ಆಂಥ್ರೋಪಿಕ್​ನಿಂದ ಉಚಿತ ಎಐ ಕೋರ್ಸ್​ಗಳು; ಕ್ಲಾಡ್ ಟ್ರೈನಿಂಗ್ ಮತ್ತು ಸರ್ಟಿಫಿಕೇಟ್ ಸಿಗುತ್ತೆ; ಪಡೆಯುವುದು ಹೇಗೆ? – Kannada News | Anthropic starts several free AI courses online, know where and how to find them

ಬೆಂಗಳೂರು, ಮಾರ್ಚ್ 5: ಆಂಥ್ರೋಪಿಕ್ (Anthropic) ಕಂಪನಿಯ ಎಐ ಟೆಕ್ನಾಲಜಿ ಶಕ್ತ ಉತ್ಪನ್ನಗಳು ದೈನಂದಿನ ಕೆಲಸಗಳನ್ನು ಸಲೀಸುಗೊಳಿಸಲು ಬಹಳ ನೆರವಾಗುತ್ತವೆ. ಅದರ ಕ್ಲಾಡ್​ನಂತಹ ಎಐ ಟೂಲ್​ಗಳು ಹೆಚ್ಚೆಚ್ಚು ಕೆಲಸಗಳನ್ನು ಆಟೊಮೇಟ್​ಗೊಳಿಸಬಲ್ಲುವು. ಆದರೆ, ಈ ಟೂಲ್​ಗಳನ್ನು ಹೇಗೆ ಬಳಸಬೇಕು ಎಂಬುದನ್ನು ಸರಿಯಾಗಿ ತಿಳಿದಿರಬೇಕು ಅಷ್ಟೇ. ಸಾಫ್ಟ್​ವೇರ್​ಗಳು ಬಹಳಷ್ಟು ಕೆಲಸಗಳನ್ನು ಆಟೊಮೇಟ್ ಮಾಡಿದ್ದವು. ಆದರೆ, ಸಾಫ್ಟ್​ವೇರ್ ಅನ್ನು ಹೇಗೆ ಬಳಸಬೇಕೆಂದು ಎನ್ನುವ ಜ್ಞಾನ ಇರಬೇಕು. ಹಾಗೆಯೇ, ಎಐ ಟೂಲ್​ಗಳ ಬಳಕೆ ಬಗ್ಗೆ ಜ್ಞಾನ ಅಗತ್ಯ.

ಇದನ್ನು ಮನಗಂಡೇ ಆಂಥ್ರೋಪಿಕ್ ಸಂಸ್ಥೆ ಅಕಾಡೆಮಿ ತೆರೆದಿದೆ. ಆಂಥ್ರೋಪಿಕ್ ಅಕಾಡೆಮಿಯಲ್ಲಿ ಆನ್​ಲೈನ್​ನಲ್ಲಿ ಉಚಿತವಾಗಿ ಎಐ ಕೋರ್ಸ್​ಗಳನ್ನು ಆಫರ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು, ವೃತ್ತಿಪರರು, ಡೆವಲಪರ್​ಗಳು ಹೀಗೆ ಎಲ್ಲಾ ವರ್ಗದ ಜನರಿಗೆ ವಿನ್ಯಾಸ ಮಾಡಲಾದ ಕೋರ್ಸ್​ಗಳಿವೆ. ಕ್ಲಾಡ್ ಎಐ ಮಾಡಲ್​ಗಳನ್ನು ಪರಿಣಾಮಕಾರಿಯಾಗಿ ಬಳಸುವುದನ್ನು ಈ ಕೋರ್ಸ್​ಗಳಲ್ಲಿ ಕಲಿಸಲಾಗುತ್ತದೆ.

ಆಂಥ್ರೋಪಿಕ್ ಸಂಸ್ಥೆ ಹಲವು ಕೋರ್ಸ್​ಗಳನ್ನು ಆರಂಭಿಸಿದೆ. ಸ್ಕಿಲ್​ಜಾರ್ ಪ್ಲಾಟ್​ಫಾರ್ಮ್​ನಲ್ಲಿ ಇವು ಉಚಿತವಾಗಿ ಲಭ್ಯ ಇವೆ. ಕೋರ್ಸೆರಾ ಮೂಲಕ ಇನ್ನಷ್ಟು ಪ್ರೀಮಿಯಮ್ ಕಂಟೆಂಟ್ ಲಭ್ಯ ಇರುತ್ತದೆ. ಕೋರ್ಸ್ ಕಲಿತು ಮುಗಿಸಿದರೆ ಸರ್ಟಿಫಿಕೇಶನ್ ಕೂಡ ನೀಡಲಾಗುತ್ತದೆ.

