LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.

ಈ ನಡುವೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಶುಕ್ರವಾರ ಕೇಂದ್ರ ಸರ್ಕಾರವು ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್‌ಪಿಜಿ ಸಂಸ್ಕರಣಾಗಾರಗಳಿಗೆ ಉತ್ಪಾದನೆಯನ್ನು ಹೆಚ್ಚಿಸುವಂತೆ ಸೂಚಿಸಿತ್ತು. ಈ ಮೂಲಕ ದೇಶದಲ್ಲಿ ಅನಿಲ ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಆತಂಕ ಬೇಡ, ಇಂಧನ ದಾಸ್ತಾನು ಸಾಕಷ್ಟಿದೆ: ಕೇಂದ್ರ

ಏತನ್ಮಧ್ಯೆ, ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಇದ್ದರೂ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸೇರಿದಂತೆ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಭಾರತದಲ್ಲಿ ಇನ್ನೂ ಗಮನಾರ್ಹ ಪ್ರಮಾಣದ ಎಲ್​ಪಿಜಿ ಸಂಗ್ರಹವಿದ್ದು, ಅಗತ್ಯವಿದ್ದಲ್ಲಿ ತೈಲ ಕಂಪನಿಗಳು ಗಲ್ಫ್ ಪ್ರದೇಶದ ಹೊರಗಿನ ದೇಶಗಳಿಂದಲೂ ಆಮದು ಮಾಡಿಕೊಳ್ಳಲು ಸಿದ್ಧವಾಗಿವೆ.

ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ

ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಇರಾನ್ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಹಡಗು ಸಾಗಾಟಕ್ಕೆ ನಿರ್ಬಂಧ ಹೇರಿರುವುದರಿಂದ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಕಮರ್ಷಿಯಲ್ ಗ್ಯಾಸ್ ಬೆಲೆ ಸತತ ಮೂರನೇ ತಿಂಗಳು ಏರಿಕೆ; ಬೆಂಗಳೂರು ಮೊದಲಾದೆಡೆ ಹೊಸ ಎಲ್​ಪಿಜಿ ದರಗಳಿವು

ಸಾಮಾನ್ಯವಾಗಿ ಪ್ರತಿ ತಿಂಗಳ ಒಂದನೇ ತಾರೀಖಿನಿಂದ ಎಲ್​ಪಿಜಿ ಸಿಲಿಂಡರ್​​ಗಳ ದರ ಪರಿಷ್ಕರಣೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ ದರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರವನ್ನು 110 ರೂ.ನಷ್ಟು ಏರಿಕೆ ಮಾಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ (KGF 2 Movie) ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದಾರೆ ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಮಧ್ಯೆ ಯಶ್ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ಬಗ್ಗೆ ಗಮನಹರಿಸುತ್ತಿದ್ದಾರೆ.

ಯಶ್ ರೆಸ್ಟೋರೆಂಟ್  ಹೊರ ಭಾಗದಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಹಾಗೂ ಸಣ್ಣದಾದ ಗಡ್ಡದಲ್ಲಿ ಕಾಣಿಸಿಕೊಂಡರು. ಈ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಯಶ್ ಫ್ಯಾನ್ಸ್ ಖುಷಿಯಾಗಿದ್ದಾರೆ. ಹಲವು ವರ್ಷಗಳ ಬಳಿಕ ಅವರನ್ನು ಹೊಸ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಯಶ್ ಜೊತೆ ರಾಧಿಕಾ ಕೂಡ ಇದ್ದರು.

ಈ ಮೊದಲು ಯಶ್ ಮುಂಬೈ ಬೀದಿಗಳಲ್ಲಿ ಸುತ್ತಾಡಿದ್ದರು. ಆ ವೇಳೆಗಾಗಲೇ ಯಶ್ ಲುಕ್ ಬದಲಸಿಕೊಂಡಾಗಿತ್ತು. ಹೀಗಾಗಿ, ಅದನ್ನು ತೋರಿಸಬಾರದು ಎಂದು ಯಶ್ ಅವರು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದರು. ಆದರೆ, ಈಗ ಟಿಕೆಟ್ ಪಾತ್ರದ ಲುಕ್ ರಿವೀಲ್ ಆಗಿರುವುದರಿಂದ ಅವರು ರಾಜಾರೋಶವಾಗಿ ಹೊಸ ಲುಕ್ ಅಲ್ಲಿ ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

