ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲೇ ಕದ್ದು ಸಿಕ್ಕಿಬಿದ್ದ ಮಹಿಳೆ: ದೋಚಿದ್ದಿದ್ದು 12.5 ಕೆಜಿ ಬೆಳ್ಳಿ! – Kannada News | Wife Steals 12.5kg Silver for Cancer Stricken Husband’s Treatment in Bengaluru

ಬೆಂಗಳೂರು, ಫೆಬ್ರವರಿ 27: ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ಖರ್ಚಿಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲಿಯೇ ಹೆಂಡತಿಯೋರ್ವಳು ಬೆಳ್ಳಿ ಕದ್ದಿರುವ ಘಟನೆ ಸಂಬಂಧ ಜೀವನ ಭೀಮಾನಗರ ಪೊಲೀಸರು ಚೈತ್ರಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪ್ರತಿಷ್ಟಿತ ಆಸ್ಪತ್ರೆ ಒಂದರಲ್ಲಿ ಸರ್ಜನ್ ಆಗಿದ್ದವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ, ಹಂತ ಹಂತವಾಗಿ ಒಂದೊಂದೇ ಬೆಳ್ಳಿ ಪಾತ್ರೆಯಂತೆ ಒಟ್ಟು ಒಟ್ಟು 12.5 ಕೆಜಿ ಬೆಳ್ಳಿ ದೋಚಿದ್ದಳು. ಈಕೆಯ ಗಂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಖರ್ಚಿಗೆ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಕಳೆದ ಒಂದೂವರೆ ವರ್ಷದಿಂದ ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಈಕೆ ಕಳ್ಳತನಕ್ಕೆ ಇಳಿದಿದ್ದಳು ಎನ್ನಲಾಗಿದೆ.

