ನೀವು ಮಾಡುವ ಈ ತಪ್ಪುಗಳು ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು – Kannada News | These mistakes you make can cause your pressure cooker to explode‌

ಈಗಂತೂ ಪ್ರತಿ ಮನೆಯಲ್ಲೂ ಕುಕ್ಕರ್‌ (pressure cooker) ಬಳಕೆ ಮಾಡಲಾಗುತ್ತದೆ. ಅನ್ನ ಬೇಯಿಸುವುದರಿಂದ ಹಿಡಿದು ಸಾರು, ಸಾಂಬಾರ್‌ ಮಾಡುವವರೆಗೆ ಪ್ರತಿಯೊಂದು ಅಡುಗೆಯನ್ನೂ ಹೆಚ್ಚಿನವರು ಕುಕ್ಕರ್‌ನಲ್ಲಿಯೇ ಮಾಡುತ್ತಾರೆ. ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ವಿಷಯ ಏನೆಪ್ಪಾ ಅಂದ್ರೆ ಅನೇಕರಿಗೆ  ಕುಕ್ಕರ್‌ ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಈ ಸಣ್ಣ ನಿರ್ಲಕ್ಷ್ಯ, ಅಜಾಗರೂಕತೆ ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯ.

ನಿಮ್ಮ ಈ ತಪ್ಪುಗಳಿಂದ ಕುಕ್ಕರ್‌ ಸ್ಫೋಟಗೊಳ್ಳಬಹುದು:

ಗ್ಯಾಸ್ಕೆಟ್ ರಬ್ಬರ್‌ನ ನಿರ್ಲಕ್ಯ: ಪ್ರೆಶರ್ ಕುಕ್ಕರ್‌ನಲ್ಲಿ ರಬ್ಬರ್ ಗ್ಯಾಸ್ಕೆಟ್ ಮತ್ತು ಸೀಟಿ ಅತ್ಯಗತ್ಯ. ಒಟ್ಟಾಗಿ, ಅವೆರಡು ಆಂತರಿಕ ಒತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಹೆಚ್ಚುವರಿ ಉಗಿಯನ್ನು ಬಿಡುಗಡೆ ಮಾಡುತ್ತವೆ. ಆದರೆ ಅನೇಕ ಮಂದಿ ಗ್ಯಾಸ್ಕೆಟ್‌ ರಬ್ಬರ್‌ ಸಡಿಲವಾದರೂ, ಅವು ಸವೆದು ಹೋದರು ಅದನ್ನು ಚೇಂಜ್‌ ಮಾಡುವುದುದಿಲ್ಲ. ಇದು ಪ್ರೆಶರ್ ಕುಕ್ಕರ್‌ನೊಳಗಿನ ಒತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ, ಇದು ಕುಕ್ಕರ್‌ ಬ್ಲಾಸ್ಟ್‌ ಆಗಲು ಕಾರಣವಾಗುತ್ತದೆ. ಆದ್ದರಿಂದ ಸೀಟಿ ಮತ್ತು ಗ್ಯಾಸ್ಕೆಟ್ ಅನ್ನು ನಿಯತಕಾಲಿಕವಾಗಿ ಪರಿಶೀಲಿಸಿ ಮತ್ತು ಅಗತ್ಯವಿದ್ದರೆ ತಕ್ಷಣ ಅವುಗಳನ್ನು ಬದಲಾಯಿಸಿ.

