New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest

ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು ತನ್ನೊಳಗೆ ಒಳಗೊಂಡಿರಬಹುದು ಎಂಬುದು ಹಿರಿಯರ ನಂಬಿಕೆ.

ಮೊದಲ ಮತ್ತು ಅತ್ಯಂತ ಮುಖ್ಯವಾದ ನಿಯಮವೆಂದರೆ, ಹೊಸ ಬಟ್ಟೆಗಳನ್ನು ತೊಳೆಯದೆ ನೇರವಾಗಿ ಧರಿಸಬಾರದು. ಮಾರುಕಟ್ಟೆಯಲ್ಲಿ ಲಭ್ಯವಿರುವ ಬಟ್ಟೆಗಳು ತಯಾರಿಕೆ, ಪ್ಯಾಕಿಂಗ್ ಮತ್ತು ಸಾಗಣೆಯಂತಹ ಹಲವು ಹಂತಗಳ ಮೂಲಕ ಹಾದುಬರುತ್ತವೆ. ಈ ಪ್ರಕ್ರಿಯೆಯಲ್ಲಿ ಅವು ಧೂಳು, ರಾಸಾಯನಿಕಗಳು ಅಥವಾ ಇತರ ಕಲ್ಮಶಗಳನ್ನು ಹೊಂದಿರಬಹುದು. ಆದ್ದರಿಂದ, ವೈಯಕ್ತಿಕ ನೈರ್ಮಲ್ಯದ ದೃಷ್ಟಿಯಿಂದ ಅವುಗಳನ್ನು ಧರಿಸುವ ಮೊದಲು ಒಮ್ಮೆ ತೊಳೆಯುವುದು ಅತ್ಯಂತ ಸೂಕ್ತ.

ಆರೋಗ್ಯದ ದೃಷ್ಟಿಕೋನದಿಂದ:

ಇದು ಕೇವಲ ಧಾರ್ಮಿಕ ನಂಬಿಕೆಯಲ್ಲ, ಬದಲಿಗೆ ಆರೋಗ್ಯದ ದೃಷ್ಟಿಯಿಂದಲೂ ಬಹಳ ಮುಖ್ಯವಾಗಿದೆ. ಅಂಗಡಿಗಳಲ್ಲಿ ಪ್ರದರ್ಶನಕ್ಕಿರುವ ಬಟ್ಟೆಗಳನ್ನು ಹಲವರು ಧರಿಸಿ ನೋಡಿರುತ್ತಾರೆ (Trial). ಹೀಗಾಗಿ ತೊಳೆಯದ ಬಟ್ಟೆಗಳು ಚರ್ಮದ ಮೇಲೆ ಅಲರ್ಜಿ ಅಥವಾ ಸೋಂಕುಗಳಿಗೆ ಕಾರಣವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಶುಚಿಗೊಳಿಸುವಿಕೆ ಅತ್ಯಗತ್ಯ.

ಧಾರ್ಮಿಕ ದೃಷ್ಟಿಕೋನ:

ಧಾರ್ಮಿಕ ದೃಷ್ಟಿಕೋನದಿಂದ ನೋಡುವುದಾದರೆ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ದೇವರ ಮುಂದೆ ಇಟ್ಟು ಪೂಜಿಸುವುದು ನಮ್ಮಲ್ಲಿರುವ ಸಂಪ್ರದಾಯವಾಗಿದೆ. ಈ ಕ್ರಿಯೆಯು ಕೇವಲ ನಂಬಿಕೆಯ ಸಂಕೇತ ಮಾತ್ರವಲ್ಲ, ಇದು ಆ ವಸ್ತುವಿನಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತದೆ ಎಂದು ನಂಬಲಾಗಿದೆ. ಕೆಲವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಬಟ್ಟೆಯ ಒಂದು ಮೂಲೆಯಲ್ಲಿ ಅರಿಶಿನ ಅಥವಾ ಶ್ರೀಗಂಧದ ತಿಲಕವನ್ನು ಹಚ್ಚುವ ಮೂಲಕ ಅದನ್ನು ಹೆಚ್ಚು ಪವಿತ್ರಗೊಳಿಸುತ್ತಾರೆ.

ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು?

ಜ್ಯೋತಿಷ್ಯ ಶಾಸ್ತ್ರದಲ್ಲಿ, ಹೊಸ ಕಾರ್ಯಗಳಿಗೆ ದಿನ ಮತ್ತು ಸಮಯಕ್ಕೆ ವಿಶೇಷ ಮಹತ್ವವಿದೆ. ನಂಬಿಕೆಯ ಪ್ರಕಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರಗಳು ಹೊಸ ಬಟ್ಟೆಗಳನ್ನು ಧರಿಸಲು ಅತ್ಯಂತ ಶುಭ ದಿನಗಳೆಂದು ಪರಿಗಣಿಸಲ್ಪಟ್ಟಿವೆ. ಈ ದಿನಗಳಲ್ಲಿ ಹೊಸ ವಸ್ತ್ರ ಧರಿಸುವುದರಿಂದ ಸಕಾರಾತ್ಮಕ ಫಲಿತಾಂಶಗಳು ದೊರೆಯುತ್ತವೆ ಎಂಬ ನಂಬಿಕೆ ಜನಜನಿತವಾಗಿದೆ.

ಯಾವ ದಿನ ಹೊಸ ಬಟ್ಟೆ ಧರಿಸಬಾರದು?

