Headlines

IPL 2026: ಸ್ಫೋಟಕ ಬ್ಯಾಟಿಂಗ್​ಗೆ ಬ್ರೇಕ್ ಹಾಕಿದವರು: ಈ ಬಾರಿ ಅತಿ ಹೆಚ್ಚು ಡಾಟ್ ಬಾಲ್ ಹಾಕಿದ್ದು ಇವರೇ ನೋಡಿ – Kannada News | IPL 2026 See who bowled the most dot balls in this year’s IPL

ಬೆಂಗಳೂರು (ಮೇ. 08): ಐಪಿಎಲ್ 2026 (Indian Premier League) ಸೀಸನ್ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಆಟದಿಂದ ಕೂಡಿದೆ. ಈ ಸೀಸನ್‌ನಲ್ಲಿ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವುದರಿಂದ ಹಿಡಿದು ಕೇವಲ 36 ಎಸೆತಗಳಲ್ಲಿ ಶತಕಗಳನ್ನು ಗಳಿಸಿರುವಂತಹ ಬ್ಯಾಟರ್​ಗಳನ್ನು ನಾವು ನೋಡುತ್ತಿದ್ದೇವೆ. ವಿಶೇಷವಾಗಿ ಬ್ಯಾಟ್ಸ್‌ಮನ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ಕ್ಲಾಸೆನ್ ಬೌಲರ್‌ಗಳನ್ನು ಕಾಡುತ್ತಿದ್ದಾರೆ. ಆದರೆ, ಇಂತಹ ಕಠಿಣ ಸಂದರ್ಭಗಳಲ್ಲಿಯೂ ಸಹ, ಕೆಲವು ಬೌಲರ್‌ಗಳು ಬಿಗಿಯಾಗಿ ಬೌಲಿಂಗ್ ಮಾಡುತ್ತಿದ್ದಾರೆ ಮತ್ತು ಡಾಟ್ ಬಾಲ್‌ಗಳಿಂದ ಬ್ಯಾಟ್ಸ್‌ಮನ್‌ಗಳನ್ನು…

Read More

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ. ಮುಖ್ಯಾಂಶಗಳು ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ. ತಲೆಮರೆಸಿಕೊಂಡಿದ್ದ ನಿದಾ…

Read More

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ಎರಡನೇ ಪತ್ನಿ ಬೇಕು ಅಂತಾದ್ರೆ ನಗಬೇಕು’ ಎಂದು ಬರೆದಿರುವ ಚೀಟಿಯನ್ನು ಕವಿತಾ ಅವರು ಚಂದನ್​ಗೆ ನೀಡುತ್ತಾರೆ. ಆಗ ನಗುವ ಚಂದನ್, ‘ಒಂದನ್ನೇ ತಡೆದುಕೊಳ್ಳೋಕೆ ಆಗ್ತಿಲ್ಲ’ ಎಂದಿದ್ದಾರೆ. ‘ಅವರು ನಕ್ಕಿದ್ದಾರೆ, ಅವರಿಗೆ ಎರಡನೇ ಪತ್ನಿ ಬೇಕು ಎಂಬ ಆಸೆ ಇದೆ. ಆದರೆ, ಕವಿತಾ ಮೇಲೆ ಅವರಿಗೆ ಭಯವೂ ಇದೆ’ ಎಂದು ಕೆಲವರು ನಗೆ…

Read More

TV9 Kannada News Live: ಕೊಡಗಿನಲ್ಲಿ ತಪ್ಪಿದ ಭೀಕರ ಬಸ್ ದುರಂತ; ತಮಿಳುನಾಡಿನಲ್ಲಿ ವಿಜಯ್ ‘ಪವರ್’ ಆಟ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Kodagu Bus Driver Dies of Heart Attack; Vijay’s TVK Eyes TN Power; Peenya Industries Crisis

ಬೆಂಗಳೂರು, ಮೇ 08: ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಚಲಾಯಿಸುತ್ತಿದ್ದ ವೇಳೆ ಖಾಸಗಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಗುದ್ದಿದರೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಶಾಸಕರ ಬೆಂಬಲಕ್ಕಾಗಿ ತೀವ್ರ ಕಸರತ್ತು ನಡೆಯುತ್ತಿದೆ. ಅದರ ಜೊತೆಗೆ ಜಾಗತಿಕ ಯುದ್ಧದ…

Read More

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ…

Read More

ಬೆಂಗಳೂರು: ಅಪಘಾತದ ನಾಟಕವಾಡಿ ಒಂಟಿ ಮಹಿಳೆಯ ಕೊಲೆ, ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ – Kannada News | Bengaluru Crime: Five Arrested for Murdering Woman by Staging Fake Accident for Robbery in Mahalakshmi Layout

