ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ – Kannada News | Akashavani Bhadravati FM Upgraded to 10kW: Malenadu Radio Dream Realized in Shivamogga

ಶಿವಮೊಗ್ಗ, ಫೆಬ್ರವರಿ 26: ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್​ಎಂ (FM) ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸಲಾಗಿದೆ. 10 ಕಿಲೋವ್ಯಾಟ್ ಎಫ್​ಎಂ ಟ್ರಾನ್ಸ್‌ಮೀಟರ್ ಲೋಕಾರ್ಪಣೆಗೊಳಿಸಿರುವುದು ದಶಕಗಳ ಕನಸು ನನಸಾದಂತಾಗಿದೆ. ಮಲೆನಾಡು ಎಫ್​​ಎಂ ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ಈ ಎಫ್​ಎಂ ಕೇಂದ್ರದ ಬಾನುಲಿ ಈಗ ಎಲ್ಲೆಡೆ ಕನ್ನಡಿರಿಗೆ ಪಸರಿಸುವಂತಾಗಿದೆ.

10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ

ಮಲೆನಾಡಿಗರ ಬಹು ದಶಕಗಳ ಕನಸು ನನಸಾದಂತಾಗಿದೆ. ಭದ್ರಾವತಿ ಆಕಾಶವಾಣಿ ಭದ್ರಾವತಿ ರೇಡಿಯೋ ಬಾನುಲಿ ಈಗ ಎಲ್ಲೆಡೆ ಪಸರಿಸುವಂತಾಗಿದೆ. ಇದು ಮಲೆನಾಡಿನ ರೇಡಿಯೋ ಕೇಳುಗರಿಗೆ ಹರ್ಷವನ್ನುಂಟು ಮಾಡಿದೆ. ಅದರಂತೆ ಇಂದು 10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ ಮಾಡಲಾಯಿತು.

ಇದನ್ನೂ ಓದಿ: ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗದ ವಿದ್ಯಾನಗರದಲ್ಲಿರುವ ನೂತನ ಎಫ್.ಎಂ. ಕೇಂದ್ರವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ಸಚಿವ ಡಾ. ಎಲ್ ಮುರುಗನ್ ಲೋಕಾರ್ಪಣೆಗೊಳಿಸಿದರು. ಮಲೆನಾಡು ಎಫ್‌.ಎಂ. ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ ಈಗ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದ್ದು, ಶಿವಮೊಗ್ಗದಲ್ಲಿ ಡಿ.ಡಿ. ಚಂದನದ ಟವರ್​ನ್ನು ಇದೀಗ ಎಫ್.ಎಂ. ಕೇಂದ್ರಕ್ಕೆ ಬಳಸಿಕೊಂಡು ಮೇಲ್ದರ್ಜೆಗೇರಿಸಲಾಗಿದೆ.

ಅಲ್ಲದೇ, ಶಿವಮೊಗ್ಗದ ಪಾರ್ಕ್​ಗಳಲ್ಲಿ ಎಫ್.ಎಂ. ರೇಡಿಯೋ ಅಳವಡಿಕೆ ಕಾರ್ಯ ಪೈಲೆಟ್ ಪ್ರಾಜೆಕ್ಟ್ ಆಗಿ ತೆಗೆದುಕೊಳ್ಳಲಾಗುವುದೆಂದು ಕೇಂದ್ರ ಸಚಿವರು ಘೋಷಣೆ ಮಾಡಿದ್ದು, ಶಿವಮೊಗ್ಗ ಬಳಿಕ ಇಡೀ ದೇಶದಲ್ಲಿ ಈ ಯೋಜನೆ ಅಳವಡಿಸಲಾಗುವುದು. ನಮ್ಮ ಇಲಾಖೆ ಮೂಲಕವೇ ಪಾರ್ಕ್​ಗಳಲ್ಲಿ ಎಫ್.ಎಂ. ರೇಡಿಯೋ ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವರು ಘೋಷಿಸಿದ್ದಾರೆ.

ಎಲ್ಲೆಲ್ಲಿ ಪ್ರಸಾರ?

ಅದರಂತೆ, ಎಫ್.ಎಂ. ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸುವುದರಿಂದ ಪ್ರಯೋಜನ ಮತ್ತು ಅನುಕೂಲಗಳು ಬಹಳಷ್ಟಿದ್ದು, ಪ್ರಸ್ತುತ ಭದ್ರಾವತಿಯಲ್ಲಿ ಇರುವ 1 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್​ಮೀಟರ್ ವ್ಯಾಪ್ತಿ 100 ಮೀಟರ್ ಇದ್ದು, ನೂತನ ಅಧಿಕ ಸಾಮರ್ಥ್ಯದ ಟ್ರಾನ್ಸ್​ಮೀಟರ್ ಅಳವಡಿಕೆಯಿಂದ ವ್ಯಾಪ್ತಿ 150 ಮೀಟರ್ ಎತ್ತರದಲ್ಲಿ ಬರುತ್ತದೆ. ಅಂದರೆ ಪ್ರಸಾರ ಸಾಮರ್ಥ್ಯ 10 ಪಟ್ಟು ಹೆಚ್ಚಾಗಲಿದೆ. ಈಗ ಪ್ರಸಾರವಾಗುತ್ತಿರುವ ವ್ಯಾಪ್ತಿಯು ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿದ್ದು, ಇನ್ನು ಮುಂದೆ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಚಿತ್ರದುರ್ಗ ವ್ಯಾಪ್ತಿ ಮತ್ತು ಹಾಸನ, ಉಡುಪಿ, ಉತ್ತರ ಕನ್ನಡ ಹಾಗೂ ತುಮಕೂರು ಜಿಲ್ಲೆಯ ಕೆಲ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೂಡ ಪ್ರಸಾರ ಲಭ್ಯವಾಗಲಿದೆ.

