Akasa Air: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ, ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಲಕ್ನೋ. ಮೇ 28: ಬೆಂಗಳೂರಿನಿಂದ ಭುವನೇಶ್ವರಕ್ಕೆ 194 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಆಕಾಶ ಏರ್(Akasa Air) ಸಂಸ್ಥೆಯ ವಿಮಾನ ಇಂಧನ ಕೊರತೆಯಿಂದಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡದೊಂದು ವಿಮಾನ ಅಪಘಾತ ತಪ್ಪಿದಂತಾಗಿದೆ.

ಘಟನೆಗೆ ಕಾರಣವೇನು?

ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರಕ್ಕೆ ತಲುಪಬೇಕಿತ್ತು. ಆದರೆ ಅಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದ ಕಾರಣ, ರಾತ್ರಿ 8.40 ರ ಸುಮಾರಿಗೆ ವಿಮಾನವನ್ನು ಲಕ್ನೋ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಈ ಮಾರ್ಗಮಧ್ಯೆ ವಿಮಾನದ ಇಂಧನ ಮಟ್ಟ ಅತ್ಯಂತ ವೇಗವಾಗಿ ಕಡಿಮೆಯಾಗುತ್ತಿರುವುದನ್ನು ಪೈಲಟ್ ಗಮನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಪೈಲಟ್ ತಕ್ಷಣವೇ ಪ್ಯಾನ್ ಪ್ಯಾನ್ (Pan-Pan) ತುರ್ತು ಕರೆ ನೀಡಿ, ವಾಯು ಸಂಚಾರ ನಿಯಂತ್ರಣ (ATC) ಸಂಸ್ಥೆಯಿಂದ ಆದ್ಯತೆಯ ಮೇರೆಗೆ ವಿಮಾನ ಇಳಿಸಲು ಅನುಮತಿ ಕೋರಿದರು.

ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತು ಪರಿಸ್ಥಿತಿ

ರಾತ್ರಿ 9.02 ಕ್ಕೆ ಪೈಲಟ್‌ನಿಂದ ಸಂದೇಶ ಸಿಗುತ್ತಿದ್ದಂತೆ ಎಚ್ಚೆತ್ತ ಲಕ್ನೋ ಎಟಿಸಿ, ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿತು. ರನ್‌ವೇಯನ್ನು ತಕ್ಷಣವೇ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಎಫ್ (CRPF) ಸಿಬ್ಬಂದಿ, ಅಗ್ನಿಶಾಮಕ ದಳದ ವಾಹನಗಳು, ವೈದ್ಯಕೀಯ ತಂಡ ಹಾಗೂ ಆಂಬ್ಯುಲೆನ್ಸ್‌ಗಳನ್ನು ರನ್‌ವೇ ಸುತ್ತಲೂ ಸನ್ನದ್ಧವಾಗಿ ನಿಲ್ಲಿಸಲಾಯಿತು.

ಮತ್ತಷ್ಟು ಓದಿ: ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಎಲ್ಲಾ ಆತಂಕಗಳ ಮಧ್ಯೆ, ಬೋಯಿಂಗ್ 737 ಮ್ಯಾಕ್ಸ್ ವಿಮಾನವು ರಾತ್ರಿ 9.21 ಕ್ಕೆ ರನ್‌ವೇ 09 ರಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ವಿಮಾನ ಇಳಿದ ತಕ್ಷಣ ಎಲ್ಲವೂ ಸಾಮಾನ್ಯವಾಗಿದೆ ಎಂದು ಪೈಲಟ್ ತಿಳಿಸಿದ ನಂತರ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು. ರಾತ್ರಿ 9.30 ರ ಸುಮಾರಿಗೆ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಯಿತು.

ಈ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ವಿಮಾನ ಇಳಿದ ಬಳಿಕ ಮೂವರು ಪ್ರಯಾಣಿಕರು ಲಕ್ನೋದಲ್ಲೇ ಇಳಿದುಕೊಂಡರು. ನಂತರ ವಿಮಾನಕ್ಕೆ ಮತ್ತೊಮ್ಮೆ ಇಂಧನ ತುಂಬಿಸಿ, ಭುವನೇಶ್ವರಕ್ಕೆ ಕಳುಹಿಸಿಕೊಡಲು ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Political Crisis Live: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಕೂಟ ಶುರು

28 May 2026 10:06 AM (IST)

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​

ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್​ಫಾಸ್ಟ್​ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ​ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್​ ಖರ್ಗೆ, ಎನ್​.ಎಸ್.ಬೋಸರಾಜು, ಡಾ.ಶರಣಪ್ರಕಾಶ್​ ಪಾಟೀಲ್​, ಎಸ್​.ಎಸ್.ಮಲ್ಲಿಕಾರ್ಜುನ್​, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್​.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, H​.K.ಪಾಟೀಲ್​, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್​ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.

