ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ – Kannada News | Bengaluru Drug Bust: 5.24 Cr Worth Drugs and Ganja Seized, 16 Peddlers Arrested

ಜಪ್ತಿ ಮಾಡಲಾದ ಡ್ರಗ್ಸ್​Image Credit source: tv9 kannada

ಬೆಂಗಳೂರು, ಫೆಬ್ರವರಿ 27: ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ (Drugs Case) ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯ ಬಂಧನ

ಇನ್ನು ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಭಾಷಿಣಿ ಬಂಧಿತ ಮಹಿಳೆ. ಬಾಗಲೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್

ಬಂಧಿತ ಸುಭಾಷಿಣಿ, ನೈಜೀರಿಯನ್​​ ಪ್ರಜೆಯೊಬ್ಬನ ಜೊತೆ ಸೇರಿ ಡ್ರಗ್ಸ್ ಡಿಲೀಂಗ್​​​ ಮಾಡುತ್ತಿದ್ದಳು. ವಿದೇಶಿ ಪ್ರಜೆ ನೈಜೀರಿಯಾದಿಂದ ಡ್ರಗ್ಸ್​ ತರಿಸಿಕೊಂಡು ಸುಭಾಷಿಣಿ ಮನೆಯಲ್ಲಿ ಶೇಖರಿಸಿಟ್ಟಿದ್ದ. ಆತ ಸೂಚಿಸಿದ್ದ ವಿಳಾಸ, ಗ್ರಾಹಕರಿಗೆ ಸುಭಾಷಿಣಿ ತಲುಪಿಸುತ್ತಿದ್ದಳು.

ವಿದೇಶಿ ಡ್ರಗ್ ಪೆಡ್ಲರ್ ಪರಾರಿ

ಇನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಬಂಧಿತಳಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ವಿದೇಶಿ ಡ್ರಗ್ ಪೆಡ್ಲರ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಕೋಟಿಗಟ್ಟಲೇ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್​ಗಳನ್ನು ಲಾಕ್​ ಮಾಡಿದ್ದರು. ಬಂಧಿತರಲ್ಲಿ ಬಹುಪಾಲು ನೆರೆ ರಾಜ್ಯದವರು ಸೇರಿ ವಿದೇಶಿಗರನ್ನು ಕಂಬಿಹಿಂದೆ ತಳ್ಳಿದ್ದರು. ಅಮೃತಹಳ್ಳಿ, ಹೆಬ್ಬಗೋಡಿ, ಶೇಷಾದ್ರಿಪುರಂ, ಜೆಬಿ ನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜ್ ಠಾಣಾ ವ್ಯಾಪ್ತಿಗಳಲ್ಲಿ ಪೆಡ್ಲರ್​ಗಳನ್ನು ಲಾಕ್ ಮಾಡಿ ಬರೋಬ್ಬರಿ 20 ಕೋಟಿ ರೂ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ಸೀಜ್​ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್ – Kannada News | Cashier And His Friends Arrested For Stealing Rs 91 Lakh From Builders Office In Bengaluru

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ತಾಂತ್ರಿಕ ಆಧಾರಗಳ ಮೇಲೆ ತನಿಖೆ ನಡೆಸಿ, ಬಹುಬೇಗ ಹಣವನ್ನು ವಸೂಲಿ ಮಾಡಿದ ಸದಾಶಿವನಗರ ಪೊಲೀಸರ ತಂಡದ ಕಾರ್ಯಕ್ಕೆ ಸೀಮಂತ್ ಕುಮಾರ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ, ವಿಡಿಯೋ ವೈರಲ್ – Kannada News | School Uniform Controversy: Viral Video Sparks Discipline Debate