ಇದನ್ನೂ ಓದಿ: ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ

ಒಟ್ಟಾರೆ ಎಫ್.ಎಂ. ಪ್ರಸಾರ ಸೇವೆ ಆರಂಭದಿಂದ ಸಾಮಾನ್ಯ ಕೀಪ್ಯಾಡ್ ಸೇರಿದಂತೆ ಅಂಡ್ರಾಯ್ಡ್ ಮೊಬೈಲ್​​ನಲ್ಲೂ ನ್ಯೂಸ್ ಆನ್ ಏರ್‌ಆಪ್‌ನಲ್ಲಿ ಜಗತ್ತಿನಾದ್ಯಂತ ಕೇಳಬಹುದಾಗಿದೆ. ಇದಲ್ಲದೆ ಕಾರ್ ರೇಡಿಯೋದಲ್ಲಿ ಸುತ್ತಮುತ್ತಲಿನ 80-100 ಕಿಲೋಮೀಟರ್​ವರೆಗೆ ಪ್ರಸಾರದ ವ್ಯಾಪ್ತಿ ಲಭ್ಯವಾಗಿರುವುದು ಮಲೆನಾಡಿಗರಿಗೆ ಸಂತಸದ ವಿಷಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ – Kannada News | Good news for flyers DGCAs Big Relief For Passengers new norms for ticket refund Check details

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿಯನ್ನು ಪೂರ್ಣಗೊಳಿಸಬೇಕು. ಟಿಕೆಟ್‌ಗಳನ್ನು ಬುಕ್ ಮಾಡಿದ 24 ಗಂಟೆಗಳ ಒಳಗೆ ಸರಳವಾದ ಹೆಸರು ತಿದ್ದುಪಡಿಗಳಿದ್ದರೆ ಅದಕ್ಕೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನದ ಅಡಚಣೆಯಿಂದ ಭಾರತೀಯ ವಾಯುಯಾನ ವಲಯವು ತೊಂದರೆಗೊಳಗಾದಾಗ ಈ ರೀತಿ ಟಿಕೆಟ್ ರದ್ದತಿ, ಟಿಕೆಟ್ ಹೆಸರು ಬದಲಾವಣೆ, ದಿನಾಂಕ ಬದಲಾವಣೆಯ ಸಮಸ್ಯೆಗಳು ಬಹಳ ತೀವ್ರಗೊಂಡವು. ಇದೀಗ ಇವುಗಳಿಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು

ಇನ್ಮುಂದೆ, ಪ್ರಯಾಣಿಕರು 48 ಗಂಟೆಗಳ ನಂತರ ಟಿಕೆಟ್‌ಗಳನ್ನು ರದ್ದುಗೊಳಿಸಿದರೆ ಅಥವಾ ಬದಲಾಯಿಸಿದರೆ ಅವರು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅವರು ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಟಿಕೆಟ್‌ಗಳನ್ನು ಬುಕ್ ಮಾಡಿದರೂ ಸಹ ಕೆಲವು ಷರತ್ತುಗಳನ್ನು ಹೊರತುಪಡಿಸಿ ರದ್ದತಿಯ ಸಮಯದಲ್ಲಿ ಅವರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅಲ್ಲದೆ, ಬುಕಿಂಗ್ ಮಾಡಿದ 24 ಗಂಟೆಗಳ ಒಳಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕಗಳಿಲ್ಲದೆ ಹೆಸರಿನಲ್ಲಿ ಕಾಗುಣಿತ ದೋಷ ಅಥವಾ ಇತ್ಯಾದಿ ಸಣ್ಣಪುಟ್ಟ ತಪ್ಪನ್ನು ವಿಮಾನಯಾನ ಸಂಸ್ಥೆಗಳು ಸರಿಪಡಿಸಲಿವೆ. ಆದರೆ, ಇದು ವಿಮಾನಯಾನ ಸಂಸ್ಥೆಯ ಸ್ವಂತ ವೆಬ್‌ಸೈಟ್‌ನಲ್ಲಿ ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಯಾಣಿಕರು ಟ್ರಾವೆಲ್ ಏಜೆಂಟ್‌ಗಳು ಅಥವಾ ಮೂರನೇ ವ್ಯಕ್ತಿಯ ಪೋರ್ಟಲ್‌ಗಳ ಮೂಲಕ ಟಿಕೆಟ್‌ಗಳನ್ನು ಖರೀದಿಸಿದರೆ ಅದಕ್ಕೆ ಈ ನಿಯಮ ಅನವಯವಾಗುವುದಿಲ್ಲ. ಆದರೂ ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ? – Kannada News | Eye Pain and Headaches: When to Worry

ಕಣ್ಣುಗಳ ಮೇಲೆ ನೋವು ಕಂಡುಬರುವುದು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಅನೇಕರು ಅದನ್ನು ತಲೆನೋವಿಗೆ (Headache) ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಹಾಗಾಗಿ ನೋವು ಹೆಚ್ಚಾದಾಗ ಅದಕ್ಕೆ ಸಂಬಂಧಿಸಿದ ವೈದ್ಯರ ಸಲಹೆ ಪಡೆಯುತ್ತಾರೆ. ಅನೇಕರು, ಸಿಟಿ ಸ್ಕ್ಯಾನ್ ಅನ್ನು ಸಹ ಮಾಡುತ್ತಾರೆ, ಆದರೆ ವರದಿಯಲ್ಲಿ ಯಾವುದೇ ಸಮಸ್ಯೆಗಳು ಕೂಡ ಕಂಡುಬರುವುದಿಲ್ಲ. ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇವುಗಳ ಬಗ್ಗೆ ತಿಳಿದುಕೊಂಡು ಮೊದಲ ಹಂತದಲ್ಲಿಯೇ ಅದನ್ನು ತಡೆಗಟ್ಟುವ ಮಾರ್ಗವನ್ನು ಕಂಡುಕೊಳ್ಳಿ.

ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ಹಿರಿಯ ನಿವಾಸಿ ಡಾ. ದೀಪಕ್ ಸುಮನ್ ಹೇಳುವ ಪ್ರಕಾರ, ಕಣ್ಣುಗಳ ಮೇಲೆ ತಲೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಪ್ರಮುಖ ಕಾರಣ ಕನ್ನಡಕದ ಪಾಯಿಂಟ್ ಬದಲಾಗಿರಬಹುದು. ಆಗಾಗ ದೃಷ್ಟಿ ದುರ್ಬಲಗೊಳ್ಳುತ್ತದೆ, ಆದರೆ ವ್ಯಕ್ತಿ ಕನ್ನಡಕದ ಪ್ರಿಸ್ಕ್ರಿಪ್ಷನ್ ಅನ್ನು ಬದಲಾಯಿಸುವುದಿಲ್ಲ. ಈ ಕಾರಣದಿಂದಾಗಿ, ಕಣ್ಣುಗಳ ಮೇಲೆ ಒತ್ತಡವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದು ದೃಷ್ಟಿಯ ಮೇಲೆ ಪರಿಣಾಮ ಬೀರುತ್ತದೆ, ಇದು ಹಣೆಯವರೆಗೆ ವಿಸ್ತರಿಸಿ ನೋವಿಗೆ ಕಾರಣವಾಗುತ್ತದೆ. ಜೊತೆಗೆ ತಲೆಯಲ್ಲಿ ಭಾರ, ನೋವು ಮತ್ತು ಕೆಲವು ಸಂದರ್ಭಗಳಲ್ಲಿ, ದೃಷ್ಟಿ ಮಂದವಾಗುವುದಕ್ಕೂ ಕೂಡ ಕಾರಣವಾಗಬಹುದು.

