Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ.

ಈ ಅವಧಿಯಲ್ಲಿ ಶತ್ರುಗಳು ಮಿತ್ರರಾಗುತ್ತಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ ಮತ್ತು ಮಾನಸಿಕ ಸ್ಪಷ್ಟತೆ ಇರುತ್ತದೆ. ಮಕ್ಕಳಿಂದ ಶುಭ ಫಲ, ರಾಜಕೀಯ ಸ್ಥಾನಮಾನ, ಆದಾಯದಲ್ಲಿ ಹೆಚ್ಚಳ ಮತ್ತು ಋಣಮುಕ್ತಿ ಸಾಧ್ಯ. ವ್ಯಾಪಾರಸ್ಥರಿಗೆ ಉತ್ತಮ ಸಮಯವಿದು. ಕೆಲವರಿಗೆ ಸ್ಥಾನ ಪಲ್ಲಟವಾಗುವ ಸಾಧ್ಯತೆ ಇದೆ ಮತ್ತು ದಾಯಾದಿ ಕಲಹಗಳು ಇತ್ಯರ್ಥವಾಗುತ್ತವೆ. ಕಾನೂನು ವಿಷಯಗಳಲ್ಲಿ ಜಯ ಲಭಿಸುತ್ತದೆ ಮತ್ತು ಒತ್ತಡಗಳು ಕಡಿಮೆಯಾಗುತ್ತವೆ. ಆದಾಗ್ಯೂ, ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಚಿಂತೆ ಕಾಡಬಹುದು. ಪ್ರೀತಿಪಾತ್ರರ ಅಗಲಿಕೆ ಅಥವಾ ಅವರ ಅನಾರೋಗ್ಯದ ಚಿಂತೆ ಎದುರಾಗಬಹುದು. ಲೆಕ್ಕಾಚಾರಗಳು ಮತ್ತು ದೂರದ ಆಸ್ತಿ ವಿಷಯಗಳಲ್ಲಿ ಎಚ್ಚರ ಅಗತ್ಯ. ಈ ಸಮಯದಲ್ಲಿ ತಾಳ್ಮೆ ಮತ್ತು ಸಹನೆ ಕಾಪಾಡಿಕೊಳ್ಳುವುದು ಮುಖ್ಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆಗಳು ಸ್ಪಷ್ಟವಾಗಿವೆ.

ಹಿಂದೂ ಸಂಗಮ ಕಾರ್ಯಕ್ರಮದ ಮೂಲಕ ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!

ಮಾರ್ಚ್ 8ರಂದು ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ಸಂಘಟನಾ ಚಟುವಟಿಕೆಗೆ ಮರಳುತ್ತಿರುವುದು ಗಮನಾರ್ಹವಾಗಿದೆ.

ಹಿಂದೂ ಸಂಗಮ ಆಯೋಜಕರು ಮತ್ತು ಸಂಘ ಪರಿವಾರದ ನಾಯಕರು ಹೆಗಡೆಯವರನ್ನು ಮತ್ತೆ ಅಖಾಡಕ್ಕೆ ಕರೆತರುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರ ಮನವೊಲಿಕೆಯ ನಂತರವೇ ಹೆಗಡೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭಟ್ಕಳದಲ್ಲಿ ಭರ್ಜರಿ ಸಿದ್ಧತೆ

ಅನಂತ್ ಕುಮಾರ್ ಹೆಗಡೆ ಆಗಮನದ ಹಿನ್ನಲೆಯಲ್ಲಿ ಭಟ್ಕಳದಲ್ಲಿ ಭರ್ಜರಿ ಸ್ವಾಗತದ ಸಿದ್ಧತೆಗಳು ಜೋರಾಗಿವೆ. ನಗರ ಪ್ರವೇಶಕ್ಕೂ ಮುನ್ನ ಭವ್ಯ ರೋಡ್ ಶೋ ನಡೆಸಲು ಯೋಜನೆ ರೂಪಿಸಲಾಗಿದೆ. ಭಟ್ಕಳ ಹೊರ ಭಾಗದಿಂದ ಕಾರ್ಯಕ್ರಮದ ವೇದಿಕೆಯವರೆಗೆ ನೂರಕ್ಕೂ ಹೆಚ್ಚು ಕಾರುಗಳ ರ್ಯಾಲಿ ಮೂಲಕ ಹೆಗಡೆಯವರಿಗೆ ಸ್ವಾಗತ ಕೋರುವ ಯೋಜನೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ

ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇದೆ ಎಂಬ ಬಗ್ಗೆ ಕೆಲವು ದಿನಗಳಿಂದೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲೂ ವ್ಯಾಪಕ ಚರ್ಚೆಯಾಗಿತ್ತು. ಊಹಾಪೋಹಗಳೂ ಹರಿದಾಡಿದ್ದವು. ಆದರೆ, ಅಧಿಕೃತ ಮಾಹಿತಿ ಈವರೆಗೆ ಬಂದಿರಲಿಲ್ಲ. ಆದರೆ ಇದೀಗ, ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಹೆಗಡೆ ಭಾಗವಹಿಸಲು ಸಿದ್ಧರಾಗಿರುವುದು ಅವರ ರಿ ಎಂಟ್ರಿ ವದಂತಿಗಳಿಗೆ ಪುಷ್ಟಿ ನೀಡಿದೆ.

