಲು ಮಾತುಕತೆ ಪುನರಾರಂಭಿಸಿತ್ತು. ಆದರೆ ಈ ದಾಳಿಯ ಹಿನ್ನೆಲೆ ಮಾತುಕತೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ಸರ್ಕಾರದಿಂದ ಹೊಸ ಸಲಹೆ

ಇಸ್ರೇಲ್​​ ಪ್ರಕಟಣೆ

ಇರಾನ್​​ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್​​ ದೇಶಾದ್ಯಂತ ತುರ್ತು ಪರಿಸ್ಥಿತಿ ​​​​ಘೋಷಣೆ ಮಾಡಲಾಗಿದ್ದು, ತುರ್ತುಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟವನ್ನೂ ಇಸ್ರೇಲ್​​ ನಿರ್ಬಂಧಿಸಿದೆ. ಇನ್ನು ಇಸ್ರೇಲ್​​ ನಡೆಸಿದ ದಾಳಿ ವೇಳೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ತೇಹ್ರಾನ್‌ನಲ್ಲಿ ಇಲ್ಲ ಎಂದು ವರದಿಯಾಗಿದೆ. ಅಮೆರಿಕಾ ಅಧಿಕಾರಿಗಳು ನ್ಯೂಯಾರ್ಕ್​​ ಟೈಮ್ಸ್​​ ಮತ್ತು ರಾಯಟರ್ಸ್​ಗೆ ನೀಡಿರುವ ಮಾಹಿತಿಯ ಪ್ರಕಾರ, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:01 pm, Sat, 28 February 26

Source link

ಅಭಿಮಾನಿಯಾಗಿ ಬಂದು ಸಂಗೀತಾ, ವಿಜಯ್​​ನ ಮದುವೆ ಆಗಿದ್ದು ಹೇಗೆ? ಯಾವ ಸಿನಿಮಾಗೂ ಕಡಿಮೆ ಇಲ್ಲ – Kannada News | Thalapathy Vijay Divorce: A Cute love story Of Sangeetha and Thalapathy Vijay

ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಅವರ ವೈಯಕ್ತಿಕ ಜೀವನವು ಪ್ರಸ್ತುತ ಸುದ್ದಿಯಲ್ಲಿದೆ. ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ವರದಿಗಳ ಪ್ರಕಾರ, ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ತಮಿಳುನಾಡಿನ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 26 ವರ್ಷಗಳ ನಂತರ, ವಿಜಯ್ ಅವರ ಸಂಸಾರ ಕೊನೆ ಆಗುತ್ತಿದೆ. ಇವರ ಲವ್​​ಸ್ಟೋರಿ ವಿಚಿತ್ರವಾಗಿ ಆರಂಭ ಆಯಿತು. ಆ ಬಗ್ಗೆ ಇಲ್ಲಿದೆ ವಿವರ.

ವಿಜಯ್ ಮತ್ತು ಸಂಗೀತಾ ಆಗಸ್ಟ್ 25, 1999 ರಂದು ವಿವಾಹವಾದರು ಮತ್ತು ಅವರಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ತಮ್ಮ ವೈಯಕ್ತಿಕ ಮತ್ತು ವೈವಾಹಿಕ ಜೀವನವನ್ನು ಯಾವಾಗಲೂ ಬೆಳಕಿಗೆ ತರದಂತೆ ನೋಡಿಕೊಳ್ಳುತ್ತಿದ್ದ ಈ ದಂಪತಿಗಳು ಇದ್ದಕ್ಕಿದ್ದಂತೆ ಸುದ್ದಿಗೆ ಬಂದಿದ್ದಾರೆ. ಈ ಸುದ್ದಿ ವಿಜಯ್ ಅವರ ಅಭಿಮಾನಿಗಳಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಒಟ್ಟಿಗೆ ಇರುವ ಈ ಇಬ್ಬರ ಸಂಬಂಧದಲ್ಲಿ ಇಷ್ಟೊಂದು ಬಿರುಕು ಉಂಟಾಗಲು ಕಾರಣವೇನು ಎಂಬುದು ಅನೇಕ ಮನಸ್ಸಿನಲ್ಲಿರುವ ಪ್ರಶ್ನೆಯಾಗಿದೆ.

