ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ – Kannada News | RCB’s 9 Run Defeat to LSG: Virat Kohli’s Historic Duck Shocks Fans in IPL Thriller

ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಆರ್​​ಸಿಬಿ ತಂಡ ಸೋತಿದೆ. ರೋಚಕ ಪಂದ್ಯದಲ್ಲಿ ಆರ್​​ಸಿಬಿ 9 ರನ್​​ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಬಿದ್ದಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ಅವರ ಅಪರೂಪದ ‘ಡಕ್ ಔಟ್’ ಅಭಿಮಾನಿಗಳಿಗೆ ಆಘಾತ ನೀಡಿದರೆ, ಮತ್ತೊಂದೆಡೆ ರಿಷಬ್ ಪಂತ್ ನೇತೃತ್ವದ ತಂಡ ಸತತ ಆರು ಸೋಲುಗಳ ನಂತರ ಗೆಲುವಿನ ಹಳಿಗೆ ಮರಳಿದೆ.

209 ರನ್​​ಗಳ (19 ಓವರ್) ಬೃಹತ್ತ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಕೊಹ್ಲಿ ಹಾಗೂ ಬೆತೆಲ್ ಔಟ್ ಆದರು. ಪಂದ್ಯದ ಗೆಲುವಿನಲ್ಲಿ 24 ವರ್ಷದ ಯುವ ವೇಗಿ ಯಾದವ್ ಪ್ರಮುಖ ಪಾತ್ರ ವಹಿಸಿದರು. ಕೇವಲ 33 ರನ್ ನೀಡಿ 3 ವಿಕೆಟ್ ಕಬಳಿಸಿದ ಇವರು, ಪಂದ್ಯದ ದಿಕ್ಕನ್ನೇ ಬದಲಿಸಿದರು. ಕೊಹ್ಲಿ ಔಟ್ ಆದ ಬಳಿಕ ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟಿದಾರ್ ನಡುವಿನ 95 ರನ್‌ಗಳ ಜೊತೆಯಾಟವನ್ನು ಮುರಿಯುವ ಮೂಲಕ ಪಂತ್ ಪಡೆಗೆ ಗೆಲುವಿನ ಹಾದಿಯನ್ನು ಸುಗಮ ಮಾಡಿದರು. ಅದೇ ಓವರ್‌ನಲ್ಲಿ ಜಿತೇಶ್ ಶರ್ಮಾ ಅವರ ವಿಕೆಟ್ ಕೂಡ ಪಡೆದ ಯಾದವ್, ಅಂತಿಮವಾಗಿ 9 ರನ್‌ಗಳ ರೋಚಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಚ್ಚರಿ ಮೂಡಿಸಿದರು. 18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ, 269 ಇನಿಂಗ್ಸ್‌ಗಳನ್ನು ಆಡಿರುವ ಕೊಹ್ಲಿಕೇವಲ 11ನೇ ಬಾರಿಗೆ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ವಿಶೇಷವೆಂದರೆ, ರನ್ ಚೇಸಿಂಗ್ ವೇಳೆ ಅವರು ಔಟಾಗುತ್ತಿರುವುದು ಇದು 6ನೇ ಬಾರಿ.

