ಬಂಗಾಳ ಚುನಾವಣೆ 2026: ಎಸ್​ಐಆರ್ ಸುತ್ತಲಿನ ಆರೋಪಗಳು ಹಾಗೂ ಸತ್ಯಾಸತ್ಯತೆಗಳು – Kannada News | West Bengal Election: Debunking Voter List Fraud & SIR Process Reality

ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿImage Credit source: PTI

ಕೋಲ್ಕತ್ತಾ, ಮೇ 8: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳದ ಐತಿಹಾಸಿಕ ವಿಧಾನಸಭಾ ಚುನಾವಣೆಯ (West Bengal Assembly Elections 2026) ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ, ಸೋಲಿನಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳ ಒಕ್ಕೂಟವು ಚುನಾವಣಾ ಪ್ರಕ್ರಿಯೆಯ ನಿಷ್ಪಕ್ಷಪಾತತೆಯನ್ನೇ ಪ್ರಶ್ನಿಸಲು ಆರಂಭಿಸಿದೆ. ವಿಶೇಷವಾಗಿ, ಚುನಾವಣಾ ಆಯೋಗವು ಹಮ್ಮಿಕೊಂಡಿದ್ದ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಸೋಲಿಗೆ ಕಾರಣವಾಯಿತು ಮತ್ತು ಇದು ಮತದಾರರ ಪಟ್ಟಿಯ ಮೇಲೆ ನಡೆದ “ವ್ಯವಸ್ಥಿತ ದಾಳಿ” ಎಂದು ರಾಹುಲ್ ಗಾಂಧಿ ನೇತೃತ್ವದ ಇಂಡಿ (INDI) ಮೈತ್ರಿಕೂಟ ಆರೋಪಿಸುತ್ತಿದೆ.

ಆದರೆ, ಲಭ್ಯವಿರುವ ಅಧಿಕೃತ ಅಂಕಿ-ಅಂಶಗಳು, ದೇಶದ ಪ್ರಜಾಪ್ರಭುತ್ವದ ನಿಯಮಾವಳಿಗಳು ಮತ್ತು ನ್ಯಾಯಾಂಗದ ಕಣ್ಗಾವಲನ್ನು ಸೂಕ್ಷ್ಮವಾಗಿ ಗಮನಿಸಿದರೆ, ವಿರೋಧ ಪಕ್ಷಗಳ ಈ ಆರೋಪಗಳು ಕೇವಲ ರಾಜಕೀಯ ಹತಾಶೆಯಿಂದ ಕೂಡಿದ್ದು, ಸತ್ಯಕ್ಕೆ ದೂರವಾಗಿವೆ ಎಂಬುದು ಸಾಬೀತಾಗುತ್ತದೆ. ಈ ಕುರಿತಾದ ನೈಜ ಸತ್ಯಾಂಶಗಳನ್ನು ದತ್ತಾಂಶಗಳ ಸಮೇತ ಇಲ್ಲಿ ವಿಶ್ಲೇಷಿಸಲಾಗಿದೆ.

1. SIR ಎಂಬುದು ದೇಶಾದ್ಯಂತ ನಡೆಯುವ ಸಾಮಾನ್ಯ ಸಂವಿಧಾನಬದ್ಧ ಪ್ರಕ್ರಿಯೆ

ವಿಶೇಷ ತೀವ್ರ ಪರಿಷ್ಕರಣೆ (SIR) ಎಂಬುದು ಪಶ್ಚಿಮ ಬಂಗಾಳ ಚುನಾವಣೆಯನ್ನು ಗುರಿಯಾಗಿಸಿಕೊಂಡು ರೂಪಿಸಿದ ಹೊಸ ಕಾಯ್ದೆಯಾಗಲಿ ಅಥವಾ ಅಸ್ತ್ರವಾಗಲಿ ಅಲ್ಲ. ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿಡಲು, ಮರಣ ಹೊಂದಿದವರ, ದ್ವಿಪ್ರತಿ (Duplicate) ಹೊಂದಿರುವ ಮತ್ತು ಶಾಶ್ವತವಾಗಿ ವಲಸೆ ಹೋಗಿರುವ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಿಯಮಿತವಾಗಿ ಹಮ್ಮಿಕೊಳ್ಳುವ ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಿದೆ. ಈ ಹಿಂದೆ ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಇದೇ ಮಾದರಿಯ ಪರಿಷ್ಕರಣೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಹೀಗಿರುವಾಗ, ಇದನ್ನು ಬಂಗಾಳಕ್ಕೆ ಮಾತ್ರ ಸೀಮಿತಗೊಳಿಸಿ ರಾಜಕೀಯ ಪಿತೂರಿ ಎಂದು ಬಿಂಬಿಸಲು ಆಗುವುದಿಲ್ಲ.

2. ಪಕ್ಷಪಾತದ ಆರೋಪಕ್ಕೆ ಅಂಕಿ-ಅಂಶಗಳ ಉತ್ತರ

ವಿರೋಧ ಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳ ಮತದಾರರನ್ನು ಮಾತ್ರ ಗುರಿಯಾಗಿಸಿಕೊಂಡು ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆಕ್ಷೇಪಣೆಯನ್ನು ರಾಷ್ಟ್ರೀಯ ದತ್ತಾಂಶಗಳು ತಳ್ಳಿಹಾಕುತ್ತವೆ.

ಕಳೆದ ಕೆಲವು ವರ್ಷಗಳಲ್ಲಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲೂ ಸಹ ಪಶ್ಚಿಮ ಬಂಗಾಳಕ್ಕೆ ಸಮಾನವಾಗಿ ಅಥವಾ ಅದಕ್ಕಿಂತ ಹೆಚ್ಚಿನ ಶೇಕಡಾವಾರು ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಪರಿಷ್ಕರಿಸಿ ಕೈಬಿಡಲಾಗಿತ್ತು. ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ದೇಶಾದ್ಯಂತ ಒಂದೇ ರೀತಿಯ ತಾಂತ್ರಿಕ ಮತ್ತು ಆಡಳಿತಾತ್ಮಕ ನಿಯಮಗಳನ್ನು ಬಳಸಿ ಈ ಪ್ರಕ್ರಿಯೆಯನ್ನು ನಡೆಸಿದೆ.

ಇದನ್ನೂ ಓದಿ: ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ

3. ಮತದಾರರ ಹೆಸರು ಕಡಿತಕ್ಕೂ ಬಿಜೆಪಿಯ ಗೆಲುವಿಗೂ ಸಂಬಂಧವಿಲ್ಲ

ವಿರೋಧ ಪಕ್ಷಗಳ ಆರೋಪದಂತೆ, ಒಂದು ವೇಳೆ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಬಿಜೆಪಿಗೆ ಲಾಭ ತಂದುಕೊಡಲು ಎಂಬ ವಾದವನ್ನು ಗಣಿತದ ಲೆಕ್ಕಾಚಾರಗಳೇ ಸುಳ್ಳಾಗಿಸುತ್ತವೆ:

ಅತಿ ಹೆಚ್ಚು ಹೆಸರು ಕಡಿತಗೊಂಡ ಕ್ಷೇತ್ರಗಳು: ಪಶ್ಚಿಮ ಬಂಗಾಳದಾದ್ಯಂತ ಅತಿ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾದ ಟಾಪ್ 20 ವಿಧಾನಸಭಾ ಕ್ಷೇತ್ರಗಳ ಪೈಕಿ TMC ಬರೋಬ್ಬರಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ! ಇನ್ನುಳಿದ ಕ್ಷೇತ್ರಗಳಲ್ಲಿ ಬಿಜೆಪಿ 6 ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆದ್ದಿವೆ. ಒಂದು ವೇಳೆ ಇದು ಆಡಳಿತಾರೂಢ ಪಕ್ಷದ ವಿರುದ್ಧ ನಡೆದ ವ್ಯವಸ್ಥಿತ ಸಂಚಾಗಿದ್ದರೆ, ಅತಿ ಹೆಚ್ಚು ಹೆಸರು ಕಡಿತಗೊಂಡ ಸಂಸೇರ್‌ಗಂಜ್, ಲಾಲ್‌ಗೊಲಾ, ಭಗಬಾಂಗೋಲಾ ಮತ್ತು ಮೇಟಿಯಾಬುರುಜ್ ನಂತಹ ಕ್ಷೇತ್ರಗಳಲ್ಲಿ TMC ಹೇಗೆ ಜಯಭೇರಿ ಬಾರಿಸಲು ಸಾಧ್ಯವಿತ್ತು?