ವಿಜಯ್ ಅವರ ಪತ್ನಿ ಸಂಗೀತಾ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಜನಿಸಿದರು. ಅವರು ಅಲ್ಲಿ ಬೆಳೆದರು. ಆದಾಗ್ಯೂ, ಅವರ ಕುಟುಂಬದ ಬೇರುಗಳು ಶ್ರೀಲಂಕಾದ ತಮಿಳು ಸಮುದಾಯದೊಂದಿಗೆ ಸಂಬಂಧ ಹೊಂದಿವೆ. ಅವರ ತಂದೆ ಪ್ರಸಿದ್ಧ ತಮಿಳು ಉದ್ಯಮಿಯಾಗಿದ್ದು, ನಂತರ ಅವರು ಯುಕೆಯಲ್ಲಿ ನೆಲೆಸಿದರು. ವಿಜಯ್ ಅವರನ್ನು ಮದುವೆಯಾದ ನಂತರವೂ, ಸಂಗೀತಾ ಎಂದಿಗೂ ಸ್ಟಾರ್ ಪತ್ನಿ ಆಗಿ ಮಿಂಚಲು ಪ್ರಯತ್ನಿಸಲಿಲ್ಲ. ಅವರು ಯಾವಾಗಲೂ ಮಾಧ್ಯಮ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿದ್ದರು.

ನಟ ವಿಜಯ್ ಮತ್ತು ಸಂಗೀತಾ ಅವರ ಪ್ರೇಮಕಥೆ ಯಾವ ಸಿನಿಮಾ ಕಥೆಗೂ ಕಡಿಮೆ ಏನಿಲ್ಲ. ವಿಜಯ್ ಅವರ ‘ಪೂವೆ ಉನಕ್ಕಗ’ ಚಿತ್ರ ಸೂಪರ್‌ಹಿಟ್ ಆದಾಗ, ಲಂಡನ್‌ನಲ್ಲಿ ವಾಸಿಸುವ ಸಂಗೀತಾ ಅವರನ್ನು ಅಭಿನಂದಿಸಲು ಚೆನ್ನೈಗೆ ಹೋದರು. ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಸಮಯದಲ್ಲಿ ಇಬ್ಬರೂ ಭೇಟಿಯಾದರು ಎಂದು ಹೇಳಲಾಗುತ್ತದೆ. ವಿಜಯ್ ಅವರ ಸರಳತೆ ಮತ್ತು ಒಳ್ಳೆಯ ಹೃದಯದಿಂದ ಪ್ರಭಾವಿತರಾಗಿ, ಅವರನ್ನು ತಮ್ಮ ಮನೆಗೆ ಆಹ್ವಾನಿಸಿ ಅವರ ಕುಟುಂಬಕ್ಕೆ ಪರಿಚಯಿಸಿದರು.

ಕ್ರಮೇಣ, ಎರಡೂ ಕುಟುಂಬಗಳು ಹತ್ತಿರವಾದವು ಮತ್ತು ಸಂಬಂಧದ ಬಗ್ಗೆ ಮಾತುಕತೆ ನಡೆಯಿತು. ವಿಜಯ್ ಅವರ ಪೋಷಕರು ಸಹ ಸಂಗೀತಾ ಅವರ ಕುಟುಂಬವನ್ನು ಭೇಟಿ ಮಾಡಲು ಲಂಡನ್‌ಗೆ ಹೋದರು. ಅವರು ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವಾದರು. ವಿಜಯ್ ಕ್ರಿಶ್ಚಿಯನ್ ಮತ್ತು ಸಂಗೀತಾ ಹಿಂದೂ . ಆದರೆ ಅವರ ಧರ್ಮಗಳು ಬೇರೆ ಬೇರೆಯಾಗಿದ್ದರೂ, ಇಬ್ಬರೂ ಹಿಂದೂ ಶೈಲಿಯಲ್ಲಿ ವಿವಾಹವಾದರು.

