Headlines

ಐಪಿಎಸ್ ಅಧಿಕಾರಿಗೆ ಸೇರಿದ ವಿಲ್ಲಾದಲ್ಲೇ ಸಾಮೂಹಿಕ ಅತ್ಯಾಚಾರ: ಕಟ್ಟಡದ ಮಾಲೀಕನ ಮೇಲೆ ಕ್ರಮ ಯಾಕಿಲ್ಲ? – Kannada News | Bengaluru Physical Assult Case: IPS Officers Villa Becomes Hub of Illegal Activities, Police Under Scrutiny

ಬೆಂಗಳೂರು, ಫೆಬ್ರವರಿ 28: ಅಮೃತಹಳ್ಳಿ ವಿಲ್ಲಾದಲ್ಲಿ ನಡೆದ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣವು ಹಲವು ಆಘಾತಕಾರಿ ಸತ್ಯಗಳನ್ನು ಬಯಲು ಮಾಡಿದೆ. ಈ ಘಟನೆ ನಡೆದ ವಿಲ್ಲಾ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂಬುದು ಪ್ರಮುಖ ವಿಷಯ. ಈ ವಿಲ್ಲಾ ದೀರ್ಘಕಾಲದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮೋಜು-ಮಸ್ತಿ, ಡ್ರಗ್ಸ್ ಸೇವನೆ ಮತ್ತು ಅನೈತಿಕ ಚಟುವಟಿಕೆಗಳ ಹಾಟ್‌ಸ್ಪಾಟ್ ಆಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ವರದಿಯಾಗಿದೆ. ಈ ಹಿಂದಿನ ಹಲವು ಪ್ರಕರಣಗಳಲ್ಲಿ ವಿಲ್ಲಾ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದರೂ ಈ ವಿಲ್ಲಾ ಐಪಿಎಸ್ ಅಧಿಕಾರಿಗೆ ಸೇರಿದ್ದರಿಂದ…

Read More

ಎಫ್ಡಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ ವಂಚನೆ: ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್​​ ಮ್ಯಾನೇಜರ್​​ ಎಸ್ಕೇಪ್​! – Kannada News | Hassan Bank Manager Absconds with 3 Cr on FD Loan Fraud Promise

ಆರೋಪಿ ಹೆಚ್​​.ಎಸ್​.ಪೂಜಾImage Credit source: Tv9 Kannada ಹಾಸನ, ಫೆಬ್ರವರಿ 28: ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ 50ಕ್ಕೂ ಅಧಿಕ ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹ ಮಾಡಿ ವಂಚಿಸಿರುವ ಆರೋಪ ಹಾಸನದ ಖಾಸಗಿ ಬ್ಯಾಂಕ್​​ ವಿರುದ್ಧ ಕೇಳಿಬಂದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್​ನಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾಗೆ ದೂರು ನೀಡಲಾಗಿದೆ. ಎಫ್​ಡಿ ಇಡುವಂತೆ ಹೇಳಿ ಕೋಟ್ಯಂತರ ಹಣ ಸಮೇತ ಮ್ಯಾನೇಜರ್​​…

Read More

ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..! – Kannada News | Pakistan must reach the target within 12.4 to 13.5 overs

T20 World Cup 2026: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕಿದ್ದರೆ ಪಾಕಿಸ್ತಾನ್ ತಂಡ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಸೂಪರ್-8 ಸುತ್ತಿನ ಗ್ರೂಪ್-2 ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇದೀಗ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಆದರೆ ಹೀಗೆ ನೆಟ್ ರನ್ ರೇಟ್​ನಲ್ಲಿ ಕಿವೀಸ್ ಪಡೆಯನ್ನು…

Read More

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ – Kannada News | Neenasam Satish’s Inspiring Journey: From Struggle to Stardom with ‘The Rise of Ashoka

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು…

Read More

National Science Day 2026: ಫೆಬ್ರವರಿ 28 ರಂದೇ ಏಕೆ ವಿಜ್ಞಾನ ದಿನವನ್ನು ಆಚರಿಸುವುದು? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | National Science Day 2026: history and significance of National Science Day

ರಾಷ್ಟ್ರೀಯ ವಿಜ್ಞಾನ ದಿನImage Credit source: Freepik ಭಾರತೀಯ ಇತಿಹಾಸದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವು (Science Day) ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಈ ದಿನವನ್ನು ಭಾರತೀಯ ವಿಜ್ಞಾನಿ ಸಿ.ವಿ. ರಾಮನ್ ಅವರ ಆವಿಷ್ಕಾರವಾದ ರಾಮನ್ ಪರಿಣಾಮದ ಗೌರವಾರ್ಥವಾಗಿ ಆಚರಿಸಲಾಗುತ್ತದೆ. 1928 ರ ಫೆಬ್ರವರಿ 28 ರಂದು ಸಿ.ವಿ. ರಾಮನ್ ಅವರು ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಪ್ರಮುಖ ಆವಿಷ್ಕಾರವನ್ನು ಮಾಡಿ ರಾಮನ್ ಪರಿಣಾಮವನ್ನು ಕಂಡುಹಿಡಿದರು. ಈ ಕಾರಣಕ್ಕಾಗಿಯೇ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ…

Read More

Right Hand Blessings: ಬಲಗೈಯಿಂದಲೇ ಏಕೆ ಆಶೀರ್ವಾದ ಮಾಡಬೇಕು? ಜ್ಯೋತಿಶಾಸ್ತ್ರಜ್ಞರು ಹೇಳುವುದೇನು? – Kannada News | Right Hand Blessings: Why Hindu Tradition Favours it for Good Fortune

