ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ.

ಮುಖ್ಯಾಂಶಗಳು

  • ಕೋಲಾರದಲ್ಲಿ ಮೃತ್ಯು ಕೂಪವಾದ ಕೃಷಿ ಹೊಂಡಗಳು
  • ಕಳೆದ 20 ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರ ಸಾವು
  • ಕೃಷಿಹೊಂಡ ಮುಚ್ಚಲು ಜಿಲ್ಲಾಧಿಕಾರಿ ಖಡಕ್​ ಸೂಚನೆ

ತಾತನ ಮನೆಗೆ ಬಂದಿದ್ದ ಅಣ್ಣತಮ್ಮ ಕೃಷಿ ಹೊಂಡಕ್ಕೆ ಬಿದ್ದು ಸಾವು

ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ಕೃಷಿ ಹೊಂಡಗಳಿಗೆ ಮುಳ್ಳುತಂತಿ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂಆರ್​​ ರವಿ ಒಂದು ವಾರದ ಗಡುವು ನೀಡಿದ್ದರು. ಒಂದು ವಾರದ ನಂತರವೂ ಸಾವಿನ ಸರಣಿ ಮುಂದುವರೆದಿದೆ. ನಿನ್ನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮುಳುಗಿ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು

ದೇವಕಿರಣ್(12) ಮತ್ತು ವಿನುತ್​(9) ಮೃತ ಸಹೋದರರು. ಬಾಲಕರು ವಸತಿ ಶಾಲೆಯಲ್ಲಿ ಓದುತ್ತಿದ್ದರು. ಬೇಸಿಗೆ ರಜೆ ಹಿನ್ನೆಲೆ ತಾತನ ಮನೆಗೆ ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕೃಷಿ ಹೊಂಡಕ್ಕೆ ಬಿದ್ದು ಮೃತರಾದವ ವಿವರ

  • ಮೇ-5ರಂದು ಬಂಗಾರಪೇಟೆ ತಾಲ್ಲೂಕಿನ ಬೋಡೆನಹಳ್ಳಿ ಗ್ರಾಮದ ತನುಶ್ರೀ(15) ಮತ್ತು ಕಾರ್ತಿಕ್ (8) ಮೃತಪಟ್ಟಿದ್ದರು.
  • ಮೇ-8ರಂದು ಶ್ರೀನಿವಾಸಪುರ ‌ತಾಲ್ಲೂಕಿನ ಪಚ್ಚರಮಾಕಲಹಳ್ಳಿಯಲ್ಲಿ ಈಜಲು ಹೋಗಿದ್ದ ನರೇಂದ್ರ (25) ಮತ್ತು ಚಂದನ್ (24) ಮೃತಪಟ್ಟಿದ್ದರು.
  • ಮೇ- 17ರಂದು ಜಿಲ್ಲೆಯ ಮಾಲೂರು ತಾಲ್ಲೂಕು ನಕ್ಕನಹಳ್ಳಿ ಗ್ರಾಮದಲ್ಲಿ ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಸಾವನ್ನಪ್ಪಿದ್ದರು.
  • ಮೇ-25ರಂದು ಮಾಲೂರು ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ಸೋದರರಾದ ದೇವಿಕಿರಣ್ (12) ಹಾಗೂ ವಿನುತ್(9) ಸಾವನ್ನಪ್ಪಿದ್ದರು. ಸದ್ಯ ಸುರಕ್ಷತಾ ಕ್ರಮಕೈಗೊಳ್ಳದ ಕೃಷಿಹೊಂಡ ಮುಚ್ಚಲು ಜಿಲ್ಲಾಧಿಕಾರಿ ಖಡಕ್​ ಸೂಚನೆ ನೀಡಿದ್ದಾರೆ.

ಹೈವೇಯಲ್ಲಿ ಮತ್ತೊಂದು ಅಪಘಾತ: ಬಾಲಕ ಸಾವು

ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿದ್ದು, ನಾಲ್ಕರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ನಡೆದಿದೆ. ಬಂಗಾರಪೇಟೆ ಮೂಲದ ಮುಜಾಮಿಲ್ (9) ಮೃತ ಬಾಲಕ. ಇನೋವಾ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಾಳಾಗಿವೆ.

ಇದನ್ನೂ ಓದಿ: ಗಡಿಪಾರಾಗಿದ್ದ ರೌಡಿಯನ್ನು ಮಗಳ ಮದುವೆ ಮಂಟಪದಿಂದಲೇ ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದ ಪೊಲೀಸರು: ವಿಡಿಯೋ ವೈರಲ್

ಗಾಯಾಳುಗಳಾದ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾರನ್ನು ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ ಅಪಮಾನ ಎಸಗಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Online Job Scams: ಉದ್ಯೋಗಾಕಾಂಕ್ಷಿಗಳೇ ಎಚ್ಚರ! ಯುವಜನತೆಯನ್ನೇ ಗುರಿಯಾಗಿಸುತ್ತಿವೆ ಆನ್‌ಲೈನ್ ಜಾಬ್ ಸ್ಕ್ಯಾಮ್‌ಗಳು – Kannada News | Online Job Scams: How Gen Z Falls Prey and Safety Tips for Digital Recruitment

