ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ – Kannada News | Israel Iran Conflict Impact: Cooking Oil Prices Rise in Bengaluru, Karnataka Egg Exporters Face Heavy Loss

ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9

ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ. ತರಗುಪೇಟೆಯ ಅಡುಗೆ ಎಣ್ಣೆ ವರ್ತಕ ಸತೀಶ್ ಪ್ರಕಾರ, ಕಳೆದ ಮೂರ್ನಾಲ್ಕು ದಿನಗಳಿಂದ ಬೇಡಿಕೆಗೆ ತಕ್ಕಂತೆ ಎಣ್ಣೆ ಸರಬರಾಜು ಆಗುತ್ತಿಲ್ಲ.

ಮುಂದಿನ 10 ದಿನಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ಎಣ್ಣೆ ಲಭ್ಯವಾಗುವುದು ಕಷ್ಟ ಎಂದು ಕಂಪನಿಗಳು ಕೂಡ ಹೇಳಿವೆ. ಜಾಗತಿಕ ಯುದ್ಧಗಳಿಂದಾಗಿ ಪೂರೈಕೆ ಸರಪಳಿಗೆ ಅಡ್ಡಿಯಾಗಿದ್ದು, ಹಡಗುಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಕೆಂಪು ಸಮುದ್ರದಲ್ಲಿನ ದಾಳಿಗಳಿಂದಾಗಿ, ಹಡಗುಗಳು ಆಫ್ರಿಕಾ ಮೂಲಕ 45 ದಿನಗಳ ಹೆಚ್ಚುವರಿ ಪ್ರಯಾಣವನ್ನು ಕೈಗೊಳ್ಳಬೇಕಾಗಿದೆ. ಈ ವಿಳಂಬದಿಂದಾಗಿ ದೇಶದಲ್ಲಿ ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಲೀಟರ್‌ಗೆ 200 ರಿಂದ 250 ರೂಪಾಯಿ ತಲುಪುವ ಸಾಧ್ಯತೆಯಿದೆ ಎಂದು ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ಈಗಿನ ಪರಿಸ್ಥಿತಿ ಮುಂದುವರೆದರೆ, ದಾಸ್ತಾನು ಕೊರತೆಯಿಂದ ಜನಸಾಮಾನ್ಯರು ಹೆಚ್ಚಿನ ಬೆಲೆ ತೆರಬೇಕಾಗಲಿದೆ.

ಸೌದಿ ಅರೇಬಿಯಾ, ಓಮನ್ ಮತ್ತು ಕತಾರ್‌ಗೆ ಮೊಟ್ಟೆ ರಫ್ತು ಸ್ಥಗಿತ

ಯುದ್ಧದ ಪರಿಣಾಮ ಮೊಟ್ಟೆ ಉದ್ಯಮದ ಮೇಲೂ ಬೀರಿದೆ. ಭಾರತದಿಂದ ಮಧ್ಯಪ್ರಾಚ್ಯ ದೇಶಗಳಾದ ಸೌದಿ ಅರೇಬಿಯಾ, ಓಮನ್ ಮತ್ತು ಕತಾರ್‌ಗೆ ಪ್ರತಿತಿಂಗಳು ಒಂದು ಕೋಟಿಗೂ ಹೆಚ್ಚು ಮೊಟ್ಟೆಗಳು ರಫ್ತಾಗುತ್ತಿದ್ದವು. ಆದರೆ, ಪ್ರಸ್ತುತ ಯುದ್ಧದ ಭೀತಿಯಿಂದ ಈ ರಫ್ತು ಸಂಪೂರ್ಣ ಸ್ಥಗಿತಗೊಂಡಿದೆ. ಇರಾನ್‌ನಿಂದ ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಸಂಘರ್ಷಗಳಿಂದಾಗಿ ಸಾಗಣೆ ದೊಡ್ಡ ಸವಾಲಾಗಿದೆ.