ಇದನ್ನೂ ಓದಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಬಿಜೆಪಿ ಹೋರಾಟದ ಬ್ಯಾನರ್‌ಗಳಲ್ಲಿ ರಾಜ್ಯಾಧ್ಯಕ್ಷರ ಫೋಟೊಗೆ ಕೋಕ್, ಶುರುವಾಯ್ತು ರಾಜಕೀಯ ಚರ್ಚೆ

ವರ್ಷಗಳ ವಿರಾಮದ ಬಳಿಕ ಹೆಗಡೆ ರಾಜಕೀಯ ಮತ್ತು ಸಂಘಟನಾ ವೇದಿಕೆಗೆ ಮರಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅವರ ಎರಡನೇ ಇನಿಂಗ್ಸ್ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:14 am, Fri, 27 February 26

Source link

ವಿಜಯ್ ದೇವರಕೊಂಡ ಧರಿಸಿದ್ದ ಚಿನ್ನದ ಆಭರಣಗಳು ಯಾವುವು? ವಿಶೇಷತೆಯೇನು? – Kannada News | Vijay Deverakonda gold ornaments getting viral on social media

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ನಿನ್ನೆಯಷ್ಟೆ ಮದುವೆಯಾಗಿದ್ದು ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಹರಿದಾಡುತ್ತಿವೆ. ಇಬ್ಬರ ಮದುವೆ ಉಡುಗೆ ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್ಮಿಕಾ ಮತ್ತು ವಿಜಯ್ ಇಬ್ಬರೂ ಸಹ ಸಾಕಷ್ಟು ಆಭರಣಗಳನ್ನು ಧರಿಸಿದ್ದರು, ವಿಶೇಷವೆಂದರೆ ಇಬ್ಬರೂ ಸಹ ಪುರಾತನ ಶೈಲಿಯ ಆಭರಗಳನ್ನಷ್ಟೆ ಧರಿಸಿದ್ದರು. ಅದರಲ್ಲೂ ವಿಜಯ್ ದೇವರಕೊಂಡ ಅಂತೂ ಯಾವುದೋ ದಕ್ಷಿಣದ ರಾಜನ ರೀತಿಯ ಪೋಷಾಕು ಧರಿಸಿದ್ದರು, ರಶ್ಮಿಕಾಗಿಂತಲೂ ತುಸು ಹೆಚ್ಚೇ ಆಭರಣಗಳನ್ನು ವಿಜಯ್ ದೇವರಕೊಂಡ ಧರಿಸಿದ್ದರು.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಜಯ್ ದೇವರಕೊಂಡ ಅವರ ಆಭರಣಗಳದ್ದೇ ಚರ್ಚೆ. ಆಧುನಿಕ ರೀತಿಯದ್ದಲ್ಲದೆ ಬಹಳ ಭಿನ್ನ ಜೊತೆಗೆ ಪುರಾತನ ಲುಕ್​​ನ ವಿವಿಧ ಆಭರಣಗಳನ್ನು ವಿಜಯ್ ದೇವರಕೊಂಡ ಧರಿಸಿದ್ದರು. ಕೊರಳಿಗೆ ದೊಡ್ಡ ಕಂಠಿಹಾರವನ್ನು ವಿಜಯ್ ಧರಿಸಿದ್ದರು. ಆ ಚಿನ್ನದ ಹಾರ ಪುಲಕೇಶಿ ಕಾಲದ ರಾಜರ ಸರಗಳನ್ನು ನೆನಪಿಸುತ್ತಿದ್ದು, ಅದರ ಜೊತೆಗೆ ತುಸು ಕಿರಿದಾದ ಮತ್ತೊಂದು ಚಿನ್ನದ ಹಾರ ಧರಿಸಿದ್ದರು, ಅದನ್ನು ಗುಡಿ ಹಾರ ಅಥವಾ ದೇವಾಲಯದ ಹಾರ ಎನ್ನುತ್ತಾರಂತೆ.

ಇನ್ನು ವಿಜಯ್ ದೇವರಕೊಂಡ ಎರಡೂ ಮಣಿಕಟ್ಟಿಗೆ ಧರಿಸಿದ್ದ ಆಭರಣವಂತೂ ಅದ್ಭುತವಾಗಿತ್ತು. ಹಳೆಯ, ಧಾರಾವಾಹಿ, ಸಿನಿಮಾಗಳಲ್ಲಿ ದೇವರುಗಳು ಧರಿಸುತ್ತಿದ್ದ ಆಭರಣದಂಥಹದ್ದನ್ನೇ ವಿಜಯ್ ದೇವರಕೊಂಡ ಧರಿಸಿದ್ದರು. ಮಣಿಕಟ್ಟಿಗೆ ಧರಿಸಿದ್ದ ಆಭರಣ ದೊಡ್ಡದಾಗಿಯೂ, ಕಸೂರಿ ಕೆಲಸದಿಂದಲೂ ತುಂಬಿದ್ದು ಸಖತ್ ಗಮನ ಸೆಳೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಆಭರಣವನ್ನು ‘ಥ್ಯಾನೋಸ್ ಜ್ಯುವೆಲರಿ’ ಎಂದು ಸಹ ಕರೆದಿದ್ದಾರೆ.