ಮದುವೆಯ ನಂತರ, ಸಂಗೀತಾ ಯಾವಾಗಲೂ ಜನರಿಂದ ದೂರವಿದ್ದರು. ಚಲನಚಿತ್ರ ಕಾರ್ಯಕ್ರಮಗಳಲ್ಲಿಯೂ ಸಹ ಅವರು ವಿರಳವಾಗಿ ಕಾಣಿಸಿಕೊಳ್ಳುತ್ತಿದ್ದರು. ‘ವಾರಿಸು’ ಚಿತ್ರದ ಟ್ರೇಲರ್ ಬಿಡುಗಡೆಯಂತಹ ದೊಡ್ಡ ಕಾರ್ಯಕ್ರಮಗಳಲ್ಲಿ ಅವರ ಅನುಪಸ್ಥಿತಿಯು ವಿಚ್ಛೇದನ ವದಂತಿಗಳನ್ನು ಹುಟ್ಟುಹಾಕಿತ್ತು. ಆದರೆ ನಂತರ ಇದನ್ನು ಅವರು ಅಲ್ಲಗಳೆದರು.

ಇದನ್ನೂ ಓದಿ: ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು

ಪ್ರಸ್ತುತ, ನಟ ವಿಜಯ್ ತಮ್ಮ ‘ಜನ ನಾಯಗನ್’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ, ಇದು ಅವರ ವೃತ್ತಿಜೀವನದ ಕೊನೆಯ ಚಿತ್ರ ಎಂದು ಅವರು ಹೇಳಿದ್ದಾರೆ. ಇದರ ನಂತರ, ಅವರು ನಟನೆಯನ್ನು ತೊರೆದು, ರಾಜಕೀಯಕ್ಕೆ ಪ್ರವೇಶಿಸಿ, ತಮಿಳಗ ವೆಟ್ರಿ ಕಳಗಂ ಪಕ್ಷದ ಮೂಲಕ ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

13 ಓವರ್​ಗಳ ಲೆಕ್ಕಾಚಾರ ಪಾಕ್ ಪಾಲಿಗೆ ಕಷ್ಟಸಾಧ್ಯ! – Kannada News | Pakistan cannot chase a big score within 13 overs

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದೆ. ಲಂಕಾದ ಪಲ್ಲೆಕೆಲೆಯಲ್ಲಿ ನಡೆಯಲಿರುವ ಈ ಪಂದ್ಯವು ಪಾಕಿಸ್ತಾನ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಅಮೋಘ ಗೆಲುವು ದಾಖಲಿಸಿದರೆ ಮಾತ್ರ ಪಾಕ್ ತಂಡ ಸೆಮಿಫೈನಲ್​ಗೇರಲಿದೆ.

ಇಲ್ಲಿ ಅಮೋಘ ಗೆಲುವಂದರೆ ಶ್ರೀಲಂಕಾ ವಿರುದ್ಧ ಕನಿಷ್ಠ 64 ರನ್​ಗಳ ಜಯ ಸಾಧಿಸಲೇಬೇಕು. ಒಂದು ವೇಳೆ ಚೇಸಿಂಗ್ ಮಾಡಿದರೆ ಕನಿಷ್ಠ 40 ಎಸೆತಗಳು ಬಾಕಿಯಿರುವಂತೆ ಪಂದ್ಯ ಮುಗಿಸಬೇಕು. ಅಂದರೆ 13 ಓವರ್​ಗಳಲ್ಲಿ ಚೇಸ್ ಮಾಡುವುದು ಪಾಕಿಸ್ತಾನ್ ಪಾಲಿಗೆ ಅನಿವಾರ್ಯ.

ಒಂದು ವೇಳೆ ಶ್ರೀಲಂಕಾ ತಂಡವು 201 ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ತಂಡವು ಈ ಗುರಿಯನ್ನು ಕೇವಲ 13.5 ಓವರ್​ಗಳಲ್ಲಿ ಚೇಸ್ ಮಾಡಬೇಕಾಗುತ್ತದೆ. ಇನ್ನು 151 ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ತಂಡವು ಕೇವಲ 12.4 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು.

