ಸರ್ಕಾರಿ ಹುದ್ದೆಗಳ ಭರ್ತಿಗೆ ಬಿಜೆಪಿ ಹೋರಾಟದ ಬ್ಯಾನರ್‌ಗಳಲ್ಲಿ ರಾಜ್ಯಾಧ್ಯಕ್ಷರ ಫೋಟೊಗೆ ಕೋಕ್, ಶುರುವಾಯ್ತು ರಾಜಕೀಯ ಚರ್ಚೆ – Kannada News | Dharwad BJP Protest Over Vacant Government Posts Sparks Row as BY Vijayendra’s Photo Missing from Banners

ಧಾರವಾಡ, ಫೆಬ್ರವರಿ 26: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಫೆಬ್ರವರಿ 24ರಂದು ಧಾರವಾಡದಲ್ಲಿ (Dharwad) ಬಿಜೆಪಿ (BJP) ಆಯೋಜಿಸಿದ್ದ ಪ್ರತಿಭಟನೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಉದ್ಯೋಗಾಕಾಂಕ್ಷಿಗಳ ಪರವಾಗಿ ಕರೆ ನೀಡಿದ್ದ ಈ ಹೋರಾಟ ಶ್ರೀನಗರ ವೃತ್ತದಿಂದ ಜಯನಗರ ಮಾರ್ಗವಾಗಿ ಮಿಚಗಿನ್ ಕಂಪೌಂಡ್‌ ವರೆಗೆ ಜಾಥಾ ರೂಪದಲ್ಲಿ ನಡೆದಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 40ಕ್ಕೂ ಹೆಚ್ಚು ಕಡೆಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಫೋಟೊಗಳೇ ಇರಲಿಲ್ಲ ಎಂಬುದು ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಬ್ಯಾನರ್‌ಗಳ ಮೇಲ್ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

ಬ್ಯಾನರ್​​ಗಳ ಕೆಳಭಾಗದಲ್ಲಿ ಎಡಗಡೆ ಶಾಸಕ ಅರವಿಂದ ಬೆಲ್ಲದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಚಿತ್ರಗಳನ್ನು ಬಳಸಲಾಗಿತ್ತು. ಆದರೆ ಯಾವುದೇ ಬ್ಯಾನರ್‌ನಲ್ಲೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರ ಕಾಣಿಸದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪಕ್ಷದ ಅಧಿಕೃತ ಹೋರಾಟದ ಬ್ಯಾನರ್‌ಗಳಲ್ಲಿ ರಾಜ್ಯಾಧ್ಯಕ್ಷರ ಚಿತ್ರಕ್ಕೆ ಕತ್ತರಿ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಶಾಸಕ ಅರವಿಂದ ಬೆಲ್ಲದ ಉದ್ದೇಶಪೂರ್ವಕವಾಗಿಯೇ ವಿಜಯೇಂದ್ರ ಫೋಟೊ ಕೈಬಿಟ್ಟಿದ್ದಾರೆ ಎನ್ನುವ ಮಾತುಗಳು ಕೂಡ ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ 

ಈ ಘಟನೆ ಬಿಜೆಪಿ ಒಳಜಗಳವನ್ನು ಬಿಂಬಿಸುತ್ತಿದೆಯಾ? ಅಥವಾ ಸ್ಥಳೀಯ ಮಟ್ಟದ ಆಯೋಜನಾ ನಿರ್ಲಕ್ಷ್ಯವೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು? – Kannada News | British borrowed Rs 35,000 from Indian businessman in 1917, now that family wants money back

ಭೋಪಾಲ್, ಫೆಬ್ರುವರಿ 26: ಮೊದಲ ವಿಶ್ವ ಮಹಾಯುದ್ಧದ (World War I) ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಬ್ರಿಟಿಷ್ ಸರ್ಕಾರಕ್ಕೆ ಭಾರತೀಯ ಉದ್ಯಮಿಯೊಬ್ಬರು ಕೊಟ್ಟಿದ್ದ 35,000 ರೂ ಸಾಲದ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಲು ಅವರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಸೀಹೋರ್​ನ (Sehore, Madhya Pradesh) ಈ ಕುಟುಂಬವು 35,000 ರೂ ಸಾಲವನ್ನು ವಾಪಸ್ ಕೇಳಲು ಕಾನೂನು ಮಾರ್ಗಗಳನ್ನು ಅವಲೋಕಿಸುತ್ತಿದ್ದಾರೆ.

1917ರಲ್ಲಿ ಸೇಠ್ ಜುಮ್ಮಾ ಲಾಲ್ ರುದಿಯಾ (Seth Jumma Lal Ruthia) ಅವರು ಸ್ಥಳೀಯ ಬ್ರಿಟಿಷ್ ಆಡಳಿತಕ್ಕೆ 35,000 ರೂ ಹಣವನ್ನು ಸಾಲವಾಗಿ ನೀಡಿದ್ದರು. ಈ ಅವರ ಮೊಮ್ಮಗ ವಿವೇಕ್ ರುದಿಯಾ (Vivek Ruthia) ಅವರು ಆ ಸಾಲವನ್ನು ಮರುಪಾವತಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಬ್ರಿಟಿಷ್ ಸರ್ಕಾರಕ್ಕೆ ಲೀಗಲ್ ನೋಟೀಸ್ ಕಳುಹಿಸಲು ಸಜ್ಜಾಗಿದ್ದಾರೆ.