ಕುಕ್ಕರ್ ಅನ್ನು ಅತಿಯಾಗಿ ತುಂಬಿಸುವುದು: ಅನೇಕರು ಕುಕ್ಕರ್‌ನ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಆಹಾರ ತುಂಬಿಸುತ್ತಾರೆ. ಹೀಗೆ ಕುಕ್ಕರ್‌ ಸಂಪೂರ್ಣವಾಗಿ ತುಂಬುವವರೆಗೆ ಅದರಲ್ಲಿ ಅನ್ನ, ತರಕಾರಿ ಬೇಯಿಸಬಾರದು. ಇದರಿಂದ ಕುಕ್ಕರ್‌ ಒಳಗೆ ಉತ್ಪತ್ತಿಯಾಗುವ ಉಗಿ ಹೊರಗೆ ಹೋಗಲು ಯಾವುದೇ ಮಾರ್ಗವಿರುವುದಿಲ್ಲ. ಇದು ಒತ್ತಡದ ಮಟ್ಟ ವೇಗವಾಗಿ ಏರಿಕೆಯಾಗಲು ಕಾರಣವಾಗುತ್ತದೆ. ಇದರಿಂದ ಕುಕ್ಕರ್‌ ಸ್ಫೋಟಗೊಳ್ಳಬಹುದು. ಆದ್ದರಿಂದ ಯಾವಾಗಲೂ ಕಕ್ಕರ್‌ನ ಸಾಮರ್ಥ್ಯದ  2/3 ರಷ್ಟು ಮಾತ್ರ ಆಹಾರವನ್ನು ತುಂಬಿಸಬೇಕು.

ಸೀಟಿಯನ್ನು ಸ್ವಚ್ಛಗೊಳಿಸದಿರುವುದು: ಸೀಟಿ ಒತ್ತಡ ಬಿಡುಗಡೆಗೆ  ಕುಕ್ಕರ್‌ನ ಪ್ರಮುಖ ಭಾಗವಾಗಿದೆ. ಅದರಲ್ಲಿ ಕೊಳೆ ಅಥವಾ ಆಹಾರ ಕಣಗಳು ಸಿಲುಕಿಕೊಂಡರೆ, ಅದು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಉಗಿ ತಪ್ಪಿಸಿಕೊಳ್ಳುವುದನ್ನು ತಡೆಯುತ್ತದೆ, ಇದರಿಂದ ಕುಕ್ಕರ್ ಒಳಗೆ ಒತ್ತಡ ಹೆಚ್ಚಾಗುತ್ತದೆ ಮತ್ತು ಕುಕ್ಕರ್ ಸ್ಫೋಟಗೊಳ್ಳುವ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಪ್ರತಿ ಬಳಕೆಯ ನಂತರ ಸೀಟಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮತ್ತು ವೆಂಟ್ ಪೈಪ್‌ನಲ್ಲಿ ಯಾವುದೇ ಅಡಚಣೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: ಪಾತ್ರೆ ತೊಳೆಯುವ ಸ್ಪಾಂಜ್‌ಗಳ ಸ್ವಚ್ಛತೆಯ ಬಗ್ಗೆ ಇರಲಿ ತುಸು ಹೆಚ್ಚು ಕಾಳಜಿ

ಕಡಿಮೆ ನೀರು ಸೇರಿಸುವುದು: ಕೆಲವರು ಕುಕ್ಕರ್‌ನಲ್ಲಿ ಆಹಾರ ಬೇಯಿಸುವಾಗ ಅಗತ್ಯಕ್ಕಿಂತಲೂ ಕಡಿಮೆ ಪ್ರಮಾಣದ ನೀರನ್ನು ಸೇರಿಸುತ್ತಾರೆ. ಇದು ಆಹಾರವನ್ನು ಸುಡುವುದಲ್ಲದೆ, ಒಳಗೆ ಅತಿಯಾದ ಶಾಖವನ್ನು ಉತ್ಪಾದಿಸುತ್ತದೆ. ಇದು ಕುಕ್ಕರ್ ಅತಿಯಾಗಿ ಬಿಸಿಯಾಗಲು ಮತ್ತು ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಆಹಾರ ಬೇಯಿಸುವಾಗ ಸರಿಯಾದ ಪ್ರಮಾಣದಲ್ಲಿ ನೀರನ್ನು ಸೇರಿಸಿ.

