ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ನಡೆದಿದೆ. ಫೆಬ್ರವರಿ 26ರಂದು ನಡೆದ ಈ ವಿವಾಹ ಸಮಾರಂಭದ ಫೋಟೋಗಳು ವೈರಲ್ ಆಗಿವೆ.
ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ನಡೆದಿದೆ. ಫೆಬ್ರವರಿ 26ರಂದು ನಡೆದ ಈ ವಿವಾಹ ಸಮಾರಂಭದ ಫೋಟೋಗಳು ವೈರಲ್ ಆಗಿವೆ.
ಪೊಲೀಸರಿಂದ ಪರಿಶೀಲನೆImage Credit source: tv9 kannada
ಬೆಂಗಳೂರು, ಫೆಬ್ರವರಿ 26: ನಗರದಲ್ಲಿ ವಿದೇಶಿಗರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನಲೆ ಪೊಲೀಸರು (police) ಅಲರ್ಟ್ ಆಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನೆಲೆಸಿರುವ ಅಕ್ರಮ ವಿದೇಶಿಗರ (Illegal Foreigners) ಪತ್ತೆಗೆ ಖಾಕಿ ಪಡೆ ಮುಂದಾಗಿದೆ. ಕಮಿಷನರ್ ಸೂಚನೆ ಬೆನ್ನಲ್ಲೇ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಒಂದು ವೇಳೆ ಅಕ್ರಮ ವಲಸಿಗರಿಗೆ ಜಾಗ ಕೊಟ್ಟರೆ ಮನೆ ಮಾಲಿಕರಿಗೂ ಸಂಕಷ್ಟ ತಪ್ಪಿದ್ದಲ್ಲ.
ಬೆಂಗಳೂರಿನ ಆಯಾ ವಿಭಾಗದಲ್ಲಿ ಅನುಮಾನಿತ ಸ್ಥಳಗಳಲ್ಲಿ ಪೊಲೀಸರು ತಲಾಶ್ ನಡೆಸಿದ್ದಾರೆ. ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದಾರೆ. ನಿನ್ನೆ ಒಂದು ದಿನವೇ ಸುಮಾರು 2000ಕ್ಕೂ ಹೆಚ್ಚು ವಿದೇಶಿಗರ ವಿಚಾರಣೆ ಮಾಡಲಾಗಿದೆ. ಇದರಲ್ಲಿ ಬಹುತೇಕ ವಿದೇಶಿಕರು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಅಕ್ರಮವಾಗಿ ನೈಜೀರಿಯನ್ಸ್ ಹಾಗೂ ಬಾಂಗ್ಲಾ ವಲಸಿಗರು ನೆಲೆಸಿರುವುದು ಪತ್ತೆಯಾಗಿದೆ. ಸದ್ಯ ಅಕ್ರಮವಾಗಿ ನೆಲೆಸಿರುವ ಎಲ್ಲರ ವಿಚಾರಣೆ ನಡೆದಿದೆ. ಎಲ್ಲಿಂದ? ಯಾವಾಗ? ಯಾರು ಕರೆತಂದರು ಎಂದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ
ವೀಸಾ ವೆರಿಫಿಕೇಶನ್ ಜೊತೆಗೆ ಫಾರ್ಮ್ ಸಿ ಮತ್ತು ಇತರೆ ಬೇರೆ ದಾಖಲಾತಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಆಗದಂತೆ ಲೈವ್ ಕ್ಯಾಮೆರಾ ಬಳಸಿ ಆಯಾ ನಗರಗಳ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಇನ್ನು ಮನೆಯ ಮಾಲೀಕರು ಮತ್ತು ವಿದೇಶೀಯರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಮಾಲೀಕರು ಫಾರ್ಮ್ ಸಿ ಮಾಹಿತಿಯನ್ನು ಸ್ಥಳೀಯ ಠಾಣೆಗೆ ನೀಡಬೇಕು. ಇಲ್ಲವಾದಲ್ಲಿ ಅವರನ್ನು ಡಿಪೋಟೇಷನ್ (ಪ್ರತಿನಿಧಿತ್ವ) ಮಾಡುವ ಕೆಲಸ ಪೊಲೀಸರು ಇನ್ಮುಂದೆ ಮಾಡಲಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
ಸದ್ಯ ಬೆಂಗಳೂರಿನ ಮೂಲೆ ಮೂಲೆಯಲ್ಲೂ ತಲಾಶ್ ನಡೆಸಲು ಕಮಿಷನರ್ ಸೂಚನೆ ಕೊಟ್ಟಿದ್ದಾರೆ. ಅದರಂತೆ ಡ್ರಗ್ಸ್ ಪೆಡ್ಲಿಂಗ್ ಸೇರಿ ಅಕ್ರಮ ತಡೆಯಲು ಪೊಲೀಸರು ಮುಂದಾಗಿದ್ದಾರೆ.
