Headlines

TV9 Kannada News Live: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ! – Kannada News | TV9 Kannada News Live: TVK Struggles for Majority in Tamil Nadu as Bihar Cabinet Expansion Takes Place

ಬೆಂಗಳೂರು, ಮೇ 07: ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿಯೇ ನಟ ದಳಪತಿ ವಿಜಯ್​​ ನೇತೃತ್ವದ ‘ತಮಿಳುಗ ವೆಟ್ರಿ ಕಳಗಂ’ (TVK) ಪಕ್ಷ ತಮಿಳುನಾಡಲ್ಲಿ ಭರ್ಜರಿ ಯಶಸ್ಸು ಕಂಡಿದೆ. ರಾಜ್ಯದ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ್ದರೂ ಕೂಡ ಸರ್ಕಾರ ರಚನೆಗೆ ಬಹುಮತದ ಸಮಸ್ಯೆ ಕಾಡತೊಡಗಿದೆ. ಇಂದು (ಮೇ 7) ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಎರಡು ದಿನಗಳಲ್ಲಿ ರಾಜ್ಯಪಾಲರನ್ನು…

Read More

IPL ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್​ಗೆ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಪರಮೇಶ್ವರ್ – Kannada News | Why IPL Final Shifted from Bengaluru to Ahmedabad? G. Parameshwar Reveals Real Commercial Reasons

ಬೆಂಗಳೂರು, ಮೇ 7: ಐಪಿಎಲ್ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಬೆಂಗಳೂರಿನಿಂಂದ ಸ್ಥಳಾಂತರಗೊಂಡಿದ್ದರ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ ಭದ್ರತೆ ಅಥವಾ ಆಡಳಿತಾತ್ಮಕವಾಗಿ ಯಾವುದೇ ಲೋಪದೋಷಗಳಿಲ್ಲ. ಪಂದ್ಯಗಳು ಸ್ಥಳಾಂತರಗೊಳ್ಳಲು ಮುಖ್ಯವಾಗಿ ‘ವಾಣಿಜ್ಯ ಉದ್ದೇಶ’ ಕಾರಣ ಎಂದು ಅವರು ವಿವರಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಸುಮಾರು 32,000 ಆಸನಗಳ ಸಾಮರ್ಥ್ಯವಿದೆ. ಇದರಲ್ಲಿ ಸುಮಾರು 7,000 ರಿಂದ 8,000 ಸೀಟುಗಳನ್ನು ವಿಐಪಿಗಳು,…

Read More

Video: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿಯ ತಿರುವು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ಹೈ-ಡ್ರಾಮಾ ಈಗ ಮತ್ತೊಂದು ರೋಚಕ ಘಟ್ಟಕ್ಕೆ ತಲುಪಿದೆ. ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ (OPS) ಅವರು ಇಂದು ದಿಢೀರನೆ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಗೆ ಆಗಮಿಸುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಓಪಿಎಸ್ ಅವರು ಡಿಎಂಕೆ ಶಾಸಕರ ಸಭೆಯಲ್ಲಿ ಭಾಗಿಯಾಗುತ್ತಿರುವುದು ಹೊಸ ಮೈತ್ರಿಯ ಮುನ್ಸೂಚನೆ ನೀಡುತ್ತಿದೆ. ಎಐಎಡಿಎಂಕೆಯಿಂದ ದೂರವಾಗಿರುವ ಓಪಿಎಸ್, ಈಗ ವಿಜಯ್ ಅವರ ಟಿವಿಕೆ ಅಥವಾ ಸ್ಟಾಲಿನ್ ಅವರ…

Read More

‘ಪುಷ್ಪ 2’ ಸಂತ್ರಸ್ತನ ಭೇಟಿ ಮಾಡಿದ ಅಲ್ಲು ಕುಟುಂಬ; ಹಲವು ಭರವಸೆ – Kannada News | Allu Family Visits Pushpa 2 Stampede Victim Sritej, Offers Full Support 2 Cr Aid

ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಸಾಕಷ್ಟು ನೋವು ಅನುಭವಿಸಿದರು. ವೈಯಕ್ತಿಕವಾಗಿಯೂ ಈ ಘಟನೆ ಅವರ ಮೇಲೆ ಸಾಕಷ್ಟು ಪ್ರಭಾವ ಬೀರಿತು. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಮನೆಗೆ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಾಗೂ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಭೇಟಿ ನೀಡಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಚಿಕಿತ್ಸೆ ಮತ್ತು ಮುಂದಿನ ಭವಿಷ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ…

Read More

ಕಲಬುರಗಿಯಲ್ಲಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ಮೋಸ – Kannada News | Government Job Scam: people Lost lakhs of rupees for Nursing Job Fraud

ಇಎಸ್​ಐ ಆಸ್ಪತ್ರೆ, ವಂಚಿಸಿರುವ ವ್ಯಕ್ತಿ ಪ್ರದೀಪ್Image Credit source: tv9 kannada ಕಲಬುರಗಿ, ಮೇ 07: ಸರ್ಕಾರಿ ಕೆಲಸ‌ ಸಿಗುತ್ತೆ ಅಂದರೆ ಸಾಕು ಜನ ಅದನ್ನ ಪಡೆಯಲೇಬೆಕು ಅಂತ ಕಾದು ಕುಳಿತಿರುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಭೂಪನೊಬ್ಬ ಕಲಬುರಗಿಯಲ್ಲಿ (kalaburagi) ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ (Job Scam) ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಮುಖ್ಯಾಂಶಯಗಳು ಕಲಬುರಗಿಯ ESI ಆಸ್ಪತ್ರೆಯಲ್ಲಿ ನರ್ಸಿಂಗ್…