ಉದ್ಯೋಗಾಕಾಂಕ್ಷಿಗಳೇ ಎಚ್ಚರImage Credit source: Pinterest

ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗದ ಹುಡುಕಾಟ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಒಂದು ಸ್ಕ್ರೋಲ್‌ನೊಂದಿಗೆ ಪ್ರಾರಂಭವಾಗುತ್ತದೆ. ಆಕರ್ಷಕ ಸಂಬಳ, ಪ್ರಮುಖ ಹುದ್ದೆ, ಮತ್ತು ತಕ್ಷಣದ ನೇಮಕಾತಿಯ ಭರವಸೆ ನೀಡುವ ಜಾಹೀರಾತುಗಳು ನಿರುದ್ಯೋಗಿ ಯುವಕರಿಗೆ ಆಶಾಕಿರಣದಂತೆ ಕಾಣಿಸುತ್ತವೆ. ಆದರೆ, ಇದೇ ಆಸೆಗಳನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ಯುವ ಪೀಳಿಗೆಯನ್ನು ಅಪಾಯಕಾರಿ ಜಾಲಕ್ಕೆ ಎಳೆಯುತ್ತಿದ್ದಾರೆ. ಇತ್ತೀಚಿನ ಲಿಂಕ್ಡ್‌ಇನ್ (LinkedIn) ಸಮೀಕ್ಷೆಯ ಪ್ರಕಾರ, ಭಾರತದ ‘ಜೆನ್-ಝಿ’ (Gen Z – ಅಂದರೆ 1997 ರಿಂದ 2012ರ ನಡುವೆ ಜನಿಸಿದ ಯುವ ಪೀಳಿಗೆ) ಉದ್ಯೋಗಾಕಾಂಕ್ಷಿಗಳಲ್ಲಿ ಸುಮಾರು ಅರ್ಧದಷ್ಟು ಮಂದಿ ಇಂತಹ ಆನ್‌ಲೈನ್ ಉದ್ಯೋಗ ವಂಚನೆಗಳ ಸುಳಿಗೆ ಸಿಲುಕಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ತಂತ್ರಜ್ಞಾನ ತಿಳಿದಿದ್ದರೂ ವಂಚನೆಗೆ ಒಳಗಾಗುತ್ತಿರುವುದು ಏಕೆ?

ಇಂದಿನ ಯುವ ಪೀಳಿಗೆ ಇಂಟರ್ನೆಟ್, ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ತಂತ್ರಜ್ಞಾನದಲ್ಲಿ ಅತ್ಯಂತ ನಿಪುಣರಾಗಿದ್ದಾರೆ. ಆದಾಗ್ಯೂ, ವಂಚಕರ ಮಾನಸಿಕ ತಂತ್ರಗಳಿಗೆ ಇವರು ಬಲಿಯಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣಗಳು:

ತೀವ್ರ ಪೈಪೋಟಿ ಮತ್ತು ನಿರುದ್ಯೋಗದ ಭಯ:

ಮಾರುಕಟ್ಟೆಯಲ್ಲಿ ಉದ್ಯೋಗಗಳ ಕೊರತೆ ಮತ್ತು ಶೀಘ್ರವಾಗಿ ನೆಲೆಕಾಣಬೇಕೆಂಬ ಒತ್ತಡ ಯುವಕರಲ್ಲಿ ಹೆಚ್ಚಾಗಿದೆ.

ತಪ್ಪಿಹೋಗುವ ಭಯ (FOMO):

ಸಮೀಕ್ಷೆಯಲ್ಲಿ ಶೇಕಡಾ 54 ರಷ್ಟು ಯುವಕರು, “ಒಳ್ಳೆಯ ಅವಕಾಶ ಕೈತಪ್ಪಿ ಹೋಗಬಹುದು” ಎಂಬ ಭಯದಿಂದ ಕಂಪನಿಗಳ ಹಿನ್ನೆಲೆಯನ್ನು ಪರಿಶೀಲಿಸದೆ ಮುಂದುವರಿದಿರುವುದಾಗಿ ಒಪ್ಪಿಕೊಂಡಿದ್ದಾರೆ.

ವಂಚಕರ ಹೊಸ ತಂತ್ರಗಳು (Modus Operandi):

ಹಳೆಯ ಕಾಲದಂತೆ ಈಗಿನ ವಂಚನೆಗಳು ಕಳಪೆ ಇಮೇಲ್‌ಗಳು ಅಥವಾ ನಕಲಿ ಭರವಸೆಗಳಿಗಷ್ಟೇ ಸೀಮಿತವಾಗಿಲ್ಲ. ಸೈಬರ್ ಅಪರಾಧಿಗಳು ಈಗ ಹೆಚ್ಚು ವೃತ್ತಿಪರರಾಗಿದ್ದಾರೆ. ಅವರು ನಿಜವಾದ ಕಂಪನಿಗಳಂತೆಯೇ ವೆಬ್‌ಸೈಟ್‌ಗಳನ್ನು ವಿನ್ಯಾಸಗೊಳಿಸುತ್ತಾರೆ ಮತ್ತು ಅಧಿಕೃತ ಭಾಷೆಯನ್ನು ಬಳಸುತ್ತಾರೆ.