ವರದಿ: ವಿಕಾಸ್ ಟಿವಿ9, ಬೆಂಗಳೂರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಧಾರವಾಡ, (ಫೆಬ್ರವರಿ 26): ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.
ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರ ಸ್ಥಾನವನ್ನು ವಹಿಸಿಕೊಂಡ ಸುನೇತ್ರಾ ಪವಾರ್ ಅವರು ಎನ್ಸಿಪಿಯ ರಾಷ್ಟ್ರೀಯ ಮುಖ್ಯಸ್ಥರಾಗಲಿದ್ದಾರೆ ಎಂಬ ಸುದ್ದಿ ಕಳೆದ ವಾರ ಪಕ್ಷದ ಶಾಸಕರು ಅವರ ನಾಮನಿರ್ದೇಶನವನ್ನು ಬೆಂಬಲಿಸಿದ ನಂತರ ಹೊರಹೊಮ್ಮಿತ್ತು. ಇಂದು ಅಧಿಕೃತ ಘೋಷಣೆ ಹೊರಬಿದ್ದಿದೆ.
ಇದನ್ನೂ ಓದಿ: “ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?
ಈ ತಿಂಗಳ ಆರಂಭದಲ್ಲಿ ಸುನೇತ್ರಾ ಪವಾರ್ ಅವರು ತಮ್ಮ ಪತಿ ಮರಣ ಹೊಂದಿದ 13 ದಿನಗಳ ನಂತರ ಉಪ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರ ವಹಿಸಿಕೊಂಡರು.
आज राष्ट्रवादी काँग्रेस पक्षाचे ‘राष्ट्रीय अधिवेशन २०२६’ यशस्वीरीत्या पार पडले. या अधिवेशनात मला पक्षाच्या राष्ट्रीय अध्यक्ष पदाची जबाबदारी सर्वानुमते सोपवून सर्वांनी माझ्यावर जो विश्वास व्यक्त केला, त्याबद्दल मी पक्षातील सर्व ज्येष्ठ नेते, पदाधिकारी, कार्यकर्ते भगिनी-बंधू आणि… pic.twitter.com/HbbJosXvxb
— Sunetra Ajit Pawar (@SunetraA_Pawar) February 26, 2026
“ಅಜಿತ್ ಪವಾರ್ ಅವರ ಅಪೂರ್ಣ ಕನಸುಗಳನ್ನು ನನಸಾಗಿಸುವುದು, ರೈತರು, ಮಹಿಳೆಯರು, ಯುವಕರು ಮತ್ತು ಸಾಮಾನ್ಯ ನಾಗರಿಕರ ನಿರೀಕ್ಷೆಗಳಿಗೆ ನ್ಯಾಯ ಒದಗಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ. ಅವರ ಪರಂಪರೆಯನ್ನು ಉಳಿಸಿಕೊಳ್ಳಲು ಮತ್ತು ಬಲವಾದ ಮತ್ತು ಹೆಚ್ಚು ಸಮರ್ಥ ಮಹಾರಾಷ್ಟ್ರವನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸುನೇತ್ರಾ ಪವಾರ್ ಇಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರಿ ಹಂಚಿಕ ಮುಸುಕಿನ ಗುದ್ದಾಟದ ನಡುವೆ ರಾಬರ್ಟ್ ವಾದ್ರಾ ನಿಗೂಢವಾಗಿ ಬೆಂಗಳೂರಿಗೆ ಬಂದು ಕೆಲ ನಾಯಕರ ಜೊತೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ. 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಪಠ್ಯ ಸೇರಿಸಿದ್ದರಿಂದ ಸುಪ್ರೀಂ ಕೋರ್ಟ್ ಆ ಪುಸ್ತಕದ ಮೇಲೆ ಸಂಪೂರ್ಣ ನಿಷೇಧ ಹೇರಿತು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ
ಈ ವಿಷಯವನ್ನು ತಮ್ಮ ಗಮನಕ್ಕೆ ತಂದ ತಕ್ಷಣ ತ್ವರಿತ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಪುಸ್ತಕದ ಎಲ್ಲಾ ಪ್ರತಿಗಳನ್ನು ಹಿಂಪಡೆಯಲು ಮತ್ತು ಅವು ಶಾಲೆಗಳಿಗೆ ತಲುಪದಂತೆ ನೋಡಿಕೊಳ್ಳಲು NCERTಗೆ ಸೂಚಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.
VIDEO | Jamshedpur: After the Supreme Court banned an NCERT textbook chapter on judicial corruption and issued contempt notices to the NCERT Director and a ministry official, Union Education Minister Dharmendra Pradhan (@dpradhanbjp) says, “We respect the judiciary, and whatever… pic.twitter.com/L97u7gK2Gp
— Press Trust of India (@PTI_News) February 26, 2026
ಅಧ್ಯಾಯವನ್ನು ಹೇಗೆ ತಯಾರಿಸಲಾಗಿದೆ ಮತ್ತು ಅನುಮೋದಿಸಲಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಅವರು ಘೋಷಿಸಿದರು. ಇಂತಹ ದೋಷ ಮರುಕಳಿಸುವುದಿಲ್ಲ ಎಂದು ನ್ಯಾಯಾಂಗಕ್ಕೆ ಭರವಸೆ ನೀಡಿದ ಅವರು ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ ಕ್ಲಿಯರ್ ಮಾಡಲು ಬ್ಯಾಂಕ್ ಸಿಬ್ಬಂದಿ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಚೊಕ್ಕಣ್ಣ ಗೌಡ 10 ರೂ ಹಣ ಕೊಟ್ಟು ಸಾಲ ಕ್ಲಿಯರ್ ಮಾಡಿದ್ದಾರೆ. ರಸಿದಿಯಲ್ಲಿ 9 ರೂ 34 ಪೈಸೆ ಉಲ್ಲೇಖಿಸಿ 66 ಪೈಸೆ ವಾಪಸ್ ಕೊಟ್ಟಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸಾವಿರಾರು ಕೋಟಿ ಸಾಲ ಮಾಡಿ ಊರು ಬಿಟ್ಟವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಸಾಲ ಮಾಡಿ ವಾಪಸ್ ಕಟ್ಟುವ ಬಡ ರೈತರಿಗೆ ತೊಂದರೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
2026 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತ್ತಾದರೂ, ತಂಡದ ಬ್ಯಾಟಿಂಗ್ ವಿಭಾಗ ಮಾತ್ರ ಆಡಳಿತ ಮಂಡಳಿಯ ದೊಡ್ಡ ತಲೆನೋವಾಗಿತ್ತು. ಏಕೆಂದರೆ ಪ್ರಮುಖ ಬ್ಯಾಟ್ಸ್ಮನ್ಗಳು ಲಯ ಕಳೆದುಕೊಂಡಿದ್ದರು. ಇದರ ಪರಿಣಾಮವಾಗಿ ಟೀಂ ಇಂಡಿಯಾ, ಸೌತ್ ಆಫ್ರಿಕಾ ವಿರುದ್ಧ ತನ್ನ ಮೊದಲ ಸೂಪರ್ 8 ಪಂದ್ಯವನ್ನು ಹೀನಾಯವಾಗಿ ಸೋತಿತ್ತು.