ಇದನ್ನೂ ಓದಿ:  ಲಕ್ನೋ ವಿರುದ್ಧ ಆರ್​​ಸಿಬಿಗೆ 9 ರನ್ ಸೋಲು​

ವಿರಾಟ್ ಕೊಹ್ಲಿ ರನ್ ಚೇಸಿಂಗ್ ವೇಳೆ ಶೂನ್ಯಕ್ಕೆ ಔಟಾಗಿ ಬರೋಬ್ಬರಿ 3,301 ದಿನಗಳು ಕಳೆದಿವೆ. ಅಂದರೆ ಸುಮಾರು 8 ವರ್ಷಗಳು. ಕೊನೆಯ ಬಾರಿಗೆ 2017ರ ಏಪ್ರಿಲ್ 23ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅವರು ಮೊದಲ ಎಸೆತದಲ್ಲೇ ಔಟ್ ಆಗಿದ್ದರು. ಅಂದು ಆರ್‌ಸಿಬಿ ತಂಡವು ಐಪಿಎಲ್ ಇತಿಹಾಸದ ಕನಿಷ್ಠ ಮೊತ್ತವಾದ 49 ರನ್‌ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಡಕ್ ಬಿದ್ದಿದ್ದು ಇದೇ ಮೊದಲು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:39 am, Fri, 8 May 26

Source link

LSG vs RCB: ಆರ್​ಸಿಬಿ ಸೋಲಿಗೆ ಕಾರಣವಾಗಿದ್ದು ಕೊನೆಯಲ್ಲಿ ರಿಷಭ್ ಪಂತ್ ತೆಗೆದುಕೊಂಡ ಆ ಒಂದು ನಿರ್ಧಾರ – Kannada News | LSG vs RCB IPL 2026 Rishabh Pant’s one decision at the end led to RCB’s defeat

ಬೆಂಗಳೂರು (ಮೇ. 08): ಐಪಿಎಲ್ 2026 ರಲ್ಲಿ ಗುರುವಾರ ಏಕಾನಾ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗೆಲುವು ಸಾಧಿಸಿದೆ. ಈ ಪಂದ್ಯ ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲು 20 ರನ್‌ಗಳ ಅಗತ್ಯವಿದ್ದಾಗ, ಮೈದಾನದಲ್ಲಿ ಹೈವೋಲ್ಟೇಜ್ ನಾಟಕ ನಡೆಯಿತು. ಆ ಕ್ಷಣದಲ್ಲಿ, ರಿಷಭ್ ಪಂತ್ (Rishabh Pant) ತೆಗೆದುಕೊಂಡ ಆ ಒಂದು ನಿರ್ಧಾರ ಮತ್ತು ಅವರ ನಾಯಕತ್ವವು ಎಲ್​ಎಸ್​ಜಿ ತಂಡಕ್ಕೆ ಜಯವನ್ನು ಖಚಿತಪಡಿಸಿತು.

ಕೊನೆಯ ಓವರ್‌ನಲ್ಲಿ ರಿಷಭ್ ಪಂತ್ ದಿಟ್ಟ ಹೆಜ್ಜೆ

ಅನುಭವಿ ಶಹಬಾಜ್ ಅಹ್ಮದ್ ಮತ್ತು ಯುವ ದಿಗ್ವಿಜಯ್ ಸಿಂಗ್ ರಥಿ ಇಬ್ಬರೂ ಅಂತಿಮ ಓವರ್ ಎಸೆಯಲು ಸಿದ್ಧರಾಗಿದ್ದರು. ನಾಯಕ ರಿಷಭ್ ಪಂತ್ ಆರಂಭದಲ್ಲಿ ಶಹಬಾಜ್‌ಗೆ ಚೆಂಡನ್ನು ನೀಡಲು ಬಯಸಿದ್ದರು, ಆದರೆ ಮಿಚೆಲ್ ಮಾರ್ಷ್ ಅವರೊಂದಿಗೆ ಸಮಾಲೋಚಿಸಿದ ನಂತರ, ನಿರ್ಧಾರವನ್ನು ಬದಲಾಯಿಸಲಾಯಿತು ಮತ್ತು ಚೆಂಡನ್ನು ರಥಿಗೆ ನೀಡಲಾಯಿತು. ಈ ಸಮಯದಲ್ಲಿ, ಶಹಬಾಜ್ ತುಂಬಾ ಕೋಪಗೊಂಡಂತೆ ಕಂಡುಬಂದರು ಮತ್ತು ಪಂತ್‌ಗೆ ಚೆಂಡನ್ನು ನೀಡುವಂತೆ ಒತ್ತಾಯಿಸಿದರು. ಪರಿಸ್ಥಿತಿ ಎಷ್ಟು ಉದ್ವಿಗ್ನವಾಯಿತು ಎಂದರೆ ನಾಯಕ ಪಂತ್ ಮೈದಾನದಲ್ಲಿ ಶಹಬಾಜ್‌ ಮೇಲೆ ಕೋಪಗೊಂಡರು. ಕೊನೆಯಲ್ಲಿ, ಪಂತ್ ತಮ್ಮ ನಿರ್ಧಾರದಲ್ಲಿ ದೃಢವಾಗಿ ಉಳಿದು ಚೆಂಡನ್ನು ರಥಿಗೆ ನೀಡಿದರು.

