Headlines

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್ – Kannada News | Bidadi Township Row: DK Shivakumar’s Mega Counter to Opposition

ಬೆಂಗಳೂರು, ಆಗಸ್ಟ್​​​ 09: ‘ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar)​ ಮಾಹಿತಿ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ: ಸಿಎಂ  ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್​​, ‘ಗ್ರೇಟರ್ ಬೆಂಗಳೂರು ಅಭಿವೃದ್ಧಿ…

Read More

ರಾಜ್ಯಪಾಲರಿಗೆ ಪತ್ರ ಬರೆದು ತಮ್ಮ ರಾಜೀನಾಮೆಯ ಪ್ರಸಂಗ ವಿವರಿಸಿದ ಹೊರಟ್ಟಿ – Kannada News | Basavaraj Horatti letter To Governor thawar chand gehlot about His Resignation

ಬೆಂಗಳೂರು, (ಆಗಸ್ಟ್ 09): ಬಸವರಾಜ ಹೊರಟ್ಟಿ (basavaraj horatti) ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇದರ ಮಧ್ಯೆ ಇದೀಗ ಸ್ವತಃ ಬಸವರಾಜ ಹೊರಟ್ಟಿ ಅವರೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ. ಇದರ ಜೊತೆಗೆ ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ…

Read More

Career Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly Career Horoscope: August Job Predictions for All Zodiac Signs

ಆಗಷ್ಟ್ ಎರಡೇ ವಾರದಲ್ಲಿ ಸೂರ್ಯನು ಉಚ್ಚಸ್ಥಾನಕ್ಕೆ ಬರಲಿದ್ದು ಆತ್ಮಸೈರ್ಯವನ್ನು ಹೆಚ್ಚಿಸುವನು. ಕಲೆ, ಕೋಪ, ಜವಾಬ್ದಾರಿಗಳ ನಿರ್ವಹಣೆ, ತಂಡವಾಗಿ ಕಾರ್ಯ, ಆತುರ, ಸ್ಪರ್ಧಾತ್ಮಕತೆ, ಕೌಶಲತೆಯ ಪರಿಚಯ ಇದೆಲ್ಲ ಈ ವಾರದ ವಿಶೇಷ‌‌‌‌. ​ಮೇಷ ರಾಶಿ: ​ತೃತೀಯ ಭಾವದಲ್ಲಿ ಮಂಗಳ ಇರುವುದರಿಂದ ಧೈರ್ಯ ಮತ್ತು ಉತ್ಸಾಹ ಹೆಚ್ಚಿರುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದ ವೇಗ ಹೆಚ್ಚಾಗಲಿದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಅತ್ಯುತ್ತಮ ಸಮಯ. ಮೇಲಧಿಕಾರಿಗಳ ಬೆಂಬಲ ದೊರೆಯಲಿದೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ. ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ತಾಳ್ಮೆ ಇರಲಿ….

Read More

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್ – Kannada News | SS Rajamouli release Mahesh Babu look from Varanasi movie

ರಾಜಮೌಳಿ (Rajamouli) ನಿರ್ದೇಶನದ ‘ವಾರಣಾಸಿ’, ವಿಶ್ವದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿರುವ ಈ ಸಿನಿಮಾ ಭಾರಿ ನಿರೀಕ್ಷೆಗಳನ್ನು ಮೂಡಿಸಿರುವ ಸಿನಿಮಾ. ಈ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ. ಮಹೇಶ್ ಬಾಬು ಅವರ ಹುಟ್ಟುಹಬ್ಬದ ವಿಶೇಷವಾಗಿ, ಎಸ್​​ಎಸ್…

Read More

IND vs SL: ಟೀಂ ಇಂಡಿಯಾಕ್ಕೆ 45 ಓವರ್‌ಗಳಲ್ಲಿ 207 ರನ್ ಗುರಿ – Kannada News | India vs SL XI Practice Match Day 3: Sri Lanka Sets 207 Target; Madushka Shines