ಅದೇ ರೀತಿ, ಮಂಗಳವಾರ ಮತ್ತು ಶನಿವಾರದಂದು ಹೊಸ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು ಎಂದು ಜ್ಯೋತಿಷ್ಯ ಹೇಳುತ್ತದೆ. ಈ ದಿನಗಳನ್ನು ಗ್ರಹಗಳ ಸ್ಥಾನ ಮತ್ತು ಪ್ರಭಾವದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಮಂಗಳ ಮತ್ತು ಶನಿಯ ಪ್ರಭಾವವಿರುವ ಈ ದಿನಗಳ ಬದಲಿಗೆ ಶುಭ ದಿನಗಳನ್ನು ಆಯ್ಕೆ ಮಾಡಿಕೊಳ್ಳುವುದು ಸಮೃದ್ಧಿಯ ಸಂಕೇತವೆಂದು ಭಾವಿಸಲಾಗುತ್ತದೆ.

ಸರಳ ಪರಿಹಾರ:

ಒಂದು ವೇಳೆ ಯಾವುದೇ ಅನಿವಾರ್ಯ ಪರಿಸ್ಥಿತಿಯಲ್ಲಿ ಹೊಸ ಬಟ್ಟೆಗಳನ್ನು ತೊಳೆಯಲು ಸಾಧ್ಯವಾಗದಿದ್ದರೆ, ಅದಕ್ಕೆ ಸರಳ ಪರಿಹಾರವೆಂದರೆ ಅವುಗಳ ಮೇಲೆ ಸ್ವಲ್ಪ ಶುದ್ಧ ನೀರನ್ನು ಸಿಂಪಡಿಸುವುದು (ಪ್ರೋಕ್ಷಣೆ). ನೀರನ್ನು ಶುದ್ಧತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಸಣ್ಣ ಕ್ರಿಯೆಯು ಬಟ್ಟೆಯಲ್ಲಿರಬಹುದಾದ ನಕಾರಾತ್ಮಕತೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಎಂಬ ನಂಬಿಕೆಯಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಹೊಸ ಬಟ್ಟೆಗಳನ್ನು ಧರಿಸುವ ಪ್ರಕ್ರಿಯೆಯು ಕೇವಲ ಫ್ಯಾಷನ್‌ಗೆ ಸೀಮಿತವಾಗಿಲ್ಲ. ಇದು ಸಂಪ್ರದಾಯ, ಆರೋಗ್ಯ ಮತ್ತು ಮನಸ್ಸಿನ ಶಾಂತಿಯ ಸುಂದರ ಸಂಯೋಜನೆಯಾಗಿದೆ. ಇಂತಹ ಸಣ್ಣ ಕ್ರಮಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ, ನೀವು ನಕಾರಾತ್ಮಕತೆಯನ್ನು ದೂರ ಮಾಡುವುದಲ್ಲದೆ, ನಿಮ್ಮಲ್ಲಿ ಸಕಾರಾತ್ಮಕ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬಹುದು ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?

ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು.

ವೈಯಕ್ತಿಕ ಕಾರಣಗಳಿಂದ ಸೂರ್ಯಕುಮಾರ್ ಯಾದವ್ ಹೊರಕ್ಕೆ

ಹಾರ್ದಿಕ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಕೂಡ ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ. ಸೂರ್ಯಕುಮಾರ್ ಅವರ ಪತ್ನಿ ದೇವಿಶಾ ಶೆಟ್ಟಿ ಶೀಘ್ರದಲ್ಲೇ ತಾಯಿಯಾಗಲಿದ್ದಾರೆ. ಸೂರ್ಯಕುಮಾರ್ ತಮ್ಮ ಕುಟುಂಬದೊಂದಿಗೆ ಈ ಸಂತೋಷದ ಸಮಯವನ್ನು ಕಳೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಕಾರಣಕ್ಕಾಗಿ ಅವರು ಮೇ 10 ರಂದು ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಲಭ್ಯವಿರುವುದಿಲ್ಲ. ಆದರೆ, ಈ ಬಗ್ಗೆ ತಂಡದ ಆಡಳಿತ ಮಂಡಳಿ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ರೋಹಿತ್ ಶರ್ಮಾ ಹೆಗಲಿಗೆ ಕ್ಯಾಪ್ಟನ್ ಜವಾಬ್ದಾರಿ?

ನಾಯಕ ಮತ್ತು ಉಪನಾಯಕ ಇಬ್ಬರ ಅನುಪಸ್ಥಿತಿಯಲ್ಲಿ, ತಂಡದ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳುತ್ತಾರೆ ಎಂಬುದು ಈಗ ಕುತೂಹಲಕಾರಿಯಾಗಿದೆ. ತಂಡಕ್ಕೆ ಐದು ಬಾರಿ ಟ್ರೋಫಿಯನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾ ಅವರತ್ತ ಮ್ಯಾನೇಜ್‌ಮೆಂಟ್ ಒಲವು ತೋರುತ್ತಿದೆ ಎಂಬ ವರದಿಗಳಿವೆ. ತಂಡವು ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿರುವುದರಿಂದ, ಅನುಭವಿ ರೋಹಿತ್ ತಂಡವನ್ನು ಮುನ್ನಡೆಸುತ್ತಾರೆ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ರೋಹಿತ್ ಸಿದ್ಧವಾಗಿಲ್ಲದಿದ್ದರೆ, ಯುವ ಆಟಗಾರ ತಿಲಕ್ ವರ್ಮಾಗೆ ಅವಕಾಶ ನೀಡುವ ಆಲೋಚನೆಯೂ ಇದೆ.

LSG vs RCB: ಐಪಿಎಲ್​ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ?

