ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್​ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್​ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಪಾತ್ರಕ್ಕೆ ನೆಗೆಟಿವ್ ಶೇಡ್ ಕೂಡ ಇರಲಿದೆ ಎಂಬುದರ ಸುಳಿವು ಟೀಸರ್​ನಲ್ಲಿ ಕಾಣಿಸಿದೆ. ಆ ಕಾರಣದಿಂದ ಹಾಡುಗಳು ಹೇಗಿರಬಹುದು ಎಂಬ ನಿರೀಕ್ಷೆ ಎಲ್ಲರಿಗೂ ಇದೆ. ಪ್ರತಿ ಬಾರಿಯೂ ಅಭಿಮಾನಿಗಳಿಗೆ ಯಶ್ ಒಂದಲ್ಲಾ ಒಂದು ಸರ್ಪ್ರೈಸ್ ನೀಡುತ್ತಲೇ ಇದ್ದಾರೆ. ಈಗ ಮೊದಲ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಲು ಸಕಲ ಸಿದ್ಧತೆ ಆಗಿದೆ.

‘ತಬಾಹಿ’ ಎಂಬುದು ಈ ಹಾಡಿನ ಹೆಸರು. ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿರ್ಶಾ ಅವರು ಈ ಗೀತೆಗೆ ಸಂಗೀತ ನೀಡಿದ್ದಾರೆ. ಹಾಡಿನ ಪೋಸ್ಟರ್​ನಲ್ಲಿ ಯಶ್ ಅವರು ಕಿಯಾರಾ ಅಡ್ವಾಣಿ ಅವರನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಇದೆ. ಈ ಪೋಸ್ಟರ್​​ನಲ್ಲಿ ಕಿಯಾರಾ ಮುಖ ಕಾಣಿಸಿಲ್ಲ. ಒಟ್ಟಿನಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಖಚಿತ.

‘ಜೀ ಮ್ಯೂಸಿಕ್’ ಮೂಲಕ ‘ಟಾಕ್ಸಿಕ್’ ಸಿನಿಮಾದ ಎಲ್ಲ ಭಾಷೆಯ ಹಾಡುಗಳು ರಿಲೀಸ್ ಆಗಲಿವೆ. ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಸಂಗೀತ ನೀಡುವುದರ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಸಿನಿಮಾಗೆ ಒಟ್ಟು 5 ಮಂದಿ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

‘ತಬಾಹಿ’ ಹಾಡಿನ ಪೋಸ್ಟರ್ ನೋಡುತ್ತಿದ್ದಂತೆಯೇ ಯಶ್ ಅಭಿಮಾನಿಗಳ ಕೌತುಕ ಹೆಚ್ಚಾಗಿದೆ. ಸಾವಿರಾರು ಕಮೆಂಟ್​​ಗಳ ಮೂಲಕ ಜನರು ತಮ್ಮ ಎಗ್ಸೈಟ್​ಮೆಂಟ್ ತೋರಿಸಿದ್ದಾರೆ. ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡಿದೆ. ಮಾರ್ಚ್ 19ರಂದು ವಿಶ್ವಾದ್ಯಂತ ‘ಟಾಕ್ಸಿಕ್’ ರಿಲೀಸ್ ಆಗಲಿದೆ. ‘ಧುರಂಧರ್ 2’ ಚಿತ್ರಕ್ಕೆ ಫೈಟ್ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ranji Trophy Final: W,W,W,W,W.. ಆಕಿಬ್ ನಬಿ ದಾಳಿಗೆ ತತ್ತರಿಸಿದ ಕರ್ನಾಟಕ – Kannada News | Ranji Trophy 2025 26 Final: J&K Dominates Karnataka; Aqib Nabi’s Fiver Creates History

2025-26ರ ರಣಜಿ ಟ್ರೋಫಿಯ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಇಲ್ಲಿಯವರೆಗೆ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರ ಬೌಲರ್ ಆಕಿಬ್ ನಬಿ ಮತ್ತೊಮ್ಮೆ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್​ಗಳ ಗೊಂಚಲು ಪಡೆದು ಕರ್ನಾಟಕ ತಂಡವನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ 23 ಓವರ್‌ಗಳನ್ನು ಬೌಲ್ ಮಾಡಿದ ಆಕಿಬ್ ನಬಿ ಕೇವಲ 54 ರನ್‌ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು, ಅದರಲ್ಲಿ 7 ಮೇಡನ್ ಓವರ್​ ಕೂಡ ಸೇರಿತ್ತು. ನಬಿ ಉರುಳಿಸಿದ ಐದು ವಿಕೆಟ್​ಗಳಲ್ಲಿ, ಅನುಭವಿ ಕೆಎಲ್ ರಾಹುಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶತಕವೀರ ಮಾಯಾಂಕ್ ಅಗರ್ವಾಲ್ ಮತ್ತು ಶಿಖರ್ ಶೆಟ್ಟಿ ಸೇರಿದ್ದರು.

ಈ ರಣಜಿ ಆವೃತ್ತಿಯಲ್ಲಿ ಆಕಿಬ್ ನಬಿ ಆಡಿರುವ 10 ಪಂದ್ಯಗಳಲ್ಲಿ 60 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಒಟ್ಟು 12 ವಿಕೆಟ್‌ಗಳನ್ನು ಕಬಳಿಸಿದ್ದ ನಬಿ, ಸೆಮಿಫೈನಲ್‌ನಲ್ಲಿ ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದರು. ಈಗ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್​ಗಳನ್ನು ಉರುಳಿಸಿರುವ ಆಕಿಬ್ ನಬಿ, ಆದಷ್ಟು ಬೇಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ.