ಯಶ್ ಅವರ ಅಭಿಮಾನಿ ಬಳಗ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ರಾಕಿ ಭಾಯ್ ಹೆಸರು ಭಾರತಾದ್ಯಂತ ಚರ್ಚೆಯಲ್ಲಿದೆ. ಮುಂಬೈ ಬೀದಿಗಳಲ್ಲಿ ಓಡಾಡಿದರೂ ಪಾಪರಾಜಿಗಳು ಮುತ್ತಿಕೊಂಡು, ‘ಯಶ್ ಸರ್ ಯಶ್ ಸರ್’ ಎಂದು ಕೂಗುತ್ತಾರೆ. ಇದು ಯಶ್ ಅವರ ಜನಪ್ರಿಯತೆಯನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳಿಗೆ ಇದು ಪರ್ವ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರ ವಿಶ್ವಾಸ ಅನ್ಯರಿಂದ ತಗ್ಗಲಿದೆ

ಮೇಷ ರಾಶಿ:

ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು.

ವೃಷಭ ರಾಶಿ:

ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ನಿಮ್ಮ‌ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು.‌ ಬದುಕು‌ ಬಂಧನದಂತೆ ಅನ್ನಿಸಬಹುದು. ಮನಸ್ಸೂ ಸಂಕುಚಿತವಾಗಬಹುದು.

ಮಿಥುನ ರಾಶಿ:

ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ಮಿತವಾದ ಮಾತಿನಿಂದ ನಿಮಗೇ ಒಳ್ಳೆಯದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ‌ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಬೇಡ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ:

ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಉದ್ಯೋಗದಾತರು ನಿಮ್ಮಿಂದ ನಿರೀಕ್ಷೆ ಮಾಡುವ ಬೆಂಬಲ ನೀಡುವಲ್ಲಿ ಸಫಲರಾಗುತ್ತೀರಿ. ಇದರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತವೆ. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಉತ್ತಮ ಸ್ನೇಹವನ್ನು ನೀವು ಕಳೆದುಕೊಳ್ಳುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು.

ಸಿಂಹ ರಾಶಿ:

ನಿಮಗೆ ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ಕೂಡಿಟ್ಟ ಹಣವನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಿದ್ದೀರಿ. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ.

ಕನ್ಯಾ ರಾಶಿ:

ಹಣಕ್ಕಾಗಿ ಕಾದು ಸಮಯವೂ ಹಾಳು. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಸಹೋದ್ಯೋಗಿಗಳ ಜತೆಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗುತ್ತದೆ. ನಿಮ್ಮ ವಿರುದ್ಧ ದೂರು ಹೇಳುವ ಸಾಧ್ಯತೆ ಕೂಡ ಇದೆ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು.

ತುಲಾ ರಾಶಿ:

ಕ್ರೀಡಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ವೃತ್ತಿಗೆ ಸಂಬಂಧಿಸಿದ ಸಲಹೆಗಳನ್ನು ಪಡೆಯುವಿರಿ. ವಿದ್ಯುತ್ ಉಪಕರಣಗಳನ್ನು ಬಳಕೆ ಮಾಡುತ್ತಿರುವವರು ಇತರರಿಗೆ ಅದನ್ನು ನೀಡಬೇಕಾದೀತು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಸಂಗಾತಿಯ ಜೊತೆ ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಆಸ್ತಿಯನ್ನು ಅನ್ಯರಿಗೆ ಕೊಡುವ ಚಿಂತನೆಯೂ ನಿಮ್ಮ ಮನಸ್ಸಿಗೆ ಬರಬಹುದು.

ವೃಶ್ಚಿಕ ರಾಶಿ:

ಸರಿಯಾದ ಸಮಯಕ್ಕೆ ಯೋಗ್ಯ ತೀರ್ಮಾನದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ದೈವಾನುಗ್ರಹ ನಿಮ್ಮ ಮೇಲಿರಲಿದೆ. ಆದರೂ ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.‌ ಮಕ್ಕಳ ವಿಚಾರದಲ್ಲಿ ನಿಷ್ಪಕ್ಷಪಾತಿಯಾಗುವುದು ಒಳ್ಳೆಯದು.