ಶಾಲಾ-ಕಾಲೇಜುಗಳು ಜ್ಞಾನದ ದೇಗುಲಗಳು ಮತ್ತು ಶಿಸ್ತಿನ ತಳಹದಿ ಎಂಬ ನಂಬಿಕೆ ಇದೆ. ಆದರೆ ಇದೀಗ ವೈರಲ್​​ ಆಗಿರುವ ವಿಡಿಯೋದಲ್ಲಿ ಇಬ್ಬರು ಕಾಲೇಜು ಹುಡುಗಿಯರು ಮತ್ತು ಒಬ್ಬ ಹುಡುಗ ಸಮವಸ್ತ್ರದಲ್ಲೇ ಪರಸ್ಪರ ಅಪ್ಪಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋವೊಂದು ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಸಮವಸ್ತ್ರ ಧರಿಸಿಯೇ ಸಿನೆಮಾ ಹಾಡೊಂದಕ್ಕೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ಕೇವಲ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ ಎನ್ನಲಾಗಿದೆ. ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುವ ಮತ್ತು ಉತ್ತಮ ಭವಿಷ್ಯ ಕಟ್ಟಿಕೊಡುವ ಜಾಗ. ಸಮವಸ್ತ್ರ ಧರಿಸಿದಾಗ ಆ ಶಾಲೆಯ ಗೌರವವನ್ನು ಕಾಪಾಡುವುದು ವಿದ್ಯಾರ್ಥಿಗಳ ಜವಾಬ್ದಾರಿಯಲ್ಲವೇ? ಎಂಬುದು ಅನೇಕರ ಪ್ರಶ್ನೆ. ಶಾಲಾ ಸಮವಸ್ತ್ರವು ಸಮಾನತೆ ಮತ್ತು ಶಿಸ್ತಿನ ಸಂಕೇತ. ಅಂತಹ ಸಮವಸ್ತ್ರದಲ್ಲೇ ಇಂತಹ ವರ್ತನೆಗಳು ಶಾಲಾ ಮರ್ಯಾದೆಗೆ ಕುಂದು ತರುತ್ತವೆ ಎಂಬ ವಾದ ಕೇಳಿಬರುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ? – Kannada News | Team India’s T20 World Cup Semis Path: Beat WI After Zimbabwe Win to Qualify!

2026 ರ ಟಿ20 ವಿಶ್ವಕಪ್‌ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ತಂಡವನ್ನು 72 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ತನ್ನ ಸೆಮಿಫೈನಲ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 256 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್​ಗೇರುವ ಅವಕಾಶವನ್ನು ಹೊಂದಿದೆಯಾದರೂ, ಪಾಯಿಂಟ್ ಪಟ್ಟಿಯಲ್ಲಿ ಮಾತ್ರ ಮೂರನೇ ಸ್ಥಾನದಲ್ಲೇ ಉಳಿದಿದೆ. ಇದು ಟೀಂ ಇಂಡಿಯಾ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ಪಾಯಿಂಟ್ ಪಟ್ಟಿಯಲ್ಲಿ ಭಾರತ ತಂಡ 3ನೇ ಸ್ಥಾನದಲ್ಲಿದ್ದರೂ, ಸೆಮಿಫೈನಲ್​ಗೆ ಸುಲಭವಾಗಿ ಅರ್ಹತೆ ಪಡೆಯುವ ಅವಕಾಶ ಹೊಂದಿದೆ. ಹಾಗಿದ್ದರೆ, ಭಾರತ ಸೆಮಿಫೈನಲ್​ಗೇರಬೇಕೆಂದರೆ ಏನು ಮಾಡಬೇಕು? ವಿವರ ಇಲ್ಲಿದೆ.

ಭಾರತ ಸೆಮಿಫೈನಲ್ ತಲುಪುವುದು ಹೇಗೆ?

ದಕ್ಷಿಣ ಆಫ್ರಿಕಾ ಈಗಾಗಲೇ ಗುಂಪು 1 ರಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡವನ್ನು ಮಾರ್ಚ್ 1 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದಿಂದ ನಿರ್ಧರಿಸಲಾಗುತ್ತದೆ. ಟೀಂ ಇಂಡಿಯಾ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಸೂರ್ಯಕುಮಾರ್ ಪಡೆ, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದರೆ ದಾಕು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಈ ಗೆಲುವಿನೊಂದಿಗೆ ಭಾರತ 4 ಅಂಕ ಪಡೆಯುವ ಮೂಲಕ ಗುಂಪು 1 ರಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ ಟಿಕೆಟ್ ಖಚಿತ ಪಡಿಸಿಕೊಳ್ಳುತ್ತದೆ.

