ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರ! – Kannada News | Barbers Refuse to Serve Dalits; Government Opens Salon in Singatalur Village, Gadag

ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭImage Credit source: Google

ಗದಗ, ಫೆಬ್ರವರಿ 28: ದಲಿತರಿಗೆ ಕ್ಷೌರ ಸೇವೆ ನೀಡಲು ನಿರಾಕರಿಸಿದ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರ ಗ್ರಾಮದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ ಮಾಡಲಾಗಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ ಹೆಸರಿನಲ್ಲಿ ದಲಿತರಿಗೆ ಕ್ಷೌರ ಸೇವೆ ನೀಡುವುದನ್ನು ನಿರಾಕರಿಸುತ್ತಿದ್ದವು. ಅಚ್ಚರಿ ಎಂಬಂತೆ ಇದಕ್ಕೆ ದಲಿತ ಸಮುದಾಯದವರ ಮೌನದ ಸಮಮತವೂ ಪೀಳಿಗೆಗಳಿಂದಲೂ ಇತ್ತು ಎನ್ನಲಾಗಿದೆ.

ಇನ್ನು ಗ್ರಾಮದಲ್ಲಿದ್ದ ಏಕೈಕ ಕ್ಷೌರದಂಗಡಿಗೆ ದಲಿತ ಯುವಕರು ಭೇಟಿ ನೀಡಲು ಆರಂಭಿಸಿದ್ದರು. ಸಲೂನ್​​ನ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಆರಂಭಿಸಿದ್ದೀರಿ. ಹೀಗಾಗಿ ಎಲ್ಲ ಸಮುದಾಯದವರಿಗೂ ಸೇವೆ ನೀಡಬೇಕು ಎಂದು  ಯುವಕರು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಇತ್ತೀಚೆಗೆ ಶಾಪ್​​ನ ಮುಚ್ಚಲಾಗಿತ್ತು. ಹೀಗಾಗಿ ಜನರು ಹೇರ್​​ ಕಟಿಂಗ್​​, ಶೇವಿಂಗ್​​ ಮಾಡಿಸಿಕೊಳ್ಳಬೇಕಿದ್ದಲ್ಲಿ ನೆರೆಯ ಗ್ರಾಮಗಳಿಗೆ ತೆರಳಬೇಕಾದ ಸ್ಥಿತಿ ಉದ್ಭವಿಸಿತ್ತು. ಸಾಮಾಜಿಕ ಕಲ್ಯಾಣ ಮತ್ತು ಆದಾಯ ಇಲಾಖೆ ಅಧಿಕಾರಿಗಳು ಹಡಪದ ಸಮುದಾಯದವರನ್ನು ಮನವೊಲಿಸಿ ಅಂಗಡಿಗಳನ್ನು ತೆರೆಯಲು ಹಾಗೂ ಎಲ್ಲಾ ಸಮುದಾಯದವರಿಗೆ ಸೇವೆ ನೀಡಲು ಪ್ರಯತ್ನಿಸಿದ್ದರು. ಆದರೆ ಯತ್ನ ಫಲಿಸದ ಹಿನ್ನೆಲೆಯಲ್ಲಿ ಕ್ಷೌರ ಮಾಡಲು ಒಪ್ಪದವರಿಗೆ ನೋಟಿಸ್​​ಗಳನ್ನು ನೀಡಿದರೂ, ಅವರು ತಮ್ಮ ಹಠ ಬಿಟ್ಟಿಲ್ಲ. ಕೊನೆಗೆ ಅನಿವಾರ್ಯವಾಗಿ ಅಧಿಕಾರಿಗಳು ಸರ್ಕಾರಿ ಕ್ಷೌರದಂಗಡಿ ತೆರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್

ಫೆಬ್ರವರಿ 26ರಂದು ತಹಶೀಲ್ದಾರ್ ಎರ್ರಿಸ್ವಾಮಿ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮದಲ್ಲಿ ಹೊಸ ಕ್ಷೌರ ಅಂಗಡಿಯನ್ನು ಉದ್ಘಾಟಿಸಲಾಗಿದೆ. ಪಕ್ಕದ ತಿಪ್ಪಾಪೂರ ಗ್ರಾಮದ ಬಸವರಾಜ್ ಹಡಪದ ಅವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಂಗಡಿ ನೀಡಿ ಕ್ಷೌರ ಮಾಡಲು ಅನುವು ಮಾಡಿಕೊಡಲಾಗಿದೆ. ಆ ಮೂಲಕ ಗ್ರಾಮದಲ್ಲಿ ಎಲ್ಲ ಸಮುದಾಯದವರಿಗೂ ಕ್ಷೌರ ಮಾಡಿಸಕೊಳ್ಳಲು ಅಧಿಕಾರಿಗಳು ನೆರವಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Daily Devotional: ಅತೀರಥ ಮಹಾರಥರು ಅಂದರೆ ಯಾರು ಗೊತ್ತಾ? – Kannada News | Daily Devotional: Decoding the Significance of Athiratha and Maharatha in Ancient Texts