ರಫ್ತು ನಿಲುಗಡೆಯಿಂದಾಗಿ ಉತ್ಪಾದನೆಯಾದ ಮೊಟ್ಟೆ ಇಲ್ಲೇ ಉಳಿದುಕೊಂಡಿದೆ. ಇದು ಉತ್ಪಾದಕರಿಗೆ ಭಾರಿ ನಷ್ಟವನ್ನುಂಟು ಮಾಡಿದೆ. ಬೇಸಿಗೆಯಲ್ಲಿ ಮೊಟ್ಟೆಗಳ ಬಳಕೆ ಕಡಿಮೆಯಾಗುವುದರಿಂದ ಈಗಾಗಲೇ ದಾಸ್ತಾನು ಹೆಚ್ಚಾಗಿರುತ್ತದೆ. ಯುದ್ಧದ ಪರಿಣಾಮದಿಂದ ರಫ್ತು ಕೂಡ ನಿಂತುಹೋಗಿರುವುದು ಸಮಸ್ಯೆಗಳನ್ನು ಇನ್ನಷ್ಟು ಹೆಚ್ಚಿಸಿದೆ.

ಮೊಟ್ಟೆ ಬೆಲೆ ಕುಸಿತ ಸಾಧ್ಯತೆ

ಮುಂದಿನ ದಿನಗಳಲ್ಲಿ ಮೊಟ್ಟೆಯ ಬೆಲೆ ಕುಸಿಯುವ ಸಾಧ್ಯತೆಯಿದೆ. ಯುದ್ಧ ಮುಂದುವರೆದರೆ, ಉತ್ಪಾದನಾ ವೆಚ್ಚಕ್ಕಿಂತಲೂ ಕಡಿಮೆ ಬೆಲೆಗೆ ಮೊಟ್ಟೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿ ಇನ್ನಷ್ಟು ನಷ್ಟ ಉಂಟಾಗುವ ಭೀತಿಯಿದೆ.

ಇದನ್ನೂ ಓದಿ: ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ

ಒಟ್ಟಾರೆ, ಜಾಗತಿಕ ಸಂಘರ್ಷಗಳು ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ರಾಜ್ಯಗಳ ಆರ್ಥಿಕತೆ ಮತ್ತು ಜನಸಾಮಾನ್ಯರ ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! – Kannada News | Lokayukta Raids PWD AEE Satishs Residence in Mandya Over Illegal Assets

ಮಂಡ್ಯ, ಮಾರ್ಚ್​ 05: ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾಗ, ಎಇಇ ಸತೀಶ್ ಮತ್ತು ಅವರ ಪತ್ನಿ ಮೌನವಾಗಿದ್ದರು ಎಂದು ವರದಿಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.

Source link

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..! – Kannada News | South Africa’s Coah Shukri Conrad After Semi FInal Loss vs New Zealand

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ.

ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ ಮೊದಲ ವಿಕೆಟ್​ಗೆ 117 ರನ್​ ಪೇರಿಸಿದ್ದರು. ಅಷ್ಟೇ ಅಲ್ಲದೆ 12.5 ಓವರ್​ಗಳಲ್ಲಿ 173 ರನ್​ ಸಿಡಿಸಿ 9 ವಿಕೆಟ್​ಗಳ ಜಯ ಸಾಧಿಸಿದ್ದರು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ಫೈನಲ್​ಗೆ ಪ್ರವೇಶಿಸಿದರೆ, ಸೌತ್ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಇತ್ತ ಟೂರ್ನಿಯಿಂದ ಹೊರಬಿದ್ದ ಬಳಿಕ ನಡೆದ  ಸುದ್ಧಿಗೋಷ್ಠಿಯಲ್ಲಿ ಸೌತ್ ಆಫ್ರಿಕಾ ತಂಡದ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್ ಕಾಣಿಸಿಕೊಂಡಿದ್ದರು. ಎಂದಿನಂತೆ ಈ ಬಾರಿ ಕೂಡ ‘ಚೋಕರ್ಸ್’ ಹಣೆಪಟ್ಟಿಯ ಪ್ರಶ್ನೆಯನ್ನು ಅವರ ಮುಂದಿಡಲಾಗಿತ್ತು.

ಐಸಿಸಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯಗಳಲ್ಲಿ ಸೋತು ಹೊರಬೀಳುವುದು ಸಾಮಾನ್ಯ. ಹೀಗಾಗಿಯೇ ಆಫ್ರಿಕಾ ಪಡೆಯನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ. ಇದೀಗ ಮತ್ತೊಮ್ಮೆ ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಮೂಲಕ ಸೌತ್ ಆಫ್ರಿಕಾ ತಂಡ ಹೊರಬಿದ್ದಿದೆ.