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

ಟಿ20 ವಿಶ್ವಕಪ್‌ನಲ್ಲಿ ದಾಖಲೆ ಹೇಗಿದೆ?

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಪಂದ್ಯಗಳ ದಾಖಲೆ ನಿಜಕ್ಕೂ ಅದ್ಭುತವಾಗಿದೆ. ವಾಸ್ತವವಾಗಿ, ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳು ನಾಲ್ಕು ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ, ವೆಸ್ಟ್ ಇಂಡೀಸ್ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಭಾರತ ಕೇವಲ ಒಂದು ಪಂದ್ಯವನ್ನು ಗೆದ್ದಿದೆ. ಆದ್ದರಿಂದ, ಈ ಪಂದ್ಯವು ಟೀಂ ಇಂಡಿಯಾಕ್ಕೆ ಸುಲಭವಲ್ಲ. 2014 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಒಮ್ಮೆ ಮಾತ್ರ ಟೀಂ ಇಂಡಿಯಾ ಗೆಲುವು ಸಾಧಿಸಿದೆ. 2016 ರಲ್ಲಿ ನಡೆದಿದ್ದ ಕೊನೆಯ ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸಿತ್ತು. ಆದ್ದರಿಂದ, ಈ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಭಾರತ ತಂಡಕ್ಕೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:43 pm, Fri, 27 February 26

Source link

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google

ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಪ್ರಕರಣ ರದ್ದು ಮಾಡುವಂತೆ ಭಕ್ತರ ಪಟ್ಟು

ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ಹಿನ್ನಲೆ ಪ್ರಕರಣ ಕುರಿತು ಮುಂದಿನ ಹೋರಾಟದ ಬಗ್ಗೆ ಮಠದ ಆವರಣದಲ್ಲಿ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಸೇರಿ ಭಕ್ತರು ಸಭೆಯಲ್ಲಿ ಭಾಗಿಯಾಗಿದ್ದು, ಮುಂದಿನ‌ ಕಾನೂನು ಹೋರಾಟ ಸೇರಿ ಮಹತ್ವದ ನಿರ್ಣಯಗಳನ್ನು ಮಾಡಲಾಗಿದೆ. ಘಟನೆ ಸಂಬಂಧ ಅಪ್ರಾಪ್ತೆಯ ಪೋಷಕರು ದೂರು ನೀಡದಿದ್ದರೂ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಕೂಡಲೇ ಕೇಸ್​​ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ಬಖ್ತರು ಉಗ್ರ ಹೋರಾಟ ನಡೆಸೋದಾಗಿ ಮಹಲ್ ರೋಜಾ ಮಠದಲ್ಲಿ ಸಭೆ ಬಳಿಕ ಬಿಜೆಪಿ ನಾಯಕಿ ಲಲಿತಾ ಹೇಳಿದ್ದಾರೆ.

ಇದನ್ನೂ ಓದಿ: ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್; ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು

ಅಪ್ರಾಪ್ತೆಯ ಹೇಳಿಕೆಯನ್ನೂ ಪಡೆಯದೆ ಎಫ್​​ಐಆರ್​​ ದಾಖಲಿಸಲಾಗಿದೆ. ಇಲ್ಲಿ ಜಿಲ್ಲಾಡಳಿತ ಎಡವಿದ್ದು, ಕೇಸ್​​ ರದ್ದು ಮಾಡಲು ಎರಡು ದಿನ ಗಡುವು ನೀಡುತ್ತೇವೆ. ಆ ಬಳಿಕವೂ ಪ್ರಕರಣ ರದ್ದು ಮಾಡದಿದ್ದಲ್ಲಿ ಭಕ್ತರು ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಮಠದ ಭಕ್ತರು ಎಚ್ಚರಿಸಿದ್ದಾರೆ. ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ನೋಟಿಸ್​​ ನೀಡಿದ್ದರೂ ಮಲ್ಲಿಕಾರ್ಜುನ್​​ ಮುತ್ಯಾ ಮಾತ್ರ ಈ ವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಕೇಸ್​​ ದಾಖಲು ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ನಿನ್ನೆ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ರಿಲೀಸ್​​ ಮಾಡಿದ್ದರು. ಅತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ‌ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ವಿಡಿಯೋವನ್ನು ತಿರುಚಿರುವ ಆರೋಪ ಮಾಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ – Kannada News | Actress Prema talks about her struggles while acting back then