ಬೆಂಗಳೂರು, ಫೆಬ್ರವರಿ​ 28: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅತೀರಥ ಮಹಾರಥರು ಅಂದರೆ ಯಾರು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ನಿತ್ಯ ಜೀವನದಲ್ಲಿ ನಾವು ಬಳಸುವ ಮಾತುಗಳು ಕೆಲವೊಮ್ಮೆ ವ್ಯಂಗ್ಯದಿಂದ ಅಥವಾ ಹೊಗಳಿಕೆಯಿಂದ ಕೂಡಿರುತ್ತವೆ. ಅತಿರಥ ಮಹಾರಥ ಎಂಬ ಪದಗಳೂ ಇವುಗಳಲ್ಲಿ ಸೇರಿವೆ. ಆದರೆ, ಈ ಪದಗಳ ಆಳವಾದ ಮತ್ತು ನಿಜವಾದ ಅರ್ಥವನ್ನು ಅನೇಕರು ತಿಳಿದಿಲ್ಲ. ಇವು ಕೇವಲ ಆಡುಭಾಷೆಯ ಭಾಗವಾಗಿರದೆ, ಪ್ರಾಚೀನ ಇತಿಹಾಸ ಮತ್ತು ಪುರಾಣಗಳಲ್ಲಿ ಯುದ್ಧದಲ್ಲಿ ಯೋಧರ ಸಾಮರ್ಥ್ಯವನ್ನು ವಿವರಿಸಲು ಬಳಸಲಾಗುವ ಪ್ರಮುಖ ಶ್ರೇಣಿಗಳಾಗಿವೆ.

ಕುರುಕ್ಷೇತ್ರ ಯುದ್ಧ, ರಾಮಾಯಣದಂತಹ ಮಹಾಕಾವ್ಯಗಳಲ್ಲಿ ಈ ಪದಗಳು ಪ್ರಮುಖ ಪಾತ್ರ ವಹಿಸುತ್ತವೆ. ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ನಿರ್ಧರಿಸಲಾಗುತ್ತದೆ. ಈ ಶ್ರೇಣಿಗಳು ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ ಎಂದು ಐದು ವಿಭಾಗಗಳನ್ನು ಒಳಗೊಂಡಿವೆ. ಇವು ಕೇವಲ ಪದಗಳಲ್ಲ, ಬದಲಿಗೆ ಮಹಾ ವ್ಯಕ್ತಿಗಳ ಅಗಾಧ ಶಕ್ತಿ ಮತ್ತು ಸಾಮರ್ಥ್ಯದ ಪ್ರತೀಕಗಳಾಗಿವೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Source link

Horoscope Today 28 February​: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ ವಿಶ್ವೇಶ್ವರ ರಥೋತ್ಸವಗಳು ನಡೆಯಲಿವೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರ ಅದೃಷ್ಟ, ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಸಂಬಂಧಗಳು ಮತ್ತು ಪರಿಹಾರ ಮಂತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

 

Source link

ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್​​ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed

ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್​​ಎಲ್​​ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ.

ಇಬ್ಬರೂ ಬೇರೆ ಬೇರೆ ಚಾನೆಲ್​ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು ನಿಮಗೆ ಅಚ್ಚರಿ ಆಗಬಹುದು. ಅದಕ್ಕೂ ಉತ್ತರ ಇದೆ. ಈ ಮೊದಲು ರಾಧಾ ಭಗವತಿ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಹೆಸರಿನ ಪಾತ್ರ ಮಾಡುತ್ತಿದ್ದರು. ಮಲ್ಲಿಯದ್ದು, ಜೆಡಿಯ ಪತ್ನಿಯ ಪಾತ್ರ. ‘ಭಾರ್ಗವಿ ಎಲ್​​ಎಲ್​​ಬಿ’ ಪಾತ್ರ ಸಿಕ್ಕ ಬಳಿಕ ಅವರು ಧಾರಾವಾಹಿಯಿಂದ ಹೊರ ನಡೆದರು.

‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸುವಾಗಲೇ ಇವರ ಮಧ್ಯೆ ಪ್ರೀತಿ ಮೂಡಿತ್ತು ಎಂದು ಹೇಳಲಾಗುತ್ತಾ ಇದೆ. ಸದ್ಯ ಇವರು ಹೊಸ ಬಾಳಿಗೆ ಕಾಲಿಡಲು ರೆಡಿ ಆದ ವಿಷಯ ಅಭಿಮಾನಿಗಳಿಗೆ ಖುಷಿ ಹಾಗೂ ಅಚ್ಚರಿ ಎರಡನ್ನೂ ತಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿದೆ.

