Headlines

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…

Read More

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ…

Read More

ಕಮರ್ಷಿಯಲ್ ಅಷ್ಟೇ ಅಲ್ಲ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಕಿಲೋಮೀಟರ್ ಉದ್ದದ ಕ್ಯೂ!

ಬೆಂಗಳೂರು, ಮಾರ್ಚ್ 25: ಕರ್ನಾಟಕದ ವಿವಿಧ ಕಡೆಗಳಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಕೊರತೆ ಎದ್ದು ಕಾಣುತ್ತಿದೆ. ಕಲಬುರಗಿ, ಆಳಂದ, ಬಳ್ಳಾರಿ, ಸಂಡೂರು ಮತ್ತು ದಾವಣಗೆರೆಯ ಜಗಳೂರಿನಲ್ಲಿ ಜನರು ಗ್ಯಾಸ್ ಸಿಲಿಂಡರ್‌ಗಳಿಗಾಗಿ ಪರದಾಡುತ್ತಿದ್ದಾರೆ. ಇಂಡಿಯನ್ ಗ್ಯಾಸ್ ಏಜೆನ್ಸಿಗಳ ಮುಂದೆ ರಾತ್ರಿಯಿಡೀ ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯಗಳು ಕಂಡುಬಂದಿವೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರೂ ಸಹ ಸಿಲಿಂಡರ್ ಪಡೆಯಲು ಮಳೆ, ಗಾಳಿ, ಬಿಸಿಲನ್ನೂ ಲೆಕ್ಕಿಸದೆ ಕಾಯುತ್ತಿದ್ದಾರೆ. ಖಾಲಿ ಸಿಲಿಂಡರ್‌ಗಳನ್ನು ಕಿಲೋಮೀಟರ್‌ಗಟ್ಟಲೆ…

Read More

“ನಾವೇನು ಫಿಲಂ ಸ್ಟಾರ್ಸ್ ಅಲ್ಲ”: ರಿಯಾನ್​ನತ್ತ ವೈಭವ್ ಓರೆಗಣ್ಣಿನ  ನೋಟ! – Kannada News | IPL 2026: Vaibhav Sooryavanshi Stares At Riyan Parag

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಮುಲ್ಲನ್​ಪುರ್​ಗೆ ಬಂದಿಳಿದಿದೆ. ನಾಳೆ (ಮೇ 27) ನಡೆಯಲಿರುವ ಈ ಪಂದ್ಯಕ್ಕಾಗಿ ಮುಂಬೈ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಆರ್​ಆರ್ ಆಟಗಾರರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು (ಛಾಯಾಗ್ರಾಹಕರು) ಸುತ್ತುವರಿದಿದ್ದರು. ಇದೇ ವೇಳೆ ಆಗಮಿಸಿದ ರಿಯಾನ್ ಪರಾಗ್​ಗೆ ಫೋಟೋ ಪೋಸ್ ನೀಡುವಂತೆ ಸೂಚಿಸಿದ್ದಾರೆ. “ರಿಯಾನ್ ಭಾಯ್, ವೈಭವ್ ಜೊತೆ ಒಂದು ಫೋಟೋ ಪ್ಲೀಸ್, ಇಬ್ಬರೂ ಒಟ್ಟಿಗೆ ನಿಲ್ಲಿ” ಎಂದು ಛಾಯಾಗ್ರಾಹಕರೊಬ್ಬರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ…

Read More

ಬಿಡುಗಡೆ ಆಯ್ತು ‘ಲವ್ ಮಾಕ್ಟೆಲ್ 3’ ಟ್ರೈಲರ್: ಇದು ಕೊನೆಯ ಕತೆ

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾದ ಟ್ರೈಲರ್ ಇಂದು (ಮಾರ್ಚ್ 07) ಬಿಡುಗಡೆ ಆಗಿದೆ. 2020 ರಲ್ಲಿ ಬಿಡುಗಡೆ ಆದ ‘ಲವ್ ಮಾಕ್ಟೆಲ್’ ಸಿನಿಮಾದ ಕತೆಯನ್ನು ಎಳೆಯುತ್ತಾ, ಹಿಂಜುತ್ತಾ ಇದೀಗ ‘ಲವ್ ಮಾಕ್ಟೆಲ್ 3’ ವರೆಗೂ ಬಂದಿದ್ದು, ಟ್ರೇಲರ್​​ನಲ್ಲೇ ಡಾರ್ಲಿಂಗ್ ಕೃಷ್ಣ ಅವರು ಹೇಳಿರುವಂತೆ ಇದು ‘ಲವ್ ಮಾಕ್ಟೆಲ್ 3’ ಸಿನಿಮಾದ ಅಂತಿಮ ಕತೆ ಆಗಿರಲಿದೆ. ‘ಲವ್ ಮಾಕ್ಟೆಲ್ 3’ ಸಿನಿಮಾ ಮೂಲಕ ‘ಲವ್ ಮಾಕ್ಟೆಲ್’ ಸರಣಿಗೆ ಸಮಾಪ್ತಿ…