ಕಡಿಮೆ ಅಂತರದ ಕ್ಷೇತ್ರಗಳ ಚಿತ್ರಣ: ರಾಜ್ಯದ ಒಟ್ಟು 293 ಕ್ಷೇತ್ರಗಳ ಪೈಕಿ 49 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿನ ಅಂತರವು ಆ ಕ್ಷೇತ್ರದಲ್ಲಿ ಕೈಬಿಡಲಾದ ಮತಗಳಿಗಿಂತ ಕಡಿಮೆಯಿತ್ತು. ಈ 49 ತೀವ್ರ ಪೈಪೋಟಿಯ ಕ್ಷೇತ್ರಗಳಲ್ಲಿ ಬಿಜೆಪಿ 26 ಸ್ಥಾನಗಳನ್ನು ಗೆದ್ದರೆ, TMC ಮತ್ತು ಕಾಂಗ್ರೆಸ್ ಒಟ್ಟಾಗಿ 23 ಸ್ಥಾನಗಳನ್ನು (TMC 21, ಕಾಂಗ್ರೆಸ್ 2) ಗೆದ್ದಿವೆ. ಈ ಸಮಾನ ಹಂಚಿಕೆಯು ಪ್ರಕ್ರಿಯೆಯು ಯಾವುದೇ ಪಕ್ಷಪಾತವಿಲ್ಲದೆ ನಡೆದಿರುವುದಕ್ಕೆ ಗಟ್ಟಿಯಾದ ಪುರಾವೆಯಾಗಿದೆ.

4. ಪ್ರಜಾಪ್ರಭುತ್ವದ ‘ಫಸ್ಟ್‌-ಪಾಸ್ಟ್-ದಿ-ಪೋಸ್ಟ್’ ನಿಯಮದ ಅರಿವಿಲ್ಲದಿರುವುದು

ಕೇವಲ ಶೇ. 4.8 ರಷ್ಟು ಮತಗಳ ಅಂತರದಿಂದ ಸೀಟುಗಳ ಸಂಖ್ಯೆಯಲ್ಲಿ ಇಷ್ಟೊಂದು ಭಾರಿ ವ್ಯತ್ಯಾಸ ಉಂಟಾಗಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳು ಎತ್ತುತ್ತಿವೆ. ಆದರೆ, ಇದು ಭಾರತದ ‘ಫಸ್ಟ್‌-ಪಾಸ್ಟ್-ದಿ-ಪೋಸ್ಟ್’ (FPTP) ಚುನಾವಣಾ ವ್ಯವಸ್ಥೆಯ ಅರಿವಿಲ್ಲದಿರುವುದನ್ನು ತೋರಿಸುತ್ತದೆ.

ಭಾರತೀಯ ರಾಜಕೀಯ ಇತಿಹಾಸದಲ್ಲಿ ಕೇವಲ ಶೇ. 1 ರಿಂದ ಶೇ. 3 ರಷ್ಟು ಮತಗಳ ಅಂತರವು ಇಡೀ ಸೀಟುಗಳ ಸಮೀಕರಣವನ್ನೇ ಬದಲಾಯಿಸಿದ ನೂರಾರು ಉದಾಹರಣೆಗಳಿವೆ (ಉದಾಹರಣೆಗೆ: ಹಿಮಾಚಲ ಪ್ರದೇಶ 2022, ತೆಲಂಗಾಣ 2023). ಈ ಚುನಾವಣೆಯಲ್ಲಿ ಬಿಜೆಪಿ ಶೇ. 45.84 ಮತಗಳೊಂದಿಗೆ 207 ಸ್ಥಾನಗಳನ್ನು ಗೆದ್ದುಕೊಂಡರೆ, TMC ಶೇ. 41.08 ಮತಗಳೊಂದಿಗೆ 80 ಸ್ಥಾನಗಳಿಗೆ ಕುಸಿದಿದೆ. ಈ 4.8% ಮತಗಳ ಮುನ್ನಡೆಯು ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಗಳು ಸಣ್ಣ ಮತ್ತು ಮಧ್ಯಮ ಅಂತರದ ಗೆಲುವು ಸಾಧಿಸಲು ಗಣಿತದ ಪ್ರಕಾರ ಸಂಪೂರ್ಣವಾಗಿ ಪೂರಕವಾಗಿದೆ.

5. ಕಾಂಗ್ರೆಸ್ ಪಕ್ಷದ ಇಬ್ಬಂದಿ ಧೋರಣೆ

ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಕೆದಕಿದರೆ ಅವರ ದ್ವಂದ್ವ ನೀತಿ ಸ್ಪಷ್ಟವಾಗುತ್ತದೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ 12 ಲಕ್ಷಕ್ಕೂ ಹೆಚ್ಚು ಮತದಾರರನ್ನು ಸೇರಿಸಲಾಗಿತ್ತು ಮತ್ತು 6 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿತ್ತು. ಆದರೆ, ಆ ಚುನಾವಣೆಯಲ್ಲಿ ತಮಗೆ ಗೆಲುವಾದಾಗ ಕಾಂಗ್ರೆಸ್ ಪಕ್ಷವು ಇಂತಹ ಯಾವುದೇ ಪ್ರಶ್ನೆಗಳನ್ನು ಎತ್ತಲಿಲ್ಲ. ಸೋತಾಗ ಮಾತ್ರ ಸಾಂವಿಧಾನಿಕ ಸಂಸ್ಥೆಗಳನ್ನು ಮತ್ತು ಮತದಾರರ ಪಟ್ಟಿಯನ್ನು ಸಂಶಯದ ಕಣ್ಣಿನಿಂದ ನೋಡುವುದು ರಾಜಕೀಯವಾಗಿ ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

6. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ನೇರ ಉಸ್ತುವಾರಿ

ಇಡೀ ಚುನಾವಣಾ ಪ್ರಕ್ರಿಯೆ ಮತ್ತು SIR ಅಭಿಯಾನವು ದೇಶದ ಸರ್ವೋಚ್ಚ ನ್ಯಾಯಾಲಯ (Supreme Court) ಮತ್ತು ಕಲ್ಕತ್ತಾ ಹೈಕೋರ್ಟ್‌ನ ಅತ್ಯಂತ ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ದಾಖಲಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯಗಳು ಸೂಕ್ಷ್ಮವಾಗಿ ಪರಿಶೀಲಿಸಿ, ಚುನಾವಣಾ ಆಯೋಗದ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದ್ದವು.

ಅಲ್ಲದೆ, ಯಾವುದೇ ತಪ್ಪು ಕಡಿತಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ನ್ಯಾಯಮಂಡಳಿಗಳ ಅವಕಾಶವಿತ್ತು. ಉದಾಹರಣೆಗೆ, ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಮೊದಲು ಕೈಬಿಡಲಾಗಿತ್ತು. ಆದರೆ ಅವರು ಕಾನೂನಾತ್ಮಕವಾಗಿ ಮೇಲ್ಮನವಿ ಸಲ್ಲಿಸಿ ತಮ್ಮ ಹೆಸರನ್ನು ಮರಳಿ ಸೇರಿಸಿಕೊಂಡರು ಮತ್ತು ನಂತರ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದರು. ಹೀಗಿರುವಾಗ, ಇಡೀ ವ್ಯವಸ್ಥೆಯನ್ನು “ಚುನಾವಣಾ ಕಳ್ಳತನ” ಎಂದು ಕರೆಯುವುದು ದೇಶದ ನ್ಯಾಯಾಂಗ ವ್ಯವಸ್ಥೆಗೆ ಮಾಡುವ ಅಪಚಾರವಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