ಇದೀಗ ಸೋಲಿನಿಂದ ಪಾಠ ಕಲಿತಿರುವ ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳು ಲಯಕಂಡುಕೊಂಡಿದ್ದಾರೆ. ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ತಂಡದ ಎಲ್ಲಾ ಬ್ಯಾಟ್ಸ್ಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಇದರ ಪರಿಣಾಮವಾಗಿ ಟೀಂ ಇಂಡಿಯಾ 20 ಓವರ್ಗಳಲ್ಲಿ ಬರೋಬ್ಬರಿ 256 ರನ್ ಕಲೆಹಾಕಿತು.
ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ 55 ಬಾರಿಸಿದರೆ, ಹಾರ್ದಿಕ್ ಪಾಂಡ್ಯ ಅಜೇಯ 50 ಮತ್ತು ತಿಲಕ್ ವರ್ಮಾ ಅಜೇಯ 44 ರನ್ಗಳ ಕಾಣಿಕೆ ನೀಡಿದರು. ಇವರ ಜೊತೆಗೆ ಇಶಾನ್ ಕಿಶನ್ 38, ಸೂರ್ಯ 33 ರನ್ ಮತ್ತು ಸಂಜು ಸ್ಯಾಮ್ಸನ್ 24 ರನ್ ಬಾರಿಸಿ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.
ಈ ಪಂದ್ಯದಲ್ಲಿ ಭಾರತ 256 ರನ್ ಕಲೆಹಾಕುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ದಾಖಲೆ ನಿರ್ಮಿಸಿದೆ. ಇದಕ್ಕೂ ಮೊದಲು ಭಾರತ ತಂಡ 2007 ರಲ್ಲಿ ಡರ್ಬನ್ನಲ್ಲಿ ಇಂಗ್ಲೆಂಡ್ ವಿರುದ್ಧ 218 ರನ್ ಬಾರಿಸಿದ್ದು ಟಿ20 ವಿಶ್ವಕಪ್ನಲ್ಲಿ ಭಾರತದ ಅತ್ಯಧಿಕ ಸ್ಕೋರ್ ಆಗಿತ್ತು. ಇದೀಗ ಜಿಂಬಾಬ್ವೆ ವಿರುದ್ಧ 256 ರನ್ ಬಾರಿಸಿರುವ ಟೀಂ ಇಂಡಿಯಾ 19 ವರ್ಷಗಳ ಹಿಂದಿನ ಅತ್ಯಧಿಕ ಸ್ಕೋರ್ ದಾಖಲೆಯನ್ನು ಮುರಿದಿದೆ.
ಆದಾಗ್ಯೂ ಟೀಂ ಇಂಡಿಯಾ ಕೇವಲ 4 ರನ್ಗಳಿಂದ ವಿಶ್ವ ದಾಖಲೆ ನಿರ್ಮಿಸುವುದರಿಂದ ವಂಚಿತವಾಯಿತು. ವಾಸ್ತವವಾಗಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ತಂಡಗಳ ಪಟ್ಟಿಯಲ್ಲಿ 260 ರನ್ ಬಾರಿಸಿರುವ ಶ್ರೀಲಂಕಾ ತಂಡ ಮೊದಲ ಸ್ಥಾನದಲ್ಲಿದೆ. ಲಂಕಾ ಪಡೆ 2007 ರ ಟಿ20 ವಿಶ್ವಕಪ್ನಲ್ಲಿ ಕೀನ್ಯಾ ವಿರುದ್ಧ ಈ ಮೊತ್ತ ಕಲೆಹಾಕಿತ್ತು.
