ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬಂದಂತಹ ವರದಿಯನ್ನು ಆಧರಿಸಿಕೊಂಡು ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ರಾಜ್ಯ ಮಕ್ಕಳ ಆಯೋಗವು ಔಷದ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದ್ದು, ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಿದಂತೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಏನು?

ಮಲ್ಪೆಯ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ನಡುವಿನ ಪ್ರೇಮ ಪ್ರಕರಣ ಸಂಬಂಧ ಎರಡೂ ಕಡೆಯವರು ಮಾತುಕತೆ ನಡೆಸಲು ಬೀಚ್‌ ಸಮೀಪ ಸೇರಿದ್ದರು. ಆರಂಭದಲ್ಲಿ ಶಾಂತವಾಗಿಯೇ ನಡೆಯುತ್ತಿದ್ದ ಮಾತುಕತೆ, ಕೆಲವೇ ಕ್ಷಣಗಳಲ್ಲಿ ಮಾತಿನ ಚಕಮಕಿಗೆ ತಿರುಗಿದೆ. ಕುಟುಂಬದ ಗೌರವ ಮತ್ತು ಸಂಬಂಧಿತ ವಿಚಾರಗಳ ಬಗ್ಗೆ ಆರೋಪ–ಪ್ರತ್ಯಾರೋಪಗಳು ನಡೆಯುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಾಕ್ಷಿದಾರರ ಪ್ರಕಾರ, ತೀವ್ರ ವಾಗ್ವಾದದ ಮಧ್ಯೆ ಆರೋಪಿಗಳಲ್ಲಿ ಒಬ್ಬನು ತನ್ನ ಬಳಿಯಿದ್ದ ಚಾಕುವನ್ನು ಹೊರತೆಗೆದು ಮಂಜು ಕೊಳ ಅವರ ಹೊಟ್ಟೆಯ ಎಡಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವವಾಗುತ್ತಾ ಅವರು ನೆಲಕ್ಕುರುಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದನ್ನು ತಡೆಯಲು ಮುಂದಾದ ವರುಣ್ ಹಾಗೂ ಲತೀಶ್ ಅವರಿಗೂ ಚಾಕು ಇರಿದು ಗಾಯಗೊಳಿಸಲಾಗಿದೆ ಎನ್ನಲಾಗಿದೆ. ಸಂತೋಷ್ ಮತ್ತು ಧನುಷ್ ಮೇಲೂ ಕೈಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ; ಉಡುಪಿಯಲ್ಲಿ ಮತ್ತೊಬ್ಬನ ಬಂಧನ

ಇನ್ನು ಪ್ರಕರಣ ಸಂಬಂಧ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನೀತ್​ ಪೂಜಾರಿ ಹಾಗೂ ಅಭಿಜಿತ್​​ ಎಂಬ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ. ಘಟನೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:39 pm, Thu, 5 March 26

Source link

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ – Kannada News | Ustaad Bhagat Singh to clash with Dhurandhar 2 on March 19 as Toxic postponed

ಮಾರ್ಚ್ 19ರಂದು ಭಾರತದ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಸಿನಿಮಾಗಳ ನಡುವೆ ದೊಡ್ಡ ಕ್ಲ್ಯಾಶ್ ಆಗುವ ಸಾಧ್ಯತೆ ಇತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿತು. ಮಾರ್ಚ್ 19ರ ಬದಲು ಜೂನ್ 4ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಹಾಗಂತ ‘ಧುರಂಧರ್ 2’ (Dhurandhar 2) ಸಿನಿಮಾಗೆ ಪೈಪೋಟಿ ಕಡಿಮೆ ಆಗಿಲ್ಲ. ಮಾರ್ಚ್ 19ರಂದು ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗಲಿವೆ. ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಅದೇ ದಿನ ಬಿಡುಗಡೆ ಆಗಲಿದೆ. ಪವನ್ ಕಲ್ಯಾಣ್ ನಟನೆಯ ತೆಲುಗಿನ ‘ಉಸ್ತಾದ್ ಭಗತ್ ಸಿಂಗ್’ (Ustaad Bhagat Singh) ಕೂಡ ಮಾರ್ಚ್ 19ರಂದು ಬಿಡುಗಡೆ ಆಗುವುದು ಖಚಿತವಾಗಿದೆ.

