ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ – Kannada News | Major accident was narrowly averted in ​​Jhabua watch viral video

ನವದೆಹಲಿ, ಮೇ 6: ಮಧ್ಯಪ್ರದೇಶದ ಝಬುವಾದಲ್ಲಿ ಕಾರು, ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬಿದ್ದಿವೆ. ಇದೇ ವೇಳೆ ಪಕ್ಕದಿಂದ ಬರುತ್ತಿದ್ದ ಕಾರು ಚಾಲಕ ಸಮಯಪ್ರಜ್ಞೆ ತೋರಿ ಬ್ರೇಕ್ ಹಾಕಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು (Accident) ಸ್ವಲ್ಪದರಲ್ಲೇ ತಪ್ಪಿದೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಚಾಲಕನಿಗೆ ವೇಗವಾಗಿ ಬಂದ ಬೈಕು ಡಿಕ್ಕಿ ಹೊಡೆಯಿತು. ಅದೃಷ್ಟವಶಾತ್, ಅದೇ ಸ್ಥಳದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಹಂತದಲ್ಲಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಇಬ್ಬರ ಪ್ರಾಣವೂ ಉಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ – Kannada News | Arjuna elephant memorial inaugurated By Forest Minister Eshwar Khandre In Hassan

ಹಾಸನ, (ಮೇ 06) : ದಸರಾ ಸಂದರ್ಭದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಮೆರೆಸುತ್ತಿದ್ದ ಹೆಮ್ಮೆಯ ಅರ್ಜುನ ಆನೆ ಸಾವನ್ನಪ್ಪಿದ್ದು, ಇದೀಗ ಅದರ ಸ್ಮಾರಕವನ್ನು (Arjuna elephant memorial) ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಂದು (ಮೇ 09) ಅರಣ್ಯ ಸಚಿವ ಈಶ್ವರ್ ಖಂಡ್ರೆ (Forest Minister Eshwar Khandre) ಲೋಕಾರ್ಪಣೆಗೊಳಿಸಿದರು. 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು. ಎರಡೂವರೆ. ವರ್ಷಗಳ ನಂತರ ಇಂದು ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ ಲೋಕಾರ್ಪಣೆಗೊಂಡಿದೆ. ಹಾಗಾದ್ರೆ, ಅರ್ಜುನ ಸ್ಮಾರ ಹೇಗಿದೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್: ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ – Kannada News | Health Department on Alert After Bowring Hospital Tragedy; Orders Inspection of Government Hospital Buildings

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್Image Credit source: tv9 kannada

ಬೆಂಗಳೂರು, ಮೇ 06: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತದ (Bowring Hospital Tragedy) ದುರಂತದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department), ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಮತ್ತು ಕಾಂಪೌಂಡ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಾಂಪೌಂಡ್ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು 15 ದಿನಗಳೊಳಗೆ ಪರಿಶೀಲಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಗಡುವು.
  • ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳಿಗೆ ಆದೇಶ.
  • ಶಿಥಿಲಗೊಂಡಿರುವ ಕಟ್ಟಡಗಳನ್ನು ಗುರುತಿಸಿ, ರೋಗಿಗಳನ್ನು ಕೂಡಲೇ ಸುರಕ್ಷಿತ ವಾರ್ಡ್‌ಗಳಿಗೆ ಸ್ಥಳಾಂತರಿಸಲು ಹಾಗೂ ಅಗತ್ಯವಿದ್ದಲ್ಲಿ ಕಟ್ಟಡ ತೆರವು ಅಥವಾ ದುರಸ್ತಿ ಮಾಡಲು ನಿರ್ದೇಶನ.