ಉದ್ಯೋಗದ ಪೋರ್ಟಲ್‌ಗಳಲ್ಲಿ (Job Portals) ಸಂವಹನ ಆರಂಭಿಸಿ, ನಂತರ ವಾಟ್ಸಾಪ್ ಅಥವಾ ಟೆಲಿಗ್ರಾಮ್‌ನಂತಹ ವೈಯಕ್ತಿಕ ಮೆಸೇಜಿಂಗ್ ಆ್ಯಪ್‌ಗಳಿಗೆ ಅಭ್ಯರ್ಥಿಗಳನ್ನು ಸೆಳೆಯುತ್ತಾರೆ. ವರದಿಯ ಪ್ರಕಾರ, ಶೇಕಡಾ 90 ರಷ್ಟು ಉದ್ಯೋಗ ವಂಚನೆಗಳು ಇಂತಹ ಖಾಸಗಿ ಚಾಟ್‌ಗಳ ಮೂಲಕವೇ ನಡೆಯುತ್ತಿವೆ.

ಆರಂಭಿಕ ಹಂತದ (Entry-level) ಉದ್ಯೋಗಗಳಿಗೆ ಸಾವಿರಾರು ಅರ್ಜಿಗಳು ಬರುವುದರಿಂದ ಮತ್ತು ಪ್ರಮುಖ ಕಂಪನಿಗಳಿಂದ ಪ್ರತಿಕ್ರಿಯೆ ಸಿಗುವುದು ತಡವಾಗುವುದರಿಂದ, ವಂಚಕರು ನೀಡುವ ತಕ್ಷಣದ ಪ್ರತಿಕ್ರಿಯೆಗಳನ್ನು ಯುವಕರು ನಿಜವೆಂದು ನಂಬಿಬಿಡುತ್ತಾರೆ.

ಇದನ್ನೂ ಓದಿ: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಕೇವಲ ಹಣದ ನಷ್ಟವಲ್ಲ, ಮಾನಸಿಕ ಹಿಂಸೆ:

ಈ ಸ್ಕ್ಯಾಮ್‌ಗಳಿಂದ ಯುವಕರು ಕೇವಲ ಹಣ ಕಳೆದುಕೊಳ್ಳುತ್ತಿಲ್ಲ, ಬದಲಿಗೆ ಅವರ ಆತ್ಮವಿಶ್ವಾಸವೇ ಕುಸಿಯುತ್ತಿದೆ. ಇಂತಹ ಘಟನೆಗಳು ಇಡೀ ಡಿಜಿಟಲ್ ನೇಮಕಾತಿ ವ್ಯವಸ್ಥೆಯ ಮೇಲೆಯೇ ಅನುಮಾನ ಮೂಡಿಸುವಂತೆ ಮಾಡುತ್ತವೆ. ಮೊದಲ ಬಾರಿಗೆ ಉದ್ಯೋಗ ಹುಡುಕುತ್ತಿರುವ ಯುವಕರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಮಾನಹಾನಿ ಮತ್ತು ಭವಿಷ್ಯದ ಭಯದಿಂದಾಗಿ ಅನೇಕರು ತಾವು ಮೋಸಹೋಗಿರುವುದನ್ನು ಹೊರಗೆ ಹೇಳಿಕೊಳ್ಳದೆ ಮೌನಕ್ಕೆ ಶರಣಾಗುತ್ತಿದ್ದಾರೆ.

ಸುರಕ್ಷಿತವಾಗಿರಲು ಏನು ಮಾಡಬೇಕು?

ಯಾವುದೇ ಆಫರ್ ಬಂದಾಗ ಆ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಲಿಂಕ್ಡ್‌ಇನ್ ಪ್ರೊಫೈಲ್ ಅನ್ನು ಸರಿಯಾಗಿ ಪರಿಶೀಲಿಸಿ. ಯಾವುದೇ ಪ್ರತಿಷ್ಠಿತ ಕಂಪನಿಯು ಉದ್ಯೋಗ ನೀಡಲು ತರಬೇತಿ ಶುಲ್ಕ, ಲ್ಯಾಪ್‌ಟಾಪ್ ಶುಲ್ಕ ಅಥವಾ ಸೆಕ್ಯೂರಿಟಿ ಡಿಪಾಸಿಟ್ ಹೆಸರಿನಲ್ಲಿ ಹಣವನ್ನು ಕೇಳುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಇದಲ್ಲದೇ ಇಮೇಲ್‌ಗಳು @gmail.com ನಿಂದ ಬಾರದೆ, ಕಂಪನಿಯ ಅಧಿಕೃತ ಡೊಮೈನ್ (ಉದಾಹರಣೆಗೆ: careers@companyname.com) ನಿಂದ ಬಂದಿವೆಯೇ ಎಂದು ಖಚಿತಪಡಿಸಿಕೊಳ್ಳಿ. ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಅಥವಾ ಬ್ಯಾಂಕ್ ವಿವರಗಳನ್ನು ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ ಅಧಿಕೃತಗೊಳ್ಳುವ ಮುನ್ನ ಯಾರಿಗೂ ನೀಡಬೇಡಿ. ಆದ್ದರಿಂದ, ಉದ್ಯೋಗ ಹುಡುಕುವಾಗ ಆತುರ ಬೇಡ, ಜಾಗರೂಕತೆ ಅತ್ಯಗತ್ಯ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:27 pm, Tue, 26 May 26

