IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ.
ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸದೊಂದು 'ದುರಾದೃಷ್ಟದ' ದಾಖಲೆ ಬರೆದಿದ್ದಾರೆ.
ಇದಕ್ಕೂ ಮುನ್ನ ಇಂತಹದೊಂದು ನತದೃಷ್ಟದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಮಾಜಿ ನಾಯಕ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2016 ರ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ತಂಡದ ನಾಯಕರಾಗಿದ್ದ ಡೇವಿಡ್ ಮಿಲ್ಲರ್, ತಮ್ಮ ನಾಯಕತ್ವದ ಮೊದಲ 5 ಪಂದ್ಯಗಳಲ್ಲಿ ಸತತವಾಗಿ ಟಾಸ್ ಸೋತಿದ್ದರು.
ಇದೀಗ ಸನ್ರೈಸರ್ಸ್ ಹೈದರಾಬಾದ್ ಪರ ಹಂಗಾಮಿ ನಾಯಕನಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ ಸತತ 6 ಮ್ಯಾಚ್ಗಳಲ್ಲೂ ಟಾಸ್ ಸೋತಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಮ್ಯಾಚ್ಗಳಲ್ಲೂ ಟಾಸ್ ಸೋತ ಮೊದಲ ಕ್ಯಾಪ್ಟನ್ ಎಂಬ 'ದುರಾದೃಷ್ಟ'ದ ದಾಖಲೆ ಬರೆದಿದ್ದಾರೆ.
ಇನ್ನು ಇಶಾನ್ ಕಿಶನ್ 6 ಪಂದ್ಯಗಳಲ್ಲಿ ಟಾಸ್ ಸೋತರೂ ಸನ್ರೈಸರ್ಸ್ ಹೈದರಾಬಾದ್ ತಂಡವು ಮೂರು ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ನತದೃಷ್ಟದ ನಡುವೆ ಇಶಾನ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಗೆಲುವುಗಳೊಂದಿಗೆ ಇದೀಗ ಸನ್ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ಗೆ ವಾಪಸ್ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ. ಇತ್ತೀಚೆಗೆ ಖಾಸಗಿ ಹೋಟೆಲ್ನಲ್ಲಿ ಜಮೀರ್ ಅಹ್ಮದ್ ಖಾನ್ ಹಾಗೂ ಕುಮಾರಸ್ವಾಮಿ ಭೇಟಿಯಾಗಿದ್ದು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಜಮೀರ್ ಮುಂದಿನ ದಿನಗಳಲ್ಲಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇನ್ನು ಇದಕ್ಕೆ ಮೊನ್ನೆ ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಓಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ರೇಕ್ ಹಾಕಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಡಿಸಿ ಪಡೆ 6 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್ಗಳಲ್ಲಿ 179 ರನ್ ಬಾರಿಸಿ 6 ವಿಕೆಟ್ಗಳ ಜಯ ಸಾಧಿಸಿದೆ.
ಈ ಸೋಲಿನ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ಆರ್ಸಿಬಿ ತಂಡದ ಸ್ಥಾನ ಬದಲಾಗಿಲ್ಲ. ಏಕೆಂದರೆ 6 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ರಾಯಲ್ ಪಡೆಯು ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ಈ ಮೂಲಕ ದ್ವಿತೀಯ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇದಾಗ್ಯೂ ಆರ್ಸಿಬಿ ತಂಡ ತನ್ನ ಮುಂದಿನ ಮ್ಯಾಚ್ಗಳಲ್ಲಿ ಸೋತರೆ ಟಾಪ್-4 ರಿಂದ ಕೆಳಗಿಳಿಯಲಿದೆ. ಇಲ್ಲಿ ಆರ್ಸಿಬಿ ತಂಡದ ಮುಂದಿನ ಎದುರಾಳಿ ಯಾರೆಂದು ನೋಡುವುದಾದರೆ…
ಟೈಟಾನ್ಸ್ ಪಡೆಯ ಸವಾಲು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 24, ಶುಕ್ರವಾರದಂದು ಗುಜರಾತ್ ಟೈಟನ್ಸ್ (GT) ವಿರುದ್ಧ ಆಡಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ತವರಿನಲ್ಲಿ ಆರ್ಸಿಬಿ ತಂಡದ ಕೊನೆಯ ಮ್ಯಾಚ್. ಹೀಗಾಗಿ ಈ ಪಂದ್ಯದ ಮೂಲಕ ಆರ್ಸಿಬಿ ಮತ್ತೆ ಗೆಲುವಿನ ಲಯ ಕಂಡುಕೊಳ್ಳಬೇಕಿದೆ.
ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟದಲ್ಲಿ ಏನೇನೋ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. ಇನ್ನೂ ಮೇ5ರ ನಂತರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೀವೇ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ನಮ್ಮ ಊರಲ್ಲಿ ಕಡಿಮೆ ಸಂಬಳ ಪಡೆದ್ರೂ ಸಿಗೋ ಖುಷಿ, ವಿದೇಶಕ್ಕೆ ಹೋಗಿ ಲಕ್ಷಾನುಗಟ್ಟಲೆ ದುಡಿದ್ರೂ ಸಿಗಲ್ಲ ಅನ್ನೋ ಅಭಿಪ್ರಾಯ ಅನೇಕರಲ್ಲಿದೆ. ಆದರೆ ಕೆಲವರಿಗೆ ಹೊರ ರಾಜ್ಯ, ಹೊರ ದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಕೆಲವರ ಭಾವನೆ. ಆದರೆ ಈ ಹೊರ ದೇಶದಲ್ಲಿ ಕೆಲಸ ಮಾಡುವ ಅನೇಕರು ಮಾಡುವ ತ್ಯಾಗಗಳು ಅಷ್ಟಿಷ್ಟಲ್ಲ. ಒಂದಷ್ಟು ಬದಲಾವಣೆಗಳೊಂದಿಗೆ ಬದುಕು ಕಟ್ಟಿಕೊಳ್ಳುತ್ತಾರೆ. ಭಾರತೀಯ ಮಹಿಳೆಯೊಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಭಾರತೀಯಳಾಗಿ ಯುರೋಪಿಯನ್ನಲ್ಲಿ (Europe) ಎರಡು ತಿಂಗಳುಗಳ ಕಾಲ ನೆಲೆಸಿ, ನಾನು ಕಲಿತ ವಿಷಯಗಳನ್ನು ನನ್ನ ದೈನಂದಿನ ಜೀವನದಲ್ಲಿ ಹೇಗೆ ಅಳವಡಿಸಿಕೊಂಡೆ ಎಂದು ಹೇಳಿದ್ದಾರೆ. ಈ ಅನುಭವಗಳು ಹಾಗೂ ಬದಲಾವಣೆಗಳು ಬದುಕಿಗೆ ಎಷ್ಟು ಅನಿವಾರ್ಯ ಎನ್ನುವುದನ್ನು ಈ ವಿಡಿಯೋ ಸಾರಿ ಹೇಳುವಂತಿದೆ.