ಇದರೊಂದಿಗೆ ಸೌತ್ ಆಫ್ರಿಕಾ ತಂಡದ ಚೋಕರ್ಸ್ ಹಣೆಪಟ್ಟಿ ಮುಂದುವರೆದಿದೆ. ಆದರೆ ಈ ಬಾರಿಯ ಸೋಲನ್ನು ಚೋಕ್ ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ ಸೌತ್ ಆಫ್ರಿಕಾ ತಂಡದ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್.

ನ್ಯೂಝಿಲೆಂಡ್ ವಿರುದ್ಧದ ಸೋಲನ್ನು ಚೋಕ್ ಎಂದು ಒಪ್ಪಿಕೊಳ್ಳಲಾಗುವುದಿಲ್ಲ. ಏಕೆಂದರೆ ಇದು ನಮಗೆ ಬಿದ್ದಂತಹ ಏಟು. ನಾವು ಅಷ್ಟೊಂದು ಹೀನಾಯವಾಗಿ ಸೋತಿದ್ದೇವೆ. ನಾವು ಪಂದ್ಯದಲ್ಲಿ ಗೆಲ್ಲುವ ಸಣ್ಣ ಲಕ್ಷಣ ತೋರಿದ್ದರೆ ಮಾತ್ರ ಅದನ್ನು ‘ಚೋಕ್’ ಎನ್ನಬಹುದಿತ್ತು.

ನಮಗೆ ಅಂತಹ ಯಾವುದೇ ಅವಕಾಶ ಇರಲಿಲ್ಲ. ಸೌತ್ ಆಫ್ರಿಕಾದಲ್ಲಿ ನಾವು ಇದಕ್ಕೆ ‘ಮೋರ್ಡ್’ (moered) ಎನ್ನುತ್ತೇವೆ. ಇಂದು ನಮಗೆ ಸರಿಯಾದ ‘ಸ್ನಾಟ್‌ಕ್ಲಾಪ್ಡ್’ (snotklapped) ಆಗಿದೆ. ಅಂದರೆ ಸೌತ್ ಆಫ್ರಿಕಾ ಭಾಷೆಯಲ್ಲಿ ಸರಿಯಾಗಿ ಒದೆ ತಿಂದಿದ್ದೇವೆ, ಒದ್ದು ಹೊರಹಾಕಿದ್ದಾರೆ ಎನ್ನುತ್ತೇವೆ. ಅಂತಹದೊಂದು ಹೀನಾಯ ಸೋಲು ಇದಾಗಿದೆ ಶುಕ್ರಿ ಕಾನ್ರಾಡ್ ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರಿ ಕಾನ್ರಾಡ್, ಈ ಬಾರಿ ಸೌತ್ ಆಫ್ರಿಕಾ ತಂಡ ವಿಶ್ವಕಪ್ ಮುಡಿಗೇರಿಸಿಕೊಳ್ಳಲಿದೆ ಎಂದಿದ್ದರು. ಅಲ್ಲದೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಗೆದ್ದ ಬಳಿಕ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ನಮ್ಮ ತವರು ಮೈದಾನವಾಗಿದೆ.

ಇದನ್ನೂ ಓದಿ: RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್

ಹೀಗಾಗಿ ಇಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೀಗ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯವಾಗಿ ಸೋತು ಹೊರಬಿದ್ದಿದ್ದಾರೆ. ಈ ಸೋಲನ್ನು ಶುಕ್ರಿ ಕಾನ್ರಾಡ್ ಸೌತ್ ಆಫ್ರಿಕಾ ತಂಡಕ್ಕೆ ಬಿದ್ದಂತಹ ಪೆಟ್ಟು ಎಂದು ಬಣ್ಣಿಸಿದ್ದಾರೆ.

Source link

Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ – Kannada News | Bihar CM Nitish Kumar Enters Rajya Sabha Race With Fresh Nomination

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.

ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಅವರು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ  ಜತೆಗಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Thursday’s Power: ಗುರುವಾರ ವಿಷ್ಣು ಪೂಜೆ; ಗುರು ಗ್ರಹ, ಮಹಾದಶೆ ಮತ್ತು ಸಮೃದ್ಧಿಯ ರಹಸ್ಯಗಳು – Kannada News | Thursday’s Power: Vishnu Puja, Guru Mahadasha and Prosperity Secrets

ಸನಾತನ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದು ನಿರ್ದಿಷ್ಟ ದೇವತೆ ಹಾಗೂ ಒಂದು ಗ್ರಹಕ್ಕೆ ಸಂಬಂಧಿಸಿದೆ. ಆ ರೀತಿಯಲ್ಲಿ ಗುರುವಾರವು ಬ್ರಹ್ಮಾಂಡದ ರಕ್ಷಕನಾದ ಭಗವಾನ್ ವಿಷ್ಣು ಹಾಗೂ ದೇವತೆಗಳ ಗುರುವಾಗಿರುವ ಬೃಹಸ್ಪತಿ (ಗುರು) ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ವಿಷ್ಣುವಿನ ಪೂಜೆ ಮತ್ತು ಉಪವಾಸವನ್ನು ಆಚರಿಸುವುದರಿಂದ ಜೀವನದಲ್ಲಿ ಸಮೃದ್ಧಿ, ಶಾಂತಿ ಮತ್ತು ಸೌಭಾಗ್ಯ ಹೆಚ್ಚುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ.

ಗುರುವಾರದಂದು ಗುರು ಗ್ರಹದ ಪೂಜೆ ಮಾಡುವುದರಿಂದ ಜೀವನದಲ್ಲಿರುವ ಅನೇಕ ತೊಂದರೆಗಳು ಕಡಿಮೆಯಾಗುತ್ತವೆ ಮತ್ತು ವ್ಯಕ್ತಿಯ ಸ್ಥಾನಮಾನ, ಪ್ರತಿಷ್ಠೆ ಹಾಗೂ ಜ್ಞಾನ ಹೆಚ್ಚಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಆದ್ದರಿಂದ ಈ ದಿನದ ಮಹತ್ವವನ್ನು ವಿಶೇಷವಾಗಿ ಪರಿಗಣಿಸಲಾಗುತ್ತದೆ.

ಗುರುವಿನ ಮಹಾದಶೆ ಎಷ್ಟು ವರ್ಷ?

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗುರುವಿನ ಮಹಾದಶೆ ಒಟ್ಟು 16 ವರ್ಷಗಳ ಕಾಲ ಇರುತ್ತದೆ. ಈ ಅವಧಿಯಲ್ಲಿ ವಿವಿಧ ಗ್ರಹಗಳ ಅಂತರದಶೆಗಳು ನಡೆಯುತ್ತವೆ. ಮೊದಲಿಗೆ ಗುರುವಿನ ಅಂತರದಶೆ ಆರಂಭವಾಗುತ್ತದೆ ಮತ್ತು ಅದು ಸುಮಾರು ಎರಡು ವರ್ಷಗಳ ಕಾಲ ಇರುತ್ತದೆ. ನಂತರ ಕ್ರಮವಾಗಿ ಇತರ ಗ್ರಹಗಳ ಅಂತರದಶೆಗಳು ಬರುತ್ತವೆ.

ಗುರುವಿನ ಮಹಾದಶೆಯ ಸಮಯದಲ್ಲಿ ಶುಭ ಗ್ರಹಗಳ ಅಂತರದಶೆ ಬಂದರೆ ಉತ್ತಮ ಫಲಗಳು ದೊರೆಯುತ್ತವೆ. ಆದರೆ ರಾಹು ಅಥವಾ ಕೇತುಗಳ ಅಂತರದಶೆ ಬಂದರೆ ಕೆಲವು ಅಡಚಣೆಗಳು ಮತ್ತು ವಿಫಲತೆಗಳು ಎದುರಾಗಬಹುದು ಎಂದು ಜ್ಯೋತಿಷಿಗಳು ಹೇಳುತ್ತಾರೆ. ಗುರು ರಾಹು ಅಥವಾ ಕೇತುಗಳೊಂದಿಗೆ ಸಂಯೋಗಗೊಂಡಿದ್ದರೆ ಅದನ್ನು ಚಾಂಡಾಲ ದೋಷ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಗುರು ದೇವರನ್ನು ಮೆಚ್ಚಿಸಲು ಏನು ಮಾಡಬೇಕು?