1917, ಮೊದಲ ವಿಶ್ವ ಮಹಾಯುದ್ಧದ ಕಾಲ. ಯುದ್ಧದ ವೆಚ್ಚ ಭರಿಸಲು ಬ್ರಿಟಿಷ್ ಸರ್ಕಾರವು ಸಾಲಪತ್ರಗಳನ್ನು (Debt instruments) ಮಾರುತ್ತಿತ್ತು. ಆಗ ಸಾಲಕ್ಕೆ ಶೇ. 5.5 ಬಡ್ಡಿ ನಿಗದಿಯಾಗಿತ್ತು. ಸೇಠ್ ರಾಮಕಿಶನ್ ಜಸ್​ಕರಣ್ ರುದಿಯಾ ಎನ್ನುವ ಹೆಸರಿನ ಆಗಿನ ಪ್ರಖ್ಯಾತ ಕಂಪನಿ ಮಾಲೀಕರಾಗಿದ್ದ ಸೇಠ್ ಜುಮ್ಮಾ ಲಾಲ್ ಅವರು 1917ರ ಜೂನ್ 4ರಂದು 35,000 ರೂ ಸಾಲ ಕೊಟ್ಟಿರುವುದರ ದಾಖಲೆ ಇದೆ. ಜುಮ್ಮಾ ಲಾಲ್ ನಿಧನರಾದ ಬಳಿಕ ಅವರ ಕುಟುಂಬಸ್ಥರಿಗೆ ಈ ದಾಖಲೆ ಸಿಕ್ಕಿದೆ.

ಇದನ್ನೂ ಓದಿ: ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

ಅಂದಿನ ಕಾಲಕ್ಕೆ 35,000 ರೂ ಬಹಳ ದೊಡ್ಡ ಹಣ. ಅದನ್ನು ಹಾಗೆ ಸುಮ್ಮನೆ ಬಿಡುವುದು ಯಾಕೆ ಎಂದು ಅವರ ಕುಟುಂಬ ಸದಸ್ಯರು ಆಲೋಚಿಸಿ, ಅದನ್ನು ವಸೂಲಿ ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.

1917ರಲ್ಲಿ ಕೊಟ್ಟ 35,000 ರೂ ಸಾಲದ ಮೌಲ್ಯ ಈಗ ಎಷ್ಟು?

1917, ಎಂದರೆ ಸುಮಾರು 108-109 ವರ್ಷದ ಹಿಂದೆ. ಆಗ ಆ ಸಾಲಕ್ಕೆ ಶೇ. 5.5 ಬಡ್ಡಿಯಂತೆ ಲೆಕ್ಕ ಹಾಕಿದರೆ 35,000 ರೂ ಹಣ ಇವತ್ತು 10-11 ಕೋಟಿ ರೂ ಆಗಿರುತ್ತಿತ್ತು.

ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ಸೇಠ್ ಜುಮ್ಮಾ ಲಾಲ್ ದೊಡ್ಡ ಉದ್ಯಮಿಯಾಗಿದ್ದವರು…

ಭೋಪಾಲ್ ಪ್ರಾಂತ್ಯದಲ್ಲಿ ಮತ್ತು ಸೀಹೋರ್ ಭಾಗದಲ್ಲಿ ರೂದಿಯಾ ಕುಟುಂಬ ಬಹಳ ಶ್ರೀಮಂತಿಕೆ ಹೊಂದಿತ್ತು. ಅಪಾರವಾದ ಭೂಮಿ ಮತ್ತು ಉದ್ಯಮಗಳನ್ನು ಹೊಂದಿತ್ತು. ಸೇಠ್ ಜುಮ್ಮಾ ಲಾಲ್ ರೂದಿಯಾ ಅವರು ಅಂದಿನ ಕಾಲದ ದೊಡ್ಡ ಬ್ಯುಸಿನೆಸ್ ಎನಿಸಿದ್ದ ಬಟ್ಟೆ ಹಾಗೂ ಆಹಾರಧಾನ್ಯಗಳ ಪ್ರಮುಖ ವರ್ತಕರೆನಿಸಿದ್ದರು. ಹೀಗಾಗಿ, ಬ್ರಿಟಿಷ್ ಆಡಳಿತಕ್ಕೆ ಅವರು ಅಷ್ಟು ದೊಡ್ಡ ಮೊತ್ತದ ಸಾಲ ಕೊಡಲು ಸಾಧ್ಯವಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Netanyahu’s Modi Jacket Moment Steals Spotlight at Bilateral Dinner

ಇಸ್ರೇಲ್, ಫೆಬ್ರವರಿ 26: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್​​ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿದ್ದಾರೆ. ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದ್ದರು.

ಬುಧವಾರ ಜೆರುಸಲೇಂನಲ್ಲಿ ನಡೆದ ಜಂಟಿ ಭೋಜನಕೂಟಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತದ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸುವ ಮೂಲಕ ಪ್ರಧಾನಿ ಮೋದಿಗೆ ಸರ್​ಪ್ರೈಸ್ ಕೊಟ್ಟಿದ್ದಾರೆ.ಇಸ್ರೇಲಿ ಪ್ರಧಾನಿ ಮೋದಿ ಜಾಕೆಟ್ ಎಂದೂ ಕರೆಯಲ್ಪಡುವ ಕಲ್ಲಿನ ಬಣ್ಣದ ನೆಹರೂ ಜಾಕೆಟ್ ಅನ್ನು ಆಯ್ಕೆ ಮಾಡಿಕೊಂಡಿದ್ದರು.

ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಪ್ರತಿಕ್ರಿಯಿಸಿದ್ದು, ನಿಜಕ್ಕೂ ಅದ್ಭುತ, ಭಾರತೀಯ ಉಡುಪಿನ ಮೇಲಿನ ನಿಮ್ಮ ಒಲವು ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳ ಮೇಲಿನ ನಿಮ್ಮ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಬರೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ – Kannada News | Bengalurus Water Crisis Deepens: 142 Lakes Unfit for Drinking, Pollution Board Reveals

ಬೆಂಗಳೂರು, ಫೆಬ್ರವರಿ 26: ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿಗೆ ಜಲಾಘಾತದ ಭೀತಿ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯ ಪ್ರಕಾರ, ನಗರದ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ಈ ಕೆರೆಗಳಲ್ಲಿ 50 ಕೆರೆಗಳು ಡಿ ವರ್ಗದಲ್ಲಿದ್ದರೆ, ಉಳಿದ 92 ಕೆರೆಗಳು ಇ ವರ್ಗದಲ್ಲಿವೆ. ಇ ವರ್ಗವೆಂದರೆ ಅತ್ಯಂತ ಕಳಪೆ ಗುಣಮಟ್ಟದ ನೀರನ್ನು ಹೊಂದಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲ. ಮೋರಿ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಕೆರೆಗಳ ಒಡಲು ಸೇರುತ್ತಿರುವುದೇ ಈ ಕಲುಷಿತಕ್ಕೆ ಪ್ರಮುಖ ಕಾರಣವಾಗಿದೆ. ಇದರಿಂದ ಅಂತರ್ಜಲ ಮಟ್ಟವೂ ಕಲುಷಿತಗೊಂಡು, ಜಲಚರಗಳ ಜೀವಕ್ಕೂ ಕುತ್ತು ಬಂದಿದೆ. ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ? – Kannada News | ‘Dew Cure” Chemical Used At Chepauk For IND vs ZIM T20 World Cup Match

T20 World Cup 2026: ಭಾರತ ಮತ್ತು ಝಿಂಬಾಬ್ವೆ ನಡುವಣ ನಿರ್ಣಾಯಕ ಪಂದ್ಯಕ್ಕಾಗಿ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಇಬ್ಬನಿಯನ್ನು ತಡೆಗಟ್ಟಲು “ಡ್ಯೂ ಕ್ಯೂರ್” (Dew Cure) ಎಂಬ ವಿಶೇಷ ರಾಸಾಯನಿಕವನ್ನು ಬಳಸಲಾಗಿದೆ. ಪಂದ್ಯದ ವೇಳೆ ಎದುರಾಗುವ ಇಬ್ಬನಿ ಸಮಸ್ಯೆಯನ್ನು ತಡೆಗಟ್ಟುವ ಸಲುವಾಗಿ ಈ ರಾಸಾಯನಿಕವನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ.

“ಡ್ಯೂ ಕ್ಯೂರ್” ಕೆಮಿಕಲ್​ ಅನ್ನು ಸಾಮಾನ್ಯವಾಗಿ ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ (MLB) ಪಂದ್ಯಗಳಲ್ಲಿ ಮೈದಾನವನ್ನು ಒಣಗಿಸಲು ಬಳಸಲಾಗುತ್ತದೆ. ಇದೀಗ ಇದೇ ವಿಶೇಷ ರಾಸಾಯನಿಕವನ್ನು ಚೆನ್ನೈನ ಚೆಪಾಕ್ ಮೈದಾನಕ್ಕೆ ಸಿಂಪಡಿಸಲಾಗಿದೆ.

“ಡ್ಯೂ ಕ್ಯೂರ್” ಹೇಗೆ ಕಾರ್ಯ ನಿರ್ವಹಿಸುತ್ತೆ?

“ಡ್ಯೂ ಕ್ಯೂರ್” ಅನ್ನು ನೀರಿನೊಂದಿಗೆ ಬೆರೆಸಿ ಹುಲ್ಲಿನ ಮೇಲೆ ಸಿಂಪಡಿಸಲಾಗುತ್ತದೆ. ಇದು ಹುಲ್ಲಿನ ಎಲೆಗಳ ಮೇಲಿರುವ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದಾಗಿ ರಾತ್ರಿಯ ಸಮಯದಲ್ಲಿ ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿದ್ದರೂ ಮೈದಾನ ಒಣಗಿಯೇ ಇರುತ್ತದೆ.

ಚೆನ್ನೈನಲ್ಲಿ ತೇವಾಂಶ 80-90% ಕ್ಕಿಂತ ಹೆಚ್ಚಿರುವ ಕಾರಣ, ತಮಿಳುನಾಡು ಕ್ರಿಕೆಟ್ ಸಂಸ್ಥೆಯು (TNCA) ಮಂಗಳವಾರ ಮತ್ತು ಬುಧವಾರವೇ ಇದನ್ನು ಸಿಂಪಡಿಸಿದೆ. ಪಂದ್ಯದ ದಿನವಾದ ಗುರುವಾರ ಮಧ್ಯಾಹ್ನವೂ ಮತ್ತೊಮ್ಮೆ ಸಿಂಪಡಿಸುವ ಗುರಿ ಹೊಂದಿದೆ.

ಇದರಿಂದಾಗುವ ಲಾಭವೇನು?