Source link

ಬಿಪಿ ಕಡಿಮೆಯಾದ್ರೂ ಹೃದಯಾಘಾತವಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ? – Kannada News | Low Blood Pressure and Coronary Heart Disease: What You Should Know

ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಬುದು ತಿಳಿದ ವಿಚಾರ, ಆದರೆ ಹೊಸ ಸಂಶೋಧನೆಯ ಪ್ರಕಾರ, ಹೃದಯ ಸಂಬಂಧಿ ಕಾಯಿಲೆ ಇರುವವರಲ್ಲಿ, ಕಡಿಮೆ ರಕ್ತದೊತ್ತಡ (Low Blood Pressure) ಕೂಡ ಹೃದಯಾಘಾತದ (Heart Attack) ಅಪಾಯವನ್ನು ಹೆಚ್ಚಿಸುತ್ತದೆ. ಹೌದು, ಲಂಡನ್‌ನ ಇಂಪೀರಿಯಲ್ ಕಾಲೇಜಿನ ವಿಜ್ಞಾನಿಗಳು ಸೇರಿದಂತೆ ಅಂತರಾಷ್ಟ್ರೀಯ ಸಂಸ್ಥೆಗಳ ತಂಡ ಈ ಅಧ್ಯಯನ ನಡೆಸಿದ್ದು, ರಕ್ತದೊತ್ತಡ 100/80 ಎಂಎಂಎಚ್‌ಜಿ (mmHg) ಗಿಂತ ಕಡಿಮೆಯಿದ್ದವರಲ್ಲಿ, ಹೃದಯಾಘಾತದ ಅಪಾಯ ಹೆಚ್ಚಾಗಿ ಕಂಡುಬಂದಿದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದು, ಹೃದಯ ಸಂಬಂಧಿತ ಸಮಸ್ಯೆ ಇರುವವರು ತುಂಬಾ ಜಾಗರೂಕರಾಗಿರಬೇಕಾಗುತ್ತದೆ. ಜೊತೆಗೆ ಈ ರೀತಿ ಆಗುವುದಕ್ಕೆ ಕಾರಣವೇನು, ಕಡಿಮೆ ರಕ್ತದೊತ್ತಡ ಎಷ್ಟು ಅಪಾಯಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯ ರಕ್ತದೊತ್ತಡ ಹೇಗಿರಬೇಕು?

ಸಂಶೋಧನೆಯು ರಕ್ತದೊತ್ತಡ ಸುಮಾರು 120/80 ಎಂಎಂಎಚ್‌ಜಿ ಆಗಿರಬೇಕು. ರಕ್ತದೊತ್ತಡ 90/60 ಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ರಕ್ತದೊತ್ತಡ ಎಂದು ಪರಿಗಣಿಸಲಾಗುತ್ತದೆ. ಈ ಮಟ್ಟದ ರಕ್ತದೊತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ನಿಮ್ಮ ರಕ್ತದೊತ್ತಡ ಸಾಮಾನ್ಯವಾಗಿ ಈ ವ್ಯಾಪ್ತಿಯಲ್ಲಿದ್ದರೆ, ಅದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ಅಜಿತ್ ಜೈನ್ ಅವರು ಹೇಳುವ ಪ್ರಕಾರ, ಕಡಿಮೆ ರಕ್ತದೊತ್ತಡವು ಒಂದು ಪ್ರಮುಖ ಸಮಸ್ಯೆಯಾಗಿದ್ದು ಜನ ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವನ್ನು ಅಪಾಯಕಾರಿ ಎಂದು ಪರಿಗಣಿಸುತ್ತಾರೆ. ಆದರೆ ಸಾಮಾನ್ಯ ಮಿತಿಗಿಂತ ಹೆಚ್ಚಿನ ಅಥವಾ ಕಡಿಮೆ ರಕ್ತದೊತ್ತಡವಿದ್ದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು!

ಕಡಿಮೆ ರಕ್ತದೊತ್ತಡ ಎಷ್ಟು ಅಪಾಯಕಾರಿ?

ರಕ್ತದೊತ್ತಡ ಕಡಿಮೆಯಾಗಲು ಪ್ರಾರಂಭಿಸಿದಾಗ, ಆಮ್ಲಜನಕ ಮೆದುಳಿಗೆ ಸರಿಯಾಗಿ ತಲುಪುವುದಿಲ್ಲ, ಇದು ಮೆದುಳಿನ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಅದೇ ರೀತಿ, ಆಮ್ಲಜನಕ ಹೃದಯವನ್ನು ತಲುಪದಿದ್ದರೆ, ಅದು ಹೃದಯದ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಯಾವುದೇ ಕಾರಣವಿರಲಿ, ಆಮ್ಲಜನಕದ ಪೂರೈಕೆ ಇದ್ದಕ್ಕಿದ್ದಂತೆ ಕಡಿಮೆಯಾದರೆ, ಹೃದಯವು ಕೆಲಸ ಮಾಡುವುದನ್ನು ನಿಲ್ಲಿಸಬಹುದು, ಅದು ಸಾವಿಗೆ ಕಾರಣವಾಗಬಹುದು. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ – Kannada News | 6 dead several injured in bus accident in Balotra

ಜೈಪುರ, ಫೆಬ್ರವರಿ 27: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸರ್ವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-25ರಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. ಬಸ್​ನ ಕೆಲವು ಭಾಗಗಳಲ್ಲಿ ರಕ್ತ ಹರಡಿಕೊಂಡಿದ್ದು, ಹಲವಾರು ಶವಗಳು ಒಳಗೆ ಸಿಲುಕಿಕೊಂಡಿರುವುದು ಕಂಡುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ (ಫೆಬ್ರವರಿ 28) ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡಕ್ಕೆ ಚೇರಪ್ ಮಾಡಲಿದ್ದಾರೆ.