ದಿಗ್ವಿಜಯ್ ರಥಿ ಅವರ ಕೊನೆಯ ಮ್ಯಾಜಿಕ್ ಓವರ್

ಪಂತ್ ಅವರ ಈ ದೊಡ್ಡ ನಿರ್ಧಾರ ಫಲ ನೀಡಿತು, ಮತ್ತು ರಥಿ ತನ್ನ ಸ್ಪಿನ್‌ನಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳನ್ನು ಸಿಲುಕಿಸಿ, ಅವರು ಗೆರೆ ದಾಟದಂತೆ ತಡೆದರು. ರೊಮಾರಿಯೊ ಶೆಫರ್ಡ್ ಮತ್ತು ಕೃನಾಲ್ ಪಾಂಡ್ಯ ಅವರಂತಹ ಆಟಗಾರರು ಓವರ್‌ನಲ್ಲಿ ಒಂದೇ ಒಂದು ಸಿಕ್ಸರ್ ಹೊಡೆಯದಂತೆ ದಿಗ್ವೇಶ್ ತಡೆದರು. ದಿಗ್ವೇಶ್ ಕೇವಲ 10 ರನ್‌ಗಳನ್ನು ಬಿಟ್ಟುಕೊಟ್ಟರು, ಅಂತಿಮವಾಗಿ ಆರ್‌ಸಿಬಿ 9 ರನ್‌ಗಳಿಂದ ಪಂದ್ಯವನ್ನು ಸೋತಿತು.

ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ

ಪಂತ್ ಮಾಸ್ಟರ್ ಸ್ಟ್ರೋಕ್ ಗೆಲುವಿಗೆ ಕಾರಣ

ಲಕ್ನೋ ತಂಡವು ಪಂದ್ಯವನ್ನು 9 ರನ್‌ಗಳಿಂದ ಗೆದ್ದಿತು. ಪಂತ್ ಶಹಬಾಜ್ ಅವರ ಒತ್ತಾಯಕ್ಕೆ ಮಣಿದಿದ್ದರೆ, ಫಲಿತಾಂಶ ವಿಭಿನ್ನವಾಗಿರುತ್ತಿತ್ತು, ಆದರೆ ಯುವ ದಿಗ್ವಿಜಯ್ ರಥಿಯನ್ನು ನಂಬಿದ್ದು ಪಂದ್ಯ ಗತಿಯನ್ನೇ ಬದಲಾಯಿಸಿತು. ರಥಿ ಒತ್ತಡವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಮಾತ್ರವಲ್ಲದೆ ರೊಮಾರಿಯೊ ಶೆಫರ್ಡ್‌ನಂತಹ ಅಪಾಯಕಾರಿ ಹಿಟ್ಟರ್​ ಅನ್ನು ತಮ್ಮ ನಿಖರವಾದ ಗೂಗ್ಲಿಗಳೊಂದಿಗೆ ದೂರವಿಟ್ಟರು. ಈ ಗೆಲುವಿನೊಂದಿಗೆ, ಲಕ್ನೋ ತನ್ನ ಪ್ಲೇಆಫ್ ಭರವಸೆಯನ್ನು ಇನ್ನೂ ಉಳಿಸಿಕೊಂಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ! – Kannada News | Tamil Nadu Govt Formation: Vijay’s TVK Eyes Magic Number as AIADMK Faces Split and Resort Politics Begins