7. ಬಂಗಾಳದಲ್ಲಿ ನಡೆದದ್ದು ನೈಜ ರಾಜಕೀಯ ಬದಲಾವಣೆ ಮತ್ತು ಆಡಳಿತ ವಿರೋಧಿ ಅಲೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧಿಸಿರುವ ಅಭೂತಪೂರ್ವ ಗೆಲುವಿಗೆ ಆಡಳಿತಾತ್ಮಕ ಕಾರಣಗಳಿಗಿಂತ ಹೆಚ್ಚಾಗಿ ಜನರಲ್ಲಿದ್ದ ಆಡಳಿತ ವಿರೋಧಿ ಅಲೆ (Anti-Incumbency) ಮುಖ್ಯ ಕಾರಣವಾಗಿದೆ:

  • ಸಚಿವರ ಸೋಲು: 15 ವರ್ಷಗಳ ಸುದೀರ್ಘ ಆಡಳಿತದ ನಂತರ ರಾಜ್ಯದಲ್ಲಿದ್ದ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆಯ ಹದಗೆಟ್ಟ ಸ್ಥಿತಿಯಿಂದಾಗಿ ಜನರು ಬದಲಾವಣೆ ಬಯಸಿದ್ದರು. ಇದರ ಪರಿಣಾಮವಾಗಿ, ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಭವಾನಿಪುರ ಕ್ಷೇತ್ರದಲ್ಲಿ) ಸೇರಿದಂತೆ TMC ಯ 35 ಸಚಿವರ ಪೈಕಿ 22 ಸಚಿವರು ಘೋರ ಸೋಲನ್ನು ಅನುಭವಿಸಿದ್ದಾರೆ.
  • ಮಹಿಳಾ ಮತಗಳ ಒಲವು ಬದಲಾವಣೆ: ಈ ಹಿಂದೆ TMC ಯ ಪ್ರಮುಖ ಬೆಂಬಲ ಶಕ್ತಿಯಾಗಿದ್ದ ಮಹಿಳಾ ಮತದಾರರು, ಆರ್ಥಿಕ ಬಿಕ್ಕಟ್ಟು ಮತ್ತು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಎದುರಾದ ಸವಾಲುಗಳಿಂದಾಗಿ ಈ ಬಾರಿ ಬಿಜೆಪಿಯತ್ತ ಮುಖ ಮಾಡಿದ್ದಾರೆ.
  • ಮೂಲ ಮತಗಳ ವಿಭಜನೆ: ಮುರ್ಶಿದಾಬಾದ್, ಮಾಲ್ಡಾದಂತಹ ಅಲ್ಪಸಂಖ್ಯಾತರು ಹೆಚ್ಚಿರುವ ಜಿಲ್ಲೆಗಳಲ್ಲಿ ಮತಗಳು TMC, ಕಾಂಗ್ರೆಸ್, ಕಮ್ಯುನಿಸ್ಟ್ (CPIM) ಮತ್ತು ಇತರೆ ಸ್ಥಳೀಯ ಪಕ್ಷಗಳ ನಡುವೆ ಹರಿದು ಹಂಚಿಹೋಗಿದ್ದು ಬಿಜೆಪಿಯ ಸುಲಭ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ! ಮಾವ, ಭಾವ ಅಂದರ್ – Kannada News | Anekal Horror: Man Burnt Alive by In Laws Over Domestic Dispute; Two Arrested After Dying Declaration

ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ!

ಆನೇಕಲ್, ಮೇ 08: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ (Anekal) ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿಕೊಡುವಂತೆ ಕೇಳಲು ಹೋದ ವ್ಯಕ್ತಿಯ ಮೇಲೆ ಆತನ ಮಾವ ಮತ್ತು ಭಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಾವಿಗೂ ಮುನ್ನ ತನ್ನ ಮೇಲಾದ ದೌರ್ಜನ್ಯದ ಕುರಿತು ವ್ಯಕ್ತಿ ಹೇಳಿಕೊಂಡಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಪತ್ನಿ-ಮಕ್ಕಳನ್ನು ಕರೆದೊಯ್ಯಲು ಬಂದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಅತ್ತೆ ಮನೆಯವರು.
  • 19 ದಿನಗಳ ಕಾಲ ಹೋರಾಡಿ ಮೃತಪಟ್ಟ ನವೀನ್
  • ಮ್ಯಾಜಿಸ್ಟ್ರೇಟ್ ಎದುರು ತನ್ನ ಸಾವಿಗೆ ಕುಟುಂಬಸ್ಥರೇ ಕಾರಣವೆಂದು ಹೇಳಿಕೆ.

ಮನೆಗೆ ಬಾ ಎಂದಿದ್ದಕ್ಕೆ ಒಪ್ಪದ ಹೆಂಡತಿ

ಆನೇಕಲ್ ತಾಲೂಕಿನ ಚೂಡೇನಹಳ್ಳಿ ನಿವಾಸಿ ವಿ. ನವೀನ್ (25) ಕೊಲೆಯಾದ ದುರ್ದೈವಿ. ತೆಂಗಿನಕಾಯಿ ವ್ಯಾಪಾರಿಯಾಗಿದ್ದ ನವೀನ್, ಕಳೆದ ಏಪ್ರಿಲ್ 13 ರಂದು ಪತ್ನಿ ಸುಚಿತ್ರಾ ಮತ್ತು ಇಬ್ಬರು ಮಕ್ಕಳೊಂದಿಗೆ ಆನೇಕಲ್‌ನ ಜನತಾ ಕಾಲೋನಿಯಲ್ಲಿರುವ ಅತ್ತೆ ಮನೆಗೆ ಹೋಗಿದ್ದ. ಮರುದಿನ, ಏಪ್ರಿಲ್ 14 ರಂದು ನವೀನ್ ತನ್ನ ಪತ್ನಿ ಮತ್ತು ಮಕ್ಕಳನ್ನು ವಾಪಸ್ ಮನೆಗೆ ಕರೆದೊಯ್ಯಲು ಮುಂದಾದಾಗ ಪತ್ನಿ ಸುಚಿತ್ರಾ ನಿರಾಕರಿಸಿದ್ದಳು.

ಈ ವೇಳೆ ನವೀನ್ ತನ್ನ ಅತ್ತೆ-ಮಾವನ ಬಳಿ ಪತ್ನಿ ಮತ್ತು ಮಕ್ಕಳನ್ನು ಕಳುಹಿಸಿಕೊಡುವಂತೆ ಮನವಿ ಮಾಡಿದ್ದ. ಇದರಿಂದ ಆಕ್ರೋಶಗೊಂಡ ಸುಚಿತ್ರಾ ಕುಟುಂಬಸ್ಥರು ನವೀನ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಮಾವ ಸಂಪಂಗಿ ಬಾಟಲಿಯಲ್ಲಿದ್ದ ಪೆಟ್ರೋಲನ್ನು ನವೀನ್ ಮೇಲೆ ಸುರಿದಿದ್ದಾರೆ. ಭಾವ ಮುನೇಷ್ ಬೆಂಕಿ ಹಚ್ಚಿದ್ದಾನೆ. ಇದೇ ವೇಳೆ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ನೀರು ಸುರಿದು ಬೆಂಕಿ ನಂದಿಸಿ, ನವೀನ್​ನನ ರಕ್ಷಿಸಿದ್ದಾರೆ.

ಸಾವಿಗೂ ಮುನ್ನ ಸತ್ಯ ಬಿಚ್ಚಿಟ್ಟ ನವೀನ್

ತೀವ್ರ ಸುಟ್ಟ ಗಾಯಗಳಾಗಿದ್ದರೂ ನವೀನ್ ಸ್ವತಃ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ನೀಡಿದ ನವೀನ್, ತನ್ನ ಪತ್ನಿ ಸುಚಿತ್ರಾ, ಮಾವ ಸಂಪಂಗಿ, ಅತ್ತೆ ಮತ್ತು ಭಾವ ಮುನೇಷ್ ಸೇರಿ ತನಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದ.

ಇದನ್ನೂ ಓದಿ ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್

ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟ ವ್ಯಕ್ತಿ

ಘಟನೆ ನಡೆದ ಆರಂಭದಲ್ಲಿ ಆನೇಕಲ್ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ 19 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ನವೀನ್, ಮೇ 2 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಆತನ ಹೇಳಿಕೆಯ ನಂತರ ಆ ಪ್ರಕರಣವನ್ನು ಕೊಲೆಯೆಂದು ಬದಲಾಯಿಸಲಾಗಿದೆ.