ಇದನ್ನೂ ಓದಿ: ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ಮೆದುಳಿಗೆ ಸಂಬಂಧಿಸಿದ ಸಮಸ್ಯೆ ಯಾವಾಗ ಬರಬಹುದು?

ಕಣ್ಣುಗಳ ಮೇಲೆ ಮಾತ್ರ ನೋವು ಕಂಡುಬರುತ್ತಿದ್ದರೆ ಅದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಉಂಟುಮಾಡುವುದು ಬಹಳ ವಿರಳ. ಆದರೆ ಇವುಗಳ ಜೊತೆಗೆ ಕೆಲವು ಇತರ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡಬಾರದು. ಅಂದರೆ ಹಣೆಯಿಂದ ಕತ್ತಿನ ಹಿಂಭಾಗದವರೆಗೆ ವಿಸ್ತರಿಸುವ ತಲೆನೋವು, ತಲೆತಿರುಗುವಿಕೆ, ದೇಹದ ಯಾವುದೇ ಭಾಗದಲ್ಲಿ ಹಠಾತ್ ಮರಗಟ್ಟುವಿಕೆ ಅಥವಾ ಪದೇ ಪದೇ ವಾಂತಿ ಮಾಡುವುದು. ಈ ಎಲ್ಲಾ ಲಕ್ಷಣಗಳು ಕಂಡುಬಂದರೆ, ಅದು ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಯಲ್ಲ ಆದರೆ ಮೆದುಳಿಗೆ ಸಂಬಂಧ ಪಟ್ಟ ಸಮಸ್ಯೆ ಎಂದು ಸ್ಪಷ್ಟವಾಗಿ ತಿಳಿಯಬಹುದು. ಇಂತಹ ಲಕ್ಷಣಗಳು ಸಾಮಾನ್ಯವಾಗಿ ಮೆದುಳಿನಲ್ಲಿ ಊತ ಅಥವಾ ಗೆಡ್ಡೆಯಿಂದ ಉಂಟಾಗುತ್ತವೆ. ಹಾಗಾಗಿ ಈ ರೀತಿಯ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ.

ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಸಲಹೆಗಳು:

  • ಪ್ರತಿ 6 ತಿಂಗಳಿಗೊಮ್ಮೆ ಕಣ್ಣುಗಳನ್ನು ಪರೀಕ್ಷಿಸಿಕೊಳ್ಳಿ.
  • ಮೊಬೈಲ್ ಮತ್ತು ಟಿವಿ ನೋಡುವುದನ್ನು ಕಡಿಮೆ ಮಾಡಿ.
  • ಸರಿಯಾದ ಆಹಾರ ಸೇವನೆ ಮಾಡುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ZIM T20 WC Live Score: ಭಾರತ- ಜಿಂಬಾಬ್ವೆ ನಡುವೆ ನಿರ್ಣಾಯಕ ಪಂದ್ಯ – Kannada News | India vs Zimbabwe T20 World Cup 2026 Live Cricket Score IND vs ZIM Today Match Match at Chennai live cricket score and updates in Kannada

LIVE NEWS & UPDATES

  • 26 Feb 2026 06:04 PM (IST)

    India vs Zimbabwe Live Score: ಮುಖಾಮುಖಿ ದಾಖಲೆ

    ಜಿಂಬಾಬ್ವೆ ತಂಡವು ಭಾರತದ ವಿರುದ್ಧ ಭಾರತದ ನೆಲದಲ್ಲಿ 24 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 19 ಏಕದಿನ ಪಂದ್ಯಗಳು ಮತ್ತು ಐದು ಟೆಸ್ಟ್ ಪಂದ್ಯಗಳು ಸೇರಿವೆ. ಜಿಂಬಾಬ್ವೆ ಕೊನೆಯ ಬಾರಿಗೆ ಭಾರತದಲ್ಲಿ ಭಾರತವನ್ನು ಎದುರಿಸಿದ್ದು ಮಾರ್ಚ್ 2002 ರಲ್ಲಿ, ಏಕದಿನ ಪಂದ್ಯದಲ್ಲಿ.

  • 26 Feb 2026 06:02 PM (IST)

    India vs Zimbabwe Live Score: ಎರಡನೇ ಮುಖಾಮುಖಿ

    ಇದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆಯ ಎರಡನೇ ಮುಖಾಮುಖಿಯಾಗಲಿದೆ. 2022 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಮೆಲ್ಬೋರ್ನ್‌ನಲ್ಲಿ ನಡೆದ ಆ ಪಂದ್ಯವನ್ನು ಭಾರತ 71 ರನ್‌ಗಳಿಂದ ಗೆದ್ದುಕೊಂಡಿತು, ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 61 ರನ್ ಬಾರಿಸಿದ್ದರು.

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದು ಭಾರತದಲ್ಲಿ ಟೀಂ ಇಂಡಿಯಾ ವಿರುದ್ಧ ಜಿಂಬಾಬ್ವೆಯ ಮೊದಲ ಟಿ20 ಪಂದ್ಯವಾಗಿದೆ. ಈ ಪಂದ್ಯವು ಉಭಯ ತಂಡಗಳಿಗೂ ಹೆಚ್ಚಿನ ಮಹತ್ವದ್ದಾಗಿದೆ. ಏಕೆಂದರೆ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಸೋತಿರುವುದರಿಂದ ಈ ಪಂದ್ಯವನ್ನು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಗೆದ್ದ ತಂಡಕ್ಕೆ ಸೆಮಿ ಫೈನಲ್ ಕನಸು ಜೀವಂತವಾಗಿರಲಿದೆ. ಹೀಗಾಗಿ ಎರಡೂ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿವೆ.

Published On – Feb 26,2026 6:01 PM

Source link

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್​ನಲ್ಲಿ ಸ್ಥಾನ ಖಚಿತವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಮೂಲಕ ಸೆಮಿಫೈನಲ್ ಟಿಕೆಟ್ ಪಡೆದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ 176 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.1 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.