ಪ್ರಸಕ್ತ ಋತುವಿನಲ್ಲಿ ಮುಂಬೈ ತಂಡದ ಪ್ರದರ್ಶನ ತೀರಾ ನಿರಾಶಾದಾಯಕವಾಗಿದೆ. ಇದರ ಜೊತೆಗೆ, ತಂಡದ ಹಿರಿಯ ಆಟಗಾರರಲ್ಲಿ ಭಿನ್ನಾಭಿಪ್ರಾಯಗಳಿವೆ ಮತ್ತು ಡ್ರೆಸ್ಸಿಂಗ್ ಕೋಣೆಯಲ್ಲಿ ವಾತಾವರಣ ಸುಗಮವಾಗಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಗಳಿವೆ. ರಾಯ್‌ಪುರದಲ್ಲಿ ಬೆಂಗಳೂರು ವಿರುದ್ಧ ನಡೆಯಲಿರುವ ಪಂದ್ಯ ಮುಂಬೈ ತಂಡದ ಸ್ವಾಭಿಮಾನದ ಪರೀಕ್ಷೆಯಾಗಿ ಮಾರ್ಪಟ್ಟಿದೆ. ಹೊಸ ನಾಯಕನ ನಾಯಕತ್ವದಲ್ಲಾದರೂ ತಂಡ ಯಶಸ್ಸಿನ ಹಾದಿಗೆ ಮರಳುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್..!

Source link

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ, ರಾಜಕೀಯ ಮುತ್ಸದ್ದಿತನ ಮೆರೆದ ಎಂ.ಕೆ. ಸ್ಟಾಲಿನ್ – Kannada News | Stalin Backs Actor Vijay: TVK Forms Tamil Nadu Government, Averts Crisis

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ದೈತ್ಯ ಶಕ್ತಿ ಎಂ.ಕೆ. ಸ್ಟಾಲಿನ್(MK Stalin) ಅವರು ತೆಗೆದುಕೊಂಡಿರುವ ಒಂದು ದಿಟ್ಟ ನಿರ್ಧಾರ, ರಾಜ್ಯದಲ್ಲಿ ಎದುರಾಗಿದ್ದ ಸಾಂವಿಧಾನಿಕ ಬಿಕ್ಕಟ್ಟನ್ನು ಕ್ಷಣಾರ್ಧದಲ್ಲಿ ತಿಳಿಗೊಳಿಸಿದೆ. ಬಹುಮತದ ಕೊರತೆಯಿಂದ ಸರ್ಕಾರ ರಚಿಸಲು ಪರದಾಡುತ್ತಿದ್ದ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಗೆ ಸ್ಟಾಲಿನ್ ಅಭಯ ನೀಡಿದ್ದು, ವಿಜಯ್ ಸರ್ಕಾರ ರಚಿಸಲಿ ಎಂದು ಹೇಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ.

ಬಹುಮತಕ್ಕೆ 11 ಸ್ಥಾನಗಳ ಕೊರತೆಯಿದ್ದರೂ, ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗುವುದು ನಮಗೆ ಇಷ್ಟವಿಲ್ಲ. ಜನರ ತೀರ್ಪನ್ನು ಗೌರವಿಸಿ ವಿಜಯ್ ಅವರು ಸರ್ಕಾರ ರಚಿಸಲಿ ಎಂದು ಸ್ಪಷ್ಟಪಡಿಸಿದರು.

ಬುಧವಾರ ರಾತ್ರಿಯವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ಸ್ಟಾಲಿನ್ ಅವರ ಈ ನಡೆಯು ಆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

ಮತ್ತಷ್ಟು ಓದಿ: ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?

ವಿಜಯ್ ಸರ್ಕಾರಕ್ಕೆ ಸ್ಟಾಲಿನ್ ಕಿವಿಮಾತು
ಅಧಿಕಾರ ಬಿಟ್ಟುಕೊಡಲು ಸಮ್ಮತಿಸಿರುವ ಸ್ಟಾಲಿನ್, ತಮ್ಮ ಆಡಳಿತ ಅವಧಿಯಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳನ್ನು ಹೊಸ ಸರ್ಕಾರವು ಮುಂದುವರಿಸಬೇಕೆಂದು ಆಶಿಸಿದ್ದಾರೆ: ಶಾಲಾ ಮಕ್ಕಳ ಹಸಿವು ನೀಗಿಸುವ ಈ ಯೋಜನೆ ನಿಲ್ಲಬಾರದು, ಮಹಿಳೆಯರಿಗೆ ನೀಡಲಾಗುತ್ತಿರುವ 1,000 ರೂ. ಮಾಸಿಕ ಆರ್ಥಿಕ ನೆರವಿನ ಯೋಜನೆಯನ್ನು ಉಳಿಸಿಕೊಳ್ಳಬೇಕು.

ವಿಜಯ್ ಅವರು ತಮ್ಮ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ 2,500 ರೂ. ನೀಡುವುದಾಗಿ ಭರವಸೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸ್ಟಾಲಿನ್, ಇಷ್ಟು ದೊಡ್ಡ ಮೊತ್ತವನ್ನು ನೀಡುವುದು ಆರ್ಥಿಕವಾಗಿ ಸವಾಲಿನ ಕೆಲಸ. ಆದರೆ ಕನಿಷ್ಠ ಈಗಿರುವ 1,000 ರೂ. ಯೋಜನೆಯನ್ನಾದರೂ ಹೊಸ ಸರ್ಕಾರ ಮುಂದುವರಿಸಲಿ ಎಂದು ಸಲಹೆ ನೀಡಿದರು.