ಆದರೆ ಇಂತಹದೊಂದು ಚೇಸಿಂಗ್ ಪಾಕಿಸ್ತಾನ್ ತಂಡಕ್ಕೆ ಕಷ್ಟಸಾಧ್ಯ ಎಂದೇ ಹೇಳಬಹುದು. ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ 5 ಪಂದ್ಯಗಳನ್ನಾಡಿರುವ ಪಾಕ್ ತಂಡವು ಒಮ್ಮೆಯೂ 10ರ ಸರಾಸರಿಯಲ್ಲಿ ರನ್​ ಗಳಿಸಿಲ್ಲ ಎಂಬುದು ಉಲ್ಲೇಖಾರ್ಹ.

  • ನೆದರ್​ಲೆಂಡ್ಸ್​ ನೀಡಿದ 147 ರನ್​ಗಳ ಗುರಿಯನ್ನು ಪಾಕಿಸ್ತಾನ್ ತಂಡ ಬೆನ್ನತ್ತಿರುವುದು 19.3 ಓವರ್​ಗಳಲ್ಲಿ. ಅಂದರೆ ಪ್ರತಿ ಓವರ್​ಗೆ 7.5 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದರು.
  • ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 190 ರನ್​ಗಳು. ಅಂದರೆ ಪ್ರತಿ ಓವರ್​ಗೆ 9.5 ರ ಸರಾಸರಿಯಲ್ಲಿ ರನ್​ ಗಳಿಸಿದ್ದರು.
  • ಭಾರತದ ವಿರುದ್ಧದ ಪಂದ್ಯದಲ್ಲಿ 18 ಓವರ್​ಗಳಲ್ಲಿ ಕೇವಲ 114 ರನ್​ಗಳಿಸಿ ಆಲೌಟ್ ಆಗಿದ್ದರು. ಅಂದರೆ ಟೀಮ್ ಇಂಡಿಯಾ ವಿರುದ್ಧ ಪ್ರತಿ ಓವರ್​ಗೆ ಕೇವಲ 6.3 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದರು.
  • ನಮೀಬಿಯ ವಿರುದ್ಧದ ಪಂದ್ಯದಲ್ಲಿ 20 ಓವರ್​ಗಳಲ್ಲಿ ಗಳಿಸಿದ್ದು 199 ರನ್​ಗಳು. ಅಂದರೆ ಪ್ರತಿ ಓವರ್​ಗೆ 9.95 ರ ಸರಾಸರಿಯಲ್ಲಿ ರನ್​ಗಳಿಸಿದ್ದರು.
  • ಇಂಗ್ಲೆಂಡ್ ವಿರುದ್ಧ 20 ಓವರ್​ಗಳಲ್ಲಿ ಕಲೆಹಾಕಿದ್ದು 164 ರನ್​ಗಳು ಮಾತ್ರ. ಅಂದರೆ ಪ್ರತಿ ಓವರ್​ಗೆ 8.2 ಸರಾಸರಿಯಲ್ಲಿ ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಅಂದರೆ ಕಳೆದ ಐದು ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡವು 10ರ ಸರಾಸರಿಯಲ್ಲಿ ರನ್ ಗಳಿಸಿಯೇ ಇಲ್ಲ. ಹೀಗಾಗಿಯೇ ಒಮ್ಮೆಯೂ 200 ರನ್​ಗಳ ಗಡಿದಾಟಲು ಸಾಧ್ಯವಾಗಿಲ್ಲ.

ಇದೀಗ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ತಂಡ 200 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 13.5 ಓವರ್​ಗಳಲ್ಲಿ ಚೇಸ್ ಮಾಡಬೇಕಾಗುತ್ತದೆ. ಅಂದರೆ ಪ್ರತಿ ಓವರ್​​ಗೆ 14 ರ ಸರಾಸರಿಯಲ್ಲಿ ರನ್​ಗಳಿಸಲೇಬೇಕು.