ಪ್ರಾತಿನಿಧಿಕ ಚಿತ್ರImage Credit source: TV9 Network ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ (Bengaluru) ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್,…

Read More

ನಯನತಾರಾ-ವಿಘ್ನೇಶ್ ಒಂದು ದಿನದ ಖರ್ಚು ಎಷ್ಟು ಲಕ್ಷ? – Kannada News | Nayanthara and Vignesh Shivan’s Lavish Life: Daily Expenses Revealed

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಸಿನಿಮಾದಷ್ಟೇ ಐಷಾರಾಮಿ ಜೀವನಕ್ಕೂ ಹೆಸರಾದ ಈ ದಂಪತಿಗಳ ದಿನದ ಖರ್ಚು ಎಷ್ಟಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಯಾವಾಗಲೂ ಇರುತ್ತದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಘ್ನೇಶ್ ಶಿವನ್ ತಮ್ಮ ಜೀವನಶೈಲಿಯ ವೆಚ್ಚದ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಯನತಾರಾ ಕುಟುಂಬದ ದಿನದ ಖರ್ಚು ಎಷ್ಟು ಎಂಬ ಪ್ರಶ್ನೆಗೆ ವಿಘ್ನೇಶ್ ಶಿವನ್ ನೇರವಾಗಿ ಉತ್ತರಿಸದಿದ್ದರೂ, ಒಂದು ಅಂದಾಜು ಅಂಕಿಅಂಶದ ಮೂಲಕ ಅದರ ಸುಳಿವು ನೀಡಿದ್ದಾರೆ….

Read More

LSG vs RCB: ಕೃನಾಲ್ ಎಸೆದ ಬೌನ್ಸರ್​ಗೆ ತಾಳ್ಮೆ ಕಳೆದುಕೊಂಡ ಪೂರನ್: ಮೈದಾನದಲ್ಲಿ ನಡೆಯಿತು ಜಟಾಪಟಿ – Kannada News | Nicholas Pooran lost patience with Krunal Pandya’s bouncer in LSG vs RCB IPL 2026 Match

ಬೆಂಗಳೂರು (ಮೇ. 08): 2026 ರ ಐಪಿಎಲ್​ನಲ್ಲಿ ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್‌ಸಿಬಿಯನ್ನು (Royal Challengers Bengaluru) ಕೊನೆಯ ಓವರ್​ನಲ್ಲಿ ಸೋಲಿಸಿ ರೋಚಕ ಜಯ ಸಾಧಿಸಿತು. ಲಕ್ನೋ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು. ಗೆದ್ದರೆ ತನ್ನ ಪ್ಲೇಆಫ್ ಸ್ಥಾನವನ್ನು ಉಳಿಸಿಕೊಳ್ಳುವ ಅವಕಾಶ ಅತ್ತ ಆರ್​​ಸಿಬಿಗೂ ಗೆಲುವು ಅವಶ್ಯಕವಿತ್ತು. ಹೀಗಾಗಿ ಉಭಯ ಆಟಗಾರರು ಮೈದಾನದಲ್ಲಿ ಹೋರಾಡುತ್ತಿದ್ದರು. ಈ ಬಿಸಿ ವಾತಾವರಣದ ಮಧ್ಯೆ ಆರ್‌ಸಿಬಿಯ ಕೃನಾಲ್ ಪಾಂಡ್ಯ ಮತ್ತು ಲಕ್ನೋದ ನಿಕೋಲಸ್…

Read More

ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…

Read More

ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ – Kannada News | RCB’s 9 Run Defeat to LSG: Virat Kohli’s Historic Duck Shocks Fans in IPL Thriller

ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಆರ್​​ಸಿಬಿ ತಂಡ ಸೋತಿದೆ. ರೋಚಕ ಪಂದ್ಯದಲ್ಲಿ ಆರ್​​ಸಿಬಿ 9 ರನ್​​ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಬಿದ್ದಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ಅವರ ಅಪರೂಪದ ‘ಡಕ್ ಔಟ್’ ಅಭಿಮಾನಿಗಳಿಗೆ ಆಘಾತ ನೀಡಿದರೆ, ಮತ್ತೊಂದೆಡೆ ರಿಷಬ್ ಪಂತ್ ನೇತೃತ್ವದ ತಂಡ ಸತತ ಆರು ಸೋಲುಗಳ ನಂತರ ಗೆಲುವಿನ ಹಳಿಗೆ ಮರಳಿದೆ. 209 ರನ್​​ಗಳ (19 ಓವರ್) ಬೃಹತ್ತ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಕೊಹ್ಲಿ ಹಾಗೂ…

Read More