ಇದನ್ನೂ ಓದಿ:ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮಿಕಾ ಮಂದಣ್ಣ ಆನಂದ ಭಾಷ್ಪ

ಇನ್ನು ತೋಳಿಗೆ ತೋಳು ಬಂಧಿ ಅಥವಾ ವಂಕಿಯನ್ನು ಸಹ ಬಲಗೈ ತೋಳಿಗೆ ಧರಿಸಿದ್ದರು. ಎರಡೂ ಕಿವಿಗಳಿಗೆ ಸುಂದರವಾದ ದುಂಡನೆಯ ಓಲೆಗಳನ್ನು ವಿಜಯ್ ಧರಿಸಿದ್ದರು. ಹಣೆಗೆ ಚಿನ್ನದ ಬಾಸಿಂಗ ಧರಿಸಿದ್ದರು. ಬೆರಳುಗಳಿಗೆ ಒಂದು ನಿಶ್ಚಿತಾರ್ಥದ ಉಂಗುರ ಮತ್ತೊಂದು ಮದುವೆಯ ಉಂಗುರ ಧರಿಸಿದ್ದರು. ಎರಡೂ ಕಾಲಿಗೆ ಚಿನ್ನದ ಕಡಗ, ಸೊಂಟಕ್ಕೆ ಒಡ್ಯಾಣವನ್ನು ಸಹ ವಿಜಯ್ ದೇವರಕೊಂಡ ಧರಿಸಿದ್ದರು. ಈ ಎಲ್ಲ ಆಭರಣಗಳು ಪುರಾತನ ಡಿಸೈನ್​​ಗಳನ್ನು ಒಳಗೊಂಡಿದ್ದು ವಿಶೇಷ. ಎಲ್ಲ ಆಭರಣಗಳು ವಿಜಯ್​​ಗೆ ಒಂದು ರೀತಿ ರಾಜನ ಲುಕ್ ಅನ್ನು ನೀಡಿತ್ತು.

ಇದೀಗ ಸಾಮಾಜಿಕ ಜಾಲತಾಣದ ತುಂಬೆಲ್ಲ ವಿಜಯ್ ಅವರ ಚಿನ್ನದ ಆಭರಣದ್ದೇ ಚರ್ಚೆ ನಡೆಯುತ್ತಿದೆ. ವಿಜಯ್ ಕನಿಷ್ಟ ಒಂದು ಕೆಜಿ ಚಿನ್ನವನ್ನಾದರೂ ತಮ್ಮ ಮೈಮೇಲೆ ಧರಿಸಿಕೊಂಡಿದ್ದರು. ವಿಜಯ್ ಧರಿಸಿದ್ದ ಆಭರಣಗಳನ್ನು ನೋಡಿ, ಪುರುಷರಿಗೆ ಇಷ್ಟು ಆಭರಣ ಇದೆಯೆಂಬುದೇ ನಮಗೆ ತಿಳಿದಿರಲಿಲ್ಲ ಎಂದು ಹಲವು ಕಮೆಂಟ್​​ಗಳನ್ನು ಮಾಡಿದ್ದಾರೆ. ಇಷ್ಟು ಚಿನ್ನ ಇದ್ದರೆ ಸಾಕು ಜೀವನ ಸುಖವಾಗಿ ನಡೆಯಲು ಎಂದು ಇನ್ನು ಕೆಲವರು ಹೇಳಿದ್ದಾರೆ. ಒಟ್ಟಾರೆ ವಿಜಯ್ ಧರಿಸಿದ್ದ ಚಿನ್ನವಂತೂ ಹಲವರ ಕಣ್ಣು ಕುಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ದೆಹಲಿ ಮದ್ಯ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಸಾವಿರಾರು ಕೋಟಿ ಮೌಲ್ಯದ ಮದ್ಯ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಗಳು, ಜಾರಿ ನಿರ್ದೇಶನಾಲಯ (ED) ಮತ್ತು CBI ಎರಡೂ ತನಿಖೆ ನಡೆಸಿವೆ.ಸಿಬಿಐ ಸಲ್ಲಿಸಿದ ಎಫ್‌ಐಆರ್ ಆಧರಿಸಿ, ಇಡಿ ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಿತು.

ನಂತರದ ತನಿಖೆಯ ಸಮಯದಲ್ಲಿ, ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು ಮತ್ತು ಹಲವಾರು ತಿಂಗಳು ಜೈಲಿನಲ್ಲಿ ಕಳೆದರು. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಈಗ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ಆರೋಪಗಳಿಂದ ಖುಲಾಸೆಗೊಳಿಸಿದೆ.

