ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್? – Kannada News | Nora Fatehi Achraf Hakimi dating rumors, Who is this Achrag Hakimi

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಬಂದು ಮೊರಾಕೊ ರಾಷ್ಟ್ರೀಯ ಫುಟ್ಬಾಲ್ ತಂಡ ಬೆಂಬಲಿಸಿದಾಗ ಅಶ್ರಫ್ ಮತ್ತು ನೋರಾ ಅವರ ಸಂಬಂಧದ ಬಗ್ಗೆ ಚರ್ಚೆ ನಡೆದವು. ಹಾಗಾದರೆ ಅಶ್ರಫ್ ನಿಜವಾಗಿಯೂ ಯಾರು? ಅತ್ಯಂತ ಆಘಾತಕಾರಿ ವಿಷಯವೆಂದರೆ ಅಶ್ರಫ್ ವಿರುದ್ಧ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ. ಅವರ ಖಾಸಗಿ ಜೀವನವೂ ವಿವಾದಾತ್ಮಕವಾಗಿಯೇ ಉಳಿದಿದೆ.

ಅಶ್ರಫ್ ಹಕಿಮಿ ಅವರ ಪೋಷಕರು ಮೊರೊಕನ್ ಅರಬ್ ಮೂಲದವರು. ಅದಕ್ಕಾಗಿಯೇ ಹಕಿಮಿ ಕೂಡ ಮೊರೊಕನ್ ತಂಡವನ್ನು ಆಯ್ಕೆ ಮಾಡಿಕೊಂಡರು. ಅವರಿಗೆ ಪ್ರಸ್ತುತ 27 ವರ್ಷ. ಅವರು ಫುಟ್ಬಾಲ್ ತಂಡದ ನಾಯಕ. ಅಶ್ರಫ್ 2020ರಲ್ಲಿ ಸ್ಪ್ಯಾನಿಷ್ ನಟಿ ಹಿಬಾ ಅಬೌಕ್ ಅವರನ್ನು ವಿವಾಹವಾದರು. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ. ಆದರೆ ಅಶ್ರಫ್ ಮತ್ತು ಹಿಬಾ ಅವರ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಅಂತಿಮವಾಗಿ, ಇಬ್ಬರೂ ವಿಚ್ಛೇದನ ಪಡೆಯಲು ನಿರ್ಧರಿಸಿದರು. 2023ರಲ್ಲಿ, ಅಶ್ರಫ್ ಮತ್ತು ಹಿಬಾ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದರು. ಆಘಾತಕಾರಿ ಸತ್ಯವೆಂದರೆ ಅಶ್ರಫ್ ಯಾಚಿ ಕೂಡ ಅತ್ಯಾಚಾರದ ಆರೋಪ ಎದುರಿಸುತ್ತಿದ್ದಾರೆ . ಈ ಪ್ರಕರಣವು 2023ರಲ್ಲಿ ಪ್ಯಾರಿಸ್‌ನಲ್ಲಿ ನಡೆದಿದ್ದು ಪ್ರಸ್ತುತ, ಈ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆ ಮಾಡುವ ಉದ್ದೇಶದಿಂದ ಅವರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಅಶ್ರಫ್ ಹಕಿಮಿ ಹೇಳಿಕೊಂಡಿದ್ದಾರೆ. ಅವರು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಪ್ರಕರಣದ ತನಿಖೆ ಇನ್ನೂ ಮುಂದುವರೆದಿದೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ

ನೋರಾ ಫತೇಹಿ ಅವರ ಹೆಸರು ಈ ಹಿಂದೆ ಹಲವು ಸೆಲೆಬ್ರಿಟಿಗಳೊಂದಿಗೆ ಹಲವು ಬಾರಿ ತಳುಕು ಹಾಕಿಕೊಂಡಿತ್ತು. ಆದರೆ ಈಗ ನಟಿಯ ಹೆಸರು ಅಶ್ರಫ್ ಹಕಿಮಿ ಅವರೊಂದಿಗೆ ತಳುಕು ಹಾಕಿಕೊಂಡಿದ್ದು, ಚರ್ಚೆಗೆ ಕಾರಣವಾಗಿದೆ. ಪ್ರಸ್ತುತ, ಸಾಮಾಜಿಕ ಮಾಧ್ಯಮ ಮತ್ತು ಅಭಿಮಾನಿಗಳು ನೋರಾ ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚಿಸುತ್ತಿದ್ದಾರೆ.