ಗುರುವಾರದಂದು ಗುರು ದೇವರ ಕೃಪೆ ಪಡೆಯಲು ಕೆಲವು ವಿಶೇಷ ಆಚರಣೆಗಳನ್ನು ಪಾಲಿಸುವುದು ಶುಭಕರವೆಂದು ಹೇಳಲಾಗುತ್ತದೆ. ಗುರುವಾರದಂದು ವಿಷ್ಣು ಮತ್ತು ಗುರು ದೇವರನ್ನು ಭಕ್ತಿಯಿಂದ ಪೂಜಿಸಬೇಕು. ಸಾಧ್ಯವಾದರೆ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಹಳದಿ ಬಟ್ಟೆ, ಕಡಲೆಕಾಳು, ಬಾಳೆಹಣ್ಣು, ಪಪ್ಪಾಯಿ ಮುಂತಾದ ಹಳದಿ ವಸ್ತುಗಳನ್ನು ದಾನ ಮಾಡುವುದು ಶುಭಕರ. ಇದಲ್ಲದೇ ಲಕ್ಷ್ಮೀ–ನಾರಾಯಣರ ಪೂಜೆ ಮಾಡುವುದು ಉತ್ತಮ ಫಲ ನೀಡುತ್ತದೆ. ಪೂಜೆಯ ಸಮಯದಲ್ಲಿ ವಿಷ್ಣುವಿಗೆ ಕೇಸರಿ ಮಿಶ್ರಿತ ಹಾಲಿನಿಂದ ಅಭಿಷೇಕ ಮಾಡಬಹುದು. ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸುವುದು ಹಾಗೂ ಬಾಳೆ ಗಿಡಕ್ಕೆ ಅರಿಶಿನ ಬೆರೆಸಿದ ನೀರು ಹಾಕುವುದು ಶುಭಕರವೆಂದು ನಂಬಲಾಗಿದೆ.

ಈ ರೀತಿಯ ಪೂಜೆ ಹಾಗೂ ದಾನಧರ್ಮಗಳನ್ನು ಶ್ರದ್ಧೆಯಿಂದ ಮಾಡಿದರೆ ಗುರು ದೇವರ ಕೃಪೆ ದೊರೆಯುತ್ತದೆ ಮತ್ತು ಜೀವನದಲ್ಲಿ ಜ್ಞಾನ, ಗೌರವ ಹಾಗೂ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri

ಹಾವೇರಿ, ಮಾರ್ಚ್​​ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ – Kannada News | An elderly couple smoking a beedi, video goes viral

ಪ್ರತಿಯೊಬ್ಬ ಹೆಣ್ಣು ಕೂಡ ತನ್ನ ಗಂಡ ತನ್ನನ್ನು ಪ್ರೀತಿಸಲಿ, ಕಾಳಜಿ ವಹಿಸಲಿ ಎಂದು ಬಯಸುವುದು ಸಹಜ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಈ ವೃದ್ಧ ದಂಪತಿಯನ್ನು (elderly couple) ನೋಡಿದ್ರೆ  ನೀವು ಕೂಡ ಎಂತಹ ಜೋಡಿ ಇವರದ್ದು ಅನ್ನುತ್ತೀರಾ.  ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧ ದಂಪತಿಯೂ ಚಿಂತೆಯನ್ನೆಲ್ಲಾ ಬದಿಗೆ ಇಟ್ಟು  ಬೀಡಿ ಸೇದುತ್ತಾ ಕುಳಿತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ ಮಾಡಿ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ.

Naveen_gowda_1983 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕುಳಿತಿರುವುದನ್ನು ಕಾಣಬಹುದು. ಇತ್ತ ವೃದ್ಧ ಮಹಿಳೆ ಬೀಡಿಗೆ ಬೆಂಕಿ ಹಚ್ಚಿ ಸೇದುತ್ತಿದ್ದಾಳೆ. ಆ ಬಳಿಕ ತನ್ನ ಕೈಯಲ್ಲಿದ್ದ ಬೀಡಿಯನ್ನು ಪತಿಗೆ ನೀಡಿದ್ದು, ಆ ವೃದ್ಧ ವ್ಯಕ್ತಿಯೂ ಬೀಡಿ ಸೇದುವುದನ್ನು ನೀವು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಬೀಡಿಸಲಾಗದ ಬಂಧನ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಎಂತಹ ಜೋಡಿ, ಅಜ್ಜ ನಿಜಕ್ಕೂ ಭಾಗ್ಯವಂತ ಎಂದಿದ್ದಾರೆ. ಇನ್ನೊಬ್ಬರು, ಇಂತಹ ಧರ್ಮ ಪತ್ನಿ ಎಲ್ಲರಿಗೂ ಸಿಗಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೇ. 60ರ ಗಡಿ ದಾಟಲಿದೆ ಡಿಎ, ಡಿಆರ್; ಜನವರಿಯ ತುಟ್ಟಿಭತ್ಯೆ ಎಷ್ಟು ಏರಬಹುದು? – Kannada News | Central Govt employees, 7th pay commission DA and DR likely to rise by 2pc in 2026 January June period