28 May 2026 10:05 AM (IST)

ಡಿಕೆ ಶಿವಕುಮಾರ್ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತೆ

ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆಯಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಪೊಲೀಸ್ ಕಬಡ್ಡಿ ಟೀಮ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕೂಡಾ ನಿಯೋಜಿಸಲಾಗಿದೆ.

28 May 2026 10:05 AM (IST)

ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕವೂ ಮುಗಿದಿಲ್ಲ ಆಟ

ಯಾವುದೇ ರೀತಿಯ ದುಡುಕಿನ ಹೇಳಿಕೆ ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ. ಹೈಕಮಾಂಡ್ ನಾಯಕರು ನನ್ನ ಜೊತೆಗೆ ಏನೂ ಮಾತನಾಡಿಲ್ಲ, ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ವಿಷಯವೂ ಗೊತ್ತಿಲ್ಲ ಎಂದು ತಮ್ಮನ್ನು ಭೇಟಿಯಾದ ಸಚಿವರು, ಶಾಸಕರಿಗೆಲ್ಲ ಡಿಕೆಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Source link

ಜಪಾನ್​​ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ವಿದೇಶಿ ನಟನ ಮೆಚ್ಚುಗೆ

Source link

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ ಕಳೆದುಕೊಂಡು ವಂಚನೆಗೊಳಗಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮುಖ್ಯಾಂಶಗಳು

  • ಡೇಟಿಂಗ್ ಆ್ಯಪ್ ಸುಂದರಿ ನಂಬಿ ಬೆಂಗಳೂರು ಟೆಕ್ಕಿ ಕೋಟ್ಯಂತರ ಹಣ ಕಳೆದುಕೊಂಡಿದ್ದಾರೆ.
  • ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗಲಾಗಿದೆ.
  • ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ ರೂಪಾಯಿ ಪೀಕಿದ ವಂಚಕಿ.

ಮದುವೆಯ ಆಸೆ ತೋರಿಸಿ ನಂಬಿಕೆ ದ್ರೋಹ

ಬೆಂಗಳೂರಿನ ಸೌರವ್ ದುಬೆ ಎಂಬ ಟೆಕ್ಕಿಗೆ ಕಳೆದ ಫೆಬ್ರವರಿ 15ರಂದು ‘ಟಂಟನ್’ (Tantan) ಎಂಬ ಪ್ರಸಿದ್ಧ ಡೇಟಿಂಗ್ ಆ್ಯಪ್‌ನಲ್ಲಿ ರಿಯಾ ಅಗರ್ವಾಲ್ ಎಂಬ ಯುವತಿಯ ಪರಿಚಯವಾಗಿತ್ತು. ಆರಂಭದಲ್ಲಿ ಚಾಟಿಂಗ್ ಮೂಲಕ ಶುರುವಾದ ಇವರ ಪರಿಚಯ, ದಿನಕಳೆದಂತೆ ಆತ್ಮೀಯ ಸ್ನೇಹಕ್ಕೆ ತಿರುಗಿತ್ತು. ನಂತರ ಯುವತಿಯೇ ಸೌರವ್ ಮೊಬೈಲ್ ನಂಬರ್ ಪಡೆದುಕೊಂಡು ನಿರಂತರವಾಗಿ ಆಡಿಯೋ ಮತ್ತು ವಿಡಿಯೋ ಕಾಲ್ ಮಾಡುವ ಮೂಲಕ ಅವರ ಸಂಪೂರ್ಣ ವಿಶ್ವಾಸವನ್ನು ಗಳಿಸಿದ್ದಳು. ಅಷ್ಟೇ ಅಲ್ಲದೆ, ತಾನು ಸೌರವ್‌ನನ್ನು ಮದುವೆಯಾಗುವುದಾಗಿ ನಂಬಿಸಿದ್ದಳು.

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ

ಸೌರವ್ ತನ್ನನ್ನು ಸಂಪೂರ್ಣವಾಗಿ ನಂಬಿದ್ದಾನೆ ಎಂದು ಖಚಿತಪಡಿಸಿಕೊಂಡ ರಿಯಾ, ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಕಡಿಮೆ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಲಾಭ ಗಳಿಸಬಹುದು ಎಂಬ ಆಮಿಷ ಒಡ್ಡಿದ್ದಾಳೆ. ಮದುವೆಯಾಗಲಿರುವ ಯುವತಿಯ ಮಾತನ್ನು ನಿಜವೆಂದು ನಂಬಿದ ಟೆಕ್ಕಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಬರೊಬ್ಬರಿ 1.66 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದ್ದಾರೆ.

ಮೊಬೈಲ್ ಸ್ವಿಚ್ ಆಫ್!

ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿದ ನಂತರ ಸೌರವ್‌ಗೆ ವಾಪಸ್ ಸಿಕ್ಕಿದ್ದು ಕೇವಲ 4,250 ರೂಪಾಯಿ ಮಾತ್ರ. ಇದರಿಂದ ಅನುಮಾನಗೊಂಡ ಸೌರವ್ ತನಗೆ ಬರಬೇಕಾದ ಲಾಭದ ಹಣ ಮತ್ತು ಅಸಲನ್ನು ವಾಪಸ್ ನೀಡುವಂತೆ ರಿಯಾ ಬಳಿ ಕೇಳಿದ್ದ. ಯಾವಾಗ ಸೌರವ್ ಹಣಕ್ಕಾಗಿ ಒತ್ತಾಯಿಸಲು ಆರಂಭಿಸಿದನೋ, ತಕ್ಷಣವೇ ಆಕೆ ತನ್ನ ಮೊಬೈಲ್ ನಂಬರ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ. ತಾನು ಸಂಪೂರ್ಣವಾಗಿ ಮೋಸ ಹೋಗಿರುವುದು ತಡವಾಗಿ ಅರಿವಿಗೆ ಬರುತ್ತಿದ್ದಂತೆ ಸೌರವ್​ಗೆ ದಿಕ್ಕು ತೋಚದಂತಾಗಿದೆ.

ಇದನ್ನೂ ಓದಿ ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ಕೊನೆಗೆ ಸಂತ್ರಸ್ತ ಟೆಕ್ಕಿ ಸೌರವ್ ದುಬೆ ಬೆಂಗಳೂರಿನ ಅಗ್ನೇಯ ವಿಭಾಗದ ಸೆನ್ (CEN) ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕ ಯುವತಿ ಹಾಗೂ ಆಕೆಯ ಬ್ಯಾಂಕ್ ಖಾತೆಗಳ ಜಾಡು ಹಿಡಿದು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಡೇಟಿಂಗ್ ಆ್ಯಪ್‌ಗಳಲ್ಲಿ ಅಪರಿಚಿತರ ಪ್ರಲೋಭನೆಗೆ ಒಳಗಾಗಬೇಡಿ ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ಪ್ರತಿ ದಾಳಿ

ಇರಾನ್, ಮೇ 28: ಬಂದರ್ ಅಬ್ಬಾಸ್ ಬಳಿ ದಾಳಿಯ ಬಳಿಕ ಇರಾನ್(Iran) ಅಮೆರಿಕದ ಸೇನಾ ನೆಲೆ ಮೇಲೆ ಪ್ರತೀಕಾರದ ದಾಳಿ ನಡೆಸಿದೆ.
ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುರುವಾರ ಅಮೆರಿಕದ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಬಂದರ್ ಅಬ್ಬಾಸ್ ವಿಮಾನ ನಿಲ್ದಾಣದ ಹೊರವಲಯದಲ್ಲಿರುವ ಸ್ಥಳದ ಮೇಲೆ ಇಂದು ಬೆಳಗ್ಗೆ ಅಮೆರಿಕ ಸೇನೆ ನಡೆಸಿದ ದಾಳಿ ಬಳಿಕ ಈ ದಾಳಿ ನಡೆದಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸುವ ಒಪ್ಪಂದವು ಬಹುತೇಕ ಪೂರ್ಣಗೊಂಡಿದೆ ಎಂದು ಹೇಳಿಕೊಂಡ ನಾಲ್ಕು ದಿನಗಳ ನಂತರ, ಅಮೆರಿಕ ಮತ್ತು ಇರಾನ್ ನಡುವಿನ ದುರ್ಬಲವಾದ ಕದನ ವಿರಾಮವನ್ನು ಹಿಂದಕ್ಕೆ ಮತ್ತು ಮುಂದಕ್ಕೆ ಸವಾಲು ಹಾಕಲಾಗುತ್ತಿದೆ. ಕರಾವಳಿ ಪ್ರದೇಶ, ಬಂದರ್ ಅಬ್ಬಾಸ್ ಮತ್ತು ದಕ್ಷಿಣದಲ್ಲಿ ಮತ್ತೆ ಹೊಸ ಉದ್ವಿಗ್ನತೆ ಹೆಚ್ಚುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ? ಸಿಎಂ ಮುಂದೆ ಇದೆ ಈ ಒಂದು ಆಯ್ಕೆ!

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ  (Siddaramaiah)  ಅವರ ರಾಜೀನಾಮೆ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ (Karnataka Governor) ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಬೆಂಗಳೂರು ತೊರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜಕೀಯ ವರ್ತುಲಗಳಲ್ಲಿ ಮೂಡಿದ್ದ ಈ ಗೊಂದಲಗಳ ನಡುವೆಯೇ, ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿರುವುದು ಗೊತ್ತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ (ಲೋಕಭವನ) ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದಿದ್ದರೂ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಖ್ಯಮಂತ್ರಿಗೆ ಸಾಂವಿಧಾನಿಕ ಅವಕಾಶ.
  • ವಿಶೇಷ ಕಾರ್ಯದರ್ಶಿಗೆ ಪತ್ರ ನೀಡಿದರೆ, ರಾಜ್ಯಪಾಲರ ಅಧಿಕೃತ ಅಂಗೀಕಾರದ ಮಾತುಕತೆಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಲೋಕಭವನಕ್ಕೆ ತೆರಳಬೇಕು.
  • ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇಂದು ಲೋಕಭವನಕ್ಕೆ ಸಾರ್ವತ್ರಿಕ ರಜೆ ಇದ್ದರೂ ತುರ್ತು ಕರ್ತವ್ಯದ ಮೇರೆಗೆ ಕಚೇರಿಗೆ ಹಾಜರಾಗಲಿರುವ ಹಿರಿಯ ಅಧಿಕಾರಿಗಳು.