ಸದ್ಯ ರಾಣವ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಹಾರ ಹಾಕಿ ನಿಂತ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ‘ಫೈನಲಿ’ ಎಂಬ ಕ್ಯಾಪ್ಶನ್ ಕೊಟ್ಟಿದ್ದಾರೆ. ಇವರು ಸದ್ದಿಲ್ಲದೆ ಮದುವೆ ಆದರಾ ಎಂಬ ಪ್ರಶ್ನೆ ಮೂಡಿತ್ತು. ಆದರೆ, ಸದ್ಯ ಇವರು ನಿಶ್ಚಿತಾರ್ಥ ಮಾತ್ರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ

ರಾಣವ್ ಗೌಡ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಪಾತ್ರ ಮಾಡುತ್ತಿದ್ದಾರೆ. ಇದರ ಜೊತೆಗೆ ಜೀ ಪವರ್​​ನ ‘ಶುಭಸ್ಯ ಶೀಘ್ರಂ’ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ. ಇನ್ನು, ರಾಧಾ ಅವರು ಭಾರ್ಗವಿ ಆಗಿ ಮಿಂಚುತ್ತಿದ್ದಾರೆ. ಈಗ ತೆರೆ ಮೇಲಿನ ಜೋಡಿ ಒಂದಾಗಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ – Kannada News | Engaged Woman Dies by Suicide in Nelamangala; Was Astrologer’s Prediction the Trigger?

ನೆಲಮಂಗಲ, ಫೆಬ್ರವರಿ 28: ಇಷ್ಟಪಟ್ಟ ಹುಡುಗನ ಜೊತೆ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆತಂಕಕಾರಿ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿ ಎಂಇಐ ಲೇಔಟ್​​ನಲ್ಲಿ ನಡೆದಿದೆ. ವಿದ್ಯಾಜ್ಯೋತಿ (29) ಮೃತಳಾಗಿದ್ದು, ಕೆಲ ದಿನಗಳ ಹಿಂದೆ ಈಕೆ ಅಲ್ಪಾಯುಷಿ ಎಂದು ಜ್ಯೋತಿಷಿಯೋರ್ವರು ಹೇಳಿದ್ದರಂತೆ. ಇದೇ ಕಾರಣಕ್ಕೆ ಹೆದರಿ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ವಿದ್ಯಾಜ್ಯೋತಿ ಅಲ್ಪಾಯುಷಿ ಎಂದಿದ್ದ ಜ್ಯೋತಿಷಿ, ಇದಕ್ಕಾಗಿ 9 ದಿನಗಳ ಪೂಜೆ ಮಾಡುವಂತೆ ತಾಕೀತು ಮಾಡಿದ್ದರು. 9ನೇ ದಿನ ದೇವರಿಗೆ ತಾಳಿ ಕೊಡುವಂತೆ ತಿಳಿಸಿದ್ದರು. ಈ ಹಿನ್ನೆಲೆ ಮಾರಮ್ಮ ದೇವರಿಗೆ ತಾಳಿ ಕೊಡಲು ಕುಟುಂಬ ಸಿದ್ಧತೆ ನಡೆಸಿತ್ತು. ಊಟದ ನಂತರ ಯುವತಿ ರೂಮ್​ ಸೇರಿದ್ದು, ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಈಕೆ ವರ್ಕ್​​ ಫ್ರಾಂ ಹೋಮ್​​ ಮಾಡುತ್ತಿದ್ದಳು. ಹೀಗಾಗಿ ಆಕೆ ಕೆಲಸ ಮಾಡುತ್ತಿರಬಹುದೆಂದು ಮನೆಯವರು ಭಾವಿಸಿದ್ದರು. ಸಂಜೆ ತಾಯಿ ಕರೆದರೂ ಆಕೆ ಹೊರಬಂದಿರಲಿಲ್ಲ. ಬಳಿಕ 8 ಗಂಟೆ ವೇಳೆಗೆ ದೇವಸ್ಥಾನಕ್ಕೆ ತೆರಳಬೇಕಿದ್ದ ಹಿನ್ನೆಲೆ ವಿದ್ಯಾಜ್ಯೋತಿಯನ್ನು ತಾಯಿ ಮತ್ತೆ ಕರೆದಿದ್ದಾರೆ. ಈ ವೇಳೆಯೂ ಆಕೆ ರೂಮಿನ ಬಾಗಿಲು ತೆಗೆಯದ ಹಿನ್ನೆಲೆ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬ್ರೇಕ್ ಫೇಲ್​ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ; ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ

ಮೃತ ವಿದ್ಯಾಜ್ಯೋತಿಯನ್ನು ಆಕೆಯ ಪೋಷಕರು ಅವಳ ಇಷ್ಟದಂತೆ ಬೆಳೆಸಿದ್ದರು. ಕೊಡಗು ಮೂಲದ ಯುವಕನನ್ನ ಈಕೆ ಪ್ರೀತಿಸಿದ್ದಳು ಎನ್ನಲಾಗಿದ್ದು, ವಿದ್ಯಾ ಇಷ್ಟದಂತೆ ಎರಡೂ‌ಮನೆಯವರು ಮದುವೆಗೆ ಕೂಡ ಒಪ್ಪಿದ್ದರು. ಆದರೆ ಹಸೆಮಣೆ ಏರುವ ಮುನ್ನವೇ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಿಕ್ಟೋರಿಯಾ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:40 am, Sat, 28 February 26

Source link

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು – Kannada News | Horoscope 28 Satursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ.‌ ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ.