ಸಾಮಾನ್ಯವಾಗಿ ರಾತ್ರಿ ಪಂದ್ಯಗಳ ವೇಳೆ ಇಬ್ಬನಿ ಬಿದ್ದಾಗ ಬಾಲ್ ಒದ್ದೆಯಾಗುವುದರಿಂದ ಬೌಲರ್‌ಗಳಿಗೆ ಚೆಂಡನ್ನು ಹಿಡಿಯಲು ಗ್ರಿಪ್ ಸಿಗುವುದಿಲ್ಲ. ಇದರಿಂದ ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಲಾಭವಾಗುತ್ತದೆ. ಈ ಸಮಸ್ಯೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಅದರಂತೆ ಕಳೆದ ಎರಡು ದಿನಗಳ ಕಾಲ ಚೆನ್ನೈನ ಎಂಎ ಚಿದಂಬರಂ ಮೈದಾನಕ್ಕೆ “ಡ್ಯೂ ಕ್ಯೂರ್” ಅನ್ನು ಸಿಂಪಡಿಸಲಾಗಿದೆ. ಇನ್ನು ಕಳೆದ ರಾತ್ರಿ ಭಾರತ ತಂಡವು ಅಭ್ಯಾಸ ನಡೆಸಿದ್ದು, ಈ ವೇಳೆ ಮೈದಾನದಲ್ಲಿ ಇಬ್ಬನಿ ಇಲ್ಲದಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದೆ.

ಈ ಪ್ರಯೋಗ ಯಶಸ್ವಿಯಾದರೆ, ಮುಂಬರುವ ಐಪಿಎಲ್ 2026 ರ ಎಲ್ಲಾ ಪಂದ್ಯಗಳಲ್ಲಿ ಹಾಗೂ ವಿಶ್ವಕಪ್‌ನ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಲ್ಲಿಯೂ “ಡ್ಯೂ ಕ್ಯೂರ್” ಬಳಸಲು ಬಿಸಿಸಿಐ  ಚಿಂತನೆ ನಡೆಸಿದೆ.

ಪಂದ್ಯ ಗೆಲ್ಲಲು ಪ್ಲ್ಯಾನ್?

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗಿದೆ. ಈ ಪಂದ್ಯಗಳ ವೇಳೆ ಒಮ್ಮೆಯೂ “ಡ್ಯೂ ಕ್ಯೂರ್” ಬಳಸಲಾಗಿಲ್ಲ. ಆದರೆ ಭಾರತ ತಂಡದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಅನುಕೂಲವಾಗಲೆಂದೇ “ಡ್ಯೂ ಕ್ಯೂರ್”  ಬಳಸಲಾಗಿದೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಚೆನ್ನೈ ಪಿಚ್​ನಲ್ಲಿ ಟಾಸ್ ಪ್ರಮುಖ ಪಾತ್ರವಹಿಸುತ್ತದೆ. ಏಕೆಂದರೆ 2ನೇ ಬ್ಯಾಟಿಂಗ್ ವೇಳೆ ಇಬ್ಬನಿ ಇರುವುದರಿಂದ ಬೌಲಿಂಗ್ ಮಾಡುವುದು ಕಷ್ಟಕರ. ಇತ್ತ ಟಾಸ್ ಸೋತರೆ ಟೀಮ್ ಇಂಡಿಯಾ ಗೆಲುವು ಕೂಡ ಕಷ್ಟವಾಗಲಿದೆ. ಅದರಲ್ಲೂ ನೆಟ್ ರನ್ ರೇಟ್ ಟಾರ್ಗೆಟ್​ನೊಂದಿಗೆ ಗೆಲ್ಲಲು ಭಾರತ ತಂಡ ಪ್ಲ್ಯಾನ್ ರೂಪಿಸುತ್ತಿದೆ.

ಇದರ ನಡುವೆ ಇಬ್ಬನಿ ಸಮಸ್ಯೆಯನ್ನೇ ಇಲ್ಲದಾಗಿಸುವ ಮೂಲಕ ಟಾಸ್ ಚಿಂತೆಯನ್ನು ದೂರ ಮಾಡಿದ್ದಾರೆ. ಇದು ಟೀಮ್ ಇಂಡಿಯಾಗೆ ಅನುಕೂಲ ಮಾಡಿಕೊಡಲೆಂದೇ ಮಾಡಿದ ತಂತ್ರ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.  ಒಟ್ಟಿನಲ್ಲಿ ಭಾರತದ ಪಂದ್ಯಕ್ಕೂ ಚೆನ್ನೈ ಮೈದಾನದಲ್ಲಿ ಸಿಂಪಡಿಸಿದ “ಡ್ಯೂ ಕ್ಯೂರ್” ಹೊಸ ಚರ್ಚೆಯನ್ನು ಹುಟ್ಟುಹಾಕುವ ಸಾಧ್ಯತೆಯಿದೆ.

ಚೆನ್ನೈ ಪಿಚ್ ರಿಪೋರ್ಟ್​:

ಚೆನ್ನೈನ ಎಂಎ ಚಿದಂಬರಂ ಮೈದಾನವು ಸಾಂಪ್ರದಾಯಿಕವಾಗಿ ಸ್ಪಿನ್ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಇಲ್ಲಿನ ಪಿಚ್ ಒಣಗಿದ್ದು, ಚೆಂಡು ನಿಧಾನವಾಗಿ ಬ್ಯಾಟ್‌ಗೆ ಬರುತ್ತದೆ. ಇದರಿಂದ ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್​ ಅವರಂತಹ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸುವ ಸಾಧ್ಯತೆಯಿದೆ.