ಕೊಲಂಬೊದ ನಾನ್‌ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ XI ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಮೂರನೇ ದಿನದಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಆತಿಥೇಯ ಶ್ರೀಲಂಕಾ ತಂಡ ಪೂರ್ಣ 45 ಓವರ್​ ಬ್ಯಾಟಿಂಗ್‌ ಮಾಡಿ 200 ರನ್ ಕಲೆಹಾಕಿದೆ. ಮೊದಲ ಇನ್ನಿಂಗ್ಸ್​ನಲ್ಲಿ 6 ರನ್​ಗಳ ಮುನ್ನಡೆ ಪಡೆದುಕೊಂಡಿದ್ದ ಶ್ರೀಲಂಕಾ ಭಾರತದ ಗೆಲುವಿಗೆ 207 ರನ್​ಗಳ ಗುರಿ ನೀಡಿದೆ. ಉಳಿದಿರುವ 45 ಓವರ್​ಗಳಲ್ಲಿ ಭಾರತ ತಂಡ ಈ ಗುರಿಯನ್ನು ಬೆನ್ನಟ್ಟಬೇಕಿದೆ. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ…

Read More

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ? – Kannada News | Yathindra Siddaramaiah Likely to Become Leader of House in Karnataka Legislative Council

ಯತೀಂದ್ರ ಸಿದ್ದರಾಮಯ್ಯImage Credit source: Dr Yathindra Siddaramaiah Facebook Page ಬೆಂಗಳೂರು, ಆಗಸ್ಟ್​​ 09: ವಿಧಾನ ಪರಿಷತ್​​ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಮೇಲ್ಮನೆಯ ಪ್ರಮುಖ ಸ್ಥಾನಗಳೆಲ್ಲವೂ ಖಾಲಿಯಾಗಿವೆ. ಸಭಾಪತಿ, ಉಪಸಭಾಪತಿಯಿಂದ ಹಿಡಿದು ಸಭಾ ನಾಯಕರವರೆಗೂ ಯಾರೂ ಸದ್ಯಕ್ಕಿಲ್ಲ. ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರ ಹೆಸರನ್ನು ಅದಾಗಲೇ ಎಐಸಿಸಿ ಶಿಫಾರಸ್ಸು ಮಾಡಿದ್ದರೂ ಸಭಾ ನಾಯಕ ಯಾರಾಗಾಲಿದ್ದಾರೆ ಎಂಬ ಕುತೂಹಲ ಮಾತ್ರ ಹಾಗೆಯೇ ಉಳಿದಿತ್ತು. ಆದ್ರೀಗ ಆ…

Read More

ಪಾಕಿಸ್ತಾನದ 7 ಆಟಗಾರರಿಗೆ 2 ವರ್ಷಗಳ ನಿಷೇಧ! – Kannada News | 7 Pakistan Cricketers Banned for 2 Years by PCB

ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು (PCB) ನಿಯಮ ಉಲ್ಲಂಘಿಸಿದ ತನ್ನ ದೇಶದ ಹಲವು ಮಾಜಿ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಝಾಂಬಿಯಾದಲ್ಲಿ ನಡೆದ ಅನಧಿಕೃತ ಟಿ20 ಲೀಗ್‌ನಲ್ಲಿ ಪಾಲ್ಗೊಂಡಿದ್ದಕ್ಕಾಗಿ ಸ್ಟಾರ್ ಆಟಗಾರರಾದ ಯಾಸಿರ್ ಶಾ, ಇಮ್ರಾನ್ ನಝೀರ್ ಮತ್ತು ಮೊಹಮ್ಮದ್ ಇರ್ಫಾನ್ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರಿಗೆ ಪಿಸಿಬಿ ಎರಡು ವರ್ಷಗಳ ಕಾಲ ನಿಷೇಧ ಹೇರಿದೆ. ಏನಿದು ವಿವಾದ? ಝಾಂಬಿಯಾದ ಲುಸಾಕಾದಲ್ಲಿ ‘ಏಷ್ಯನ್ ಲೆಜೆಂಡ್ಸ್ ಲೀಗ್‌’ ಎಂಬ ಟಿ20 ಟೂರ್ನಿಯನ್ನು ಆಯೋಜಿಸಲಾಗಿತ್ತು. ಆದರೆ ಈ ಲೀಗ್‌ಗೆ ಝಾಂಬಿಯಾ…