ಹಳೆಯ ಪ್ರೆಶರ್ ಕುಕ್ಕರ್‌ ಬಳಕೆ: ಕೆಲವರು ಹಲವು ವರ್ಷಗಳ ಹಳೆಯ ಕುಕ್ಕರ್‌ಗಳನ್ನೇ ಬಳಕೆ ಮಾಡುತ್ತಾರೆ. ಕಾಲ ಕಳೆದಂತೆ ಕುಕ್ಕರ್‌ನ ಮುಚ್ಚಳ ಮತ್ತು ಲಾಕ್ ವ್ಯವಸ್ಥೆಯು ದುರ್ಬಲಗೊಳ್ಳುವ ಕಾರಣ ಹಳೆಯ ಪ್ರೆಶರ್‌ ಕುಕ್ಕರ್‌ನಲ್ಲಿ ಅಡುಗೆ ಮಾಡುವುದು ತುಂಬಾನೇ ಡೇಂಜರ್.‌ ಏಕೆಂದರೆ ಇದು ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಕುಕ್ಕರ್‌ ಅನ್ನು ನಿಯಮಿತವಾಗಿ ಪರಿಶೀಲಿಸುತ್ತಿರಿ, ಮತ್ತು ಯಾವಾಗಲೂ ಐಎಸ್‌ಐ ಗುರುತು ಹೊಂದಿರುವ ಉತ್ತಮ ಗುಣಮಟ್ಟದ ಕುಕ್ಕರ್‌ಗಳನ್ನೇ ಬಳಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ ಹಿಂದೆ ನಿಗದಿಯಾಗಿದ್ದ ದಿನಾಂಕದಂದು ಚಿತ್ರ ತೆರೆಗೆ ಬರುತ್ತಿಲ್ಲ, ಬದಲಿಗೆ ಬೇರೆ ದಿನಾಂಕವನ್ನು ರಿಲೀಸ್​​ಗೆ ನಿಗದಿ ಮಾಡಲಾಗುತ್ತಿದೆ.

ಈ ಹಿಂದೆ ‘ಮಾ ಇಂಟಿ ಬಂಗಾರಂ’ ಸಿನಿಮಾವು ಮೇ 15 ರಂದು ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಚಿತ್ರತಂಡವೂ ಸಹ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿತ್ತು. ಆದರೆ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಇನ್ನೂ ಬಾಕಿ ಇರುವ ಕಾರಣ ಹಾಗೂ ಬಾಕ್ಸ್ ಆಫೀಸ್​​ನಲ್ಲಿ ಕೆಲವು ದೊಡ್ಡ ಸಿನಿಮಾಗಳು ಆ ಸಮಯದಲ್ಲಿ ಬಿಡುಗಡೆ ಆಗುತ್ತಿರುವ ಕಾರಣ, ಬಾಕ್ಸ್ ಆಫೀಸ್ ಪೈಪೋಟಿಯನ್ನು ತಪ್ಪಿಸಲೆಂದು ಚಿತ್ರತಂಡವು ಸಿನಿಮಾದ ಬಿಡುಗಡೆ ದಿನಾಂಕ ಬದಲಾವಣೆಗೆ ಮುಂದಾಗಿದೆ.