ಸಾಮಾನ್ಯವಾಗಿ ಚೆನ್ನೈನಲ್ಲಿ ರಾತ್ರಿ ವೇಳೆ ಇಬ್ಬನಿ ಬರುವುದರಿಂದ ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಲಾಭವಾಗುತ್ತಿತ್ತು. ಆದರೆ, ಈ ಬಾರಿ “ಡ್ಯೂ ಕ್ಯೂರ್” ರಾಸಾಯನಿಕ ಬಳಸಿರುವುದರಿಂದ ಮೈದಾನ ಒಣಗಿರಲಿದೆ. ಇದರಿಂದ ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡಲು ಹೆಚ್ಚು ಆಸಕ್ತಿ ತೋರಿಸಬಹುದು, ಏಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ಮತ್ತಷ್ಟು ನಿಧಾನಗತಿಯಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?

ಇನ್ನು ಈ ಮೈದಾನದಲ್ಲಿ ಹೈ-ಸ್ಕೋರಿಂಗ್ ನಿರೀಕ್ಷಿಸುವಂತಿಲ್ಲ. ಇಲ್ಲಿ 160 ರಿಂದ 175 ರನ್‌ಗಳು ಸವಾಲಿನ ಮೊತ್ತವೆಂದು ಪರಿಗಣಿಸಲ್ಪಡುತ್ತವೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಷ್ಟವಾಗುವುದರಿಂದ, ಮೊದಲ 6 ಓವರ್‌ಗಳ ಪವರ್‌ಪ್ಲೇನಲ್ಲಿ ಗರಿಷ್ಠ ರನ್ ಗಳಿಸುವುದು ತಂಡಗಳಿಗೆ ಮುಖ್ಯವಾಗುತ್ತದೆ.

Published On – 11:07 am, Thu, 26 February 26

Source link

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು – Kannada News | Akhila Pajimannu Reveals Why She took divorce from Dhananjay

ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ವಿವಾಹ ಆಗಿ ಕೆಲವು ವರ್ಷ ಒಟ್ಟಿಗೆ ಇದ್ದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಈ ವರೆಗೆ ಅವರು ಈ ಬಗ್ಗೆ ಮಾತನಾಡಿಯೇ ಇರಲಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಅಖಿಲಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಬಗ್ಗೆ ಕೇಳಿ ಬಂದ ವದಂತಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಆ ಬಗ್ಗೆ ಇಲ್ಲಿ ನೋಡೋಣ.

‘ಕೊರೊನಾ ಸಮಯದಲ್ಲಿ ನಾನು ಮದುವೆ ಆದೆ. ಆ ಬಳಿಕ ಅಮೆರಿಕ ಹೋದೆ. ನಾನು ಅಲ್ಲಿ ಮ್ಯೂಸಿಕ್ ಕ್ಲಾಸ್ ಮಾಡುತ್ತಿದ್ದೆ. ಅಲ್ಲಿ ಗೆಳೆಯರನ್ನು ಮಾಡಿಕೊಳ್ಳಲು ಆರಂಭಿಸಿದೆ. ನಾನು ಖುಷಿಯಾಗಿದ್ದೆ’ ಎಂದು ದಿ ಪವರ್​ ಹೌಸ್​ ವೈನ್ಸ್​​ಗೆ ನೀಡಿದ ಸಂದರ್ಶನದಲ್ಲಿ ಅಖಿಲಾ ಅವರು ಮಾತನಾಡಿದ್ದಾರೆ.

‘ನನಗೆ ವಿಚ್ಛೇದನ ವಿಷಯವು ಲೀಕ್ ಆಗುವುದು ಇಷ್ಟವೇ ಇರಲಿಲ್ಲ. ನನ್ನ ತಂದೆ ನನ್ನನ್ನು ಪ್ರಿಪ್ಯಾರ್ ಮಾಡಿದ್ರು. ಸೆಲೆಬ್ರಿಟಿಗಳ ವಿಚ್ಛೇದನ ವಿಷಯ ಲೀಕ್ ಆಗುತ್ತದೆ ಎಂದು ನನ್ನ ತಂದೆಗೆ ಗೊತ್ತಿತ್ತು. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರ ಅಲ್ಲವೇ ಅಲ್ಲ. ರಾತ್ರಿ ನಾವು ಡಿವೋರ್ಸ್ ಆಗೋಣ ಎಂದು ನಿರ್ಧರಿಸಿ, ಮರುದಿನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರು ನಾವಲ್ಲ. ನಾವಿಬ್ಬರೂ ಒಂದೂವರೆ ವರ್ಷ ಸಂಬಂಧ ಸರಿದೂಗಿಸಲು ಪ್ರಯತ್ನ ಮಾಡಿದೆವು. ವರ್ಕ್ ಆಗುತ್ತಿಲ್ಲ ಎಂಬುದು ಗೊತ್ತಾದ ಬಳಿಕ ಭಾರತಕ್ಕೆ ಮರಳಿದೆ’ ಎಂದು ಅವರು ಹೇಳಿದರು.

‘ಸುದ್ದಿ ಬರುತ್ತೆ ಹೋಗುತ್ತೆ. ಆದರೆ, ನಾವು ಪಡುವ ಕಷ್ಟ ನನಗೆ ಮಾತ್ರ ಗೊತ್ತು ಎಂದು ನನಗೆ ಅನಿಸಿತು. ಸುದ್ದಿ ಬರುತ್ತೆ-ಹೋಗುತ್ತೆ. ನನಗೆ ರಿಯಾಲಿಶಿಟಿ ಶೋ ಆಫರ್ ಬಂತು ಎಂದು ನಾನು ವಿಚ್ಛೇದನ ನಿರ್ಧಾರ ತೆಗೆದುಕೊಂಡೆ ಎಂದೆಲ್ಲ ಹೇಳಲಾಯಿತು. ಆದರೆ, ಆ ರೀತಿ ಏನು ಇಲ್ಲ’ ಎಂದು ಅವರು ವಿವರಿಸಿದರು.