ಧನು ರಾಶಿ:

ಯೋಗ್ಯವಾಗಿ ದುಡಿಯುವ ನಿಮ್ಮ ಗುಣವು ಅಧಿಕಾರಿಗಳ ಗಮನಕ್ಕೆ ಬರಲಿದ್ದು ಮೆಚ್ಚುಗೆಯ ಸಿಗಲಿದೆ. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಸಮೀಪದ ಬಂಧುಗಳ ವಿಯೋಗವೂ ಆಗಬಹುದು. ಸುಲಭಕ್ಕೆ ಸಿಗದ ವಸ್ತುಗಳನ್ನು ಬಲದಿಂದ ಪಡೆಯುವತ್ತ ಚಿಂತಿಸುವಿರಿ.

ಮಕರ ರಾಶಿ:

ಸಣ್ಣ ವಿಷಯಗಳಿಗೆ ಎಲ್ಲರನ್ನೂ ದೂಷಿಸುತ್ತಾ ಇರುವುದು ಉತ್ತಮ ನಾಯಕನ ಲಕ್ಷಣ ಅಲ್ಲ. ಉದ್ಯೋಗ ಸ್ಥಳದಲ್ಲಿನ ದೌರ್ಬಲ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ವಿನೋದಕ್ಕೆಂದು ಆಡಿದ ಮಾತು ಗಂಭೀರಸ್ವರೂಪವನ್ನು ಪಡೆದೀತು. ನಿಮ್ಮವರೇ ನಿಮ್ಮ‌ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ.

ಕುಂಭ ರಾಶಿ:

ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ನಿಮ್ಮ ಅತಿಯಾದ ಉತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರನ್ನು ತಲುಪಿ ಮಹತ್ತರ ಅಪಾಯವನ್ನು ಕೊಡಬಹುದು. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ.

ಮೀನ ರಾಶಿ:

ಹೊಸ ಯೋಜನೆಯಲ್ಲಿ ಪುನಃ ಪುನಃ ವಿಘ್ನ ಕಂಡುಬರುವುದು. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾದೀತು. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ‌ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು.‌ ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವೃದ್ಧಿ, ಕರಣ : ಬಾಲವ, ಸೂರ್ಯೋದಯ – 06 – 38 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:37 – 11:06, ಯಮಗಂಡ ಕಾಲ 14:05 – 15:34, ಗುಳಿಕ ಕಾಲ 06:39 – 08:08