ಸ್ಟಾಲಿನ್ ಅವರ ಈ ಬಹಿರಂಗ ಬೆಂಬಲದ ನಂತರ, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ವಿಜಯ್ ಅವರ ಸಂಖ್ಯಾಬಲದ ಬಗ್ಗೆ ಇದ್ದ ಆತಂಕ ದೂರವಾದಂತಾಗಿದೆ. ಡಿಎಂಕೆ ಬೆಂಬಲ ಸೂಚಿಸಿರುವುದರಿಂದ, ವಿಜಯ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜಭವನದಿಂದ ಅಧಿಕೃತ ಆಮಂತ್ರಣ ಬರುವ ಸಾಧ್ಯತೆ ದಟ್ಟವಾಗಿದೆ.

ತಮಿಳುನಾಡಿನ ಇತಿಹಾಸದಲ್ಲಿ ಬದ್ಧ ರಾಜಕೀಯ ವೈರಿಗಳ ನಡುವೆ ಇಂತಹದೊಂದು ‘ಸಾಂವಿಧಾನಿಕ ಸೌಹಾರ್ದತೆ’ ಕಂಡುಬಂದಿರುವುದು ರಾಜಕೀಯ ಮುತ್ಸದ್ದಿತನಕ್ಕೆ ಸಾಕ್ಷಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧದ ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ – Kannada News | Indian Armed Forces Marks Anniversary of Operation Sindoor With New Video Release

ನವದೆಹಲಿ, ಮೇ 07: ಭಾರತೀಯ ಸೇನೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟ ಕ್ಷಣವೊಂದಕ್ಕೆ ಇಂದು ಒಂದು ವರ್ಷ ಸಂದಿದೆ. ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದ ಶಕ್ತಿಗಳ ವಿರುದ್ಧ ನಡೆದಿದ್ದ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಅಂದಿನ ಭೀಕರ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಸರಿಯಾಗಿ ಒಂದು ವರ್ಷದ ಹಿಂದೆ, ಭಾರತದ ಭದ್ರತೆಗೆ ಸವಾಲಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆಯು ರಾವಲ್ಪಿಂಡಿಯ ಆಯಕಟ್ಟಿನ ಪ್ರದೇಶಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿತ್ತು. ಅತ್ಯಂತ ರಹಸ್ಯವಾಗಿ ರೂಪಿಸಲಾಗಿದ್ದ ಈ ಪ್ಲಾನ್ ಮುಖಾಂತರ ಗಡಿಯಾಚೆಗಿನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. ಶತ್ರುಪಡೆಗಳು ಚೇತರಿಸಿಕೊಳ್ಳುವ ಮುನ್ನವೇ ಭಾರತೀಯ ವೀರರು ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ್ದರು.

ಈ ವೀಡಿಯೊ ಬಿಡುಗಡೆ ಮಾಡುವುದರ ಹಿಂದೆ ಭಾರತೀಯ ಸೇನೆಯು ಸ್ಪಷ್ಟ ಸಂದೇಶವನ್ನು ನೀಡಿದೆ. ಭಾರತದ ಮೇಲೆ ಕಣ್ಣು ಹಾಕುವ ಅಥವಾ ಭಯೋತ್ಪಾದನೆಗೆ ನೀರೆರೆಯುವ ಶಕ್ತಿಗಳು ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿದ್ದರೂ ಸರಿ, ಭಾರತೀಯ ಸೇನೆ ಅವರನ್ನು ಹುಡುಕಿ ಶಿಕ್ಷಿಸುತ್ತದೆ ಎಂಬುದು ಈ ವೀಡಿಯೊದ ಸಾರಾಂಶವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊ ಸದ್ದು ಮಾಡುತ್ತಿದ್ದು, ಭಾರತೀಯ ಸೈನಿಕರ ಧೈರ್ಯ ಮತ್ತು ಶೌರ್ಯಕ್ಕೆ ನೆಟ್ಟಿಗರು ಸಲಾಂ ಎನ್ನುತ್ತಿದ್ದಾರೆ. ದೇಶದ ಗಡಿ ಸುರಕ್ಷಿತ ಕೈಗಳಲ್ಲಿದೆ ಎಂಬುದಕ್ಕೆ ಆಪರೇಷನ್ ಸಿಂಧೂರ್ ಸಾಕ್ಷಿ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರ್ಯಾಚರಣೆಯು ಭಾರತದ ಸೇನಾ ಶಕ್ತಿಯನ್ನು ಜಾಗತಿಕ ಮಟ್ಟದಲ್ಲಿ ಸಾಬೀತುಪಡಿಸಿದ್ದು ಮಾತ್ರವಲ್ಲದೆ, ನೆರೆಯ ರಾಷ್ಟ್ರಕ್ಕೆ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂಬ ಕಠಿಣ ಎಚ್ಚರಿಕೆಯನ್ನೂ ನೀಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಾವು, ಹಲಸು ಪ್ರಿಯರಿಗೆ ಈ ಬಾರಿ ಹಬ್ಬ! ಲಾಲ್​ಬಾಗ್, ಕಬ್ಬನ್ ಪಾರ್ಕ್​ನಲ್ಲಿ ‘ಮಾವು ಮತ್ತು ಹಲಸಿನ ಮೇಳ’ – Kannada News | Double Mango Treat: Cubbon Park to Host Mango Mela from May 8

ಬೆಂಗಳೂರು, ಮೇ 07: ಬೆಂಗಳೂರಿನ ಮಾವು (Mango) ಮತ್ತು ಹಲಸಿನ ಹಣ್ಣಿನ ಪ್ರಿಯರಿಗೆ ಈ ಬಾರಿ ಸಿಹಿ ಸುದ್ದಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ನಗರದ ಎರಡು ಪ್ರಮುಖ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್‌ನಲ್ಲಿ ‘ಮಾವು ಮತ್ತು ಹಲಸಿನ ಮೇಳ’ ಆಯೋಜಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಮೊದಲಿಗೆ ಕಬ್ಬನ್ ಪಾರ್ಕ್​ನಲ್ಲಿ ಮೇಳ ಶುರುವಾಗಲಿದ್ದು, ಮೇ 20ರ ನಂತರ ಲಾಲ್​ ಬಾಗ್​ನಲ್ಲೂ ಮೇಳ ಜರುಗಲಿದೆ. ಹೊರರಾಜ್ಯದ ಗುಣಮಟ್ಟವಿಲ್ಲದ ಮಾವಿನ ಹಣ್ಣನ್ನು ಖರೀಸುವ ಬದಲು, ನಮ್ಮ ರಾಜ್ಯದ ರೈತರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ.