ಇದನ್ನೂ ಓದಿ:  ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ವಿಚ್ಛೇದನಕ್ಕೆ ಕಾರಣವೇನು ಗೊತ್ತಾ?

ಧನಂಜಯ್ ಅವರು ಅಮೆರಿಕದಲ್ಲಿ ವಾಸವಿದ್ದಾರೆ. ಅವರು ಅಖಿಲಾಗೆ ಕೆಲಸ ಮಾಡುವ ಸ್ವಾತಂತ್ರ್ಯ ಕೊಟ್ಟಿಲ್ಲ ಎಂದೆಲ್ಲ ಹೇಳಲಾಗಿತ್ತು. ಆದರೆ, ಅಖಿಲಾ ಅದೆಲ್ಲವನ್ನೂ ತಳ್ಳಿ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ – Kannada News | Tumakuru: Man Climbs 120 Foot 400kV High Tension Tower in Pavagada Over Debt Pressure, Rescued by Fire Officials

ತುಮಕೂರು, ಫೆಬ್ರವರಿ 26: ಲಕ್ಷಾಂತರ ರೂಪಾಯಿ ಕೈಸಾಲ ಮಾಡಿ ಮರುಪಾವತಿಸಲು ಆಗದೆ ಸಂಕಷ್ಟಕ್ಕೊಳಗಾದ ವ್ಯಕ್ತಿಯೊಬ್ಬ 400 ಕೆವಿ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಕೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ ಎಂಬಾತ ಬಿಕೆಹಳ್ಳಿ–ದಳವೆಹಳ್ಳಿ ರಸ್ತೆಯ ಮಧ್ಯೆ ಇರುವ ಸುಮಾರು 120 ಅಡಿ ಎತ್ತರದ ಹೈಟೆನ್ಶನ್ ಟವರ್‌ ಏರಿ ಕುಳಿತಿದ್ದಾನೆ. ಸಾಲದ ಒತ್ತಡದಿಂದ ಬೇಸತ್ತು ಈ ದುಸ್ಸಾಹಸಕ್ಕೆ ಕೈಹಾಕಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ತಿರುಮಣಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಗೋಪಾಲನನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದರು. ಹಲವು ಗಂಟೆಗಳ ಮಾತುಕತೆಯ ಬಳಿಕ ಗೋಪಾಲ ಸಮಾಧಾನಗೊಂಡರೂ, ಅಷ್ಟು ಎತ್ತರದಿಂದ ಸುರಕ್ಷಿತವಾಗಿ ಕೆಳಗಿಳಿಯುವುದು ಕಷ್ಟಕರವಾಗಿತ್ತು. ನಂತರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಹಗ್ಗ, ಹಾರ್ನೆಸ್ ಬೆಲ್ಟ್, ಲ್ಯಾಡರ್ ಸೇರಿದಂತೆ ಅಗತ್ಯ ರಕ್ಷಣಾ ಉಪಕರಣಗಳನ್ನು ಬಳಸಿ ಎಚ್ಚರಿಕೆಯಿಂದ ಗೋಪಾಲನನ್ನು ಕೆಳಗಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ – Kannada News | Hyderabad Student Suicide: YouTuber Komali Dies After Breakup, Texts Mother in Kuwait

ಹೈದರಾಬಾದ್, ಫೆಬ್ರವರಿ 26: ಯೂಟ್ಯೂಬರ್ ಹಾಗೂ ಬಿಎಸ್​ಸಿ ವಿದ್ಯಾರ್ಥಿನಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಯುವ ಮುನ್ನ ಕುವೈತ್​​ನಲ್ಲಿರುವ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿದ್ದಾಳೆ.ಈ ಘಟನೆ ಫೆಬ್ರವರಿ 23 ರಂದು (ಸೋಮವಾರ) ನಡೆದಿದ್ದು, ಆಕೆಯ ತಾಯಿ ಕುವೈತ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಳನ್ನು ಕೋಮಲಿ ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಅವರು ಕಳೆದ 11 ತಿಂಗಳಿನಿಂದ ಹೈದರಾಬಾದ್‌ನಲ್ಲಿರುವ ತಮ್ಮ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು, ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆಯುತ್ತಿದ್ದರು. ವಿಜ್ಞಾನ ವಿದ್ಯಾರ್ಥಿನಿಯಾಗುವುದರ ಜೊತೆಗೆ, ಯೂಟ್ಯೂಬರ್ ಕೂಡ ಆಗಿದ್ದರು.

ಫೆಬ್ರವರಿ 23 ರ ಬೆಳಗ್ಗೆ, ಆಕೆ ತನ್ನ ತಾಯಿ ಬಿ ಸತ್ಯ ವರಲಕ್ಷ್ಮಿಗೆ ಒಂದು ಸಂದೇಶ ಕಳುಹಿಸಿದ್ದಳು, ನಿಮ್ಮನ್ನು ತುಂಬಾ ಪ್ರೀತಿಸುತ್ತೀನಿ ಅಮ್ಮ ಎಂದು ಬರೆದಿದ್ದು, ಕಿರಿಯ ಸಹೋದರನನ್ನು ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾಳೆ. ಇದಾದ ನಂತರ, ಅವಳ ಫೋನ್ ಸ್ವಿಚ್ ಆಫ್ ಆಗಿತ್ತು.