ಒಂದು ವೇಳೆ ಶ್ರೀಲಂಕಾ 181 ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ಪ್ರತಿ ಓವರ್​ಗೆ 13.50 ಸರಾಸರಿಯಲ್ಲಿ ರನ್​ಗಳಿಸಿ 13.4 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕಾಗುತ್ತದೆ.

ಶ್ರೀಲಂಕಾ ತಂಡವು 150 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 12.4 ಓವರ್​ಗಳಲ್ಲಿ 151 ರನ್​ಗಳಿಸಲೇಬೇಕು. ಅಂದರೆ ಪ್ರತಿ ಓವರ್​ಗಳಲ್ಲಿ 12 ರ ಸರಾಸರಿಯಲ್ಲಿ ರನ್​ ಕಲೆಹಾಕಲೇಬೇಕು.

ಆದರೆ ನೆದರ್​ಲೆಂಡ್ಸ್, ಯುಎಸ್​ಎ, ನಮೀಬಿಯ ವಿರುದ್ಧದವೇ ಪಾಕಿಸ್ತಾನ್ ತಂಡಕ್ಕೆ ಪ್ರತಿ ಓವರ್​ಗೆ 10ರ ಸರಾಸರಿಯಲ್ಲಿ ರನ್​ಗಳಿಸಲು ಸಾಧ್ಯವಾಗಿಲ್ಲ. ಹೀಗಾಗಿಯೇ ಶ್ರೀಲಂಕಾ ವಿರುದ್ಧ ಕಠಿಣ ಗುರಿಯನ್ನು 13 ಓವರ್​ಗಳಲ್ಲಿ ಬೆನ್ನತ್ತುವುದು ಪಾಕ್ ಪಾಲಿಗೆ ಕಷ್ಟಸಾಧ್ಯ ಎನ್ನಲಾಗುತ್ತಿದೆ.

ಇದಾಗ್ಯೂ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕ್ ಬ್ಯಾಟರ್​ಗಳು ಅಬ್ಬರಿಸಿದರೆ ಮಾತ್ರ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿ ಸೆಮಿಫೈನಲ್​ಗೇರಬಹುದು.

ಇದನ್ನೂ ಓದಿ: ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ… ಆಟಗಾರರ ನಡುವೆ ಮಾತಿನ ಚಕಮಕಿ

ಸೂಪರ್-8 ಗ್ರೂಪ್ 2 ಅಂಕಪಟ್ಟಿ:

  • ಇಂಗ್ಲೆಂಡ್: 6 ಅಂಕಗಳು (ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ).
  • ನ್ಯೂಝಿಲೆಂಡ್: 3 ಅಂಕಗಳು (ನೆಟ್ ರನ್ ರೇಟ್ +1.390).
  • ಪಾಕಿಸ್ತಾನ್: 1 ಅಂಕಗಳು (ನೆಟ್ ರನ್ ರೇಟ್ -0.461).
  • ಶ್ರೀಲಂಕಾ: 0 ಅಂಕ (ಟೂರ್ನಿಯಿಂದ ಹೊರಬಿದ್ದಿದೆ).

Source link

ಫೈನಾನ್ಸ್ ಕಿರುಕುಳಕ್ಕೆ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ! – Kannada News | Belagavi Shocker: Equitas Finance Seizes Home, Family with Infant Forced to Street

ಫೈನಾನ್ಸ್ ಕಿರುಕುಳಕ್ಕೆ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!

ಬೆಳಗಾವಿ, ಫೆಬ್ರವರಿ 28: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ (Finance Company) ಕಿರುಕುಳದಿಂದ ಒಂದು ಕುಟುಂಬ ಬೀದಿಗೆ ಬಿದ್ದ ಘಟನೆ ನಡೆದಿದೆ. ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿಯಿಂದ ಮನೆ ಸೀಜ್ ಮಾಡಲಾಗಿದ್ದು, ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದಾರೆ.