ಇದನ್ನೂ ಓದಿ: ಶೇ. 60ರ ಗಡಿ ದಾಟಲಿದೆ ಡಿಎ, ಡಿಆರ್; ಜನವರಿಯ ತುಟ್ಟಿಭತ್ಯೆ ಎಷ್ಟು ಏರಬಹುದು?

ಎಐನಲ್ಲಿ ಏನೂ ಗೊತ್ತಿಲ್ಲದ ಬಿಗನರ್ಸ್​ನಿಂದ ಹಿಡಿದು, ಎಐ ಆ್ಯಪ್​ಗಳನ್ನು ತಯಾರಿಸುವ ವೃತ್ತಿಪರರವರೆಗೆ ಎಲ್ಲರಿಗೂ ಸೂಕ್ತವಾಗುವ ಎಐ ಸ್ಕಿಲ್​ಗಳನ್ನು ಈ ಕೋರ್ಸ್​ಗಳಲ್ಲಿ ಕಲಿಯಬಹುದು.

ಆಂಥ್ರೋಪಿಕ್ ಆಫರ್ ಮಾಡಿರುವ ಎಐ ಕೋರ್ಸ್​ಗಳಿವು…

  • ಕ್ಲಾಡ್ ಕೋಡ್ ಇನ್ ಆ್ಯಕ್ಷನ್
  • ಕ್ಲಾಡ್ 101
  • ಎಐ ಫ್ಲುಯೆನ್ಸಿ: ಫ್ರೇಮ್​ವರ್ಕ್ ಅಂಡ್ ಫೌಂಡೇಶನ್ಸ್
  • ಬ್ಯುಲ್ಡಿಂಗ್ ವಿತ್ ದಿ ಕ್ಲಾಡ್ ಎಪಿಐ
  • ಇಂಟ್ರೊಡಕ್ಷನ್ ಟು ಮಾಡಲ್ ಕಾಂಟೆಕ್ಸ್ಟ್ ಪ್ರೋಟೋಕಾಲ್
  • ಎಐ ಫ್ಲುಯೆನ್ಸಿ ಫಾರ್ ಎಜುಕೇಟರ್ಸ್
  • ಎಐ ಫ್ಲುಯೆನ್ಸಿ ಫಾರ್ ಸ್ಟುಡೆಂಟ್ಸ್
  • ಮಾಡಲ್ ಕಾಂಟೆಕ್ಸ್ಟ್ ಪ್ರೋಟೋಕಾಲ್: ಅಡ್ವಾನ್ಸ್ಡ್ ಟಾಪಿಕ್ಸ್
  • ಕ್ಲಾಡ್ ವಿತ್ ಅಮೇಜಾನ್ ಬೆಡ್​ರಾಕ್
  • ಕ್ಲಾಡ್ ವಿತ್ ಗೂಗಲ್ ಕ್ಲೌಡ್ಸ್ ವೆರ್ಟೆಕ್ಸ್ ಎಐ
  • ಟೀಚಿಂಗ್ ಎಐ ಫ್ಲುಯೆನ್ಸಿ
  • ಎಐ ಫ್ಲುಯೆನ್ಸಿ ಫಾರ್ ನಾನ್​ಪ್ರಾಫಿಟ್ಸ್
  • ಇನ್​ಟ್ರೊಡಕ್ಷನ್ ಟು ಏಜೆಂಟ್ ಸ್ಕಿಲ್ಸ್

ಇದನ್ನೂ ಓದಿ: 25,000 ರೂನಷ್ಟು ಕಡಿಮೆ ಸಂಬಳ ಇದ್ದರೆ ಹಣದ ನಿರ್ವಹಣೆ ಹೇಗಿರಬೇಕು? ಇಲ್ಲಿದೆ ಟಿಪ್ಸ್

ಕೋರ್ಸ್ ಆರಂಭಿಸುವುದು ಹೇಗೆ?

  • ಆಂಥ್ರೋಪಿಕ್ ಕೋರ್ಸ್​ಗಳು ಈ ಪ್ಲಾಟ್​ಫಾರ್ಮ್​ನಲ್ಲಿ ಲಭ್ಯ ಇವೆ: anthropic.skilljar.com/
  • ಇಲ್ಲಿ ನೊಂದಣಿ ಮಾಡಿಕೊಂಡು ಸೈನ್ ಇನ್ ಆಗಬೇಕು.
  • ಸೈನಪ್ ಆಗಲು ಇಮೇಲ್ ಇತ್ಯಾದಿಯನ್ನು ಕೇಳಲಾಗುತ್ತದೆ.
  • ಸೈನ್ ಆದ ಬಳಿಕ ನಿಮಗೆ ಬೇಕಾದ ಕೋರ್ಸ್ ಆಯ್ದುಕೊಂಡು ಕಲಿಯಲು ಆರಂಭಿಸಬಹುದು.