ದಕ್ಷಿಣ ಭಾರತದ ಸ್ಟಾರ್ ನಟಿ ಎನಿಸಿಕೊಂಡಿದ್ದ ಪ್ರೇಮಾ (Prema), ನಟನೆಯಿಂದ ದೂರಾಗಿ ಬಳಿಕ 2017 ರಲ್ಲಿ ಮತ್ತೆ ಕಮ್ ಬ್ಯಾಕ್ ಸಹ ಮಾಡಿದರು. ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ ಆದ ಹಾನಿಯ ಬಗ್ಗೆಯೂ ಮಾತನಾಡಿದ್ದಾರೆ ನಟಿ.

ಪ್ರೇಮಾ ಅವರಿಗೆ ಮೊದಲಿನಿಂದಲೂ ಗಗನಸಖಿ ಆಗಬೇಕೆಂಬ ಹಂಬಲ ಇತ್ತಂತೆ. ಆದರೆ ತಾಯಿಯ ಪ್ರೋತ್ಸಾಹದಿಂದಾಗಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಉಪೇಂದ್ರ ನಿರ್ದೇಶನದ ‘ಓಂ’ ಸಿನಿಮಾ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಿತು. ಪ್ರೇಮ ನಟಿಸಿದ ಎರಡನೇ ಸಿನಿಮಾ ಅದು. ಆ ಚಿತ್ರದ ರಿಯಲಿಸ್ಟಿಕ್ ನಟನೆಗಾಗಿ ಅವರು ಗಾಜಿನ ಚೂರುಗಳು ಮತ್ತು ಬೆಂಕಿಯ ನಡುವೆ ಕೆಲಸ ಮಾಡಬೇಕಾಗಿದ್ದ ಕಠಿಣ ಸಂದರ್ಭಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

ತೆಲುಗಿನಲ್ಲಿ ‘ಧರ್ಮಚಕ್ರಂ’ ಮತ್ತು ‘ದೇವಿ’ಯಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಪ್ರೇಮಾ ಅವರಿಗೆ ಆರಂಭದಲ್ಲಿ ಭಾಷೆಯ ಸಮಸ್ಯೆ ಎದುರಾಗಿತ್ತಂತೆ. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರು ತಮಗೆ ತೆಲುಗು ಕಲಿಸಿಕೊಟ್ಟರು ಎಂದು ಪ್ರೇಮ ನೆನಪು ಮಾಡಿಕೊಂಡಿದ್ದಾರೆ. ಆಗ ಇಂದಿನಂತೆ ಕ್ಯಾರವಾನ್ ಸೌಲಭ್ಯಗಳಿರಲಿಲ್ಲ, ಸೆಟ್‌ನಲ್ಲಿ ಎಲ್ಲರೂ ಒಂದೇ ಕೋಣೆಯಲ್ಲಿ ಕುಳಿತು ಕೆಲಸ ಮಾಡಬೇಕಿತ್ತು ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್