ಮಹಡಿ ಮೇಲೆ ಕೆಲ ಬೆಳ್ಳಿ ಸಾಮಗ್ರಿಗಳ ಕೂಡಿಟ್ಟಿದ್ದ ಮನೆಯವರು, ಹಬ್ಬದ ಸಂದರ್ಭದಲ್ಲಿ ಮಾತ್ರ ಆ ಪಾತ್ರೆಗಳನ್ನ ಉಪಯೋಗ ಮಾಡುತ್ತಿದ್ದರು. ಈ ಹಿನ್ನೆಲೆ ಅವುಗಳನ್ನು ಒಂದೊಂದಾಗಿ ಎಗರಿಸಿದ್ದ ಚೈತ್ರಾ, ಅವನ್ನು ಅಡವಿಟ್ಟು ಹಣ ಪಡೆದು ಬಳಕೆ ಮಾಡುತ್ತಿದ್ದಳು. ನಂತರ ಅನುಮಾನ ಬಾರದಂತೆ ಬಂದು ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು.  ದೀಪಾವಳಿ ಹಬ್ಬದ ನಂತರ ಆಕೆ ಕೆಲಸ ಬಿಟ್ಟಿದ್ದು, ದಸರಾ ಹಬ್ಬಕ್ಕೆ ಬೇಕೆಂದು ಪಾತ್ರೆ ಚೀಲ ಓಪನ್ ಮಾಡಿದ್ದ ಮನೆಯವರು ಶಾಕ್​​ ಆಗಿದ್ದಾರೆ. ಈ ವೇಳೆ
ಬೆಳ್ಳಿ ಪಾತ್ರೆಗಳು, ಪೂಜಾ ಸಾಮಗ್ರಿಗಳು ಕಾಣೆಯಾಗಿರೋದು ಕುಟುಂಬಸ್ಥರ ಗಮನಕ್ಕೆ ಬಂದಿದೆ. ಅವರು ನೀಡಿದ್ದ ದೂರಿನ ಅನ್ವಯ ತನಿಖೆಗೆ ಮುಂದಾದ ಪೊಲೀಸರು, ಅನುಮಾನಗೊಂಡು ಮನೆ ಕೆಲಸದವರ ವಿಚಾರಣೆ ನಡೆಸಿದ್ದಾರೆ. ಚೈತ್ರಾಳ ವಿಚಾರಣೆ ವೇಳೆ ಬೆಳ್ಳಿ ಸಾಮಗ್ರಿ ಕಳ್ಳತನ ಮಾಡಿರುವ ಸತ್ಯ ಬಯಲಾಗಿದ್ದು, ಬಂಧಿತಳಿಂದ 35 ಲಕ್ಷ ಮೌಲ್ಯದ 12.5 ಕೆಜಿ ಬೆಳ್ಳಿ, 7.5 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಚಿನ್ನದಂಗಡಿ ಮಾಲೀಕನ ಹೆಸರಿನಲ್ಲಿ ಸರ ಪಡೆದು ವಂಚಿಸಿದ ಆರೋಪಿಯನ್ನು ಬೆಂಗಳೂರಿನ ಭಾರತಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 5 ತಿಂಗಳ ಬಳಿಕ ರಾಜಸ್ಥಾನ ಮೂಲದ ಆರೋಪಿ ಧರ್ಮವೀರ್​ ಸಿಂಗ್​ ಬಂಧಿಸಲಾಗಿದ್ದು, ಸುಮಾರು 33 ಲಕ್ಷ ರೂ. ಮೌಲ್ಯದ 239 ಗ್ರಾಂ ಚಿನ್ನದ ಸರವನ್ನು ಈತನಿಂದ ವಶಕ್ಕೆ ಪಡೆಯಲಾಗಿದೆ. ಮಹಾವೀರ್ ಜ್ಯುವೆಲ್ಲರಿ ಶಾಪ್​ನಲ್ಲಿ ಕೆಲಸ ಮಾಡ್ತಿದ್ದ ಧರ್ಮವೀರ್ ಸಿಂಗ್, ಬೇರೆ ಚಿನ್ನದ ಅಂಗಡಿಗಳ ಜೊತೆ ಎಕ್ಸ್​ಚೇಂಜ್​ ವ್ಯವಹಾರ ನಡೆಸುತ್ತಿದ್ದ. ಜ್ಯುವೆಲ್ಲರಿ ಅಂಗಡಿ ಮಾಲೀಕ ಹೈದರಾಬಾದ್​ಗೆ ಹೋದಾಗ ಮಾಲೀಕನ ಹೆಸರು ಹೇಳಿ 7 ಲಾಂಗ್​ ಚೈನ್​ ಪಡೆದುಕೊಂಡಿದ್ದ ಆರೋಪಿ, ಅವುಗಳ ಸಮೇತ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಪೊಲೀಸರ ಕಣ್ಣುತಪ್ಪಿಸಿ 5 ತಿಂಗಳು ತಲೆಮರೆಸಿಕೊಂಡಿದ್ದ ಈತನನ್ನು ಕೊನೆಗೂ ಪೊಲೀಸರು ಖೆಡ್ಡಾಕ್ಕೆ ಕೆಡಿವಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:23 pm, Fri, 27 February 26

Source link

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ಎಐಎಡಿಎಂಕೆ ಉಚ್ಚಾಟಿತ ನಾಯಕ ಪನ್ನೀರ್​ಸೆಲ್ವಂ ಡಿಎಂಕೆ ಸೇರ್ಪಡೆ – Kannada News | Tamil Nadu: Former CM Panneerselvam Aligns With MK Stalin’s DMK

ಚೆನ್ನೈ,ಫೆಬ್ರವರಿ 27: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿವಾಗುತ್ತಿದ್ದಂತೆ, ರಾಜಕೀಯದಲ್ಲಿ ಪ್ರಮಖ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಮೂರುಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ. ಅವರು ಎಐಡಿಎಂಕೆಯಂದ ಉಚ್ಚಾಟನೆಗೊಂಡಿದ್ದರು. ಪನ್ನೀರ್‌ಸೆಲ್ವಂ ಅವರು ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಸದಸ್ಯತ್ವ ಪಡೆದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಡಿಎಂಕೆ ಅವಕಾಶ ನೀಡಬಹುದು. 2021 ರಲ್ಲಿ ಅವರು ಗೆದ್ದಿದ್ದ ಕ್ಷೇತ್ರವಾದ ಬೋಡಿನಾಯಕನೂರಿನಿಂದ ಡಿಎಂಕೆ ಅವರನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ.