ಪವನ್ ಕಲ್ಯಾಣ್ ಅವರು ಈಗ ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಆಂಧ್ರದ ಉಪ ಮುಖ್ಯಮಂತ್ರಿ ಆಗಿರುವ ಅವರು ಇನ್ಮುಂದೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುವುದು ಅನುಮಾನ. ಹಾಗಾಗಿ ‘ಉಸ್ತಾದ್ ಭಗತ್ ಸಿಂಗ್’ ಅವರ ಕೊನೇ ಸಿನಿಮಾ ಎಂದು ಪರಿಗಣಿಸಲಾಗುತ್ತಿದೆ. ಆದ್ದರಿಂದ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.

ಹರೀಶ್ ಶಂಕರ್ ಅವರು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶ್ರೀಲೀಲಾ, ರಾಶಿ ಖನ್ನಾ, ಅಶುತೋಶ್ ರಾಣ ಮುಂತಾದವರು ಪವನ್ ಕಲ್ಯಾಣ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಮಾರ್ಚ್ 26ರಂದು ಬಿಡುಗಡೆ ಮಾಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಮುಂದಕ್ಕೆ ಹೋಗುತ್ತಿದ್ದಂತೆಯೇ ಮಾರ್ಚ್ 19ರ ದಿನಾಂಕವನ್ನು ‘ಉಸ್ತಾದ್ ಭಗತ್ ಸಿಂಗ್’ ಚಿತ್ರ ಆಕ್ರಮಿಸಿಕೊಂಡಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಉಸ್ತಾದ್ ಭಗತ್ ಸಿಂಗ್’ ಚಿತ್ರ ಈ ಮೊದಲೇ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾದ ಬಿಡುಗಡೆ ತಡವಾಗಿತ್ತು. ಈಗ ಒಂದು ವಾರ ಮುಂಚಿತವಾಗಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ತಿಳಿದು ಪವನ್ ಕಲ್ಯಾಣ್ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಬಂಡವಾಳ ಹೂಡಿದೆ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಸೆಲೆಬ್ರೇಷನ್ ಮಾಡಲು ನಮ್ಮ ಉಸ್ತಾದ್ ಒಂದು ವಾರ ಮುಂಚೆಯೇ ಬರುತ್ತಿದ್ದಾರೆ. ಮಾರ್ಚ್ 19ರಂದು ವಿಶ್ವಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಪೋಸ್ಟ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್ – Kannada News | DK Shivakumar FIR Stayed by HC in BJP Poster Morphing Case

ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes

ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​ಗೂ ಎಕ್ಸ್​​ನ ಪೋಸ್ಟ್​​​ಗೂ ಸಂಬಂಧವಿಲ್ಲವೆಂದು ಡಿಕೆ ಶಿವಕುಮಾರ್​ ಪರ ವಕೀಲ ಹೆಚ್.ವಿ.ಪ್ರವೀಣ್ ಗೌಡ ವಾದಿಸಿದ್ದಾರೆ. ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆಗೆ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದನ್ನು ಡಿಕೆ ಶಿವಕುಮಾರ್​​ ಸೇರಿದಂತೆ ಕಾಂಗ್ರೆಸ್​​ ನಾಯಕರು ತಿರುಚಿ ಪೋಸ್ಟರ್​​ಗಳನ್ನು ಹಾಕಿದ್ದರು.

ಇದನ್ನೂ ಓದಿ: ಕರಸೇವಕರ ಪಟ್ಟಿ ಕೋಡುತ್ತೇನೆ, ತಾಕತ್ತಿದ್ದರೆ ಸಿದ್ದರಾಮಯ್ಯ ಬಂಧಿಸಲಿ: ಸುನೀಲ ಕುಮಾರ, ಬಿಜೆಪಿ ಶಾಸಕ

ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪ ಹಿನ್ನೆಲೆ ದೂರು ದಾಖಲಾಗಿತ್ತು. ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಬಿಆರ್​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ  – Kannada News | Bengaluru Couples’ Financial Reality: High Living Costs and The Challenge of Saving in Metro City

ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮ ಚರ್ಚೆಯಾಗಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೌದು ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ ಆರ್ಥಿಕ ಹೊಂದಾಣಿಕೆಗಳ ಬಗ್ಗೆ ಇಲ್ಲಿ ಹೇಳಿದ್ದಾರೆ.