Read More

‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಅಡ್ವಾಣಿಗೆ ಬಂಪರ್ ಸಂಭಾವನೆ; 15 ಕೋಟಿ ರೂಪಾಯಿ ಪಡೆದ ನಟಿ – Kannada News | Yash and Kiara Advani new song Tabaahi released from Toxic movie Rs 15 Cr remuneration

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಈಗ ಈ ಚಿತ್ರದ ಪ್ರಮುಖ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರಿಗೆ ನೀಡಲಾಗಿರುವ ಬೃಹತ್ ಮೊತ್ತದ ಸಂಭಾವನೆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ. ಕಿಯಾರಾ ಅವರು ಈ ಸಿನಿಮಾದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ಭಾರಿ ಸಂಭಾವನೆಯ (Remuneration) ಬೇಡಿಕೆ ಇಟ್ಟಿದ್ದರು. ಅವರು ಕೇಳಿದ ಸಂಭಾವನೆಯನ್ನು ನಿರ್ಮಾಪಕರು ನೀಡಿದ್ದಾರೆ ಎಂಬ…

Read More

Hanuman Jayanti 2026: ಏಪ್ರಿಲ್ 02 ಹನುಮ ಜಯಂತಿ; ಈ ದಿನ ತಪ್ಪದೇ ಈ ಸರಳ ಪರಿಹಾರ ಅನುಸರಿಸಿ!

ಹಿಂದೂ ಧರ್ಮದಲ್ಲಿ ಚೈತ್ರ ಮಾಸದ ಹುಣ್ಣಿಮೆಗೆ ಅಪಾರ ಪ್ರಾಮುಖ್ಯತೆಯಿದೆ. ಪುರಾಣಗಳ ಪ್ರಕಾರ, ಶ್ರೀರಾಮನ ಪರಮ ಭಕ್ತ ಹನುಮಂತನು ಜನಿಸಿದ ಈ ಪವಿತ್ರ ದಿನವನ್ನು ‘ಹನುಮ ಜಯಂತಿ‘ ಅಥವಾ ‘ಹನುಮಾನ್ ಜನ್ಮೋತ್ಸವ’ ಎಂದು ದೇಶಾದ್ಯಂತ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 2 ರಂದು ಹನುಮಾನ್ ಜಯಂತಿ ಬಂದಿದ್ದು, ಈ ದಿನದಂದು ಬಜರಂಗಬಲಿಯನ್ನು ಆರಾಧಿಸುವುದರಿಂದ ಜೀವನದ ಸಕಲ ಭಯ ಹಾಗೂ ಕಷ್ಟಗಳು ದೂರವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ವಿಶೇಷವಾಗಿ ಜಾತಕದಲ್ಲಿರುವ ಮಂಗಳ ದೋಷದ ಪ್ರಭಾವವನ್ನು ತಗ್ಗಿಸಲು ಈ…

Read More

ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಅಹಮದಾಬಾದ್‌ನಲ್ಲಿ ನಡೆದ ಆರ್‌ಸಿಬಿ ತಂಡದ ಪಾರ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿರುವ ವಿಶೇಷ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಎಂದಿನ ಎನರ್ಜಿಟಿಕ್ ಶೈಲಿಯಲ್ಲಿ ಬಾಲಿವುಡ್ ಮತ್ತು ಪಾಪ್ ಹಾಡುಗಳಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕೊಹ್ಲಿ ಅವರ…

Read More

CSK vs RR: ಒಂದಂಕಿ ದಾಟದ 8 ಬ್ಯಾಟರ್ಸ್​; ಕಷ್ಟಪಟ್ಟು 100 ರನ್ ಗಡಿ ದಾಟಿದ ಸಿಎಸ್​ಕೆ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ ತಂಡಗಳು ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ, ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿ ಕೇವಲ 127 ರನ್​ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಜೆಮಿ…

Read More

ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ಸಂದರ್ಭದ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!

ನವದೆಹಲಿ, ಮಾರ್ಚ್ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎದುರಾದ ತುರ್ತು ಪರಿಸ್ಥಿತಿ ಮತ್ತೆ ಸೃಷ್ಟಿಯಾಗುತ್ತದೆಯಾ? ಇಂಥದ್ದೊಂದು ಪ್ರಶ್ನೆಗೆ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಮಾಡಿರುವ ಶಿಫಾರಸುಗಳು ಕಾರಣವಾಗಿದೆ. ಸದ್ಯ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ಇದನ್ನು ನಿರ್ವಹಿಸಲು ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಗೊಳಿಸುವಂತೆ ಐಇಎ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್‌ಡೌನ್ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂಬ ಕಳವಳಗಳ ನಡುವೆ ಈ ಕ್ರಮಗಳನ್ನು ಸೂಚಿಸಲಾಗಿದೆ. ಪೆಟ್ರೋಲ್ ಉಳಿಸುವುದಕ್ಕಾಗಿ…

Read More