ಪನ್ನೀರ್‌ಸೆಲ್ವಂ ಅವರ ಬೆಂಬಲಿಗರಾದ ಆರ್. ವೈತಿಲಿಂಗಂ ಮತ್ತು ಪಾಲ್ ಮನೋಜ್ ಪಾಂಡಿಯನ್ ಇತ್ತೀಚೆಗೆ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಡಿಎಂಕೆ ಸೇರ್ಪಡೆಗೊಂಡಿದ್ದರು. ಪನ್ನೀರ್‌ಸೆಲ್ವಂ ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಜಯಲಲಿತಾ ಅವರ ಅತ್ಯಂತ ವಿಶ್ವಾಸಾರ್ಹ ಸಲಹೆಗಾರ ಎಂದು ಪರಿಗಣಿಸಲಾಗಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಮ್ಮನಿಗೆ ಭಯ, ಆದ್ರೆ ಅದು ನನ್ನ ಕನಸು: ಕೊನೆಗೂ ತಾಯಿಯನ್ನು ಆಕಾಶದಲ್ಲಿ ಹಾರಾಡಿಸಿದ ಮಗ – Kannada News | Heartwarming: Manish takes mother on first flight, her innocent joy melts hearts

ನವದೆಹಲಿ, ಫೆ.27: ಪ್ರತಿಯೊಬ್ಬ ಮಗನಿಗೂ ತನ್ನ ಪೋಷಕರ ಆಸೆಗಳನ್ನು ಪೂರೈಸಬೇಕೆಂಬ ಹಂಬಲವಿರುತ್ತದೆ. ಅಂತಹದ್ದೇ ಒಂದು ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ ಮನೀಶ್ ಎಂಬ ಯುವಕ ಹಂಚಿಕೊಂಡ ವಿಡಿಯೋ. ತಮ್ಮ ತಾಯಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ಮನೀಶ್, ಅವರ ಮುಖದಲ್ಲಿನ ಮುಗ್ಧ ಸಂತೋಷವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮನೀಶ್ ಹಂಚಿಕೊಂಡಿರುವ ವಿಡಿಯೋದಲ್ಲಿರುವಂತೆ, ಇಡೀ ಕುಟುಂಬದಲ್ಲೇ ವಿಮಾನ ಪ್ರಯಾಣ ಮಾಡಿದ ಮೊದಲ ಮಹಿಳೆ ಇವರ ತಾಯಿಯಾಗಿದ್ದಾರೆ. ವಿಮಾನ ಏರುವ ಮೊದಲಿನ ಕುತೂಹಲದಿಂದ ಹಿಡಿದು, ಆಕಾಶದಲ್ಲಿ ಹಾರುವಾಗ ಕಿಟಕಿಯ ಮೂಲಕ ಹೊರಗಿನ ಪ್ರಪಂಚವನ್ನು ನೋಡಿ ಬೆರಗಾಗುವವರೆಗಿನ ಕ್ಷಣಗಳು ವಿಡಿಯೋದಲ್ಲಿದೆ.

ವಿಡಿಯೋದಲ್ಲೇನಿದೆ?

ವಿಮಾನದೊಳಗೆ ಕುಳಿತ ತಾಯಿ ಅತ್ಯಂತ ಉತ್ಸಾಹದಿಂದ ಸುತ್ತಮುತ್ತಲಿನ ಸೌಂದರ್ಯವನ್ನು ಗಮನಿಸುತ್ತಿರುವುದು ಕಾಣಬಹುದು. ವಿಮಾನದಲ್ಲಿ ನೀಡಿದ ಆಹಾರವನ್ನು ಸವಿಯುವಾಗ ಅವರು ತೋರುವ ನಾಚಿಕೆ ಮತ್ತು ನಗು ನೋಡುಗರ ಮನ ಗೆಲ್ಲುತ್ತಿದೆ. ಮಗ ಮನೀಶ್ ಅವರು ತಮ್ಮ ತಾಯಿಯ ಪ್ರತಿಯೊಂದು ಹಾವಭಾವವನ್ನು ಪ್ರೀತಿಯಿಂದ ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ

ಇಲ್ಲಿದೆ ನೋಡಿ ವಿಡಿಯೋ:

ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು ಹೇಳಿದ್ದೇನು?