ಮುಖ್ಯಾಂಶಗಳು

  • ಕಬ್ಬನ್​ ಪಾರ್ಕ್​ ಮತ್ತು ಲಾಲ್ ಬಾಗ್​ನಲ್ಲಿ ಮಾವು ಮತ್ತು ಹಲಸಿನ ಮೇಳ
  • ಮೇ 8 ರಿಂದ ಮೇಳ ಆರಂಭ
  • ನಮ್ಮ ರಾಜ್ಯದ ರೈತರನ್ನು ಪ್ರೋತ್ಸಾಹಿಸುವ ಉದ್ದೇಶ

ಕಬ್ಬನ್ ಪಾರ್ಕ್‌ನಲ್ಲಿ ಮೊದಲ ಮೇಳ

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್. ವೇದಮೂರ್ತಿ ಅವರು ನೀಡಿರುವ ಮಾಹಿತಿಯಂತೆ, ಮೇ 8ರಿಂದ ಮೇ 18ರವರೆಗೆ ಕಬ್ಬನ್ ಪಾರ್ಕ್‌ನಲ್ಲಿ ಮೊದಲ ಹಂತದ ಮೇಳ ನಡೆಯಲಿದೆ. ಈ ಮೇಳವು ಮುಖ್ಯವಾಗಿ ಧಾರವಾಡ, ಮಂಡ್ಯ, ಮೈಸೂರು, ದಕ್ಷಿಣ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ರೈತರಿಗೆ ಅನುಕೂಲವಾಗಲಿದೆ. ಸುಮಾರು 70 ಸ್ಟಾಲ್‌ಗಳನ್ನು ಇಲ್ಲಿ ಹಾಕಲಾಗುತ್ತಿದ್ದು, ಗ್ರಾಹಕರು ನೇರವಾಗಿ ರೈತರಿಂದಲೇ ಕೆಮಿಕಲ್ ಮುಕ್ತ ಹಣ್ಣುಗಳನ್ನು ಖರೀದಿಸಬಹುದಾಗಿದೆ.

ಮತ್ತೊಂದು ಸುತ್ತಿನ ಮೇಳವು ಇದೇ ಕಬ್ಬನ್ ಪಾರ್ಕ್‌ನಲ್ಲಿ ಮೇ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು, ಅಲ್ಲಿ 100ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇದರ ದಿನಾಂಕಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಇಳುವರಿ ಕುಸಿತದ ಆತಂಕ

ಈ ಬಾರಿ ರಾಜ್ಯದಲ್ಲಿ ಮಾವಿನ ಇಳುವರಿ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷ ಸುಮಾರು 15 ಲಕ್ಷ ಟನ್ ಇಳುವರಿ ಬಂದಿದ್ದರೆ, ಈ ಬಾರಿ ಕೇವಲ 10 ಲಕ್ಷ ಟನ್ ಇಳುವರು ಬರಬಹುದೆಂದು ಅಂದಾಜಿಸಲಾಗಿದೆ. ಅತೀವ ಶಾಖ ಮತ್ತು ವಾತಾವರಣದಲ್ಲಿನ ಕಡಿಮೆ ತೇವಾಂಶದ ಕಾರಣದಿಂದ ಹಣ್ಣುಗಳು ಗಿಡದಿಂದ ಉದುರಿರುವುದು ಇಳುವರಿ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದೆ. ಜೊತೆಗೆ ರಫ್ತು ಪ್ರಮಾಣದಲ್ಲೂ ಭಾರಿ ಇಳಿಕೆಯಾಗಿದೆ. ಕಳೆದ ವರ್ಷ 1,000 ಟನ್ ಮಾವು ರಫ್ತು ಮಾಡಲಾಗಿತ್ತು. ಆದರೆ ಈ ವರ್ಷ ಈವರೆಗೆ ಕೇವಲ 50 ರಿಂದ 100 ಟನ್ ಮಾತ್ರ ರಫ್ತು ಮಾಡಲು ಸಾಧ್ಯವಾಗಿದೆ ಎಂದು ವೇದಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ

ರೈತರಿಗೆ ಮಾರುಕಟ್ಟೆ ವ್ಯವಸ್ಥೆ

ಸದ್ಯ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಮಾವಿನ ಹಣ್ಣುಗಳು ಹೊರ ರಾಜ್ಯಗಳಿಂದ ಬರುತ್ತಿರುವುದರಿಂದ ಅವುಗಳ ಗುಣಮಟ್ಟ ಕಡಿಮೆ ಇದೆ ಮತ್ತು ಬೆಲೆ ಹೆಚ್ಚಿದೆ. ಕೋಲಾರ ಮತ್ತು ರಾಮನಗರದ ಮಾವುಗಳು ಕ್ರಮವಾಗಿ ಮೇ 8 ಮತ್ತು ಮೇ 27ರ ವೇಳೆಗೆ ಮಾರುಕಟ್ಟೆಗೆ ಬರಲಿವೆ. ರೈತರು ತಾವು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಈ ಮೇಳದ ಮೂಲಕ ಅವರಿಗೆ ನೇರ ಮಾರುಕಟ್ಟೆ ಒದಗಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್ – Kannada News | Duniya Vijay on Directing Daughter Monisha in City Lights: Never Treated Her as a Daughter on Set

‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ನಿರ್ದೇಶನ ಮಾಡಿದವರು ದುನಿಯಾ ವಿಜಯ್. ಅವರು ಮೂರನೇ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೆಸರು ‘ಸಿಟಿ ಲೈಟ್ಸ್’. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ನಾಯಕನಾದರೆ, ದುನಿಯಾ ವಿಜಿ ಅವರ ಮಗಳು ಮೋನಿಷಾ ನಾಯಕಿ. ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಾನು ಸೆಟ್​​ನಲ್ಲಿ ಮೋನಿಷಾಳ ಮಗಳು ಅಂತ ನೋಡಿಲ್ಲ’ ಎಂದಿದ್ದಾರೆ. ಅವರು ಓರ್ವ ನಿರ್ದೇಶಕನಾಗಿ ಮೋನಿಷಾನ ನೋಡುತ್ತಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿ? ಹೆಚ್ಚಾಯ್ತು ಅನುಮಾನ – Kannada News | Was Suvendu Adhikari the Real Target? Suspicion Deepens After PA Chandranath’s Murder in West Bengal

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಆಪ್ತ ಚಂದ್ರನಾಥ್ ರಥ್ ಹತ್ಯೆಯಾಗಿದ್ದಾರೆ. ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಅಸಲಿಗೆ ದುಷ್ಕರ್ಮಿಗಳ ಗುರಿ ಸುವೇಂದು ಅಧಿಕಾರಿಯೇ ಆಗಿದ್ದರೇ ಎಂಬ ಅನುಮಾನ ಇದೀಗ ಬಲವಾಗಿದೆ. ಅಲ್ಲದೆ, ಈ ಘಟನೆಯು ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉತ್ತರ 24 ಪರಗಣ ಜಿಲ್ಲೆಯ ಮಧ್ಯಗ್ರಾಮದಲ್ಲಿ ಬುಧವಾರ ತಡರಾತ್ರಿ ಚಂದ್ರನಾಥ್ ಕಾರಿನಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದಾಗ, ಎಂಟು ಮಂದಿ ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಏರ್ಪೋರ್ಟ್ ಬಳಿ ಕಾರನ್ನು ಅಡ್ಡಗಟ್ಟಿದ ಹಂತಕರು, ಚಂದ್ರನಾಥ್ ಅವರ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುರಿ ಇಟ್ಟು ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಅತಿ ಹತ್ತಿರದಿಂದ ಗುಂಡು ತಗುಲಿದ ಪರಿಣಾಮ ಚಂದ್ರನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಹತ್ಯೆಯು ಪೂರ್ವಯೋಜಿತವಾಗಿದ್ದು, ಇದಕ್ಕಾಗಿ ಆಸ್ಟ್ರಿಯಾ ಮೂಲದ ಪಿಸ್ತೂಲ್ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುವೆಂದು ಅಧಿಕಾರಿ ಅವರ ಪರವಾಗಿ ಭವಾನಿಪುರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಚಂದ್ರನಾಥ್ ಅವರನ್ನೇ ಟಾರ್ಗೆಟ್ ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

16 ಕ್ಯಾಚ್​ಗಳು… ಪಂಜಾಬ್ ಕಿಂಗ್ಸ್‌ನ ಫೀಲ್ಡರ್​ಗಳಿಂದ ಕಂಗೆಟ್ಟ ಚಹಲ್! – Kannada News | Yuzvendra Chahal’s Nightmare: 16 Chances Created, 8 Catches Dropped!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮಿಂಚಿದ್ದ ಪಂಜಾಬ್ ಕಿಂಗ್ಸ್​ ತಂಡವು ದ್ವಿತೀಯಾರ್ಧದಲ್ಲಿ ಹ್ಯಾಟ್ರಿಕ್ ಸೋಲನುಭವಿಸಿದೆ. ಈ ಸೋಲುಗಳಿಗೆ ಮುಖ್ಯ ಕಾರಣ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳ ಕಳಪೆ ಪ್ರದರ್ಶನ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಕ್ಯಾಚ್ ಕೈಚೆಲ್ಲುತ್ತಿರುವುದು ಯುಜ್ವೇಂದ್ರ ಚಹಲ್ ಓವರ್​ನಲ್ಲಿ ಎಂಬುದು ಇಲ್ಲಿ ವಿಶೇಷ.

ಚಹಲ್​ನ ದುರಾದೃಷ್ಟ:

ಈ ಬಾರಿಯ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಇದುವರೆಗೆ ಒಟ್ಟು 16 ಕ್ಯಾಚಿಂಗ್ ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಆದರೆ ಅಚ್ಚರಿಯೆಂದರೆ, ಈ ಪೈಕಿ 8 ಕ್ಯಾಚ್‌ಗಳನ್ನು ಫೀಲ್ಡರ್‌ಗಳು ಕೈಬಿಟ್ಟಿದ್ದಾರೆ. ಅಂದರೆ ಇಲ್ಲಿ ಚಹಲ್​​ಗೆ 8 ವಿಕೆಟ್​ಗಳು ನಷ್ಟವಾಗಿವೆ. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಎದುರಾಳಿ ಬ್ಯಾಟರ್​ಗಳು ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣರಾಗಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ  ಯುಜ್ವೇಂದ್ರ ಚಹಲ್ ಅವರಿಗೆ ಬರಬೇಕಿದ್ದ ವಿಕೆಟ್‌ಗಳು ಕೈತಪ್ಪಿದವು. ಚಹಲ್ ಅವರ ಬೌಲಿಂಗ್‌ನಲ್ಲಿ ಪ್ರಮುಖವಾಗಿ ಈ ಕೆಳಗಿನ ಆಟಗಾರರು ಸುಲಭ ಕ್ಯಾಚ್ ಹಾಗೂ ಸ್ಟಂಪಿಂಗ್ ಕೈಬಿಟ್ಟಿದ್ದರು.