ವರಲಕ್ಷ್ಮಿ ಕೋಮಲಿಗೆ ಕರೆ ಮಾಡಲು ಪ್ರಯತ್ನಿಸುತ್ತಲೇ ಇದ್ದರು, ಆದರೆ ಎಲ್ಲಾ ಕರೆಗಳಿಗೂ ಉತ್ತರ ಸಿಗಲಿಲ್ಲ. ನಂತರ, ಅವರು ಸ್ನೇಹಿತರಿಗೆ ಮಾಹಿತಿ ನೀಡಿ ಹೈದರಾಬಾದ್‌ನಲ್ಲಿರುವ ಕೋಮಲಿಯ ಫ್ಲಾಟ್‌ಗೆ ಹೋಗುವಂತೆ ಕೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.?

ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಫ್ಲಾಟ್‌ಗೆ ಹೋಗಿದ್ದಾರೆ, ಆದರೆ ಪದೇ ಪದೇ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಪೊಲೀಸರು ಕೂಡಲೇ, ಬೀಗ ಮುರಿದು ಅಪಾರ್ಟ್ಮೆಂಟ್ ಒಳಗೆ ಹೋದರು, ಅಲ್ಲಿ ಕೋಮಲಿಯ ಶವ ಸೀಲಿಂಗ್ ಫ್ಯಾನ್‌ನಿಂದ ನೇತಾಡುತ್ತಿರುವುದು ಕಂಡುಬಂದಿದೆ.

ಪೊಲೀಸರು ಒಂದು ಸಣ್ಣ ಏಣಿ ಮತ್ತು ಸೀರೆಯನ್ನು ಸಹ ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, 21 ವರ್ಷದ ಯುವತಿ ಕಳೆದ ಮೂರು ವರ್ಷಗಳಿಂದ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಜೊತೆ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಅವರು ಇತ್ತೀಚೆಗೆ ತಮ್ಮ ಸಂಬಂಧವನ್ನು ಕೊನೆಗೊಳಿಸಿದ್ದರು.

ಆರು ತಿಂಗಳ ಹಿಂದೆಯೂ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಈಗ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸರು ಎಲ್ಲಾ ಭೌತಿಕ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 26: ನಿನ್ನೆ 10 ರೂನಷ್ಟು ಅಲ್ಪ ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾರ 20 ರೂ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಸ್ವಲ್ಪ ಏರುಪೇರುಗಳಾಗಿವೆ. ಉಳಿದಂತೆ ಅಮೂಲ್ಯ ಲೋಹಗಳ ಬೆಲೆ ಬಹುತೇಕ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,126 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,820 ರೂ
  • ಚೆನ್ನೈ: 14,920 ರೂ
  • ಮುಂಬೈ: 14,820 ರೂ
  • ದೆಹಲಿ: 14,835 ರೂ
  • ಕೋಲ್ಕತಾ: 14,820 ರೂ
  • ಕೇರಳ: 14,820 ರೂ
  • ಅಹ್ಮದಾಬಾದ್: 14,825 ರೂ
  • ಜೈಪುರ್: 14,835 ರೂ
  • ಲಕ್ನೋ: 14,835 ರೂ
  • ಭುವನೇಶ್ವರ್: 14,820 ರೂ

ಇದನ್ನೂ ಓದಿ: ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 618 ರಿಂಗಿಟ್ (14,440 ರುಪಾಯಿ)
  • ದುಬೈ: 581.75 ಡಿರಾಮ್ (14,392 ರುಪಾಯಿ)
  • ಅಮೆರಿಕ: 162 ಡಾಲರ್ (14,723 ರುಪಾಯಿ)
  • ಸಿಂಗಾಪುರ: 204 ಸಿಂಗಾಪುರ್ ಡಾಲರ್ (14,675 ರುಪಾಯಿ)
  • ಕತಾರ್: 572.50 ಕತಾರಿ ರಿಯಾಲ್ (14,272 ರೂ)
  • ಸೌದಿ ಅರೇಬಿಯಾ: 590 ಸೌದಿ ರಿಯಾಲ್ (14,294 ರುಪಾಯಿ)
  • ಓಮನ್: 61.40 ಒಮಾನಿ ರಿಯಾಲ್ (14,493 ರುಪಾಯಿ)
  • ಕುವೇತ್: 47.42 ಕುವೇತಿ ದಿನಾರ್ (14,105 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಕನ್ನಡದ ಸಿನಿಮಾ ಅಲ್ಲವೆಂದ ಹಿರಿಯ ನಿರ್ದೇಶಕ: ಕೊಟ್ಟ ಕಾರಣವೇನು? – Kannada News | Rajendra Singh Babu praised Toxic said its not only Kannada movie its international