ನೋರಾ ತಮ್ಮ ಖಾಸಗಿ ಜೀವನದ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ನಟಿ ಸಾಮಾಜಿಕ ಮಾಧ್ಯಮದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ನೋರಾ ಅವರ ಅಭಿಮಾನಿಗಳ ಸಂಖ್ಯೆಯೂ ತುಂಬಾ ದೊಡ್ಡದಾಗಿದೆ. ನಟಿ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – Kannada News | Indian Railways New Recruitment: 20,000 Backlog and 33,000 ALP/Group D Posts!

ಭಾರತೀಯ ರೈಲ್ವೆಯಲ್ಲಿ ಮೀಸಲು ವರ್ಗದ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ವರದಿ ಹೊರಬಿದ್ದಿದೆ. ಕಳೆದ ವರ್ಷ ಸಾವಿರಾರು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ನೇಮಕಾತಿ ಪ್ರಕ್ರಿಯೆ ಅಪೂರ್ಣವಾಗಿತ್ತು. ಈ ಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಈಗ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಾವಿರಾರು ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಲಾಗಿದ್ದು, ಇದು ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಮಹತ್ವದ ಅವಕಾಶವನ್ನು ಒದಗಿಸುತ್ತಿದೆ.

ರೈಲ್ವೆ ಬಿಡುಗಡೆ ಮಾಡಿದ ಬ್ಯಾಕ್‌ಲಾಗ್ ವರದಿಯ ಪ್ರಕಾರ, 2025 ರಲ್ಲಿ ಒಟ್ಟು 38,005 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು, ಆದರೆ ಈ ಹುದ್ದೆಗಳಲ್ಲಿ ಕೇವಲ 18,121 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇದರರ್ಥ 19,884 ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳಿಗೆ ನೇಮಕಾತಿ ಇಲ್ಲದಿರುವುದಕ್ಕೆ ಪ್ರಾಥಮಿಕ ಕಾರಣ ಅರ್ಹ ಅಭ್ಯರ್ಥಿಗಳ ಕೊರತೆ. ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮೀಸಲು ವಿಭಾಗದಲ್ಲಿ ಹೆಚ್ಚಿನ ಹುದ್ದೆಗಳು ಖಾಲಿ:

ವರದಿಯ ಪ್ರಕಾರ, ಅತಿ ಹೆಚ್ಚು ಖಾಲಿ ಹುದ್ದೆಗಳು, 6,640, ಪರಿಶಿಷ್ಟ ಜಾತಿ (SC) ವರ್ಗಕ್ಕೆ ಸೇರಿವೆ. ಇದಲ್ಲದೆ, ಇತರ ಹಿಂದುಳಿದ ವರ್ಗಗಳಿಗೆ (OBC) 6,459 ಮತ್ತು ಪರಿಶಿಷ್ಟ ಪಂಗಡಗಳಿಗೆ (ST) 5,730 ಹುದ್ದೆಗಳು ಭರ್ತಿಯಾಗದೆ ಉಳಿದಿವೆ. ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಾಗಿರುವ ಹಲವಾರು ಹುದ್ದೆಗಳು ಸಹ ಖಾಲಿಯಾಗಿವೆ. ಮುಂಬರುವ ನೇಮಕಾತಿಗಳಲ್ಲಿ ಈ ಬ್ಯಾಕ್‌ಲಾಗ್ ಹುದ್ದೆಗಳಿಗೆ ಆದ್ಯತೆ ನೀಡಲಾಗುವುದು ಎಂದು ರೈಲ್ವೆ ಭರವಸೆ ನೀಡಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಸಹಾಯಕ ಲೋಕೋ ಪೈಲಟ್ ಹುದ್ದೆಗಳ 11,127 ಹುದ್ದೆಗಳಿಗೆ ನೇಮಕಾತಿ:

ರೈಲ್ವೆ ಸಚಿವಾಲಯವು 2026 ರಲ್ಲಿ 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ವಲಯವಾರು ಖಾಲಿ ಹುದ್ದೆಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಉತ್ತರ ಮಧ್ಯ ರೈಲ್ವೆ 457 ಹುದ್ದೆಗಳನ್ನು ಭರ್ತಿ ಮಾಡಲಿದೆ, ಆದರೆ ಮುಜಫರ್ಪುರ, ಪಾಟ್ನಾ ಮತ್ತು ರಾಂಚಿ ಪ್ರದೇಶಗಳು ಸರಿಸುಮಾರು 700 ಹುದ್ದೆಗಳನ್ನು ಭರ್ತಿ ಮಾಡಲಿವೆ. ಪೂರ್ವ ಕರಾವಳಿ ರೈಲ್ವೆ ಅತಿ ಹೆಚ್ಚು 1,625 ಹುದ್ದೆಗಳನ್ನು ಭರ್ತಿ ಮಾಡಲಿದೆ ಮತ್ತು ಈಶಾನ್ಯ ರೈಲ್ವೆ ಕನಿಷ್ಠ 105 ಹುದ್ದೆಗಳನ್ನು ಭರ್ತಿ ಮಾಡಲಿದೆ. ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಜವಾಬ್ದಾರಿಯನ್ನು ಒಂಬತ್ತು ರೈಲ್ವೆ ನೇಮಕಾತಿ ಮಂಡಳಿಗಳಿಗೆ ವಹಿಸಲಾಗಿದೆ.

21,997 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ:

ರೈಲ್ವೆಯಲ್ಲಿ 21,997 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಜನವರಿ 31ರಿಂದ ಪ್ರಾರಂಭವಾಗಿದ್ದು, 10 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾರ್ಚ್ 2, 2026 ರವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4 ಆಗಿದ್ದು, ಅರ್ಜಿಯಲ್ಲಿ ತಿದ್ದುಪಡಿಗಳನ್ನು ಮಾಡಲು ಅವಕಾಶ ಮಾರ್ಚ್ 5 ಮತ್ತು 14ರ ನಡುವೆ ಲಭ್ಯವಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗ್ಗೆ ಮೂತ್ರ ವಿಸರ್ಜನೆಗೆ ಹೋಗಿದ್ದ ವ್ಯಕ್ತಿಯ ಕಣ್ಣಿಗೆ ಶವ ಕಾಣಿಸಿದೆ. ಕೂಡಲೇ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಕೋ ತಂಡದಿಂದ ಸ್ಥಳ ಪರಿಶೀಲನೆ ನಡೆಸಿ ಸದ್ಯ ಮೃತದೇಹವನ್ನು ದೇವನಹಳ್ಳಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಹೇಳಿದ್ದಿಷ್ಟು 

ಘಟನೆ ಬಗ್ಗೆ  ಟಿವಿ9ಗೆ ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಅಪರಿಚಿತ ಹೆಣ್ಣು ಮಗಳ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆ ಮಾಡಿ ಬಿಸಾಕಿದ್ದಾರೆ. ಡ್ರೈನೆಜ್​ನಲ್ಲಿ ಚಾಕುನಿಂದ ಇರಿದು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷದ ಮಹಿಳೆ ಇರಬಹುದು ಎಂದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು

ಒಂದೆರಡು ದಿನದ ಹಿಂದೆ ಕೊಲೆ ಮಾಡಿರಬಹುದು. ಕೊಲೆ ಯಾರು ಮಾಡಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಸುತ್ತಾಮುತ್ತ ಸಿಸಿ ಕ್ಯಾಮರಾಗಳು ಇವೆ. ಎಲ್ಲವನ್ನೂ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುತ್ತೇವೆ ಎಂದು ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಮರಕ್ಕೆ ಬುಲೆಟ್ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್​ನ ಉನ್ನಿಕೃಷ್ಣನ್ ಜಂಕ್ಷನ್​​ನಲ್ಲಿ ನಡೆದಿದೆ. ಕಿರಣ್(25) ಮತ್ತು ಯಶವಂತ್(25) ಮೃತರು. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲ್ಯಾಣ ಮಂಟಪದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಫೋಟೊಗ್ರಾಫರ್ ಸಾವು!

ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್​ನಲ್ಲಿ ಮೂವರು ಯುವಕರು ತೆರಳುತ್ತಿದ್ದರು. ಈ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಪಲ್ಟಿ ಹೊಡೆದಿದ್ದು, ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಯಶವಂತ್ ಸಾವನ್ನಪ್ಪಿದ್ದಾರೆ. ಗೌತಮ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | What are the problems caused by using your phone while eating?

ಊಟ ಮಾಡುವಾಗ ಗಮನ ಆಹಾರದ ಮೇಲೆ ಇರಬೇಕು, ಊಟವನ್ನು ಆನಂದಿಸಿ ನಿಧಾನವಾಗಿ ತಿನ್ನಬೇಕು ಇದರಿಂದ ಆರೋಗ್ಯವೂ (health) ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಇದೇ ರೀತಿ ಊಟ ಮಾಡ್ತಿದ್ರು. ಆದ್ರೆ ಇಂದು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಬಹುತೇಕ ಎಲ್ಲರೂ ಊಟ ಮಾಡುವಾಗ ಟಿವಿ, ಮೊಬೈಲ್‌ ನೋಡೇ ನೋಡುತ್ತಾರೆ. ಹೀಗೆ ಮೊಬೈಲ್‌ ನೋಡುತ್ತಾ ಊಟ ಮಾಡುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದಂತೆ. ನೀವು ಕೂಡ ಇದೇ ಸೋಷಿಯಲ್‌ ಮೀಡಿಯಾದಲ್ಲಿ ರೀಲ್ಸ್‌, ವಿಡಿಯೋ ಸ್ಕ್ರೋಲ್‌ ಮಾಡುತ್ತಾ ಊಟ ಮಾಡ್ತೀರಾ? ಈ ಅಭ್ಯಾಸ ನಿಮ್ಮ ಮೇಲೆ ಏನೆಲ್ಲಾ ಪರಿಣಾಮವನ್ನು ಬೀರುತ್ತದೆ ಎಂಬುದನ್ನು ತಪ್ಪದೆ ತಿಳಿಯಿರಿ.

ಊಟ ಮಾಡುವಾಗ ಮೊಬೈಲ್‌ ನೋಡುವುದರಿಂದ ಏನಾಗುತ್ತದೆ?

ಬೊಜ್ಜು ಹೆಚ್ಚಾಗಬಹುದು: ಊಟ ಮಾಡುವಾಗ ಟಿವಿ ನೋಡುವುದು ಅಥವಾ ಮೊಬೈಲ್ ಫೋನ್ ನೋಡುವುದರಿಂದ ನಮ್ಮ ಆಹಾರದಿಂದ ಗಮನ ಬೇರೆಡೆಗೆ ಸೆಳೆಯುತ್ತದೆ. ನಾವು ಅತಿಯಾಗಿ ತಿನ್ನುತ್ತೇವೆ. ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ, ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ನಂತರ ಬೊಜ್ಜಿನ ಸಮಸ್ಯೆಗೆ ಕಾರಣವಾಗುತ್ತದೆ.

ಜೀರ್ಣಕಾರಿ ಸಮಸ್ಯೆಗಳು: ಟಿವಿ ನೋಡುತ್ತಾ ಅಥವಾ ಮೊಬೈಲ್ ಫೋನ್ ಬಳಸುತ್ತಾ ಊಟ ಮಾಡುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳು ಉಂಟಾಗಬಹುದು. ಆಹಾರವನ್ನು ಸರಿಯಾಗಿ ಅಗಿಯದೇ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ನಡೆಯದೆ ಮಲಬದ್ಧತೆ, ಹೊಟ್ಟೆ ನೋವು ಮತ್ತು ಅಜೀರ್ಣದಂತಹ ಸಮಸ್ಯೆಗಳು ಉದ್ಭವಿಸುತ್ತದೆ.