ಈ ಎಲ್ಲಾ ಕೋರ್ಸ್​ಗಳು ಉಚಿತವಾಗಿ ಲಭ್ಯ ಇರುತ್ತವೆ. ಪ್ರೀಮಿಯಮ್ ಸಬ್​ಸ್ರಿಪ್ಷನ್​ನ ಅಗತ್ಯ ಇರುವುದಿಲ್ಲ. ಕಲಿಕೆ ಮುಗಿದ ಬಳಿಕ ಡಿಜಿಟಲ್ ಸರ್ಟಿಫಿಕೇಟ್ ಸಿಗುತ್ತದೆ. ಇದನ್ನು ಲಿಂಕ್ಡ್​ಇನ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳಲ್ಲಿ ಹಂಚಿಕೊಳ್ಳಬಹುದು. ಈ ಮೂಲಕ ನಿಮಗೆ ಎಐ ಜ್ಞಾನವಿರುವುದನ್ನು ತೋರ್ಪಡಿಸಿಕೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆರತಕ್ಷತೆಯಲ್ಲೂ ವಿಶೇಷ ಉಡುಗೆ ಧರಿಸಿ ಕಂಗೊಳಿಸಿದ ರಶ್ಮಿಕಾ-ವಿಜಯ್: ವಿಶೇಷತೆಯೇನು? – Kannada News | Vijay Deverakonda and Rashmika Mandanna reception dress decode

ಸ್ಟಾರ್ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಇವರ ಮದುವೆ ಚಿತ್ರಗಳು ನ್ಯಾಷನಲ್ ನ್ಯೂಸ್ ಆಗಿದ್ದವು. ಮದುವೆಯ ದಿನ ಈ ಜೋಡಿ ಶಿವ-ಪಾರ್ವತಿಯ ರೂಪದಲ್ಲಿ ಕಂಗೊಳಿಸಿದ್ದರು. ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳ ಡಿಸೈನ್ ಅಂತೂ ಸಖತ್ ವೈರಲ್ ಆಗಿದ್ದವು. ರಿಸೆಪ್ಷನ್​​ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡಿ, ರಿಸೆಪ್ಷನ್​​ಗೆ ಆಧುನಿಕ ರೀತಿಯ ಉಡುಪು ಧರಿಸುತ್ತಾರೆ. ಆದರೆ ವಿಜಯ್ ಮತ್ತು ರಶ್ಮಿಕಾ ತಮ್ಮ ರಿಸೆಪ್ಷನ್​​ಗೆ ಸಹ ಸರಳವಾದ ಆದರೆ ಸಾಂಪ್ರದಾಯಿಕವಾದ ಉಡುಗೆಗಳನ್ನು ಧರಿಸಿ ಮಿಂಚಿದರು.

ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನಿನ್ನೆ ರಾತ್ರಿ ಈ ಜೋಡಿಯ ಅದ್ಧೂರಿ ರಿಸೆಪ್ಷನ್‌ ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಂಪ್ರದಾಯಿಕ ಉಡುಗೆಗಳನ್ನು ಈ ಜೋಡಿ ಧರಿಸಿದ್ದರು. ಮತ್ತೊಂದು ವಿಶೇಷವೆಂದರೆ ಇಬ್ಬರ ಉಡುಗೆಗಳು ಅವರವರ ರಾಜ್ಯವನ್ನು ಪ್ರತಿನಿಧಿಸುತ್ತಿತ್ತು. ನಟಿ ರಶ್ಮಿಕಾ, ಮೈಸೂರು ರೇಷ್ಮೆ ಸೀರೆ ಧರಿಸಿದ್ದರೆ ವಿಜಯ್ ದೇವರಕೊಂಡ ತೆಲಂಗಾಣದ ಸಾಂಪ್ರದಾಯಿಕ ಪಂಚೆ, ಶಲ್ಯ ಧರಿಸಿದ್ದರು.