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಸಿನಿಮಾಕ್ಕಾಗಿ ದೇಶದಾದ್ಯಂತ ಮಾತ್ರವಲ್ಲದೆ ವಿದೇಶಿ ಸಿನಿಮಾ ಪ್ರೇಮಿಗಳು ಸಹ ಎದುರು ನೋಡುತ್ತಿದ್ದಾರೆ. ಇನ್ನು ಕನ್ನಡದ ಸಿನಿಮಾ ಕರ್ಮಿಗಳು ಸಹ ವೈಷಮ್ಯಗಳನ್ನು ಮರೆತು ತಮ್ಮ ಚಿತ್ರರಂಗದ ಸಿನಿಮಾ ಎಂಬ ಕಾರಣಕ್ಕೆ ಭರಪೂರ ಬೆಂಬಲ ನೀಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಹ ಇದಕ್ಕೆ ಹೊರತಲ್ಲ. ‘ಟಾಕ್ಸಿಕ್’ ಸಿನಿಮಾವನ್ನು ಅದರ ಮೇಕಿಂಗ್ ಅನ್ನು ಅವರು ಕೊಂಡಾಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಹಲವಾರು ಬ್ಲಾಕ್ ಬಸ್ಟರ್, ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನೀಡಿರುವ ರಾಜೇಂದ್ರ ಸಿಂಗ್ ಬಾಬು ಅವರು ಈಗಲೂ ಸಹ ಸಿನಿಮಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದು ಇದೀಗ ‘ವೀರಕಂಬಳ’ ಹೆಸರಿನ ಹೊಸ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ಟಿವಿ9 ಜೊತೆಗೆ ಮಾತನಾಡಿರುವ ಅವರು, ಬಹುನಿರೀಕ್ಷಿತ ಸಿನಿಮಾ ಮತ್ತು ಚರ್ಚೆಯಲ್ಲಿರುವ ಸಿನಿಮಾ ಆಗಿರುವ ‘ಟಾಕ್ಸಿಕ್’ ಸಿನಿಮಾದ ಬಗ್ಗೆಯೂ ಮಾತನಾಡಿದ್ದಾರೆ. ಈ ವೇಳೆ ‘ಟಾಕ್ಸಿಕ್’ ಸಿನಿಮಾವನ್ನು ಭಿನ್ನ ಕೋನದಿಂದ ನೋಡಿರುವ ಹಿರಿಯ ನಿರ್ದೇಶಕರು, ‘ಟಾಕ್ಸಿಕ್’ ಕನ್ನಡ ಸಿನಿಮಾ ಅಲ್ಲ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

ಇದನ್ನೂ ಓದಿ:‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಟಾಕ್ಸಿಕ್’ ಅನ್ನು ಕೇವಲ ಕನ್ನಡ ಸಿನಿಮಾ ಎನ್ನಲಾಗದು, ಅದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಿನಿಮಾ, ಆ ಸಿನಿಮಾದ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ’ ಎಂದಿದ್ದಾರೆ. ಮುಂದುವರೆದು ಮಾತನಾಡಿ, ‘ಅಲ್ಲಿ ನಾಯಕನಿಗೆ ವಿಶೇಷ ಮೌಲ್ಯ ಇದೆ, ಅದ್ಭುತವಾದ ಪ್ರೊಡಕ್ಷನ್ ಇದೆ, 600 ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದಾರೆ. ಅಂಥಹ ಸಿನಿಮಾ ಬಂದಿರುವುದು ನಮಗೆಲ್ಲ ಸಂತೋಷ’ ಎಂದಿದ್ದಾರೆ ಬಾಬು.

‘ಟಾಕ್ಸಿಕ್’ ಸಿನಿಮಾದ ಟೀಸರ್​​ ವಿರುದ್ಧ ಅಶ್ಲೀಲತೆ ಆರೋಪ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಾಜೇಂದ್ರ ಸಿಂಗ್ ಬಾಬು, ‘ಅದ್ಭುತವಾದ ಮೇಕಿಂಗ್ ಮಾಡಿದ್ದಾರೆ. ಯಾವುದೇ ಇಂಗ್ಲೀಷ್ ಸಿನಿಮಾಕ್ಕೂ ಕಡಿಮೆ ಇಲ್ಲದಂತೆ ಅದನ್ನು ಅವರು ಮಾಡಿದ್ದಾರೆ. ಯಾವುದನ್ನೇ ಆದರೂ ಕೂದಲು ಸೀಳುತ್ತಾ ಕುಳಿತರೆ ಆಗವುದಿಲ್ಲ, ಹಾಗೆ ಮಾಡಿದಾಗ ಒಂದಲ್ಲ ಒಂದು ತಪ್ಪು ಸಿಗುತ್ತವೆ, ಆದರೆ ಅದನ್ನೇ ದೊಡ್ಡದು ಮಾಡಿ, ನಿಜವಾದ ಶ್ರಮವನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ಪ್ರಯತ್ನಕ್ಕೆ ನಾವು ಭೇಷ್ ಎನ್ನಬೇಕು’ ಎಂದಿದ್ದಾರೆ.

‘ಒಬ್ಬ ಮನುಷ್ಯ ತಾನು ಮನಸ್ಸು ಮಾಡಿದರೆ ಬೆಟ್ಟವನ್ನೇ ಅಲ್ಲಾಡಿಸಬಹುದು ಎಂಬುದಕ್ಕೆ ಯಶ್ ಉದಾಹರಣೆ. ಹತ್ತು ವರ್ಷಗಳ ಹಿಂದೆ ಒಮ್ಮೆ ಭೇಟಿ ಆಗಿದ್ದಾಗ ಹೀಗೆ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆವು, ಆಗಲೇ ಯಶ್ ಹೇಳಿದ್ದರು, ಸರ್ ನಾನು ಮಾಡೇ ಮಾಡ್ತೀನಿ, 250 ಕೋಟಿ ಸಿನಿಮಾ ಮಾಡ್ತೀನಿ ಎಂದಿದ್ದರು. ಅದರಂತೆ ಅವರು ಇಂದು ಮಾಡಿದ್ದಾರೆ, ಅದನ್ನೂ ಮೀರಿ ಹೋಗಿದ್ದಾರೆ’ ಎಂದಿದ್ದಾರೆ ಯಶ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version