ವೃಷಭ ರಾಶಿ:

ಬಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಗೌರವವನ್ನು ಪಡೆಯುತ್ತೀರಿ. ನಿಮ್ಮ ಆಜ್ಞೆಯಂತೆ ಎಲ್ಲವೂ ನಡೆಯುವುದು ಕಷ್ಟವಾದೀತು.

ಮಿಥುನ ರಾಶಿ:

ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ಯಾವುದೇ ಕಾರಣವಿಲ್ಲದೆ ನಿಮ್ಮ ಮನಸ್ಸು ವಿಚಲಿತವಾಗಬಹುದು.  ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ಅಧ್ಯಾತ್ಮದ ಬಗ್ಗೆ ಆಸಕ್ತಿ ಇರುತ್ತದೆ. ಸಹೋದರಿಯರು ಮತ್ತು ಸಂಗಾತಿಯ ಬೆಂಬಲ ಪಡೆಯುವಿರಿ.

ಕರ್ಕಾಟಕ ರಾಶಿ:

ಉದ್ಯೋಗದಲ್ಲಿ ಪ್ರಗತಿಗೆ ಅವಕಾಶಗಳೂ ಇರುತ್ತವೆ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ದೈನಂದಿನ ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ನಿಮ್ಮ ಮನೋವಿಕಾರದಿಂದ ಇತರರಿಗೂ ಕಷ್ಟವಾದೀತು.

ಸಿಂಹ ರಾಶಿ:

ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾದೀತು. ಸ್ವಯಂಕೃತ ಅಪರಾಧದಿಂದ ನಿಮಗೆ ಕಿಂಚಿತ್ತೂ ಬೇಸರವಾಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ಒಂಟಿತನದ ಆಲೋಚನೆಯು ಪೂರ್ಣವಾಗದು. ಆರ್ಥಿಕತೆಯು ನಿಮಗೆ ತೃಪ್ತಿ ಕೊಡುವುದು. ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಚಿತ್ರಣವನ್ನು ಬದಲಿಸುವಿರಿ.

ಕನ್ಯಾ ರಾಶಿ:

ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಚಿಂತನಶೀಲವಾಗಿ ಕೆಲಸ ಮಾಡಿ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಆದರೆ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಲಾಭವೂ ಹೆಚ್ಚಾಗುವುದು. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಎಲ್ಲ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಮನಸ್ಸಿನ ನಕಾರಾತ್ಮಕ ಭಾವನೆಗಳು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಚಲಿತರನ್ನಾಗಿ ಮಾಡುತ್ತವೆ.

ತುಲಾ ರಾಶಿ:

ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ಏಕೆಂದರೆ ಬಹಳಷ್ಟು ಖರ್ಚುಗಳು ಇರುತ್ತವೆ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಅನಿರೀಕ್ಷಿತ ಪ್ರಶಂಸೆ ಹಾಗು ಗೌರವಗಳು ಸಿಗಲಿವೆ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಸ್ಥಿರಾಸ್ತಿಯ ನಷ್ಟದಿಂದ ಬೇಸರವಾಗುವುದು. ಸ್ನೇಹಿತರ ಜೊತೆ ಸಣ್ಣ ಕಾರಣಕ್ಕೆ ಕಲಹವಾಗುವುದು. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸುವುದು. ಇಂದು ನಿಮಗೆ ಸಾಮಾಜಿಕವಾಗಿ ಗೌರವವನ್ನು ಪಡೆಯುವಿರಿ.

ವೃಶ್ಚಿಕ ರಾಶಿ:

ಸಮಾಜದಲ್ಲಿ ಗೌರವ ಸಿಗುತ್ತದೆ, ಇದರಿಂದಾಗಿ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ಈ ಕಾರಣದಿಂದಾಗಿ ಜನರಿಂದ ಟೀಕೆ ಬರುವುದು. ಇಂದು, ನೀವು ವಾಸ್ತವಕ್ಕಿಂತ ಕಾಲ್ಪನಿಕತೆಯಲ್ಲಿ ಹೆಚ್ಚು ಇರುತ್ತೀರಿ. ಈ ಕಾರಣದಿಂದಾಗಿ ಜನರು ನಿಮ್ಮನ್ನು ಕಂಡು ನಗುವರು.

ಧನು ರಾಶಿ:

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚನ್ನು ನೀವು ಮಾಡಬೇಕಾಗಯವುದು. ಅನಾರೋಗ್ಯದಿಂದ ಇದ್ದರೂ ನಿಮ್ಮ ಕರ್ತವ್ಯವನ್ನು ಮಾಡುವಿರಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಈ ದಿನ ನೀವು ಸಂತೋಷವಾಗಿರುವಿರಿ. ಆದರೆ ಅಸಭ್ಯ ವರ್ತನೆಯು ಕೆಲವರಿಂದ ಮಾತುಗಳು ಕೇಳಿಬರಬಹುದು. ಕೆಲಸದ ಬಿಡುವಿಲ್ಲದಿದ್ದರೂ ಇನ್ನಿತರ ಚಟುವಟಿಕೆಯಲ್ಲಿ ಭಾಗ ವಹಿಸುವಿರಿ.