Read More

GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ – Kannada News | CM DK Shivakumar Outlines Greater Bengaluru Authoritys Bidadi Project and Farmer Compensation

ಬೆಂಗಳೂರು, ಆಗಸ್ಟ್ 09: ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ನಮ್ಮ ಸರ್ಕಾರ ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ಉತ್ತಮ ರಸ್ತೆಗಳು, ಮೆಟ್ರೋ ಸೌಲಭ್ಯ, ಕ್ರೀಡಾಂಗಣ, ವಸತಿ ಮತ್ತು ಉದ್ಯಾನವನಗಳನ್ನು ಒಳಗೊಂಡ ಒಂದು ಸಮಗ್ರ AI ಸಿಟಿಯಾಗಿ ರೂಪುಗೊಳ್ಳಲಿದೆ. ಈ ಗ್ರೇಟರ್ ಬೆಂಗಳೂರು ಅಥಾರಿಟಿ (GBDA) ಯೋಜನೆಯ ಮುಖ್ಯ ಉದ್ದೇಶಗಳು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ರೈತಾಪಿ ಜನರಿಗೆ ಉತ್ತಮ ಬದುಕು ಕಲ್ಪಿಸುವುದು ಹಾಗೂ ಬೆಂಗಳೂರು ದಕ್ಷಿಣ…

Read More

‘ತಲೆ ಬೋಳಿಸಿಕೊ, ಸಗಣಿ ಮೆತ್ತಿಕೊ’: ಬಿಗ್​​ಬಾಸ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆ – Kannada News | Bigg Boss Kannada Agnipareekshe, contestants asks to shave head

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಇನ್ನೊಂದು ವಾರದಲ್ಲಿ ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​​ಬಾಸ್ ಮನೆಗೆ ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯರು ಸಹ ಎಂಟ್ರಿ ಕೊಡಲಿದ್ದಾರೆ. ಈಗಾಗಲೇ ಹಲವು ಸ್ಪರ್ಧಿಗಳ ಆಯ್ಕೆ ನಡೆದಿದೆ. ಆದರೆ ಇನ್ನೂ ಕೆಲವು ಸ್ಪರ್ಧಿಗಳ ಆಯ್ಕೆ ನಡೆಯುತ್ತಿದ್ದು, ಲಕ್ಷಾಂತರ ಆಕಾಂಕ್ಷಿಗಳ ಪೈಕಿ ಕೆಲವರನ್ನು ಆಯ್ಕೆ ಮಾಡಿ ಅವರಿಗೆ ಕೆಲವು ಪರೀಕ್ಷೆಗಳನ್ನು ನೀಡಿ ಅದರಲ್ಲಿ ಪಾಸ್ ಆಗುವವರನ್ನು ಬಿಗ್​​ಬಾಸ್ ಮನೆಗೆ ಕಳಿಸಲಾಗುತ್ತಿದೆ. ಈ ಅಗ್ನಿಪರೀಕ್ಷೆ, ಎಂಟಿವಿಯ ರೋಡೀಸ್ ಅನ್ನು ನೆನಪಿಸುತ್ತಿದೆ. ಇದೀಗ…

Read More

IOB Recruitment 2026: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ! – Kannada News | IOB LBO Recruitment 2026: Apply Online for 250 Local Bank Officer Posts Before August 24

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ಒಳ್ಳೆಯ ಸುದ್ದಿಯನ್ನು ನೀಡಿದೆ. ಜೆಎಂಜಿಎಸ್-ಐ (JMGS-I – Scale I) ಕೇಡರ್‌ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officer – LBO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 250 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಿದ ರಾಜ್ಯದಲ್ಲಿಯೇ ನಿಯೋಜನೆ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 24 ರೊಳಗೆ ಆನ್‌ಲೈನ್ ಮೂಲಕ…

Read More