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 7ರ ದಿನಭವಿಷ್ಯ

ಆಸ್ತಿ ವಿಚಾರ ಮತ್ತು ಸಂಗಾತಿಯ ಬೇಡಿಕೆಗಳನ್ನು ನಿಭಾಯಿಸಲು ಈ ದಿನ ಹಸಿರು ಬಣ್ಣದ ವಸ್ತ್ರ ಧರಿಸಿ. ಪಕ್ಷಿಗಳಿಗೆ ಧಾನ್ಯಗಳನ್ನು ಹಾಕುವುದು ನಿಮಗೆ ಅದೃಷ್ಟ ತರಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸ್ನೇಹಿತರು- ಸಂಬಂಧಿಗಳ ಆಹ್ವಾನದ ಮೇಲೆ ಅವರ ಮನೆಗಳಿಗೆ ಊಟ ಅಥವಾ ತಿಂಡಿಗೋ ಅಥವಾ ಗೆಟ್- ಟು- ಗೆದರ್ ಗೆ ತೆರಳುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಈ ದಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಅದೇ ರೀತಿ ಕೆಲವರು ರೆಸಾರ್ಟ್ ಅಥವಾ ಹೋಮ್ ಸ್ಟೇಗಳಿಗೆ ತೆರಳುವಂಥ ಯೋಗ ಇದೆ. ಅನಿರೀಕ್ಷಿತವಾಗಿ ಹಣದ ಹರಿವು ಉತ್ತಮಗೊಳ್ಳಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಬಹಳ ಸಮಯದಿಂದ ಮಾರಾಟ ಆಗದೆ ಉಳಿದಿದ್ದ ವಸ್ತುಗಳು ವ್ಯಾಪಾರಿಗಳಿಗೆ ಮಾರಾಟ ಆಗುವ ಸಾಧ್ಯತೆಗಳಿವೆ. ಹೊಸದಾಗಿ ಗ್ರಾಹಕರು ದೊರೆಯಲಿದ್ದಾರೆ. ಸ್ವಭಾವತಃ ಸಿಟ್ಟಿನವರಾಗಿದ್ದರೆ ಈ ದಿನ ಸಾಧ್ಯವಾದಷ್ಟೂ ಸಮಾಧಾನದಿಂದ ಇರುವುದು ಉತ್ತಮ. ಹೀಗೆ ಇರುವುದರಿಂದ ಹಲವು ಬಗೆಯಲ್ಲಿ ಅನುಕೂಲಗಳು ಆಗಬಹುದು. ಒಂದೇ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಆಪ್ತರಿಂದ ಎರಡು ವಿಭಿನ್ನ ಅಭಿಪ್ರಾಯ, ದೃಷ್ಟಿಕೋನಗಳು ವ್ಯಕ್ತ ಆಗಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮದೇ ತಪ್ಪಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇರುವುದಿಲ್ಲ. ವಿತಂಡ ವಾದವನ್ನು ಹೂಡಲಿದ್ದೀರಿ. ಹೇಗಿದ್ದರೂ ಸಾಲ ದೊರೆಯುತ್ತದೆ ಎಂಬ ಕಾರಣಕ್ಕೋ ಅಥವಾ ಬಡ್ಡಿ ಇಲ್ಲದ ಆಫರ್ ಏನೋ ಇದೆ ಎಂಬ ಕಾರಣಕ್ಕೋ ಅಗತ್ಯ ಇಲ್ಲದಿದ್ದರೂ ಕೆಲವು ವಸ್ತುಗಳನ್ನು ಖರೀದಿಸುವುದಕ್ಕೆ ಮುಂದಾಗಲಿದ್ದೀರಿ. ಆಪ್ತ ಸ್ನೇಹಿತರೊಬ್ಬರ ಜತೆಗೆ ಮಾತನಾಡುವಾಗ ಬಳಸುವಂಥ ಪದಗಳಿಂದ ಅವರಿಗೆ ಬಹಳ ಬೇಸರ ಆಗಬಹುದು.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗೀ ಆಗುವುದರಿಂದ ನಿಮ್ಮ ಮನಸ್ಸಿಗೆ ತೃಪ್ತಿ- ಸಮಾಧಾನ ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪರಿಚಿತರು ದಿಢೀರನೇ ನಿಮಗೆ ಕೆಲವು ವಸ್ತುಗಳನ್ನು ಉಚಿತವಾಗಿ ನೀಡಬಹುದು ಅಥವಾ ತಾವು ಕೆಲವು ಕಾಲ ದೂರದ ಊರಿಗೆ ಹೋಗುತ್ತಿದ್ದೇವೆ, ನಮ್ಮ ಕಾರು ಅಥವಾ ಬೈಕ್/ ಸ್ಕೂಟರ್ ಅನ್ನು ನೀವು ಬಳಸಿಕೊಳ್ಳಿ ಅಂತ ಹೇಳಬಹುದು. ಸಂಗಾತಿಯು ನಿಮ್ಮ ಬಳಿ ಕೆಲವು ಬೇಡಿಕೆಗಳನ್ನು ಇಡುವ ಸಾಧ್ಯತೆಗಳಿವೆ. ತವರು ಮನೆಯಿಂದ ಹೆಣ್ಣುಮಕ್ಕಳಿಗೆ ಬರಬೇಕಾದ ಆಸ್ತಿಯ ಪಾಲು ಏನಾದರೂ ಇದ್ದಲ್ಲಿ ಅದರ ಬಗ್ಗೆ ಒಂದು ತೀರ್ಮಾನ ಆಗುವಂಥ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮೂವತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸು ಮಕ್ಕಳು ಯಾರಿಗೆ ಇದ್ದಾರೋ ಅಂಥವರು ಮಕ್ಕಳ ಜತೆಗೆ ಮಾತನಾಡುವಾಗ ಕೋಪ ಮಾಡಿಕೊಳ್ಳದೇ ಇರುವುದು ತುಂಬ ಮುಖ್ಯ. ಮನೆ- ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವೇ ಇರಬಹುದು ಅಥವಾ ಮದುವೆ ಮತ್ಯಾವುದೇ ವಿಷಯ ಇರಬಹುದು, ಅದರ ಬಗ್ಗೆ ನಿಮಗೆ ಸಮ್ಮತಿ ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ, ಬದಲಿಗೆ ವಾದ- ವಾಗ್ವಾದಗಳನ್ನು ಮಾಡಿಕೊಳ್ಳಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 7ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ದೇವಸ್ಥಾನಕ್ಕೆ ತೆರಳಿ ದರ್ಶನವನ್ನು ಮಾಡಿ. ಈ ದಿನ ಸಾಧ್ಯವಾದರೆ ಕೆಂಪು ಬಣ್ಣದ ಬಟ್ಟೆ ಧರಿಸಬೇಡಿ ಮತ್ತು ಮೌನವಾಗಿರಲು ಪ್ರಯತ್ನಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಸಂಗಾತಿಯ ಅನಾರೋಗ್ಯ ಸಮಸ್ಯೆಗಳು ಆತಂಕಕ್ಕೆ ಕಾರಣ ಆಗಬಹುದು. ಒಂದು ವೇಳೆ ಈಗಾಗಲೇ ವೈದ್ಯರ ಬಳಿ ತೋರಿಸಿಕೊಂಡಿದ್ದರೂ ಸಮಸ್ಯೆ ಉಲ್ಬಣ ಆಗಿ, ಆತಂಕ ಸೃಷ್ಟಿ ಆಗಬಹುದು. ನಿರಾಂತಕವಾಗಿ ಆಗಬಹುದು ಎಂದುಕೊಂಡಿದ್ದ ಕೆಲವು ಕೆಲಸಗಳಿಗೆ ಅಡೆತಡೆಗಳು ಕಾಣಿಸಿಕೊಳ್ಳಬಹುದು. ಇಷ್ಟು ಸಮಯ ನಿಮ್ಮ ಜತೆಗೂಡಿ ವ್ಯವಹಾರ ಮಾಡುವುದಾಗಿ ಭರವಸೆ ನೀಡಿದ್ದ ವ್ಯಕ್ತಿಯು ತನ್ನ ತೀರ್ಮಾನವನ್ನು ಬದಲಿಸಿಕೊಂಡಿರುವುದಾಗಿ ಹೇಳಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮ ಆಪ್ತರ ಜೊತೆಗೆ ಕೆಲ ದಿನಗಳ ಮಟ್ಟಿಗೆ ಮಾತನ್ನೇ ಬಿಡುವ ಹಂತಕ್ಕೆ ಹೋಗಬಹುದು. ಸಲೂನ್ ಹೊಸದಾಗಿ ಶುರು ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಹಣಕಾಸಿನ ಅನುಕೂಲಗಳು ಒದಗಿ ಬರಲಿವೆ. ಮನೆಯ ಮಟ್ಟಿಗೆ ಮಾಡಬೇಕು ಎಂದುಕೊಂಡಿದ್ದ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಮಾಡುವ ಸನ್ನಿವೇಶ ಸೃಷ್ಟಿ ಆಗಲಿದೆ. ಉದ್ಯೋಗ ಬದಲಾವಣೆಗೆ ಕೆಲವು ಅವಕಾಶಗಳು ಇವೆ ಎಂಬ ಬಗ್ಗೆ ಸ್ನೇಹಿತರು ಗಮನಕ್ಕೆ ತರಲಿದ್ದಾರೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನೀವಾಗಿಯೇ ವಹಿಸಿಕೊಂಡ ಜವಾಬ್ದಾರಿಗಳು ವಿಪರೀತ ಭಾರವಾಗಿ ಕಾಡುವುದಕ್ಕೆ ಆರಂಭಿಸುತ್ತದೆ. ಇಷ್ಟು ಸಮಯದಲ್ಲಿ ಹಣ ನೀಡುತ್ತೇನೆ ಎಂದು ನೀವು ಯಾರಿಗಾದರೂ ಮಾತು ನೀಡಿದ್ದಲ್ಲಿ ಅದು ನೀಡುವುದಕ್ಕೆ ಸಾಧ್ಯವಾಗದೆ ಅವರಿಂದ ನಿಂದೆ- ಆರೋಪಗಳನ್ನು ಕೇಳಿಸಿಕೊಳ್ಳಬೇಕಾಗಲಿದೆ. ಇನ್ನು ನಿಮ್ಮಲ್ಲಿ ಕೆಲವರಿಗೆ ನಿದ್ದೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಕೆಟ್ಟ ಕನಸುಗಳು ಬೀಳಬಹುದು ಅಥವಾ ಪದೇಪದೇ ಎಚ್ಚರವಾಗಿ, ಪೂರ್ಣ ಪ್ರಮಾಣದಲ್ಲಿ ನಿದ್ದೆ ಮಾಡುವುದಕ್ಕೆ ಸಾಧ್ಯವಾಗದಿರಬಹುದು.