Source link

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ

ಒಂದೊಮ್ಮೆ ಸರಕು ಸಾಗಣೆ ವಾಹನಗಳ ಬಾಡಿಗೆ ದರ ಏರಿಕೆ ಆಗಿದ್ದೇ ಆದಲ್ಲಿ ಇದರ ಪರಿಣಾಮವಾಗಿ ತರಕಾರಿ, ಪ್ಲೈವುಡ್, ಕಬ್ಬಿಣ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲಾರಿ ಮಾಲಕರು ಮತ್ತು ಏಜೆಂಟ್​​ ಅಸೋಸಿಯೇಷನ್​​ ಅಧ್ಯಕ್ಷ ಜಿ.ಆರ್. ಶಣ್ಮುಗಪ್ಪ, ಇಂಧನ ದರ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಕು ಸಾಗಣೆ ದರ ಹೆಚ್ಚಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಯೇ ಇಲ್ಲ ಎಂದಿದ್ದಾರೆ. ಡೀಸೆಲ್ ದರ ಏರಿದಾಗ ಸಾರಿಗೆ ವೆಚ್ಚವೂ ಸ್ವಯಂಚಾಲಿತವಾಗಿ ಹೆಚ್ಚುತ್ತದೆ. ಅದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆರ್ಥಿಕ ಅಪರಾಧಗಳ ಭಾರಿ ಏರಿಕೆ; ಪ್ರತಿ 2.5 ಗಂಟೆಗೆ ದಾಖಲಾಗ್ತಿದೆ ಒಂದು ಆರ್ಥಿಕ ವಂಚನೆ ಕೇಸ್!

ದರ ಏರಿಕೆ ಸಂಬಂಧ ನಾಳೆ ಸಭೆ

ಡೀಸೆಲ್ ದರ ಏರಿಕೆಗೆ ಅನುಗುಣವಾಗಿ ಸರಕು ಸಾಗಣೆ ದರವನ್ನು ಶೇ.10ರಷ್ಟು ಹೆಚ್ಚಿಸುವ ಕುರಿತು ಚರ್ಚಿಸಲು ಬುಧವಾರ (ಮೇ 27) ಸಾರಿಗೆ ಸಂಸ್ಥೆಗಳ ಸಭೆ ಕರೆಯಲಾಗಿದೆ ಎಂದು ಶಣ್ಮುಗಪ್ಪ ಹೇಳಿದ್ದಾರೆ. ಸಾರಿಗೆ ವಲಯ ಜಿಎಸ್‌ಟಿ ಹಾಗೂ ಇತರೆ ತೆರಿಗೆಗಳ ಮೂಲಕ ಸರ್ಕಾರಕ್ಕೆ ಭಾರೀ ಆದಾಯ ನೀಡುತ್ತಿದ್ದರೂ, ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚದ ನಡುವೆ ಯಾವುದೇ ನೇರ ಪರಿಹಾರ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ವಾರದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಲಾಜಿಸ್ಟಿಕ್ಸ್ ವೆಚ್ಚ ಸಹಜವಾಗಿಯೇ ಹೆಚ್ಚಲಿದೆ. ಜೂನ್ ಮೊದಲ ವಾರದಿಂದ ಗ್ರಾಹಕರು ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗೆ ಕನಿಷ್ಠ 50 ಪೈಸೆ ಹೆಚ್ಚುವರಿ ದರವನ್ನು ಪಾವತಿಸಬೇಕಾಗಬಹುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಲಹೆಗಾರ ರಮೇಶ್ ಚಂದ್ರ ಲಹೋಟಿ ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:28 pm, Tue, 26 May 26

Source link

IPL 2026: ಆರ್‌ಸಿಬಿ ಕ್ವಾಲಿಫೈಯರ್ ಆಡದೆಯೇ ಫೈನಲ್ ತಲುಪಬಹುದು..! ಹೇಗೆ ಗೊತ್ತಾ? – Kannada News | IPL 2026 Qualifier 1: RCB’s Direct Final Path! Rain Rule and Points Table Advantage Explained

ಐಪಿಎಲ್ 2026 (IPL 2026) ರ ಸೀಸನ್ ಅಂತಿಮ ಹಂತಕ್ಕೆ ತಲುಪಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ (RCB vs GT) ಇಂದು ಧರ್ಮಶಾಲಾದಲ್ಲಿ ಮೊದಲ ಕ್ವಾಲಿಫೈಯರ್ ಆಡಲು ಸಿದ್ಧವಾಗಿವೆ. ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದರೂ (ಕ್ವಾಲಿಫೈಯರ್-2), ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಇರಾದೆಯಲ್ಲಿವೆ. ಆದಾಗ್ಯೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ಕ್ವಾಲಿಫೈಯರ್ ಆಡದೆಯೇ ಫೈನಲ್ ತಲುಪುವ ಅವಕಾಶವನ್ನು ಹೊಂದಿದೆ. ಅದು ಹೇಗೆ ಸಾಧ್ಯ? ಇಲ್ಲಿದೆ ವಿವರ.

ಅಗ್ರಸ್ಥಾನದಲ್ಲಿ ಆರ್​ಸಿಬಿ

ಐಪಿಎಲ್ 2026 ರ ಗುಂಪು ಹಂತ ಮುಗಿದ ಬಳಿಕ ನಾವು ಪಾಯಿಂಟ್ ಪಟ್ಟಿಯನ್ನು ನೋಡುವುದಾದರೆ.. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದ್ದು, +0.783 ನೆಟ್ ರನ್​ರೇಟ್ ಹೊಂದಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯ ರದ್ದಾದರೆ ಆರ್​ಸಿಬಿ ಫೈನಲ್​ಗೆ

ವಾಸ್ತವವಾಗಿ ಫೈನಲ್ ಹೊರತುಪಡಿಸಿ ಯಾವುದೇ ಪ್ಲೇಆಫ್ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ, ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಪಂದ್ಯಗಳು ಮಳೆಯಿಂದಾಗಿ ರದ್ದಾದರೆ, ಮರುದಿನ ಪಂದ್ಯಗಳನ್ನು ಆಡಲಾಗುವುದಿಲ್ಲ. ಹೀಗಾಗಿ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ.

ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇದರರ್ಥ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್​ಸಿಬಿ ಕ್ವಾಲಿಫೈಯರ್ 1 ಆಡದೆಯೇ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇತ್ತ ಗುಜರಾತ್ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ.

IPL 2026: ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ?

ಧರ್ಮಶಾಲಾದಲ್ಲಿ ಹವಾಮಾನ ಹೇಗಿರಲಿದೆ?

ಧರ್ಮಶಾಲಾ ಮೈದಾನವು ಪರ್ವತಗಳಿಂದ ಸುತ್ತುವರೆದಿದೆ. ಇದರಿಂದಾಗಿ, ಹವಾಮಾನ ಯಾವುದೇ ಸಮಯದಲ್ಲಿ ಬದಲಾಗಬಹುದು. ಆದಾಗ್ಯೂ, ಹವಾಮಾನ ಮುನ್ಸೂಚನೆಯ ಪ್ರಕಾರ, ಪಂದ್ಯದ ದಿನದಂದು ಮಳೆಯಾಗುವ ಸಾಧ್ಯತೆ ಶೇ. 25 ರಷ್ಟು ಇದೆ. ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪೂರ್ಣ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ ಮಳೆ ಬರುವ ಸಾಧ್ಯತೆ ಇರದ ಕಾರಣ, ಆರ್​ಸಿಬಿ ಈ ಪಂದ್ಯವನ್ನು ಆಡಿ, ಜಯ ಸಾಧಿಸಿಯೇ ಫೈನಲ್​ಗೆ ಟಿಕೆಟ್ ಪಡೆಯಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:20 pm, Tue, 26 May 26

Source link

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಯುಎಸ್ ಕಾರ್ಯದರ್ಶಿ ರೂಬಿಯೋ – Kannada News | US Secretary Marco Rubio visits Taj Mahal With Wife During India Visit

ಆಗ್ರಾ, ಮೇ 26: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ತಮ್ಮ ಪತ್ನಿ ಜೀನೆಟ್ ರೂಬಿಯೋ ಅವರೊಂದಿಗೆ ಆಗ್ರಾದಲ್ಲಿರುವ ಐತಿಹಾಸಿಕ ತಾಜ್ ಮಹಲ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ತಾಜ್ ಮಹಲ್ ಸೌಂದರ್ಯವನ್ನು ಹೊಗಳಿದ ರೂಬಿಯೋ ಈ ಸ್ಮಾರಕವನ್ನು ವಿಶ್ವದ ಅತ್ಯಮೂಲ್ಯ ನಿಧಿಗಳಲ್ಲಿ ಒಂದೆಂದು ಶ್ಲಾಘಿಸಿದ್ದಾರೆ. ತಾಜ್ ಮಹಲ್‌ನಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಕಳೆದ ದಂಪತಿ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ (Visitors Book) “ವಿಶ್ವದ ನಿಜವಾದ ನಿಧಿಗಳಲ್ಲಿ ಒಂದನ್ನು ವೀಕ್ಷಿಸಲು ನಮಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಿಶ್ವದ 7 ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್, ಭಾರತಕ್ಕೆ ಭೇಟಿ ನೀಡುವ ಜಾಗತಿಕ ಮಟ್ಟದ ಉನ್ನತ ನಾಯಕರು ಮತ್ತು ಗಣ್ಯರನ್ನು ಸತತವಾಗಿ ಆಕರ್ಷಿಸುತ್ತಲೇ ಬಂದಿದೆ. ಕಳೆದ ವರ್ಷ, ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳಾದ ವಿವೇಕ್, ಮಿರಾಬೆಲ್ ಮತ್ತು ಇವಾನ್ ಅವರೊಂದಿಗೆ ಈ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಪತ್ನಿ ಮೆಲಾನಿಯಾ ಟ್ರಂಪ್ ಅವರೊಂದಿಗೆ ತಾಜ್ ಮಹಲ್‌ಗೆ ಭೇಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest

ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಸುವರ್ಣಾವಕಾಶವಾಗಿದೆ.

ತಿಂಗಳ ಭತ್ಯೆ (Stipend):

ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಪ್ರತಿ ತಿಂಗಳು 9,000 ಸ್ಟೈಫಂಡ್ ಸಿಗಲಿದೆ. ಇದರಲ್ಲಿ 8,100 ರೂ. ಹಣವನ್ನು ಸರ್ಕಾರ ನೇರವಾಗಿ ಬ್ಯಾಂಕ್ ಖಾತೆಗೆ (DBT) ಜಮಾ ಮಾಡಿದರೆ, ಉಳಿದ 900ರೂ. ಹಣವನ್ನು ಇಂಟರ್ನ್‌ಶಿಪ್ ನೀಡುವ ಕಂಪನಿ ಭರಿಸುತ್ತದೆ. ಇದಲ್ಲದೇ ಇಂಟರ್ನ್‌ಶಿಪ್‌ಗೆ ಸೇರಿದ ತಕ್ಷಣ ಆರಂಭಿಕ ವೆಚ್ಚಗಳಿಗಾಗಿ ಸರ್ಕಾರದಿಂದ 6,000ರೂ. ಒನ್-ಟೈಮ್ ಗ್ರಾಂಟ್ (ಒಂದು ಬಾರಿಯ ಧನಸಹಾಯ) ಸಿಗಲಿದೆ.