ಮಕರ ರಾಶಿ:

ಆರ್ಥಿಕವಾಗಿ ಯಾವುದೇ ಭಯವಿಲ್ಲ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಸಂಬಂಧಗಳಲ್ಲಿ ಸಂಯಮದಿಂದಿರಿ. ಅನಗತ್ಯ ಕೋಪವನ್ನು ನಿಯಂತ್ರಿಸಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಇಂದು ವ್ಯವಹಾರದಲ್ಲಿ, ಮಾತುಗಳು ಹೆಚ್ಚು ತೀವ್ರವಾಗಿರಲಿದ್ದು, ಅದರ ಸರಿಯಾದ ಪ್ರಯೋಜನು ವಿಳಂಬದಿಂದ ಬರುವುದು. ಕುಟುಂಬ ವಾತಾವರಣವು ಇಂದು ಹೆಚ್ಚು ಭಾವನಾತ್ಮಕವಾಗಿ ಇರುತ್ತದೆ.

ಕುಂಭ ರಾಶಿ:

ಇಂದು ನೀವು ಕಚೇರಿಯಲ್ಲಿ ಎಲ್ಲರ ಗಮನ ಸೆಳೆಯುವಿರಿ. ಹಳೆಯ ಸ್ನೇಹಿತನ ಭೇಟಿಯ ಸಾಧ್ಯತೆ. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ಇಂದು ಮನೆಯ ಸದಸ್ಯರ ಮನವೊಲಿಸುವುದು ಕಷ್ಟವಾಗದು.‌ ನಿರಾಶೆಯನ್ನು ಉಂಟುಮಾಡವ ಆಲೋಚನೆಗಳನ್ನು ತಪ್ಪಿಸಿ.

ಮೀನ ರಾಶಿ:

ಜೀವನದ ಕುರಿತು ಪೂರ್ಣ ಆತ್ಮವಿಶ್ವಾಸದಿಂದ ಇರುತ್ತಾರೆ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಸಂಭಾಷಣೆಯಲ್ಲಿ ಸಂಯಮದಿಂದಿರಿ. ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಖರ್ಚುಗಳು ಹೆಚ್ಚಾಗಲಿವೆ. ವಾಹನದ ತೊಂದರೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ. ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು‌. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಕೆಲವು ವಿಷಯಗಳ ಬಗ್ಗೆ ಮನೆಯ ಹಿರಿಯರಿಂದ ವ್ಯತ್ಯಾಸಗಳು ಆಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸೌಭಾಗ್ಯ, ಕರಣ : ಬವ, ಸೂರ್ಯೋದಯ – 06 – 42 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭ ಕಾಲ : ರಾಹು 09:40 – 11:08, ಯಮಗಂಡ ಕಾಲ 14:06 – 15:34, ಗುಳಿಕ ಕಾಲ 06:43 – 08:11

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 28ರ ದಿನಭವಿಷ್ಯ

ಹನುಮಂತನ ದೇವಸ್ಥಾನದಲ್ಲಿ ಇಪ್ಪತ್ತೊಂದು ಪ್ರದಕ್ಷಿಣೆಗಳನ್ನು ಮಾಡುವುದಕ್ಕೆ ಸಾಧ್ಯವಿದ್ದಲ್ಲಿ ಮಾಡಿ. ಮನೆಯಲ್ಲಿಯೇ ಆದರೂ ಹೀಗೆ ಪ್ರದಕ್ಷಿಣೆ ಮಾಡಿ. ಇದರಿಂದ ಶತ್ರಬಾಧೆ, ಆರೋಗ್ಯ ಸಮಸ್ಯೆಗಳು, ವ್ಯಾಜ್ಯಗಳಿಂದ ಆಗುತ್ತಿರುವ ಕಿರಿಕಿರಿಯಿಂದ ಹೊರಗೆ ಬರುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗುತ್ತವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಹಣ್ಣು- ತರಕಾರಿ ಬೆಳೆಗಾರರಿಗೆ ಹೊಸ ವ್ಯಕ್ತಿಗಳ ಪರಿಚಯದಿಂದ ಲಾಭದ ಪ್ರಮಾಣ ಹೆಚ್ಚಿಸಿಕೊಳ್ಳಲು ಮಾರ್ಗೋಪಾಯ ಗೋಚರ ಆಗಲಿವೆ. ಇಷ್ಟು ದಿನ ಯಾವ ಅಡೆತಡೆಗಳು ನಿಮಗೆ ಸವಾಲಾಗಿ ಪರಿಣಮಿಸಿದ್ದವೋ ಅವುಗಳನ್ನು ದಾಟುವುದಕ್ಕೆ ಸಾಧ್ಯವಾಗಲಿದೆ. ಚಿತ್ರಮಂದಿರಗಳ ಮಾಲೀಕರು ವ್ಯವಹಾರದಲ್ಲಿ ಬದಲಾವಣೆ ಮಾಡಿಕೊಳ್ಳಲು ತೀರ್ಮಾನ ಮಾಡುತ್ತೀರಿ. ಇದಕ್ಕೆ ಕುಟುಂಬ ಸದಸ್ಯರ ಬೆಂಬಲ ಸಹ ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಯಾಕೆ ಅವರು ಹಾಗೆ ಮಾತನಾಡಿದರು ಎಂದು ಒಬ್ಬರೇ ವ್ಯಕ್ತಿಯು ಆಡಿದ ಮಾತು, ಬಳಸಿದ ಪದಗಳು ದಿನವಿಡೀ ನಿಮ್ಮನ್ನು ಕಾಡಲಿವೆ. ಈ ಹಿಂದೆ ಇದ್ದಂಥ ಉತ್ಸಾಹದಲ್ಲಿ ನಿಮ್ಮ ವೃತ್ತಿ- ವ್ಯಾಪಾರ- ವ್ಯವಹಾರದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು, ಮುಂದಕ್ಕೆ ಹೋಗಬೇಕಾದ ಜವಾಬ್ದಾರಿಗಳಿಂದ ಕಳಚಿಕೊಳ್ಳಬೇಕು ಎಂಬ ಭಾವ ಬಲವಾಗಿ ಆವರಿಸಿಕೊಳ್ಳುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ – Kannada News | February 28 Satursday Horoscope: Birth Numbers 4,5,6 Daily Forecast and Life Advice

ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ ಸೂಚನೆ ದೊರೆಯಲಿದ್ದು, ಆ ಕಡೆಗೆ ಪೂರ್ಣ ಪ್ರಮಾಣದಲ್ಲಿ ಗಮನ ನೀಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಈಗಾಗಲೇ ನೀವು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆ ಕೊಡಬೇಕಾದ ಹಣವನ್ನು ಇವತ್ತು- ನಾಳೆ ಎನ್ನುತ್ತಾ ಮುಂದಕ್ಕೆ ಹಾಕುತ್ತಾ ಬರುತ್ತಿರುವವರಿಗೆ ಗಟ್ಟಿಯಾದ ಧ್ವನಿಯಲ್ಲಿ ಕೇಳಲಿದ್ದೀರಿ, ಆ ಹಣ ವಸೂಲಿಯೇ ಆಗಿಬಿಡಲಿದೆ ಅಥವಾ ಇಂಥ ದಿನ ಖಚಿತವಾಗಿ ಹಣ ದೊರೆಯುವ ಭರವಸೆ ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂತೆ ಹೊತ್ತಿಗೆ ಮೂರು ಮೊಳ ಎಂಬ ರೀತಿಯಲ್ಲಿ ಯಾವ ಕೆಲಸವನ್ನು ಸಹ ಮಾಡುವುದಕ್ಕೆ ಹೋಗಬೇಡಿ. ತುರ್ತಾಗಿ ಕೆಲಸ ಮುಗಿಸುವ ಭರದಲ್ಲಿ ಗುಣಮಟ್ಟದ ಜೊತೆ ರಾಜೀ ಮಾಡಿಕೊಂಡು, ದೀರ್ಘಾವಧಿಯಲ್ಲಿ ಅದಕ್ಕಾಗಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸೋದರ- ಸೋದರಿಯರ ಜತೆಗಿನ ಭಿನ್ನಾಭಿಪ್ರಾಯ ಈಗಾಗಲೇ ಇದ್ದಲ್ಲಿ ಅದು ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Published On – 12:20 am, Sat, 28 February 26