  • ಶಶಾಂಕ್ ಸಿಂಗ್: ಚಹಲ್ ಎಸೆದ 8.4ನೇ ಓವರ್‌ನಲ್ಲಿ ಹೆನ್ರಿಕ್ ಕ್ಲಾಸೆನ್ ನೀಡಿದ ಅತ್ಯಂತ ಸುಲಭವಾದ ಕ್ಯಾಚ್ ಅನ್ನು ‘ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್’ನಲ್ಲಿ ಶಶಾಂಕ್ ಸಿಂಗ್ ಕೈಬಿಟ್ಟರು. ಈ ವೇಳೆ ಕೇವಲ 9 ರನ್ ಗಳಿಸಿದ್ದ ಕ್ಲಾಸೆನ್ ನಂತರ 69 ರನ್ ಬಾರಿಸಿ ಪಂದ್ಯದ ಗತಿಯನ್ನೇ ಬದಲಿಸಿದರು.
  • ಲಾಕಿ ಫರ್ಗುಸನ್: ಚಹಲ್ ಎಸೆದ 11ನೇ ಓವರ್‌ನಲ್ಲಿ ಇಶಾನ್ ಕಿಶನ್ ನೀಡಿದ ಕ್ಯಾಚ್ ಅನ್ನು ಫರ್ಗುಸನ್ ಕೈಚೆಲ್ಲಿದರು. ಈ ಜೀವದಾನವನ್ನು ಬಳಸಿಕೊಂಡ ಇಶಾನ್ ಕಿಶನ್ ಈ ಮ್ಯಾಚ್​ನಲ್ಲಿ 55 ರನ್​ ಚಚ್ಚಿದರು.
  • ಪ್ರಭ್‌ಸಿಮ್ರಾನ್ ಸಿಂಗ್: ಇದೇ ಪಂದ್ಯದಲ್ಲಿ ಚಹಲ್ ಎಸೆತವೊಂದರಲ್ಲಿ ಇಶಾನ್ ಕಿಶನ್ ಅವರನ್ನು ಸ್ಟಂಪಿಂಗ್ ಮಾಡುವ ಅವಕಾಶವನ್ನೂ ವಿಕೆಟ್ ಕೀಪರ್ ಪ್ರಭ್‌ಸಿಮ್ರಾನ್ ಸಿಂಗ್ ಕೈಚೆಲ್ಲಿ ಕೊಂಡರು.
  • ಕೂಪರ್ ಕೊನೊಲಿ: ಲಾಕಿ ಫರ್ಗುಸನ್ ಎಸೆತದಲ್ಲಿ ಇಶಾನ್ ಕಿಶನ್ ನೀಡಿದ ಮತ್ತೊಂದು ಕ್ಯಾಚ್​ ಅನ್ನು ಕೂಪರ್ ಕೊನೊಲಿ ಕೈಚೆಲ್ಲಿದ್ದರು.

ಹತಾಶೆಯ ಪರಾಕಾಷ್ಠೆ:

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಪಡೆಯಲು ಯುಜ್ವೇಂದ್ರ ಚಹಲ್ ಹಲವು ಅವಕಾಶಗಳನ್ನು ಸೃಷ್ಟಿಸಿದರೂ ಪಂಜಾಬ್ ಕಿಂಗ್ಸ್​ ಫೀಲ್ಡರ್​ಗಳು ಈ ಅವಕಾಶಗಳನ್ನು ಕೈಚೆಲ್ಲಿದ್ದರು. ಇದರಿಂದ ಚಹಲ್ ಅವರ ಮುಖದಲ್ಲಿ ಹತಾತೆ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ: Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ!

ಅಂದರೆ ಕಳೆದ 10 ಪಂದ್ಯಗಳಲ್ಲಿ ಯುಜ್ವೇಂದ್ರ ಚಹಲ್ 16 ಅವಕಾಶಗಳನ್ನು ಸೃಷ್ಟಿಸಿದರೂ ಪಂಜಾಬ್ ಕಿಂಗ್ಸ್ ಫೀಲ್ಡರ್​ಗಳು ಹಿಡಿದಿರುವುದು ಕೇವಲ 8 ಕ್ಯಾಚ್​ಗಳನ್ನು ಮಾತ್ರ. ಇನ್ನುಳಿದ 8 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಅಂದರೆ ಇಲ್ಲಿ ಚಹಲ್ ಸ್ಪಿನ್ ಮೋಡಿ ಮಾಡುತ್ತಿದ್ದರೂ ಫೀಲ್ಡರ್​ಗಳಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿಲ್ಲ.

ಯಾರು ‘ವಿಲನ್’!

ಈ ಸೀಸನ್‌ನಲ್ಲಿ ಯುಜ್ವೇಂದ್ರ ಚಹಲ್ ಬೌಲಿಂಗ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟಿರುವುದು ಶಶಾಂಕ್ ಸಿಂಗ್. ಅವರು ಈವರೆಗೆ ಒಟ್ಟು ನಾಲ್ಕು ಕ್ಯಾಚ್‌ಗಳನ್ನು ಕೈಚೆಲ್ಲುವ ಮೂಲಕ ಚಹಲ್ ಅವರ ವಿಕೆಟ್ ಸಂಖ್ಯೆ ಏರಿಕೆಯಾಗದಂತೆ ತಡೆದಿದ್ದಾರೆ.