ಲೇಖನ- ಸ್ವಾತಿ ಎನ್.ಕೆ.

Source link

ಕಲ್ಲು ತೂರಾಟ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ: ಮಸೀದಿ ಕಾಂಪೌಂಡ್‌ ಮೇಲೆ ಮಗನಿಂದ ಜೈ ಶ್ರೀರಾಮ್‌ ಬರಹ ಬರೆಸಿದ ತಂದೆ

ಬಾಗಲಕೋಟೆ, (ಮಾರ್ಚ್ 03): ಶಿವಾಜಿ ಜಯಂತಿ ಮೆರವಣಿ ವೇಳೆ ಕಲ್ಲು ತೂರಾಟ ಪ್ರಕರಣ (Stone Pelting Case) ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ (Bagalkot) ಮತ್ತೊಂದು ಕೋಮು ಸೌಹಾರ್ದತೆ ಹಾಳುವ ಮಾಡುವ ಘಟನೆ ನಡೆದಿದೆ. ಹೌದು… ಮಸೀದಿ ಗೋಡೆ ಮೇಲೆ ವ್ಯಕ್ತಿಯೋರ್ವ ತನ್ನ ಮಗನ ಕೈಯಿಂದ ಜೈ ಶ್ರೀರಾಮ್‌ ಎಂದು ಬರೆಯಿಸಿದ್ದು, ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್‌ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಯಮನೂರಿ ಹಾಗೂ ಆತನ ಮಗನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅಲ್ಲದೇ ಗೋಡೆ ಮೇಲೆ ಬರೆದಿದ್ದ ಬರಹವನ್ನು ನೀರು ಹಾಕಿ ಅಳಿಸಿ ಸಮಾಧಾನಪಡಿಸಿದ್ದಾರೆ. 12 ವರ್ಷದ ಮಗುವಿನ ಕೈಯಿಂದ ಮಸೀದಿ ಗೋಡೆ ಮೇಲೆ ಜೈ ಶ್ರೀರಾಮ್ ಎಂದು ಬರೆದಿರುವ ಸಂಬಂಧ ಲಾಡಖಾನ್ ಎಂಬುವರು ನೀಡಿದ ದೂರಿನ ಮೇರೆಗೆ ನವನಗರ ಠಾಣೆಯಲ್ಲಿ FIR ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಂಡಿರುವ ಪೊಲೀಸರು, ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು

ಮೊನ್ನೆ ಅಷ್ಟೇ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಲಿಮರು ಕಲ್ಲು, ಚಪ್ಪಲಿ ತೂರಿದ್ದರು. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಹಿಂದೂ ಮುಸ್ಲಿಮರ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.  ಹಿಂದೂ ಸಂಘಟನೆಗಳು ಬಿಜೆಪಿ ನಾಯಕರು ಸಿಡಿದೆದ್ದು ಘಟನೆ ನಡೆದ ಸ್ಥಳದಿಂದಲೇ ಮತ್ತೆ ಶಿವಾಜಿ ಮೆರವಣಿಗೆ ಮಾಡುತ್ತೇವೆಂದು ಪಟ್ಟು ಹಿಡಿದಿದ್ದರು.  ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ನವದೆಹಲಿ, ಮಾರ್ಚ್ 6: ಶ್ರೀಲಂಕಾದ ಬಳಿ ಅಮೆರಿಕ ಇರಾನಿನ ಐರಿಸ್ ದೇನಾ (IRIS Dena) ಹಡಗಿನ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸಾಕಷ್ಟು ಜನರು ಮೃತಪಟ್ಟಿದ್ದರು. ಇದಕ್ಕೂ ಕೆಲವು ದಿನಗಳ ಮೊದಲು ಇರಾನ್ (Iran War) ಕೇರಳದ ಕೊಚ್ಚಿಯಲ್ಲಿ ಮತ್ತೊಂದು ಇರಾನಿನ ಹಡಗಾದ ಐರಿಸ್ ಲವನ್ ಅನ್ನು ನಿಲ್ಲಿಸಲು (ಡಾಕ್ ಮಾಡಲು) ಭಾರತವನ್ನು ಸಂಪರ್ಕಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೊಚ್ಚಿಯಲ್ಲಿ ಆ ಹಡಗಿನ ಡಾಕಿಂಗ್​ಗೆ ಭಾರತವೂ ಅವಕಾಶ ನೀಡಿತ್ತು. ಈಗಲೂ ಇರಾನಿನ ಆ ಹಡಗು ಕೊಚ್ಚಿಯಲ್ಲಿಯೇ ಇದೆ.

ಫೆಬ್ರವರಿ 28ರಂದು ಐರಿಸ್ ಲವನ್ ಹಡಗಿನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಉಂಟಾದ ನಂತರ ಇರಾನಿನ ಕಡೆಯಿಂದ ಭಾರತಕ್ಕೆ ವಿನಂತಿ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಮಾರ್ಚ್ 1ರಂದು ಆ ಹಡಗಿಗೆ ಭಾರತದಿಂದ ಡಾಕಿಂಗ್‌ಗೆ ಅನುಮೋದನೆ ನೀಡಲಾಯಿತು. ಆ ಐರಿಸ್ ಲವನ್‌ನ 183 ಸಿಬ್ಬಂದಿಗೆ ಕೊಚ್ಚಿಯ ನೌಕಾ ಸೌಲಭ್ಯಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ

“ಶ್ರೀಲಂಕಾದ ದಕ್ಷಿಣಕ್ಕೆ ಐರಿಸ್ ದೇನಾ ಮೇಲಿನ ದಾಳಿ ನಡೆಯುವ ಕೆಲವು ದಿನಗಳ ಮೊದಲು, ಇರಾನ್ ಭಾರತವನ್ನು ಇರಾನ್ ಹಡಗಾದ ಐರಿಸ್ ಲವನ್ ಅನ್ನು ಕರೆದೊಯ್ಯಲು ಸಂಪರ್ಕಿಸಿತ್ತು. ಇದು ಅಂತಾರಾಷ್ಟ್ರೀಯ ಫ್ಲೀಟ್ ರಿವ್ಯೂಗಾಗಿ ಈ ಪ್ರದೇಶಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ. “ಐರಿಸ್ ಲವನ್ ಮಾರ್ಚ್ 4ರಂದು ಕೊಚ್ಚಿಗೆ ತಲುಪಿತ್ತು. ಈ ಸಂದರ್ಭದಲ್ಲಿ ಅದರ 183 ಜನರ ಸಿಬ್ಬಂದಿಯನ್ನು ಪ್ರಸ್ತುತ ಕೊಚ್ಚಿಯಲ್ಲಿರುವ ನೌಕಾ ಸೌಲಭ್ಯಗಳಲ್ಲಿ ಇರಿಸಲಾಗಿದೆ” ಎಂದು ಭಾರತದ ನೌಕಾಪಡೆಯ ಮೂಲಗಳು ತಿಳಿಸಿವೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ, ಈ ವಾರ ಶ್ರೀಲಂಕಾ ಬಳಿ ಅಂತಾರಾಷ್ಟ್ರೀಯ ನೀರಿನಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆಯಿಂದ ಐರಿಸ್ ದೇನಾ ಮುಳುಗಿತ್ತು. ಒಂದು ಹೆಲಿಕಾಪ್ಟರ್ ಅನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಭಾರೀ ಬಂದೂಕುಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಟಾರ್ಪಿಡೊಗಳು ಇದ್ದವು. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಅದು ಇರಾನ್‌ಗೆ ಹಿಂತಿರುಗುತ್ತಿತ್ತು.