ಮನೀಶ್​​ ಅವರು ಹಂಚಿಕೊಂಡಿರುವ ವಿಡಿಯೋದ ಬಗ್ಗೆ ನೆಟ್ಟಗರು ಕೂಡ ಕಮೆಂಟ್​ ಮಾಡಿದ್ದಾರೆ. ಇದು ಮಗ ತನ್ನ ತಾಯಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ನಾವು ಜೀವನದಲ್ಲಿ ಏನೇ ಸಾಧಿಸಿದರೂ, ನಮ್ಮ ಪೋಷಕರ ಮುಖದಲ್ಲಿ ಇಂತಹ ನಗು ನೋಡುವುದೇ ಅಂತಿಮ ಯಶಸ್ಸು ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನು ಕೆಲವರು ಈ ವಿಡಿಯೋವನ್ನು ನೋಡಿ. ಈ ವಿಡಿಯೋ ಕೇವಲ ಪ್ರವಾಸದ ಕಥೆಯಲ್ಲ, ಬದಲಿಗೆ ತಾಯಿ-ಮಗನ ನಡುವಿನ ಅವಿನಾಭಾವ ಸಂಬಂಧಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Lunar Eclipse 2026: ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Auspicious Effects for Sagittarius

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ಧನಸ್ಸು ರಾಶಿಯವರ ಮೇಲೆ ಬೀರಲಿರುವ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂಲಾ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿಗೆ ಸೇರಿದ ಧನಸ್ಸು ರಾಶಿಯವರಿಗೆ ಈ ಗ್ರಹಣವು ವಿಶೇಷವಾಗಿ ಶುಭಫಲಗಳನ್ನು ನೀಡಲಿದೆ. ಗ್ರಹಣವು ಒಂಬತ್ತನೇ ಮನೆಯಲ್ಲಿ, ಅಂದರೆ ಭಾಗ್ಯ ಸ್ಥಾನದಲ್ಲಿ ಸಂಭವಿಸುತ್ತಿರುವುದರಿಂದ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತ.

ಈ ಅವಧಿಯಲ್ಲಿ ಧನಸ್ಸು ರಾಶಿಯವರು ಆರ್ಥಿಕವಾಗಿ ಪ್ರಗತಿ ಸಾಧಿಸುವರು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಾಗಲಿದ್ದು, ಉತ್ತಮ ಫಲಿತಾಂಶಗಳು ದೊರೆಯಲಿವೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದು, ಹೊಸ ಕಾರ್ಯಗಳನ್ನು ಕೈಗೊಳ್ಳಲು ಉತ್ತೇಜನ ಸಿಗಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ, ಮಕ್ಕಳಿಂದ ಶುಭ, ಮತ್ತು ಸಂಗಾತಿಯ ವೃತ್ತಿಯಲ್ಲಿ ಬಡ್ತಿಯ ಯೋಗವಿದೆ. ಹೊಸ ವ್ಯಾಪಾರ ಮತ್ತು ಪೂರ್ವಿಕರ ಆಸ್ತಿ ವಿವಾದಗಳಲ್ಲಿ ಅನುಕೂಲಕರ ಫಲಿತಾಂಶಗಳು ದೊರೆಯಲಿವೆ. ಸಾಮಾಜಿಕವಾಗಿ ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚಳವಾಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಕಂಡುಬರಲಿವೆ.

ಶುಭಫಲಗಳನ್ನು ಹೆಚ್ಚಿಸಲು, ಧನಸ್ಸು ರಾಶಿಯವರು ನವಗ್ರಹಗಳ ಆರಾಧನೆ, ಚಂದ್ರ ಗಾಯತ್ರಿ ಮಂತ್ರ ಪಠಣ (‘ಕ್ಷೀರ ಪುತ್ರಾಯ ವಿದ್ಮಹೇ ಅಮೃತತ್ವಾಯ ಧೀಮಹಿ ತನ್ನೋಸ್ ಚಂದ್ರ ಪ್ರಚೋದಯಾತ್’) ಮತ್ತು ನಾಗದರ್ಶನ, ನಾಗರಕಲ್ಲುಗಳಿಗೆ ಗೆಜ್ಜೆ ವಸ್ತ್ರ ಅರ್ಪಿಸಿ ಮೂರು ಸುತ್ತು ಪ್ರದಕ್ಷಿಣೆ ಮಾಡುವಂತಹ ಪರಿಹಾರಗಳನ್ನು ಕೈಗೊಳ್ಳುವುದು ಉತ್ತಮ. ಈ ಗ್ರಹಣವು ಧನಸ್ಸು ರಾಶಿಯವರಿಗೆ ಭಾಗ್ಯೋದಯ ಕಾಲವಾಗಿದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ! – Kannada News | DK Shivakumar Breaks Silence on MLAs’ Dinner Meeting: Here’s What the Karnataka DCM Said

ಬೆಂಗಳೂರು, ಫೆಬ್ರವರಿ 27: ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಜನ್ಮದಿನಾಚರಣೆಯ ನೆಪದಲ್ಲಿ ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವರು ವಿಶ್ರಾಂತಿಗೆ, ಕೆಲವರು ವಿದೇಶ ಪ್ರಯಾಣಕ್ಕೆ, ಇನ್ನು ಕೆಲವರು ದೆಹಲಿಗೆ ತೆರಳುತ್ತಾರೆ. ಇವೆಲ್ಲ ಅವರವರ ವೈಯಕ್ತಿಕ ವಿಚಾರಗಳು, ಪಕ್ಷಕ್ಕೂ ಇವುಗಳಿಗೂ ಸಂಬಂಧವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ಮತ್ತು ಬಾಲಕೃಷ್ಣ ಅವರು ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂದು ಹೇಳಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ‘ಹೊಸ ಶಾಸಕರಿಗೆ ಮಂತ್ರಿಯಾಗುವ ಆಸೆ ಇರುವುದು ಸಹಜ. ನಾನು, ಪರಮೇಶ್ವರ, ಹೆಚ್.ಕೆ. ಪಾಟೀಲ್, ಮಹದೇವಪ್ಪ, ಸಿದ್ದರಾಮಯ್ಯ ಮುಂತಾದ ಹಿರಿಯ ನಾಯಕರು ಚಿಕ್ಕ ವಯಸ್ಸಿನಲ್ಲೇ ಮಂತ್ರಿಗಳಾಗಿದ್ದವರು. ಹೀಗಾಗಿ, ಹೊಸಬರಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷೆಗಳಿರುತ್ತವೆ. ನಮ್ಮನ್ನೂ ಮಂತ್ರಿ ಮಾಡಿ ಎಂದು ಕೆಲವರು ಕೇಳುತ್ತಾರೆ. ಇದು ಸಹಜ’ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google

ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್ ಈ ಆದೇಶದಿಂದ ಎಸ್.ಎನ್. ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಸಿಕ್ಕಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದ ಸುಬ್ಬಾರೆಡ್ಡಿ, ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಅದನ್ನು ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಪರ ವಿರೋಧ ವಾದ ಆಲಿಸಿದ್ದ ಹೈಕೋರ್ಟ್ ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿತ್ತು. ಹೀಗಿದ್ದರೂ  ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಕೋರ್ಟ್​​ ಘೋಷಿಸಿರಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ 6 ತಿಂಗಳೊಳಗಾಗಿ ತಡೆಯಾಜ್ಞೆ ನೀಡದಿದ್ದರೆ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸುವುದು ಅನಿವಾರ್ಯ ಎನ್ನುವ ಸ್ಥಿತಿ ಉದ್ಭವಿಸಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ್ದ ಸುಬ್ಬಾರೆಡ್ಡಿ ಇದು ದೊಡ್ಡ ಪ್ರಕರಣವೇನಲ್ಲ. ಸೋತಿರುವವರೆಲ್ಲರೂ ಈ ರೀತಿ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾದರೆ, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕಷ್ಟವಾಗುತ್ತದೆ ಎಂದಿದ್ದರು. ಅಲ್ಲದೆ ಹೈಕೋರ್ಟ್​​ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಿದ್ದರು. ಈಗ ಸರ್ವೋಚ್ಛ ನ್ಯಾಯಾಲಯ ಹೈಕೋರ್ಟ್​​ ತೀರ್ಪಿಗೆ ತಡೆ ನೀಡಿರುವ ಹಿನ್ನೆಲೆ ಕಾಂಗ್ರೆಸ್​​ ನಾಯಕ ಸುಬ್ಬಾರೆಡ್ಡಿಗೆ ಕಾನೂನು ಹೋರಾಟದಲ್ಲಿ ಮೊದಲ ಗೆಲುವು ಸಿಕ್ಕಂತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:39 pm, Fri, 27 February 26