ತಂದೆಯ ಚಿಕಿತ್ಸೆಗಾಗಿ ಸಾಲ

ಹನುಮಂತ ಪಾಟೀಲ್ ಎಂಬುವವರು ತಂದೆ ಶ್ರೀಕಾಂತ್ ಪಾಟೀಲ್ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನೆ ಅಡವಿಟ್ಟು ಸುಮಾರು 20 ಲಕ್ಷ ರೂ. ಸಾಲ ಪಡೆದಿದ್ದರು. ಕಳೆದ ವರ್ಷ ಶ್ರೀಕಾಂತ್ ನಿಧನರಾದ ಬಳಿಕ, ಆರೋಗ್ಯ ಸಮಸ್ಯೆಯಿಂದಾಗಿ ಹನುಮಂತ ಕಳೆದ ಏಳು ತಿಂಗಳಿಂದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಸುಮಾರು ಏಳು ಲಕ್ಷ ರೂ. ಬಾಕಿ ಇದ್ದ ಹಿನ್ನೆಲೆಯಲ್ಲಿ ಏಕಾಏಕಿ ಬಂದ ಪೈನಾನ್ಸ್ ಕಂಪನಿಯ ಸಿಬ್ಬಂದಿ ಮನೆ ಸೀಜ್ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಹೊಟ್ಟೆಗೆ ಹಿಟ್ಟಿಲ್ಲದೆ ರಾತ್ರಿ ಕಳೆದ ಹಸುಗೂಸು

ಹನುಮಂತ ದಂಪತಿಗೆ ಮೂರು ತಿಂಗಳ ಹಸುಕೂಸಿದ್ದು, ಬಾಣಂತಿ-ಮಗು ಸೇರಿ ಒಟ್ಟೂ ಐವರು ಕುಟುಂಬಸ್ಥರು ರಾತ್ರಿಯಿಡೀ ಬೀದಿಯಲ್ಲಿ ಕಾಲ ಕಳೆದಿದ್ದಾರೆ. ಮನೆಯಲ್ಲಿ ಇನ್ನೋರ್ವ 5 ತಿಂಗಳ ಬಾಣಂತಿ-ಕೂಸು ಇದ್ದು, ರಾತ್ರಿ ಊಟವಿಲ್ಲದೆ, ಚಳಿಯಿಂದ ಬಳಲಿದ ಕಾರಣ ಮಗುವಿಗೆ ಹುಷಾರು ತಪ್ಪಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹನುಮಂತ ಪಾಟೀಲರ ಪತ್ನಿ ಶ್ರೀದೇವಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ ಕುಡಿದ ನಶೆಯಲ್ಲಿ ವ್ಯಕ್ತಿ ಮೇಲೆ ಕಾರು ಹರಿಸಿ ಕೊಲೆ; ಪ್ರಭಾವಿ ಮುಖಂಡರ ಮಕ್ಕಳು ಅಂದರ್!

ಬಟ್ಟೆ, ಹಾಸಿಗೆ, ಪಾತ್ರೆ ಸೇರಿ ಮನೆಯೊಳಗಿನ ಯಾವ ವಸ್ತುವನ್ನೂ ತೆಗೆದುಕೊಳ್ಳಲು ಬಿಡದ ಸಿಬ್ಬಂದಿ, ಏಕಾಏಕಿ ಮನೆಗೆ ಬೀಗ ಹಾಕಿ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ಕೇವಲ ಹೆಂಗಸರು, ಮಕ್ಕಳು ಮಾತ್ರವಿದ್ದು, ಕೋರ್ಟ್​ ನೋಟಿಸ್ ತೋರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ನಾಲ್ಕು ವರ್ಷದಿಂದ ಕಂತು ತುಂಬುತ್ತಾ ಬಂದಿದ್ದೇನೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿದ್ದ ಕಾರಣ ಹಣ ತುಂಬಿರಲಿಲ್ಲ ಎಂದು ಹನುಮಂತ ಟಿವಿ9ಗೆ ತಿಳಿಸಿದ್ದಾರೆ. ಈ ಘಟನೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕುಟುಂಬಕ್ಕೆ ಕಾಲಾವಕಾಶ ನೀಡುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:18 pm, Sat, 28 February 26

Source link

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ – Kannada News | Karnataka: Boards, Corporations, Authorities Chairmen’s Tenure Extended by Govt Order

ಬೆಂಗಳೂರು, ಫೆಬ್ರವರಿ 28: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದ್ದು, ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಆದೇಶದಲ್ಲಿ ಏನಿದೆ?