ಇದನ್ನೂ ಓದಿ: ಕುವೈತ್​​ನಲ್ಲಿರುವ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

ಈ ಘಟನೆಯಿಂದ 87 ನಾವಿಕರು ಸಾವನ್ನಪ್ಪಿದ್ದರು. ಆದರೆ, ಶ್ರೀಲಂಕಾ 32 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯ ನಂತರ, ಭಾರತೀಯ ನೌಕಾಪಡೆಯು ತುರ್ತು ಕರೆಗೆ ಸ್ಪಂದಿಸಿ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಐಎನ್ಎಸ್ ತರಂಗಿಣಿಯನ್ನು ನಿಯೋಜಿಸಿತ್ತು. ನೌಕಾಪಡೆಯು ಐಎನ್ಎಸ್ ಇಕ್ಷಾಕ್ ಅನ್ನು ಸಹ ನಿಯೋಜಿಸಿತ್ತು.

ಐರಿಸ್ ದೇನಾ ಮೇಲಿನ ಅಮೆರಿಕದ ದಾಳಿಯನ್ನು ಇರಾನ್ ಟೀಕಿಸಿದ್ದು, ಹಡಗು ಯಾವುದೇ ಎಚ್ಚರಿಕೆ ಇಲ್ಲದೆ ನಾಶವಾಗಿದೆ ಮತ್ತು ಅದು ಯುದ್ಧ ಸಾಮಗ್ರಿಗಳನ್ನು ಸಹ ಹೊತ್ತೊಯ್ಯುತ್ತಿರಲಿಲ್ಲ ಎಂದು ಹೇಳಿದೆ. “ಅಮೆರಿಕನ್ ಜಲಾಂತರ್ಗಾಮಿ ಈ ಹಡಗಿಗೆ ಯಾವುದೇ ಪೂರ್ವ ಎಚ್ಚರಿಕೆ ನೀಡಲಿಲ್ಲ ಮತ್ತು ಹಠಾತ್ ದಾಳಿಯನ್ನು ನಡೆಸಿತು. ಇದರಿಂದಾಗಿ ಹಡಗು ಸ್ಫೋಟಗೊಂಡಿತು” ಎಂದು ಮುಂಬೈನಲ್ಲಿರುವ ಇರಾನ್‌ನ ಕಾನ್ಸುಲ್ ಜನರಲ್ ಸಯೀದ್ ರೆಜಾ ಮೊಸಾಯೆಬ್ ಮೋಟ್ಲಾಗ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ ಭಾರತ ಹಾಗೂ ಕಿವೀಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್​ನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾವ ತಂಡ ಫೈನಲ್ ಕಾಳಗದಲ್ಲಿ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗಂಟೆಗೆ ಪ್ರಾರಂಭವಾಗುತ್ತದೆ?

ವಿಶ್ವಕಪ್ ಫೈನಲ್ ಪಂದ್ಯ ಮಾರ್ಚ್ 8 ರ ಭಾನುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?

ಈ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ OTT ಯಲ್ಲಿ ಎಲ್ಲಿ ವೀಕ್ಷಿಸಬಹುದು?

ಇಡೀ ಟಿ20 ವಿಶ್ವಕಪ್‌ನಂತೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್‌ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ.

IND vs ENG: 65 ಕೋಟಿಗೂ ಅಧಿಕ; ವಿಶ್ವ ದಾಖಲೆ ಬರೆದ ಭಾರತ- ಇಂಗ್ಲೆಂಡ್ ಪಂದ್ಯ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version