ಇಂದಿನ ಪಂದ್ಯದಲ್ಲಿ ಭಾರತ ರ 4 ರನ್ ಬಾರಿಸಿದ್ದರೆ, ಅತಿ ಹೆಚ್ಚು ಮೊತ್ತ ಕಲೆಹಾಕಿದ ವಿಶ್ವ ದಾಖಲೆಗೆ ಕೊರಳೊಡ್ಡುತ್ತಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಆದಾಗ್ಯೂ ಭಾರತ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಐದನೇ ಅತ್ಯಧಿಕ ಮೊತ್ತ ದಾಖಲಿಸಿದ ಸಾಧನೆ ಮಾಡುವಲ್ಲಿ ಯಶಸ್ವಿಯಾಯಿತು.
ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಜೊತೆಗೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಹಿನ್ನೆಲೆ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದ್ದು, ಒಂದು ವೇಳೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತಾ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳು ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಹಾಗೂ ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ವೃತ್ತಿಪರ ಮತ್ತು ನೈತಿಕ ಜವಾಬ್ದಾರಿಯನ್ನು ಹೊಂದಿರುವುದರಿಂದ, ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ಮನಗಂಡು ಮುಷ್ಕರದಿಂದ ಹಿಂದೆ ಸರಿದು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಕಾನೂನಿನ ಅಡಿ ಲಭ್ಯವಿರುವ ಮಾರ್ಗಗಳನ್ನು ಬಳಿಸಿ ಬಗೆಹರೆಸುವುದು ಅಗತ್ಯವಾಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದೆಂದು ತಿಳಿಸಲಾಗಿದೆ.
ಇದನ್ನೂ ಓದಿ: ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್!
ಒಂದು ವೇಳೆ ಸಿಬ್ಬಂದಿಗಳು ಯಾವುದೇ ರೀತಿಯ ಮುಷ್ಕರ ನಿಮಿತ ಕೆಲಸದಿಂದ ಗೈರುಹಾಜರಾಗಿದ್ದಲ್ಲಿ ಮತ್ತು ಅದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದಲ್ಲಿ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸರಬರಾಜು ಆಗಬೇಕು. ವೃಂದ, ನೇಮಕಾತಿ ನಿಯಮ 3 ವರ್ಷಕ್ಕೊಮ್ಮೆ ತಿದ್ದುಪಡಿಯಾಗ್ಬೇಕು. ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನ ಪ್ರಕಟಿಸಬೇಕು. ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನ ನೀಡಬೇಕು. ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡಬೇಕು. 6 ಸಾವಿರ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡಬೇಕು. ಖಾಲಿ ಇರುವ ವೈದ್ಯರು, ಅರೆ ವೈದ್ಯರ ಹುದ್ದೆಯನ್ನ ಭರ್ತಿ ಮಾಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ರೆ ಮಾರ್ಚ್ 11 ರಿಂದ 15ರವರೆಗೆ ಒಪಿಡಿ ಬಂದ್ಗೆ ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೂ ರೆಸ್ಪಾನ್ಸ್ ಸಿಗದಿದ್ರೆ 2ನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ವಾರ್ನಿಂಗ್ ಕೊಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ವಾಷಿಂಗ್ಟನ್, ಫೆಬ್ರವರಿ 26: ಅಮೆರಿಕದ ವೈದ್ಯರೊಬ್ಬರು ಫ್ಲೋರಿಡಾದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಅವರು ತನ್ನ 4 ವರ್ಷದ ಮಗಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಂದಿದ್ದರು. ಆರೋಪ ಹೊರಿಸಿ ಹಲವು ತಿಂಗಳುಗಳ ನಂತರ ಜೂನ್ 2025ರಲ್ಲಿ ನಡೆದ ಘಟನೆಯನ್ನು ತಿಳಿಸಲು ಭಾರತೀಯ ಮೂಲದ ವೈದ್ಯರೊಬ್ಬರು 911ಗೆ ಕರೆ ಮಾಡಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಒಕ್ಲಹೋಮ ಮೂಲದ ಮಕ್ಕಳ ತಜ್ಞೆ ಡಾ. ನೇಹಾ ಗುಪ್ತಾ ತಮ್ಮ ಪುಟ್ಟ ಮಗಳ ಸಾವನ್ನು ಮುಚ್ಚಿಹಾಕಲು ಫೋನ್ ಮಾಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
37 ವರ್ಷದ ನೇಹಾ ಗುಪ್ತಾ ಪೊಲೀಸರಿಗೆ ಫೋನ್ ಮಾಡಿ ತನ್ನ ಮಗಳು ಆರಿಯಾ ತಲಥಿ ಬಾಡಿಗೆ ಮನೆಯಿಂದ ಹೊರಬಂದು ಮಧ್ಯರಾತ್ರಿ ಈಜುಕೊಳಕ್ಕೆ ಬಿದ್ದಿದ್ದಾಳೆ. ಅವಳು ಈಜುಕೊಳದ ಆಳಕ್ಕೆ ಬಿದ್ದಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ನಡೆದಾಗ ಮಕ್ಕಳ ವೈದ್ಯೆ ಮತ್ತು ಅವರ ಮಗಳು ಒಕ್ಲಹೋಮದಿಂದ ಫ್ಲೋರಿಡಾದ ಮಿಯಾಮಿಗೆ ಭೇಟಿ ನೀಡಿದ್ದರು.
🇺🇸 📹
PEDIATRA ACUSADA POR MUERTE DE SU HIJA EN PISCINALas cámaras de seguridad captaron a la madre y la niña en la vivienda de alquiler antes del hallazgo en la piscina.
¿Noticias y tendencias? ¡Sigue @ULTIMAHORAENX para MAS!🔔
Neha Gupta pediatra de Oklahoma… pic.twitter.com/ol8cVhh9BR
— ⓍULTIMAHORAENX (@ULTIMAHORAENX) February 26, 2026
ಇದನ್ನೂ ಓದಿ: ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ
ಪೊಲೀಸರು ಬಂದ ನಂತರ ಗೋಳಾಡಿದ ಡಾ. ನೇಹಾ ಗುಪ್ತಾ, ನಾನು ಅವಳನ್ನು ಉಳಿಸಲು ಪ್ರಯತ್ನಿಸಿದೆ, ಆದರೆ ನನಗೆ ಈಜುವುದು ಹೇಗೆಂದು ತಿಳಿದಿಲ್ಲದ ಕಾರಣದಿಂದ ಆಕೆಯನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. “ನಾವು ಮಲಗಿದ್ದೆವು, ನನಗೆ ಏನೋ ಶಬ್ದ ಕೇಳಿಸಿತು. ಅವಳು ಈಜುಕೊಳದಲ್ಲಿ ಬಿದ್ದಿದ್ದಳು. ನಾನು ಅವಳನ್ನು ಉಳಿಸಲು ಪ್ರಯತ್ನಿಸಿದೆ, ಆದರೆ ನನಗೆ ಈಜುವುದು ಹೇಗೆಂದು ತಿಳಿದಿಲ್ಲ. ಹಾಗಾಗಿ ಅವಳನ್ನು ಹೊರಗೆ ತರಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ!
ಆದರೆ, ಶವಪರೀಕ್ಷೆಯ ಸಮಯದಲ್ಲಿ ಆ ಹುಡುಗಿಯ ಶ್ವಾಸಕೋಶ ಅಥವಾ ಹೊಟ್ಟೆಯಲ್ಲಿ ನೀರು ಕಂಡುಬಂದಿಲ್ಲ. ಅವಳನ್ನು ಕೊಳದಲ್ಲಿ ಹಾಕುವ ಮೊದಲೇ ಅವಳು ಸತ್ತಿದ್ದಾಳೆಂದು ಬಯಲಾಯಿತು. ತನಿಖಾಧಿಕಾರಿಗಳು ಅವಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದಾದ ನಂತರ ನೇಹಾ ಗುಪ್ತಾ ಅವರನ್ನು ಬಂಧಿಸಲಾಯಿತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