ಈಗಾಗಲೇ ನವೀನ್ ಮಾವ ಸಂಪಂಗಿ ಮತ್ತು ಭಾವ ಮುನೇಷ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಪತ್ನಿ ಮತ್ತು ಅತ್ತೆಯ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಅವರನ್ನು ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ – Kannada News | H.D. Kumaraswamy Questions Financial Feasibility of TVK Vijays Freebies in Tamil Nadu

ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ವಿಜಯ್‌ರನ್ನು “ದೇವರೇ ಕಾಪಾಡಬೇಕು” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸುವೇಂದು ಅಧಿಕಾರಿಯ ಪಿಎ ಹತ್ಯೆಗೆ ಬಿಹಾರದಿಂದ ಶಾರ್ಪ್ ಶೂಟರ್ಸ್, 40 ಲಕ್ಷ ರೂ.ಗೆ ಕಾಂಟ್ರಾಕ್ಟ್! ಅಚ್ಚರಿಯ ಮಾಹಿತಿ ಬಯಲು – Kannada News | Suvendu Adhikari PA Murder Case: Sharp Shooters from Bihar Hired for Rs 40 Lakh Contract; Probe Reveals Details

ಚಂದ್ರನಾಥ್ ರಥ್ ಹಾಗೂ ಸುವೇಂದು ಅಧಿಕಾರಿImage Credit source: TV9 Network

ಕೋಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ (Suvendu Adhikari) ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ (Chandranath Rath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ ಹತ್ಯೆಯನ್ನು ಯೋಜಿತವಾಗಿ ನಡೆಸಲು ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿತ್ತು ಹಾಗೂ ಬರೋಬ್ಬರಿ 40 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು ಎಂಬ ವಿಷಯ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಖ್ಯಾಂಶಗಳು

  • ಹತ್ಯೆಗಾಗಿ ಬಿಹಾರದಿಂದ ಬಂದಿದ್ದರು ಇಬ್ಬರು ‘ಶಾರ್ಪ್ ಶೂಟರ್ಸ್’.
  • ಹಂತಕರಿಗೆ 40 ಲಕ್ಷ ರೂಪಾಯಿ ಸುಪಾರಿ ನೀಡಿದ ಶಂಕೆ.
  • ಕೃತ್ಯದ ನಂತರ ನಕಲಿ ಗುರುತಿನ ಚೀಟಿ ಬಳಸಿ ವಿಮಾನದ ಮೂಲಕ ಪರಾರಿಯಾದ ಶೂಟರ್‌ಗಳು.

ಯೋಜಿತ ಸಂಚು ಮತ್ತು ಹತ್ಯೆ

ಪೊಲೀಸ್ ಮೂಲಗಳ ಪ್ರಕಾರ, ಚಂದ್ರನಾಥ್ ರಥ್ ಅವರ ಚಲನವಲನದ ಮೇಲೆ ಹಂತಕರು ಕಳೆದ ಐದು ದಿನಗಳಿಂದ ಹದ್ದಿನ ಕಣ್ಣಿಟ್ಟಿದ್ದರು. ಜೂನ್ 5ರ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಚಂದ್ರನಾಥ್ ಅವರು ಜೆಸೋರ್ ರಸ್ತೆಯ ಮೂಲಕ ಹಿಂತಿರುಗುತ್ತಿದ್ದಾಗ, ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಅವರ ಕಾರಿನ ವೇಗ ಕಡಿಮೆಯಾಗಿತ್ತು. ಇದನ್ನೇ ಕಾಯುತ್ತಿದ್ದ ಇಬ್ಬರು ಬೈಕ್ ಸವಾರರು, ಕಾರಿನ ಕಿಟಕಿಯ ಬಳಿ ಬಂದು ಅತಿ ಸಮೀಪದಿಂದ ಹಲವು ಸುತ್ತು ಗುಂಡಿನ ದಾಳಿ ನಡೆಸಿ ಚಂದ್ರನಾಥ್ ಅವರನ್ನು ಹತ್ಯೆಗೈದಿದ್ದಾರೆ.

ಸ್ಥಳೀಯ ಕ್ರಿಮಿನಲ್​ಗಳ ಸಾಥ್

ಬಿಹಾರದಿಂದ ಬಂದಿದ್ದ ಶೂಟರ್‌ಗಳಿಗೆ ತಂಗಲು ವ್ಯವಸ್ಥೆ ಮತ್ತು ಓಡಾಡಲು ವಾಹನಗಳನ್ನು ಸ್ಥಳೀಯ ಕ್ರಿಮಿನಲ್ ಒಬ್ಬ ಒದಗಿಸಿದ್ದ ಎನ್ನಲಾಗಿದೆ. ಕೃತ್ಯಕ್ಕೆ ಬಳಸಲಾದ ಬೈಕ್ ಅನ್ನು ಬಿಧಾನ್‌ನಗರದ ಹಳೆಯ ವಾಹನಗಳ ಶೋರೂಮ್‌ನಿಂದ ಕಳವು ಮಾಡಲಾಗಿತ್ತು ಮತ್ತು ಅದರ ಇಂಜಿನ್ ಸಂಖ್ಯೆಯನ್ನು ತಿದ್ದಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಹತ್ಯೆ ನಡೆದ ಕೇವಲ 45 ಸೆಕೆಂಡುಗಳ ಮೊದಲು ಒಂದು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರು ಅಲ್ಲಿಗೆ ಬಂದು ಹೋಗಿರುವುದು ತನಿಖಾಧಿಕಾರಿಗಳ ಸಂಶಯಕ್ಕೆ ಕಾರಣವಾಗಿದೆ.

ತನಿಖೆ ಮತ್ತು ಸಿಐಡಿ ಕಾರ್ಯಾಚರಣೆ

ಪ್ರಸ್ತುತ ಸಿಐಡಿ ಮತ್ತು ಎಸ್‌ಐಟಿ (SIT) ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳದಿಂದ ರಕ್ತದ ಮಾದರಿ ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಂತಕರು ಕೋಲ್ಕತ್ತಾ ವಿಮಾನ ನಿಲ್ದಾಣದ ಮೂಲಕ ಪರಾರಿಯಾಗಲು ಮೊದಲೇ ಸಂಚು ರೂಪಿಸಿ ನಕಲಿ ಐಡಿ ಕಾರ್ಡ್‌ಗಳನ್ನು ಹೊಂದಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು

ಚಂದ್ರನಾಥ್ ಅವರ ಆಪ್ತ ವಲಯದವರೇ ಹಂತಕರಿಗೆ ಮಾಹಿತಿ ಸೋರಿಕೆ ಮಾಡಿರಬಹುದು ಎಂಬ ಅನುಮಾನದ ನಿಟ್ಟಿನಲ್ಲಿ ಪೊಲೀಸರು ಫೋನ್ ರೆಕಾರ್ಡ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಸದ್ಯ ಹತ್ಯೆಗೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಶೂಟರ್‌ಗಳಿಗಾಗಿ ಶೋಧ ಮುಂದುವರಿದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು – Kannada News | TVK warns of resignation of all its MLAs, as AIADMK tries coalition with DMK for Power in Tamil Nadu

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದೆ. ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ.

ತಮಿಳಗ ವೆಟ್ರಿ ಕಳಗಂನ ಎಲ್ಲಾ ಶಾಸಕರು ರಾಜೀನಾಮೆಗೆ ಸಿದ್ಧ

ತಮಿಳುನಾಡು ಜನಾದೇಶ ತಮ್ಮ ಪಕ್ಷದ ಪರವಾಗಿದೆ. ಇದನ್ನೂ ಮೀರಿ ಡಿಎಂಕೆ ಮತ್ತು ಎಐಡಿಎಂಕೆ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದಲ್ಲಿ ತಮ್ಮ ಎಲ್ಲಾ 108 ಶಾಸಕರೂ ರಾಜೀನಾಮೆ ನೀಡುತ್ತಾರೆ ಎಂದು ಟಿವಿಕೆ ಬೆದರಿಕೆ ಹಾಕಿದೆ.