Source link

‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್ – Kannada News | Ravichandran best wishes to Kannada movie Kavala

‘ಕವಳ’ (Kavala) ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ (Ravichandran) ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗುತ್ತಿದೆ. ಸಿನಿಮಾವನ್ನುಶ್ರೀ ಜೈ ನಿರ್ದೇಶನ ಮಾಡುತ್ತಿದ್ದಾರೆ. ನಟ ರವಿಚಂದ್ರನ್ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link

Lunar Eclipse 2026: ಮಾ.03ರ ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Astrological Forecast for Scorpio

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಗ್ರಹಣವು ವೃಶ್ಚಿಕ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ರಾಶಿಯ ಕರ್ಮ ಸ್ಥಾನವಾದ ಹತ್ತನೇ ಮನೆಯಲ್ಲಿ ಸಂಭವಿಸುತ್ತಿದ್ದು, ವಿಶಾಖಾ, ಅನುರಾಧಾ, ಮತ್ತು ಜೇಷ್ಠಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣದ ಪ್ರಭಾವದಿಂದ ನಿಂತುಹೋಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿಯಲ್ಲಿ ಮಾರ್ಪಾಡು, ಬಡ್ತಿ, ಮತ್ತು ಹೆಚ್ಚುವರಿ ಜವಾಬ್ದಾರಿಗಳು ಲಭಿಸಲಿವೆ. ವಿದೇಶ ಪ್ರಯಾಣ, ಸಾರ್ವಜನಿಕ ಮನ್ನಣೆ, ಮತ್ತು ಕೀರ್ತಿ ಪ್ರತಿಷ್ಠೆಗಳು ಹೆಚ್ಚಾಗಲಿವೆ. ವ್ಯಾಪಾರಸ್ಥರಿಗೆ ಅನುಕೂಲವಾಗಿದ್ದು, ಪೋಷಕರ ಆರೋಗ್ಯ ಸುಧಾರಿಸುತ್ತದೆ. ಆಕಸ್ಮಿಕ ಪ್ರಯಾಣ, ವಾಹನ ಮತ್ತು ಭೂಮಿ ಖರೀದಿಯ ಯೋಗಗಳಿವೆ. ಖಾಸಗಿ ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ ಹಾಗೂ ರೈತಾಪಿ ವರ್ಗದವರಿಗೆ ಶುಭಫಲಗಳು ದೊರೆಯಲಿವೆ. ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಇಂಜಿನಿಯರ್‌ಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಉತ್ತಮ ಸಮಯ.

ಆದರೆ, ಚಂದ್ರನ ಪ್ರಭಾವದಿಂದ ಅತಿಯಾದ ಭಾವನಾತ್ಮಕ ಸನ್ನಿವೇಶಗಳು ಮತ್ತು ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲಗಳು ಎದುರಾಗಬಹುದು. ಅಂತಹ ಸಂದರ್ಭಗಳಲ್ಲಿ ಇತರರ ಬೆಂಬಲ ಪಡೆಯುವುದು ಸೂಕ್ತ. ಶುಭಫಲಗಳನ್ನು ಹೆಚ್ಚಿಸಲು ಸುಬ್ರಹ್ಮಣ್ಯ ಅಥವಾ ನಾಗಾರಾಧನೆ ಮಾಡುವುದು, ನಾಗ ಸ್ತೋತ್ರಗಳನ್ನು ಪಠಿಸುವುದು ಮತ್ತು ಗ್ರಹಣ ನಂತರ ಅಕ್ಕಿ ಪಾಯಸ ದಾನ ಮಾಡುವುದು ಉತ್ತಮ ಎಂದು ಗುರೂಜಿ ಸಲಹೆ ನೀಡಿದ್ದಾರೆ.