ಮಹಿಳಾ ಪ್ರಧಾನ ಚಿತ್ರಗಳಲ್ಲಿ ಮೈಲಿಗಲ್ಲು ಸೃಷ್ಟಿಸಿದ ‘ದೇವಿ’ ಚಿತ್ರದ ಪಾತ್ರಕ್ಕಾಗಿ ಅವರು ವಿಶೇಷ ಲೆನ್ಸ್‌ಗಳನ್ನು ಧರಿಸಬೇಕಾಗಿತ್ತು. ಇದರ ಪರಿಣಾಮವಾಗಿ ‘ದೇವಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರಿಗೆ ತೀವ್ರವಾದ ಕಣ್ಣಿನ ಸೋಂಕು ಕಾಣಿಸಿಕೊಂಡಿತ್ತು. ನಟನೆಯ ಮೇಲಿನ ಅತಿಯಾದ ಪ್ರೀತಿಯಿಂದ ಆ ಕಷ್ಟವನ್ನೂ ಅವರು ಮೆಟ್ಟಿ ನಿಂತಿದ್ದಾಗಿ ಪ್ರೇಮ ಹೇಳಿಕೊಂಡಿದ್ದಾರೆ. ತೆಲುಗಿನ ವೆಂಕಟೇಶ್, ಮೋಹನ್ ಬಾಬು ಮತ್ತು ಜಗಪತಿ ಬಾಬು ಅವರಂತಹ ದಿಗ್ಗಜ ನಟರ ಜೊತೆ ಕೆಲಸ ಮಾಡಿದ ಅನುಭವ ಹಂಚಿಕೊಂಡ ಪ್ರೇಮಾ, ಮೋಹನ್ ಬಾಬು ಮತ್ತು ವಿಷ್ಣುವರ್ಧನ್ ಅವರ ಶಿಸ್ತು ಮತ್ತು ಸಮಯಪಾಲನೆ ತಮ್ಮ ಮೇಲೆ ದೊಡ್ಡ ಪ್ರಭಾವ ಬೀರಿದೆ ಎಂದು ತಿಳಿಸಿದ್ದಾರೆ.

1995 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಪ್ರೇಮ, 2009ರ ವರೆಗೆ ಕನ್ನಡ, ತೆಲುಗು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ಅದಾದ ಬಳಿಕ ಚಿತ್ರರಂಗದಿಂದ ದೂರಾದ ಪ್ರೇಮ, ವೈಯಕ್ತಿಕ ಜೀವನದಲ್ಲಿ ಬ್ಯುಸಿ ಆದರು. ಆದರೆ ವೈಯಕ್ತಿಕ ಜೀವನದಲ್ಲಿ ಅನುಭವಿಸಿದ ಕೆಲವು ಏರು-ಪೇರುಗಳ ಬಳಿಕ 2017 ರಲ್ಲಿ ಮತ್ತೆ ಚಿತ್ರರಗಕ್ಕೆ ರೀ ಎಂಟ್ರಿ ಕೊಟ್ಟರು. ಈಗ ಅಲ್ಲೊಂದು-ಇಲ್ಲೊಂದು ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Kolkata Earthquake: ಕೇಂದ್ರ ಸಚಿವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ – Kannada News | Powerful Tremors Shake Kolkata, Quake Origin Traced to Bangladesh

ಕೋಲ್ಕತ್ತಾ, ಫೆಬ್ರವರಿ 27: ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್  ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.  ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ದೊಡ್ಡ ಹಾನಿಯ ವರದಿಗಳು ಬಂದಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಜನರು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪ ಸಂಭವಿಸಿದೆ. ಅದರ ತೀವ್ರತೆ ತುಂಬಾ ಹೆಚ್ಚಾಗಿತ್ತು. ಕಂಪನ ಸಂಭವಿಸಿದಾಗ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿದ್ದರು.

ಬಾಂಗ್ಲಾದೇಶದಲ್ಲೂ ಭೂಕಂಪದ ಅನುಭವವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 27 ರಂದು ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಕೇಂದ್ರಬಿಂದು ಬಾಂಗ್ಲಾದೇಶದ ಖುಲ್ನಾದಿಂದ ನೈಋತ್ಯಕ್ಕೆ 26 ಕಿಲೋಮೀಟರ್ ದೂರದಲ್ಲಿತ್ತು. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭೂಕಂಪದ ತೀವ್ರತೆ ಹೆಚ್ಚು ಕಂಡುಬಂದಿದೆ.