ಕಳೆದ ವಾರವಷ್ಟೇ ನಗರದಲ್ಲಿ ಸುರಿದ ಅಕಾಲಿಕ ಮಳೆಗೆ ಇಡೀ ಬೆಂಗಳೂರೇ ತತ್ತರಿಸಿ ಹೋಗಿತ್ತು. ಈ ವೇಳೆ ಶಿಥಿಲಾವಸ್ಥೆಯಲ್ಲಿದ್ದ ಬೌರಿಂಗ್ ಆಸ್ಪತ್ರೆಯ ಕಾಂಪೌಡ್ ಬಿದ್ದು, ಏಳು ಜನರ ದುರ್ಮರಣ ಸಂಭವಿಸಿತ್ತು. ಈ ಪ್ರಕರಣ ಬೆನ್ನಲ್ಲೇ ಇದೀಗ ಸರ್ಕಾರ ಅಲರ್ಟ್ ಆಗಿದೆ.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಸ್ಥಳ ಪರಿಶೀಲನೆ ಬಳಿಕ ಲೋಕಾಯುಕ್ತ ಶಾಕಿಂಗ್ ಹೇಳಿಕೆ

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಹೊಸ ಟಾಸ್ಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದ್ದಂತೆ ಸರ್ಕಾರಿ ಆಸ್ಪತ್ರೆಗಳ ಕೌಂಪೌಡ್ ಹಾಗೂ ಕಟ್ಟಡಗಳನ್ನು ಸಂಪೂರ್ಣವಾಗಿ ಪರಿಶೀಲನೆಗೆ ಸೂಚಿಸಿದ್ದಾರೆ. ಸರಕಾರಿ ಆಸ್ಪತ್ರೆಗಳ ಕಟ್ಟಡ, ಕಾಂಪೌಂಡ್​ಗಳನ್ನ ಪರಿಶೀಲಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಟಾಸ್ಕ್ ಕೊಟ್ಟಿದ್ದು, ಆಸ್ಪತ್ರೆಯ ಕಟ್ಟಡದ ಫುಟ್‌ಪಾತ್​​ಗಳಲ್ಲಿ ಬೀದಿ ಬದಿ ವ್ಯಾಪರಕ್ಕೂ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಬೀಳುವ ಹಂತದ ಕಟ್ಟಡಗಳು ಅಥವಾ ಕಾಂಪೌಂಡ್​ಗಳಿದ್ದರೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಲಾಗಿದೆ.

15 ದಿನದೊಳಗೆ ವರದಿ ನೀಡುವಂತೆ ಸೂಚನೆ

ರಾಜ್ಯದ ಅಡಿಯಲ್ಲಿರುವ ಅನೇಕ ಸರ್ಕಾರಿ ಆಸ್ಪತ್ರೆಗಳು 20 ರಿಂದ 30 ವರ್ಷಗಳಷ್ಟು ಹಳೆಯದಾಗಿವೆ. ಮುಂಬರುವ ಮಳೆಗಾಲಕ್ಕೂ ಮುನ್ನ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಡಿಹೆಚ್‌ಒ, ಟಿಹೆಚ್‌ಒ ಮತ್ತು ತಾಲೂಕು ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಯಾವುದೇ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದರೆ, ಕೂಡಲೇ ನಿಯಮಾನುಸಾರ ದುರಸ್ತಿ ಕಾರ್ಯ ಅಥವಾ ಕಟ್ಟಡ ತೆರವು ಪ್ರಕ್ರಿಯೆಯನ್ನು ಕೈಗೊಂಡು, ಈ ಬಗ್ಗೆ ವರದಿಯನ್ನು 15 ದಿನದೊಳಗೆ ಇಂಜಿನಿಯರಿಂಗ್ ವಿಭಾಗಕ್ಕೆ ಸಲ್ಲಿಸಬೇಕೆಂದು ಸಚಿವರು ಸೂಚಿಸಿದ್ದಾರೆ. ಇದಲ್ಲದೆ, ಆಸ್ಪತ್ರೆಯ ಆವರಣದ ಫುಟ್‌ಪಾತ್‌ಗಳಲ್ಲಿ ನಡೆಯುವ ಬೀದಿಬದಿ ವ್ಯಾಪಾರಕ್ಕೂ ಕಡಿವಾಣ ಹಾಕಲು ನಿರ್ದೇಶನ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಎಚ್ಚರ ವಹಿಸಲು ಇಲಾಖೆ ಸೂಚಿಸಿದ್ದು, ಈಗಾಗಲೇ ಮಳೆಯಿಂದಲೇ ಅನೇಕ ಆಸ್ಪತ್ರೆಗಳು ಹದಗೆಟ್ಟಿದ್ದು, ಅವುಗಳನ್ನ ಸರಿಪಡಿಸಲು ಈ ಬಗ್ಗೆ ವರದಿ ನೀಡುವಂತೆ ಆರೋಗ್ಯ ಹೇಳಿದೆ.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