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ. ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ ಕಾರ್ಯದರ್ಶಿ ಅಭಿಜಿನ್​​ ಬಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!

ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಅವಧಿಯನ್ನು ಮುಂದುವರೆಸಿ ಆದೇಶ ಹೊರಡಿಸುವಂತೆ ಕೋರಿ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಪತ್ರ ಬರೆದಿದ್ದರು. ವಿವಿಧ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಗಮ ಮಂಡಳಿಗಳಿಗೆ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವೆರೆಗೆ ನೇಮಕ ಮಾಡಲಾಗಿದ್ದು, ಫೆ.7ರ ಆದೇಶದ ಪಟ್ಟಿಯಲ್ಲಿರುವ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವೆರೆಗೆ ಅವರನ್ನು ವಿಸ್ತರಣೆ ಮಾಡಲಾಗಿದೆ. ಆದರೆ ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ ಅಧ್ಯಕ್ಷರುಗಳನ್ನು ಕೈಬಿಡಲಾಗಿದೆ. ಪ್ರಸ್ತುತ ಈ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲವಾದ್ದರಿಂದ ಮುಂದಿನ ಆದೇಶದವರೆಗೆ ಅಥವಾ ನೇಮಕ ಮಾಡುವವರೆಗೆ ಅವರನ್ನೇ ಮುಂದುವರಿಸವಂತೆ ಡಿಕೆಶಿ ಆಗ್ರಹಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ – Kannada News | Rashmika Vijay Deverakonda Wedding: Instagram Record Shattered, Fan Love Triumphs

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಒಂದು ವರ್ಗದ ಜನರು ರಶ್ಮಿಕಾನ ಟೀಕಿಸಲು ಆರಂಭಿಸಿದರು. ರಶ್ಮಿಕಾ ಅವರು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ರದ್ದು ಮಾಡಿಕೊಂಡಿದ್ದನ್ನು ನೆನಪಿಸಿಕೊಂಡು ತಕರಾರು ತೆಗೆದಿದ್ದರು. ದ್ವೇಷದ ಸಂದೇಶಗಳನ್ನು ಹಬ್ಬಿಸಿದ್ದರು. ಇದರ ಮಧ್ಯೆಯೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಇನ್​​ಸ್ಟಾಗ್ರಾಮ್ ಪೋಸ್ಟ್ ಹೊಸ ದಾಖಲೆಯನ್ನೇ ಬರೆದಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಉದಯಪುರದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜರ ಥೀಮ್​​​ನಲ್ಲಿ ಈ ಮದುವೆ ನಡೆದಿದೆ. ಈ ವಿವಾಹಕ್ಕೆ ಕೋಟ್ಯಂತರ ರೂಪಾಯಿಯನ್ನು ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸುರಿದಿದ್ದಾರೆ. ಇವರ ವಿವಾಹ ಫೋಟೋಗಳಿಗೆ ಅಭಿಮಾನಿಗಳು ಕಾದಿದ್ದರು. ವಿವಾಹವಾದ (ಫೆಬ್ರವರಿ 26) ದಿನವೇ ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಪ್ರತ್ಯೇಕವಾಗಿ ಫೋಟೋ ಪೋಸ್ಟ್ ಮಾಡಿದರು. ಈ ಫೋಟೋ ದಾಖಲೆ ಬರೆದಿದೆ. 24 ಗಂಟೆ ಅವಧಿಯಲ್ಲಿ ಈ ಫೋಟೋಗೆ 40.7 ಮಿಲಿಯನ್ ವೀವ್ಸ್ ಸಿಕ್ಕಿದೆ.