ಮಧುಮೇಹದ ಅಪಾಯ: ಊಟ ಮಾಡುವಾಗ ಮೊಬೈಲ್‌ ಫೋನ್ ಬಳಸುವುದರಿಂದ ಮಧುಮೇಹ ಬರುವ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಏಕೆಂದರೆ ಟಿವಿ ನೋಡುತ್ತಾ ಅಥವಾ ಮೊಬೈಲ್ ಫೋನ್ ನೋಡುತ್ತಾ ಊಟ ಮಾಡುವುದರಿಂದ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ, ಆಹಾರದ ಸರಿಯಾದ ಸಂಸ್ಕರಣೆಯನ್ನು ತಡೆಯುತ್ತದೆ ಮತ್ತು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?

 ಊಟ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ:

  • ಊಟ ಮಾಡುವಾಗ, ನೀವು ಟಿವಿ ಅಥವಾ ಫೋನ್ ಬಳಸದಂತೆ ಎಚ್ಚರಿಕೆ ವಹಿಸಬೇಕು.
  • ಊಟ ಮಾಡುವಾಗ, ಆಹಾರದ ಮೇಲೆ ಮಾತ್ರ ಗಮನಹರಿಸಿ, ಮಾತನಾಡುವುದು ಅಥವಾ ಫೋನ್‌ ನೋಡುವುದು ಮಾಡಬೇಡಿ.
  • ಆಹಾರವನ್ನು ನಿಧಾನಕ್ಕೆ ಅಗಿದು ತಿನ್ನಿ. ಇದು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.
  • ಊಟದ ನಂತರ ತಕ್ಷಣ ನೀರು ಕುಡಿಯಬೇಡಿ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಅಡ್ಡಿಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.

ಯತ್ನಾಳ್​​ ಏನು ಹೇಳಿದ್ದರು?

ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು, ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಿಕೊಳ್ಳಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕೆಂದ್ರೆ ಫಾರೂಕ್ ಅಬ್ದುಲ್ಲಾ ಜೊತೆ ನೆಹರುಗೆ ಲಿಂಕ್ ಇತ್ತು. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೋಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಹಾಗಿದ್ರೆ ನಾನು ಚರಕ ತಿರುಗಿಸುತ್ತೇನೆ, ನಾಳೆ ರಾಜ್ಯದ ಸಿಎಂ ಆಗ್ತೀನಾ? ಎಂದು ಯತ್ನಾಳ್​​ ಪ್ರಶ್ನಿಸಿದ್ದರು. ಅಲ್ಲದೆ ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧಿ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:  ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ನೆಹರು ಮೊದಲ ಪ್ರಧಾನಿಯಲ್ಲ; ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್

ಅಲ್ಲದೆ, ಲವ್ ಜಿಹಾದ್ ಕುರಿತು ಉಲ್ಲೇಖಿಸಿ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ಈ ಭಾಷಣವು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಮುದಾಯಗಳ ನಡುವೆ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಮಾತನಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಪೊಲೀಸರು ಯತ್ನಾಳ್​​ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ವಾಚಾಳಿ ವಂಶಿ, ನಾಚಿಕೆ ಕೃಷ್ಣನ ಕಥೆಯಿರುವ ಹೊಸ ಧಾರಾವಾಹಿ ‘ಕೃಷ್ಣವಂಶಿ’ – Kannada News | Udaya Tv new serial Krishna Vamshi to go on air from 2nd March