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 28ರ ದಿನಭವಿಷ್ಯ

ಚಪ್ಪಲಿ, ಛತ್ರಿ ಈ ಎರಡನ್ನೂ ಯಾರಿಗೆ ಅಗತ್ಯ ಇದೆಯೋ ಅಂಥವರಿಗೆ ನೀಡಿ. ಹೀಗೆ ಮಾಡುವುದರಿಂದ ನಿಮ್ಮ ಮೇಲೆ ಬಂದಿರುವ ವೃಥಾರೋಪಗಳಿಂದ ಹೊರಗೆ ಬರುವುದಕ್ಕೆ ಸಾಧ್ಯವಾಗಲಿದೆ. ದೊಡ್ಡ ಮಟ್ಟದ ನಷ್ಟ ಆಗಬಹುದು ಎಂದು ನೀವಂದುಕೊಂಡಿದ್ದ ವ್ಯವಹಾರದಲ್ಲಿ ನಷ್ಟದ ಪ್ರಮಾಣ ಕಡಿಮೆ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಜತೆ ಈ ಹಿಂದೆ ಉದ್ಯೋಗ ಮಾಡಿದ್ದವರು ಏನಾದರೂ ವ್ಯಾಪಾರ- ವ್ಯವಹಾರದ ಆಫರ್ ತಂದಲ್ಲಿ ಗಂಭೀರವಾಗಿ ಪರಿಗಣಿಸಿ. ಒಂದು ವೇಳೆ ಈ ದಿನ ಆ ಬಗ್ಗೆ ಚರ್ಚೆ ಮಾಡುವುದಕ್ಕೆ ಮನಸ್ಸಿಲ್ಲ ಅಂತಾದರೂ ಒಂದೆರಡು ದಿನ ಸಮಯ ತೆಗೆದುಕೊಳ್ಳವುದು ಒಳ್ಳೆ ತೀರ್ಮಾನ ಎನಿಸಿಕೊಳ್ಳಲಿದೆ. ಸಂಗಾತಿಯ ಉದ್ಯೋಗ ವಿಚಾರದಲ್ಲಿ ಅನಿಶ್ಚಿತತೆ ಕಾಡಲಿದೆ. ಇದರಿಂದ ಉಂಟಾಗುವ ಆತಂಕದಿಂದ ಹೊರಬರುವುದಕ್ಕೆ ನಾನಾ ಪ್ರಯತ್ನವನ್ನು ಮಾಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಸಾವಯವ ಉತ್ಪನ್ನಗಳ ಮಾರಾಟ ಮಾಡುತ್ತಾ ಇರುವವರು ವ್ಯಾಪಾರದ ವಿಸ್ತರಣೆಗೆ ಹಲವು ರೀತಿ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮ್ಮ ಉಳಿತಾಯ ಹಾಗೂ ಹೂಡಿಕೆ ಮಾಡಿದ್ದ ಹಣವನ್ನು ತೆಗೆದು, ಅದನ್ನು ಈ ಉದ್ದೇಶಕ್ಕೆ ಬಳಸುವುದಕ್ಕೆ ಮುಂದಾಗಲಿದ್ದೀರಿ. ಹೊಸ ಮಾರುಕಟ್ಟೆಯಲ್ಲಿ ಈಗಷ್ಟೇ ಕೆಲಸ ಆರಂಭಿಸಿದವರು ತಾಳ್ಮೆ- ಸಂಯಮ ವಹಿಸುವುದು ಮುಖ್ಯವಾಗುತ್ತದೆ. ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ದೂರ ಪ್ರಯಾಣ ಅನಿವಾರ್ಯ ಅಂತಾದಲ್ಲಿ ಯಾವುದೇ ಹಿಂಜರಿಕೆ ಮಾಡದೆ ಹೊರಟುಬಿಡಿ. ಇದರಿಂದ ನಿಮಗೆ ಹಲವು ರೀತಿಯಲ್ಲಿ ಅನುಕೂಲಗಳು ಒದಗಿಬರಲಿವೆ. ದೇವತಾ ಕಾರ್ಯಗಳಲ್ಲಿ ಭಾಗೀ ಆಗುವುದಕ್ಕೆ ಆಹ್ವಾನ ಬಂದಲ್ಲಿ ಇಲ್ಲ ಎನ್ನದೆ ಕಡ್ಡಾಯವಾಗಿ ಭಾಗಿ ಆಗುವುದಕ್ಕೆ ಪ್ರಯತ್ನಿಸಿ. ಬ್ಯಾಂಕ್ ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗೆ ಒತ್ತಡದ ದಿನ ಇದಾಗಿರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು? – Kannada News | T20 World Cup: England’s Win Boosts Pakistan’s Semi Final Hopes After NZ Loss

ಟಿ20 ವಿಶ್ವಕಪ್‌ನ (T20 World Cup) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಬೇಕಾಯಿತು. ಇತ್ತ ಕೊನೆಯ ಓವರ್​ನಲ್ಲಿ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್‌ ಸೆಮಿಫೈನಲ್‌ ಪ್ರವೇಶಿಸಿತು. ಇಂಗ್ಲೆಂಡ್‌ ತಂಡದ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ ಸೆಮಿಫೈನಲ್‌ ತಲುಪುವುದು ಅಷ್ಟು ಸುಲಭವಾಗಿಲ್ಲ. ಇದಕ್ಕಾಗಿ ಪಾಕಿಸ್ತಾನ, ಶ್ರೀಲಂಕಾವನ್ನು (Sri Lanka vs Pakistan) ಅವರ ತವರು ನೆಲದಲ್ಲಿ ಮಣಿಸಬೇಕಾಗಿದೆ. ಕೇವಲ ಸೋಲಿಸಿದರೆ ಮಾತ್ರ ಸಾಕಾಗದು ಬದಲಿಗೆ ಪಾಕಿಸ್ತಾನ ಗೆಲ್ಲುವುದರ ಜೊತೆಗೆ ಅದರ ನೆಟ್ ರನ್​ರೇಟ್ ಅನ್ನು ನ್ಯೂಜಿಲೆಂಡ್​ಗಿಂತ ಉತ್ತಮಗೊಳಿಸಬೇಕಿದೆ.

