ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi
ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…