Headlines

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ – Kannada News | 28 Year Old Woman gangraped infront of lover Made To Transfer Rs 10000 In Assam

ಗುವಾಹಟಿ, ಫೆಬ್ರವರಿ 25: ಅಸ್ಸಾಂನ (Assam) ಸಿಲ್ಚಾರ್ ಬೈಪಾಸ್‌ನಲ್ಲಿ ರಾತ್ರಿ ತನ್ನ ಭಾವಿ ಪತಿಯೊಂದಿಗೆ ಲಾಂಗ್ ಡ್ರೈವ್ ಹೋಗಿದ್ದ 28 ವರ್ಷದ ಯುವತಿಗೆ ಆ ರಾತ್ರಿ ದುಃಸ್ವಪ್ನವಾಗಿ ಮಾರ್ಪಟ್ಟಿತು. ಆಕೆಯ ಜೊತೆ ನಿಶ್ಚಿತಾರ್ಥವಾದ ಹುಡುಗನ ಮುಂದೆ ಯುವಕರ ಗುಂಪೊಂದು ಆಕೆಯನ್ನು ಕಾರಿನಿಂದ ಹೊರಗೆ ಎಳೆದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ, 10,000 ರೂ. ಹಣ ನೀಡುವಂತೆ ಆಕೆಯನ್ನು ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಯ…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು – Kannada News | Child Rights Commission Files Complaint Against Godman Mallikarjuna Mutya After Viral Video

ಮಲ್ಲಿಕಾರ್ಜುನ ಮುತ್ಯಾImage Credit source: Tv9 Kannada ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಪೊಲೀಸ್​​…

Read More

ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ – Kannada News | Israel PM Netanyahu warmly welcomes PM Narendra Modi in Tel Aviv

ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್​ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ…

Read More

ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ – Kannada News | Pocso case: Singer music mailari first Reaction after Released From Jail

ಬಾಗಲಕೋಟೆ, (ಫೆಬ್ರವರಿ 25): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case)  ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ಗೆ (Singer music mailari )  ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿ ಇಂದು (ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ…

Read More

ವಿದ್ಯುತ್​ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್​​​​​​ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್​​​ ಆಗ್ತೀರಾ – Kannada News | Bidar BRIMS Hospital Owes GESCOM 1.70 Cr Electricity Bill: Public Outcry

ಬೀದರ್​​, ಫೆಬ್ರವರಿ 25: ಜನಸಾಮಾನ್ಯರು ಕರೆಂಟ್ ಬಿಲ್ (Current Bill) ಕಟ್ಟುವುದು ತಡವಾದರೆ ಕನೆಕ್ಷನ್ ಕಟ್ ಮಾಡಲಾಗುತ್ತದೆ. ಆದರೆ ಬೀದರ್​ನ ಬ್ರಿಮ್ಸ್ ಆಸ್ಪತ್ರೆ 1.70 ಕೋಟಿ ರೂ ಜೆಸ್ಕಾಂಗೆ ಹಣ ಕಟ್ಟಿಲ್ಲ. ಹಣ ಕಟ್ಟಿ ಅಂತಾ ನೋಟಿಸ್ ಮೇಲೆ ನೋಟಿಸ್ ಕೊಟ್ಟರು ಬ್ರಿಮ್ಸ್ ಆಡಳಿತ ಮಂಡಳಿ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಜೆಸ್ಕಾಂ ಇಲಾಖೆಯ ಈ ತಾರತಮ್ಯ ನೀತಿಗೆ ಗಡೀ ಜಿಲ್ಲೆಯ ಬೀದರ್​ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. 1 ಕೋಟಿ 70 ಲಕ್ಷ 80 ಸಾವಿರ ರೂ ಬಿಲ್…

Read More

ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ – Kannada News | Rashmika Mandanna Vijay Deverakonda haldi ceremony begins Ashika Ranganath shares photo