ಕಳೆದ ಎರಡು ತಿಂಗಳಲ್ಲಿ ಕೋಲ್ಕತ್ತಾದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ. ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಡೋಕಾನಿಯಾ ಅವರು ವೀಡಿಯೊ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಲ್ಲಿ ಕೋಲ್ಕತ್ತಾವನ್ನು ಅಪ್ಪಳಿಸಿದ ಅತ್ಯಂತ ಶಕ್ತಿಶಾಲಿ ಭೂಕಂಪ ಇದಾಗಿದೆ. ತೀವ್ರತೆ 6ಕ್ಕಿಂತ ಮೇಲಿರುವಂತೆ ಭಾಸವಾಗಿತ್ತು ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ – Kannada News | MLA Bellad writes to PM modi on Dharwad Job Protest

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ

ಧಾರವಾಡ, ಫೆಬ್ರವರಿ 27: ಕರ್ನಾಟಕದ ಅಸಂಖ್ಯಾತ ಯುವಕರು ನೌಕರಿಯ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆಯನ್ನು ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಗಾಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ, ಉಪನಾಯಕ ಅರವಿಂದ ಬೆಲ್ಲದ್, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ರಾಜ್ಯಪಾಲರಿಗೆ ಪತ್ರದ ಮೂಲಕ ಉದ್ಯೋಗಾಕಾಂಕ್ಷಿಗಳ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ.

2.86 ಲಕ್ಷ ಹುದ್ದೆಗಳ ಭರವಸೆ ಏನಾಯ್ತು?

ಅರವಿಂದ ಬೆಲ್ಲದ್ ತಮ್ಮ ಪತ್ರದಲ್ಲಿ, ರಾಜ್ಯ ಸರ್ಕಾರ ಆಕಾಂಕ್ಷಿಗಳಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ ಮತ್ತು ಲಕ್ಷಾಂತರ ಯುವಕರು ಹತಾಶೆಯಿಂದ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. ಧಾರವಾಡದಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಯುವಕರಲ್ಲಿಯ ಕೋಪ ಮತ್ತು ಆತಂಕ ಮನೆಮಾಡಿದೆ. ನಾವು ಉದ್ಯೋಗಾಕಾಂಕ್ಷಿಗಳ ಬೇಡಿಕೆಗೆ ಬೆಂಬಲಿಸುತ್ತೇವೆ. ಆದರೆ ಅವರಿಗಾಗುವ ಅನ್ಯಾಯ ನೋಡುತ್ತ ನಾವು ಸುಮ್ಮನಿರುವುದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

ಅರವಿಂದ ಬೆಲ್ಲದ್ ಪತ್ರದಲ್ಲಿ, ಸರ್ಕಾರ ಸಮರ್ಪಕ ಉತ್ತರ ನೀಡದೇ ಲಾಠಿ ಚಾರ್ಜ್ ಮಾಡುತ್ತಿರುವುದು ಸೂಕ್ತವಲ್ಲ ಎಂದು ಆರೋಪಿಸಿರುವ ಅರವಿಂದ್, ರಾಜ್ಯದಲ್ಲಿ ಆಡಳಿತ ನಿಭಾಯಿಸಲು ಸರ್ಕಾರ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ, ಬೆಂಗಳೂರಿನಲ್ಲಿ ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಕರ್ನಾಟಕ ಸರ್ಕಾರ 2.86 ಲಕ್ಷ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದರೂ, ಕಳೆದ ಮೂರು ವರ್ಷಗಳಲ್ಲಿ 10,000 ಕ್ಕಿಂತ ಕಡಿಮೆ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. 8,157 ನೇಮಕಾತಿಗಳು ಮಾತ್ರ ಪೂರ್ಣಗೊಂಡಿದ್ದು, ನಿರ್ಧಿಷ್ಟ ಸಮಯರೇಖೆ ಮತ್ತು ಪಾರದರ್ಶಕ ಯೋಜನೆಯ ಕೊರತೆ ಯುವಜನರಲ್ಲಿ ನಿರಾಶೆ ಉಂಟುಮಾಡುತ್ತಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೆಲ ಹುದ್ದೆಗಳ ನೇಮಕಾತಿ ಶೀಘ್ರವಾಗಿ ನಡೆದಿತ್ತು ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿತ್ತಾ, 16,000 ಶಿಕ್ಷಕರ ಹುದ್ದೆಗಳ ನೋಟಿಫಿಕೇಶನ್, 6,000 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, 4,000 CAR ಸಿಬ್ಬಂದಿ, 545 PSI, 402 PSI ನೇಮಕಾತಿ ಮುಂತಾದ ಉದಾಹರಣೆಗಳನ್ನು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು – Kannada News | Sriramulu Welcomes Ananth Kumar Hegdes Return to Active Politics