234 ವಿಧಾನಸಭಾ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಟಿವಿಕೆ 108 ಸ್ಥಾನ ಪಡೆದಿದೆ. ಡಿಎಂಕೆ ಮೈತ್ರಿಕೂಟ 73, ಎಐಎಡಿಎಂಕೆ ಮೈತ್ರಿಕೂಟ 53 ಸ್ಥಾನಗಳನ್ನು ಹೊಂದಿವೆ. ಇಲ್ಲಿ ಡಿಎಂಕೆ 59 ಸ್ಥಾನ ಹಾಗೂ ಎಐಎಡಿಎಂಕೆ 47 ಸ್ಥಾನಗಳನ್ನು ಹೊಂದಿವೆ. ಎರಡೂ ಸೇರಿಸಿದರೆ 106 ಸ್ಥಾನಗಳಾಗುತ್ತವೆ. ಆಗಲೂ ಬೇರೆ ಬೇರೆ ಪಕ್ಷಗಳ ಬೆಂಬಲ ಬೇಕಾಗುತ್ತದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ

ಡಿಎಂಕೆ ಜೊತೆ ಕೈಜೋಡಿಸಲು ಎಐಎಡಿಎಂಕೆ ಪಕ್ಷವು ಎನ್​ಡಿಎ ಮೈತ್ರಿಕೂಟ ತ್ಯಜಿಸಲು ಸಿದ್ಧವಿದೆ. ಸಮ್ಮಿಶ್ರ ಸರ್ಕಾರದ ಪ್ರಸ್ತಾಪವನ್ನು ಈ ಪಕ್ಷವೇ ಮಾಡಿದೆ. ಡಿಎಂಕೆಯಿಂದ ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಟಿವಿಕೆಗೆ ಸರ್ಕಾರ ರಚಿಸುವ ಅವಕಾಶ ತಪ್ಪಿಸಿದ ಆರೋಪ ತನಗೆ ಬಂದುಬಿಟ್ಟರೆ ಎನ್ನುವ ಭಯ ಡಿಎಂಕೆಯದ್ದು. ಹೀಗಾಗಿ, ಟಿವಿಕೆ ಸರ್ಕಾರ ರಚನೆಯಾಗಿ ಆರು ತಿಂಗಳು ಕಾದು ಆ ನಂತರ ಯೋಚಿಸೋಣ ಎಂದು ಡಿಎಂಕೆ ಹೇಳುತ್ತಿದೆ.

ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಈಗಾಗಲೇ ಬೆಂಬಲ ನೀಡುವುದಾಗಿ ಘೋಷಿಸಿದೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಒಟ್ಟು ನಾಲ್ವರು ಶಾಸಕರಿರುವ ಎರಡು ಎಡಪಕ್ಷಗಳ ಬೆಂಬಲವನ್ನು ಟಿವಿಕೆ ಯಾಚಿಸಿದೆ. ಮುಸ್ಲಿಮ್ ಲೀಗ್​ನ ಇಬ್ಬರು ಶಾಸಕರಿದ್ದಾರೆ. ಇವರೆಲ್ಲರೂ ಕೈಜೋಡಿಸಿದರೆ ಟಿವಿಕೆಗೆ ಬಹುಮತ ಸಿಗಬಹುದು. ಆದರೂ ಕೂಡ ತಮಿಳುನಾಡಿನಲ್ಲಿ ರಾಜಕೀಯ ಚದುರಂಗದಾಟ ಚಾಲನೆಗೊಂಡಿದೆ.

ಎಲ್ಲಾ ಟಿವಿಕೆ ಶಾಸಕರು ರಾಜೀನಾಮೆ ನೀಡಿದರೆ ಏನಾಗುತ್ತೆ?

ಎಲ್ಲಾ 108 ಟಿವಿಕೆ ಶಾಸಕರು ರಾಜೀನಾಮೆ ನೀಡಿದರೆ ಆಗ ವಿಧಾನಸಭೆಯ ಗಾತ್ರ 234ರಿಂದ 126ಕ್ಕೆ ಇಳಿಯುತ್ತದೆ. ಬಹುಮತ ಸಾಬೀತು ಮಾಡಲು ಬೇಕಾದ ಶಾಸಕರ ಬೆಂಬಲ 64 ಮಾತ್ರವೇ ಬೇಕಾಗುತ್ತದೆ. ಆಗ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಸುಲಭವಾಗಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು.

ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ!

ಟಿವಿಕೆ ಶಾಸಕರ ರಾಜೀನಾಮೆ ಬಳಿಕ ಆ 108 ಸ್ಥಾನಗಳಿಗೆ ಉಪಚುನಾವಣೆ ನಡೆಯಬಹುದು. ಅಲ್ಲಿ ಮತ್ತೆ ಎಲ್ಲಾ ಸ್ಥಾನಗಳಿಗೂ ಟಿವಿಕೆ ಅಭ್ಯರ್ಥಿಗಳೇ ಆಯ್ಕೆಯಾದರೆ ಮತ್ತೆ ರಾಜಕೀಯ ಸಮಸ್ಯೆ ಎದುರಾಗುತ್ತದೆ. ತಮಿಳುನಾಡಿಗೆ ಮತ್ತೊಮ್ಮೆ ಮರುಚುನಾವಣೆ ನಡೆಸಿದರೂ ಅಚ್ಚರಿ ಇಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜಕೀಯದ ಕಾರಣಕ್ಕೆ ತಂದೆ-ತಾಯಿ ಮೇಲೆ ದೂರು ನೀಡಿದ್ದ ವಿಜಯ್ – Kannada News | Vijay once gave complaint against his own parents related to politics

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay), ತಮಿಳುನಾಡಿನ ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (ತಮಿಳ್ ವೆಟ್ರಿ ಕಳಗಂ) ಪಕ್ಷ 108 ಸೀಟುಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷದ ಐದು ಸದಸ್ಯರು ಟಿವಿಕೆಗೆ ಬೆಂಬಲ ಘೋಷಿಸಿದ್ದಾರೆ. ವಿಜಯ್ ಸಿಎಂ ಆಗಲು ಇನ್ನೈದು ಸೀಟುಗಳ ಅವಶ್ಯಕತೆ ಇದೆ. ಪಕ್ಷ ಕಟ್ಟಿದ ಕೇವಲ ಎರಡು ವರ್ಷದಲ್ಲಿ ವಿಜಯ್ ಜಯ ಗಳಿಸಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ತಂದಿದೆ. ಅವರ ಪೋಷಕರು ಹಾಗೂ ಕುಟುಂಬದವರಿಗೂ ಖುಷಿ ತಂದಿದೆ. ಆದರೆ ಆರು ವರ್ಷದ ಹಿಂದೆ ಇದೇ ವಿಜಯ್ ಅವರು ರಾಜಕೀಯದ ಕಾರಣಕ್ಕೆ ತಮ್ಮ ಸ್ವಂತ ಪೋಷಕರ ವಿರುದ್ಧವೇ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ವಿಜಯ್ ಅವರ ತಂದೆ ಎಸ್​​ಎ ಚಂದ್ರಶೇಖರ್ ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ, ನಿರ್ಮಾಪಕ ಮತ್ತು ನಟ ಸಹ. ತಮ್ಮ ಮಗ ಸ್ಟಾರ್ ಆಗುವಲ್ಲಿ ಎಸ್​​ಎ ಚಂದ್ರಶೇಖರ್ ಅವರ ಪಾಲು ದೊಡ್ಡದಿದೆ. ಆರಂಭದ ದಿನಗಳಲ್ಲಿ ವಿಜಯ್ ಅವರಿಗೆ ಸಿನಿಮಾ ನಿರ್ದೇಶನ, ನಿರ್ಮಾಣ ಮಾಡುವ ಜೊತೆಗೆ ಮಗನ ಸಿನಿಮಾಗಳ ಚಿತ್ರಕತೆ, ಶೂಟಿಂಗ್ ಇನ್ನಿತರೆಗಳ ನಿರ್ವಹಣೆಯನ್ನು ಎಸ್​​ಎ ಚಂದ್ರಶೇಖರ್ ಅವರೇ ಖುದ್ದಾಗಿ ಮಾಡುತ್ತಿದ್ದರು.