ಆದೇಶ ಹೊರಡಿಸಿದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್, ಸಿಬಿಐ ಯಾವುದೇ ನಿರ್ದಿಷ್ಟ ಸಾಕ್ಷ್ಯಾಧಾರಗಳಿಲ್ಲದೆ ಪ್ರಕರಣದಲ್ಲಿ ಇಬ್ಬರು ನಾಯಕರನ್ನು ಸಿಲುಕಿಸಿದೆ ಎಂದು ಹೇಳಿದರು. ಪ್ರಕರಣದಲ್ಲಿ ಎಲ್ಲಾ 23 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿತು ಮತ್ತು ಬೇರೆಯವರ ವಿರುದ್ಧ ಆರೋಪಗಳನ್ನು ಹೊರಿಸಲು ನಿರಾಕರಿಸಿತು. ತನಿಖೆಯಲ್ಲಿನ ನ್ಯೂನತೆಗಳಿಗಾಗಿ ನ್ಯಾಯಾಲಯವು ಸಿಬಿಐಗೆ ಛೀಮಾರಿ ಹಾಕಿತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:18 am, Fri, 27 February 26

Source link

Video: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ – Kannada News | The beautiful friendship between a dog and a gorilla

ಈ ಜಗತ್ತಿನಲ್ಲಿ ಎಲ್ಲ ಬಂಧ ಮೀರಿದ ಸಂಬಂಧವೇ ಈ ಸ್ನೇಹ (friendship). ಪ್ರಪಂಚದಲ್ಲಿ ಸ್ನೇಹಿತರಿಲ್ಲದ ವ್ಯಕ್ತಿಯಿರಲು ಸಾಧ್ಯವೇ ಇಲ್ಲ. ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳ ನಡುವಿನ ಶುದ್ಧ ಸ್ನೇಹಕ್ಕೆ ಈ ವಿಡಿಯೋನೇ ಸಾಕ್ಷಿ. ತನ್ನ ಬೆಸ್ಟ್ ಫ್ರೆಂಡ್ ಶ್ವಾನವನ್ನು (dog) ಕಂಡೊಡನೆ ಗೊರಿಲ್ಲಾ ಕುಣಿದಾಡಿದ್ದು, ಓಡಿ ಹೋಗಿ ತಬ್ಬಿಕೊಂಡು ಮುದ್ದಾಡಿರುವ ವಿಡಿಯೋ ವೈರಲ್‌ ಆಗಿದೆ.

Bobby Lloyd ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಗೊರಿಲ್ಲಾ ಹಾಗೂ ಶ್ವಾನವು ಮುಖಾಮುಖಿಯಾಗಿರುವ ಆಗಿರುವುದನ್ನು ಕಾಣಬಹುದು.  ಗೊರಿಲ್ಲಾವು ಶ್ವಾನವನ್ನು ಕಂಡೊಡನೆ ಕುಣಿದಾಡಿದೆ. ಅಷ್ಟೇ ಅಲ್ಲದೇ,  ಶ್ವಾನವನ್ನು ಬಾಚಿ ತಬ್ಬಿಕೊಂಡು ಮುದ್ದಾಡಿದ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸ್ನೇಹಿತರಿಬ್ಬರ ಪುನರ್ಮಿಲನ ಎಂದರೆ, ಮತ್ತೊಬ್ಬರು, ಮೂಕ ಪ್ರಾಣಿಗಳ ಶುದ್ಧ ಪ್ರೀತಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ‘ಪಂಚ್’ ಕೋತಿಯನ್ನು ಬಳಸಿಕೊಂಡ ಮುಂಬೈ ಪೊಲೀಸರು – Kannada News | Mumbai Police Turns Viral Monkey Meme Into Helpline Awareness Drive

ಮುಂಬೈ, ಫೆಬ್ರವರಿ 27: ಮುಂಬೈ ಪೊಲೀಸರು ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಜಪಾನ್ ಕೋತಿ ‘ಪಂಚ್’ (Punch)ಅನ್ನು ಬಳಸಿಕೊಂಡಿದ್ದಾರೆ. ಪಂಚ್ ಕೋತಿ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ, ಇದು ಈಗ ವಿಶ್ವದಲ್ಲೇ ಫೇಮಸ್. ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ಈ ಕೋತಿ ಅಲ್ಲಿನ ಉಳಿದ ಕೋತಿಗಳಿಂದ ಚಿತ್ರಹಿಂಸೆ ಅನುಭವಿಸಿತ್ತು. ಅದು ಸದಾ ಗೊಂಬೆಯೊಂದರ ಜತೆಯೇ ಇರುತ್ತಿತ್ತು.

ಅದು ಹುಟ್ಟುವಾಗ 600 ಗ್ರಾಂ ಇದ್ದ ಕಾರಣ ಅದರ ತಾಯಿ ಅದನ್ನು ಸಾಕಲಾಗದೆ ಬಿಟ್ಟು ಹೋಗಿತ್ತು. ಅದಾದ ಬಳಿಕ ಅದು ಒಬ್ಬಂಟಿಯಾಗಿತ್ತು. ಅದು ಪಟ್ಟ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಪೊಲೀಸರು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಇದೇ ಬೆಸ್ಟ್ ಎಂದುಕೊಂಡಿದ್ದಾರೆ.