ಚೆನ್ನೈ, ಮೇ 7: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಯ ಮ್ಯಾಜಿಕ್ ನಂಬರ್ ತಲುಪಲು ತೀವ್ರ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಬೇಕು. 118 ಶಾಸಕರ ಪಟ್ಟಿ ನೀಡುವಂತೆ ವಿಜಯ್​​ ರಾಜ್ಯಪಾಲರು ಸೂಚಿಸಿದ್ದಾರೆ. ಟಿವಿಕೆ ಬಳಿ ಪ್ರಸ್ತುತ 112 ಶಾಸಕರ ಬೆಂಬಲವಿದೆ (ಟಿವಿಕೆಯ 107 + ಕಾಂಗ್ರೆಸ್‌ನ 5 ಶಾಸಕರು). ಇನ್ನು ಕೇವಲ 6 ಶಾಸಕರ ಬೆಂಬಲ ಸಿಕ್ಕರೆ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತ.

ಏತನ್ಮಧ್ಯೆ ಎಐಎಡಿಎಂಕೆಯ (AIADMK) ಸಿ.ವಿ. ಷಣ್ಮುಗಂ ಬಣದ ಶಾಸಕರು ಟಿವಿಕೆಗೆ ಬೆಂಬಲ ನೀಡುವಂತೆ ಪಳನಿಸ್ವಾಮಿಗೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ ಬೆಂಬಲ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಈಗಾಗಲೇ ಪುದುಚೇರಿಯ ರೆಸಾರ್ಟ್‌ಗೆ ಎಐಎಡಿಎಂಕೆಯ 28 ಶಾಸಕರನ್ನು ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಪಳನಿಸ್ವಾಮಿ ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಅತ್ತ ಡಿಎಂಕೆ ಶಾಸಕರು ಮೇ 10ರವರೆಗೆ ಚೆನ್ನೈ ಬಿಟ್ಟು ಹೋಗದಂತೆ ನಿರ್ಗಮಿತ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಜಯ್ ಸರ್ಕಾರ ರಚನೆ ಮಾಡಲಿ, ನಾವು ಆರು ತಿಂಗಳವರೆಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಸ್ಟಾಲಿನ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bengaluru Air Quality gets better, Mangalore AQI is also Good

ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಮೇ 08: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಕೇವಲ 66ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಏರ್ ಕ್ವಾಲಿಟಿ ಇಂದು 86ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 66
  • ಮಂಗಳೂರು-86
  • ಮೈಸೂರು – 74
  • ಬೆಳಗಾವಿ – 68
  • ಕಲಬುರ್ಗಿ-64
  • ಶಿವಮೊಗ್ಗ –66
  • ಬಳ್ಳಾರಿ – 86
  • ಹುಬ್ಬಳ್ಳಿ- 87
  • ಉಡುಪಿ –64
  • ವಿಜಯಪುರ – 67

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಮುಖ್ಯಾಂಶಗಳು

  • ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ.
  • ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ.
  • ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯ ಮುನ್ಸೂಚನೆ.

ಎಲ್ಲೆಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8 ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಮುಂದುವರಿಯಲಿದೆ ಗರಿಷ್ಠ ತಾಪಮಾನ

ಮಳೆಯ ಮುನ್ಸೂಚನೆಯಿದ್ದರೂ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಂದುವರಿಯಲಿದೆ. ಮಳೆಯ ಸಮಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.