ಇತ್ತ ಪಂಜಾಬ್ ಕಿಂಗ್ಸ್​ ಫೀಲ್ಡಿಂಗ್​ಗಳಿಂದ ಉತ್ತಮ ಬೆಂಬಲವಿಲ್ಲದಿದ್ದರೂ ಚಹಲ್ ವೈಯಕ್ತಿಕವಾಗಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ.  ಅಂದರೆ ಈ ಬಾರಿ ಪಡೆದ 8 ವಿಕೆಟ್​​ಗಳ ಮೂಲಕ ಭಾರತದಲ್ಲಿ 300 ಟಿ20 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಯುಜ್ವೇಂದ್ರ ಚಹಲ್​ (229+ ವಿಕೆಟ್), ಫೀಲ್ಡರ್‌ಗಳ ಸಹಕಾರಯೊಂದಿಗೆ ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಿತ್ತು. ಆದರೆ ಕಳಪೆ ಫೀಲ್ಡಿಂಗ್ ಕಾರಣ 8 ವಿಕೆಟ್​ಗಳು ಕೈ ತಪ್ಪಿದೆ. ಈ ವಿಕೆಟ್​ಗಳ ಕೈ ತಪ್ಪುವಿಕೆಯೊಂದಿಗೆ ಪಂಜಾಬ್ ಕಿಂಗ್ಸ್​ ಸೋಲಿನತ್ತ ಮುಖ ಮಾಡುತ್ತಿರುವುದು ಮಾತ್ರ ವಿಪರ್ಯಾಸ.

Source link

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ.

1.ಮಾರ್ಚ್ 5, 2027ರಂದೇ ‘ಸ್ಪಿರಿಟ್’ ರಿಲೀಸ್ ಅಧಿಕೃತ

2.ಸಲ್ಮಾನ್ ಖಾನ್ ಸಿನಿಮಾ ಕಾರಣಕ್ಕೆ ಸಿನಿಮಾ ಮುಂದೂಡಿಕೆ ವದಂತಿ ಸುಳ್ಳು

3.ಪೊಲೀಸ್ ಆಫೀಸರ್ ಪಾತ್ರದಲ್ಲಿ ಪ್ರಭಾಸ್ ಅಬ್ಬರ

‘ಸ್ಪಿರಿಟ್’ ಸಿನಿಮಾ ಈ ಹಿಂದೆ ಘೋಷಿಸಿದಂತೆ 2027ರ ಮಾರ್ಚ್ 5ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಶೂಟಿಂಗ್ ಪ್ಲಾನ್ ಮಾಡಿದಂತೆಯೇ ಭರದಿಂದ ಸಾಗುತ್ತಿದ್ದು, ಯಾವುದೇ ಕಾರಣಕ್ಕೂ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇರುವುದಿಲ್ಲ ಎಂದು ತಂಡ ಸ್ಪಷ್ಟಪಡಿಸಿದೆ. ಈ ಮೂಲಕ ಸಲ್ಮಾನ್ ಖಾನ್ ಸಿನಿಮಾದಿಂದಾಗಿ ಪ್ರಭಾಸ್ ಸಿನಿಮಾ ಹಿಂದೆ ಸರಿಯಲಿದೆ ಎಂಬ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ.

ಪ್ರಭಾಸ್ ಅವರಿಗೆ ಬಾಲಿವುಡ್​ಗಿಂತ ಹೆಚ್ಚಿನ ಅಭಿಮಾನಿ ಬಳಗ ದಕ್ಷಿಣ ಭಾರತದಲ್ಲಿ ಇದೆ. ಟಾಲಿವುಡ್ ಅಲ್ಲಿ ಅವರನ್ನು ಆರಾಧಿಸುವವರು ಬಹಳಷ್ಟು ಮಂದಿ ಇದ್ದಾರೆ. ಹೀಗಾಗಿ, ಹಿಂದಿಯಲ್ಲಿ ರಿಲೀಸ್ ಆಗುವ ಸಿನಿಮಾ ಬಗ್ಗೆ ಅವರು ಹೆದರುವ ಅಗತ್ಯವೇ ಇಲ್ಲ ಎಂಬುದು ತಂಡದ ಅಭಿಪ್ರಾಯ.

ಇದನ್ನೂ ಓದಿ: ಮುಂಬೈನಲ್ಲಿ ಪ್ರಭಾಸ್ ಕ್ರೇಜ್ ಹೇಗಿದೆ? ಸ್ವಂತ ಅನುಭವ ವಿವರಿಸಿದ ಕರಣ್ ಜೋಹರ್

ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಮೊದಲ ಬಾರಿಗೆ ಒಂದಾಗುತ್ತಿರುವ ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ. ಇದರಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬಾಲಿವುಡ್ ನಟಿ ತೃಪ್ತಿ ದಿಮ್ರಿ ಈ ಚಿತ್ರದ ನಾಯಕಿಯಾಗಿದ್ದು, ಮೊದಲ ಬಾರಿಗೆ ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿವೇಕ್ ಒಬೆರಾಯ್ ಪ್ರಮುಖ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಲ್ಮಾನ್ ಸಿನಿಮಾ ಯಾವುದು?

ಸಲ್ಮಾನ್ ಹೊಸ ಸಿನಿಮಾಗೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರಲಿದೆ. ಈ ಸಿನಿಮಾಗೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಮೊದಲು ಅವರು ಪ್ರಭಾಸ್ ಜೊತೆ ಸಿನಿಮಾ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version