ಇನ್ನು ಇಂದು(ಫೆಬ್ರವರಿ 27) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಓಮರ್ ಅಬ್ದುಲ್ಲಾ ಮಾಧ್ಯಮಗಳ ಜೊತೆ ಮಾತನಾಡಿದ್ದು, ನಮ್ಮ ತಂಡ ಮೊದಲ ಬಾರಿಗೆ ರಣಜಿ ಗೆಲ್ಲುವ ಹೊಸ್ತಿಲಲ್ಲಿದೆ. ನಮ್ಮ ತಂಡವನ್ನು ಪ್ರೋತ್ಸಾಹಿಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಜಮ್ಮು-ಕಾಶ್ಮೀರ ತಂಡ ಈ ಹಂತಕ್ಕೆ ಬರಲ್ಲ ಅನ್ನುತ್ತಿದ್ದರು. ಆದ್ರೆ, ನಮ್ಮ ಆಟಗಾರರು ಉತ್ತಮವಾಗಿ ಆಡಿ ತೋರಿಸಿದ್ದಾರೆ. ಫೈನಲ್ ನಲ್ಲಿಯೂ ಉತ್ತಮ ಪ್ರದರ್ಶನವನ್ನ ನೀಡುತ್ತಿದ್ದಾರೆ. ಜಮ್ಮು-ಕಾಶ್ಮೀರದಲ್ಲೂ ಒಳ್ಳೇ ಕ್ರಿಕೆಟ್ ಆಟಗಾರರು ಇದ್ದಾರೆ. ಇದಕ್ಕೆ ರಣಜಿಯಲ್ಲಿ ತೋರಿದ ಪ್ರದರ್ಶನವೇ ಸಾಕ್ಷಿಯಾಗಿದ್ದು, ನಾವು ಖಂಡಿತವಾಗಿ ಟ್ರೋಫಿ ತೆಗೆದುಕೊಂಡು ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ: Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ

Source link

ಸಿಎಂ ಉದ್ಘಾಟಿಸಿದ್ರೂ ಬಳಕೆಯಾಗದ ಐದಂತಸ್ತಿನ ಭವನ: ಮಾದಪ್ಪನ ಭಕ್ತರ ಪಾಡು ಕೇಳೋರ್‍ಯಾರು? – Kannada News | Male Mahadeshwara: Vajramale Building Ready, But Devotees Still Await Accommodation

ಚಾಮರಾಜನಗರ, ಫೆಬ್ರವರಿ 27: ಮಾದಪ್ಪನ ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿದ್ದಾರೆ. ಹಬ್ಬ, ಹರಿದಿನ ಸೇರಿದಂತೆ ಅಮವಾಸ್ಯೆ ಬಂದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Betta) ಕಾಲಿಡಲು ಸ್ಥಳ ಇರುವುದಿಲ್ಲ. ತಂಗುವುದಕ್ಕೂ ಸ್ಥಳವಿರಲ್ಲ. ಈ ಸಮಸ್ಯೆ ಬಗೆ ಹರಿಸುವುದಕ್ಕೆ ಪ್ರಾಧಿಕಾರ ಮುಂದಾಗಿದೆ. 376 ಕೊಠಡಿಯ ವಜ್ರ ಮಲೆ ಕಟ್ಟಡ ಉದ್ಘಾಟಿಸಲಾಗಿದೆ. ಆದರೂ ಪ್ರಯೋಜನಕ್ಕೆ ಬಾರದ ರೀತಿಯಂತಾಗಿದೆ. ಪ್ರಾಧಿಕಾರದ ವಿಳಂಬ ನಡೆಗೆ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಏಳು ಎಪ್ಪತ್ತೇಳು ಮಲೆಯ ಒಡೆಯ ಮಲೆ ಮಾದಪ್ಪನಿಗೆ ಭಕ್ತ ವೃಂದ ಅಪಾರ. ರಾಜ್ಯ ಅಷ್ಟೇ ಅಲ್ಲದೆ ಹೊರ ರಾಜ್ಯದಿಂದಲೂ ಮಾದಪ್ಪನ ದರ್ಶನ ಪಡೆಯಲು ಕೋಟ್ಯಂತರ ಸಂಖ್ಯೆಯಲ್ಲಿ ಬರುತ್ತಾರೆ. ಹೀಗೆ ಬರುವ ಭಕ್ತ ವೃಂದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವುದು ಪ್ರಾಧಿಕಾರದ ಆದ್ಯ ಕರ್ತವ್ಯ. ಹಾಗಾಗಿ ದೂರದ ಊರಿನಿಂದ ಬರುವ ಭಕ್ತಾದಿಗಳು ವಿಶ್ರಮಿಸಲು ಕೊಠಡಿಗಳ ಕೊರತೆ ಇರುವ ಕಾರಣ 5 ಮಹಡಿಯಲ್ಲಿ 376 ಕೊಠಡಿಗಳು ಉಳ್ಳ ವಜ್ರ ಭವನ ನಿರ್ಮಾಣ ಮಾಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ದಿನ ಸ್ವತಃ ಸಿಎಂ ಸಿದ್ದರಾಮಯ್ಯ  ಉದ್ಘಾಟನೆ ಮಾಡಿದ್ದರು. ಆದರೂ ಇವರೆಗೆ ಭಕ್ತರ ವಾಸ್ತವ್ಯಕ್ಕೆ ನೀಡದೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಮಲೆ ಮಹದೇಶ್ವರನಿಗೆ ಮಹಾಮೋಸ: ಸಚಿವರ ಕೈಗೆ ರೆಡ್​​​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಗುತ್ತಿಗೆದಾರರು