ಅಂಗೀಕಾರ ಪ್ರಕ್ರಿಯೆ ಮತ್ತು ರಾಜ್ಯಪಾಲರ ವಾಪಸಾತಿ

ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್ ಪ್ರವಾಸ ಮುಗಿಸಿ ವಾಪಸ್ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ. ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ ಮಾತುಕತೆ ನಡೆಸಿದ ಬಳಿಕವಷ್ಟೇ ಅದಕ್ಕೆ ಅಧಿಕೃತ ಮುದ್ರೆ ಒತ್ತಲಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಲೋಕಭವನಕ್ಕೆ ಭೇಟಿ ನೀಡಬೇಕಾಗುತ್ತದೆ.

ಮತ್ತೊಂದೆಡೆ, ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲೋಕಭವನಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಆದಾಗ್ಯೂ, ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವುದರಿಂದ ತುರ್ತು ಕರೆ ಬಂದರೆ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದು ರಾತ್ರಿಯೇ ರಾಜ್ಯಪಾಲ ಗೆಹ್ಲೋಟ್ ವಾಪಸ್

ಇಂದು ರಾತ್ರಿಯೊಳಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿಗೆ ಮರಳುವುದು ನಿಶ್ಚಿತ ಎನ್ನಲಾಗಿದೆ. ಏಕೆಂದರೆ ನಾಳೆ ಬೆಳಗ್ಗೆ 9 ಗಂಟೆಗೆ ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಶಿಷ್ಟಾಚಾರದ (Protocol) ಪ್ರಕಾರ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಲು ರಾಜ್ಯಪಾಲರು ಖುದ್ದಾಗಿ ತೆರಳಬೇಕಾಗಿರುವುದರಿಂದ, ಇಂದು ಸಂಜೆ ಅಥವಾ ತಡರಾತ್ರಿಯೊಳಗೆ ಗೆಹ್ಲೋಟ್ ಅವರು ಬೆಂಗಳೂರಿಗೆ ಮರಳಲಿದ್ದಾರೆ. ಹೀಗಾಗಿ, ಇಂದು ಸಂಜೆಯೊಳಗೆ ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಒಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KCET Results 2026: ಶೀಘ್ರದಲ್ಲೇ ಕೆಸಿಇಟಿ ರಿಸಲ್ಟ್ ಪ್ರಕಟ; ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ಬೆಂಗಳೂರು: ಕರ್ನಾಟಕದ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಮುಖ ಅಪ್ಡೇಟ್ ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಥವಾ ನಾಳೆ KCET 2026 ರ ಪರೀಕ್ಷಾ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶಗಳು ಅಂತಿಮ ಹಂತಕ್ಕೆ ಬಂದಿದ್ದು, ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಫಲಿತಾಂಶ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗಳು:

ಫಲಿತಾಂಶ ಪ್ರಕಟವಾದ ತಕ್ಷಣ ವೆಬ್‌ಸೈಟ್‌ನಲ್ಲಿ ಟ್ರಾಫಿಕ್ ಹೆಚ್ಚಾಗುವುದರಿಂದ, ಕೆಇಎ ಮೂರು ಪರ್ಯಾಯ ಲಿಂಕ್‌ಗಳನ್ನು ನೀಡಿದೆ:

cetonline.karnataka.gov.in/kea

kea.kar.nic.in

karresults.nic.in

KCET 2026 ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಚೆಕ್ ಮಾಡುವುದು ಹೇಗೆ?

ನಿಮ್ಮ ಸ್ಕೋರ್‌ಕಾರ್ಡ್ ಅನ್ನು ಸುಲಭವಾಗಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