ಆರಂಭದಲ್ಲಿ ಈ ಚಿತ್ರವನ್ನು ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಬಳಿಕ ಮೇ 15 ರಂದು ಚಿತ್ರವನ್ನು ಅದ್ಧೂರಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಬೇಸಿಗೆಯ ರಜಾದಿನಗಳ ಲಾಭವನ್ನು ಪಡೆಯಲು ಚಿತ್ರತಂಡ ಈ ದಿನಾಂಕವನ್ನು ಆಯ್ದುಕೊಂಡಿತ್ತು, ಆದರೆ ಈಗ ಮತ್ತೆ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ. ಈಗಾಗಲೇ ಸಿನಿಮಾದ ಟೀಸರ್, ಹಾಡು ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಸಮಂತಾ, ಮುದ್ದು ಸೊಸೆಯಾಗಿ ಜೊತೆಗೆ ಆಕ್ಷನ್ ಕ್ವೀನ್ ಆಗಿಯೂ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾನಲ್ಲಿ ಸಮಂತಾ ಜೊತೆಗೆ ಕನ್ನಡದ ನಟ ದಿಗಂತ್ ಸಹ ಮುಖ್ಯವಾದ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಚಿತ್ರೀಕರಣವೂ ಸಹ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿರುವುದು ವಿಶೇಷ. ಸಿನಿಮಾವನ್ನು ಸಮಂತಾರ ಮೆಚ್ಚಿನ ನಿರ್ದೇಶಕಿ ಬಿವಿ ನಂದಿನಿ ರೆಡ್ಡಿ ನಿರ್ದೇಶಿಸಿದ್ದಾರೆ. ಈ ಇಬ್ಬರಿಗೂ ಇದು ಎರಡನೇ ಸಿನಿಮಾ ಆಗಿದೆ. ಸಿನಿಮಾಕ್ಕೆ ಸಮಂತಾರ ಪತಿ, ನಿರ್ದೇಶಕ ರಾಜ್ ನಿಧಿಮೋರು ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ? – Kannada News | 1 year for Operation Sindoor How India delivered maximum damage with minimal impact

ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು.

ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ ಎಚ್ಚರ ವಹಿಸಿತ್ತು. ಅಮಾಯಕರಿಗೆ ಯಾವುದೇ ತೊಂದರೆಯಾಗದಂತೆ ಕೇವಲ ಉಗ್ರರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುವುದು ಸುಲಭದ ಸಂಗತಿಯಾಗಿರಲಿಲ್ಲ. ಆದರೂ ಆ ಸವಾಲನ್ನು ಭಾರತದ ವಾಯುಪಡೆ, ಸೇನಾಪಡೆ ಯಶಸ್ವಿಯಾಗಿ ನಿರ್ವಹಿಸಿತು.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ

ಆ ಘಟನೆ ನಡೆದು ಒಂದು ವರ್ಷವಾಗಿದೆ. ಇಂದು ನಾವು ನೋಡುವ ಹೆಚ್ಚಿನ ಜಾಗತಿಕ ಸಂಘರ್ಷಗಳಲ್ಲಿ ವಿನಾಶವನ್ನು ನಿಯಂತ್ರಿಸಲು ಸಾಧ್ಯವೇ ಆಗುವುದಿಲ್ಲ. ಇದು ಎರಡೂ ಕಡೆಯ ಆರ್ಥಿಕತೆಗಳು ಮತ್ತು ನಾಗರಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಆಪರೇಷನ್ ಸಿಂಧೂರ್ ವಿಭಿನ್ನವಾಗಿತ್ತು. ಇದರಲ್ಲಿ ಅಮಾಯರು ಯಾರೂ ಬಲಿಯಾಗಲಿಲ್ಲ. ಭಾರತ ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ನಡೆಸಿದ್ದ ಈ ದಾಳಿ ಯಾವುದೇ ಬಿಕ್ಕಟ್ಟಿಗೂ ಕಾರಣವಾಗಲಿಲ್ಲ.