ಪೊಲೀಸರು ಇತ್ತೀಚಿನ ಇನ್​ಸ್ಟಾಗ್ರಾಂ ಅಭಿಯಾನದಲ್ಲಿ ಕೆಟ್ಟದ್ದನ್ನು, ಕೇಳಬೇಡ, ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಮಾತನಾಡಬೇಡ ಎನ್ನುವ ಮೂರು ಮಂಗಗಳ ದೃಶ್ಯಗಳನ್ನು ಹಂಚಿಕೊಂಡಿದ್ದರು. ಈಗ 112 ಸಹಾಯವಾಣಿಗೆ ಪಂಚ್ ಕೋತಿಯನ್ನು ಬಳಸಿಕೊಂಡಿದ್ದಾರೆ.
ಅದಕ್ಕೆ ಕೆಟ್ಟದನ್ನು ಮಾಡಬೇಡಿ ಎನ್ನುವ ಶೀರ್ಷಿಕೆಯನ್ನು ಕೊಡಲಾಗಿದೆ. ಈ ಪೋಸ್ಟ್​ ನಾಗರಿಕರಿಗೆ ಜವಾಬ್ದಾರಿಯುತವಾಗಿ ವರ್ತಿಸುವಂತೆ ಕರೆ ನೀಡುತ್ತದೆ.

ಮತ್ತಷ್ಟು ಓದಿ: Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ

ಪಂಚ್​​ ಇತರೆ ಮಂಗಗಳು ಬೆದರಿಸುವಾಗ ತೊಂದರೆಯನ್ನು ಎದುರಿಸಿತ್ತು. ಆದರೆ ಆರೈಕೆದಾರರು ಇದನ್ನು ಅದರ ನೈಸರ್ಗಿಕ ಸಾಮಾಜಿಕ ಕಲಿಕೆಯ ಭಾಗವೆಂದು ಬಣ್ಣಿಸಿದ್ದಾರೆ. ಪಂಚ್ ಕ್ರಮೇಣ ಹೊಂದಿಕೊಳ್ಳುತ್ತಿದೆ ಮತ್ತು ಸ್ವತಂತ್ರವಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬೈ ಪೊಲೀಸರು ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಜಪಾನ್ ಕೋತಿ ‘ಪಂಚ್’ (Punch)ಅನ್ನು ಬಳಸಿಕೊಂಡಿದ್ದಾರೆ. ಪಂಚ್ ಕೋತಿ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ, ಇದು ಈಗ ವಿಶ್ವದಲ್ಲೇ ಫೇಮಸ್. ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ಈ ಕೋತಿ ಅಲ್ಲಿನ ಉಳಿದ ಕೋತಿಗಳಿಂದ ಚಿತ್ರಹಿಂಸೆ ಅನುಭವಿಸಿತ್ತು. ಅದು ಸದಾ ಗೊಂಬೆಯೊಂದರ ಜತೆಯೇ ಇರುತ್ತಿತ್ತು.

ದೆಹಲಿ ಪೊಲೀಸರು ಸಾರ್ವಜನಿಕ ಜಾಗೃತಿ ಮೂಡಿಸಲು ಪಂಚ್‌ನ ಚಿತ್ರವನ್ನು ಬಳಸಿಕೊಂಡಿದ್ದರು. ಪೋಸ್ಟ್​ನಲ್ಲಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರು ಯುವ ಕೋತಿಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದು.

112 ಸಹಾಯವಾಣಿ ಭಾರತದ ಏಕೈಕ ತುರ್ತು ಪ್ರತಿಕ್ರಿಯೆ ಸಂಖ್ಯೆಯಾಗಿದ್ದು, ಪೊಲೀಸ್, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ತಕ್ಷಣದ ಪ್ರವೇಶವನ್ನು ಒದಗಿಸಲು ರಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? – Kannada News | Mangaluru Job Scam: Students Duped by Vexan Company’s Fake Web Developer Offers

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ?

ಮಂಗಳೂರು, ಫೆಬ್ರವರಿ 27: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದುದಾಗಿ ತಿಳಿದುಬಂದಿದೆ. ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ವೇಳೆ ಟಿವಿ‌9 ಕ್ಯಾಮರಾ ಕಂಡ ಕಂಪನಿಯ ಸಿಬ್ಬಂದಿ ದಿಕ್ಕಾಪಾಲಾಗಿ ಓಡಿದ್ದಾರೆ.

ಹಣ ಡಬಲ್ ಆಗುತ್ತೆ ಎಂದು ಆಮಿಷವೊಡ್ಡಿ ಮೋಸ!

ಮಂಗಳೂರು ನಗರದ ಅಳಕೆ–ಕುದ್ರೋಳಿ ಭಾಗದ ಬಿರ್ವಾ ಕಾಂಪ್ಲೆಕ್ಸ್ ಮೂರನೇ ಮಹಡಿಯಲ್ಲಿ ಕಂಪನಿಯ ಕಾರ್ಯಾಚರಣೆ ನಡೆಯುತ್ತಿತ್ತು ಎನ್ನಲಾಗಿದೆ. ಮೊದಲು ಮೂರು ದಿನಗಳ ತರಬೇತಿ ನೀಡುವುದಾಗಿ ಹೇಳಿ ಅಭ್ಯರ್ಥಿಗಳಿಂದ ತಲಾ 2,500 ರೂಪಾಯಿ ವಸೂಲಿ ಮಾಡಲಾಗಿತ್ತು. ತರಬೇತಿ ವೇಳೆ ಕೆಲವೇ ತಿಂಗಳಲ್ಲಿ ಲಕ್ಷಾಂತರ ಆದಾಯ ಗಳಿಸಬಹುದು ಎಂದು ನಂಬಿಕೆ ಮೂಡಿಸಿ, ನಂತರ 11 ಸಾವಿರದಿಂದ 51 ಸಾವಿರ ರೂಪಾಯಿ ತನಕ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರೆಂದು ಆರೋಪಿಸಲಾಗಿದೆ.