ಬೆಂಗಳೂರು ಹವಾಮಾನ ಮುನ್ಸೂಚನೆ

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಐಎಂಡಿಯ ಬೆಂಗಳೂರು ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 8, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಚಂದ್ರನು ಮಕರ ರಾಶಿಯಲ್ಲಿ ಮತ್ತು ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಮೇಷ ಮತ್ತು ಸಿಂಹ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ ಉದ್ಯೋಗದಲ್ಲಿ ಪ್ರಗತಿಯುಂಟಾಗಲಿದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಿಲೀಸ್ ಆಗ್ತಿದೆ ‘ದಿ ಬೆಂಗಾಲ್ ಫೈಲ್ಸ್’ – Kannada News | The Bengal Files Releasing in West Bengal: BJP Victory Paves Way for Vivek Agnihotri’s Film

ವಿವೇಕ್ ಅಗ್ನಿಹೋತ್ರಿ () ನಿರ್ದೇಶನದ’ದಿ ಬೆಂಗಾಲ್ ಫೈಲ್ಸ್’ ಸಿನಿಮಾ (The Bengal Files) 2025ರಲ್ಲಿ ಭಾರತದಲ್ಲಿ ರಿಲೀಸ್ ಆಯಿತು. ಆದರೆ, ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಈ ಚಿತ್ರವನ್ನು ಪಶ್ಚಿಮ ಬಂಗಾಳದಲ್ಲಿ ತೆರೆಗೆ ತರಲು ಸಾಧ್ಯ ಆಗಿರಲಿಲ್ಲ. ಕೊನೆಗೂ ಪಶ್ಚಿಮ ಬಂಗಾಳದ ಚಿತ್ರಮಂದಿರಗಳಲ್ಲಿ ಮೇ 15ರಂದು ತೆರೆಕಾಣಲಿದೆ. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅಧಿಕೃತವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ನಡೆದ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಬೆಂಗಾಲ್​ ಫೈಲ್ಸ್’ ನಿರ್ದೇಶನ ಮಾಡಿದ್ದರು. ಈ ಚಿತ್ರ 2025ರಲ್ಲೇ ದೇಶಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಪ್ರದರ್ಶನಕ್ಕೆ ತೀವ್ರ ಅಡೆತಡೆಗಳು ಎದುರಾಗಿದ್ದವು.

ಮಮತಾ ಬ್ಯಾನರ್ಜಿ ನೇತೃತ್ವದ ಅಂದಿನ ತೃಣಮೂಲ ಕಾಂಗ್ರೆಸ್ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ಪರೋಕ್ಷವಾಗಿ ತಡೆ ಒಡ್ಡಿತ್ತು. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಧ್ವನಿ ಎತ್ತಿದ್ದರು. ಚಿತ್ರಮಂದಿರಗಳ ಮಾಲೀಕರಿಗೆ ಬೆದರಿಕೆ ಹಾಕಲಾಗುತ್ತಿದೆ ಮತ್ತು ಚಿತ್ರದ ವಿರುದ್ಧ ಉದ್ದೇಶಪೂರ್ವಕವಾಗಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

‘ದಿ ಬೆಂಗಾಲ್ ಫೈಲ್ಸ್’ ಚಿತ್ರವು ಬಂಗಾಳದ ಇತಿಹಾಸದ ಕರಾಳ ಘಟನೆಗಳಾದ ‘ಡೈರೆಕ್ಟ್ ಆಕ್ಷನ್ ಡೇ’ (ನೇರ ಕ್ರಮ ದಿನ) ಮತ್ತು ನೋಖಾಲಿ ದಂಗೆಗಳ ಸುತ್ತ ಹೆಣೆಯಲಾದ ಕಥೆಯನ್ನು ಹೊಂದಿದೆ. ಈ ಚಿತ್ರವು ಪ್ರಚೋದನಾತ್ಮಕವಾಗಿದೆ ಎಂಬ ಟೀಕೆಗಳು ಒಂದು ಕಡೆಯಾದರೆ, ಇದು ಮರೆತುಹೋದ ಇತಿಹಾಸವನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಎಂದು ಮತ್ತೊಂದು ವರ್ಗ ಪ್ರತಿಪಾದಿಸುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಮತ್ತು ಪ್ರಧಾನಿ ಮೋದಿಯವರ ತೀವ್ರ ಪ್ರಚಾರದ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ರಾಜಕೀಯ ಬದಲಾವಣೆಯು ಚಿತ್ರದ ಬಿಡುಗಡೆಗೆ ಹಾದಿ ಸುಗಮಗೊಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅಗ್ನಿಹೋತ್ರಿ, ‘ಸತ್ಯವನ್ನು ಹೆಚ್ಚು ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಬೆಂಗಾಲಿಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆ: ಸಿನಿಮಾದ ಕತೆ ಏನು?