ವಿಜಯ್ ಅವರ ಪೋಸ್ಟ್​​ಗೆ 18.1 ಮಿಲಿಯನ್ ಹಾಗೂ ರಶ್ಮಿಕಾಗೆ 22.6 ಮಿಲಿಯನ್ಸ್ ಲೈಕ್ಸ್ ಸಿಕ್ಕಿದೆ. ಇವುಗಳನ್ನು ಸೇರಿಸಿದ್ರೆ 4 ಕೋಟಿ ಆಗುತ್ತದೆ. ಇದು ಈ ದಂಪತಿ ಮೇಲೆ ಅಭಿಮಾನಿಗಳಿಗೆ ಇರೋ ಪ್ರೀತಿಯನ್ನು ತೋರಿಸುತ್ತದೆ. ಒಂದು ವರ್ಗ ಹಬ್ಬಿಸುತ್ತಿರುವ ದ್ವೇಷದ ಮಧ್ಯೆಯೂ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಪ್ರೀತಿ ಸಿಕ್ಕಿದೆ.

ಈ ಮೊದಲು ವಿವಾಹ ಆದ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ದಂಪತಿಯ ಫೋಟೋ ಬರೋಬ್ಬರಿ 27 ಮಿಲಿಯನ್ ಲೈಕ್ಸ್ (24 ಗಂಟೆಯಲ್ಲಿ) ಪಡೆದಿತ್ತು. ಈಗ ಈ ದಾಖಲೆಯನ್ನು ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮುರಿದಿದ್ದಾರೆ.

ಇದನ್ನೂ ಓದಿ: ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ (14 ಮಿಲಿಯನ್), ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ (12.6 ಮಿಲಿಯನ್), ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ (7.8 ಮಿಲಿಯನ್) ಪಡೆದಿತ್ತು. ಈಗ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಈ ಎಲ್ಲಾ ದಾಖಲೆಯನ್ನು ಮುರಿದು ಹಾಕಿದ್ದಾರೆ. ಈ ಮೂಲಕ 24 ಗಂಟೆಯಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ಸೆಲೆಬ್ರಿಟಿ ಜೋಡಿ ಇವರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು – Kannada News | Bolivia Plane Tragedy: Hercules Carrying Currency Crashes, 15 Killed

ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ಹದಿನೈದಕ್ಕೂ ಹೆಚ್ಚು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಜೀವಗಳು ಬಲಿಯಾಗಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ವಿಮಾನ ಬೊಲಿವಿಯನ್ ವಾಯುಪಡೆಯ ಹರ್ಕ್ಯುಲಸ್ ವಿಮಾನವಾಗಿದ್ದು, ಅದು ಕೇಂದ್ರ ಬ್ಯಾಂಕಿನಿಂದ ಇತರ ನಗರಗಳಿಗೆ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಹೊಸ ನೋಟುಗಳನ್ನು ಹೊತ್ತೊಯ್ಯುತ್ತಿದ್ದ ಈ ವಿಮಾನವು ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ನೋಟುಗಳ ಕಂತೆಗಳು ಗಾಳಿಯಲ್ಲಿ ಹಾರಿ, ರಸ್ತೆಯಾದ್ಯಂತ ಹರಡಿಕೊಂಡಿದೆ.

ಮತ್ತಷ್ಟು ಓದಿ: ‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ

ಒಂದು ಕಡೆ ಸಾವು-ನೋವಿನ ಆರ್ಕ್ರಂದನ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ರಸ್ತೆಯಲ್ಲಿ ಬಿದ್ದಿದ್ದ ಹಣವನ್ನು ಆರಿಸಲು ಜನರು ಮುಗಿಬಿದ್ದಿರುವ ವಿಡಿಯೋ ಸೊಶೀಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಭೀಕರ ದುರಂತದಲ್ಲಿ ಅಪಘಾತದ ನಂತರ, ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ – Kannada News | Illegal Resorts and Homestays Seized and Demolished in Koppal

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version