ವಾಸ್ತವವಾಗಿ ಪ್ರೇಮದಾಸ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಮೇಲುಗೈ ಸಾಧಿಸಿತ್ತು. ಇಂಗ್ಲೆಂಡ್ ಗೆಲ್ಲಲು ಕೊನೆಯ 18 ಎಸೆತಗಳಲ್ಲಿ 43 ರನ್‌ಗಳ ಅಗತ್ಯವಿತ್ತು. ಆದರೆ 18 ನೇ ಓವರ್ ನ್ಯೂಜಿಲೆಂಡ್‌ ಪಾಲಿಗೆ ದುಬಾರಿಯಾಯಿತು. ಗ್ಲೆನ್ ಪಿಲಿಪ್ಸ್ ಬೌಲ್ ಮಾಡಿದ ಈ ಓವರ್‌ನಲ್ಲಿ 22 ರನ್‌ಗಳು ಬಂದವು. ಇದರ ಪರಿಣಾಮವಾಗಿ ಇಂಗ್ಲೆಂಡ್ 4 ವಿಕೆಟ್‌ಗಳು ಮತ್ತು ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು.

ಕಿವೀಸ್​ಗೆ ಈಗಲೂ ಇದೇ ಅವಕಾಶ

ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ಆಡಿರುವ 3 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು 6 ಅಂಕಗಳೊಂದಿಗೆ ಸೆಮಿಫೈನಲ್ ತಲುಪಿದೆ. ಮತ್ತೊಂದೆಡೆ, ಶ್ರೀಲಂಕಾ 2 ಪಂದ್ಯಗಳಲ್ಲಿ ಸೋತು ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದಿದೆ. ಈಗ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಗುಂಪು 2 ರಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶವನ್ನು ಹೊಂದಿವೆ. ಆದಾಗ್ಯೂ ನ್ಯೂಜಿಲೆಂಡ್ ಸೂಪರ್ 8 ಸುತ್ತಿನ ಎಲ್ಲಾ ಮೂರು ಪಂದ್ಯಗಳನ್ನು ಆಡಿದ್ದು, ಆಡಿರುವ 3 ಪಂದ್ಯಗಳಲ್ಲಿ ಒಂದನ್ನು ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಉಳಿದಂತೆ 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ನ್ಯೂಜಿಲೆಂಡ್ 3 ಅಂಕಗಳು ಮತ್ತು +1.390 ನೆಟ್​ ರನ್​ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ಸೆಮೀಸ್​ಗೇರಲು ಪಾಕ್ ಏನು ಮಾಡಬೇಕು?

ಇತ್ತ ಇಂಗ್ಲೆಂಡ್‌ ಗೆಲುವಿನಿಂದ ಸೆಮಿಫೈನಲ್​ಗೇರುವ ಅವಕಾಶ ಪಡೆದುಕೊಂಡಿರುವ ಪಾಕಿಸ್ತಾನ ತನ್ನ ಕೊನೆಯ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸುತ್ತಿದೆ. ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ಅದರ ಬಳಿಯೂ 3 ಅಂಕಗಳು ಇರಲಿವೆ. ಪ್ರಸ್ತುತ ಪಾಕಿಸ್ತಾನ 2 ಪಂದ್ಯಗಳನ್ನಾಡಿದ್ದು, ಅದರಲ್ಲಿ ಒಂದನ್ನು ಸೋತಿದ್ದು, ಉಳಿದ ಒಂದು ಪಂದ್ಯ ಡ್ರಾ ಆಗಿದೆ. ಆದ್ದರಿಂದ 1 ಪಾಯಿಂಟ್ ಜೊತೆಗೆ -0.461 ನೆಟ್ ರನ್​ರೇಟ್ ಹೊಂದಿದೆ. ಪಾಕಿಸ್ತಾನ ಈಗ ಗೆಲುವಿನ ಜೊತೆಗೆ ನೆಟ್ ರನ್ ರೇಟ್​ ಅನ್ನು ಸಹ ಸುಧಾರಿಸಬೇಕಾಗಿದೆ. ಹೀಗಾಗಿ ಪಾಕಿಸ್ತಾನ ನೆಟ್ ರನ್ ರೇಟ್​ ಸುಧಾರಿಸಬೇಕೆಂದರೆ ಮೊದಲು ಬ್ಯಾಟಿಂಗ್ ಮಾಡಿದರೆ ಪಂದ್ಯವನ್ನು 65 ರನ್‌ಗಳಿಂದ ಗೆಲ್ಲಬೇಕಾಗುತ್ತದೆ. ಒಂದು ವೇಳೆ ಮೊದಲು ಬೌಲಿಂಗ್ ಮಾಡಿದರೆ 13.2 ಓವರ್‌ಗಳಲ್ಲಿ ಲಂಕಾ ನೀಡುವ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಈ ಎರಡನ್ನೂ ಮಾಡುವಲ್ಲಿ ಪಾಕ್ ಎಡವಿದರೆ, ನ್ಯೂಜಿಲೆಂಡ್ ಉತ್ತಮ ನೆಟ್ ರನ್​ರೇಟ್ ಆಧಾರದ ಮೇಲೆ ಸೆಮಿಫೈನಲ್​ಗೇರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:06 pm, Fri, 27 February 26

Source link

Exit mobile version