ಮನೆಯಲ್ಲಿ ಸುಳ್ಳು ಹೇಳಿ ಎಂದು ಒತ್ತಾಯ

ಹಣವಿಲ್ಲದಿದ್ದರೆ ಮನೆಯಿಂದ ಸುಳ್ಳು ಹೇಳಿ ತರಲು, ಚಿನ್ನ ಅಡವಿಡಲು ಸಹ ಸಲಹೆ ನೀಡಲಾಗುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೂಡಿಕೆ ಮಾಡಿದ ಹಣಕ್ಕೆ ಮೊಬೈಲ್ ಚಾರ್ಜರ್, ಇಯರ್‌ಫೋನ್, ಸೀರೆ, ಕಾಸ್ಮೆಟಿಕ್ ವಸ್ತುಗಳನ್ನು ನೀಡಿ, ಮತ್ತಷ್ಟು ಜನರನ್ನು ಸೇರಿಸಿದರೆ ಕಮಿಷನ್ ಸಿಗುತ್ತದೆ ಎಂದು ಆಮಿಷ ಒಡ್ಡಲಾಗುತ್ತಿತ್ತಂತೆ. ಅದಲ್ಲದಂತೆ ಒಬ್ಬ ವಿದ್ಯಾರ್ಥಿ ಇನ್ನೋ ಮೂವರನ್ನು ಕರೆತಂದರೆ 11 ಸಾವಿರ ಕಮಿಷನ್ ನೀಡುವುದಾಗಿಯೂ ನಂಬಿಸಲಾಗಿತ್ತು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಇದನ್ನೂ ಓದಿ ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ!

ಹಣ ನೀಡಿದ ಬಳಿಕ ಉದ್ಯೋಗವೂ ಸಿಗದೆ, ಹೂಡಿಕೆ ಮಾಡಿದ ಮೊತ್ತವೂ ವಾಪಸು ಸಿಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ, ಮಂಗಳೂರಿನ ಸ್ವಸ್ತಿಕ್ ಸ್ಕೂಲ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಯತ್ನಕ್ಕೂ ಮುಂದಾಗಿದ್ದು, ನಂತರ ಕಂಪನಿ ಹಣವನ್ನು ಹಿಂತಿರುಗಿಸಿದರೆಂದು ತಿಳಿದುಬಂದಿದೆ.

ವಂಚನೆಗೆ ಒಳಗಾದ ವಿದ್ಯಾರ್ಥಿಗಳು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮಂತೆ ಇನ್ನಾರೂ ಮೋಸ ಹೋಗಬಾರದು, ಸಂಬಂಧಿತ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಪ್ಪು ಹಸುವಿನ ಮಾಲಿಕನದೋ ಅಥವಾ ಬೈಕ್​​ ಸವಾರನದೋ?: ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್ – Kannada News | Bishunpur Road Safety: Speeding Bike Hits Cow in Devipur, Both Critical

ಬಿಹಾರ, ಫೆ.27: ಬಿಶುನ್‌ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ರಸ್ತೆ ದಾಟುತ್ತಿದ್ದ ಹಸುವಿಗೆ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಹಸು ಮತ್ತು ಬೈಕ್ ಸವಾರ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯ ಮೂಲಗಳ ಪ್ರಕಾರ, ದೇವೀಪುರ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಹಸುವನ್ನು ಕರೆದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಬಿಶುನ್‌ಪುರ ಕಡೆಯಿಂದ ಅತಿ ವೇಗವಾಗಿ ಬಂದ ಮೋಟಾರು ಸೈಕಲ್ ಸವಾರ, ರಸ್ತೆಯಲ್ಲಿದ್ದ ಹಸುವನ್ನು ಗಮನಿಸದೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಹಸು ರಸ್ತೆಯ ಮೇಲೆ ಬಿದ್ದಿದ್ದು, ತೀವ್ರವಾಗಿ ರಕ್ತಸ್ರಾವವಾಗಿದೆ. ಬೈಕ್ ಸವಾರ ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಆತನಿಗೆ ತಲೆ ಮತ್ತು ಕೈಕಾಲುಗಳಿಗೆ ಪೆಟ್ಟಾಗಿದೆ. ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಓಡಿ ಬಂದ ಗ್ರಾಮಸ್ಥರು, ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಸವಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಾಯಾಳು ಸವಾರನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾನು ಆಫ್ರಿಕನ್​​ ಅಲ್ಲ, ಭಾರತೀಯ: ಜನಾಂಗೀಯವಾಗಿ ನಿಂದಿಸಿದವರಿಗೆ ಕ್ರೀಡಾ ಸಾಧನೆ ಮೂಲಕ ಉತ್ತರ ನೀಡಿದ ಮಜ್ಗುಲ್ – Kannada News | Siddi Community’s Judo Pride: Rohit Majgul’s Inspiring Journey to Global Games