ವಿಶಾ ಖಂಡೇಲ್ವಾಲ್ (visha.khandelwal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಕಳೆದ ಕೆಲವು ತಿಂಗಳುಗಳನ್ನು ಯುರೋಪಿಯನ್ನಲ್ಲಿ ಭಾರತೀಯ ಮಹಿಳೆ ಕಳೆದಿದ್ದು, ತಮ್ಮ ಅನುಭವಗಳನ್ನು ವಿವರಿಸಿದ್ದಾರೆ. ನಾನು ಕಲಿತ ವಿಷಯಗಳನ್ನು ನನ್ನ ದೈನಂದಿನ ಜೀವನದಲ್ಲಿ ಹೇಗೆ ಅನ್ವಯಿಸುತ್ತಿದ್ದೇನೆ. ಮೊದಲು, ಸಣ್ಣ ಮಾತುಕತೆಯಾಗಿದ್ದರೂ ಕ್ಯಾಬ್ ಚಾಲಕರು, ಮಾಣಿಗಳು, ಹಾದುಹೋಗುವ ಅಪರಿಚಿತರನ್ನು ಸ್ವಾಗತಿಸಲು ಕಲಿತೆ. ಈ ಎರಡು ತಿಂಗಳಲ್ಲಿ ನಾನು ಎಲ್ಲರನ್ನೂ ಸ್ವಾಗತಿಸುವ ಅಭ್ಯಾಸವನ್ನು ಬೆಳೆಸಿಕೊಂಡೆ ಎಂದು ಹೇಳಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ
ಈ ನಡವಳಿಕೆಯು ಭಾರತದಲ್ಲಿ ಸರಾಗವಾಗಿರಲು ಸಾಧ್ಯವಿಲ್ಲ.. ಆದರೆ ಈ ಅಭ್ಯಾಸವು ಸಂವಹನದ ಮೇಲೆ ಪ್ರಭಾವ ಬೀರಿದೆ. ಆಟೋ ಚಾಲಕನಿಗೆ ಒಟಿಪಿ ಹೇಳುವುದು ತುಂಬಾ ಪ್ರಾಯೋಗಿಕವಾಗಿದೆ. ತದನಂತರದ ಈ ಸಂಭಾಷಣೆಗಳು ಪ್ರಯಾಣದ ನಡುವೆ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಹಾಗೂ ಮನಸ್ಸು ತೆರೆದು ಕೊಳ್ಳುತ್ತದೆ ಎಂದಿದ್ದಾರೆ.
ನಾವು ಇಬ್ಬರು ಭಾರತೀಯ ಹುಡುಗಿಯರು ಸ್ವಿಸ್ ಹುಡುಗನೊಂದಿಗೆ ಪ್ರಯಾಣಿಸುತ್ತಿದ್ದೆವು. ಆ ಹುಡುಗನು ಬೆಳಿಗ್ಗೆ 8:30 ಕ್ಕೆ ನಮ್ಮನ್ನು ಭೇಟಿಯಾಗಬೇಕೆಂದು ಹೇಳಿದ. ನಾವು ಅವನಿಗೆ 8:45 ಕ್ಕೆ ಸಮಯಕ್ಕೆ ಬರಲು ಹೇಳಿದ್ದೆವು. ಆದರೆ ಆತನು 8:30 ಕ್ಕೆ ಬಂದು ನಮಗಾಗಿ ಕಾಯುತ್ತಿದ್ದನು ಎಂದು ಹೇಳಿದ್ದಾರೆ. ಈ ಸಮಯ ಪಾಲನೆಯಂತಹ ಅಭ್ಯಾಸಗಳು ಮಾಯವಾಗಿವೆ. ಈಗ ನಾನು ಕ್ಯಾಬ್, ಆಟೋಗಾಗಿ ಕಾಯುತ್ತಿದ್ದೇನೆ. ಕೆಲವೊಮ್ಮೆ ಸಮಯಕ್ಕಿಂತ ಮೊದಲೇ ಬರುತ್ತೇನೆ. ತಡವಾಗಿ ಬಂದಿದ್ದಕ್ಕಾಗಿ ಕ್ಷಮೆಯಾಚಿಸಬೇಕಾಗಿಲ್ಲದ ಕಾರಣ ದೂರವಾಗುವ ಒತ್ತಡ ಮತ್ತು ಅಪರಾಧ ಪ್ರಜ್ಞೆ, ತುಂಬಾ ಕಡಿಮೆ ಎಂದಿದ್ದಾರೆ.
ಅಂತಿಮವಾಗಿ, ನಿಮಗಾಗಿ ಬದುಕುವುದು. ನಾನು 35 ರಿಂದ 40 ವರ್ಷ ವಯಸ್ಸಿನ ಮಹಿಳೆಯರೊಂದಿಗೆ ವಾಸದ ಸ್ಥಳಗಳನ್ನು ಹಂಚಿಕೊಂಡಿದ್ದೇನೆ, ಒಂಟಿಯಾಗಿ ಪ್ರಯಾಣಿಸುತ್ತಿದ್ದೇನೆ, ಪುಸ್ತಕ ಬರೆಯುತ್ತಿದ್ದೇನೆ. ಫಿಟ್ನೆಸ್ ಮೇಲೆ ಕೇಂದ್ರೀಕರಿಸುತ್ತಿದ್ದೇನೆ, ಸಂಪೂರ್ಣವಾಗಿ ತಲೆಕೆಡಿಸಿಕೊಳ್ಳಲಿಲ್ಲ ಎಂದು ವಿವರಿಸಿರುವುದನ್ನು ಕಾಣಬಹುದು.