 

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಬೆಂಗಳೂರಿನಲ್ಲಿ ಪಾಸ್​ಪೋರ್ಟ್ ದಾಖಲೆ​ ಪರಿಶೀಲನೆಗೆ ಹೊಸ ಮಾರ್ಗಸೂಚಿ – Kannada News | New Passport Verification Guidelines in Bengaluru: Body Worn Cameras Mandatory, Police Commissioner Issues Strict SOP

ಬೆಂಗಳೂರು, ಫೆಬ್ರವರಿ 27: ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ (Passport Verification) ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಬೆಂಗಳೂರು (Bangalore) ನಗರ ಪೊಲೀಸರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ನಿಯಮಗಳನ್ನು ಡಿಜಿ ಹಾಗೂ ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರಕಟಿಸಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಬಾಡಿ-ವೋರ್ನ್ ಕ್ಯಾಮೆರಾ (Body Worn Camera) ಧರಿಸುವುದು ಕಡ್ಡಾಯವಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಪಾಸ್‌ಪೋರ್ಟ್ ಅರ್ಜಿದಾರರನ್ನು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಕರೆಸಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಬದಲಾಗಿ, ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಅರ್ಜಿದಾರರ ವಾಸಸ್ಥಳಕ್ಕೆ ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ನೆರೆಹೊರೆಯವರಿಂದ ಅಗತ್ಯ ಮಾಹಿತಿ ಸಂಗ್ರಹಿಸುವುದೂ ಮಾರ್ಗಸೂಚಿಯ ಭಾಗವಾಗಿದೆ.

ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮುನ್ನ SMS ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡಬೇಕು. ಯಾವುದೇ ರೀತಿಯ ಆಮಿಷ ಅಥವಾ ಹಣದ ನಿರೀಕ್ಷೆ ಇಡಬಾರದು. ಈ ಉದ್ದೇಶಕ್ಕಾಗಿ ಅರ್ಜಿದಾರರಿಗೆ ಕಿರುಕುಳ ನೀಡುವುದು, ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ಸಲ್ಲಿಕೆಯಲ್ಲಿ ವಿಳಂಬ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಪ್ರತಿಕೂಲ ವರದಿ ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ಸೂಕ್ತ ಮತ್ತು ಸ್ಪಷ್ಟವಾದ ಪುರಾವೆಗಳನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ. ತರ್ಕಬದ್ಧ ಕಾರಣಗಳಿಲ್ಲದೆ ನಕಾರಾತ್ಮಕ ವರದಿ ಸಲ್ಲಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಎಲ್ಲಾ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ಡಿಸಿಪಿ ವಾರಕ್ಕೊಮ್ಮೆ ವರದಿ ಸಲ್ಲಿಸಬೇಕಾಗಿದೆ. ಮಾರ್ಗಸೂಚಿ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!: ರಸ್ತೆ ದುಃಸ್ಥಿಗೆ ಜನ ಹೈರಾಣು – Kannada News | Haveri–Sirsi State Highway Turns Into Muddy Stretch After Untimely Rains; Commuters Struggle

ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್​​ ಸವಾರರು ಬಿದ್ದು ಒದ್ದಾಡಿರು ಪ್ರಸಂಗಗಳೂ ನಡೆದಿವೆ. ಈ ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಾಗದೆ, ಕೆಸರಲ್ಲಿ ಸಿಲುಕಿ ವಾಯನಗಳು ನಿಯಂತ್ರಣ ಕಳೆದುಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲಲ್ಲಿ ವೈರಲ್​​ ಆಗುತ್ತಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version