ಬೌರಿಂಗ್ ಆಸ್ಪತ್ರೆ ದುರಂತದ ನಂತರ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಅತ್ಯಂತ ಮಹತ್ವದ್ದಾಗಿದೆ. ಮುಂಬರುವ ಮಳೆಗಾಲದಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ತಡೆಯಲು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಚಿವರು ನೀಡಿರುವ ಈ ಟಾಸ್ಕ್ ಅನ್ನು ಎಷ್ಟು ಶೀಘ್ರವಾಗಿ ಮತ್ತು ಸಮರ್ಥವಾಗಿ ಪೂರೈಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ? – Kannada News | Trisha Krishnan may contest election and became MLA

ತಮಿಳು ಚಿತ್ರರಂಗದ ಸ್ಟಾರ ನಟ ವಿಜಯ್ (Vijay) ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ವಿಜಯ್ ಅವರು ನಾಳೆ (ಮೇ 07) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು, ಇದೀಗ ತ್ರಿಷಾ ಸಹ ಶಾಸಕಿ ಆಗುವ ಆ ಬಳಿಕ ಸಚಿವೆ ಆಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ದಳಪತಿ ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಪೆರಂಬೂರು ಮತ್ತು ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಎರಡೂ ಕಡೆಯೂ ವಿಜೇತರಾಗಿದ್ದಾರೆ. ನಿಯಮದ ಅನುಸಾರ ಈಗ ವಿಜಯ್ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಬೇಕಿದ್ದು, ಅಲ್ಲಿ ಮರು ಚುನಾವಣೆ ನಡೆಯಲಿದೆ. ಮೂಲಗಳ ಪ್ರಕಾರ, ವಿಜಯ್ ಅವರು ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಂಡು, ಈಸ್ಟ್ ತಿರುಚ್ಚಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ತಮ್ಮ ಆಪ್ತೆ ತ್ರಿಷಾ ಕೃಷ್ಣನ್ ಅವರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:ದಳಪತಿ ವಿಜಯ್ ಗೆದ್ದಿದ್ದಕ್ಕೆ ದುನಿಯಾ ವಿಜಿ ಹೇಳಿದ್ದೇನು?

ಜ್ಯೋತಿಷಿ ಪ್ರಶಾಂತ್ ಕಿಣಿ ಸಹ ಈ ಬಗ್ಗೆ ಭವಿಷ್ಯ ನುಡಿದಿದ್ದು, ನಟಿ ತ್ರಿಷಾ ಚುನಾವಣೆಗೆ ಸ್ಪರ್ಧಿಸಿ ಯಶಸ್ಸು ಗಳಿಸುತ್ತಾರೆ ಎಂದಿದ್ದಾರೆ. ಒಂದೊಮ್ಮೆ ತ್ರಿಷಾ ಅವರನ್ನು ವಿಜಯ್, ಚುನಾವಣೆಗೆ ನಿಲ್ಲಿಸಿದ್ದೇ ಆದಲ್ಲಿ ಅವರು ಗೆಲ್ಲುವುದು ಪಕ್ಕಾ ಆಗಲಿದೆ. ಮಾತ್ರವಲ್ಲದೆ, ಅವರಿಗೆ ಸಚಿವ ಸ್ಥಾನ ದೊರೆತರೂ ಆಶ್ಚರ್ಯವಿಲ್ಲ.