ಸನಾತನ ಹಿಂದೂ ಸಂಸ್ಕೃತಿಯಲ್ಲಿ ನಮಸ್ಕಾರ ಹಾಗೂ ಆಶೀರ್ವಾದಕ್ಕೆ ವಿಶೇಷ ಮಹತ್ವವಿದೆ. ಗುರುಗಳಿಗೆ, ಹಿರಿಯರಿಗೆ ಮತ್ತು ಸ್ವಾಮಿಗಳಿಗೆ ನಮಸ್ಕರಿಸುವುದು ವಿನಯದ ಸಂಕೇತವಾಗಿದ್ದು, ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ನಮಸ್ಕಾರ ಮಾಡಿದಾಗ, ಅವರ ಆಶೀರ್ವಾದವನ್ನು ಪಡೆದುಕೊಳ್ಳುವ ಪ್ರಕ್ರಿಯೆ ಆರಂಭವಾಗುತ್ತದೆ. ಈ ಪೂರ್ಣ ಆಶೀರ್ವಾದದಿಂದ ನಮ್ಮ ಕೆಲಸ ಕಾರ್ಯಗಳು ಮತ್ತು ನಿತ್ಯ ಜೀವನದ ಅಡ್ಡಿ ಆತಂಕಗಳು ನಿವಾರಣೆಯಾಗಿ, ಸುಭಿಕ್ಷವಾಗಿ ಎಲ್ಲಾ ಕಾರ್ಯಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಆಶೀರ್ವಾದವನ್ನು ಸಾಮಾನ್ಯವಾಗಿ ಬಲಗೈಯಿಂದಲೇ ಏಕೆ ನೀಡಬೇಕು ಎಂಬುದು ಹಲವರ ಪ್ರಶ್ನೆ….

Read More

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! – Kannada News | Devanahalli POCSO: Residential School Owner Booked for Physical Harassment of Girls

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ವಸತಿ ಶಾಲೆಯ ಮಾಲೀಕ ಧನಂಜಯ್ (A1) ಮತ್ತು ಅವರ ಪತ್ನಿ ಶೈಲಜಾ (A2) ವಿರುದ್ಧ ಪೋಕ್ಸೋ ಕಾಯ್ದೆಯಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನ ವಿಕೃತಿಗೆ ಹೆಂಡತಿ ಸಾಥ್! ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ…

Read More

ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ… ಆಟಗಾರರ ನಡುವೆ ಮಾತಿನ ಚಕಮಕಿ – Kannada News | Vyshak vijay kumar and Qamran Iqbal Fight in Ranji Final

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಆಟಗಾರರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಪರಸ್ ಡೋಗ್ರಾ ಹಾಗೂ ಕೆವಿ ಅನೀಶ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ಕರ್ನಾಟಕ ವೇಗಿ ವೈಶಾಕ್ ವಿಜಯಕುಮಾರ್ ಹಾಗೂ ಜಮ್ಮು-ಕಾಶ್ಮೀರ ತಂಡದ ಆರಂಭಿಕ ದಾಂಡಿಗ ಖಮ್ರಾನ್ ಇಕ್ಬಾಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ನಾಲ್ಕನೇ ದಿನದಾಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡನೇ ಇನ್ನಿಂಗ್ಸ್‌ನ 49ನೇ ಓವರ್‌ನಲ್ಲಿ ವೈಶಾಕ್ ವಿಜಯಕುಮಾರ್ ಎಸೆದ ಬೌನ್ಸರ್ ಎಸೆದಿದ್ದರು. ಈ…

Read More

ಪಿಯು ಬೋರ್ಡ್, ಕಾಲೇಜಿನ ಎಡವಟ್ಟು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು – Kannada News | PUC Exam Chaos: Yadgir Students Struggle with Hall Ticket Address Blunder

ಹಾಲ್‌ ಟಿಕೆಟ್‌ನಲ್ಲಿ ನಮೂದಿಸಿರುವ ತಪ್ಪು ವಿಳಾಸ ಪ್ರರ್ಶಿಸುತ್ತಿರುವ ವಿದ್ಯಾರ್ಥಿಗಳುImage Credit source: Tv9 Kannada ಯಾದಗಿರಿ, ಫೆಬ್ರವರಿ 28: ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದ್ಯಂತ 1,217 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದ್ದು, ಪರೀಕ್ಷೆ ಹಿನ್ನೆಲೆ ಸಿಸಿ ಕ್ಯಾಮರಾ ಕಣ್ಗಾವಲು ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಈ ನಡುವೆ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ…

Read More

ನೋವಿನ ನಡುವೆಯೂ ರಿಂಕು ಸಿಂಗ್ ಆಗಮನ – Kannada News | T20 World Cup 2026: Rinku Singh To Rejoin Team India In Kolkata

ಟೀಮ್ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರು ಇಂದು (ಫೆ.28) ಕೋಲ್ಕತ್ತಾದಲ್ಲಿ ಭಾರತ ತಂಡವನ್ನು ಮತ್ತೆ ಕೂಡಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಅವರು ಟೀಮ್ ಇಂಡಿಯಾಗೆ ಮರಳಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ (54 ವರ್ಷ) ಅವರು ಲಿವರ್ ಕ್ಯಾನ್ಸರ್‌ನಿಂದಾಗಿ ಫೆಬ್ರವರಿ 27, ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹೀಗಾಗಿ ಅವರು ಶುಕ್ರವಾರವೇ ಅಲಿಗಢಕ್ಕೆ ತೆರಳಿ ತಮ್ಮ ತಂದೆಯ…

Read More