ಈಗಾಗಲೇ ಈ ಚಿತ್ರವು ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಇದೀಗ ಬಂಗಾಳದ ನೆಲದಲ್ಲೇ ಬಿಡುಗಡೆಯಾಗುತ್ತಿರುವುದು ಸಿನಿಮಾ ಪ್ರೇಮಿಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ, ಸಾವಿರಾರು ಕಾರ್ಮಿಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ – Kannada News | Peenya Industries in Trouble: Commercial LPG Supply Disruption and Price Hike Threaten Thousands of Jobs in Bengaluru

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿImage Credit source: tv9

ಬೆಂಗಳೂರು, ಮೇ 8: ಜಾಗತಿಕ ಮಟ್ಟದ ಯುದ್ಧದ ಬಿಕ್ಕಟ್ಟು ಕೇವಲ ಕಚ್ಚಾ ತೈಲ ಬೆಲೆಯ ಮೇಲೆ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರಿನ (Bengaluru) ಕೈಗಾರಿಕೆಗಳ ಮೇಲೂ ಭೀಕರ ಪರಿಣಾಮ ಬೀರಿದೆ. ದಕ್ಷಿಣ ಏಷ್ಯಾದಲ್ಲೇ ಅತಿ ದೊಡ್ಡ ಕೈಗಾರಿಕಾ ವಲಯವೆಂದು ಗುರುತಿಸಲ್ಪಟ್ಟಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ (Peenya Industries) ಈಗ ವಾಣಿಜ್ಯ ಇಂಧನ ಪೂರೈಕೆಯ ವ್ಯತ್ಯಯ ಹಾಗೂ ಬೆಲೆ ಏರಿಕೆಯ ‘ಟ್ರಬಲ್’ ಶುರುವಾಗಿದೆ. ಇದರಿಂದಾಗಿ ನೂರಾರು ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ.

ಮುಖ್ಯಾಂಶಗಳು

  • ಸರ್ಕಾರದಿಂದ ಪೂರೈಕೆಯಾಗುತ್ತಿದ್ದ ವಾಣಿಜ್ಯ ಗ್ಯಾಸ್ ಸಪ್ಲೈ ಸಂಪೂರ್ಣ ಸ್ಥಗಿತ.
  • ಖಾಸಗಿಯವರಿಂದ ದುಪ್ಪಟ್ಟು ಹಣ ನೀಡಿ ಗ್ಯಾಸ್ ಖರೀದಿಸಬೇಕಾದ ಅನಿವಾರ್ಯತೆ.
  • ಸುಮಾರು 400ಕ್ಕೂ ಹೆಚ್ಚು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚುವ ಭೀತಿಯಲ್ಲಿವೆ.