Source link

ಉಡುಪಿ: ಕರಾವಳಿಯಲ್ಲಿ ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು – Kannada News | Udupi Water Crisis: Kindi Annekattu Management Fails, Saltwater Threatens Fresh Supply

ಉಡುಪಿ, ಫೆಬ್ರವರಿ 26: ಕರಾವಳಿ ಜಿಲ್ಲೆಯ ಉಡುಪಿಯಲ್ಲಿ (Udupi) ಈ ಬಾರಿ ಅತೀ ಹೆಚ್ಚು ಮಳೆಯಾಗಿದೆ. ಬೇಸಿಗೆ ಬಂದರೆ ಕುಡಿಯುವ ನೀರಿಗೆ (Water) ಸಮಸ್ಯೆ ಎದುರಾಗುವುದಿಲ್ಲ ಅಂದುಕೊಂಡ್ರೆ ಅದು ಹುಸಿಯಾಗಿದೆ. ಈಗಾಗಲೇ ಹಲವು ಕಡೆ ನೀರಿನ‌ ಸಮಸ್ಯೆ ಆರಂಭವಾಗಿದೆ. ಸರಿಯಾದ ನೀರಿನ‌ ನಿರ್ವಹಣೆ ಇಲ್ಲದೆ ಇರುವುದೇ ಸಮಸ್ಯೆಗೆ ಮೂಲ ಕಾರಣ. 600 ಕಿಂಡಿ ಅಣೆಕಟ್ಟುಗಳಲ್ಲಿ ಬಹುತೇಕ ಸಿಹಿ ನೀರಿನ ಮೂಲವಾಗಿ ಉಳಿದಿಲ್ಲ.

600ಕ್ಕೂ ಹೆಚ್ಚು ಕಡೆಗಳಲ್ಲಿ ಕಿಂಡಿ ಅಣೆಕಟ್ಟು

ಕರಾವಳಿಯಲ್ಲಿ ನದಿಗಳು ಸಮುದ್ರ ತೀರ ಪ್ರದೇಶದಲ್ಲಿ ಹರಿಯುವುದರಿಂದ ಉಪ್ಪು ನೀರಿನ ಸಮಸ್ಯೆ ಹೆಚ್ಚು. ಹಾಗಾಗಿ 600ಕ್ಕೂ ಹೆಚ್ಚು ಕಡೆಗಳಲ್ಲಿ ಕಿಂಡಿ ಅಣೆಕಟ್ಟುಗಳನ್ನು ಮಾಡಲಾಗಿದೆ. ಆದರೆ ಈ ಪುಟ್ಟ ಅಣೆಕಟ್ಟುಗಳ ನಿರ್ವಹಣೆ ನಿಜಕ್ಕೂ ಸವಾಲಾಗಿದೆ. ಮರದ ಹಲಗೆಗಳನ್ನು ಹಾಕಿ ನೀರಿನ ಹರಿವು ತಡೆಯುವ ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಕಷ್ಟ ಸಾಧ್ಯವಾಗಿದೆ. ಹಾಗಾಗಿ ಆಧುನಿಕ ತಂತ್ರಜ್ಞಾನ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಬೇಕಿದೆ.

ಇದನ್ನೂ ಓದಿ: ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ

ಕರಾವಳಿಯಲ್ಲಿ ಕಿಂಡಿ ಅಣೆಕಟ್ಟುಗಳ ಅದ್ವಾನ, ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಅಣೆಕಟ್ಟಿಗೆ ಹಲಗೆ ಹಾಕುವ ಪರಿಶ್ರಮ ಸಕಾಲದಲ್ಲಿ ಹಲಗೆ ಹಾಕದಿದ್ದರೆ ಉಪ್ಪು ನೀರಿನ ಸಮಸ್ಯೆ ಶುರುವಾಗುತ್ತದೆ. ಪಶ್ಚಿಮ ಕಡಲಿಗೆ ಹೊಂದಿಕೊಂಡಿರುವ ನದಿಗಳಲ್ಲಿ ಉಪ್ಪುನೀರಿನ ಹರಿವು ಉಪ್ಪು ನೀರು ತಡೆಗೆ ಕಿಂಡಿ ಅಣೆಕಟ್ಟು ಅನಿವಾರ್ಯ ಮಳೆಗಾಲ ಆರಂಭವಾಗುತ್ತಿದ್ದಂತೆ ಹಲಗೆ ತೆಗೆಯಬೇಕು ಇಲ್ಲದಿದ್ದರೆ ಮತ್ತೊಂದು ಸಮಸ್ಯೆ ಶುರುವಾಗುತ್ತದೆ.

ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಸವಾಲು

600 ಕಿಂಡಿ ಅಣೆಕಟ್ಟುಗಳು ಇದ್ದರೂ ಜಿಲ್ಲೆಯಲ್ಲಿ ಅದರ ನಿರ್ವಹಣೆ ಸವಾಲಾಗಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೇ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಕಿಂಡಿ ಅಣೆಕಟ್ಟುಗಳಲ್ಲಿ ಮರದ ಹಲಗೆ ಜೋಡಿಸಿ ಮಣ್ಣು ಸೇರಿಸಿ ಕಟ್ಟುವ ಕಾರಣಕ್ಕೆ ಸಿಹಿನೀರಿಗೆ ಉಪ್ಪು ನೀರು ಮಿಶ್ರಿತವಾಗಿ ಕುಡಿಯುವುದಕ್ಕೆ, ಕೃಷಿಗೆ ಯೋಗ್ಯವಲ್ಲದ ನೀರಾಗಿ ಪರಿವರ್ತನೆ ಆಗುತ್ತೆ. 600 ಕಿಂಡಿ ಅಣೆಕಟ್ಟು 420 ಫೈಬರ್ ಅಳವಡಿಕೆ ಅಣೆಕಟ್ಟುಗಳು ಅದ್ರೂ 240 ಕಿಂಡಿ ಅಣೆಕಟ್ಟು ಸಮುದ್ರ ಹತ್ತಿರವಿರುವ ಅಣೆಕಟ್ಟು ಸಾಂಪ್ರದಾಯಿಕ ಕ್ರಮದಲ್ಲಿ ಮರದ ಹಲಗೆ ಜೋಡಿಸಿ ನಿರ್ಮಾಣ ಮಾಡಲಾಗುತ್ತಿದೆ. ಹಾಗಾಗಿ ಉಪ್ಪು ನೀರು ಮಿಶ್ರಣಗೊಂಡು ನೀರು ಉಪಯೋಗಕ್ಕೆ ಇಲ್ಲದೆ, ಬೇಸಿಗೆಯಲ್ಲಿ ನೀರಿನ ಸಮಸ್ಯೆಗೆ ಕಾರಣವಾಗುತ್ತಿದೆ.