ಕೆಲ ವಾರಗಳ ಹಿಂದೆ ತ್ರಿಷಾ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ತ್ರಿಷಾ ಅವರು ತಮಗೆ ತಮಿಳುನಾಡಿನ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಹೇಳಿದ್ದರು. ಈಗ ನೋಡಿದರೆ ಅವರ ಆಪ್ತರಾಗಿರುವ ವಿಜಯ್ ಸಿಎಂ ಆಗಲಿದ್ದು, ತ್ರಿಷಾ ಅವರ ಆಸೆಯೂ ಸಹ ಮುಂದಿನ ದಿನಗಳಲ್ಲಿ ನೆರವೇರುವ ಸಾಧ್ಯತೆ ಗೋಚರಿಸುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ – Kannada News | Speeker UT Khader Reacts On BJP Allegations about DN Jeevaraj oath Taking

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ ತಮ್ಮ ಮೇಲೆ ಬಿಜೆಪಿ ಮಾಡಿದ್ದ ಆರೋಪದ ಬಗ್ಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಆಯೋಗ ಪ್ರಮಾಣಪತ್ರ ನೀಡಿದ ಬಳಿಕ ಪ್ರಮಾಣವಚನ ಬೋಧಿಸಬೇಕು. ಹೀಗಾಗಿ ಆಯೋಗ ಪ್ರಮಾಣಪತ್ರ ನೀಡಿದ್ದರಿಂದ ಪ್ರಮಾಣವಚನ ಬೋಧಿಸಿದ್ದೇನೆ. ಒಂದು ವೇಳೆ ಕೋರ್ಟ್ ತಡೆಯಾಜ್ಞೆ ಕೊಟ್ಟರೆ ಡಿ.ಎನ್.ಜೀವರಾಜ್​ ಶಾಸಕ ಸ್ಥಾನ ರದ್ದಾಗಲಿದೆ. ನಂತರ ಟಿ.ಡಿ.ರಾಜೇಗೌಡರಿಗೆ ಪ್ರಮಾಣವಚನ ಬೋಧಿಸಬೇಕಾಗಬಹುದು. ಕಾನೂನು ಇರುವುದೇ ಹಾಗೆ, ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

Source link

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ – Kannada News | IPS officer Dr Ramachandra Rao suspension revoked By Karnataka Governmnet

ಡಾ. ಕೆ.ರಾಮಚಂದ್ರ ರಾವ್

ಬೆಂಗಳೂರು, (ಮೇ 6): ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ (dr ramachandra rao )ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.  ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿತ್ತು. ದೃಶ್ಯಗಳು ಎಡಿಟ್​​ ಆಗಿಲ್ಲ. ಅವು ಡೀಪ್‌ಫೇಕ್ ಮತ್ತು AI ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೂ ಸಹ ಅಮಾನತು ಹಿಂಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

  • ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ವಿಡಿಯೋ ಪ್ರಕರಣ
  • ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್
  • ಅಮಾನತು ಆದೇಶ ಹಿಂಪಡೆದು ತಕ್ಷಣದಿಂದಲೇ ಕೆ.ರಾಮಚಂದ್ರ ರಾವ್ ಸೇವೆಗೆ ನಿಯೋಜನೆ
  • ರಾಮಚಂದ್ರ ರಾವ್ ಗೆ ಡಿಜಿಪಿ (ಪೊಲೀಸ್ ಮಾನ್ಯುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿ ನಿಯೋಜಿಸಿದ ಸರ್ಕಾರ