ಇನ್ನು ಈ ನೂತನ ವಜ್ರಮಲೆ ಭವನದಲ್ಲಿ ಬರೋಬ್ಬರಿ 8 ವಿವಿಐಪಿ ಕೊಠಡಿಗಳಿದ್ದು, ಕೇವಲ ಈ ಕೊಠಡಿಗಳಿಗೆ ಮಾತ್ರ ಎಸಿ ಸೇರಿದಂತೆ ಮಂಚ, ಸೋಫಾ ಹಾಗೂ ಎಲ್ಲಾ ರೀತಿಯ ಫರ್ನಿಚರ್​ಗಳನ್ನ ಅಳವಡಿಸಲಾಗುತ್ತಿದೆ. ಇನ್ನುಳಿದ ಸಾಮಾನ್ಯ ಕೊಠಡಿಗಳಿಗೆ ಇನ್ನು ಪೀಠೋಪಕರಣ ಅಳವಡಿಕೆ ಮಾಡುವ ಕೆಲಸ ಮಾಡಲಾಗುತ್ತಿದೆ.

ಇತ್ತೀಚೆಗೆ ಸ್ವತಃ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್ ಮಂಜುನಾಥ್​​ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದು, 11 ಕೋಟಿ ರೂ ವೆಚ್ಛದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಪೀಠೋಪಕರಣದಲ್ಲಿ ತೇಗ ಮರವನ್ನ ಬಳಸದೆ ಬಿಳಿ ಮರ ಬಳಸಿದ್ದನ್ನ ಕಂಡು ಸ್ವತಃ ಸಚಿವ ಕೆ ವೆಂಕಟೇಶ್ ಕೆಂಡಾಮಂಡಲರಾದರು. ಕಳಪೆ ಕಾಮಗಾರಿ ನಡೆಸದಂತೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ

ಆರಂಭ ಶೂರತ್ವದಂತೆ ಆರಂಭಿಸಿ ಬಳಿಕ ಕೆಲಸ ಆದಮೇಲೆ ಯಾರಿಗೂ ಪ್ರಯೋಜನಕ್ಕೆ ಬಾರದೆ ಇರುವ ರೀತಿ ಮಾಡಿದ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ನಡೆ ಈಗ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದಿ ರೈಸ್ ಆಫ್ ಅಶೋಕ ವಿಮರ್ಶೆ: ಶೋಷಿತರ ದನಿಯಂತಿರುವ ಸಿನಿಮಾಗೆ ಮಾಸ್, ಕಮರ್ಷಿಯಲ್ ಸ್ಪರ್ಶ – Kannada News | The Rise of Ashoka Review: Sathish Ninasam new movie tells the story of oppressed class

ದಿ ರೈಸ್ ಆಫ್ ಅಶೋಕ

UA

  • Time – 133 Minutes
  • Released – February 27, 2026
  • Language – Kannada
  • Genre – Action, Drama

Cast – ಸತೀಶ್ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಸಂಪತ್ ಮೈತ್ರೇಯಾ, ಗೋಪಾಲಕೃಷ್ಣ ದೇಶಪಾಂಡೆ, ಯಶ್ ಶೆಟ್ಟಿ ಮುಂತಾದವರು.

Director – ವಿನೋದ್ ವಿ. ಧೋಂಡಲೆ

ನಟ ನೀನಾಸಂ ಸತೀಶ್ (Sathish Ninasam) ಅವರು ರಂಗಭೂಮಿ ಹಿನ್ನೆಲೆ ಉಳ್ಳವರು. ಸಾಮಾಜಿಕ ಕಳಕಳಿ ಇರುವ ಕಥೆಗಳನ್ನು ಅವರು ಆಯ್ಕೆ ಮಾಡುತ್ತಾರೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂದರೆ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ. ತುಳಿತಕ್ಕೆ ಒಳಗಾದ ಸಮಾಜದ ನೋವಿನ ಕಥೆ ಈ ಸಿನಿಮಾದಲ್ಲಿ ಇದೆ. ವಿನೋದ್ ವಿ. ಧೋಂಡಲೆ ನಿರ್ದೇಶನ ಮಾಡಿರುವ ಈ ಚಿತ್ರ ಫೆಬ್ರವರಿ 27ರಂದು ರಿಲೀಸ್ ಆಗಿದೆ. ಹಳ್ಳಿ ಹೈದನಾಗಿ ಸತೀಶ್ ಅವರು ಅಭಿನಯಿಸಿದ್ದಾರೆ. ಅವರಿಗೆ ಸಪ್ತಮಿ ಗೌಡ ಜೋಡಿ ಆಗಿದ್ದಾರೆ. ಸಿನಿಮಾದ ವಿಮರ್ಶೆ ಇಲ್ಲಿದೆ ಓದಿ..