ನವದೆಹಲಿ, ಮಾರ್ಚ್ 5: ಜನವರಿಯಿಂದ ಬರಬೇಕಿರುವ ತುಟ್ಟಿಭತ್ಯೆ (DA- Dearness Allowance) ಹೆಚ್ಚಳದ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದ್ದಾರೆ. ಜನವರಿಯಿಂದ ಜಾರಿಗೆ ಬರುವ ತುಟ್ಟಿಭತ್ಯೆ ಹೆಚ್ಚಳವನ್ನು ಮಾರ್ಚ್​ನಲ್ಲಿ ಪ್ರಕಟಿಸಲಾಗುತ್ತದೆ. ಅಂದರೆ ಈ ತಿಂಗಳು ಡಿಎ ಮತ್ತು ಡಿಆರ್ ಅನ್ನು ಘೋಷಿಸಲಾಗುತ್ತದೆ. ವರದಿಗಳ ಪ್ರಕಾರ ಈ ಬಾರಿ ತುಟ್ಟಿಭತ್ಯೆಯನ್ನು ಶೇ. 2ರಷ್ಟು ಮಾತ್ರವೇ ಏರಿಕೆ ಮಾಡಬಹುದು.

ಶೇ. 2ರಷ್ಟು ಏರಿಕೆಯಾದರೆ ಏಳನೇ ವೇತನ ಆಯೋಗದಡಿಯಲ್ಲಿ ಸಿಗುವ ತುಟ್ಟಿಭತ್ಯೆ ಶೇ. 60 ದಾಟಿದಂತಾಗುತ್ತದೆ. ಎಂಟನೇ ವೇತನ ಆಯೋಗವು 2026ರ ಜನವರಿಯಿಂದಲೇ ಜಾರಿಗೆ ಬರುತ್ತದೆಯಾದರೂ, ಈ ಆಯೋಗ ಇನ್ನೂ ಕೂಡ ಯಾವುದೇ ಶಿಫಾರಸುಗಳ ವರದಿ ಕೊಟ್ಟಿಲ್ಲ. 2026ರ ನವೆಂಬರ್​ನಲ್ಲಿ ರಚನೆಯಾದ 8ನೇ ವೇತನ ಆಯೋಗ, 18 ತಿಂಗಳೊಳಗೆ ಸರ್ಕಾರಕ್ಕೆ ವರದಿ ನೀಡಬೇಕೆಂದು ನಿರ್ದೇಶನ ಹೊಂದಿದೆ.

ಅಂದರೆ, 2027ರಲ್ಲಿ ಇದರ ವರದಿ ಬರಬಹುದು. ಅಲ್ಲಿಯವರೆಗೆ 7ನೇ ವೇತನ ಆಯೋಗದ ಶಿಫಾರಸುಗಳೇ ಚಾಲನೆಯಲ್ಲಿರಬಹುದು. 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಬಂದಲ್ಲಿ, 2026ರ ಜನವರಿಯಿಂದ ಮತ್ತೊಮ್ಮೆ ಡಿಎ ಮತ್ತು ಸಂಬಳದ ರಚನೆಯನ್ನು ಪರಿಷ್ಕರಿಸಬಹುದು.

ಇದನ್ನೂ ಓದಿ: 25,000 ರೂನಷ್ಟು ಕಡಿಮೆ ಸಂಬಳ ಇದ್ದರೆ ಹಣದ ನಿರ್ವಹಣೆ ಹೇಗಿರಬೇಕು? ಇಲ್ಲಿದೆ ಟಿಪ್ಸ್

ಡಿಎ ಏರಿಕೆಯ ಲೆಕ್ಕಾಚಾರ ಏನು?