ಆರತಕ್ಷತೆ ಕಾರ್ಯಕ್ರಮದಲ್ಲಿ ಗಾಢ ಕೆಂಪು ಬಣ್ಣದ (Deep Red) ಭವ್ಯವಾದ ಮೈಸೂರು ಸಿಲ್ಕ್ ಸೀರೆಯನ್ನು ರಶ್ಮಿಕಾ ಧರಿಸಿದ್ದರು. ಈ ಸೀರೆಯ ಬಾರ್ಡರ್‌ನಲ್ಲಿ ಚಿನ್ನದ ಜರಿ ಕೆಲಸವಿದ್ದು, ವಿಶೇಷವಾಗಿ ಮೈಸೂರು ರಾಜಮನೆತನದ ಲಾಂಛನವಾದ ಗಂಡಭೇರುಂಡ ಪಕ್ಷಿಯ ವಿನ್ಯಾಸವನ್ನು ಬೆಳ್ಳಿ ಮತ್ತು ಬಂಗಾರದ ಎಳೆಗಳಿಂದ ನೆಯ್ಯಲಾಗಿತ್ತು. ರಶ್ಮಿಕಾ ತಮ್ಮ ಕರ್ನಾಟಕದ ನಂಟನ್ನು ನೆನಪಿಸುವ ಉಡುಗೆ ಧರಿಸಿ ಕಂಗೊಳಿಸಿದರು.

ಇದನ್ನೂ ಓದಿ:ರಶ್ಮಿಕಾನಾ ವಿಜಯ್ ಎಷ್ಟು ಕೇರ್ ಮಾಡ್ತಾರೆ ನೋಡಿ

ಕೊರಳಿನಲ್ಲಿ ನಕ್ಷಿ ಕೆಲಸದ ನವಿಲು ವಿನ್ಯಾಸದ ಹಾರ, ಕೆಂಪು ಕೆಂಪು ಮಾಣಿಕ್ಯ ಮತ್ತು ಹಸಿರು ಪಚ್ಚೆ ಹರಳುಗಳು ಕೆತ್ತಿದ ಸಾಂಪ್ರದಾಯಿಕ ಆಭರಣಗಳನ್ನು ಧರಿಸಿದ್ದರು. ಹಣೆಯಲ್ಲಿ ಸಣ್ಣ ಬಿಂದಿ, ಮಲ್ಲಿಗೆ ಹೂ ಮುಡಿದ ಜಡೆ ರಶ್ಮಿಕಾ ಅವರ ಸೌಂದರ್ಯಕ್ಕೆ ಮತ್ತಷ್ಟು ಕಳೆ ನೀಡಿತ್ತು.

ಇನ್ನು ವಿಜಯ್ ದೇವರಕೊಂಡ ಅವರು ರಶ್ಮಿಕಾ ಅವರಿಗೆ ಪೂರಕವಾಗಿ ತಿಳಿ ಬಿಳಿ ಬಣ್ಣದ ರೇಷ್ಮೆ ಪಂಚೆ ಹಾಗೂ ವಿ-ನೆಕ್ ಶರ್ಟ್ ಧರಿಸಿದ್ದರು. ಅವರ ಅಂಗವಸ್ತ್ರದ ಮೇಲೆ ಗಜ-ಕೇಸರಿ ವಿನ್ಯಾಸವಿದ್ದು, ಇದು ಅವರ ರಾಯಲ್ ಲುಕ್‌ಗೆ ಸಾಕ್ಷಿಯಾಗಿತ್ತು. ಯಾವುದೇ ಅಬ್ಬರವಿಲ್ಲದ, ಅತ್ಯಂತ ಸರಳ ಹಾಗೂ ಸುಂದರ ಬಿಳಿ ಚಿನ್ನದ ಸರಗಳನ್ನು ಧರಿಸುವ ಮೂಲಕ ವಿಜಯ್ ಎಲ್ಲರ ದೃಷ್ಟಿ ಸೆಳೆದರು.

ಮಾರ್ಚ್ 4ರಂದು ನಡೆದ ಈ ಅದ್ಧೂರಿ ಔತಣಕೂಟದಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ನಟ-ನಟಿಯರು, ನಿರ್ದೇಶಕರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು. ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್, ತೆಲುಗು ಚಿತ್ರರಂಗದ ಗಣ್ಯರಾದ ಚಿರಂಜೀವಿ, ರಾಮ್ ಚರಣ್, ಅಲ್ಲು ಅರ್ಜುನ್ ಇನ್ನೂ ಹಲವಾರು ಮಂದಿ ಇವರ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಬಗ್ಗೆ ಹಿಂದಿ ಸಿನಿಮಾ ತಂಡ ಅಸಮಾಧಾನ ನಿರ್ಮಾಪಕರು ಹೇಳಿದ್ದೇನು? – Kannada News | Producer Ramesh Taurani upset with Toxic movie team regarding release date