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸಮಯಪಾಲನೆ ವಿಚಾರ ತುಂಬಾ ಖುಷಿ ಕೊಟ್ಟಿತು ಎಂದಿದ್ದಾರೆ. ಇನ್ನೊಬ್ಬರು, ಈ ಮನಸ್ಥಿತಿಯ ಬದಲಾವಣೆ ನಿಧಾನವಾಗಿ ಆಗಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮಗಾಗಿ ಬದುಕುವುದು ಇಲ್ಲಿ ಕಠಿಣ ಪಾಠವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಏಪ್ರಿಲ್ 19: ಭಾರತದ ಫಾರೆಕ್ಸ್ ರಿಸರ್ವ್ಸ್ (Forex reserves) ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ 3.825 ಬಿಲಿಯನ್ ಡಾಲರ್ನಷ್ಟು ಏರಿದೆ. ಹಿಂದಿನ ವಾರದಲ್ಲೂ 9.063 ಬಿಲಿಯನ್ ಡಾಲರ್ನಷ್ಟು ರಿಸರ್ವ್ಸ್ ಹೆಚ್ಚಳ ಆಗಿತ್ತು. ಇದರೊಂದಿಗೆ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 700.946 ಬಿಲಿಯನ್ ಡಾಲರ್ಗೆ ಏರಿದೆ. ಆದರೆ, ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್ ಮೀಸಲು ನಿಧಿಯ ಮಟ್ಟ ಮುಟ್ಟಲು ಇನ್ನೂ 28 ಬಿಲಿಯನ್ ಡಾಲರ್ ಬೇಕಾಗುತ್ತದೆ.
2026ರ ಫೆಬ್ರುವರಿ 27ರಂದು ಭಾರತದ ಫಾರೆಕ್ಸ್ ರಿಸರ್ವ್ಸ್ 728.494 ಬಿಲಿಯನ್ ಡಾಲರ್ ಆಗಿತ್ತು. ಆ ನಂತರದಲ್ಲಿ ಇರಾನ್ ಇತ್ಯಾದಿ ಕಡೆ ಜಾಗತಿಕ ರಾಜಕೀಯ ಸಂಕಷ್ಟಗಳ ಕಾರಣಗಳಿಗೆ ರುಪಾಯಿ ಮೇಲೆ ಒತ್ತಡ ಬಿದ್ದು, ಆರ್ಬಿಐ ತನ್ನ ರಿಸರ್ವ್ಸ್ನಲ್ಲಿದ್ದ ಒಂದಿಷ್ಟು ಡಾಲರ್ಗಳನ್ನು ಮಾರುತ್ತಾ ಹೋಗಬೇಕಾಯಿತು. ಹೀಗಾಗಿ, ಫಾರೆಕ್ಸ್ ರಿಸರ್ವ್ಸ್ ಹಲವು ಬಿಲಿಯನ್ ಡಾಲರ್ಗಳಷ್ಟು ಕಡಿಮೆಗೊಂಡಿತು.
ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ ಏರಿಕೆಯಾದ 3.285 ಬಿಲಿಯನ್ ಡಾಲರ್ ಫಾರೆಕ್ಸ್ ಮೀಸಲು ನಿಧಿಯಲ್ಲಿ ಬಹುಪಾಲು ಫಾರೀನ್ ಕರೆನ್ಸಿಗಳೇ ಇವೆ. ಬರೋಬ್ಬರಿ 3.127 ಬಿಲಿಯನ್ ಡಾಲರ್ ಮೊತ್ತದ ವಿದೇಶೀ ಕರೆನ್ಸಿ ಆಸ್ತಿಗಳನ್ನು ಆರ್ಬಿಐ ಹೆಚ್ಚಿಸಿಕೊಂಡಿದೆ.