ವಿಜಯ್ ಅವರ ಇಂದಿನ ರಾಜಕೀಯ ಯಶಸ್ಸಿಗೆ ಕಾರಣವಾದ ವಿಜಯ್ ಅವರ ಅಭಿಮಾನಿ ಸಂಘ ‘ವಿಜಯ್ ಮಕ್ಕಳ್ ಇಯಕ್ಕಂ’ ಸ್ಥಾಪನೆ ಮತ್ತು ಅದರ ಕಾರ್ಯಚಟುವಟಿಕೆಯಲ್ಲಿಯೂ ಎಸ್​​ಎ ಚಂದ್ರಶೇಖರ್ ಸಕ್ರಿಯವಾಗಿ ತೊಡಗಿಕೊಂಡಿದ್ದರು. ವಿಜಯ್ ಅವರು ರಾಜಕೀಯಕ್ಕೆ ಬರಬೇಕು ಎಂಬ ಕೂಗು ದೊಡ್ಡದಾಗುತ್ತಿದ್ದ ಸಮಯದಲ್ಲಿ ಅಂದರೆ 2020ರ ಸಮಯದಲ್ಲಿ ಎಸ್​​ಎ ಚಂದ್ರಶೇಖರ್ ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ’ ಹೆಸರಿನ ರಾಜಕೀಯ ಪಕ್ಷವನ್ನು ನೊಂದಣಿ ಮಾಡಿಸಿದ್ದರು. ಅದರಲ್ಲಿ ಸ್ವತಃ ತಾವು ಹಾಗೂ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಅವರು ಆಫೀಸ್ ಬೇರರ್ ಆಗಿದ್ದರು.

ಇದನ್ನೂ ಓದಿ:ದಳಪತಿ ವಿಜಯ್ 80 ಕೋಟಿ ರೂ. ನಿವಾಸಕ್ಕೆ ಹಾಲಿವುಡ್​ ನಟನ ಈ ಮನೆಯೇ ಸ್ಫೂರ್ತಿ

ಆದರೆ ಇದು ವಿಜಯ್ ಅವರಿಗೆ ಸರಿ ಬರಲಿಲ್ಲ, ಬಹಿರಂಗ ಪ್ರಕಟಣೆ ಹೊರಡಿಸಿದ ವಿಜಯ್, ತಮ್ಮ ತಂದೆ ಕಟ್ಟಿರುವ ಪಾರ್ಟಿಗೂ ತಮಗೂ ಸಂಬಂಧವಿಲ್ಲ ಎಂದರು. ಬಳಿಕ ವಿಜಯ್ ಅವರು ಚೆನ್ನೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ತಮ್ಮ ತಂದೆ ಪ್ರಾರಂಭಿಸಿರುವ ಪಕ್ಷವನ್ನು ರದ್ದು ಮಾಡಬೇಕೆಂದು ಹಾಗೂ ಆ ಪಕ್ಷದಲ್ಲಿ ತಮ್ಮ ಹೆಸರು ಹಾಗೂ ಚಿತ್ರವನ್ನು ಬಳಸಬಾರದೆಂದು ಆದೇಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಂತೆಯೇ ನ್ಯಾಯಾಲಯ ಸಹ ವಿಜಯ್ ಪರವಾಗಿಯೇ ಆದೇಶ ನೀಡಿತ್ತು. ಬಳಿಕ ಎಸ್​​ಎ ಚಂದ್ರಶೇಖರ್ ಅವರು ನ್ಯಾಯಾಲಯಕ್ಕೆ ಅಪಿಢವಿಟ್ ಸಲ್ಲಿಸಿ, ಪಕ್ಷಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಚಿತ್ರ, ಹೆಸರು ಬಳಸುವುದಿಲ್ಲ ಎಂದರು. ಅದರ ಮರು ವರ್ಷ ಅಂದರೆ 2021 ರಲ್ಲಿ ಆ ಪಕ್ಷವನ್ನು ರದ್ದು ಸಹ ಮಾಡಿದರು.

ವಿಜಯ್ ಮೊದಲಿನಿಂದಲೂ ಬಹಿರಂಗವಾಗಿ ಮಾತನಾಡಿದವರಲ್ಲ, ಆದರೆ ವಿಜಯ್ ಅವರ ತಂದೆ ಮಗನ ಪರವಾಗಿ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದರು. ‘ಮರ್ಸೆಲ್’ ಸಿನಿಮಾ ವಿವಾದ ಸೇರಿದಂತೆ ವಿಜಯ್ ಬಗ್ಗೆ ಯಾವುದೇ ವಿವಾದಗಳು ಬಂದಾಗಲೆಲ್ಲ ಎಸ್​ಎ ಚಂದ್ರಶೇಖರ್ ಮಗನ ಪರವಾಗಿ ಸಮರ್ಥನೆಗಳನ್ನು ನೀಡುತ್ತಿದ್ದರು. ವಿಜಯ್ ರಾಜಕೀಯಕ್ಕೆ ಬರಬೇಕೆಂಬುದು ಅವರ ತಂದೆಯ ಆಸೆಯಾಗಿತ್ತು. ಅದರಂತೆ ಈಗ ವಿಜಯ್ ರಾಜಕೀಯ ಪಕ್ಷ ಕಟ್ಟಿ ಭಾರಿ ಯಶಸ್ಸು ಸಾಧಿಸಿದ್ದಾರೆ. ಈಗ ವಿಜಯ್ ಅವರಿಗೆ ಸಿಎಂ ಆಗಲು ಇನ್ನೈದು ಸೀಟುಗಳ ಅವಶ್ಯಕತೆ ಇದೆ. ವಿಜಯ್ ಸಿಎಂ ಆಗುತ್ತಾರಾ? ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

NCS Portal: ಕೇಂದ್ರ ಸರ್ಕಾರದಿಂದ ಬಂಪರ್ ಆಫರ್, ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ; ಇಲ್ಲಿದೆ ಉದ್ಯೋಗಗಳ ಮಹಾಪೂರ – Kannada News | NCS Portal: 7 Lakh WFH Jobs! Apply Now for Government Backed Online Work in India

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್Image Credit source: Ai generated

ಇಂದಿನ ವೇಗದ ಬದುಕಿನಲ್ಲಿ ‘ವರ್ಕ್ ಫ್ರಮ್ ಹೋಮ್‘ (Work From Home) ಎಂಬುದು ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಅದೊಂದು ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಮತ್ತು ವೃತ್ತಿಪರರು ಪ್ರಯಾಣದ ಸಮಯ ಉಳಿಸಲು ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನಕ್ಕಾಗಿ ಮನೆಯಿಂದಲೇ ಕೆಲಸ ಮಾಡಲು ಇಚ್ಛಿಸುತ್ತಾರೆ. ಇಂತಹವರಿಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಈಗ ಬೃಹತ್ ಅವಕಾಶಗಳನ್ನು ಹೊತ್ತು ತಂದಿದೆ.

ಏನಿದು NCS ಪೋರ್ಟಲ್?

ರಾಷ್ಟ್ರೀಯ ವೃತ್ತಿ ಸೇವೆ (National Career Service – NCS) ಎಂಬುದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಒಂದು ಡಿಜಿಟಲ್ ವೇದಿಕೆಯಾಗಿದೆ. ದೇಶದ ಯುವಜನತೆಗೆ ಉದ್ಯೋಗ, ತರಬೇತಿ ಮತ್ತು ವೃತ್ತಿ ಸಮಾಲೋಚನೆಯನ್ನು ಒಂದೇ ಸೂರಿನಡಿ ನೀಡುವುದು ಇದರ ಮುಖ್ಯ ಉದ್ದೇಶ. ಇಲ್ಲಿ ಸರ್ಕಾರಿ ಮತ್ತು ಪ್ರತಿಷ್ಠಿತ ಖಾಸಗಿ ಕಂಪನಿಗಳ ಉದ್ಯೋಗ ಮಾಹಿತಿಗಳು ಲಭ್ಯವಿರುತ್ತವೆ.

NCS ಪೋರ್ಟಲ್‌ನ ಪ್ರಮುಖ ಅಂಶಗಳು:

ಸದ್ಯ ಪೋರ್ಟಲ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 7 ಲಕ್ಷಕ್ಕೂ ಅಧಿಕ ಉದ್ಯೋಗಾವಕಾಶಗಳಿವೆ. ಸಾವಿರಾರು ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ (WFH) ಅವಕಾಶಗಳನ್ನು ಪಟ್ಟಿ ಮಾಡಿವೆ. ಅಭ್ಯರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಹುಡುಕಬಹುದು.

ಬೃಹತ್ ಕಂಪನಿಗಳ ಸಹಯೋಗ:

ಇತ್ತೀಚೆಗೆ ಅಮೆಜಾನ್ ಮತ್ತು ಸ್ವಿಗ್ಗಿ ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ಕಂಪನಿಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಸುಮಾರು 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಇದು ನೇರವಾಗಿ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವುದರಿಂದ, ಉದ್ಯೋಗಾಕಾಂಕ್ಷಿಗಳಿಗೆ ಭದ್ರತೆ ಮತ್ತು ಪಾರದರ್ಶಕತೆಯ ಭರವಸೆ ಇರುತ್ತದೆ.

ಉದ್ಯೋಗ ಹುಡುಕುವುದು ಹೇಗೆ?

NCS ಪೋರ್ಟಲ್ ಮೂಲಕ ಉದ್ಯೋಗ ಪಡೆಯಲು ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು:

  • ಮೊದಲು www.ncs.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ‘Sign Up’ ಬಟನ್ ಕ್ಲಿಕ್ ಮಾಡುವ ಮೂಲಕ ನೋಂದಾಯಿಸಿಕೊಳ್ಳಿ.
  • ನಿಮ್ಮ ಶಿಕ್ಷಣ, ಕೌಶಲ್ಯ (Skills) ಮತ್ತು ಅನುಭವದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಪ್‌ಲೋಡ್ ಮಾಡಿ.
  • ಸರ್ಚ್ ಬಾರ್‌ನಲ್ಲಿ ‘Work from Home’ ಅಥವಾ ನಿಮ್ಮ ಇಷ್ಟದ ಹುದ್ದೆಯ ಹೆಸರನ್ನು ಟೈಪ್ ಮಾಡಿ.
  • ನಿಮ್ಮ ಅರ್ಹತೆಗೆ ಸರಿಹೊಂದುವ ಉದ್ಯೋಗವನ್ನು ಆರಿಸಿ ‘Apply’ ಬಟನ್ ಕ್ಲಿಕ್ ಮಾಡಿ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ವೃತ್ತಿಜೀವನಕ್ಕೆ ಹೊಸ ತಿರುವು:

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರ ನೇತೃತ್ವದಲ್ಲಿ NCS ಪೋರ್ಟಲ್ ಅನ್ನು ಇ-ಮೈಗ್ರೇಟ್ ಮತ್ತು ಮೈ ಭಾರತ್ (My Bharat) ಪ್ಲಾಟ್‌ಫಾರ್ಮ್‌ಗಳೊಂದಿಗೆ ಸಂಯೋಜಿಸಲಾಗಿದೆ. ಇದರಿಂದಾಗಿ ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಕೆಲಸ ಮಾತ್ರವಲ್ಲದೆ, ಕೌಶಲ್ಯ ಅಭಿವೃದ್ಧಿ ತರಬೇತಿ ಮತ್ತು ವೃತ್ತಿ ಸಮಾಲೋಚನೆಯೂ ಸುಲಭವಾಗಿ ದೊರೆಯುತ್ತಿದೆ.

ನೀವು ಮನೆಯಿಂದಲೇ ಕೆಲಸ ಮಾಡುವ ಮೂಲಕ ಸ್ವಾವಲಂಬಿಯಾಗಲು ಬಯಸುತ್ತಿದ್ದರೆ, ಇಂದೇ NCS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಿ ಮತ್ತು ನಿಮ್ಮ ಕನಸಿನ ವೃತ್ತಿಜೀವನವನ್ನು ಆರಂಭಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತವಾಗಿ ಪತ್ತೆ!: ಹೇಗಿತ್ತು ಗೊತ್ತಾ ಖಾಕಿ ಕಾರ್ಯಾಚರಣೆ? – Kannada News | Chikmagalur Police Rescue Lost Toddler in Coffee Estate After 12 Hour Operation

ಚಿಕ್ಕಮಗಳೂರು, ಮೇ 08: ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್​ನಲ್ಲಿ ಕೆಲಸಕ್ಕೆ ಬಂದಿದ್ದ ಮಧ್ಯಪ್ರದೇಶ ಮೂಲದ ಗೋನು, ಸೋನು ದಂಪತಿಯ 1.5 ವರ್ಷದ ಗಂಡು ಮಗು ನಿನ್ನೆ ಸಂಜೆ ಕಳೆದುಹೋಗಿತ್ತು. ಮೂಡಿಗೆರೆ ಸಿಪಿಐ, ಬಾಳೂರು ಪಿಎಸ್​​ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಗುವನ್ನು ಪತ್ತೆ ಹಚ್ಚುವಲ್ಲಿ ತಂಡ ಯಶಸ್ವಿಯಾಗಿದೆ.

  • ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ
  • 12 ಗಂಟೆ ಕಾರ್ಯಾಚರಣೆ ನಡೆಸಿ 1.5 ವರ್ಷದ ಗಂಡು ಮಗುವಿನ ರಕ್ಷಣೆ
  • ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಮೂವರು ಮಕ್ಕಳ ಜೊತೆ ಆಡವಾಡುತ್ತಾ ಕಾಫಿ ತೋಟಕ್ಕೆ ಬಂದಿದ್ದ ಮಗು ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ನಂತರ ಮಗು ಸುರಕ್ಷಿತವಾಗಿ ಪತ್ತೆಯಾಗಿದ್ದು, ಶೋಧ ನಡೆಸುವವರ ಕಣ್ಣಿಗೆ ಮಗು ಬೀಳುವಾಗ ಅದು ಮಲಗಿತ್ತು ಎಂಬುದು ಗೊತ್ತಾಗಿದೆ. ನಿನ್ನೆ ಸಂಜೆ ಕಳೆದುಹೋಗಿದ್ದ ಮಗುವನ್ನು ಸತತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ತೋಟದಲ್ಲಿ ಪತ್ತೆಮಾಡಿ, ಹೆತ್ತವರ ಮಡಿಲಿಗೆ ಮರಳಿ ಸೇರಿಸಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

ಜೀವ ಉಳಿಸುವ ಆಸ್ಪತ್ರೆಯೆದುರೇ ಇದೆ ಜೀವಕ್ಕೆ ಮಾರಕವಾದ ಗೋಡೆ! ಶಿಥಿಲಗೊಂಡ ಕಲ್ಲು ಗೋಡೆಗಳು ಹೇಗಿವೆ ನೋಡಿ – Kannada News | Bengaluru Reality Check: Deadly Minto Hospital Wall Poses Threat to Public After Bowring Tragedy

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ನ್ಯೂ ತರಗುಪೇಟೆ ಮುಖ್ಯರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಆವರಣದ ಮಿಂಟೋ ಕಣ್ಣಿನ ಆಸ್ಪತ್ರೆಯ ಕಲ್ಲಿನ ಗೋಡೆ ಸಂಪೂರ್ಣ ಶಿಥಿಲಗೊಂಡಿದೆ. ದಶಕಗಳಷ್ಟು ಹಳೆಯದಾದ ಈ ಕಲ್ಲಿನ ಗೋಡೆ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ಹಾದಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ.