ಕೈಗಾರಿಕೆಗಳಿಗೆ ತಪ್ಪದ ಪರದಾಟ

ಸರ್ಕಾರದಿಂದ ಪೂರೈಕೆಯಾಗುತ್ತಿದ್ದ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿರುವುದು ಪೀಣ್ಯದ ಕೈಗಾರಿಕಾ ಕಂಪನಿಗಳ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಪ್ರಸ್ತುತ ಕೈಗಾರಿಕೆಗಳು ಕೇವಲ ಖಾಸಗಿ ಏಜೆನ್ಸಿಗಳ ಮೇಲೆ ಅವಲಂಬಿತವಾಗಿವೆ. ಆದರೆ ಖಾಸಗಿಯಲ್ಲಿ ಸಿಲಿಂಡರ್ ಬೆಲೆ ಎರಡು ಪಟ್ಟು ಹೆಚ್ಚಾಗಿರುವುದರಿಂದ ಉತ್ಪಾದನಾ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಸಣ್ಣಪುಟ್ಟ ಕಟ್ಟಿಂಗ್ ಯೂನಿಟ್ ಸೇರಿದಂತೆ ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಈ ಗ್ಯಾಸ್ ಮೇಲೆ ಅವಲಂಬಿತವಾಗಿವೆ. ಬೆಲೆ ಏರಿಕೆಯಿಂದಾಗಿ ಉದ್ಯಮ ನಡೆಸಲು ಸಾಧ್ಯವಾಗದೆ ಮಾಲೀಕರು ಕಂಗಾಲಾಗಿದ್ದಾರೆ.

ಸರ್ಕಾರಕ್ಕೆ ಪತ್ರ ಬರೆದ ಅಸೋಸಿಯೇಷನ್

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿದ್ದು, ಸಾವಿರಾರು ಕಂಪನಿಗಳಿಗೆ ಎಲ್‌ಪಿಜಿ (LPG) ಅತ್ಯಗತ್ಯವಾಗಿದೆ. ಈ ಗ್ಯಾಸ್ ಬಿಕ್ಕಟ್ಟಿನ ಬಗ್ಗೆ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ‘ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯನ್ನು ಪುನರಾರಂಭಿಸಿ ಮತ್ತು ಕೈಗಾರಿಕೆಗಳಿಗೆ ಪ್ರತ್ಯೇಕ ಹಾಗೂ ಕಡಿಮೆ ದರ ನಿಗದಿಪಡಿಸಿ’ ಎಂದು ಅಸೋಸಿಯೇಷನ್ ಅಧ್ಯಕ್ಷರಾದ ದಾನಪ್ಪ ಮನವಿ ಮಾಡಿದ್ದಾರೆ.

ಸಾವಿರಾರು ಸಿಬ್ಬಂದಿಗೆ ಆತಂಕ

ಪೀಣ್ಯದ ವಿವಿಧ ಬಿಡಿಭಾಗ ತಯಾರಿಕಾ ಘಟಕಗಳು ಈ ಬೆಲೆ ಏರಿಕೆಯ ಬಿಸಿಯನ್ನು ಅನುಭವಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಪ್ಲೈ ಇಲ್ಲದೆ ಉತ್ಪಾದನೆ ಕುಂಠಿತಗೊಂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಆಟೋ ಪ್ರಯಾಣಿಕರಿಗೆ ಬ್ಯಾಡ್​​ ನ್ಯೂಸ್​​: ಮೀಟರ್​ ದರ ಹೆಚ್ಚಳಕ್ಕೆ ಚಾಲಕ ಸಂಘಟನೆಗಳ ಮನವಿ

ವಾಣಿಜ್ಯ ಇಂಧನದ ಈ ವ್ಯತ್ಯಯ ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೈಗಾರಿಕಾ ಕ್ಷೇತ್ರಕ್ಕೂ ದೊಡ್ಡ ಹೊಡೆತ ನೀಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ? – Kannada News | The Miraculous Benefits of Lighting a Coconut Oil Lamp