ವಿಡಿಯೋ ವೈರಲ್ ಬೆನ್ನಲ್ಲೇ ಸಸ್ಪೆಂಡ್ ಆಗಿದ್ದ ರಾಮಚಂದ್ರ ರಾವ್

ಡಾ. ಕೆ.ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರ ಧರಿಸಿ, ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸರ್ಕಾರಿ ಕಚೇರಿಯಲ್ಲಿ, ಉನ್ನತ ದರ್ಜೆಯ ಅಧಿಕಾರಿಯೊಬ್ಬರು ಇಂತಹ ಕೃತ್ಯವೆಸಗಿರುವುದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಇಲಾಖೆಗೆ ಮುಜುಗರವನ್ನುಂಟು ಮಾಡಿತ್ತು. ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಜನವರಿ 19ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿತ್ತು. ಬಳಿಕ ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನ ಪ್ರಾರಂಭಿಸಲಾಗಿತ್ತು.

ಇದನ್ನೂ ಓದಿ: ರಾಮಚಂದ್ರ ರಾವ್ ಕೇಸ್​​​​: ವೈರಲ್​ ಆಗಿರುವ ವಿಡಿಯೋ ಅಸಲಿ ಎಂದ ತನಿಖಾ ತಂಡ

ವಿಡಿಯೋ ಬಗ್ಗೆ ರಾಮಚಂದ್ರ ರಾವ್​ ಅಂದು ಹೇಳಿದ್ದೇನು?

ಕಳೆದ ತಿಂಗಳು ಏಪ್ರಿಲ್​ 27 ರಂದು ರಾಮಚಂದ್ರರಾವ್​ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ಅಶ್ಲೀಲ ವಿಡಿಯೋ ಕೇಸ್​​ನಲ್ಲಿ ಸಿಲುಕಿರುವ ರಾಮಚಂದ್ರ ರಾವ್​ ಅವರು ವಿಡಿಯೋ ವೈರಲ್ ಆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದರು. ನನ್ನ ಸಸ್ಪೆನ್ಶನ್ ಬಗ್ಗೆ ಮಾತಾಡಿದ್ದೇನೆ. ತನಿಖೆ ನಡೆಯುತ್ತಿದೆ ಅದರ ಬಗ್ಗೆ ಮಾತಾಡಲ್ಲ, ನನ್ನ ಮೇಲೆ ಯಾವುದೂ ಕೇಸ್ ಇಲ್ಲ, ಈಗಲೇ ಸಾಕಷ್ಟು ಸಫರ್ ಆಗಿದ್ದೇನೆ ಬೇಡ ಪ್ಲೀಸ್​ ಎಂದಿದ್ದರು.

ವಿಡಿಯೋಗಳು ವೈರಲ್ ಆಗಿ ಪ್ರಕರಣ ಗಂಭೀರವಾಗಿದ್ದರೂ ಸಹ ರಾಜ್ಯ ಸರ್ಕಾರ ಇದೀಗ ಏಕಾಏಕಿ ಅವರ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಅಲ್ಲದೇ ಸರ್ಕಾರದ ಈ ನಡೆದ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್​ಗೆ ಹೊಸ ತಲೆನೋವು; ಸರ್ಕಾರ ರಚನೆಗೆ ಒಂದಾಗುತ್ತಾರಾ ಬದ್ಧ ವೈರಿಗಳಾದ ಡಿಎಂಕೆ- ಎಐಎಡಿಎಂಕೆ? – Kannada News | DMK and AIADMK Tie Up Rumours spark buzz in Tamil Nadu to form government