  • ಮೊದಲು KEA ಅಧಿಕೃತ ವೆಬ್‌ಸೈಟ್ ಆದ cetonline.karnataka.gov.in/kea ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣಿಸುವ “UGCET 2026 Result” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹೊಸ ಪೇಜ್ ಓಪನ್ ಆದಾಗ, ನಿಮ್ಮ KCET ಅಪ್ಲಿಕೇಶನ್ ಸಂಖ್ಯೆ (Application Number) ಅನ್ನು ನಮೂದಿಸಿ.
  • ನಿಮ್ಮ ಹಾಲ್ ಟಿಕೆಟ್‌ನಲ್ಲಿರುವಂತೆ ನಿಮ್ಮ ಹೆಸರಿನ ಮೊದಲ 4 ಅಕ್ಷರಗಳನ್ನು ಟೈಪ್ ಮಾಡಿ.
  • ಕೊನೆಯದಾಗಿ ‘Submit’ ಬಟನ್ ಒತ್ತಿರಿ.
  • ನಿಮ್ಮ ಸ್ಕೋರ್‌ಕಾರ್ಡ್ ಪರದೆಯ ಮೇಲೆ ಪ್ರದರ್ಶನವಾಗುತ್ತದೆ. ವಿಷಯವಾರು ಅಂಕಗಳು ಮತ್ತು ರಾಂಕ್ ಅನ್ನು ಪರಿಶೀಲಿಸಿ, ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.

ರಾಂಕ್ ಲಿಸ್ಟ್ ಹೇಗೆ ಸಿದ್ಧವಾಗುತ್ತದೆ?

KCET ಇಂಜಿನಿಯರಿಂಗ್ ರಾಂಕಿಂಗ್ ಅನ್ನು ಕೇವಲ ಸಿಇಟಿ ಅಂಕಗಳ ಮೇಲಷ್ಟೇ ನಿರ್ಧರಿಸಲಾಗುವುದಿಲ್ಲ. ವಿದ್ಯಾರ್ಥಿಯ ದ್ವಿತೀಯ ಪಿಯುಸಿ (Class 12) ಬೋರ್ಡ್ ಪರೀಕ್ಷೆಯ ಪಿಸಿಎಂ (ಫಿಸಿಕ್ಸ್, ಕೆಮಿಸ್ಟ್ರಿ, ಮ್ಯಾಥ್ಸ್) ಅಂಕಗಳಿಗೆ ಶೇ.50 ಮತ್ತು KCET ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ 50% ರಷ್ಟು ಸಮಾನ ಪ್ರಾಮುಖ್ಯತೆ (Weightage) ನೀಡಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ವಿದ್ಯಾರ್ಥಿಗಳ ಗಮನಕ್ಕೆ:

ನಿಮ್ಮ ರಿಸಲ್ಟ್ ಶೀಟ್ ಡೌನ್‌ಲೋಡ್ ಮಾಡಿದ ನಂತರ ಅದರಲ್ಲಿ ಈ ಕೆಳಗಿನ ವಿವರಗಳು ಸರಿಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಿ:

  • ಅಭ್ಯರ್ಥಿಯ ಹೆಸರು ಮತ್ತು ರೋಲ್ ನಂಬರ್
  • ಸಬ್ಜೆಕ್ಟ್ ವೈಸ್ ಮಾರ್ಕ್ಸ್ (PCM/PCB)
  • ಒಟ್ಟು ಪಡೆದ ಅಂಕಗಳು ಮತ್ತು KCET ರಾಂಕ್
  • ಮೀಸಲಾತಿ ವಿಭಾಗ (Category)

ಫಲಿತಾಂಶದ ನಂತರ ಮುಂದಿನ ಪ್ರಕ್ರಿಯೆ ಏನು?

ಕೌನ್ಸೆಲಿಂಗ್ ಪ್ರಕ್ರಿಯೆಯ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಇರುವ ಗೊಂದಲ ನಿವಾರಿಸಲು KEA ಸಂಸ್ಥೆಯು ಮೇ 25 ರಿಂದ ಮೇ 30 ರವರೆಗೆ “KEA ಮಂಥನ 2026” ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಫಲಿತಾಂಶ ಬಂದ ಕೆಲವೇ ದಿನಗಳಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ಡಾಕ್ಯುಮೆಂಟ್ ವೆರಿಫಿಕೇಶನ್ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಆಪ್ಷನ್ ಎಂಟ್ರಿ:

ಜೂನ್ ಮೊದಲ ವಾರದಲ್ಲಿ ಆನ್‌ಲೈನ್ ಕೌನ್ಸೆಲಿಂಗ್ ಪೋರ್ಟಲ್ ತೆರೆಯಲಿದ್ದು, ವಿದ್ಯಾರ್ಥಿಗಳು ತಮಗೆ ಬೇಕಾದ ಕಾಲೇಜು ಮತ್ತು ಕೋರ್ಸ್‌ಗಳನ್ನು ಆದ್ಯತೆಯ ಮೇರೆಗೆ ಆಯ್ಕೆ ಮಾಡಿಕೊಳ್ಳಬಹುದು.

ಸಹಾಯವಾಣಿ:

ರಿಸಲ್ಟ್ ನೋಡುವಾಗ ಯಾವುದೇ ತಾಂತ್ರಿಕ ತೊಂದರೆ ಎದುರಾದರೆ ವಿದ್ಯಾರ್ಥಿಗಳು ಕೆಇಎ ಸಹಾಯವಾಣಿ ಸಂಖ್ಯೆಗಳಾದ 080-23460460 ಅಥವಾ 080-23461575 ಅನ್ನು ಸಂಪರ್ಕಿಸಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ

ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪೊಲೀಸರು, ಶೇಷಾದ್ರಿಪುರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ನಿವಾಸಕ್ಕೆ ಸಂಪರ್ಕಿಸುವ ಎರಡು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಆಯೋಜಿಸಿರುವ ಉಪಹಾರ ಕೂಟದಲ್ಲಿ ಮುಖ್ಯಮಂತ್ರಿ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ. ಕಳೆದ ದಿನ ಮುಖ್ಯಮಂತ್ರಿ ನಿವಾಸದ ಬಳಿ ಇದ್ದ ಜನರ ಚಿತ್ತ, ಇಂದು ಡಿಸಿಎಂ ನಿವಾಸದತ್ತ ಶಿಫ್ಟ್ ಆಗಿರುವುದು ರಾಜ್ಯ ರಾಜಕಾರಣದ ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಹಠಾತ್ತನೆ ಯುವಕನ ಮೇಲೆ ದಾಳಿಗೆ ಬಂದ ನಾಯಿಗಳ ಹಿಂಡು, ಆಮೇಲಾಗಿದ್ದೇನು ನೋಡಿ?

ರಸ್ತೆಯಲ್ಲಿ ತನ್ನಷ್ಟಕ್ಕೆ ತಾನು ನಡೆದು  ಹೋಗುತ್ತಿದ್ದ ಯುವಕನ ಮೇಲೆ ನಾಯಿಗಳು ಹಠಾತ್ ದಾಳಿಗೆ ಮುಂದಾಗಿದ್ದ ವಿಡಿಯೋ ವೈರಲ್ ಆಗಿದೆ. ವರದಿಗಳ ಪ್ರಕಾರ, ನಾಯಿಗಳು ಆತನನ್ನು ಸುತ್ತುವರೆದು ಕಚ್ಚಲು ಮುಂದಾದಾಗ ಆತ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಅದೇ ಹತಾಶೆ ಮತ್ತು ಪ್ರಾಣಭಯದ ಮಧ್ಯೆ ಆ ವ್ಯಕ್ತಿ ಸಮಯಪ್ರಜ್ಞೆ ಮೆರೆದಿದ್ದಾರೆ. ತನ್ನನ್ನು ಕಚ್ಚಲು ಬಂದ ನಾಯಿಗಳಲ್ಲಿ ಒಂದನ್ನು ಅತ್ಯಂತ ವೇಗವಾಗಿ ಕೈಯಿಂದ ಗಟ್ಟಿಯಾಗಿ ಹಿಡಿದು, ಅದನ್ನು ಉಳಿದ ನಾಯಿಗಳ ಕಡೆಗೆ ಬಲವಾಗಿ ಎಸೆದಿದ್ದಾರೆ. ಆತನ ಈ ಅನಿರೀಕ್ಷಿತ ತಿರುಗೇಟಿನಿಂದ ಗಾಬರಿಯಾದ ನಾಯಿಗಳ ಹಿಂಡು ಅಲ್ಲಿಂದ ತಕ್ಷಣವೇ ಓಡಿಹೋಗಿದೆ. ಪರಿಣಾಮವಾಗಿ, ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Rakshasutra Colors: ಕೈಗೆ ಕಟ್ಟುವ ರಕ್ಷಾಸೂತ್ರ ನಿಮ್ಮ ಅದೃಷ್ಟವನ್ನೇ ಬದಲಾಯಿಸಬಹುದು; ಯಾವ ಬಣ್ಣ ಯಾವ ಗ್ರಹಕ್ಕೆ ಸಂಬಂಧಿಸಿದ್ದು ಗೊತ್ತಾ?

ಕೈಗೆ ಕಟ್ಟುವ ರಕ್ಷಾಸೂತ್ರImage Credit source: Pinterest

ಹಿಂದೂ ಧರ್ಮದಲ್ಲಿ ಶುಭ ಕಾರ್ಯ, ಪೂಜೆ ಮತ್ತು ಹಬ್ಬ ಹರಿದಿನಗಳ ಸಂದರ್ಭದಲ್ಲಿ ಕೈಗೆ ಪವಿತ್ರವಾದ ರಕ್ಷಾಸೂತ್ರವನ್ನು (ಕಾಲವ ಅಥವಾ ಕೈದಾರ) ಕಟ್ಟುವ ಸಂಪ್ರದಾಯವಿದೆ. ಇದನ್ನು ರಕ್ಷಣೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ರಕ್ಷಾಸೂತ್ರದ ಬಣ್ಣ ಮತ್ತು ಅದನ್ನು ಧರಿಸುವ ವಿಧಾನವು ವ್ಯಕ್ತಿಯ ದೇಹದ ಶಕ್ತಿ (Energy) ಮತ್ತು ಅದೃಷ್ಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ. ತಪ್ಪು ಬಣ್ಣ ಅಥವಾ ತಪ್ಪು ವಿಧಾನದಲ್ಲಿ ದಾರವನ್ನು ಕಟ್ಟಿಕೊಳ್ಳುವುದರಿಂದ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಆದ್ದರಿಂದ, ಯಾವ ಬಣ್ಣದ ದಾರ ಯಾವ ಗ್ರಹಕ್ಕೆ ಸಂಬಂಧಿಸಿದೆ ಮತ್ತು ಅದನ್ನು ಧರಿಸುವ ಸರಿಯಾದ ನಿಯಮಗಳೇನು ಎಂಬುದನ್ನು ತಿಳಿಯುವುದು ಅತ್ಯಗತ್ಯ.