ಭಾರತವು ಪಾಕಿಸ್ತಾನದ ಭಯೋತ್ಪಾದನೆ ಮತ್ತು ಮಿಲಿಟರಿ ಮೂಲಸೌಕರ್ಯದ ಮೇಲೆ ತೀವ್ರ ದಾಳಿ ನಡೆಸಿ ಹಾನಿಯನ್ನುಂಟುಮಾಡಿತು. ಆದರೆ, ಯಾವುದೇ ಮನೆಗಳಿಗೂ ಹಾನಿಯಾಗಲಿಲ್ಲ. ಪಾಕಿಸ್ತಾನಿ ಕ್ಷಿಪಣಿಗಳಿಂದ ಭಾರತಕ್ಕೆ ಯಾವುದೇ ಹಾನಿಯಾಗಲು ಬಿಡಲಿಲ್ಲ. ಈ ಮಿಲಿಟರಿ ಕಾರ್ಯಾಚರಣೆಯ ಪರಿಣಾಮವಾಗಿ ಭಾರತದಲ್ಲಿ ಯಾವುದೇ ಆರ್ಥಿಕ ಆಘಾತ ಉಂಟಾಗಿಲ್ಲ.

ಭಾರತೀಯ ವಾಯುಪಡೆಯು ಪಾಕಿಸ್ತಾನದ ಚೀನಾ ಸರಬರಾಜು ಮಾಡಿದ ವಾಯು ರಕ್ಷಣಾ ವ್ಯವಸ್ಥೆಗಳನ್ನು ಬೈಪಾಸ್ ಮಾಡಿ ಜ್ಯಾಮ್ ಮಾಡಿತು. ರಫೇಲ್ ಜೆಟ್‌ಗಳು, SCALP ಕ್ಷಿಪಣಿಗಳು ಮತ್ತು ಹ್ಯಾಮರ್ ಬಾಂಬ್‌ಗಳನ್ನು ಬಳಸಿಕೊಂಡು ಕೇವಲ 23 ನಿಮಿಷಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿತು.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ

ಮೇ 10 ರಂದು ಕೆಲವೇ ಗಂಟೆಗಳಲ್ಲಿ ಭಾರತವು ನೂರ್ ಖಾನ್, ರಫೀಕಿ, ಮುರಿಯ್, ಸುಕ್ಕೂರ್, ಸಿಯಾಲ್‌ಕೋಟ್, ಪಸ್ರೂರ್, ಚುನಿಯನ್, ಸರ್ಗೋಧಾ, ಸ್ಕಾರ್ಡು, ಭೋಲಾರಿ ಮತ್ತು ಜಕೋಬಾಬಾದ್ ವಾಯುನೆಲೆಗಳು ಸೇರಿದಂತೆ 11 ಪ್ರಮುಖ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿತು. ಈ ದಾಳಿಗಳು ಪಾಕಿಸ್ತಾನದ ವಾಯು ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಕುಗ್ಗಿಸಿದವು.

ಈ ಕ್ರಮಗಳೊಂದಿಗೆ, ಭಾರತವು ಒಂದೇ ಕಾರ್ಯಾಚರಣೆಯಲ್ಲಿ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರದ 11 ವಾಯುನೆಲೆಗಳನ್ನು ಹೊಡೆದುರುಳಿಸಿದ ಮೊದಲ ದೇಶವಾಯಿತು. ಪಾಕಿಸ್ತಾನದ ವಾಯುಪಡೆಯ ಸ್ವತ್ತುಗಳಲ್ಲಿ ಶೇ. 20ರಷ್ಟನ್ನು ನಾಶಪಡಿಸಿತು. ಭೋಲಾರಿ ವಾಯುನೆಲೆಯಲ್ಲಿ ಸ್ಕ್ವಾಡ್ರನ್ ಲೀಡರ್ ಉಸ್ಮಾನ್ ಯೂಸುಫ್ ಸಾವು ಮತ್ತು ಪ್ರಮುಖ ಫೈಟರ್ ಜೆಟ್‌ಗಳ ನಾಶ ಸೇರಿದಂತೆ ಹೆಚ್ಚಿನ ಸಾವುನೋವುಗಳು ವರದಿಯಾಗಿವೆ.