ಇನ್ನಿತರ ಆಸ್ತಿಗಳ ಪೈಕಿ ಗೋಲ್ಡ್ ರಿಸರ್ವ್ಸ್ 601 ಮಿಲಿಯನ್ ಡಾಲರ್ನಷ್ಟು ಹೆಚ್ಚಿದೆ. ಎಸ್ಡಿಆರ್ಗಳು 56 ಮಿಲಿಯನ್ ಡಾಲರ್, ಹಾಗೂ ಭಾರತದ ಐಎಂಎಫ್ ಮೀಸಲು ಸ್ಥಾನ 56 ಮಿಲಿಯನ್ ಡಾಲರ್ ಏರಿಕೆ ಆಗಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸಂಚಾರವು ವಿಶೇಷ ಮಹತ್ವವನ್ನು ಹೊಂದಿದೆ. ಅದರಲ್ಲೂ ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾದ ‘ಗಜಕೇಸರಿ ರಾಜಯೋಗ’ ಏಪ್ರಿಲ್ 21 ರಂದು ರೂಪುಗೊಳ್ಳುತ್ತಿದೆ. ಗುರು ಮತ್ತು ಚಂದ್ರನ ಅಪರೂಪದ ಸಂಯೋಗದಿಂದ ಸೃಷ್ಟಿಯಾಗುವ ಈ ಯೋಗವು ಕೆಲವು ರಾಶಿಗಳ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ.
ಗಜಕೇಸರಿ ರಾಜಯೋಗ ಎಂದರೇನು?
ಜಾತಕದಲ್ಲಿ ಗುರು ಮತ್ತು ಚಂದ್ರರು ಪರಸ್ಪರ ಕೇಂದ್ರ ಸ್ಥಾನದಲ್ಲಿದ್ದಾಗ ಅಥವಾ ಒಂದೇ ರಾಶಿಯಲ್ಲಿ ಸೇರಿದಾಗ ಈ ಯೋಗ ರೂಪುಗೊಳ್ಳುತ್ತದೆ. ಏಪ್ರಿಲ್ 21 ರಂದು ಚಂದ್ರನು ಮಿಥುನ ರಾಶಿಗೆ ಪ್ರವೇಶಿಸಲಿದ್ದು, ಅಲ್ಲಿ ಈಗಾಗಲೇ ನೆಲೆಸಿರುವ ಗುರುವಿನೊಂದಿಗೆ ಸೇರಿ ಈ ಅದ್ಭುತ ರಾಜಯೋಗವನ್ನು ಸೃಷ್ಟಿಸಲಿದ್ದಾನೆ.
ಈ ಯೋಗದಿಂದಾಗಿ ವಿಶೇಷ ಲಾಭ ಪಡೆಯಲಿರುವ ಆ 4 ರಾಶಿಗಳು ಇಲ್ಲಿವೆ:
ಮಿಥುನ ರಾಶಿ (Gemini):
ಮಿಥುನ ರಾಶಿಯಲ್ಲೇ ಈ ರಾಜಯೋಗ ರೂಪುಗೊಳ್ಳುತ್ತಿರುವುದರಿಂದ, ಈ ರಾಶಿಯವರಿಗೆ ಅತ್ಯಂತ ಹೆಚ್ಚಿನ ಲಾಭ ಸಿಗಲಿದೆ. ಮನಃಶಾಂತಿ: ಚಂದ್ರನ ಪ್ರಭಾವದಿಂದ ನಿಮ್ಮ ಮನಸ್ಸು ಶಾಂತವಾಗಿರುತ್ತದೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸುಲಭವಾಗುತ್ತದೆ. ಕುಟುಂಬದೊಂದಿಗೆ ಸುಂದರ ಕ್ಷಣಗಳನ್ನು ಕಳೆಯುತ್ತೀರಿ. ಕೈ ಹಾಕಿದ ಪ್ರತಿಯೊಂದು ಕೆಲಸದಲ್ಲೂ ಜಯ ನಿಮ್ಮದಾಗುತ್ತದೆ.