ಚೆನ್ನೈ, ಮೇ 6: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಾಳೆ ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಸಮಾರಂಭವನ್ನು ಮುಂದೂಡಿದ್ದರು. ಬಹುಮತ ಸಾಬೀತುಪಡಿಸುವವರೆಗೂ ಸರ್ಕಾರ ರಚನೆಗೆ ಅನುಮತಿ ನೀಡುವುದಿಲ್ಲ ಎಂದು ವಿಜಯ್ ಅವರನ್ನು ವಾಪಾಸ್ ಕಳುಹಿಸಿದ್ದರು. ಇದೆಲ್ಲದರ ನಡುವೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದೆಯಾ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಡಿಎಂಕೆ ಮತ್ತು ಎಐಎಡಿಎಂಕೆ ನಾಯಕರು ತೆರೆಮರೆಯಲ್ಲಿ ರಹಸ್ಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಒಟ್ಟಾಗಿ ಸರ್ಕಾರ ರಚಿಸಲು ಮಾತುಕತೆ ಆರಂಭಿಸಿವೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ಈ ಮಾತುಕತೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್

ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಮಿಳುನಾಡಿನಲ್ಲಿ ಮಿತ್ರಪಕ್ಷಗಳನ್ನು ಭದ್ರಪಡಿಸಿಕೊಳ್ಳಲು ಮತ್ತು ಸರ್ಕಾರ ರಚಿಸಲು ಹರಸಾಹಸ ಪಡುತ್ತಿದೆ. ಇದರ ನಡುವೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತನ್ನ ದೀರ್ಘಕಾಲದ ಪ್ರತಿಸ್ಪರ್ಧಿ ಎಐಎಡಿಎಂಕೆ ಜೊತೆ ರಹಸ್ಯವಾಗಿ ಮಾತುಕತೆಗಳನ್ನು ಪ್ರಾರಂಭಿಸಿದೆ ಎನ್ನಲಾಗುತ್ತಿದೆ.

ಯಾವುದೇ ಪ್ರಗತಿಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಚರ್ಚೆಗಳು ನಡೆದಿವೆ ಎಂದು ಎಐಎಡಿಎಂಕೆ ಮೂಲಗಳು ದೃಢಪಡಿಸಿವೆ. ಏಪ್ರಿಲ್ 23ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನಗಳನ್ನು ಪಡೆದರೆ, ಎಐಎಡಿಎಂಕೆ 47 ಸ್ಥಾನಗಳನ್ನು ಗಳಿಸಿತು. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿದರೂ ಅವರ ಒಟ್ಟು ಶಾಸಕರ ಸಂಖ್ಯೆ 106 ಆಗುತ್ತದೆ. ಬಹುಮತ ಪಡೆಯಲು ಇನ್ನೂ ಸಾಕಷ್ಟು ಶಾಸಕರ ಅಗತ್ಯವಿರುತ್ತದೆ. ಬಹುಮತಕ್ಕೆ ಬೇಕಾಗುವ ಸಂಖ್ಯೆ 118. ಹೀಗಾಗಿ, ಬೇರೆ ಪಕ್ಷಗಳ ಬೆಂಬಲದ ಅಗತ್ಯವಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs PBKS: ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ – Kannada News | Abhishek Sharma Smashes 300 T20 Sixes in India, Joins Elite Club in IPL 2026

ಐಪಿಎಲ್ 2026 ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದರಲ್ಲಿ 4 ಸಿಕ್ಸರ್ ಮತ್ತು 2 ಬೌಂಡರಿಗಳು ಸೇರಿದ್ದವು. ಈ ನಾಲ್ಕು ಸಿಕ್ಸರ್​ಗಳ ಮೂಲಕ ಅಭಿಷೇಕ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಐದನೇ ಕ್ರಿಕೆಟಿಗ ಎಂಬ ಸಾಧನೆಯನ್ನು ಮಾಡಿದರು.