ಇದನ್ನೂ ಓದಿ: Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕಾದರೆ ಅಧುನಿಕ ತಂತ್ರಜ್ಞಾನ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಬೇಕು. ಸಣ್ಣ ನೀರಾವರಿ ಇಲಾಖೆ ಹೊರತಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಣೆಕಟ್ಟು ನಿರ್ವಹಣೆ ಸಮಿತಿ ರಚನೆ ಮಾಡಬೇಕು. ಅಣೆಕಟ್ಟು ಯೋಗ್ಯ ನಿವರ್ಹಣೆ ಒಂದಿಷ್ಟು ಅನುದಾನವನ್ನು ಮೀಸಲು ಇಟ್ಟರೆ ಸರ್ಕಾರದ ಕುಡಿಯುವ ನೀರಿಗಾಗಿ ಒನ್​​ ಟು ಡಬ್ಬಲ್ ಖರ್ಚು ಮಾಡುವ ಪ್ರಮೇಯ ಕೂಡ ತಪ್ಪುತ್ತೆ. ಈ ಬಗ್ಗೆ ಸರ್ಕಾರ ಜಿಲ್ಲಾಡಳಿತ ಸಣ್ಣ ನೀರಾವರಿ ಇಲಾಖೆ ಗಮನ ಹರಿಸಿ ಸೂಕ್ತ ಕ್ರಮಕೈಗೊಂಡರೆ ಬಹುತೇಕ ನೀರಿನ ಸಮಸ್ಯೆಗೆ ಸುಲಭವಾಗಿ ಪರಿಹಾರ ಸಿಗುವುದು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್​ಟಿಎ ಏರ್ಪಡುವ ಸಾಧ್ಯತೆ – Kannada News | India Israel sign for several agreements and MoUs during Narendra Mod’s visit

ಇಸ್ರೇಲ್ ಪ್ರಧಾನಿ ಜೊತೆ ನರೇಂದ್ರ ಮೋದಿ

ಜೆರುಸಲೆಂ, ಫೆಬ್ರುವರಿ 26: ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್ ಭೇಟಿ ಹಲವು ಫಲಗಳನ್ನು ನೀಡುತ್ತಿದೆ. ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಶಿಕ್ಷಣ, ಕೃಷಿ ಹಾಗೂ ಇನ್ನೂ ಹಲವು ಸೆಕ್ಟರ್​ಗಳಲ್ಲಿ ಭಾರತ ಹಾಗೂ ಇಸ್ರೇಲ್ ದೇಶಗಳ ನಡುವೆ ಬಹು ಒಪ್ಪಂದಗಳು ಹಾಗೂ ಎಂಒಯುಗಳಾಗಿವೆ. ಈಗಾಗಲೇ ಪ್ರಬಲವಾಗಿರುವ ಎರಡೂ ದೇಶಗಳ ಸಂಬಂಧ (India Israel relationship) ಇದೀಗ ಮತ್ತಷ್ಟು ಗಟ್ಟಿಗೊಂಡಿದೆ.

ಇಸ್ರೇಲ್ ಕೆಲ ತಂತ್ರಜ್ಞಾನಗಳಲ್ಲಿ ಕ್ಷಮತೆ ಹೊಂದಿದೆ. ಡಿಫೆನ್ಸ್ ಮತ್ತು ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಇನ್ನೋವೇಶನ್​ಗಳನ್ನು ಮಾಡಿದೆ. ಕೃಷಿ ಮಾತ್ರವಲ್ಲ, ಹಲವು ಕ್ಷೇತ್ರಗಳಲ್ಲಿ ಇಸ್ರೇಲೀ ಸಂಸ್ಥೆಗಳು ನಾವೀನ್ಯತೆ ಹೊಂದಿವೆ. ಇಸ್ರೇಲ್ ಜೊತೆಗಿನ ಈ ಸಂಬಂಧದಿಂದ ಭಾರತಕ್ಕೆ ವಿವಿಧ ಸ್ತರಗಳಲ್ಲಿ ಲಾಭವಾಗುವ ನಿರೀಕ್ಷೆ ಇದೆ. ಎರಡೂ ದೇಶಗಳ ನಡುವೆ ಡಿಫೆನ್ಸ್ ಸಹಕಾರ ಹೆಚ್ಚಬಹುದು.

ಇದನ್ನೂ ಓದಿ: ಆಂತರಿಕ ಜಗಳಗಳು ಅಲ್ಲೂ ಇದ್ವು, ಆದ್ರೆ ಇಸ್ರೇಲ್​​ನ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಭಹಿಷ್ಕರಿಸಲಿಲ್ಲ

ಭಾರತೀಯರ ಕೌಶಲ್ಯಗಳೂ ಕೂಡ ಇಸ್ರೇಲ್​ಗೆ ವರದಾನವಾಗಿವೆ. ಇಸ್ರೇಲ್​ನ ಕಟ್ಟಡ ನಿರ್ಮಾಣ ಮತ್ತು ಕೇರ್​ಗಿವಿಂಗ್ ಸೆಕ್ಟರ್​ಗಳಲ್ಲಿ ಭಾರತೀಯರ ಕೊಡುಗೆ ಗಮನಾರ್ಹವಾಗಿದೆ. ಇಸ್ರೇಲ್ ಭೇಟಿ ವೇಳೆ ನರೇಂದ್ರ ಮೋದಿ ಅವರು ಈ ವಿಚಾರ ಪ್ರಸ್ತಾಪಿಸಿ 2023ರ ಮ್ಯಾನ್​ಪವರ್ ಮೊಬಿಲಿಟಿ ಅಗ್ರೀಮೆಂಟ್​ಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಎರಡೂ ದೇಶಗಳಿಗೂ ಲಾಭ ತರುವಂತಹ ಟ್ರೇಡ್ ಡೀಲ್ ಸದ್ಯದಲ್ಲೇ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ ಹಲವು ವಿಚಾರಗಳ ವಿನಿಮಯ ಮಾಡಿದ್ದಾರೆ. ಬಹಳ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದದ ವಿಚಾರವನ್ನೂ ಚರ್ಚಿಸಿದ್ದಾರೆ. ಈ ಭೇಟಿ ಬಳಿಕ ಇಬ್ಬರೂ ಕೂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿ, ‘ಪರಸ್ಪರ ಲಾಭವಾಗುವಂತಹ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಲು ಕಾರ್ಯವಹಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು

ಇವರ ಹೇಳಿಕೆ ಬಹಳ ಮಹತ್ವದ್ದೆನಿಸಿದೆ. ಭಾರತ ಮತ್ತು ಇಸ್ರೇಲ್ ನಡುವೆ ಎಫ್​ಟಿಎಗಾಗಿ ನಡೆದಿರುವ ಮಾತುಕತೆ ಮತ್ತು ಸಂಧಾನಗಳು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಅಂತಿಮಗೊಳ್ಳುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:02 pm, Thu, 26 February 26