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳನ್ನು ಮಾಡಲಾಗಿದೆ. ಬುಧವಾರ (ಫೆಬ್ರವರಿ 25) ಹಳದಿ ಶಾಸ್ತ್ರ ಮಾಡಲಾಗುತ್ತಿದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ (Rashmika Mandanna), ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ವಿರೋಶ್ ಮದುವೆ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಕೆಲವೇ…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಕರ್ಕಾಟಕ ರಾಶಿ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Predictions for Cancer Zodiac Sign by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ಕರ್ಕಾಟಕ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಚಂದ್ರಗ್ರಹಣವು ಕರ್ಕಾಟಕ ರಾಶಿಯವರಿಗೆ ಎರಡನೇ ಮನೆಯಲ್ಲಿ, ಅಂದರೆ ಧನ, ವಾಕ್ ಮತ್ತು ಕುಟುಂಬ ಸ್ಥಾನದಲ್ಲಿ ಪ್ರಭಾವ ಬೀರಲಿದೆ. ಪುನರ್ವಸು, ಪುಷ್ಯ ಮತ್ತು ಆಶ್ಲೇಷ ನಕ್ಷತ್ರದಡಿಯಲ್ಲಿ ಬರುವ ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯದಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಎಚ್ಚರ ವಹಿಸುವುದು ಅಗತ್ಯ…

Read More

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ – Kannada News | Ranji Final Day 2: Jammu and Kashmir Dominates Karnataka with 527/6 in Hubballi

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ (Ranji Trophy Final) ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ (Karnataka vs J&K) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 527 ರನ್ ಕಲೆಹಾಕಿದೆ. ಆದಾಗ್ಯೂ ಮಂದ ಬೆಳಕಿನಿಂದಾಗಿ ಎರಡನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಆಟವನ್ನು ನಿಲ್ಲಿಸಿದಾಗ ಜೆಕೆ ತಂಡದ ಪರ ಸಾಹಿಲ್ ಲೋತ್ರಾ ಅಜೇಯ 57 ರನ್…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

ಹೊರದೇಶಕ್ಕೆ ಹೋದ ವಿದ್ಯಾರ್ಥಿಗಳು ಹೆಚ್ಚು ಖಿನ್ನತೆಗೆ ಒಳಗಾಗುವುದು ಯಾಕೆ? ಇದರಿಂದ ಹೊರಬರುವುದು ಹೇಗೆ? ಇಲ್ಲಿದೆ ಡಾ. ಕೃತಿಶ್ರೀ ಸಲಹೆ – Kannada News | Mental Health Tips for Overseas Students by Dr. Kritishree

Mental Health Tips for Overseas Students by Dr. Kritishree ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು ನಮ್ಮ ಮನಸ್ಸಿನಲ್ಲಿ ಸಾವಿರ ಪ್ರಶ್ನೆಗಳನ್ನು ಹುಟ್ಟುಹಾಕುವುದು ಸಹಜ. ಎಷ್ಟೇ ಮೇಧಾವಿಯಾಗಿದ್ದರೂ ತನ್ನದಲ್ಲದ, ತನ್ನವರಿಲ್ಲದ ಪ್ರದೇಶದಲ್ಲಿ ವಾಸ ಮಾಡುವುದು ಸುಲಭವಲ್ಲ. ಆದರೆ ಕನಸನ್ನು ನನಸಾಗಿಸಿಕೊಳ್ಳುವ ಹಂಬಲ ಎಷ್ಟೇ ಕಷ್ಟವಿದ್ದರೂ ನಿಭಾಯಿಸುವ ಹಂತಕ್ಕೆ ಹೋಗಿಬಿಡುತ್ತವೆ. ಆದರೆ ಎಲ್ಲರಿಗೂ ಹೀಗಾಗುವುದಿಲ್ಲ. ಅದರಲ್ಲಿಯೂ ಸಾಕೇತ್ ಶ್ರೀನಿವಾಸಯ್ಯ ಸಾವು ವಿದೇಶಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹಾಗಾಗಿ ಬೇರೆ ಬೇರೆ…

Read More