ಕನ್ನಡ ಕಿರುತೆರೆ ಸೀರಿಯಲ್ ಕ್ಷೇತ್ರದಲ್ಲಿ ‘ಉದಯ ಟಿವಿ’ (Udaya Tv) ಪರಂಪರೆ ದೊಡ್ಡದು. ಹೊಸ ಥರದ ಕೌಟುಂಬಿಕ ಕಥೆಗಳಿಂದ ನೋಡುಗರ ಮನ ಗೆಲ್ಲುತ್ತಿರುವ ಉದಯ ವಾಹಿನಿ ಈಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ಸೋಮವಾರದಿಂದ ಶನಿವಾರ ರಾತ್ರಿ 9.30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿ’ (Krishna Vamshi) ಧಾರಾವಾಹಿಯು ಒಂದು ವಿಶೇಷವಾದ ಕಥೆಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ಆ ಬಗ್ಗೆ ಉಯಯ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ನಾಚಿಕೆ ಸ್ವಭಾವದ ಹುಡುಗ ಕೃಷ್ಣ, ವಾಚಾಳಿ ಹುಡುಗಿ ವಂಶಿಯ ಮಧ್ಯೆ ಅರಳುವ ಪ್ರೀತಿಯ ಕಥಾಹಂದರ ಈ ಧಾರಾವಾಹಿಯಲ್ಲಿ ಇದೆ. ಒಳ್ಳೆಯ ಹುಡುಗಿ ವಂಶಿ ಮಾತಿನ ಮಲ್ಲಿ. ನಾಚಿಕೆ ಹುಡುಗ ಕೃಷ್ಣ ಹೆಚ್ಚು ಓದಿದವನಲ್ಲ. ಅಣ್ಣನ ಹೊಟೇಲ್‌ ನಡೆಸುತ್ತಿರುತ್ತಾನೆ. ವಂಶಿಗೆ ಕೃಷ್ಣನ ನಾಚಿಕೆ ಸ್ವಭಾವವೇ ಇಷ್ಟವಾಗುತ್ತದೆ. ಕೃಷ್ಣನಿಗೂ ನಾಚಿಕೆಯ ನಡುವೆ ಪ್ರೀತಿ ಅರಳುತ್ತದೆ. ಇಬ್ಬರ ಪ್ರೀತಿಗೆ ಅನೇಕ ಸಲ ಅಗ್ನಿಪರೀಕ್ಷೆ ಎದುರಾಗುತ್ತದೆ. ಅಲ್ಲಿಂದ ಕಥೆ ಆರಂಭ.

ಇದರ ಜೊತೆಗೆ ತಂದೆಯ ಮಮತೆಯ ಕಥೆ ಕೂಡ ಇದೆ. ತಂದೆ ದೊರೆಸ್ವಾಮಿಗೆ ತನ್ನ ಮಗಳು ವಂಶಿಯೇ ಪ್ರಪಂಚ. ಮಗಳು ಮದುವೆಯಾಗಿ ದೂರ ಹೋಗುವ ಕಲ್ಪನೆಯೇ ಅವರಿಗೆ ಅಸಹನೀಯ. ಮನೆ ಅಳಿಯನಾಗಲು ಒಪ್ಪುವಂಥ ಹುಡುಗನನ್ನೇ ಮಗಳು ಮದುವೆಯಾಗಲಿ ಎಂಬ ಆಸೆ ಅವರದ್ದು. ಆದರೆ ವಂಶಿಯ ಕನಸು ಬೇರೆ ದಿಕ್ಕಿನಲ್ಲಿ ಸಾಗುತ್ತದೆ.

ವಂಶಿ ಪ್ರೀತಿಯಿಂದ ಕೂಡಿದ ಅವಿಭಕ್ತ ಕುಟುಂಬದಲ್ಲಿ ಅಪ್ಪನ ಮನೆಯವರೆಲ್ಲರ ಜೊತೆ ಗಂಡನ ಮನೆಯಲ್ಲಿ ಒಟ್ಟಿಗೇ ಬದುಕುವ ಕನಸು ಹೊತ್ತಿದ್ದಾಳೆ. ಅವಳ ಆಶಯ ಮತ್ತು ಪ್ರೀತಿ ಒಟ್ಟೊಟ್ಟಿಗೆ ಸಾಗಲು ಕಷ್ಟಪಡಬೇಕಿದೆ. ವಂಶಿ ಕನಸು ನನಸಾಗುತ್ತಾ? ಕೃಷ್ಣ ಮತ್ತು ವಂಶಿಯರ ಪ್ರೀತಿ ಯಶಸ್ವಿಯಾಗುತ್ತಾ ಎನ್ನುವುದೇ ಮುಂದಿನ ಕಥಾಹಂದರ ಎಂದು ಉದಯ ವಾಹಿನಿ ತಿಳಿಸಿದೆ.