ಬಹಳ ಹಿಂದೆಯೇ ಸೆಟ್ಟೇರಿದ್ದ ಸಿನಿಮಾ ‘ದಿ ರೈಸ್ ಆಫ್ ಅಶೋಕ’. ಇದರ ಬಿಡುಗಡೆ ತಡವಾಗಿದ್ದರೂ ಕೂಡ, ಅದರಲ್ಲಿ ಹೇಳಿರುವ ವಿಷಯ ಹಳೇ ಕಾಲದ್ದಾಗಿದ್ದರೂ ಕೂಡ ಈ ಸಿನಿಮಾ ಇಂದಿಗೂ ಎಂದೆಂದಿಗೂ ಪ್ರಸ್ತುತ ಎಂಬಂತಿದೆ. ಜಾತಿಯ ಕಾರಣಕ್ಕಾಗಿ ಶೋಷಣೆಗೆ ಒಳಗಾದ ಕೆಲವು ಸಮುದಾಯಗಳ ಕಷ್ಟದ ಕಥೆಯನ್ನು ಈ ಸಿನಿಮಾ ತೆರೆದಿಡುತ್ತದೆ.

ಈ ಚಿತ್ರದ ಕಥಾನಾಯಕ ಅಶೋಕ (ಸತೀಶ್) ಕ್ಷೌರಿಕ ಸಮುದಾಯಕ್ಕೆ ಸೇರಿದ ಯುವಕ. ಆತ ಓದಿ ಸರ್ಕಾರಿ ಅಧಿಕಾರಿ ಆಗಬೇಕು ಎಂಬುದು ತಂದೆಯ (ಬಿ. ಸುರೇಶ) ಆಸೆ. ಮಗ ಎಂದಿಗೂ ಕ್ಷೌರಿಕ ವೃತ್ತಿಗೆ ಬರಬಾರದು ಎಂಬ ಕಾರಣಕ್ಕೆ ಹಗಲಿರುಳು ಕಷ್ಟಪಟ್ಟು ದುಡಿಯುವ ತಂದೆಗೆ ಒಂದು ದಿನ ಆಘಾತ ಎದುರಾಗುತ್ತದೆ. ಸಿಕ್ಕ ಸರ್ಕಾರಿ ಕೆಲಸವನ್ನು ತ್ಯಜಿಸಿ ಮಗ ಕ್ಷೌರಿಕನಾಗಲು ನಿರ್ಧರಿಸುತ್ತಾನೆ! ಹಾಗಾದರೆ ಅಶೋಕನ ಆ ನಿರ್ಧಾರಕ್ಕೆ ಕಾರಣ ಏನು? ಮುಂದೇನಾಗುತ್ತದೆ? ಆತ ಸರ್ಕಾರಿ ಕೆಲಸ ಪಡೆಯುತ್ತಾನೋ ಇಲ್ಲವೋ ಎಂಬುದನ್ನು ಸಿನಿಮಾ ನೋಡಿ ತಿಳಿಯಬೇಕು.

ಶೋಷಿತ ವರ್ಗದ ಧ್ವನಿಯಾಗುವಂತಹ ಅನೇಕ ಸಿನಿಮಾಗಳು ಈಗಾಗಲೇ ಬಂದಿವೆ. ಅವುಗಳ ಸಾಲಿಗೆ ‘ರೈಸ್ ಆಫ್ ಅಶೋಕ’ ಸಿನಿಮಾ ಕೂಡ ಸೇರ್ಪಡೆ ಆಗಿದೆ. ಈ ಸಿನಿಮಾದ ಮೊದಲ ಶಕ್ತಿ ಎಂದರೆ ಪ್ರತಿಭಾವಂತ ಕಲಾವಿದರ ದಂಡು. ತಂದೆ ಪಾತ್ರ ಮಾಡಿರುವ ಬಿ. ಸುರೇಶ ಮತ್ತು ವಿಲನ್ ಆಗಿ ಅಬ್ಬರಿಸಿರುವ ಸಂಪತ್ ಮೈತ್ರೇಯಾ ಅವರು ಹೆಚ್ಚು ಗಮನ ಸೆಳೆಯುತ್ತಾರೆ. ಪಾತ್ರವೇ ತಾವಾಗಿ ಅವರು ಪ್ರೇಕ್ಷಕರ ಎದುರು ಬಂದಿದ್ದಾರೆ. ನಟ ಯಶ್ ಶೆಟ್ಟಿ ಕೂಡ ಕಡಿಮೆ ಏನಿಲ್ಲ. ಕಥೆಗೆ ತಿರುವು ನೀಡುವಂತಹ ಪಾತ್ರವನ್ನು ಗೋಪಾಲಕೃಷ್ಣ ದೇಶಪಾಂಡೆ ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ.

ಸಪ್ತಮಿ ಗೌಡ ಮತ್ತು ಸತೀಶ್ ನೀನಾಸಂ ಅವರ ಜೋಡಿ ಚೆನ್ನಾಗಿದೆ. ಬಡವನ ಹೋರಾಟದ ಕಥೆಯಲ್ಲಿ ಒಂದು ಸುಂದರ ಪ್ರೇಮ್ ಕಹಾನಿ ಕೂಡ ಇದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ಸಪ್ತಮಿ ಗೌಡ ಅವರು ಅಭಿಮಾನಿಗಳಿಗೆ ಇಷ್ಟವಾಗುವಂತೆ ನಟಿಸಿದ್ದಾರೆ. ಸತೀಶ್ ಅವರು ಎಮೋಷನಲ್ ದೃಶ್ಯಗಳಲ್ಲಿ ಮಾತ್ರವಲ್ಲದೇ ಆ್ಯಕ್ಷನ್ ಮೂಲಕವೂ ಅಬ್ಬರಿಸಿದ್ದಾರೆ.

‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಕಥೆ ನಡೆಯುವುದು ರೆಟ್ರೋ ಕಾಲದಲ್ಲಿ. ಆ ಕಾಲಘಟ್ಟವನ್ನು ಬಹಳ ಚೆನ್ನಾಗಿ ತೋರಿಸಲಾಗಿದೆ. ಸಿನಿಮಾದ ಪ್ರತಿ ದೃಶ್ಯವನ್ನು ನೋಡುವಾಗ ಆ ಕಾಲದ ಹಳ್ಳಿ ಪರಿಸರಕ್ಕೆ ಹೋಗಿ ಬಂದಂತಹ ಅನುಭವ ಆಗುತ್ತದೆ. ಛಾಯಾಗ್ರಹಣ, ಹಾಡುಗಳು, ಹಿನ್ನೆಲೆ ಸಂಗೀತ.. ಹೀಗೆ ಎಲ್ಲ ತಾಂತ್ರಿಕ ವಿಭಾಗಗಳಲ್ಲೂ ಈ ಸಿನಿಮಾ ಗಮನ ಸೆಳೆಯುತ್ತದೆ.

ಇದನ್ನೂ ಓದಿ: Super Hit Review: ಗಿಲ್ಲಿ ‘ಸೂಪರ್ ಹಿಟ್’ ಜರ್ನಿಗೆ ಕಾಮಿಡಿ ಕಲಾವಿದರ ಸಾಥ್

ಈ ಚಿತ್ರದ ಮೊದಲಾರ್ಧವನ್ನು ಸಾಧ್ಯವಾದಷ್ಟು ನೈಜವಾಗಿ ಕಟ್ಟಿಕೊಡಲಾಗಿದೆ. ಆದರೆ ದ್ವಿತೀಯಾರ್ಧದಲ್ಲಿ ಮಾಸ್ ಅಂಶಗಳು ಹೆಚ್ಚಾಗಿ ಕಾಣಿಸಲು ಶುರುವಾದ ಬಳಿಕ ಸಿನಿಮಾ ಕೊಂಚ ಹಳಿ ತಪ್ಪಿದಂತಾಗುತ್ತದೆ. ಕಮರ್ಷಿಯಲ್ ಸೂತ್ರಗಳ ಚೌಕಟ್ಟಿಗೆ ಸಿಲುಕಿದ ನಂತರ ಇದು ಕೂಡ ಒಂದು ಮಾಮೂಲಿ ಹೊಡಿಬಡಿ ಸಿನಿಮಾ ಎಂಬಂತೆ ಭಾಸವಾಗುತ್ತದೆ. ಕಥೆಯ ಆಶಯವನ್ನು ಮಾಸ್, ಮಸಾಲೆ ಅಂಶಗಳು ಓವರ್​ಟೇಕ್ ಮಾಡಿದಂತಾಗಿದೆ. ಅದರಿಂದಾಗಿ ಒಂದು ಡಿಫರೆಂಟ್ ಸಿನಿಮಾ ಆಗಬಹುದಾಗಿದ್ದ ಅವಕಾಶ ಕೈತಪ್ಪಿದೆ. ಅದರ ಹೊರತಾಗಿಯೂ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಒಂದು ಪ್ರಾಮಾಣಿಕ ಪ್ರಯತ್ನವಾಗಿ ನೋಡಿಸಿಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ ಇದು ಕೇವಲ ಪ್ರಶ್ನೆಗಳು ಮತ್ತು ಉತ್ತರಗಳನ್ನು ಒಳಗೊಂಡಿರುವುದಿಲ್ಲ, ಆಳವಾದ ವಿಚಾರ ವಿನಿಮಯವನ್ನು ಕೂಡ ಒಳಗೊಂಡಿರುತ್ತದೆ.

ಈ ವಿಶೇಷ ಕಾರ್ಯಕ್ರಮವನ್ನು ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ನಡೆಸಿಕೊಡಲಿದ್ದಾರೆ. ಅವರ ಸಂಭಾಷಣೆಯ ಶೈಲಿ ಸರಳವಾದರೂ ಆಳವಾಗಿದ್ದು, ಅತಿಥಿಗಳು ಮುಕ್ತವಾಗಿ ಮನಬಿಚ್ಚಿ ಮಾತನಾಡಲು ಅವಕಾಶ ಕಲ್ಪಿಸಿಕೊಡುತ್ತದೆ. ಕ್ರೀಡೆ, ಸಿನಿಮಾ, ಫ್ಯಾಷನ್ ಮತ್ತು ಇತರ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳು ಈ ಸೀಸನ್​​ನಲ್ಲಿ ಆಗಮಿಸಿ, ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: Duologue NXTನಲ್ಲಿ ಬರುಣ್ ದಾಸ್ ಜೊತೆ ತಮ್ಮ ಭಾವನೆ ಹಂಚಿಕೊಳ್ಳಲಿದ್ದಾರೆ ಪೂಜಾ ಜೈನ್ ಗುಪ್ತಾ