Read More

ವಿಷ್ಣುವರ್ಧನ್ ಗೆಳೆತನದ ಬಗ್ಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಹೀಗೆ ಹೇಳಿದ್ದರು – Kannada News | SP Balasubrahmanyam once talked about his bonding with Vishnuvardhan

ಎಸ್​​ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಭಾರತ ಕಂಡ ಅತ್ಯದ್ಭುತ ಗಾಯಕ. ಅವರಷ್ಟು ಅದ್ಭುತವಾಗಿ, ಭಾವಪರವಶರಾಗಿ ಹಾಡುವ ಹಾಡುಗಗಾರು ಇಂದಿಲ್ಲ. ಎಸ್​ಪಿ ಬಾಲಸುಬ್ರಹ್ಮಣ್ಯಂ ಮೂಲತಃ ತಮಿಳುನಾಡಿನವರಾಗಿದ್ದರು ಅವರಿಗೆ ಕರ್ನಾಟಕದಲ್ಲಿ ಸಿಕ್ಕಷ್ಟು, ಪ್ರೀತಿ, ಆದರ, ಗೌರವ ಇನ್ನೆಲ್ಲೂ ಅಗಾಧವಾದುದು. ‘ನನ್ನ ಮುಂದಿನ ಜನ್ಮ ಕರ್ನಾಟಕದಲ್ಲೇ’ ಎಂದಿದ್ದರು ಎಸ್​​ಪಿಬಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಚಿತ್ರರಂಗದ ನಟರು, ತಂತ್ರಜ್ಞರೊಟ್ಟಿಗೆ ಬಲು ಆಪ್ತ ನಂಟಿತ್ತು. ಎಸ್​​ಪಿಬಿ ಅವರಿಗಾಗಿ ಅಣ್ಣಾವ್ರು ಹಾಡಿದ್ದನ್ನು ಹಲವು ವರ್ಷ ಬಲು ಪ್ರೀತಿಯಿಂದ, ಭಕ್ತಿಯಿಂದ ನೆನಪಿಸಿಕೊಳ್ಳುತ್ತಿದ್ದರು ಎಸ್​​ಪಿಬಿ. ಅದು ಮಾತ್ರವೇ ಅಲ್ಲದೆ,…

Read More

ಲಾಭದ ಹಳಿಗೆ ಬಂದ ಪೇಟಿಎಂ; 663 ಕೋಟಿ ರೂ ನಷ್ಟದಿಂದ 552 ಕೋಟಿ ರೂ ಲಾಭ ಕಂಡ ಒನ್97 ಕಮ್ಯೂನಿಕೇಶನ್ಸ್ – Kannada News | Paytm parent One97 Communications show profit in 26fy, a first since its listing

ಬೆಂಗಳೂರು, ಮೇ 7: ಪೇಟಿಎಂ ಸ್ಥಾಪನೆಯಾದಾಗಿನಿಂದ ಈ ಸಂಸ್ಥೆ ಇದೇ ಮೊದಲ ಬಾರಿಗೆ ವಾರ್ಷಿಕ ಲಾಭದ ಮುಖ ಕಂಡಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ (One97 Communications) ತನ್ನ ವಾರ್ಷಿಕ ವರದಿಯಲ್ಲಿ ಲಾಭ ತೋರಿಸಿದೆ. 2025-26ರ ಹಣಕಾಸು ವರ್ಷದಲ್ಲಿ 552 ಕೋಟಿ ಲಾಭ ಮಾಡಿರುವುದು ಅದು ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ. ಹಿಂದಿನ ವರ್ಷದಲ್ಲಿ (2024-25) ಈ ಸಂಸ್ಥೆ 663 ಕೋಟಿ ರೂ ನಷ್ಟ ಅನುಭವಿಸಿತ್ತು. ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ (Stock Market) ಲಿಸ್ಟ್…

Read More

ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ – Kannada News | BJP MLC H Vishwanath retires from electoral politics

ಮೈಸೂರು, (ಮೇ,7): ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ (H Vishwanath)​ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಆದ್ರೆ,ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ…

Read More

ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ: ದೋಚಿದ್ದು 9.7 ಲಕ್ಷ ಮೌಲ್ಯದ ಆಭರಣ – Kannada News | Bengaluru Hospital Staff Steals Patient’s 9.7 Lakh Gold Jewelry

ಬೆಂಗಳೂರು, ಮೇ 07: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಆಸ್ಪತ್ರೆಯೊಂದರಲ್ಲಿ ಘಟನೆ ಒಟ್ಟು 9.7 ಲಕ್ಷ…

Read More

ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ – Kannada News | BJP MLC H Vishwanath Oppressed to celebrate BS yediyurappa Abhimanotsava

ಮೈಸೂರು, (ಮೇ 07): ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು (yediyurappa Abhimanotsava) ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. . ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು…ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬಿಜೆಪಿ ಪರಿಷತ್ ಸದಸ್ಯ ಹೆಚ್​.ವಿಶ್ವನಾಥ್​  (BJP MLC H Vishwanath) ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿಂದು…

Read More