ಸಿಂಹ ರಾಶಿ (Leo):
ಸಿಂಹ ರಾಶಿಯವರ ಪಾಲಿಗೆ ಈ ಸಮಯವು ಆರ್ಥಿಕ ಸಮೃದ್ಧಿಯನ್ನು ಹೊತ್ತು ತರಲಿದೆ. ನಿಮ್ಮ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಷೇರು ಮಾರುಕಟ್ಟೆ ಅಥವಾ ಇನ್ಯಾವುದೇ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಹಳೆಯ ಸಾಲದ ಬಾಧೆಗಳಿಂದ ಮುಕ್ತಿ ಸಿಗಲಿದೆ.
ಕನ್ಯಾ ರಾಶಿಯವರಿಗೆ ಆರೋಗ್ಯ ಮತ್ತು ಐಶ್ವರ್ಯ ಎರಡೂ ಒದಗಿ ಬರಲಿವೆ. ಉದ್ಯೋಗದಲ್ಲಿರುವ ಅಡೆತಡೆಗಳು ನಿವಾರಣೆಯಾಗಿ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಉದ್ಯಮಿಗಳಿಗೆ ಹೆಚ್ಚಿನ ಲಾಭ ದೊರೆಯುವ ಮುನ್ಸೂಚನೆ ಇದೆ.
ಕುಂಭ ರಾಶಿ (Aquarius):
ಕುಂಭ ರಾಶಿಯವರ ಬಹುದಿನಗಳ ಕನಸುಗಳು ನನಸಾಗುವ ಸಮಯವಿದು. ಹೊಸ ಮನೆ ಅಥವಾ ವಾಹನ ಖರೀದಿಸುವ ನಿಮ್ಮ ಹಂಬಲ ಈ ಸಮಯದಲ್ಲಿ ಈಡೇರುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿಯ ಜೊತೆಗೆ ಕುಟುಂಬದಲ್ಲಿ ಸಂಭ್ರಮದ ವಾತಾವರಣ ನೆಲೆಸಲಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಾಟ್ಜು -ಸಾಂದರ್ಭಿಕ Image Credit source: Google Gemini
ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್ಗಳ ಮಳೆಯನ್ನು ಸುರಿಸಿದೆ.
ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ ತಮಾಷೆಯಾಗಿ ಪೋಸ್ಟ್ ಮಾಡಿದ್ದರು. ಇದು ಕೇವಲ ಸೌಂದರ್ಯದ ಬಗೆಗಿನ ಅಭಿಪ್ರಾಯವಾಗಿರದೆ, ಅವರ ಎಂದಿನ ವ್ಯಂಗ್ಯಭರಿತ ಶೈಲಿಯಿಂದ ಕೂಡಿತ್ತು. ಕಾಟ್ಜು ಅವರ ಪೋಸ್ಟ್ಗೆ ಭಾರತೀಯರು ಅತ್ಯಂತ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.
ಸರ್, ಈ ಪೋಸ್ಟ್ ನೋಡಿದ ಮೇಲೆ ನಿಮ್ಮ ಹಳೆಯ ನ್ಯಾಯಾಂಗ ತೀರ್ಪುಗಳನ್ನೂ ನಾವು ಒಮ್ಮೆ ಮರುಪರಿಶೀಲಿಸಬೇಕಾಗುತ್ತದೆ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ನಿಮ್ಮೊಳಗಿನ ತುಂಟತನ ಇನ್ನು ಹೋಗಿಲ್ಲ ಎಂದು ಇನ್ನು ಕೆಲವರು ಕಾಲೆಳೆದಿದ್ದಾರೆ.