ಕೈಗಾರಿಕಾ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಅನುಸೂಚಿ (ಎಐಸಿಪಿಐ ಐಡಬ್ಲ್ಯು) ಆಧಾರದ ಮೇಲೆ ಡಿಎ ಹೆಚ್ಚಳ ನಿರ್ಧರಿಸಲಾಗುತ್ತದೆ. ಈ ಬಾರಿಯ ಡಿಎ ಹೆಚ್ಚಳಕ್ಕೆ 2025ರ ಡಿಸೆಂಬರ್ ತಿಂಗಳ ಅನುಸೂಚಿಯ ದತ್ತಾಂಶವನ್ನು ಪರಿಗಣಿಸಲಾಗಿದೆ. 2025ರ ಜುಲೈ-ಡಿಸೆಂಬರ್ ಅವಧಿಯ ಸಿಪಿಐ-ಐಡಬ್ಲ್ಯು ಸರಾಸರಿ 419.17 ಅಂಕಗಳಿವೆ. 7ನೇ ವೇತನ ಆಯೋಗದ ಸೂತ್ರದ ಪ್ರಕಾರ ಡಿಎ ಶೇ. 60.34 ಆಗುತ್ತದೆ. ದಶಾಂಶವನ್ನು ನಿರ್ಲಕ್ಷಿಸಿದಾಗ ತುಟ್ಟಿಭತ್ಯೆ ಶೇ. 60ಕ್ಕೆ ನಿಲ್ಲುತ್ತದೆ.

2025ರ ಜುಲೈ ತಿಂಗಳ ತುಟ್ಟಿಭತ್ಯೆ ಶೇ. 58 ಇತ್ತು. ಈಗ ಶೇ. 2 ಮಾತ್ರವೇ ಹೆಚ್ಚಳ ಆಗುವುದು. ಕಳೆದ ಒಂದು ದಶಕದಲ್ಲಿ ಕೆಲವೇ ಬಾರಿ ಇಷ್ಟು ಕಡಿಮೆ ಡಿಎ ಹೆಚ್ಚಳ ಆಗಿರುವುದು.

ಡಿಎ ಮತ್ತು ಡಿಆರ್ ಹೆಚ್ಚಳ ಯಾಕೆ?

ಡಿಎ ಎಂದರೆ ಡಿಯರ್ನೆಸ್ ಅಲೋಯನ್ಸ್. ಡಿಆರ್ ಎಂದರೆ ಡಿಯರ್ನೆಸ್ ರಿಲೀಫ್. ಡಿಎ ಅನ್ನು ಹಾಲಿ ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ನೀಡಲಾಗುತ್ತದೆ. ಡಿಆರ್ ಅನ್ನು ಸರ್ಕಾರಿ ನೌಕರಿಗಳಿಂದ ನಿವೃತ್ತರಾದ ಪಿಂಚಣಿದಾರರಿಗೆ ನೀಡಲಾಗುತ್ತದೆ.

ಇದನ್ನೂ ಓದಿ: ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ

ಹಣದುಬ್ಬರ ಏರಿಕೆಯಿಂದ ಸಂಬಳ ಮತ್ತು ಪಿಂಚಣಿಯ ಮೌಲ್ಯ ಕಡಿಮೆ ಆಗಬಾರದು ಎನ್ನುವ ಉದ್ದೇಶದಿಂದ ಇದನ್ನು ವರ್ಷಕ್ಕೆ ಎರಡು ಬಾರಿ ಏರಿಸಲಾಗುತ್ತದೆ. ಹಣದುಬ್ಬರ ದರದ ಆಧಾರದ ಮೇಲೆ ಇದನ್ನು ಲೆಕ್ಕಾಚಾರ ಮಾಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಮ್ಮ ಸೋಲಿಗೆ ಕೋಚ್ ಕಾರಣ: ಬಂಡಾಯವೆದ್ದ ಪಾಕ್ ಆಟಗಾರರು – Kannada News | Pakistan players revolted against Head Coach Mike Hesson

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್​ನಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿದೆ. ಈ ಅಲ್ಲೋಲ ಕಲ್ಲೋಲದ ನಡುವೆ ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಪ್ರತಿ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಇದರ ನಡುವೆ ಸೋಲಿಗೆ ನಾವಲ್ಲ ಕಾರಣ, ಕೋಚ್ ಮೈಕ್ ಹೆಸ್ಸನ್ ಎಂದು ಪಾಕ್ ಆಟಗಾರರು ಬಂಡಾವೆದ್ದಿದ್ದಾರೆ.