ಟಾಕ್ಸಿಕ್’ (Toxic) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು, ಆದರೆ ಚಿತ್ರತಂಡವು ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಮಧ್ಯ ಪ್ರಾಚ್ಯದಲ್ಲಿ ಚಾಲ್ತಿಯಲ್ಲಿರುವ ಯುದ್ಧ ಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಜೂನ್ 4ಕ್ಕೆ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಆದರೆ ‘ಟಾಕ್ಸಿಕ್’ ಸಿನಿಮಾ ತಂಡ ಹೊಸ ಸಿನಿಮಾ ಘೋಷಣೆ ಮಾಡಿದ ಬಳಿಕ ಬಾಲಿವುಡ್ ಸಿನಿಮಾ ಒಂದು ‘ಟಾಕ್ಸಿಕ್’ ವಿರುದ್ಧ ಅಸಮಾಧಾನ ಹೊರಹಾಕಿದೆ. ವರುಣ್ ಧವನ್ ನಟಿಸುತ್ತಿರುವ ಹೊಸ ಸಿನಿಮಾದ ನಿರ್ಮಾಪಕರು ‘ಟಾಕ್ಸಿಕ್’ ತಂಡದ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ವರುಣ್ ಧವನ್ ನಟಿಸಿ ಅವರ ತಂದೆ ಡೇವಿಡ್ ಧವನ್ ನಿರ್ದೇಶನ ಮಾಡುತ್ತಿರುವ ‘ಹೇ ಜವಾನಿ ತೋ ಇಷ್ಕ್ ಹೋನಾ ಹೇ’ ಸಿನಿಮಾ ಸಹ ಜೂನ್ 04ರಂದೇ ಬಿಡುಗಡೆ ಆಗಲಿದೆ. ಸಿನಿಮಾವನ್ನು ನಿರ್ಮಾಪಕ ರಮೇಶ್ ತುರಾನಿ ನಿರ್ಮಾಣ ಮಾಡುತ್ತಿದ್ದು, ‘ಟಾಕ್ಸಿಕ್’ ಸಿನಿಮಾದ ಘೋಷಣೆಯಿಂದ ಅವರು ಅಸಮಾಧಾನಗೊಂಡಿದ್ದಾರೆ. ‘ಯಾವುದೇ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸುವ ಮುಂಚೆ ಅದೇ ದಿನಾಂಕವನ್ನು ಮುಂಚಿತವಾಗಿ ಬುಕ್ ಮಾಡಿಕೊಂಡಿರುವ ತಂಡದ ಅನುಮತಿ ಪಡೆದುಕೊಳ್ಳುವ ಪದ್ಧತಿ ಇದೆ. ಆದರೆ ‘ಟಾಕ್ಸಿಕ್’ ತಂಡದವರು ನಮ್ಮನ್ನು ಸಂಪರ್ಕಿಸದೇ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ:‘ಟಾಕ್ಸಿಕ್’ ರಿಲೀಸ್ ಮುಂದೂಡಿಕೆ: ಲಾಭ ಪಡೆಯಲು ಮುಂದಾದ ಪವನ್ ಕಲ್ಯಾಣ್

ಆದರೆ ಕೆವಿಎನ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಯೊಬ್ಬರು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ‘ನಾವು ಬಿಡುಗಡೆ ದಿನಾಂಕ ಘೋಷಿಸುವ ಮುಂಚೆಯೇ ‘ಹೇ ಜವಾನಿ ತೋ ಇಷ್ಕ್ ಹೋನಾ ಹೇ’ ಸಿನಿಮಾದ ನಿರ್ಮಾಪಕರನ್ನು ಭೇಟಿ ಆಗಿ ಮಾತನಾಡಿದ್ದೆವು. ತಮ್ಮ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಅನಿಲ್ ತಡಾನಿ ಅವರ ಮಧ್ಯಸ್ಥಿಕೆಯಲ್ಲಿ ನಾವು ನಿರ್ಮಾಪಕರೊಟ್ಟಿಗೆ ಮಾತನಾಡಿ, ನಮ್ಮ ಅನಿವಾರ್ಯತೆಯನ್ನು ಅವರಿಗೆ ತಿಳಿಸಿದೆವು’ ಎಂದಿದ್ದಾರೆ.