ಕಾಟ್ಜು ಅವರ ವಾದಕ್ಕೆ ಪಾಕಿಸ್ತಾನದ ನೆಟ್ಟಿಗರು ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅವರು ತಮ್ಮ ದೇಶದ ಪುರುಷರ ಪರವಾಗಿ ಬ್ಯಾಟ್ ಬೀಸಿದರು. ನಮ್ಮ ದೇಶದ ಪುರುಷರು ಭಾರತೀಯರಿಗಿಂತ ಹೆಚ್ಚು ಹ್ಯಾಂಡ್ಸಮ್ ಆಗಿದ್ದಾರೆ ಎಂದು ಕೆಲವರು ಫೋಟೋಗಳನ್ನು ಹಂಚಿಕೊಂಡು ವಾದಕ್ಕಿಳಿದರೆ, ಸೌಂದರ್ಯ ಎಂಬುದು ನೋಡುವವರ ಕಣ್ಣಿನಲ್ಲಿರುತ್ತದೆ ಎಂದು ಇನ್ನು ಕೆಲವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಕೀಯ ಮತ್ತು ಗಡಿ ಉದ್ವಿಗ್ನತೆ ಸದಾ ಇರುತ್ತದೆ. ಆದರೆ, ಕಾಟ್ಜು ಅವರ ಈ ಪೋಸ್ಟ್ ಚರ್ಚೆಯು ಯಾವುದೇ ದ್ವೇಷಕ್ಕೆ ಅವಕಾಶ ನೀಡದೆ, ಸಂಪೂರ್ಣವಾಗಿ ಲಘು ಹಾಸ್ಯದಿಂದ ಕೂಡಿತ್ತು. ಪ್ರಾದೇಶಿಕ ಹೆಮ್ಮೆ ಮತ್ತು ಸೌಂದರ್ಯದ ಕುರಿತಾದ ಈ ಚರ್ಚೆಯು ಎರಡೂ ಕಡೆಯ ಜನರನ್ನು ಸ್ವಲ್ಪ ಕಾಲ ನಗಿಸುವಂತೆ ಮಾಡಿತು. ಆದರೆ ಅವರ ಎಕ್ಸ್ ಖಾತೆಯಲ್ಲಿದ್ದ ಆ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದ್ದು, ಜನರು ಸ್ಕ್ರೀನ್ ಶಾಟ್ಗಳನ್ನು ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.
ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ
ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್ನಲ್ಲಿ ಪಾರ್ಟಿ ಮುಗಿಸಿ ಹೊರಬರುತ್ತಿದ್ದ. ಈ ವೇಳೆ ರಾಕಿ ಎಂಬಾತ ಹಾಗೂ ಅವನ ಸ್ನೇಹಿತರು ಎದುರಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ ಎನ್ನಲಾಗಿದೆ. ಗಲಾಟೆಯ ಮಧ್ಯೆ ನಿಶಾಂತ್ ಪಬ್ನ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮ ನಿಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ನಿಶಾಂತ್ನ್ನು ಉದ್ದೇಶಪೂರ್ವಕವಾಗಿ ಮಹಡಿಯಿಂದ ತಳ್ಳಿಹಾಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಾನ್ಪುರ, ಏಪ್ರಿಲ್ 19: ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ್ತಿವೆ. ಆರೋಪಿ ಮತ್ತು ಆತನ ಪತ್ನಿ ರೇಷ್ಮಾ ಛೆಟ್ರಿ 2014 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಮೂಡಿತು. ಆರೋಪಿ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದ. ಎಷ್ಟರಮಟ್ಟಿಗೆ ಅಂದರೆ, ಮನೆಯ ಪ್ರತಿಯೊಂದು ಮೂಲೆಯಲ್ಲಿ ಹಾಗೂ ಮಲಗುವ ಕೋಣೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪತ್ನಿಯ ಮೇಲೆ ನಿಗಾ ಇಟ್ಟಿದ್ದ.