ಅಹಮದಾಬಾದ್: “ನನ್ನ ಗುಂಗುರು ಕೂದಲು ಮತ್ತು ರೂಪ ನೋಡಿ ಜನ ನನ್ನನ್ನು ಆಫ್ರಿಕನ್ ಎಂದು ಕರೆಯುತ್ತಾರೆ, ಜನಾಂಗೀಯವಾಗಿ ನಿಂದಿಸುತ್ತಾರೆ. ಆದರೆ ಒಂದು ದಿನ ಬರಲಿದೆ, ಅಂದು ಇದೇ ಜನ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಸಾಲು ನಿಲ್ಲುತ್ತಾರೆ” – ಇದು 21 ವರ್ಷದ ಜೂಡೋ ಪಟು ರೋಹಿತ್ ಮಜ್ಗುಲ್ (Rohit Majgul) ಏಳು ವರ್ಷಗಳ ಹಿಂದೆ ತನಗೇ ತಾನು ಮಾಡಿಕೊಂಡಿದ್ದ ಶಪಥ. ಇಂದು ಆ ಮಾತು ನಿಜವಾಗಿದೆ. ರೋಹಿತ್ ಮಜ್ಗುಲ್ ಗುಜರಾತ್‌ನ ಜಂಬೂರ್ ಎಂಬ ಪುಟ್ಟ ಹಳ್ಳಿಯವರು. ಈ ಗ್ರಾಮವನ್ನು ‘ಮಿನಿ ಆಫ್ರಿಕಾ’ ಎಂದು ಕರೆಯಲಾಗುತ್ತದೆ. 2019ರಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯ ವೇಳೆ ರೋಹಿತ್ ಅವರನ್ನು ನೋಡಿ ಕೆಲವರು ‘ಆಫ್ರಿಕನ್’ ಎಂದು ಗೇಲಿ ಮಾಡಿದ್ದರು. ಇದರಿಂದ ಮನನೊಂದಿದ್ದ ರೋಹಿತ್, ಕ್ರೀಡೆಯ ಮೂಲಕವೇ ತನ್ನ ಅಸ್ಮಿತೆಯನ್ನು ಸಾಬೀತುಪಡಿಸಲು ನಿರ್ಧರಿಸಿದರು.

ಕಳೆದ ವಾರ ನವದೆಹಲಿಯಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಹರಿಯಾಣದ ಗರ್ವಿತ್ ಹೂಡಾ ಅವರನ್ನು ಸೋಲಿಸುವ ಮೂಲಕ -66 ಕೆಜಿ ವಿಭಾಗದಲ್ಲಿ ರೋಹಿತ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದಿದ್ದಾರೆ. ರೋಹಿತ್ ತಂದೆ ಬಶೀರ್ ಅವರು ಹೋಟೆಲ್‌ಗಳಲ್ಲಿ ಪ್ರವಾಸಿಗರಿಗೆ ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿ ಕುಟುಂಬವನ್ನು ಸಾಕುತ್ತಿದ್ದರು. ಮನೆಯಲ್ಲಿ ಸರಿಯಾದ ಕುಡಿಯುವ ನೀರು ಅಥವಾ ಮಲಗಲು ಮಂಚವೂ ಇಲ್ಲದ ಕಡು ಬಡತನದಲ್ಲಿ ರೋಹಿತ್ ಬೆಳೆದಿದ್ದಾರೆ.

ಇದನ್ನೂ ಓದಿ: ‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ

ಸಿದ್ಧಿ ಸಮುದಾಯದವರು ಸುಮಾರು 300 ವರ್ಷಗಳ ಹಿಂದೆ ಆಫ್ರಿಕಾದಿಂದ ಭಾರತಕ್ಕೆ ಬಂದು ನೆಲೆಸಿದವರು. ಈ ಸಮುದಾಯದ ಕ್ರೀಡಾ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಹಮ್ಮಿಕೊಂಡಿದ್ದ ಯೋಜನೆಗೆ ಈಗ ರೋಹಿತ್ ರೂಪದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಸದ್ಯ ರೋಹಿತ್ ಮಜ್ಗುಲ್ ಜಾರ್ಜಿಯಾದ ತಿಬಿಲಿಸಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. “ನಾನು ಕೇವಲ ಪದಕಕ್ಕಾಗಿ ಹೋರಾಡುತ್ತಿಲ್ಲ, ನನ್ನ ಸಮುದಾಯ ಮತ್ತು ಜನರ ಬಗ್ಗೆ ಜಾಗೃತಿ ಮೂಡಿಸಲು ಈ ವೇದಿಕೆಯನ್ನು ಬಳಸಿಕೊಳ್ಳುತ್ತೇನೆ” ಎನ್ನುತ್ತಾರೆ ಈ ಯುವ ಸಾಧಕ.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:24 am, Fri, 27 February 26

Source link

Vastu Tips: ಅಡುಗೆ ಮನೆಯಲ್ಲಿ ಈ ತಪ್ಪು ಮಾಡಲೇಬೇಡಿ; ಅನಾರೋಗ್ಯಕ್ಕೆ ಇದೇ ಮುಖ್ಯ ಕಾರಣ! – Kannada News | Auspicious Direction for Cooked Food: Vastu Tips for Prosperity and Health