ಈ ಸೀಸನ್‌ನಲ್ಲಿ ಹಲವು ವೈವಿಧ್ಯಮಯ ಕ್ಷೇತ್ರಗಳ ದಿಗ್ಗಜರು ಭಾಗವಹಿಸಲಿದ್ದಾರೆ. ಈ ವೈವಿಧ್ಯತೆಯೇ ಕಾರ್ಯಕ್ರಮದ ದೊಡ್ಡ ಶಕ್ತಿ. ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಭಾರತೀಯ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಅವರೊಂದಿಗೆ ಆರಂಭವಾಗಲಿದೆ. ನಂತರ ಕ್ರೀಡೆ ಮತ್ತು ಮನರಂಜನೆ ಎರಡರಲ್ಲೂ ಹೆಸರು ಮಾಡಿರುವ ಟೆನಿಸ್ ಆಟಗಾರ ಮತ್ತು ನಟ ವಿಜಯ್ ಅಮೃತರಾಜ್ ಭಾಗವಹಿಸಲಿದ್ದಾರೆ. ಇದಾದ ನಂತರ ಫುಟ್ಬಾಲ್ ದಂತಕತೆಯಾದ ಲೋಥರ್ ಮ್ಯಾಥ್ಯೂಸ್, ಪ್ರಸಿದ್ಧ ಫ್ಯಾಷನ್ ಪರ್ಸನಾಲಿಟಿ ಬಿಯಾಂಕಾ ಬಾಲ್ಟಿ ತಮ್ಮ ಸ್ಪೂರ್ತಿದಾಯಕ ಕಥೆಯನ್ನು ಹಂಚಿಕೊಳ್ಳಲಿದ್ದಾರೆ. ಈ ಸೀಸನ್‌ನ ಅಂತಿಮ ಸಂಚಿಕೆಯಲ್ಲಿ ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಈ ದಿನದಿಂದ 19ನೇ ಸೀಸನ್ ಆರಂಭ – Kannada News | IPL 2026 Schedule Update: New Start Date March 28, Elections Delay Announcement

2026 ರಟಿ20 ವಿಶ್ವಕಪ್ ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಲಿದೆ. ಭಾರತದಲ್ಲಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್​ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ವೇಳಾಪಟ್ಟಿ ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಈ ಟೂರ್ನಿಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದುವರೆಗೆ ಮಾರ್ಚ್​ 26 ರಿಂದ ಟೂರ್ನಿ ಆರಂಭವಾಗಲಿದೆ ಎನ್ನಲಾಗುತ್ತಿತ್ತು. ಆದರೀಗ ಮಾರ್ಚ್ 26 ರ ಬದಲಿಗೆ ಮಾರ್ಚ್ 28 ರಂದು ಐಪಿಎಲ್​ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ.

ವಾಸ್ತವವಾಗಿ 2025 ರ ಡಿಸೆಂಬರ್​ನಲ್ಲಿ ಅಬುಧಾಬಿಯಲ್ಲಿ ನಡೆದ ಆಟಗಾರರ ಹರಾಜಿನ ಸಂದರ್ಭದಲ್ಲಿ, ಬಿಸಿಸಿಐ ಐಪಿಎಲ್ 2026 ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ ಎಂದು ಘೋಷಿಸಿತ್ತು. ಆದರೀಗ ಮಾರ್ಚ್ 28 ರಿಂದ ಪಂದ್ಯಾವಳಿಯನ್ನು ಪ್ರಾರಂಭಿಸಲು ಬಿಸಿಸಿಐ ನಿರ್ಧರಿಸಿದೆ. ಆರಂಭದ ದಿನಾಂಕದಲ್ಲಿ ಬದಲಾವಣೆಯಾದರೂ, ಫೈನಲ್ ಪಂದ್ಯ ಮಾತ್ರ ಈ ಮೊದಲೇ ನಿರ್ಧರಿಸಿದಂತೆ ಮೇ 31 ರಂದು ನಡೆಯಲಿದೆ. ಇಎಸ್‌ಪಿಎನ್-ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಈ ನಿರ್ಧಾರ ಮತ್ತು ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಔಪಚಾರಿಕವಾಗಿ ಅನುಮೋದಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಿನ ವಾರ ಸಭೆ ಸೇರಲಿದೆ.

ಐಪಿಎಲ್ ವೇಳಾಪಟ್ಟಿ ಏಕೆ ವಿಳಂಬ?

ಬಿಸಿಸಿಐ ಇನ್ನೂ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದಕ್ಕೆ ಕಾರಣ, ನಾಲ್ಕು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು. ಮುಂದಿನ ಕೆಲವು ತಿಂಗಳುಗಳಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇರಳದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಇವುಗಳಲ್ಲಿ, ಐಪಿಎಲ್ ಪಂದ್ಯಗಳನ್ನು ತಮಿಳುನಾಡು (ಚೆನ್ನೈ), ಪಶ್ಚಿಮ ಬಂಗಾಳ (ಕೋಲ್ಕತ್ತಾ) ಮತ್ತು ಅಸ್ಸಾಂ (ಗುವಾಹಟಿ) ಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಬಿಸಿಸಿಐ, ಚುನಾವಣಾ ಆಯೋಗದಿಂದ ಚುನಾವಣಾ ದಿನಾಂಕಗಳ ಪ್ರಕಟಣೆಗಾಗಿ ಕಾಯುತ್ತಿದೆ. ಅದಕ್ಕಾಗಿಯೇ 2026 ರ ಐಪಿಎಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿಲ್ಲ. ಇದರ ಜೊತೆಗೆ ಎರಡು ಹಂತಗಳಲ್ಲಿ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.

IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ

ಮೊದಲ ಪಂದ್ಯ ಎಲ್ಲಿ ನಡೆಯಲಿದೆ?