ಕೊಲೆಯ ಹಿಂದಿನ ರಾತ್ರಿ ಕುಟುಂಬದವರೆಲ್ಲರೂ ಒಟ್ಟಿಗೆ ಊಟ ಮಾಡಿದ್ದರು. ನಂತರ ಆರೋಪಿ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಮಲಗಿಸಲು ತನ್ನ ಕೋಣೆಗೆ ಕರೆದೊಯ್ದಿದ್ದ. ಪತ್ನಿ ರೇಷ್ಮಾ ಸಿಸಿಟಿವಿ ಮಾನಿಟರ್ನಲ್ಲಿ ನೋಡುತ್ತಿದ್ದಾಗ, ಪತಿ ಫೋನ್ನಲ್ಲಿ ದೀರ್ಘಕಾಲ ಮಾತನಾಡುತ್ತಿದ್ದುದು ಕಂಡುಬಂದಿದೆ. ಬೆಳಗಿನ ಜಾವ 2:30ಕ್ಕೆ ಆತ ಒಬ್ಬ ಮಗಳನ್ನು ಸ್ನಾನಗೃಹಕ್ಕೆ ಕರೆದೊಯ್ದು ನಂತರ ವಾಪಸ್ ಬಂದಿದ್ದಾನೆ. ಸ್ವಲ್ಪ ಸಮಯದ ನಂತರ ಕೋಣೆಯ ದೀಪಗಳನ್ನು ಆಫ್ ಮಾಡಿದ್ದಾನೆ. ಆನಂತರ ಅಲ್ಲಿ ಯಾವುದೇ ಸದ್ದು ಕೇಳಿಸದಿದ್ದಾಗ, ಎಲ್ಲರೂ ಮಲಗಿದ್ದಾರೆ ಎಂದು ರೇಷ್ಮಾ ಭಾವಿಸಿದ್ದರು.
ದೀಪ ಆಫ್ ಮಾಡಿದ ಆ ಕರಾಳ ಕ್ಷಣದಲ್ಲೇ ಆರೋಪಿ ತನ್ನಿಬ್ಬರು ಮಕ್ಕಳ ಕತ್ತನ್ನು ಹರಿತವಾದ ಆಯುಧದಿಂದ ಸೀಳಿ ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ನಂತರ ಏನೂ ಅರಿಯದವನಂತೆ ತಾನೇ ಪೊಲೀಸರಿಗೆ ಫೋನ್ ಮಾಡಿ ಮನೆಯಲ್ಲಿ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದಾನೆ. ಪೊಲೀಸರನ್ನು ದಾರಿ ತಪ್ಪಿಸಲು ಆತ ನಡೆಸಿದ ಈ ನಾಟಕ ದೀರ್ಘಕಾಲ ಉಳಿಯಲಿಲ್ಲ.
ಪೊಲೀಸರು ಸ್ಥಳಕ್ಕೆ ಬಂದಾಗ ಇಬ್ಬರು ಹೆಣ್ಣು ಮಕ್ಕಳ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಆತ ನಮ್ಮನ್ನು ಕೊಲ್ಲುವುದಾಗಿ ಆಗಾಗ ಬೆದರಿಕೆ ಹಾಕುತ್ತಿದ್ದ. ನನ್ನನ್ನು ಹೊಡೆದು ಮನೆಯಿಂದ ಹೊರಹಾಕುತ್ತಿದ್ದ ಎಂದು ರೇಷ್ಮಾ ಪೊಲೀಸರ ಮುಂದೆ ಕಣ್ಣೀರಿಟ್ಟಿದ್ದಾರೆ. ಒಂಬತ್ತು ತಿಂಗಳು ಮಕ್ಕಳಿಂದ ದೂರವಿದ್ದ ರೇಷ್ಮಾ, ಮಕ್ಕಳ ಮೇಲಿನ ಪ್ರೀತಿಗಾಗಿ ಮರಳಿ ಬಂದಿದ್ದರು. ಆದರೆ ಬಂದ ಕೆಲವೇ ದಿನಗಳಲ್ಲಿ ಮಕ್ಕಳ ಹೆಣ ನೋಡುವಂತಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ದೀಪೇಂದ್ರ ನಾಥ್ ಚೌಧರಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವಿಧಿವಿಜ್ಞಾನ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಹಂತಕ ತಂದೆಯನ್ನು ಈಗಾಗಲೇ ಬಂಧಿಸಲಾಗಿದ್ದು, ಈ ದಾರುಣ ಹತ್ಯೆಯ ಹಿಂದಿನ ಅಸಲಿ ಉದ್ದೇಶವನ್ನು ಹೊರಹಾಕಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.