ಈ ಕಾರ್ಯಾಚರಣೆ ಭಾರತದ ಸ್ವದೇಶಿ ರಕ್ಷಣಾ ಸಾಮರ್ಥ್ಯಗಳ ಪರಿಪಕ್ವತೆಯನ್ನು ಎತ್ತಿ ತೋರಿಸಿತು. ಹಾಗೇ, ಸುಧಾರಿತ ವ್ಯವಸ್ಥೆಗಳ ಜಾಗತಿಕ ರಫ್ತುದಾರನಾಗಿ ಅದರ ವಿಶ್ವಾಸಾರ್ಹತೆಯನ್ನು ಬಲಪಡಿಸಿತು. ಇದಾದ ಒಂದು ವರ್ಷದ ನಂತರ, ಆಪರೇಷನ್ ಸಿಂಧೂರ್ ಹೊಸ ಮಾನದಂಡವನ್ನು ಸ್ಥಾಪಿಸುತ್ತದೆ ಎಂದು ಪರಿಗಣಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್ – Kannada News | Shringeri Assembly Result: BJP DN Jeevaraj Finally Take oath as MLA after Won In Recounting

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ,

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಬಿಜೆಪಿ ವಿಳಂಬ ಆರೋಪ ಮಾಡಿತ್ತು. ಬಿಜೆಪಿ ಪ್ರತಿನಿಧಿ ಮಂಡಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸ್ಪೀಕರ್ ಲಭ್ಯವಿಲ್ಲದಿದ್ದರೆ ತಾವೇ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಬುಧವಾರ ಸ್ವೀಕರ್ ಯುಟಿ ಖಾದರ್ ಅವರೇ ಪ್ರಮಾಣ ವಚನ ಬೋಧಿಸಿದರು.

2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆದ್ದಿದ್ದರು. ಆದ್ರೆ, ಅಂಚೆ ಮತಗಳಲ್ಲಿ ಅನುಮಾನಗಳು ವ್ಯಕ್ತವಾಗಿದ್ದವು, ಹೀಗಾಗಿ ಜೀವರಾಜ್ ಅವರು ಕೋರ್ಟ್ ಮೊರೆ ಹೋಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs PAK: ಪಾಕ್ ಕ್ರಿಕೆಟ್ ತಂಡಕ್ಕೆ ಭಾರತದಲ್ಲಿ ಅಡಲು ಅವಕಾಶ ನೀಡಿದ ಕೇಂದ್ರ ಸರ್ಕಾರ – Kannada News | India Allows Pak Players for Multi Nation Tournaments, No Bilateral Cricket

ಪಹಲ್ಗಾಮ್​ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಅಮಾಯಕ ಭಾರತೀಯರ ಪ್ರಾಣ ಹರಣ ಮಾಡಿದ ಬಳಿಕ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಗಳಿಗೂ ಭಾರತ ಅಂತ್ಯ ಹಾಡಿದೆ. ಇದರಿಂದಾಗಿ ಎರಡೂ ದೇಶಗಳ ಕ್ರಿಕೆಟ್ ತಂಡಗಳ ನಡುವಿನ ಪಂದ್ಯಕ್ಕೂ ಬ್ರೇಕ್ ಬಿದ್ದಿದೆ. ಮಾತ್ರವಲ್ಲದೆ ಭಾರತ ತಂಡ ಪಂದ್ಯವನ್ನಾಡಲು ಪಾಕಿಸ್ತಾನಕ್ಕೆ (India vs Pakistan) ಪ್ರಯಾಣಿಸಲು ಒಲ್ಲೆ ಎಂದರೆ, ಇತ್ತ ಪಾಕಿಸ್ತಾನ ತಂಡ ಕೂಡ ಭಾರತಕ್ಕೆ ಬರುವುದಕ್ಕೆ ಹಿಂದೇಟು ಹಾಕುತ್ತಿದೆ. ಏತನ್ಮಧ್ಯೆ, ಭಾರತ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಾಕಿಸ್ತಾನಿ ಆಟಗಾರರು ಭಾರತಕ್ಕೆ ಪ್ರಯಾಣಿಸಲು ಅವಕಾಶ ನೀಡಿದೆ. ಭಾರತ ಸರ್ಕಾರದ ಪ್ರಕಾರ, ಪಾಕಿಸ್ತಾನಿ ಆಟಗಾರರು ಬಹು ದೇಶಗಳನ್ನು ಒಳಗೊಂಡ ಅಂತರರಾಷ್ಟ್ರೀಯ ಈವೆಂಟ್​ಗಳಲ್ಲಿ ಅಂದರೆ ಐಸಿಸಿ (ICC) ಹಾಗೂ ಎಸಿಸಿ (ACC) ಈವೆಂಟ್​ಗಳಲ್ಲಿ ಆಡಲು ಭಾರತಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ.