Source link

‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್ – Kannada News | Sai Pallavi said she was mis cast in Ek Din movie

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಸಾಯಿ ಪಲ್ಲವಿ ದೊಡ್ಡ ಅಭಿಮಾನಿ ವರ್ಗವನ್ನು ಇಲ್ಲಿ ಹೊಂದಿದ್ದಾರೆ. ಅವರ ನೃತ್ಯ, ನಟನಾ ಪ್ರತಿಭೆ ಮತ್ತು ವ್ಯಕ್ತಿತ್ವಕ್ಕೆ ಅಭಿಮಾನಿಗಳು ಮಾರು ಹೋಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸದ ಮತ್ತು ಸಿನಿಮಾಗಳನ್ನು ಸಹ ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವ ಈ ನಟಿ ಇತ್ತೀಚೆಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಫ್ಲಾಪ್ ಆಗಿದೆ. ಆದರೆ ಸಿನಿಮಾ ಫ್ಲಾಪ್ ಆದ ಬಳಿಕ ಸಾಯಿ ಪಲ್ಲವಿ ನೀಡಿರುವ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಆಮಿರ್ ಖಾನ್ ಪುತ್ರ ಜುನೈದ್ ಖಾನ್ ನಾಯಕನಾಗಿ ನಟಿಸಿರುವ ‘ಏಕ್ ದಿನ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫ್ಲಾಪ್ ಆಗಿದೆ. ಸಿನಿಮಾ ನೋಡಿದವರು ಸಾಯಿ ಪಲ್ಲವಿಯ ಹಿಂದಿಯ ಬಗ್ಗೆ ಟ್ರೋಲ್ ಮಾಡಿದ್ದಾರೆ. ಸಿನಿಮಾಕ್ಕೆ ಸಾಯಿ ಪಲ್ಲವಿ ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಸಹ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಚಿತ್ರತಂಡವು ‘ಏಕ್ ದಿನ್ ಕಿ ಮೆಹಫಿಲ್’ ಎಂಬ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಅವರು ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುವಾಗ ಹಿಂದಿ ಭಾಷೆಯಲ್ಲಿ ಮಾತನಾಡಲು ಕಷ್ಟಪಟ್ಟಿದ್ದರು. ಇದಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅವರು ತೀವ್ರವಾಗಿ ಟ್ರೋಲ್‌ಗೆ ಒಳಗಾಗಿದ್ದರು. ಅಷ್ಟೇ ಅಲ್ಲದೆ, ನಿತೇಶ್ ತಿವಾರಿ ಅವರ ‘ರಾಮಾಯಣ: ಭಾಗ 1’ ಚಿತ್ರದಲ್ಲಿ ಸೀತೆಯ ಪಾತ್ರಕ್ಕೆ ಅವರು ಸೂಕ್ತವಲ್ಲ ಎಂದೂ ನೆಟ್ಟಿಗರು ಕಮೆಂಟ್ ಮಾಡಿದ್ದರು. ಈ ಎಲ್ಲಾ ಟೀಕೆಗಳ ಬೆನ್ನಲ್ಲೇ, ಆಮೀರ್ ಖಾನ್ ನಿರ್ಮಾಣದ ‘ಏಕ್ ದಿನ್’ ಚಿತ್ರಕ್ಕೆ ತಾವು ‘ಮಿಸ್‌ಕಾಸ್ಟ್’ (ತಪ್ಪು ಆಯ್ಕೆ) ಎಂದು ಸಾಯಿ ಪಲ್ಲವಿ ಇತ್ತೀಚೆಗೆ ಹೇಳಿಕೊಂಡಿದ್ದಾರೆ.

ಆಮೀರ್ ಖಾನ್ ಟಾಕೀಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋವೊಂದರಲ್ಲಿ, ಸಾಯಿ ಪಲ್ಲವಿ ಅವರು ಚಿತ್ರದ ಪ್ರೀಮಿಯರ್ ಸಮಯದಲ್ಲಿ ಆಮೀರ್ ಖಾನ್ ಅವರೊಂದಿಗೆ ನಡೆಸಿದ ಸಂಭಾಷಣೆಯ ಬಗ್ಗೆ ಜುನೈದ್ ಖಾನ್ ಬಳಿ ಹಂಚಿಕೊಂಡಿದ್ದಾರೆ. “ನಾನು ಈ ಪಾತ್ರಕ್ಕೆ ಸರಿಹೊಂದುವುದಿಲ್ಲ ಮತ್ತು ನಾನು ಈ ಚಿತ್ರಕ್ಕೆ ತಪ್ಪು ಆಯ್ಕೆ ಎಂದು ನನಗೆ ಅನ್ನಿಸುತ್ತಿದೆ. ಸ್ವಲ್ಪ ಆಡಂಬರ ಅಥವಾ ಚುರುಕುತನವಿರುವ ಹೊಸಬರು ಈ ಪಾತ್ರ ಮಾಡಬೇಕಿತ್ತು ಎಂದು ನನಗೆ ಅನ್ನಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಏಕ್ ದಿನ್’ ಶೂಟಿಂಗ್ ಸಮಯದಲ್ಲಿ ಸಾಯಿ ಪಲ್ಲವಿ: ವಿಡಿಯೋ

ತಾವು ಯಾಕೆ ‘ಏಕ್ ದಿನ್’ ಚಿತ್ರವನ್ನು ಒಪ್ಪಿಕೊಂಡೆ ಎಂಬುದನ್ನು ವಿವರಿಸಿದ ಅವರು, ‘ನಾನು ಯಾವಾಗಲೂ ಚಿತ್ರದ ವ್ಯಾಪ್ತಿಯನ್ನು ನೋಡಿ ಸಿನಿಮಾ ಆಯ್ಕೆ ಮಾಡುವುದಿಲ್ಲ. ಆ ಸಮಯದಲ್ಲಿ ನಾನು ಬಹಳಷ್ಟು ಗಂಭೀರವಾದ ಪಾತ್ರಗಳನ್ನು ಮಾಡಿದ್ದೆ, ಆದ್ದರಿಂದ ಮನಸ್ಸಿಗೆ ಹಗುರವೆನಿಸುವ ಪಾತ್ರವನ್ನು ಮಾಡಲು ಬಯಸಿದ್ದೆ. ಚಿತ್ರೀಕರಣದ ಸಮಯದಲ್ಲಿ ಅಥವಾ ನಂತರವೂ ನನ್ನ ಮೇಲೆ ಯಾವುದೇ ಮಾನಸಿಕ ಒತ್ತಡ ಅಥವಾ ಟ್ರೌಮಾ ಇರಬಾರದು ಎಂದುಕೊಂಡಿದ್ದೆ. ಈ ಕಥೆ ಕೇಳಿದಾಗ ಇದು ‘ಬಿಫೋರ್ ಸನ್ ರೈಸ್’ ಹಾಲಿವುಡ್ ಚಿತ್ರದ ಶೈಲಿಯಲ್ಲಿದೆ ಎಂದು ಭಾವಿಸಿ ಒಪ್ಪಿಕೊಂಡೆ’ ಎಂದಿದ್ದಾರೆ. ಆದರೆ ಜುನೈದ್ ಖಾನ್ ಅವರು ಸಾಯಿ ಪಲ್ಲವಿ ಅವರ ಅನುಮಾನಗಳನ್ನು ತಳ್ಳಿಹಾಕಿದ್ದು, ಈ ಪಾತ್ರಕ್ಕೆ ಅವರೇ ಸೂಕ್ತ ಎಂದು ಹೇಳಿದ್ದಾರೆ.

ಸುನಿಲ್ ಪಾಂಡೆ ನಿರ್ದೇಶನದ ಈ ರೋಮ್ಯಾಂಟಿಕ್ ಡ್ರಾಮಾವನ್ನು ಆಮೀರ್ ಖಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಆಮೀರ್ ಖಾನ್, ಮನ್ಸೂರ್ ಖಾನ್ ಮತ್ತು ಅಪರ್ಣಾ ಪುರೋಹಿತ್ ನಿರ್ಮಿಸಿದ್ದಾರೆ. ಜುನೈದ್ ಖಾನ್ ಮತ್ತು ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು 2016ರ ಥಾಯ್ ಚಿತ್ರ ‘ಒನ್ ಡೇ’ ನ ರಿಮೇಕ್ ಆಗಿದ್ದು, ತನ್ನ ಸಹೋದ್ಯೋಗಿಯನ್ನು ಪ್ರೀತಿಸುವ ಆದರೆ ಅದನ್ನು ಹೇಳಿಕೊಳ್ಳಲು ಧೈರ್ಯವಿಲ್ಲದ ಯುವಕನ ಕಥೆಯನ್ನು ಹೊಂದಿದೆ. ಕೇವಲ ಒಂದು ದಿನ ಅವಳೊಂದಿಗೆ ಇರಬೇಕೆಂಬ ಅವನ ಆಸೆ ಅನಿರೀಕ್ಷಿತವಾಗಿ ಈಡೇರುವುದೇ ಚಿತ್ರದ ಕಥಾಹಂದರ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:05 pm, Fri, 8 May 26

Source link

Exit mobile version