ನನ್ನ ಸ್ನೇಹಿತ ಇತ್ತೀಚೆಗೆ ಬೆಂಗಳೂರಿನಲ್ಲಿ ವಿವಾಹವಾದರು. ಮದುವೆಯಾದ ತಕ್ಷಣ, ಅವರ ಪತ್ನಿ ‘ನಾನು ಎಲ್ಲವನ್ನೂ ಬಿಟ್ಟು ಸರ್ಕಾರಿ ಪರೀಕ್ಷೆಗಳಿಗೆ ಪೂರ್ಣ ಸಮಯ ತಯಾರಿ ನಡೆಸುತ್ತೇನೆ.’ ಎಂದು ಹೇಳಿದ್ದಾರೆ. ಇದಕ್ಕೆ ಬೇಡ ಎಂದು ಹೇಳುವಂತಿಲ್ಲ, ಯಾಕೆಂದರೆ ಅದು ಅವರ ಕನಸು, ಅದನ್ನು ನನಸು ಮಾಡುವುದು ನನ್ನ ಸ್ನೇಹಿತನ ಕರ್ತವ್ಯ, ಮದುವೆಗೆ ಮೊದಲು ಆಕೆ ಕೆಲಸಕ್ಕೆ ಹೋಗುತ್ತಿರಲಿಲ್ಲ. ಕೆಲಸವಿಲ್ಲ, ಕೇವಲ ತಯಾರಿ. ಆದ್ದರಿಂದ ಅವಳ ಕಡೆಯಿಂದ ಆದಾಯ ಅಕ್ಷರಶಃ ಶೂನ್ಯ. ಹಾಗಾಗಿ ಮದುವೆಯ ನಂತರ ಬೆಂಗಳೂರಿನಂತಹ ನಗರವು ಹಣ ಎಷ್ಟು ಬೇಗ ಖಾಲಿಯಾಗುತ್ತದೆ ಎಂಬುದಕ್ಕೆ ಇವರ ಜೀವನ ಉದಾಹರಣೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​​ನಲ್ಲಿ ಹೇಳಿರುವ ಪ್ರಕಾರ ಬೆಂಗಳೂರಿನಂತಹ ನಗರದಲ್ಲಿ ಖರ್ಚುಗಳು ಎಷ್ಟು ಬೇಗನೆ ಹೆಚ್ಚಾಗಬಹುದು ಎಂಬುದನ್ನು ದಂಪತಿಗಳು ಬೇಗನೆ ಅರಿತುಕೊಂಡರು. ನನ್ನ ಗೆಳೆಯ ಮೊದಲು ಒಬ್ಬಂಟಿಯಾಗಿದ್ದ, ಆಗ ತುಂಬಾ ಆರಾಮದಾಯಕ ಜೀವನ ನಡೆಸುತ್ತಿದ್ದ, ಆದರೆ ಇದೀಗ ಆ ಪರಿಸ್ಥಿತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನು ಈ ಪೋಸ್ಟ್​​​ನಲ್ಲಿ ತಮ್ಮ ಸ್ನೇಹಿತನಿಗೆ ಮದುವೆಗೂ ಮೊದಲು ಆಗುತ್ತಿದ್ದ ಖರ್ಚು ಹಾಗೂ ಮದುವೆಯ ನಂತರದ ಖರ್ಚಿನ ಪಟ್ಟಿ ಹೇಳಿದ್ದಾರೆ. ಮದುವೆಗೂ ಮುನ್ನ ಅವರಿಗಿದ್ದ ಸಂಬಳ 1.15 ಲಕ್ಷ ರೂ. ಅವರ ಮಾಸಿಕ ಖರ್ಚುಗಳು ಬಾಡಿಗೆ ಅಥವಾ ಪಿಜಿ 16 ಸಾವಿರ ರೂ. ಊಟದ ಖರ್ಚು 7 ಸಾವಿರ ರೂ., ಇಂಧನ ಹಾಗೂ ಮೆಟ್ರೋ 3 ಸಾವಿರ ರೂ., ಇಂಟರ್ನೆಟ್ ಜೊತೆಗೆ ಫೋನ್ 1 ಸಾವಿರ ರೂ., ಜಿಮ್​​​​ ಖರ್ಚು 1,500 ರೂ., ಹೊರಗೆ ಊಟ 4 ಸಾವಿರ ರೂ., ಶಾಂಪಿಂಗ್ 2 ಸಾವಿರ ರೂ. ಒಟ್ಟು ತಿಂಗಳ ಖರ್ಚು 35 ಸಾವಿರ ರೂ. ಉಳಿತಾಯ 80 ಸಾವಿರ ರೂ.