‘ಹೇ ಜವಾನಿ ತೋ ಇಷ್ಕ್ ಹೋನಾ ಹೇ’ ಸಿನಿಮಾ ಹಾಸ್ಯಮಯ ಪ್ರೇಮಕಥೆ ಹೊಂದಿರುವ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ವರುಣ್ ಧವನ್ ನಾಯಕ. ನಾಯಕಿಯರಾಗಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ಒಟ್ಟಿಗೆ ನಟಿಸುತ್ತಿದ್ದಾರೆ. ಜೂನ್ 04 ರಂದು ಸಿನಿಮಾ ಬಿಡುಗಡೆ ಆಗುವುದಾಗಿ ಈ ಹಿಂದೆಯೇ ಈ ಚಿತ್ರತಂಡ ಘೋಷಿಸಿತ್ತು. ಆದರೆ ಈಗ ‘ಟಾಕ್ಸಿಕ್’ ಅದೇ ದಿನದಂದು ಬಿಡುಗಡೆ ಆಗುತ್ತಿರುವುದರಿಂದ ಸಿನಿಮಾ ಬಿಡುಗಡೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಟ್ಕಾ ದಂಧೆ ಎಫೆಕ್ಟ್​​: ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆ ಪಿಎಸ್​ಐ ತಲೆದಂಡ – Kannada News | Guttal PSI Suspended for Dereliction of Duty After Deputy Speaker’s Matka Raid

ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ Image Credit source: Tv9 Kannada

ಹಾವೇರಿ, ಮಾರ್ಚ್​​ 05: ಗುತ್ತಲ ಪಟ್ಟಣದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಕಾರಣ ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಆದೇಶ ಮಾಡಿದ್ದಾರೆ. 3 ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಸ್ವತಃ ತಾವೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹೀಗಾಗಿ ಮಟ್ಕಾ ದಂಧೆಕೋರರನ್ನು ಹಿಡಿಯಲು ಶಾಸಕರೇ ಬರಬೇಕಾಯಿತು ಎಂದು ಪೊಲೀಸ್​ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪಿಎಸ್​ಐ ತಲೆದಂಡ ಮಾಡಿ ಐಜಿಪಿ ಆದೇಶಿಸಿದ್ದಾರೆ.

ಡೆಪ್ಯುಟಿ ಸ್ಪೀಕರ್​​ಗೆ ದೂರು ನೀಡಿದ್ದ ಮಹಿಳೆಯರು

ವಿವಿಧ ಕಾಮಗಾರಿಗಳ ಉದ್ಘಾಟನೆಗಾಗಿ ಹಾವೇರಿ ತಾಲೂಕಿನ ಗುತ್ತಲ ಪಟ್ಟಣಕ್ಕೆ ರುದ್ರಪ್ಪ ಲಮಾಣಿ ಭೇಟಿ ನೀಡಿದ್ದರು, ಈ ವೇಳೆ ಸ್ಥಳೀಯ ಮಹಿಳೆಯರು ಡೆಪ್ಯುಟಿ ಸ್ಪೀಕರ್​​ಗೆ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ದೂರು ನೀಡಿದ್ದರು. ಅವ್ಯಾಹತವಾಗಿ ದಂಧೆ ನಡೆಯುತ್ತಿದ್ದು, ಇವರಿಗೆ ಹೇಳುವವರು ಕೇಳುವವರು ಯಾರೂ ಇಲ್ಲದ ಸ್ಥಿತಿ ಉದ್ಭವಿಸಿರೋದಾಗಿ ಅಲವತ್ತುಕೊಂಡಿದ್ದರು. ಕೂಡಲೇ ಸ್ಥಳಕ್ಕೆ ರುದ್ರಪ್ಪ ಲಮಾಣಿ ಭೇಟಿ ನೀಡಿದಾಗ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿತ್ತು.

ಇದನ್ನೂ ಓದಿ: ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ

ಮಹಿಳೆಯರು ದೂರಿರುವಂತೆ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವುದನ್ನು ಕಂಡು ಗರಂ ಆದ ರುದ್ರಪ್ಪ ಲಮಾಣಿ, ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪಿಎಸ್​ಐಗೆ ಆರೋಪಿಯನ್ನು ಒಪ್ಪಿಸಿದ್ದ ಡೆಪ್ಯುಟಿ ಸ್ಪೀಕರ್​​, ಅಧಿಕಾರಿಗಳನ್ನು ತರಾಟೆಗೆ ಪಡೆದ ಪ್ರಸಂಗವೂ ನಡೆದಿತ್ತು. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕುವಂತೆ ತಹಶೀಲ್ದಾರ್​​ ಮತ್ತು ಪೊಲೀಸ್​​ ಸಿಬ್ಬಂದಿಗೆ ರುದ್ರಪ್ಪ ಲಮಾಣಿ ಸೂಚಿಸಿರೋದು ಸ್ಥಳೀಯರ ಮೆಚ್ಚುಗೆಗೆ ಕಾರಣವಾಗಿತ್ತು. ಪೊಲೀಸರು ಮಾಡಬೇಕಾದ ಕೆಲಸವನ್ನು ಜನಪ್ರತಿನಿಧಿಯೇ ಬಂದು ಮಾಡಬೇಕಾಯಿತು ಎಂಬ ಮಾತುಗಳು ಸಹ ಕೇಳಿಬಂದಿದ್ದವು. ಹೀಗಾಗಿ ಎಚ್ಚೆತ್ತ ಪೊಲೀಸ್​​ ಇಲಾಖೆ ಘಟನೆಗೆ ಸಂಬಂಧಿಸಿದಂತೆ ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ ಅವರನ್ನು ಸಸ್ಪೆಂಡ್​​ ಮಾಡಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:13 pm, Thu, 5 March 26