Source link

14 ಎಸೆತಗಳಲ್ಲಿ ಅರ್ಧಶತಕ; 19 ಎಸೆತಗಳಲ್ಲಿ 63 ರನ್ ಚಚ್ಚಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi’s Blazing 14 Ball Fifty: U19 Star Shines in DY Patil T20

ಕೆಲವು ದಿನಗಳ ಹಿಂದೆ ನಡೆದಿದ್ದ ಅಂಡರ್ 19 ವಿಶ್ವಕಪ್​ ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಸೂರ್ಯವಂಶಿ ಇದೀಗ ದೇಶಿ ಟೂರ್ನಿಯಲ್ಲಿ ಮತ್ತೊಮ್ಮೆ ರನ್​ಗಳ ಮಳೆ ಹರಿಸಿದ್ದಾರೆ. ಕೇವಲ 14 ವರ್ಷಕ್ಕೆ ವಿಶ್ವ ಕ್ರಿಕೆಟ್​ನಲ್ಲಿ ತಮ್ಮ ಆಟದ ಮೂಲಕವೇ ಸಂಚಲನ ಮೂಡಿಸಿರುವ ವೈಭವ್ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ.

ಪ್ರಸ್ತುತ ಭಾರತದಲ್ಲಿ ಡಿವೈ ಪಾಟೀಲ್ ಟೂರ್ನಮೆಂಟ್‌ ನಡೆಯುತ್ತಿದ್ದು, ಈ ಟೂರ್ನಮೆಂಟ್​ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ವೈಭವ್ ಸೂರ್ಯವಂಶಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ನವಿ ಮುಂಬೈನಲ್ಲಿ ನಡೆಯುತ್ತಿರುವ ಟಿ20 ಟೂರ್ನಮೆಂಟ್‌ನಲ್ಲಿ, ಡಿವೈ ಪಾಟೀಲ್ ಬ್ಲೂ ತಂಡದ ಪರ ಆಡುತ್ತಿರುವ ವೈಭವ್ ಸೂರ್ಯವಂಶಿ, ತಮ್ಮ ಮೊದಲ ಪಂದ್ಯದಲ್ಲೇ ಎದುರಾಳಿ ತಂಡದ ಬೌಲರ್‌ಗಳನ್ನು ಹೈರಾಣಾಗಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತೀಯ ನೌಕಾಪಡೆ ತಂಡ 4 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಡಿವೈ ಪಾಟೀಲ್ ಬ್ಲೂ ತಂಡದ ಪರ ಓಪನಿಂಗ್ ಮಾಡಿದ ವೈಭವ್, ಏಕಾಂಗಿಯಾಗಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

ಇದರ ಪರಿಣಾಮವಾಗಿ ವೈಭವ್ ಕೇವಲ 14 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ವೈಭವ್ ಬೌಂಡರಿಯೊಂದಿಗೆ ಐವತ್ತರ ಗಡಿ ದಾಟಿದ್ದು, ಸ್ಮರಣೀಯವಾಗಿತ್ತು. ಏಳನೇ ಓವರ್‌ನಲ್ಲಿ ವೈಭವ್ ಔಟಾದರಾದರೂ ಆ ಹೊತ್ತಿಗೆ ತಂಡವನ್ನು 97ರನ್​ಗಳಿಗೆ ಕೊಂಡೊಯ್ದಿದ್ದರು.

ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 19 ಎಸೆತಗಳನ್ನು ಎದುರಿಸಿ ಬರೋಬ್ಬರಿ 63 ರನ್ ಬಾರಿಸಿದರು. ಆ 19 ಎಸೆತಗಳಲ್ಲಿ 12 ಬೌಂಡರಿಗಳು (7 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳು) ಸೇರಿದ್ದವು. ಅವರ ಸ್ಟ್ರೈಕ್ ರೇಟ್ 331.58 ಆಗಿದ್ದು, ಇದು ಯಶಸ್ವಿ ರನ್ ಚೇಸ್‌ಗೆ ಅಡಿಪಾಯ ಹಾಕಿತು.

ಪಂದ್ಯದ ಬಗ್ಗೆ ಹೇಳುವುದಾದರೆ, ವೈಭವ್ ಅವರ ಇನ್ನಿಂಗ್ಸ್ ನಂತರ, ಅರ್ಜುನ್ ತೆಂಡೂಲ್ಕರ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ವಿನಾಶಕಾರಿ ಪ್ರದರ್ಶನ ನೀಡಿ ಕೇವಲ 29 ಎಸೆತಗಳಲ್ಲಿ ಅಜೇಯ 55 ರನ್ ಗಳಿಸಿ ತಂಡವನ್ನು ಕೇವಲ 19.1 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿದರು. ಅರ್ಜುನ್ ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

Published On – 5:50 pm, Thu, 26 February 26

Source link

ಮಣ್ಣಿನ ಮಡಿಕೆ ನೀರು ಕುಡಿಯೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? – Kannada News | Know the benefits of drinking Earthen Pot Water

ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುತ್ತಿದ್ದರು, ನೀರನ್ನು ಶೇಖರಿಸಿಡುತ್ತಿದ್ದರು. ಬೇಸಿಗೆಯಲ್ಲಂತೂ ಈ ಮಡಕೆ ನೀರನ್ನೇ ಕುಡಿದು ಬಿಸಿಲ ಧಗೆಯನ್ನು ಹೋಗಲಾಡಿಸುತ್ತಿದ್ದರು. ಈಗಂತೂ ಫ್ರಿಡ್ಜ್‌ ನೀರನ್ನೇ ಕುಡಿಯುವುದರಿಂದ ಯಾರು ಸಹ ಮಣ್ಣಿನ ಮಡಕೆಗಳನ್ನು ಬಳಕೆ ಮಾಡುವುದೇ ಇಲ್ಲ. ಆದ್ರೆ ಫ್ರಿಡ್ಜ್‌ ನೀರು ದೇಹಕ್ಕೆ ಒಳ್ಳೆಯದಲ್ಲ. ಹಾಗಾಗಿ ಈ ಬೇಸಿಗೆಯಲ್ಲಿ ದೇಹವನ್ನು ತಂಪು ಮಾಡಲು ಮಣ್ಣಿನ ಮಡಕೆ ನೀರನ್ನು (Earthen Pot Water) ಕುಡಿಯುವುದೇ ಬೆಸ್ಟ್.‌ ಈ ಮಣ್ಣಿನ ಮಡಿಕೆಗಳು ನೀರನ್ನು ತಂಪಾಗಿಸುವುದು ಮಾತ್ರವಲ್ಲದೆ ನೀರನ್ನು ನೈಸರ್ಗಿಕವಾಗಿ ಶುದ್ಧೀಕರಿಸಲು ಸಹ ಸಹಕಾರಿಯಾಗಿದ್ದು, ಈ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾಗಿ ಈ ಬೇಸಿಗೆಯಲ್ಲಿ ಫ್ರಿಡ್ಜ್‌ ಕೋಲ್ಡ್‌ ನೀರು ಬದಲು ಮಣ್ಣಿನ ಮಡಿಕೆ ನೀರು ಕುಡಿಯುವ ಮೂಲಕ ಈ ಒಂದಷ್ಟು ಆರೋಗ್ಯ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ.