ಇಲ್ಲಿದೆ ನೋಡಿ ಪೋಸ್ಟ್ :

ಆದರೆ ಇದೀಗ ಮದುವೆಯ ನಂತರ, ಜೀವನ ಬದಲಾವಣೆ ಆಗಿದೆ. ವೆಚ್ಚ ಕೂಡ ಬದಲಾವಣೆ ಆಗಿದೆ. ಒಬ್ಬನೇ ದುಡಿಯುವುದು ಎಷ್ಟೊಂದು ಕಷ್ಟ ಎಂಬುದಕ್ಕೆ ಇದೇ ಉದಾಹರಣೆ. ಇಬ್ಬರು ದುಡಿದ್ರೆ, ಈ ಖರ್ಚಿನ ಹೊರೆ ಒಬ್ಬರ ಮೇಲೆ ಬೀಳುತ್ತಿರಲಿಲ್ಲ. 1BHK ಬಾಡಿಗೆ 40 ಸಾವಿರ ರೂ., ದಿನಸಿ ಮತ್ತು ಅಡುಗೆಮನೆ 18 ಸಾವಿರ ರೂ., ಮನೆ ಸೇವಕಿಗೆ 7,000 ರೂ., ವಿದ್ಯುತ್, ವೈಫೈ ಜೊತೆಗೆ ಗ್ಯಾಸ್ 6,000 ರೂ., ಇಬ್ಬರಿಗೆ ಪ್ರಯಾಣದ ಖರ್ಚು 10,000 ರೂ., ಊಟ ಜೊತೆಗೆ ವಾರಾಂತ್ಯದ ಯೋಜನೆ 12,000 ರೂ., ಜತೆಗೆ ಶಾಪಿಂಗ್ 8 ಸಾವಿರ ರೂ., ಆರೋಗ್ಯ ವಿಮೆ ಮತ್ತು ಔಷಧಿಗಳು 5 ಸಾವಿರ ರೂ. ವಾಷಿಂಗ್ ಮೆಷಿನ್, ಹಾಸಿಗೆ ಮತ್ತು ಇತರ ವಸ್ತುಗಳಿಗೆ, ಪೀಠೋಪಕರಣಗಳು, ಜತೆಗೆ ಅದರ ಇಎಮ್​​​ಐ 15,000 ರೂ. ಒಟ್ಟು ತಿಂಗಳು ಖರ್ಚು 1,21,000 ರೂ.

ಇದನ್ನೂ ಓದಿ: ಬಣ್ಣ ಎರಚಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ವಿಲವಿಲನೆ ಒದ್ದಾಡಿದ ಬಾಲಕ