ಇದನ್ನೂ ಓದಿ: 35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ

ನಾಯಕ ಕೃಷ್ಣನ ಪಾತ್ರದಲ್ಲಿ ರೋಹನ್ ಎ. ಅಭಿನಯಿಸುತ್ತಿದ್ದಾರೆ. ನಾಯಕಿ ವಂಶಿ ಪಾತ್ರವನ್ನು ಶಾರದಾ ಪುಂಡಿ ಮಾಡುತ್ತಿದ್ದಾರೆ. ಗಿರಿಜಾ ಲೋಕೇಶ್, ಹಂಸ, ವಿಜಯ್, ಹನುಮಂತೇಗೌಡ, ರಜಿನಿ ಟಿ.ಡಿ, ಸಿದ್ದಾರ್ಥ್ ಮಾಧ್ಯಮಿಕ, ಸಿಂಧೂ ಪಿ, ಸಂದೀಪ್ ಎಸ್.ಆರ್, ಪುಷ್ಪ ಅನಿಲ್‌ ಕುಮಾರ್, ಸುಕೃತಾ ನಾಗ್ ಮತ್ತಿತರರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್ – Kannada News | Bagalkot Tension: Controversial Social Media Post by Youth Surfaces Amid Ongoing Stone Pelting Probe

ಮುಸ್ಲಿಂ ಯುವಕರ ವಿವಾದಾತ್ಮಕ ಪೋಸ್ಟ್ ಸ್ಕ್ರೀನ್​ಶಾಟ್Image Credit source: tv9

ಬಾಗಲಕೋಟೆ, ಫೆಬ್ರವರಿ 25: ಬಾಗಲಕೋಟೆ (Bagalkot) ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣ ಪೋಸ್ಟ್​ನಿಂದಾಗಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋವನ್ನು ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಗಮನಸೆಳೆದಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ಉಲ್ಲೇಖಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆ ಕೆಲವು ವರ್ಷಗಳ ಹಿಂದೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದಿನ್ ಓವೈಸಿ ನೀಡಿದ್ದ ವಿವಾದಾತ್ಮಕ ಭಾಷಣವನ್ನು ನೆನಪಿಸುವಂತಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪೋಸ್ಟ್ ಬಗ್ಗೆ ಪೊಲೀಸರು ಗಮನ ಹರಿಸಿದ್ದು, ಕಾನೂನು ಕ್ರಮದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಚೋದನಕಾರಿ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಜವಾಬ್ದಾರಿಯುತವಾಗಿ ವರ್ತಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬಾಗಲಕೋಟೆ ಗಲಭೆ ಹಿನ್ನೆಲೆ

ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಬಾಗಲಕೋಟೆಯಲ್ಲಿ ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಭಾವಚಿತ್ರ ಮೆರವಣಿಗೆ ಮಾಡಲಾಗಿತ್ತು. ಆಗ ಮೆರವಣಿಗೆ ಮೇಲೆ ಕಲ್ಲುಗಳು ಹಾಗೂ ಚಪ್ಪಲಿ ತೂರಲಾಗಿತ್ತು. ಇದು ಹಿಂದೂ ಕಾರ್ಯಕರ್ತರನ್ನು ಕೆರಳಿಸಿದ್ದಲ್ಲದೆ, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಮಾಡಿತ್ತು. ನಂತರ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಘಟನೆಯು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಸದ್ಯ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್! – Kannada News | KSRTC Free Water: Mysuru Route Staff Quench Passengers’ Thirst in Summer Travel

ಮೈಸೂರು, ಫೆಬ್ರವರಿ 25: ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ.

ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು, ಜನರು ಭಯಭೀತರಾಗಿ, ಕಿರುಚುತ್ತಾ ಹೊರಗೆ ಓಡಿಹೋದರು. ಆರತಿ ಕುಸಿದು ಬಿದ್ದಾಗ ಕೆಲವರು ಆಕೆ ಪ್ರಜ್ಞೆ ತಪ್ಪದಂತೆ ನೋಡಿಕೊಳ್ಳಲು ಪ್ರಯತ್ನಿಸಿದರು. ಆರತಿಯನ್ನು ತಕ್ಷಣವೇ ಹತ್ತಿರದ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಅವರನ್ನು ವಾರಾಣಸಿ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆರತಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಗುಂಡಿನ ದಾಳಿ ಘಟನೆಗೆ ಶಂಕಿತ ಪ್ರೇಮ ಪ್ರಕರಣ ಕಾರಣ ಎನ್ನಲಾಗಿದೆ. ಶಂಕಿತ ದೀನಬಂಧು ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆರೋಪಿಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದು, ಅವರನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಓದಿ: ಕಲ್ಯಾಣ ಮಂಟಪದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಫೋಟೊಗ್ರಾಫರ್ ಸಾವು!

ದೀನಬಂಧು ಈ ಹಿಂದೆ ಮದ್ಯದ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಮದುವೆ ಮೆರವಣಿಗೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಿಂದ ಬಂದಿತ್ತು. ಘಟನೆ ನಡೆದ ಕೂಡಲೇ ಅದು ಹಿಂತಿರುಗಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ – Kannada News | Mohan Das Pai Slams BMRCL: Pink Line Barricades Cause Bengaluru Traffic Chaos

ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶImage Credit source: Tv9 Kannada

ಬೆಂಗಳೂರು, ಫೆಬ್ರವರಿ 25: ರಾಜ್ಯ ರಾಜಧಾನಿಯಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್​​​​​ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್​​ ಗಟ್ಟಲೆ ದೂರದ ವರೆಗೆ ಬಿಎಂಆರ್​​ಸಿಎಲ್​​ ಬ್ಯಾರಿಕೇಡ್​​ ಅಳವಡಿಸಿತ್ತು. ಆದರೀಗ ಕಾಮಗಾರಿ ಮುಗಿದಿದ್ದರೂ, ಅವುಗಳನ್ನು ತೆರವು ಮಾಡದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಬಿಎಂಆರ್​ಸಿಎಲ್​​​​​ಗೆ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಳೇನ ಅಗ್ರಹಾರ-ನಾಗವಾರವರೆಗೆ ಪಿಂಕ್ ಲೈನ್ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಆದರೆ ಈ ಮಾರ್ಗದ ಪಿಲ್ಲರ್ ಕಾಮಗಾರಿ ಮುಗಿದು 6 ತಿಂಗಳಾಗಿವೆ. ಹೀಗಿದ್ದರೂ ಪಿಲ್ಲರ್ ಅಕ್ಕಪಕ್ಕದಲ್ಲಿ ಅಳವಡಿಸಿರುವ ಬ್ಯಾರಿಕೇಡ್​​ಗಳನ್ನು ಇನ್ನೂ ತೆರವು ಮಾಡಲಾಗಿಲ್ಲ. ಹೀಗಾಗಿ ವಾಹನ ಸವಾರರು ಪರದಾಡುತ್ತಿದ್ದು, ಹೊಸೂರು ಮತ್ತು ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗ್ತಿದೆ. ಅಲ್ಲದೆ ಮೆಟ್ರೋ ಕಾಮಗಾರಿ ಹಿನ್ನೆಲೆ ತೆಗೆಯಲಾಗಿದ್ದ ಗುಂಡಿಗಳನ್ನು ಮುಚ್ಚುವ ಕೆಲಸ ಈವರೆಗೂ ನಡೆದಿಲ್ಲ ಎಂದು ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ಬಿಎಂಆರ್​​ಸಿಎಲ್​​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ:  ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು!

ಏಪ್ರಿಲ್​​ನಿಂದ ಪಿಂಕ್​​ ಲೈನ್ ಮೆಟ್ರೋ​​ ಆರಂಭ?

ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಈ ಭಾಗದಲ್ಲಿ ಈಗಾಗಲೇ ಪರೀಕ್ಷಾ ಕಾರ್ಯಗಳು ಆರಂಭವಾಗಿವೆ. ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು ಆರು ಸ್ಟೇಷನ್‌ಗಳು ನಿರ್ಮಾಣವಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಮತ್ತು ರೈಲಿನ ತಾಂತ್ರಿಕ ಗುಣಮಟ್ಟ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ಮಾರ್ಗವನ್ನು ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version