ಅಭಿಷೇಕ್​ಗೂ ಮೊದಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಭಾರತದಲ್ಲಿ 320 ಟಿ20 ಪಂದ್ಯಗಳಲ್ಲಿ 388 ಸಿಕ್ಸರ್ ಬಾರಿಸಿರುವ ರೋಹಿತ್ ಎಲೈಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಭಿಷೇಕ್ ಭಾರತದಲ್ಲಿ ಕೇವಲ 153 ಪಂದ್ಯಗಳಲ್ಲಿ ಟಿ20ಯಲ್ಲಿ 300 ಸಿಕ್ಸರ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

Source link

ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ – Kannada News | Yash shared his bad experience with a star actor

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ! – Kannada News | Haveri: Byadagi Chilli Farmer Cheated, Produce Worth 50 Lakh Sold from Cold Storage

ಬ್ಯಾಡಗಿ ಮೆಣಸಿನಕಾಯಿImage Credit source: tv9 kannada

ಹಾವೇರಿ, ಮೇ 06: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ (Byadagi Chilli) ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ (Farmer) ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ ಮಾಡಲು ಬಂದ ರೈತನಿಗೆ, ಅತ್ತ ಮೆಣಸಿನಕಾಯಿಯೂ ಇಲ್ಲ, ಹಣವೂ ಇಲ್ಲದಂತಾಗಿದೆ. ದಲ್ಲಾಳಿ ನಮ್ಮ ಗಮನಕ್ಕೆ ಬಾರದೆ ಮೆಣಸಿನಕಾಯಿಯನ್ನು ಮಾರಾಟ ಮಾಡಿದ್ದಾನೆ ಎಂದು ರೈತ ಕುಟುಂಬ ಆರೋಪಿಸಿದೆ.

ಮುಖ್ಯಾಂಶಗಳು

  • 2023ರಲ್ಲಿ ದಾಸ್ತಾನು ಮಾಡಿದ್ದ 363 ಚೀಲ ಮೆಣಸಿನಕಾಯಿ ನಾಪತ್ತೆ
  • ಅಂದಾಜು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿ ಮಾರಾಟ ಮಾಡಿ ವಂಚನೆ ಆರೋಪ
  • ಸಂತ್ರಸ್ತ ರೈತನಿಂದ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಡೆದಿದ್ದೇನು?

ರೈತ ಮಹಾದೇವಪ್ಪ ಅವರು 2023ರಲ್ಲಿ ದರ ಕಡಿಮೆ ಇದ್ದಿದ್ದರಿಂದ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟು ಹೋಗಿದ್ದರು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಬಂದಿದ್ದರಿಂದ, ಅದನ್ನು ಮಾರಾಟ ಮಾಡಲು ಬಂದಾಗ ಮೆಣಸಿನಕಾಯಿ ಚೀಲಗಳು ನಾಪತ್ತೆಯಾಗಿರುವುದು ಕಂಡು ಶಾಕ್​​ ಆಗಿದ್ದಾರೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ತಿಪ್ಪೇಸ್ವಾಮಿ ಮೆಣಸಿನಕಾಯಿ ಏಜೆನ್ಸಿಯವರು ರೈತನಿಗೆ ಆರಂಭದಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ನೆಪದಲ್ಲಿ ಸ್ವಲ್ಪ ಹಣ ನೀಡಿದ್ದರೂ, ನಂತರದ ದಿನಗಳಲ್ಲಿ ರೈತನ ಹೆಸರಿನಲ್ಲಿರುವ ಸುಮಾರು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿಯನ್ನು ರೈತನ ಅನುಮತಿಯಿಲ್ಲದೆ ಮಾರಾಟ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಮೂಲ ದಾಖಲೆಗಳನ್ನ ತೆಗೆದುಕೊಂಡು ನಮಗೆ ಮೋಸ ಮಾಡಿದ್ದಾರೆ. ನ್ಯಾಯ ಬೇಕು ಅಂತಾ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ರೈತ ಮಹಾದೇವಪ್ಪ ಪ್ರಕರಣ ದಾಖಲಿಸಿದ್ದಾರೆ.

ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ, ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ರೈತ ನೀಡಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣವು ತನಿಖಾ ಹಂತದಲ್ಲಿದ್ದು, ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯ ರೈತನಿಗೆ ನ್ಯಾಯ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:33 pm, Wed, 6 May 26

Source link

Exit mobile version