ಇದೀಗ ಈ ಖರ್ಚು ಅವರಲ್ಲಿ ಆರ್ಥಿಕ ಒತ್ತಡವನ್ನು ಹೆಚ್ಚಿಸಿದೆ. ಮೊದಲಿನಂತೆ ಈಗ ಉಳಿತಾಯಗಳು ಆಗುತ್ತಿಲ್ಲ ಎಂಬ ನೋವು ಅವರಲ್ಲಿ ಇದೆ. ದೊಡ್ಡ ನಗರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅನೇಕ ದಂಪತಿಗಳು ಎದುರಿಸಬಹುದಾದ ವಾಸ್ತವವನ್ನು ಇದು ಎತ್ತಿ ತೋರಿಸುತ್ತಿದೆ. ಈ ಪೋಸ್ಟ್ X ನಲ್ಲಿ 197,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಪ್ರಮುಖ ನಗರಗಳಲ್ಲಿನ ಹಣಕಾಸು ಯೋಜನೆ ಮತ್ತು ಜೀವನ ವೆಚ್ಚದ ಬಗ್ಗೆ ನೆಟ್ಟಿಗರು ಚರ್ಚಿಸಿದ್ದಾರೆ. ಇದು ಮೆಟ್ರೋ ನಗರದಲ್ಲಿ ವಾಸಿಸುವವವರ ವಾಸ್ತವ. ಮದುವೆಯ ನಂತರ ಖರ್ಚುಗಳು ದ್ವಿಗುಣಗೊಂಡಾಗ ಉತ್ತಮ ಸಂಬಳ ಕೂಡ ಬೇಗನೆ ಮಾಯವಾಗುತ್ತದೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಬೆಂಗಳೂರಿನಂತಹ ನಗರದಲ್ಲಿ ಮದುವೆಯಾದಾಗ ಸರ್ಕಾರಿ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಆರ್ಥಿಕ ಬೆಂಬಲವಿಲ್ಲದಿದ್ದರೆ ತುಂಬಾ ಕಷ್ಟವಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ ಮತ್ತು ಅಸಹಜತೆ ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಕೆಲವು ಸಂದರ್ಭಗಳಲ್ಲಿ ತಲೆನೋವು, ಚಡಪಡಿಕೆ ಮತ್ತು ಹಸಿವು ಕಡಿಮೆಯಾಗುವ ಸಮಸ್ಯೆಯೂ ಉಂಟಾಗಬಹುದು. ವಯೋವೃದ್ಧರು, ಗರ್ಭಿಣಿಯರು ಹಾಗೂ ಒತ್ತಡ ಹೆಚ್ಚಾಗಿ ಮಾಡಿಕೊಳ್ಳುವವರಲ್ಲಿ ಇದರ ಅಪಾಯ ಹೆಚ್ಚಾಗಿರುತ್ತದೆ. ಈ ಲಕ್ಷಣಗಳು ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದರ ಸೂಚನೆಯಾಗಿರುತ್ತದೆ. ಹಾಗಾಗಿ ಮಲಬದ್ಧತೆ ತಡೆಗಟ್ಟಲು ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಮಲಬದ್ಧತೆಯಿಂದ ಮುಕ್ತಿ ಪಡೆಯುವುದು ಹೇಗೆ?

ಕೆಲವು ಸಂದರ್ಭಗಳಲ್ಲಿ ಮಲಬದ್ಧತೆಯಿಂದ ಹಸಿವು ಕಡಿಮೆಯಾಗಬಹುದು ಮತ್ತು ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವ ಸಮಸ್ಯೆಯೂ ಉಂಟಾಗಬಹುದು. ನಿರಂತರವಾಗಿ ಜೋರಾಗಿ ಒತ್ತಡ ಹಾಕುವುದರಿಂದ ಅಂತರಾಯಗಳ ಮೇಲೆ ಒತ್ತಡ ಹೆಚ್ಚಾಗಿ, ಮುಂದೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಪ್ರತಿದಿನ ಮಲಬದ್ಧತೆ ಇರುವುದನ್ನು ಸಣ್ಣ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬಾರದು. ಜೊತೆಗೆ ಅದನ್ನು ತಡೆಗಟ್ಟಲು ಮೊದಲಿಗೆ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡುವುದು ಅಗತ್ಯ. ಪ್ರತಿದಿನ ಫೈಬರ್ ಹೆಚ್ಚಿರುವ ಆಹಾರಗಳಾದ ಹಣ್ಣು, ತರಕಾರಿ ಮತ್ತು ಧಾನ್ಯಗಳ ಸೇವನೆ ಮಾಡಬೇಕು. ಜೊತೆಗೆ ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಮಲ ಮೃದುವಾಗಿ ಬೇಗ ಹೊರಹೋಗುತ್ತದೆ.

ಇದನ್ನೂ ಓದಿ: ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ!