ಭಾರತ ಸರ್ಕಾರ ಹೇಳಿದ್ದೇನು?

“ಭಾರತ ಆಯೋಜಿಸುವ ಬಹು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪಾಕಿಸ್ತಾನಿ ಆಟಗಾರರು ಭಾಗವಹಿಸಲು ಅನುಮತಿ ನೀಡಲಾಗುತ್ತಿದೆ. ಆದರೆ ಭಾರತ ತಂಡವನ್ನು ಮಾತ್ರ ಪಾಕಿಸ್ತಾನಕ್ಕೆ ಕಳುಹಿಸಲು ಸಾಧ್ಯವಿಲ್ಲ” ಎಂದು ಭಾರತ ಸರ್ಕಾರ ಹೇಳಿದೆ. ಇದರರ್ಥ ಏಷ್ಯಾಕಪ್, ಚಾಂಪಿಯನ್ಸ್ ಟ್ರೋಫಿ ಅಥವಾ ವಿಶ್ವಕಪ್‌ನಂತಹ ಪಂದ್ಯಾವಳಿಗಳು ಭಾರತದಲ್ಲಿ ನಡೆದರೆ ಪಾಕಿಸ್ತಾನಿ ಆಟಗಾರರಿಗೆ ಭಾರತಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಆದರೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸರಣಿಗಳನ್ನು ನಡೆಸುವ ಮಾತೇ ಇಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ.

ಪಾಕ್ ತಂಡಕ್ಕೆ ಭಾರತಕ್ಕೆ ಬರುತ್ತಾ?

ಗಮನಿಸಬೇಕಾದ ಅಂಶವೆಂದರೆ, ಭಾರತ ಮತ್ತು ಪಾಕಿಸ್ತಾನ ಇತ್ತೀಚೆಗೆ ನಡೆದ ಎರಡು ಐಸಿಸಿ ಟೂರ್ನಿಗಳಿಗೆ ಪರಸ್ಪರರ ದೇಶಗಳಿಗೆ ಪ್ರಯಾಣಿಸಿಲ್ಲ. ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿತ್ತು, ಆದರೆ ಭಾರತ ತಂಡ ಯುಎಇಯಲ್ಲಿ ತನ್ನ ಪಂದ್ಯಗಳನ್ನು ಆಡಿತ್ತು. ಇತ್ತ ಭಾರತ ಆಯೋಜಿಸಿದ್ದ 2026 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸಲಿಲ್ಲ. ಹೀಗಾಗಿ ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಪಾಕಿಸ್ತಾನ ವಿರುದ್ಧ ಆಡಲು ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣಿಸಬೇಕಾಗಿತ್ತು. ಆದ್ದರಿಂದ, ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುತ್ತದೆಯೇ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ಇದು ಅಸಂಭವವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ.

ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ ಪರಿಷ್ಕರಿಸಿದೆ. ಇನ್ನೊಂದೆಡೆ, ಎಡಿಬಿ (ADB) ದೇಶದ ಬಲವಾದ ಆಂತರಿಕ ಬೇಡಿಕೆಯನ್ನು ಪ್ರಶಂಸಿಸಿದೆ.