Source link

ರಶ್ಮಿಕಾ-ವಿಜಯ್ ಆರತಕ್ಷತೆಯಲ್ಲಿ ಭಾಗಿಯಾದ ಕನ್ನಡದ ಸೆಲೆಬ್ರಿಟಿಗಳು

Source link

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್ – Kannada News | Bannerghatta Zoo Fights Summer Heat: Ice candy and fruits fed to zoo animals

ಬೆಂಗಳೂರು, ಮಾರ್ಚ್​ 05: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ದಿನಕ್ಕೆ ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ತಂಪಾದ ವಾತಾವರಣ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಸಹ ಮರಗಿಡಗಳ ನೆರವಿನಿಂದ ತಟ್ಟಿದ ಬಿಸಿಲಿನಿಂದ ರಕ್ಷಣೆ, ಕುಳಿತು ವಿಶ್ರಾಂತಿ ಪಡೆಯಲು ಶೆಲ್ಟರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸಿಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ

ಆಂಧ್ರಪ್ರದೇಶ, ಮಾರ್ಚ್​ 05: ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವೀರವಳ್ಳಿಯ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕರು ಬೈದರೆಂದು ಅವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ, ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ. ಆದರೆ ಅವರ ಬೆಲೆ ಗೊತ್ತಿಲ್ಲದ್ದ ವಿದ್ಯಾರ್ಥಿಗಳು ಇಂಥಾ ತಪ್ಪು ಮಾಡಿಬಿಡುತ್ತಾರೆ.

ಇಂತಹ ನಡವಳಿಕೆಯು ಕಲಿಕಾ ವಾತಾವರಣವನ್ನು ಹಾನಿಗೊಳಿಸುವುದಲ್ಲದೆ ಸಮಾಜಕ್ಕೆ ಅಪಾಯಕಾರಿ ಸಂದೇಶವನ್ನು ರವಾನಿಸುತ್ತದೆ.ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕಾದ ಮತ್ತು ಉತ್ತಮ ಭವಿಷ್ಯವನ್ನು ನಿರ್ಮಿಸಬೇಕಾದ ವಯಸ್ಸಿನಲ್ಲಿ, ವ್ಯಸನ ಮತ್ತು ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ತೀವ್ರ ಕಳವಳಕಾರಿಯಾಗಿದೆ.ಶಿಕ್ಷಕರನ್ನು ಗೌರವಿಸುವುದು ಆರೋಗ್ಯಕರ ಶಿಕ್ಷಣ ವ್ಯವಸ್ಥೆಯ ಅಡಿಪಾಯವಾಗಿದೆ ಮತ್ತು ಅಂತಹ ಹಿಂಸಾಚಾರವನ್ನು ಎಂದಿಗೂ ಸಹಿಸಬಾರದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಇದ್ದಲ್ಲಿ ಫನ್ ಇದ್ದೇ ಇರುತ್ತೆ.ಈಗ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಶ್ರೀ ಅವರು ಕಾರ್ತಿಕ್​​ಗೆ ಚಾಲೆಂಜ್ ಮಾಡುತ್ತಾರೆ. ಈ ಚಾಲೆಂಜ್​​ನ ಕಾರ್ತಿಕ್ ಸ್ವೀಕಾರ ಮಾಡುತ್ತಾರೆ. ಅಷ್ಟಕ್ಕೂ ಏನು ಆ ಚಾಲೆಂಜ್? ‘ವಸಂತ ವಸಂತ..’ ಹಾಡಿಗೆ ಡ್ಯಾನ್ಸ್ ಮಾಡೋದು. ಹಾಗಾದರೆ ಈ ಚಾಲೆಂಜ್ ಅಲ್ಲಿ ಗೆದ್ದೋರು ಯಾರು? ಇದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ!

ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ

ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ, ತಮ್ಮ ಬಳಿ ಕಡಿಮೆ ಬೆಲೆಗೆ ಸುಮಾರು 4 ಕೆಜಿ ಗೋಲ್ಡ್ ಕಾಯಿನ್ ಇದೆ ಎಂದು ಹೇಳಿ ಆಸೆ ಹುಟ್ಟಿಸಿದ್ದ. ಮೊದಲಿಗೆ ಒಂದು ಕೆಜಿ ಚಿನ್ನಕ್ಕೆ 20 ಲಕ್ಷ ರೂ. ನೀಡುವಂತೆ ಹೇಳಿದ ಹಿನ್ನೆಲೆಯಲ್ಲಿ ವಿಶ್ವಪ್ರಸಾದ್ ಚಿನ್ನ ಖರೀದಿಸಲು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಆಂಧ್ರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವಿಶ್ವಪ್ರಸಾದ್, ನಂತರ ಯಲಹಂಕದಿಂದ 20 ಲಕ್ಷ ರೂ. ಹಣದೊಂದಿಗೆ ಟ್ಯಾಕ್ಸಿಯಲ್ಲಿ ದೇವನಹಳ್ಳಿ ಕಡೆಗೆ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು

ಈ ವೇಳೆ ರಾಷ್ಟ್ರೀಯ ಹೆದ್ದಾರಿ 47ರ ಬಳಿ ಇರುವ ವೆಂಕಟಗಿರಿಕೋಟೆ ಸಮೀಪದ ಖಾಸಗಿ ಲೇಔಟ್ ಬಳಿ ತಲುಪುತ್ತಿದ್ದಂತೆ ದುಷ್ಕರ್ಮಿಗಳ ಗ್ಯಾಂಗ್ ದಾಳಿ ನಡೆಸಿದೆ. ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದೊಣ್ಣೆಗಳಿಂದ ವಿಶ್ವಪ್ರಸಾದ್ ಹಾಗೂ ಅವನ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ವಿಶ್ವಪ್ರಸಾದ್ ಬಳಿ ಇದ್ದ ಹಣದ ಬ್ಯಾಗ್ ಹಾಗೂ ಮೊಬೈಲ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ – Kannada News | Koppal Hospital Faces Negligence Allegations Over Injured Womans Treatment Delay

ಕೊಪ್ಪಳ, ಮಾರ್ಚ್​ 05: ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಬಿದ್ದು ಗಾಯಗೊಂಡಿದ್ದ ಚಿಕ್ಕಬೊಮ್ಮನಾಳ ನಿವಾಸಿ ಹುಲಿಗೆಮ್ಮ ಎಂಬ ಮಹಿಳೆಯನ್ನು ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ವೈದ್ಯರು ಮಾನವೀಯತೆಯನ್ನು ಮರೆತು, ಅವರನ್ನು ಅಡ್ಮಿಟ್ ಮಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಗಾಯಾಳು ಹುಲಿಗೆಮ್ಮ ಚಿಕಿತ್ಸೆಗಾಗಿ ರಾತ್ರಿಯಿಡೀ ಸ್ಟ್ರೆಚರ್ ಮೇಲೆ ಮಲಗಿದ್ದರು. ಬೆನ್ನು ಮೂಳೆಗೆ ಪೆಟ್ಟಾಗಿ, ನರ ಬ್ಲಾಕ್ ಆಗಿದೆ ಎಂದು ವೈದ್ಯರು ಹೇಳಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದಿದ್ದಾರೆ. ಆದರೆ, ರಕ್ತದೊತ್ತಡ ಸಾಮಾನ್ಯ ಸ್ಥಿತಿಗೆ ಬರಲಿ, ಹಿಂದಿನ ಗಾಯ ವಾಸಿಯಾಗಲಿ, ಮೂತ್ರ ವಿಸರ್ಜನೆ ಸರಿಯಾಗಲಿ, ಊರಿಗೆ ಹೋಗಿ ಚಿಕಿತ್ಸೆ ಪಡೆದು ಬನ್ನಿ ಎಂದು ಹೇಳಿ ದಾಖಲಾತಿಯನ್ನು ನಿರಾಕರಿಸಿದ್ದಾರೆ. ಬೆಳಗ್ಗೆ 9 ಗಂಟೆಯಾದರೂ ಯಾವುದೇ ವೈದ್ಯರು ಅವರತ್ತ ತಿರುಗಿಯೂ ನೋಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Exit mobile version