ಅಷ್ಟೇ ಅಲ್ಲ, ಪ್ರತಿದಿನ ಒಂದು ನಿಗದಿತ ಸಮಯದಲ್ಲಿ ಮಲವಿಸರ್ಜನೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಮತ್ತು ಜೋರಾಗಿ ಒತ್ತಡ ಹಾಕುವುದನ್ನು ತಪ್ಪಿಸಬೇಕು. ಲಘು ವ್ಯಾಯಾಮ ಅಥವಾ ವಾಕಿಂಗ್ ಮಾಡುವುದರಿಂದ ಜೀರ್ಣಕ್ರಿಯೆಯನ್ನು ಸರಾಗವಾಗಿ ಆಗುತ್ತದೆ. ಎಣ್ಣೆ ಹೆಚ್ಚಿರುವ ಮತ್ತು ಜಂಕ್ ಆಹಾರವನ್ನು ಕಡಿಮೆ ಮಾಡುವುದು ಸಹ ಮುಖ್ಯ. ಒತ್ತಡ ಕಡಿಮೆ ಮಾಡಿಕೊಳ್ಳುವುದು ಮತ್ತು ಸರಿಯಾಗಿ ನಿದ್ರೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಯಾವಾಗ ವೈದ್ಯರ ಭೇಟಿ ಮಾಡಬೇಕು?

ಮಲಬದ್ಧತೆ ಸಮಸ್ಯೆ ಎರಡರಿಂದ ಮೂರು ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಮಲವಿಸರ್ಜನೆ ವೇಳೆ ರಕ್ತ ಕಾಣಿಸಿಕೊಳ್ಳುವುದು, ತೀವ್ರ ಹೊಟ್ಟೆನೋವು, ಅಚಾನಕ್ ತೂಕ ಕಡಿಮೆಯಾಗುವುದು ಅಥವಾ ನಿರಂತರ ದೌರ್ಬಲ್ಯ ಕಾಣಿಸಿಕೊಳ್ಳುವುದು ಗಂಭೀರ ಸೂಚನೆಗಳಾಗಿರಬಹುದು. ಔಷಧಿ ತೆಗೆದುಕೊಂಡರೂ ಸಮಸ್ಯೆ ನಿವಾರಣೆಯಾಗದಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ದೀರ್ಘಕಾಲ ಸ್ವಯಂ ಔಷಧಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಸರಿಯಾದ ಪರೀಕ್ಷೆ ಮತ್ತು ವೈದ್ಯರ ಸಲಹೆಯಿಂದ ಸಮಸ್ಯೆಯ ನಿಜವಾದ ಕಾರಣ ತಿಳಿದು, ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು – Kannada News | 2nd Iranian Ship Heads To Sri Lanka Officials Say It Could Be Targeted

ನವದೆಹಲಿ, ಮಾರ್ಚ್ 5: ಯುನೈಟೆಡ್ ಸ್ಟೇಟ್ಸ್ ಜಲಾಂತರ್ಗಾಮಿ ನೌಕೆ ಬುಧವಾರ ಇರಾನಿನ ಯುದ್ಧನೌಕೆಯನ್ನು ಧ್ವಂಸಗೊಳಿಸಿ, 87 ನಾವಿಕರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಎರಡನೇ ಇರಾನಿನ (Iran) ಯುದ್ಧನೌಕೆ ತಮ್ಮ ದೇಶದ ಪ್ರಾದೇಶಿಕ ನೀರಿನ ಕಡೆಗೆ ಚಲಿಸಿದಂತೆ ಶ್ರೀಲಂಕಾದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದಿನ ದಾಳಿಯ ನಂತರ ಹೊಸ ಹಡಗಿನ ಮೇಲೂ ದಾಳಿಯಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಇರಾನ್ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶವನ್ನು ಬಯಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಯುದ್ಧನೌಕೆಯನ್ನು ಸುರಕ್ಷತೆಗಾಗಿ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶಿಸುವಂತೆ ಇರಾನ್ ಮಾಡಿದ ಮನವಿಯ ಕುರಿತು ಚರ್ಚಿಸಲು ಹಿರಿಯ ಸರ್ಕಾರ ಮತ್ತು ಭದ್ರತಾ ನಾಯಕರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆ

ಇರಾನಿನ 2ನೇ ಹಡಗು ಶ್ರೀಲಂಕಾದ ಪ್ರಾದೇಶಿಕ ಜಲಪ್ರದೇಶದ ಹೊರಗೆ ಇದೆ. ಈ ಹಡಗು 100ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದು, ಅವರ ಸುರಕ್ಷತೆಯ ಬಗ್ಗೆ ಭಯ ಹುಟ್ಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕ ಸೇನೆಯು ಹೇಳಿಕೊಂಡ ಟಾರ್ಪಿಡೊ ದಾಳಿಯಲ್ಲಿ ಸಾವನ್ನಪ್ಪಿದ 87 ಇರಾನಿನ ನಾವಿಕರ ಅವಶೇಷಗಳನ್ನು ಹಸ್ತಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ. ರಕ್ಷಿಸಲ್ಪಟ್ಟ 32 ಇರಾನಿಯನ್ನರಿಗೆ ಪೊಲೀಸರು ಮತ್ತು ಗಣ್ಯ ಕಮಾಂಡೋಗಳು ಒದಗಿಸಿದ ಬಿಗಿ ಭದ್ರತೆಯಲ್ಲಿ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಲಂಕಾ ನೌಕಾಪಡೆಯ ವಕ್ತಾರ ಬುದ್ಧಿಕ ಸಂಪತ್ ಅವರು ನೌಕಾಪಡೆಯ ಹಡಗುಗಳು ಕಾಣೆಯಾದ ನಾವಿಕರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ಹೇಳಿದ್ದಾರೆ. ರಕ್ಷಕರು ಸ್ಥಳವನ್ನು ತಲುಪುವ ಹೊತ್ತಿಗೆ ಹಡಗು ಮುಳುಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ

ಶ್ರೀಲಂಕಾ ಇರಾನ್ -ಅಮೆರಿಕ-ಇಸ್ರೇಲ್ ಸಂಘರ್ಷದ ಉದ್ದಕ್ಕೂ ತಟಸ್ಥತೆಯನ್ನು ಕಾಯ್ದುಕೊಂಡಿದೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯನ್ನು ಪರಿಹರಿಸಲು ಮಾತುಕತೆಗೆ ಪದೇ ಪದೇ ಕರೆ ನೀಡಿದೆ. ಇರಾನ್ ಶ್ರೀಲಂಕಾದ ಚಹಾದ ಪ್ರಮುಖ ಖರೀದಿದಾರನಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ? – Kannada News | Bundle of Aadhaar Cards Found on Netravati River Bank in Farangipete, Mangaluru

ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆImage Credit source: Tv9 Kannada

ಮಂಗಳೂರು, ಮಾರ್ಚ್​​ 05:  ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್​​ ಕಾರ್ಡ್​ಗಳನ್ನು ಕಂಡು ಸಾರ್ವಜನಿಕರು ಶಾಕ್​​ ಆಗಿದ್ದು, ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಅಂಚೆ ಇಲಾಖೆಯಿಂದ ಸರಿಯಾದ ವಿಳಾಸಕ್ಕೆ ಆಧಾರ್ ಕಾರ್ಡ್ ತಲುಪುತ್ತಿಲ್ಲವೆಂದು ಆರೋಪಿಸಿದ್ದಾರೆ.

ತಮ್ಮ ಕುಟುಂಬದವರ ಎಲ್ಲರ ಅಧಾರ್​​ ಕಾರ್ಡ್​​ ನದಿಯಲ್ಲಿ ಸಿಕ್ಕಿದೆ. ಗ್ರಾಮದ ನೂರಾರು ಜನರ ಕಾರ್ಡ್​ಗಳು ಸಹ ಇದರಲ್ಲಿವೆ. ಹಣ ಪಾವತಿಸಿ ವಿಳಾಸ, ಹೆಸರು ಬದಲಾವಣೆ ಮಾಡಿಸಿದವರು ಪರಿಷ್ಕೃತ ಕಾರ್ಡ್​​ ಈಗ ಬರಬಹುದು, ಆಗ ಬರಬಹುದು ಎಂದು ಕಾಯುತ್ತಿದ್ದರೆ ಅವೆಲ್ಲವೂ ಈಗ ನದಿ ನೀರಲ್ಲಿ ತೇಲಿಬರುತ್ತಿರೋದು ಕಂಡುಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೆಕು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಆಧಾರ್ ಕಾರ್ಡ್​ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಬದಲಿಸುವುದು ಹೇಗೆ?

