Headlines

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ – Kannada News | Team India’s 2026 T20 World Cup Hopes Soar: The Zimbabwe Australia Connection

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲುವ ತಂಡಗಳಲ್ಲಿ ಎಲ್ಲರ ನೆಚ್ಚಿನ ತಂಡವೆಂದರೆ ಅದು ಟೀಂ ಇಂಡಿಯಾ. ಇದೇ ಕಾರಣ, ಕಳೆದ ಕೆಲವು ವರ್ಷಗಳಿಂದ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ನೀಡುತ್ತಿರುವ ಪ್ರದರ್ಶನ. ಇದರ ಜೊತೆಗೆ ಈ ಬಾರಿಯ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯುತ್ತಿರುವುದರಿಂದ ತವರಿನ ಲಾಭವೂ ಸೂರ್ಯಕುಮಾರ್ ಪಡೆಗೆ ಸಿಗಲಿದೆ. ಆದ್ದರಿಂದ, ಟೀಂ ಇಂಡಿಯಾ ಸತತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದೆಲ್ಲವುಗಳ ಜೊತೆಗೆ ಕಾಕತಾಳೀಯವೆಂಬಂತೆ…

Read More

ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ – Kannada News | Man gets Death sentence in Odisha for killing wife in acid attack

ಬಾಲಸೋರ್, ಫೆಬ್ರವರಿ 13: ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲಯವು ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ (Death Sentence) ವಿಧಿಸಿದೆ. ನ್ಯಾಯಾಧೀಶ ಅಬ್ದುಲ್ ಸಮೀಮ್ ಅಖ್ತರ್ ಆರೋಪಿ ಚಂದನ್ ಕುಮಾರ್ ರಾಣಾಗೆ ಮರಣದಂಡನೆ ವಿಧಿಸುವುದರ ಜೊತೆಗೆ 50,000 ರೂ. ದಂಡ ವಿಧಿಸಿದ್ದಾರೆ. ನೀಲಗಿರಿ ಪೊಲೀಸ್ ಠಾಣೆ ಪ್ರದೇಶದ ಸಂತ್ರಗಾಡಿಯಾ ನಿವಾಸಿಯಾದ ರಾಣಾ ತನ್ನ ಪತ್ನಿ ಬನಿತಾ ಸಿಂಗ್, ಆಕೆಯ ಅಕ್ಕ ಮತ್ತು ಸಹೋದರಿಯ ಇಬ್ಬರು ಮಕ್ಕಳ ಮೇಲೆ ಆಸಿಡ್ ಎರಚಿದ್ದ. ಎಸ್‌ಸಿಬಿ ವೈದ್ಯಕೀಯ ಕಾಲೇಜು…

Read More

ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka

ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಎಚ್.ಎಸ್‌. ಮಂಜುನಾಥ್‌ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…

Read More

ಪ್ರೇಮಿಗಳ ದಿನಕ್ಕಾಗಿ ವ್ಯಾಪಾರಿಗಳ ಭರ್ಜರಿ ತಯಾರಿ: ಗುಲಾಬಿ, ಚಾಕೊಲೇಟ್, ಗಿಫ್ಟ್​​ಗಳದ್ದೇ ಕಾರುಬಾರು – Kannada News | Bengaluru valentines day celebrations and mixed reactions to pulwama remembrance

ಬೆಂಗಳೂರು, ಫೆಬ್ರವರಿ 13: ನಾಳೆ ಫೆಬ್ರವರಿ 14. ಈ ದಿನ ಸಮಸ್ತ ಪ್ರೇಮಿಗಳ ಪಾಲಿಗೆ (Valentine’s Day) ಎಂದಿಗೂ ಮರೆಯಲಾಗದಂತಹ ಒಂದು ಅವಿಸ್ಮರಣೀಯ ದಿನ. ಪ್ರೇಮಿಗಳ ದಿನಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಪ್ರಪಂಚದೆಲ್ಲೆಡೆ ಕಾವು ಪಡೆದುಕೊಳ್ಳುತ್ತಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ (bangaluru) ಸಹ ವ್ಯಾಲೆಂಟೆನ್ಸ್ ಡೇಗೆ ಪ್ರೇಮಿಗಳು ಸಜ್ಜಾಗಿದ್ದಾರೆ. ಪ್ರೇಮಿಗಳು ಜೊತೆಗೆ ವ್ಯಾಪಾರಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಗಿಫ್ಟ್​​ಗಳ ಮೊರೆಹೋಗುತ್ತಿರುವ ಪ್ರೇಮಿಗಳು  ಫೆಬ್ರವರಿ 14 ನಾಳಿನ ವ್ಯಾಲೆಂಟೈನ್ಸ್ ಡೇಯನ್ನ ಅವಿಸ್ಮರಣೀಯ ಆಚರಿಸಲು ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ನೆಚ್ಚಿನ…

Read More

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು? – Kannada News | Jayamala Talks about Joe Simon death watch video

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಮಾತ್ರವಲ್ಲದೆ ಸಿನಿಮಾ ರಂಗದ ಕೆಲವು ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿದ್ದ ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಈ ಅಚಾನಕ್ ಘಟನೆ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಮಾತನಾಡಿದ್ದಾರೆ. ಅಗಲಿದ ಹಿರಿಯ ನಿರ್ದೇಶಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು? – Kannada News | NM Suresh talks about what happened to Joe Simon in Film Chamber

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್​​ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು…

Read More

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ – Kannada News | Hampi Utsav Inauguration: Fire Breaks Out During CM Puja, Quick Action Saves Day

ಹೊಸಪೇಟೆ ಫೆ.13: ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ…

Read More

ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ – Kannada News | Patanjali Foods Q3 results, revenue increases, while profit gets a hit

ಪ್ರಸಕ್ತ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ, ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಸಂಸ್ಥೆಯು ಗಳಿಕೆಯಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಮೊದಲ ಬಾರಿಗೆ, ಒಂಬತ್ತು ತಿಂಗಳ ಆದಾಯವು ₹29,000 ಕೋಟಿಗಳನ್ನು ಮೀರಿದೆ. ಇದು ಹಿಂದೆಂದೂ ನೋಡಿರದ ದಾಖಲೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿ), ಕಂಪನಿಯ ಆದಾಯವು ₹10,500 ಕೋಟಿಗಳನ್ನು ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಅಪಮೌಲ್ಯ ಮತ್ತು ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ,…

Read More

ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು? – Kannada News | Pakistan people watching Dhurandhar movie, Dvds sold for 16 rs

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ‘ಧುರಂಧರ್’ (Dhurandhar) ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕವೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ. ಭಾರತೀಯ ಸೈನಿಕ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದಕರೊಟ್ಟಿಗೆ ಸೇರಿ ಅವರ ಮೇಲೆ ಗೂಢಚಾರಿಕೆ ಮಾಡುವ ಕತೆಯನ್ನು ‘ಧುರಂಧರ್’…

Read More