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ವಿನ್ಯಾಸ, ಅದರಲ್ಲಿನ ವಸ್ತುಗಳ ಜೋಡಣೆ ಮತ್ತು ಅಡುಗೆ ಮಾಡುವ ದಿಕ್ಕು ಇವೆಲ್ಲವೂ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾನ್ಯವಾಗಿ, ಅಡುಗೆಮನೆಗಳನ್ನು ಆಗ್ನೇಯ (ಸೌತ್-ಈಸ್ಟ್) ಅಥವಾ ವಾಯುವ್ಯ (ನಾರ್ತ್-ವೆಸ್ಟ್) ದಿಕ್ಕಿನಲ್ಲಿ ನಿರ್ಮಿಸಲಾಗುತ್ತದೆ. ಅಡುಗೆಮನೆಯ ಸ್ಥಳ ಯಾವುದೇ ಆಗಿದ್ದರೂ, ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡುವುದು ಶುಭಕರ. ಪೂರ್ವ ದಿಕ್ಕಿಗೆ ಇಂದ್ರ ಅಧಿಪತಿಯಾಗಿರುತ್ತಾನೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ.

ಅಡುಗೆ ಮಾಡಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಯಾವ ದಿಕ್ಕಿಗೆ ಇರಿಸಬೇಕು ಎಂಬ ಪ್ರಶ್ನೆ ಅನೇಕರಿಗೆ ಇರುತ್ತದೆ. ಶಾಸ್ತ್ರಗಳ ಪ್ರಕಾರ, ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡಿ ಮುಗಿದ ನಂತರ, ಆಹಾರವನ್ನು ಉತ್ತರದ ಕಡೆ, ಅಂದರೆ ನಮ್ಮ ಎಡಭಾಗಕ್ಕೆ ಇಳಿಸುವುದು ಸರ್ವಶ್ರೇಷ್ಠ. ಉತ್ತರ ದಿಕ್ಕು ಕುಬೇರನ ಅಧಿಪತ್ಯದಲ್ಲಿದೆ ಮತ್ತು ಈ ದಿಕ್ಕಿಗೆ ಆಹಾರವನ್ನು ಇರಿಸುವುದರಿಂದ ಸಂತೃಪ್ತಿ, ಆಹಾರಕ್ಕೆ ಹೆಚ್ಚು ಶಕ್ತಿ ಮತ್ತು ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂದು ನಂಬಲಾಗಿದೆ. ಇದು ನೈವೇದ್ಯವಾಗಿ ಅರ್ಪಿತವಾಗಿ, ನಂತರ ನಾವು ಸೇವಿಸಬಹುದು.

ಇದನ್ನೂ ಓದಿ: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ!

ಆದರೆ, ಆಹಾರವನ್ನು ದಕ್ಷಿಣ ದಿಕ್ಕಿಗೆ ಇರಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗಿದೆ. ದಕ್ಷಿಣ ದಿಕ್ಕು ಯಮನ ದಿಕ್ಕು ಮತ್ತು ಪಿತೃಗಳಿಗೆ ಸಂಬಂಧಿಸಿದ್ದು. ಈ ದಿಕ್ಕಿಗೆ ಆಹಾರವನ್ನು ಇರಿಸಿದರೆ ಅದು ಪಿತೃಗಳಿಗೆ ಅರ್ಪಿತವಾಗುತ್ತದೆ. ಇದರಿಂದ ಅನಾರೋಗ್ಯ, ಮಾನಸಿಕ ನೆಮ್ಮದಿ ಕೊರತೆ, ಮತ್ತು ಕುಟುಂಬದಲ್ಲಿ ಸಣ್ಣಪುಟ್ಟ ಕಲಹಗಳು ಉಂಟಾಗುವ ಸಾಧ್ಯತೆಗಳಿವೆ. ಪಿತೃಗಳಿಗೆ ಪಿಂಡ ಹಾಕುವಾಗ ಅಥವಾ ಆಹಾರ ಅರ್ಪಿಸುವಾಗ ದಕ್ಷಿಣ ದಿಕ್ಕಿನ ಕಡೆಗೆ ನೀಡುವುದು ಇದೇ ಕಾರಣಕ್ಕಾಗಿಯೇ. ಇನ್ನು ಪಶ್ಚಿಮ ದಿಕ್ಕಿಗೂ (ಶನಿ ಮತ್ತು ವರುಣರ ದಿಕ್ಕು) ಆಹಾರವನ್ನು ಇಳಿಸುವುದು ಶುಭಕರವಲ್ಲ ಎಂದು ಹೇಳಲಾಗುತ್ತದೆ. ಅಡುಗೆ ಮನೆಯು ಮಧ್ಯಭಾಗದಲ್ಲಿ ಇದ್ದಾಗ ಪೂರ್ವಕ್ಕೆ ಇಳಿಸಲು ಸಾಧ್ಯವಿಲ್ಲದಿದ್ದರೆ, ಉತ್ತರ ದಿಕ್ಕೇ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version