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ತಂಡ ಹೊರಬಿದ್ದ ನಂತರ, ಆಟಗಾರರು ಮುಖ್ಯ ಕೋಚ್ ಮೈಕ್ ಹೆಸ್ಸನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ನಾಯಕ ಸಲ್ಮಾನ್ ಅಲಿ ಅಘಾ ನೇತೃತ್ವದ ತಂಡದ ಆಟಗಾರರು ಮೈಕ್ ಹೆಸ್ಸನ್ ಅವರ ಕಾರ್ಯವೈಖರಿಯ ಬಗ್ಗೆ ಪಿಸಿಬಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ.

ಕೋಚ್ ಹೆಸ್ಸನ್ ಅವರು ನಾಯಕ ಅಥವಾ ಆಯ್ಕೆ ಸಮಿತಿಯನ್ನು ಸಂಪರ್ಕಿಸದೆ ತಾವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರ ನಡವಳಿಕೆ ತುಂಬಾ ಕಠಿಣವಾಗಿತ್ತು ಎಂದು ಆಟಗಾರರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಹೀಗಾಗಿ ಟಿ20 ವಿಶ್ವಕಪ್​ನಲ್ಲಿನ ಸೋಲಿಗೆ ಆಟಗಾರರು ಅಲ್ಲ ಕಾರಣ. ಇದಕ್ಕೆ ಮುಖ್ಯ ಕಾರಣ ಕೋಚ್ ಮೈಕ್ ಹೆಸ್ಸನ್ ಎಂದು ಪಾಕ್ ಆಟಗಾರರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ ಮೈಕ್ ಹೆಸ್ಸನ್ ಅವರ ಅತಿಯಾದ ಹಸ್ತಕ್ಷೇಪದಿಂದಾಗಿ ರಾಷ್ಟ್ರೀಯ ಆಯ್ಕೆಗಾರ ಅಲೀಮ್ ದಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಭಾರತದ ವಿರುದ್ಧದ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮತ್ತು ತಂಡದ ಆಯ್ಕೆಯಲ್ಲಿನ ತಪ್ಪುಗಳು ಸೋಲಿಗೆ ಕಾರಣವೆಂದು ಆಟಗಾರರು ದೂರಿದ್ದಾರೆ. ಇಲ್ಲಿ ತಂಡವನ್ನು ಆಯ್ಕೆ ಮಾಡಿರುವುದು ಮೈಕ್ ಹೆಸ್ಸನ್.

ಅವರ ಕೆಲ ನಿರ್ಧಾರಗಳು ಇಡೀ ತಂಡದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಪಾಕ್ ತಂಡದ ಕಳಪೆ ಪ್ರದರ್ಶನಕ್ಕೆ ಮುಖ್ಯ ಕೋಚ್ ಮೈಕ್ ಹೆಸ್ಸನ್ ಕೂಡ ಕಾರಣಕರ್ತರು ಎಂದು ಪಾಕಿಸ್ತಾನ್ ಆಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..!

ಸದ್ಯ ಆಟಗಾರರು ದೂರು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಟೇಬಲ್​ ಮೇಲಿದ್ದು, ಈ ದೂರಿನ ಹೊರತಾಗಿಯೂ ಮೈಕ್ ಹೆಸ್ಸನ್ ಅವರನ್ನು ಪದಚ್ಯುತಗೊಳಿಸುವ ಸಾಧ್ಯತೆಯಿಲ್ಲ ಬದಲಾಗಿ ಅವರ ನಡವಳಿಕೆಯ ಬಗ್ಗೆ ಕಠಿಣ ಎಚ್ಚರಿಕೆ ನೀಡಲಿದ್ದಾರೆ ಎಂದು ವರದಿಯಾಗಿದೆ.

Source link

Exit mobile version