ಇದಲ್ಲದೆ, ಪಂದ್ಯಾವಳಿಯ ಮೊದಲ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಕೂಡ ಕುತೂಹಲ ಮೂಡಿಸಿದೆ. ಸಾಂಪ್ರದಾಯಿಕವಾಗಿ, ಹಿಂದಿನ ಆವೃತ್ತಿಯ ಚಾಂಪಿಯನ್ ತಂಡವು ಮೊದಲ ಪಂದ್ಯವನ್ನು ಆಡಲಿದ್ದು, ಆ ಪಂದ್ಯ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಆಡಲಾಗುತ್ತದೆ. ಆದಾಗ್ಯೂ, ಕಳೆದ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತವರು ಮೈದಾನವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಐಪಿಎಲ್ ಮರಳುವ ಬಗ್ಗೆ ಪರಿಸ್ಥಿತಿ ಸ್ಪಷ್ಟವಾಗಿಲ್ಲ. ಕಳೆದ ವರ್ಷ, ಆರ್‌ಸಿಬಿ ಗೆಲುವಿನ ನಂತರದ ಆಚರಣೆಯ ಸಮಯದಲ್ಲಿ, ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸಿ 13 ಮಂದಿ ಅಮಾಯಕರು ಪ್ರಾಣಬಿಟ್ಟಿದ್ದರು. ಪರಿಣಾಮವಾಗಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಹುಡುಗಿ ಪಕ್ಕ ಕುಳಿತ್ತಿದ್ದಕ್ಕೆ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Moral policing In Chikkamagaluru: Youths Assaults On Hindu Students for Sitting Muslim Girl

ಚಿಕ್ಕಮಗಳೂರು, (ಫೆಬ್ರವರಿ 27):   ಚಿಕ್ಕಮಗಳೂರಿನಲ್ಲಿ (Chikkamagaluru:) ಮತ್ತೊಂದು ನೈತಿಕ ಪೊಲೀಸ್ ಗಿರಿ (moral policing) ನಡೆದಿದೆ. ಮೊನ್ನೇ ಅಷ್ಟೇ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಹೋಗುತ್ತಿದ್ದಾಗ ದಲಿತ ಕ್ರಿಶ್ಚಿಯನ್ ಬಾಲಕನೋರ್ವನನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನೇನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಿದೆ. ಚಿಕ್ಕಮಗಳೂರು ನಗರದ ಸಹ್ಯಾದ್ರಿ ಕಾಲೇಜು ಬಸ್‌ನಲ್ಲಿ ಮುಸ್ಲಿಂ (Muslim) ವಿದ್ಯಾರ್ಥಿನಿಯ ಪಕ್ಕ ಕುಳಿತಿದ್ದಕ್ಕೆ ಹಿಂದೂ (Hindu) ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ಮಾಡಲಾಗಿದೆ.

ಇಂದು (ಫೆಬ್ರವರಿ 27) ಬೆಳಗ್ಗೆ ಓರ್ವ ಮುಸ್ಲಿಂ ಹುಡುಗಿ ಹಾಗೂ ಇಬ್ಬರು ಹಿಂದೂ ಹುಡುಗರು ಬಸ್​​ನ ಒಂದೇ ಸೀಟಿನಲ್ಲಿ ಕುಳಿತು ಕಾಲೇಜಿಗೆ ಆಗಮಿಸಿದ್ದರು. ಹೀಗಾಗಿ ಮುಸ್ಲಿಂ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ ಎಂದು ಯೋಗೇಶ್ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಇನ್ನು ಜಗಳ ಬಿಡಿಸಲು ಹೋದ ಜಯಂತ್‌ ಮೇಲೂ ಸಹ ಸಾಲಿದ್‌, ರಶೀದ್‌ ಎನ್ನುವ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ಬೈಕ್ ಅಡ್ಡಗಟ್ಟಿ ದಲಿತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

ಎಲ್ಲರೂ ಒಂದೇ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಯೋಗೇಶ್ ಹಾಗೂ ಜಯಂತ್‌, ಮುಸ್ಲಿಂ ವಿದ್ಯಾರ್ಥಿನಿ ಸ್ನೇಹಿತರಾಗಿದ್ದು, ಕಾಲೇಜು ಬಸ್​​ನಲ್ಲೇ ಒಂದೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಇದರಿಂದ ಕೆರಳಿದ ಸಾಲಿದ್‌ ಹಾಗೂ ರಶೀದ್‌,  ಯೋಗೇಶ್ ಮತ್ತು ಜಯಂತ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನು ಈ ಗಲಾಟೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ, ಬಸವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಬಸವನಹಳ್ಳಿ ಪೊಲೀಸರು, ಯೋಗೇಶ್, ಜಯಂತ್ ,ರಶೀದ್ ನನ್ನ ಠಾಣೆಗೆ ಕರೆದೊಯ್ದ ವಿಚಾರಣೆಗೊಳಪಡಿಸಿದ್ದಾರೆ.

ಒಂದೇ ಕಾಲೇಜಿನಲ್ಲಿ ಓದುತ್ತಿದ್ದರೆ ಸಾಮಾನ್ಯವಾಗಿ ಎಲ್ಲರೂ ಒಂದೇ ಎನ್ನುವ ಭಾವನೆ ಇರುತ್ತೆ. ಯಾವುದೇ ಭೇದ-ಭಾವ ಇಲ್ಲದ ಗೆಳೆತನ, ಒಬ್ಬರಿಗೊಬ್ಬರ ನಡುವೆ ಅನ್ಯೂನ್ಯತೆ ಇರುತ್ತೆ. ಇದನ್ನೇ ಕೆಲವರು ತಪ್ಪಾಯಿ ಅರ್ಥೈಸಿಕೊಂಡು ಪ್ರಶ್ನಿಸಿವುದು ವಿಪರ್ಯಾಸವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version