ವಿವಿಧ ಬಣ್ಣಗಳ ರಕ್ಷಾಸೂತ್ರ ಮತ್ತು ಗ್ರಹಗಳ ನಂಟು:

ಹಳದಿ ಬಣ್ಣದ ರಕ್ಷಾಸೂತ್ರ (ಗುರು ಗ್ರಹ):

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿ ಗುರು ಗ್ರಹವು (ಬೃಹಸ್ಪತಿ) ದುರ್ಬಲವಾಗಿದ್ದರೆ ಹಳದಿ ಬಣ್ಣದ ರಕ್ಷಾಸೂತ್ರವನ್ನು ಧರಿಸುವುದು ಅತ್ಯಂತ ಶುಭ ತರಲಿದೆ. ಇದು ಬುದ್ಧಿವಂತಿಕೆ, ಜ್ಞಾನ, ಆಧ್ಯಾತ್ಮಿಕತೆ ಮತ್ತು ಮಾತುಗಾರಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿ, ಜೀವನದಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ ಎಂದು ನಂಬಲಾಗಿದೆ. ಹಳದಿ ರಕ್ಷಾಸೂತ್ರವನ್ನು ಕಟ್ಟಿಕೊಳ್ಳಲು ಗುರುವಾರ ಅತ್ಯಂತ ಪ್ರಶಸ್ತವಾದ ದಿನವಾಗಿದೆ.

ಹಸಿರು ಬಣ್ಣದ ರಕ್ಷಾಸೂತ್ರ (ಬುಧ ಗ್ರಹ):

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಹಸಿರು ಬಣ್ಣದ ದಾರವು ಬುಧ ಗ್ರಹದ ಸಂಕೇತವಾಗಿದೆ. ಇದನ್ನು ಕೈಗೆ ಧರಿಸುವುದರಿಂದ ಬುದ್ಧಿಶಕ್ತಿ ಚುರುಕಾಗುತ್ತದೆ, ಸಂವಹನ ಕೌಶಲ್ಯಗಳು ಉತ್ತಮಗೊಳ್ಳುತ್ತವೆ ಮತ್ತು ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಬೀರುತ್ತದೆ. ವ್ಯಾಪಾರ ಮತ್ತು ವೃತ್ತಿಜೀವನದಲ್ಲಿ ಯಶಸ್ಸು ಕಾಣಲು ಹಸಿರು ದಾರ ಸಹಕಾರಿ. ಇದನ್ನು ಕಟ್ಟಿಕೊಳ್ಳಲು ಬುಧವಾರ ಅತ್ಯಂತ ಸೂಕ್ತ ದಿನ.

ಬಿಳಿ ಬಣ್ಣದ ರಕ್ಷಾಸೂತ್ರ (ಚಂದ್ರ ಮತ್ತು ಶುಕ್ರ ಗ್ರಹ):

ಬಿಳಿ ಬಣ್ಣವನ್ನು ಶಾಂತಿ ಮತ್ತು ಶುದ್ಧತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಬಿಳಿ ಬಣ್ಣದ ರಕ್ಷಾಸೂತ್ರವನ್ನು ಧರಿಸುವುದರಿಂದ ಚಂದ್ರ ಮತ್ತು ಶುಕ್ರ ಗ್ರಹಗಳ ಶುಭ ಫಲಗಳು ಹೆಚ್ಚಾಗುತ್ತವೆ. ಇದು ಮನಸ್ಸಿಗೆ ಶಾಂತಿ ನೀಡುವುದರ ಜೊತೆಗೆ ಜೀವನದಲ್ಲಿ ಸುಖ-ಸಮೃದ್ಧಿಯನ್ನು ತರುತ್ತದೆ.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ಕಿತ್ತಳೆ ಅಥವಾ ಕೇಸರಿ ದಾರ:

ಕೇಸರಿ ಅಥವಾ ಕಿತ್ತಳೆ ಬಣ್ಣವು ಬೆಂಕಿ, ಗ್ರಹಗಳು, ಸೂರ್ಯ ಮತ್ತು ಇತರ ಸಾರ್ವತ್ರಿಕ ಅಂಶಗಳ ಬಣ್ಣವಾಗಿದೆ. ಕೇಸರಿಯನ್ನು ಹಿಂದೂಗಳಿಗೆ ಅತ್ಯಂತ ಪವಿತ್ರವಾದ ಬಣ್ಣವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಗುರು ಗ್ರಹದ ಸಹಾಯದಿಂದ ಆಧ್ಯಾತ್ಮಿಕತೆಯನ್ನು ಹರಡಲು ಸಹಾಯ ಮಾಡುತ್ತದೆ. ಇದು ಹೆಸರು, ಖ್ಯಾತಿ, ಶಕ್ತಿ, ಸಮೃದ್ಧಿ ತರುವ ಜೊತೆಗೆ ದುಷ್ಟ ಕಣ್ಣುಗಳಿಂದ ವ್ಯಕ್ತಿಯನ್ನು ರಕ್ಷಿಸುತ್ತದೆ ಎಂದು ನಂಬಲಾಗಿದೆ.

ರಕ್ಷಾಸೂತ್ರ ಧರಿಸುವಾಗ ಪಾಲಿಸಬೇಕಾದ ಪ್ರಮುಖ ನಿಯಮಗಳು:

ರಕ್ಷಾಸೂತ್ರವನ್ನು ಕೈಗೆ ಕಟ್ಟುವ ಮೊದಲು ಅದನ್ನು ಗಂಗಾಜಲದಿಂದ ಪ್ರೋಕ್ಷಣೆ ಮಾಡಿ ಶುದ್ಧೀಕರಿಸುವುದು ಅತ್ಯಂತ ಶುಭ ತರುತ್ತದೆ.

ಯಾವ ಕೈಗೆ ಕಟ್ಟಬೇಕು?

ಧಾರ್ಮಿಕ ನಿಯಮಗಳ ಪ್ರಕಾರ, ಪುರುಷರು ಮತ್ತು ಅವಿವಾಹಿತ ಹೆಣ್ಣುಮಕ್ಕಳು ತಮ್ಮ ಬಲಗೈಗೆ ರಕ್ಷಾಸೂತ್ರವನ್ನು ಕಟ್ಟಿಕೊಳ್ಳಬೇಕು. ವಿವಾಹಿತ ಮಹಿಳೆಯರು ತಮ್ಮ ಎಡಗೈಗೆ ರಕ್ಷಾಸೂತ್ರವನ್ನು ಧರಿಸುವುದು ಶಾಸ್ತ್ರಬದ್ಧವಾಗಿದೆ. ಎಡಗೈಯು ಚಂದ್ರ ತತ್ವ ಮತ್ತು ಶಕ್ತಿಯ ಸಂಕೇತವಾಗಿದ್ದರೆ, ಬಲಗೈಯು ಕರ್ಮ ಮತ್ತು ಧರ್ಮದ ಸಂಕೇತವಾಗಿದೆ. ಕೈಗೆ ದಾರವನ್ನು ಕಟ್ಟುವಾಗ ಪವಿತ್ರವಾದ ರಕ್ಷಾ ಮಂತ್ರವನ್ನು ಜಪಿಸುವುದು ಉತ್ತಮ ಫಲ ನೀಡುತ್ತದೆ.

ಹಳೆಯ ದಾರವನ್ನು ಏನು ಮಾಡಬೇಕು?

ಕಾಲಾನಂತರದಲ್ಲಿ ರಕ್ಷಾಸೂತ್ರವು ಹಳೆಯದಾದಾಗ ಅಥವಾ ಬಣ್ಣ ಮಾಸಿದಾಗ ಅದನ್ನು ಬದಲಾಯಿಸಬೇಕು. ಹಳೆಯ ದಾರವನ್ನು ಎಲ್ಲೆಂದರಲ್ಲಿ ಬಿಸಾಡಬಾರದು; ಅದನ್ನು ಹರಿಯುವ ನೀರಿನಲ್ಲಿ ವಿಸರ್ಜಿಸಬೇಕು ಅಥವಾ ಯಾವುದಾದರೂ ಪವಿತ್ರವಾದ ಮರದ ಬೇರಿನ ಬಳಿ ಇಡಬೇಕು. ರಕ್ಷಾಸೂತ್ರವು ಕೇವಲ ಒಂದು ದಾರವಲ್ಲ, ಅದು ನಕಾರಾತ್ಮಕ ಶಕ್ತಿಗಳಿಂದ ನಮ್ಮನ್ನು ರಕ್ಷಿಸುವ, ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ನೆಲೆಸುವಂತೆ ಮಾಡುವ ಒಂದು ರಕ್ಷಾ ಕವಚವಾಗಿದೆ.

(ಗಮನಿಸಿ: ಈ ಮೇಲಿನ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಶಾಸ್ತ್ರದ ಸಾಮಾನ್ಯ ಸಿದ್ಧಾಂತಗಳನ್ನು ಆಧರಿಸಿದೆ.)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version