ಉಚಿತ ವಿಮೆ ಸೌಲಭ್ಯ:

ಇಂಟರ್ನ್‌ಶಿಪ್ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಸುರಕ್ಷಾ ಬಿಮಾ ಯೋಜನೆ ಅಡಿಯಲ್ಲಿ ಉಚಿತ ವಿಮಾ ಸೌಲಭ್ಯ ಸಿಗುತ್ತದೆ.

ಕರ್ನಾಟಕದ ಕಂಪನಿಗಳಲ್ಲೇ ಅವಕಾಶ:

ಈ ಯೋಜನೆಯಡಿ ಭಾರತದ ಪ್ರಮುಖ ಕಾರ್ಪೊರೇಟ್ ಕಂಪನಿಗಳು (ಉದಾಹರಣೆಗೆ ಮಾರುತಿ, ಐಸಿಐಸಿಐ, ಎಕ್ಸೈಡ್, ಮತ್ತು ಬೆಂಗಳೂರಿನ ಹಲವು ಪ್ರಮುಖ ಐಟಿ/ಕಾರ್ಪೊರೇಟ್ ಸಂಸ್ಥೆಗಳು) ಭಾಗವಹಿಸುತ್ತಿರುವುದರಿಂದ, ಕರ್ನಾಟಕದ ಯುವಕ-ಯುವತಿಯರು ತಮ್ಮದೇ ರಾಜ್ಯದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ (ಬೆಂಗಳೂರು, ಮೈಸೂರು, ಮಂಗಳೂರು ಮುಂತಾದೆಡೆ) ತರಬೇತಿ ಪಡೆಯಬಹುದು.

ಅರ್ಹತೆಗಳೇನು?

ಈ ಬಾರಿ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ಹೆಚ್ಚಿನ ಯುವಕರಿಗೆ ಅವಕಾಶ ಕಲ್ಪಿಸಲಾಗಿದೆ. 18 ರಿಂದ 25 ವರ್ಷದೊಳಗಿನ ಭಾರತೀಯ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. 10ನೇ ತರಗತಿ, ಪಿಯುಸಿ (12th), ಐಟಿಐ (ITI), ಪಾಲಿಟೆಕ್ನಿಕ್ ಡಿಪ್ಲೊಮಾ, ಬಿಎ, ಬಿಕಾಂ, ಬಿಸ್ಸಿ, ಬಿಸಿಎ, ಬಿಬಿಎ, ಬಿಇ/ಬಿಟೆಕ್ ಪದವೀಧರರು ಅರ್ಜಿ ಸಲ್ಲಿಸಬಹುದು. ಅಂತಿಮ ವರ್ಷದ ಪದವಿ (UG) ಮತ್ತು ಸ್ನಾತಕೋತ್ತರ ಪದವಿ (PG) ವಿದ್ಯಾರ್ಥಿಗಳಿಗೂ ಈಗ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ

ಇಂಟರ್ನ್‌ಶಿಪ್ ಅವಧಿ ಮತ್ತು ಕೆಲಸದ ಕ್ಷೇತ್ರಗಳು:

ಈ ಇಂಟರ್ನ್‌ಶಿಪ್ ಅವಧಿಯು 6 ರಿಂದ 9 ತಿಂಗಳು ಇರಲಿದ್ದು, ಅಭ್ಯರ್ಥಿಗಳಿಗೆ ಕೇವಲ ತರಗತಿ ತರಬೇತಿ ನೀಡದೆ ನೇರವಾಗಿ ಕಂಪನಿಗಳ ನೈಜ ಕೆಲಸದ ವಾತಾವರಣದಲ್ಲಿ (Hands-on experience) ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಐಟಿ, ಸಾಫ್ಟ್‌ವೇರ್, ಬ್ಯಾಂಕಿಂಗ್, ಹಣಕಾಸು ಸೇವೆಗಳು, ಟೆಲಿಕಾಂ, ರೀಟೇಲ್ ಸೇರಿದಂತೆ 21 ಕ್ಕೂ ಹೆಚ್ಚು ವಲಯಗಳಲ್ಲಿ ಈ ಅವಕಾಶಗಳಿವೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಆದ PM Internship Portal ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರಗಳು ಹಾಗೂ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಅತ್ಯಗತ್ಯ. ಶಿಕ್ಷಣ ಮುಗಿಸಿ ಉದ್ಯೋಗ ಹುಡುಕುತ್ತಿರುವ ಕರ್ನಾಟಕದ ಯುವಕ-ಯುವತಿಯರು ಈ ಕೌಶಲ್ಯಾಭಿವೃದ್ಧಿ ಮತ್ತು ಆರ್ಥಿಕ ನೆರವು ನೀಡುವ ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್ ನಟ ವಿಶಾಲ್ (Vishal) ಮುಕ್ತಕಂಠದಿಂದ ಶ್ಲಾಘಿಸಿದ್ದು, ವಿಜಯ್ ಅವರನ್ನು ‘ಅತ್ಯಂತ ಸಮರ್ಥ ನಟ, ರಾಜಕಾರಣಿ’ ಎಂದು ಬಣ್ಣಿಸಿದ್ದಾರೆ.