ತನಿಖೆಗೆ ಸೂಚಿಸಿದ ಸ್ಪೀಕರ್‌ ಯು.ಟಿ. ಖಾದರ್​​

ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಮಾರ್ಚ್​​ 03, 2026ರಂದು ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ ಸಭೆ ಸ್ಪೀಕರ್​​ ಮತ್ತು ಸ್ಥಳೀಯ ಶಾಸಕ ಯು.ಟಿ. ಖಾದರ್​​ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:56 pm, Thu, 5 March 26

Source link

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ:

ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ ದಿನಗಳಲ್ಲಿ, ನಕಾರಾತ್ಮಕ ಗ್ರಹಗಳ ಶಕ್ತಿಯು ಹೆಚ್ಚು ಸಕ್ರಿಯವಾಗಿರುತ್ತದೆ, ಇದು ಮನೆಯಲ್ಲಿ ಆರ್ಥಿಕ ತೊಂದರೆಗಳು, ಜಗಳಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ತರಬಹುದು.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಪಾದರಕ್ಷೆಗಳನ್ನು ಸಂಗ್ರಹಿಸಲು ಮತ್ತು ಬಳಸಲು ವಾಸ್ತು ನಿಯಮಗಳು:

ಯಾವಾಗಲೂ ಮನೆಯ ಹೊರಗೆ ಅಥವಾ ಶೂ ರ್ಯಾಕ್‌ನಲ್ಲಿ ಶೂಗಳನ್ನು ಇರಿಸಿ. ಮುಖ್ಯ ದ್ವಾರದ ಒಳಗೆ ಅಥವಾ ಪೂಜಾ ಸ್ಥಳದ ಬಳಿ ಅವುಗಳನ್ನು ಇಡಬೇಡಿ. ಶೂಗಳನ್ನು ತಲೆಕೆಳಗಾಗಿ ಇಡಬೇಡಿ. ರಾತ್ರಿಯಲ್ಲಿ ಶೂಗಳನ್ನು ಹೊರಗೆ ಇಡುವುದು ಶುಭವೆಂದು ಪರಿಗಣಿಸಲಾಗುತ್ತದೆ.ಈ ನಿಯಮಗಳನ್ನು ಅನುಸರಿಸುವುದರಿಂದ ಮನೆಯಲ್ಲಿ ಲಕ್ಷ್ಮಿ ದೇವಿಯ ಉಪಸ್ಥಿತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ದೂರವಿಡುತ್ತದೆ. ಶೂಗಳಿಗೆ ಸಂಬಂಧಿಸಿದ ವಾಸ್ತು ನಿಯಮಗಳು ಚಿಕ್ಕದಾಗಿ ಕಾಣಿಸಬಹುದು, ಆದರೆ ಅವುಗಳನ್ನು ಅನುಸರಿಸುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಉಳಿಯುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ ಹೈಡ್ರಾಮಾ ನಡೆದಿದೆ.  ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ತಂಡ ಮನೆ ಮುಂದೆ ಕಾದು ಕುಳಿತಿದ್ದು, ಅಧಿಕಾರಿಗಳು ನಿರಂತರವಾಗಿ ಮನವಿ ಮಾಡಿದರೂ ಸತ್ಯನಾರಾಯಣ ಮನೆ ಬಾಗಿಲು ತೆರೆಯಲಿಲ್ಲ. ಅಧಿಕಾರಿಗಳನ್ನು ದೀರ್ಘ ಕಾಲ ಕಾಯಿಸಿದ ಬಳಿಕ ಅಂತಿಮವಾಗಿ ಮನೆಯ ಡೋರ್​​ ಓಪನ್​​ ಮಾಡಲಾಗಿದ್ದು, ಮನೆಯೊಳಗೆ ಎಂಟ್ರೀ ಕೊಟ್ಟಿರುವ ಲೋಕಾಯುಕ್ತ ಟೀಂ ಆಸ್ತಿ ದಾಖಲೆಗಳು, ಆದಾಯ ಮತ್ತು ಸಂಪಾದಿಸಿದ ಆಸ್ತಿಗಳ ಪರಿಶೀಲನೆ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Exit mobile version