ಮಣ್ಣಿನ ಮಡಿಕೆ ನೀರು ಕುಡಿಯುವುದರ ಪ್ರಯೋಜನಗಳೇನು?

ಹೊಟ್ಟೆ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ: ನಾವು ತಿನ್ನುವ ಹೆಚ್ಚಿನ ಆಹಾರವು ದೇಹದಲ್ಲಿ ಆಮ್ಲೀಯವಾಗುತ್ತದೆ ಮತ್ತು ನಂತರ ವಿಷವನ್ನು ಉತ್ಪಾದಿಸುತ್ತದೆ. ಜೇಡಿಮಣ್ಣು ಕ್ಷಾರೀಯ ಸ್ವಭಾವವನ್ನು ಹೊಂದದ್ದು, ಈ ಮಣ್ಣಿನ ಮಡಕೆಯಲ್ಲಿನ ನೀರಿನ pH ಮಟ್ಟವು ಸ್ಥಿರವಾಗಿರುತ್ತದೆ. ಇದು ಆಮ್ಲೀಯ ಆಹಾರ ಪದಾರ್ಥಗಳೊಂದಿಗೆ ಪ್ರತಿಕ್ರಿಯಿಸುತ್ತದೆ ಮತ್ತು pH ಸಮತೋಲನವನ್ನು ಸೃಷ್ಟಿಸುತ್ತದೆ, ಹೀಗಾಗಿ ಮಣ್ಣಿನ ಮಡಿಕೆಯ ನೀರನ್ನು ಕುಡಿಯುವುದರಿಂದ  ಆಮ್ಲೀಯತೆ, ಮಲಬದ್ಧತೆ, ಮತ್ತು ಗ್ಯಾಸ್ಟ್ರಿಕ್‌ ಸಮಸ್ಯೆಯನ್ನು ದೂರವಿಡಬಹುದು.

ದೇಹದ ನಿರ್ವಿಶೀಕರಣಕ್ಕೆ ಸಹಾಯ ಮಾಡುತ್ತದೆ: ಮಣ್ಣಿನ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ಕುಡಿಯುವುದು ದೇಹಕ್ಕೆ ಅತ್ಯಂತ ಪ್ರಯೋಜನಕಾರಿ. ಸಂಶೋಧನೆಯ ಪ್ರಕಾರ, ಮಣ್ಣಿನ ಪಾತ್ರೆಗಳಲ್ಲಿ ಸಂಗ್ರಹಿಸಿದ ನೀರು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ:  ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರಿನಲ್ಲಿ ಯಾವುದೇ ರಾಸಾಯನಿಕಗಳು ಇರುವುದಿಲ್ಲ. ಆದ್ದರಿಂದ, ಪ್ರತಿದಿನ ಮಣ್ಣಿನ ಮಡಕೆ ಅಥವಾ ಹೂಜಿಯಿಂದ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  ಅಲ್ಲದೆ ಈ ನೀರಿನಲ್ಲಿರುವ ಖನಿಜಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಶಾಖದ ಹೊಡೆತದಿಂದ ರಕ್ಷಣೆ ನೀಡುತ್ತದೆ: ಬೇಸಿಗೆಯ ತಿಂಗಳುಗಳಲ್ಲಿ ವಿಪರೀತ ಬಿಸಿಲಿನ ಧಗೆ ಇರುತ್ತದೆ. ಈ ಶಾಖದ ಹೊಡೆತದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಮಣ್ಣಿನ ಮಡಿಕೆ ನೀರು ಕುಡಿಯಿರಿ. ಈ ಮಣ್ಣಿನ ಮಡಕೆ ನೀರಿನಲ್ಲಿ ಖನಿಜಗಳು ಮತ್ತು ಪೋಷಕಾಂಶಗಳಿದ್ದು,  ಇದು ತ್ವರಿತವಾಗಿ ಪುನರ್ಜಲೀಕರಣಗೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ?

ನೈಸರ್ಗಿಕ ಶುದ್ಧೀಕರಣಕಾರಕ:  ಈ ಮಣ್ಣಿನ ಮಡಕೆ ಆಹ್ಲಾದಕರವಾದ ಮಣ್ಣಿನ ಪರಿಮಳವನ್ನು ಹೊಂದಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮಣ್ಣಿನ ಮಡಕೆಯ ನೀರು ಗಂಟಲು ಮತ್ತು ಕರುಳಿಗೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ಮಡಿಕೆಯನ್ನು ಜೇಡಿಮಣ್ಣಿನಿಂದ ತಯಾರಿಸುವುದರ ಕಾರಣ, ಇದು ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ. ಮಣ್ಣಿನ ಪಾತ್ರೆಯಲ್ಲಿರುವ ಜೇಡಿಮಣ್ಣು ನೀರಿನಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ. ಈ ನೀರು ದೇಹದ ವಿಷವನ್ನು ಶುದ್ಧೀಕರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಫ್ರಿಡ್ಜ್‌ ನೀರು ನೀರು ಗಂಟಲು ನೋವು ಸೇರಿದಂತೆ ಇತರ ಸಮಸ್ಯೆಗಳನ್ನು ಉಂಟುಮಾಡಬಹುದು, ಆದರೆ ಮಣ್ಣಿನ ಮಡಿಕೆ ನೀರು ಕುಡಿಯುವುದರಿಂದ ಈ ಯಾವುದೇ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ! – Kannada News | Two Including Housemaid Arrested For Fake ED Raid robs Rs 4 lakh At Employers house In Delhi