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರ ಹಿಂದೆ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಧರ್ಮದಲ್ಲಿ ದೀಪಾರಾಧನೆಗೆ ವಿಶೇಷ ಮಹತ್ವವಿದೆ, ಅದರಲ್ಲೂ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಕೊಬ್ಬರಿ ಎಣ್ಣೆ ದೀಪವನ್ನು ಮಹಾಲಕ್ಷ್ಮಿಯ ಮುಂದೆ ಹಚ್ಚಿ, ಸಕ್ಕರೆ ಮತ್ತು ತೆಂಗಿನಕಾಯಿ ನೈವೇದ್ಯ ಮಾಡುವುದರಿಂದ ಮನೆಯಲ್ಲಿ ಶುಭ ಕಾರ್ಯಗಳು ಶೀಘ್ರವಾಗಿ ನೆರವೇರುತ್ತವೆ ಮತ್ತು ಲಕ್ಷ್ಮಿಯ ಅನುಗ್ರಹ ಲಭಿಸುತ್ತದೆ. ಕುಲದೇವತೆಯ ಮುಂದೆ ಅಖಂಡವಾಗಿ ಮೂರು ದಿನ ಈ ದೀಪ ಹಚ್ಚಿದರೆ ಕೌಟುಂಬಿಕ ಕಲಹಗಳು ದೂರವಾಗಿ ಸುಖ-ಸಮೃದ್ಧಿ ನೆಲೆಸುತ್ತದೆ.

ಅರಳಿ ಮರದ ಬಳಿ ಹಚ್ಚುವುದರಿಂದ ದಾಂಪತ್ಯದಲ್ಲಿ ಅನ್ಯೋನ್ಯತೆ ಹೆಚ್ಚುತ್ತದೆ ಮತ್ತು ಈಶಾನ್ಯ ಮೂಲೆಯಲ್ಲಿ 48 ಗಂಟೆಗಳ ಕಾಲ ಸತತವಾಗಿ ಹಚ್ಚಿದರೆ ಸಾಲಬಾಧೆಯಿಂದ ಮುಕ್ತಿ ಪಡೆಯಬಹುದು. ಶನಿವಾರ ವೆಂಕಟೇಶ್ವರ ಸ್ವಾಮಿ ಹಾಗೂ ಮಂಗಳವಾರ ಸುಬ್ರಹ್ಮಣ್ಯ ಸ್ವಾಮಿಗೆ ಈ ದೀಪಾರಾಧನೆ ಮಾಡುವುದರಿಂದ ಕಾನೂನು ಸಮಸ್ಯೆಗಳು ಮತ್ತು ಸಂತಾನ ದೋಷಗಳು ನಿವಾರಣೆಯಾಗುತ್ತವೆ. ವಾರಕ್ಕೊಮ್ಮೆ ಈ ದೀಪ ಹಚ್ಚುವುದು ನಿಮ್ಮ ಜೀವನದ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ಸಹಕಾರಿ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

LSG vs RCB: ಸತತ ಸೋಲುಗಳಿಂದ ಕಂಗೆಟ್ಟಿದ್ದ ಲಕ್ನೋ ವಿರುದ್ಧವೂ ಸೋತ ಆರ್​ಸಿಬಿ – Kannada News | IPL 2026: LSG Beats RCB by 10 Runs in High Scoring Thriller; Bengaluru’s 3rd Loss

ಐಪಿಎಲ್ 2026 ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 9 ರನ್​ಗಳಿಂದ ಸೋಲಿಸಿದ ಲಕ್ನೋ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಆರ್​ಸಿಬಿ ಸತತ 2ನೇ ಸೋಲು ಅನುಭವಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 213 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 203 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಲಕ್ನೋ ತಂಡಕ್ಕೆ 2 ಅಂಕ ಸಿಕ್ಕಿತ್ತಾದರೂ ಪಾಯಿಂಟ್ ಪಟ್ಟಿಯಲ್ಲಿ ಸ್ಥಾನ ಬದಲಾಗಿಲ್ಲ. ಇತ್ತ ಆರ್​ಸಿಬಿ ಈ ಪಂದ್ಯದಲ್ಲಿ ಸೋತರೂ ಅದು ಕೂಡ ಮೂರನೇ ಸ್ಥಾನದಲ್ಲೇ ಉಳಿದಿದೆ.

Published On – 12:37 am, Fri, 8 May 26

Source link

Exit mobile version