ಮುಖ್ಯಮಂತ್ರಿಗಳ ನಿರ್ಧಾರದ ಬೆನ್ನಲ್ಲೇ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ನಟ ವಿಶಾಲ್, ‘ನಮ್ಮ ಪ್ರೀತಿಯ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೇ, ಜನಸಾಮಾನ್ಯರ ನೆಚ್ಚಿನ ನಾಯಕ ಹಾಗೂ ರಾಜಕೀಯಕ್ಕೆ ಬಂದ ಅತ್ಯಂತ ಪ್ರಭಾವಶಾಲಿ ನಟರಾದ ನಿಮಗೆ ಧನ್ಯವಾದಗಳು. ಚಿತ್ರರಂಗದ ಸದ್ಯದ ಕಷ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ಹೊಸ ಚಿತ್ರಗಳು ಬಿಡುಗಡೆಯಾದ ಮೊದಲ 7 ದಿನಗಳವರೆಗೆ ದಿನಕ್ಕೆ 5 ಪ್ರದರ್ಶನಗಳನ್ನು ಮಾಡಲು ಅನುಮತಿ ಜಾರಿಗೊಳಿಸಿದ್ದಕ್ಕಾಗಿ ಕೃತಜ್ಞತೆಗಳು’ ಎಂದು ಬರೆದುಕೊಂಡಿದ್ದಾರೆ.

ನಟ ವಿಶಾಲ್ ಪೋಸ್ಟ್:

ಅಲ್ಲದೆ, ‘ಮುಂದಿನ ದಿನಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ವಲಯಗಳಲ್ಲೂ ಇಂತಹ ಹಲವು ಸರ್ಕಾರಿ ಆದೇಶಗಳು ಹೊರಬೀಳಲಿ. ಆ ಮೂಲಕ ಪ್ರಗತಿಪರ ಬೆಳವಣಿಗೆಯಾಗಲಿ ಎಂದು ಎದುರು ನೋಡುತ್ತಿದ್ದೇನೆ. ನಮ್ಮ ಇಡೀ ಚಿತ್ರರಂಗದ ಪರವಾಗಿ ನಿಮಗೆ ದೊಡ್ಡ ಶಿಳ್ಳೆ’ ಎಂದು ವಿಶಾಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ವಿಜಯ್ ಅವರ ಅಧಿಕೃತ ‘ಎಕ್ಸ್’ ಖಾತೆಯಿಂದ ಈ ಕುರಿತು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಲಾಗಿದೆ. ‘ಚಲನಚಿತ್ರ ರಂಗದ ಗಣ್ಯರು ಏಪ್ರಿಲ್ 16ರಂದು ತಮಿಳುನಾಡಿನ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಮಂಡಿಸಿದ್ದರು. ಅವುಗಳಲ್ಲಿ ಪ್ರಮುಖವಾಗಿ, ತಮಿಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಎಲ್ಲಾ ಸಿನಿಮಾಗಳಿಗೆ ದಿನಕ್ಕೆ ಐದು ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡಬೇಕೆಂದು ಕೋರಿದ್ದರು’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಇಟ್ಟ ನಟ ಕಮಲ್ ಹಾಸನ್; ಏನದು?

‘ಚಿತ್ರರಂಗದ ಈ ಮನವಿಯನ್ನು ಪರಿಗಣಿಸಿದ ತಮಿಳುನಾಡು ಮುಖ್ಯಮಂತ್ರಿಗಳು, ‘ತಮಿಳುನಾಡು ಸಿನಿಮಾ ಥಿಯೇಟರ್ಸ್ (ರೆಗ್ಯುಲೇಶನ್) ನಿಯಮಾವಳಿ’ಗೆ ತಿದ್ದುಪಡಿ ತಂದಿದ್ದಾರೆ. ಇದರ ಪ್ರಕಾರ, ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಹೊಸದಾಗಿ ಬಿಡುಗಡೆಯಾಗುವ ತಮಿಳು ಸಿನಿಮಾಗಳಿಗೆ ಬಿಡುಗಡೆಯಾದ ದಿನದಿಂದ ಏಳು ದಿನಗಳವರೆಗೆ ಪ್ರತಿದಿನ ಐದು ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಇದರೊಂದಿಗೆ ಸ್ಥಳೀಯ ಹಬ್ಬ ಹರಿದಿನಗಳು, ಸಾರ್ವಜನಿಕ ರಜಾದಿನಗಳು, ಶನಿವಾರ ಮತ್ತು ಭಾನುವಾರಗಳಲ್ಲೂ ದಿನಕ್ಕೆ 5 ಪ್ರದರ್ಶನಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:57 pm, Tue, 26 May 26

Source link

ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್; ‘ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದ ಫ್ಯಾನ್ಸ್ – Kannada News | Salman Khan secret private video leak raises privacy and security concerns

ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ರಹಸ್ಯವಾಗಿ ಚಿತ್ರೀಕರಿಸಲಾದ ವಿಡಿಯೋವೊಂದು (Salman Khan Private Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇದರಿಂದ ಸೆಲೆಬ್ರಿಟಿಗಳ ಖಾಸಗಿತನ ಮತ್ತು ಭದ್ರತೆಯ ಕುರಿತು ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಸಣ್ಣ ವಿಡಿಯೋ ಕ್ಲಿಪ್‌ನಲ್ಲಿ, ಸಲ್ಮಾನ್ ಖಾನ್ (Salman Khan) ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಊಟದ ಮೇಜಿನ ಬಳಿ ಊಟ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದ ಸ್ವರೂಪವನ್ನು ಗಮನಿಸಿದರೆ, ಇದು ಅವರಿಗೆ ತಿಳಿಯದಂತೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಭಿಮಾನಿಗಳು ಸಲ್ಮಾನ್ ಅವರ ಸರಳತೆ ಮತ್ತು ಶಾಂತ ಸ್ವಭಾವವನ್ನು ಶ್ಲಾಘಿಸುತ್ತಿದ್ದಾರಾದರೂ, ಇನ್ನುಳಿದ ಬಹುತೇಕರು ಅವರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ವಿಭಿನ್ನ ಕಾರಣಗಳಿಗಾಗಿ ಹಲವು ಭೂಗತ ಗ್ಯಾಂಗ್‌ಗಳ ಟಾರ್ಗೆಟ್ ಆಗಿರುವ ಸಲ್ಮಾನ್ ಖಾನ್ ಅವರ ಭದ್ರತೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಲ್ಮಾನ್ ಖಾನ್ ಖಾಸಗಿ ವಿಡಿಯೋ:

‘ಈ ವಿಡಿಯೋ ನಿಜವಾಗಿದ್ದು, ಯಾರಾದರೂ ಇದನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದರೆ, ಇದು ಗಂಭೀರವಾದ ಗೌಪ್ಯತೆ ಮತ್ತು ಭದ್ರತೆಯ ಉಲ್ಲಂಘನೆಯಾಗಿದೆ. ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋವನ್ನು ಲೀಕ್ ಮಾಡಿದವರು ಯಾರು ಮತ್ತು ಇದು ಹೇಗೆ ಹೊರಬಂತು ಎಂಬ ಪ್ರಶ್ನೆ ಉದ್ಭವ ಆಗಿದೆ.

ಈ ವಿಡಿಯೋ ಸೋರಿಕೆಯಿಂದ ಸಲ್ಮಾನ್ ಖಾನ್ ಅವರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆಶ್ಚರ್ಯದ ಸಂಗತಿಯೆಂದರೆ, ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ಸಲ್ಮಾನ್ ಖಾನ್ ಅವರ ಭದ್ರತೆಯಲ್ಲಿನ ನಿರ್ಲಕ್ಷ್ಯವನ್ನು ಎತ್ತಿ ತೋರಿಸುವ ಹಲವು ಘಟನೆಗಳು ಸರಣಿಯಾಗಿ ನಡೆದಿವೆ. ಕೆಲವೇ ದಿನಗಳ ಹಿಂದೆ, ಪಾಪರಾಜಿಗಳು ಸಲ್ಮಾನ್ ಅವರ ಕಾರನ್ನು ಆಸ್ಪತ್ರೆಯವರೆಗೂ ಹಿಂಬಾಲಿಸಿ, ಅವರ ಗಮನ ಸೆಳೆಯಲು ಜೋರಾಗಿ ಕೂಗಿದಾಗ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು?

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್ ಅವರಿಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿರುವ ಇಂತಹ ಕಠಿಣ ಸಮಯದಲ್ಲಿ, ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೇವಲ ಸೋಶಿಯಲ್ ಮೀಡಿಯಾದಲ್ಲಿ ವೀವ್ಸ್ ಮತ್ತು ಲೈಕ್‌ಗಳಿಗಾಗಿ ಒಬ್ಬ ವ್ಯಕ್ತಿಯ ಗೌಪ್ಯತೆ ಮತ್ತು ಭದ್ರತೆಯ ಎಲ್ಲಾ ಗಡಿಗಳನ್ನು ದಾಟುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಮೀನು ವಿವಾದ: ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ

ಧಾರವಾಡ, ಮೇ 26: ಜಮೀನು ವ್ಯಾಜ್ಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದ್ದು, ಈ ವೇಳೆ ಹುಬ್ಬಳ್ಳಿಯ ಉದ್ಯಮಿ ಫೆಲೋಮಿನಾ ಅಂಗರಕ್ಷಕರಿಂದ ಯುವಕನ ಕಾಲಿಗೆ ಫೈರಿಂಗ್ ಮಾಡಿರುವಂತಹ ಘಟನೆ ಧಾರವಾಡ ಹೊರವಲಯದ ತ್ರಿಬಲ್ ಐಟಿ ಬಳಿ ನಡೆದಿದೆ. ಅಂಗರಕ್ಷಕರಿಂದ 8 ಸುತ್ತು ಫೈರಿಂಗ್​ ಮಾಡಲಾಗಿದ್ದು, 24 ವರ್ಷದ ವಿಠ್ಠಲ್ ವಾಲೀಕಾರ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಗಾಯಾಳು ವಿಠ್ಠಲ್​ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಸತಿ ನಿವೇಶನ ಮಾಡಲು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಮ್ಮ ಪರ ತೀರ್ಪು ಬಂದಿದೆ ಅಂತಾ ಫಿಲೋಮಿನಾ ವಾದಿಸಿದ್ದಾರೆ. ಈ ವೇಳೆ 2 ಗುಂಪುಗಳ ನಡುವೆ ಗಲಾಟೆಯಾಗಿ ಗುಂಡಿನ ದಾಳಿ ನಡೆದಿದೆ. ಸದ್ಯ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version