ಶಿವಮೊಗ್ಗ, ಫೆಬ್ರವರಿ 27: ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್​​ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ ಅವರನ್ನು ಹಿಂದು ಫೈರ್ ಬ್ರಾಂಡ್ ಎಂದು ಬಣ್ಣಿಸಿದ ಅವರು, ಕರಾವಳಿ ಪ್ರದೇಶದಲ್ಲಿ ಅವರಿಗೆ ಉತ್ತಮ ಹೆಸರಿದೆ ಮತ್ತು ಯುವಕರಲ್ಲಿ ಅಪಾರ ಜನಪ್ರಿಯತೆ ಇದೆ. ಅವರು ಮತ್ತೆ ಪಕ್ಷದಲ್ಲಿ ಸಕ್ರಿಯರಾಗುವುದನ್ನು ಎಲ್ಲರೂ ಸ್ವಾಗತಿಸುತ್ತಾರೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ – Kannada News | Delhi Liquor Policy, Rouse Avenue Court Slams CBI Investigation

ನವದೆಹಲಿ, ಫೆಬ್ರವರಿ 27: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐಯನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ತರಾಟೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಸಿಬಿಐನ ಕಾರ್ಯವೈಖರಿ ಕುರಿತು ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದೆ. ಇಂದು ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ, ಕೆ ಕವಿತಾ ಸೇರಿ 23 ಜನರನ್ನು ಖುಲಾಸೆಗೊಳಿಸಲಾಗಿದೆ. ಹಾಗೆಯೇ ಸಮರ್ಪಕ ಸಾಕ್ಷ್ಯ ಒದಗಿಸದಿದ್ದಿದ್ದಕ್ಕೆ ನ್ಯಾಯಾಲಯವು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಾಲಯವು ಸಿಬಿಐನ ತನಿಖೆಯ ಹಾದಿ ಅಥವಾ ನಿರ್ದಿಷ್ಟ ಅಂಶಗಳ ಬಗ್ಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದೆ. ಇದು ತನಿಖಾ ಸಂಸ್ಥೆಯ ಮೇಲೆ ಹೆಚ್ಚಿನ ನಿಗಾವಹಿಸುವ ಅಗತ್ಯವನ್ನು ಎತ್ತಿ ತೋರಿಸುತ್ತದೆ. ರೌಸ್ ಅವೆನ್ಯೂ ಕೋರ್ಟ್‌ನ ಈ ಹೇಳಿಕೆಯು ಪ್ರಕರಣದ ಮುಂದಿನ ಬೆಳವಣಿಗೆಗಳ ಮೇಲೆ ಮಹತ್ವದ ಪರಿಣಾಮ ಬೀರಬಹುದು ಮತ್ತು ಸಿಬಿಐ ತನ್ನ ತನಿಖಾ ಪ್ರಕ್ರಿಯೆಗಳನ್ನು ಪರಿಶೀಲಿಸಲು ಕಾರಣವಾಗಬಹುದು. ದೆಹಲಿ ಮದ್ಯ ನೀತಿ ಪ್ರಕರಣವು ರಾಷ್ಟ್ರ ರಾಜಧಾನಿಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಈ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳ ಹೆಸರುಗಳು ಕೇಳಿಬಂದಿವೆ. ಸಿಬಿಐ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಅನೇಕರನ್ನು ವಿಚಾರಣೆಗೊಳಪಡಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Exit mobile version