ನವದೆಹಲಿ, ಫೆಬ್ರವರಿ 26: ಮಹಿಳೆಯೊಬ್ಬಳು ತನಗೆ ಕೆಲಸ ನೀಡಿದ್ದ ಮನೆಯ ಒಡೆಯನ ಮನೆಗೇ ಕನ್ನ ಹಾಕಲು ಪ್ಲಾನ್ ಮಾಡಿದ್ದಳು. ಅದಕ್ಕಾಗಿ ಆಕೆ ಹೆಣೆದ ಪ್ಲಾನ್ ಅಂತಿಂಥದ್ದಲ್ಲ. ಮನೆಕೆಲಸ ಮಾಡುತ್ತಿದ್ದ ಆಕೆಗೆ ಆ ಮನೆಯ ಎಲ್ಲ ವಿಚಾರವೂ ಗೊತ್ತಿತ್ತು. ಆ ಮನೆಯಲ್ಲಿ ಸಾಕಷ್ಟು ಹಣ, ಒಡವೆಯಿದೆ ಎಂಬುದು ಕೂಡ ತಿಳಿದಿತ್ತು. ಹೀಗಾಗಿ, ಅದನ್ನೆಲ್ಲ ದೋಚಲು ಆಕೆ ಪ್ಲಾನ್ ಮಾಡಿದ್ದಳು. ಆದರೆ, ಕದ್ದುಕೊಂಡು ಹೋದರೆ ತಾನು ಖಂಡಿತ ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬುದು ಆಕೆಗೆ ತಿಳಿದಿತ್ತು. ಹೀಗಾಗಿ, ತನ್ನ ಗೆಳೆಯರ ಜೊತೆ ಸೇರಿ ಇಡಿ ದಾಳಿಯ (ED Raid) ನಾಟಕವಾಡಿ ಹಣ ದೋಚಲು ಪ್ಲಾನ್ ಮಾಡಿದ್ದಳು.

ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ಅವರ ಉದ್ಯೋಗದಾತರ ನಿವಾಸದ ಮೇಲೆ ನಕಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಆರೋಪದ ಮೇಲೆ ಮನೆಕೆಲಸದವಳನ್ನು ಬಂಧಿಸಲಾಗಿದೆ. ಪೊಲೀಸ್ ಸಮವಸ್ತ್ರದಲ್ಲಿದ್ದ ಮೂವರು ವ್ಯಕ್ತಿಗಳು ಫೆಬ್ರವರಿ 11ರಂದು ಇಡಿ ಅಧಿಕಾರಿಗಳೆಂದು ಹೇಳಿಕೊಂಡು ನಿವೃತ್ತ ವಾಸ್ತುಶಿಲ್ಪಿಯಾದ 86 ​​ವರ್ಷದ ಆರ್‌ಸಿ ಸಭರ್ವಾಲ್ ಅವರ ನಿವಾಸಕ್ಕೆ ಬಲವಂತವಾಗಿ ಪ್ರವೇಶಿಸಿದ್ದರು. ಅವರು ಸಭರ್ವಾಲ್ ಅವರ ಕುಟುಂಬವನ್ನು ಹೆದರಿಸಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡರು. ಅಷ್ಟರಲ್ಲೇ ಸಭರ್ವಾಲ್ ಅವರ ಮೊಮ್ಮಗ ಅವರ ಬಳಿ ಇಡಿ ದಾಳಿಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಕೇಳಿದ್ದರಿಂದ ಅವರು ಮನೆಯಲ್ಲಿದ್ದ ಮೂರ್ನಾಲ್ಕು ಲಕ್ಷ ಹಣ, ಚಿನ್ನವನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಕದನದ ನಡುವೆ ಬೆಂಗಳೂರಿನಲ್ಲಿ ಸಚಿವರ ಆಪ್ತರ ಮೇಲೆ ಇಡಿ ದಾಳಿ

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ದರೋಡೆ ನಡೆದ ವಸತಿ ಪ್ರದೇಶದ ಖಾಸಗಿ ಕ್ಯಾಮೆರಾಗಳು, ಸಿಸಿಟಿವಿ ಕ್ಯಾಮೆರಾಗಳು ಮತ್ತು ಹೈ-ಸ್ಪೀಡ್ ಟ್ರಾಫಿಕ್ ಕ್ಯಾಮೆರಾಗಳು ಸೇರಿದಂತೆ 350ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅವರು ಪರಿಶೀಲಿಸಿದರು. ಅಲ್ಲಿಗೆ ಬಂದಿದ್ದ ಕಾರು ಎಲ್ಲೆಲ್ಲ ಓಡಾಡಿದೆ ಎಂದು ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧರಿಸಿ ತನಿಖೆ ನಡೆಸಿದಾಗ ಪೂಜಾ ರಜಪೂತ್ ಎಂಬ ಮಹಿಳೆಯ ಬಳಿ ಆ ಕಾರು ನಿಂತಿದ್ದು ಗೊತ್ತಾಯಿತು. ಆಕೆ ದರೋಡೆ ನಡೆದ ಮನೆಯ ಕೆಲಸದಾಕೆ ರೇಖಾ ದೇವಿಯ ಅತ್ತಿಗೆ ಎಂದು ತಿಳಿದುಬಂದಿದೆ. ಇದರಿಂದ ಪೊಲೀಸರು ರೇಖಾ ದೇವಿಯ ಮೇಲೆ ಕಣ್ಣಿಟ್ಟರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಬಳಿಕ, ಪೊಲೀಸರ ತಂಡವು ಪೂಜಾ ಅವರ ಮನೆಯ ಮೇಲೆ ದಾಳಿ ಮಾಡಿದಾಗ ಅಲ್ಲಿ ಇಡಿ ದಾಳಿಯಲ್ಲಿ ಬಳಸಲಾದ ಪೊಲೀಸ್ ಯೂನಿಫಾರಂ ಸಿಕ್ಕಿತು. ಆ ಮನೆಯಿಂದ ಕದ್ದ ಐಷಾರಾಮಿ ಕೈಗಡಿಯಾರಗಳು ಮತ್ತು ಆಭರಣಗಳು ಸಹ ಅಲ್ಲೇ ಸಿಕ್ಕಿತು. ಈ ಹಿನ್ನೆಲೆಯಲ್ಲಿ ರೇಖಾ (40) ಮತ್ತು 45 ವರ್ಷದ ಪೂಜಾ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ಇತರ ಆರೋಪಿಗಳಾದ ಐಟಿಬಿಪಿ ಕಾನ್‌ಸ್ಟೆಬಲ್ ಪ್ರಕಾಶ್, ನಿವೃತ್ತ ಸೇನಾ ಸಿಬ್ಬಂದಿ ಉಪದೇಶ್ ಸಿಂಗ್ ಥಾಪಾ ಮತ್ತು ಮನೀಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version