ಮೂಡೀಸ್ ನೀಡಿದ ಪ್ರಮುಖ ರೇಟಿಂಗ್ ವಿವರಗಳು

ಜಾಗತಿಕ ರೇಟಿಂಗ್ ಸಂಸ್ಥೆಯಾದ ಮೂಡೀಸ್, ಭಾರತದ ದೀರ್ಘಾವಧಿಯ ಸ್ಥಳೀಯ ಮತ್ತು ವಿದೇಶಿ ಕರೆನ್ಸಿ ವಿತರಕರ ರೇಟಿಂಗ್ ಅನ್ನು ‘Baa3’ ಮಟ್ಟದಲ್ಲಿ ಕಾಯ್ದುಕೊಂಡಿದೆ. ಆದರೆ, ದೇಶದ ಆರ್ಥಿಕ ಮುನ್ನೋಟವನ್ನು (Outlook) ‘ಸ್ಥಿರ’ (Stable) ಇಂದ ‘ಧನಾತ್ಮಕ’ (Positive) ಮಟ್ಟಕ್ಕೆ ಏರಿಸಿದೆ.

ಇದನ್ನೂ ಓದಿ: ಬ್ಯಾಂಕ್​ಗಳಲ್ಲಿ ಕೆಟ್ಟ ಸಾಲಗಳು; ಆರ್​ಬಿಐನಿಂದ ಹೊಸ ನಿಯಮಗಳ ಪ್ರಸ್ತಾಪ; ಏನಿವು ರೂಲ್ಸ್?

ಭಾರತದ ನೈಜ ಜಿಡಿಪಿ (Real GDP) ಪ್ರಗತಿ ದರವು ಮುಂದಿನ ಆರ್ಥಿಕ ವರ್ಷಗಳಲ್ಲಿ ಶೇಕಡಾ 6.5 ರಿಂದ 7 ರಷ್ಟು ಜಿಗಿತ ಕಾಣಲಿದೆ ಎಂದು ಮೂಡೀಸ್ ಅಂದಾಜಿಸಿದೆ.

ಸರ್ಕಾರದ ಮೂಲಸೌಕರ್ಯ ಹೂಡಿಕೆಗಳು, ಸುಧಾರಿತ ಉತ್ಪಾದನಾ ವಲಯ ಮತ್ತು ಬಲಿಷ್ಠ ಡಿಜಿಟಲ್ ಆರ್ಥಿಕತೆಯು ಭಾರತದ ಈ ಸುಸ್ಥಿರ ಬೆಳವಣಿಗೆಗೆ ಮುಖ್ಯ ಕಾರಣಗಳಾಗಿವೆ ಎಂದು ಸಂಸ್ಥೆ ತಿಳಿಸಿದೆ.

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಹೇಳಿದ್ದೇನು?

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ತನ್ನ ಇತ್ತೀಚಿನ ಆರ್ಥಿಕ ವರದಿಯಲ್ಲಿ ಭಾರತದ ಬೆಳವಣಿಗೆಯ ವೇಗವನ್ನು ಶ್ಲಾಘಿಸಿದೆ. ಏಷ್ಯಾದ ಇತರ ಉದಯೋನ್ಮುಖ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತದ ಪ್ರಗತಿ ಅತ್ಯಂತ ವೇಗವಾಗಿದೆ ಎಂದು ಎಡಿಬಿ ಹೇಳಿದೆ.

ಬಲಿಷ್ಠ ದೇಶೀಯ ಬೇಡಿಕೆ: ಭಾರತದಲ್ಲಿ ಗ್ರಾಹಕರ ಬಳಕೆ ಮತ್ತು ಹೂಡಿಕೆಯ ಪ್ರಮಾಣ (Domestic Demand) ಸತತವಾಗಿ ಹೆಚ್ಚುತ್ತಿರುವುದು ಆರ್ಥಿಕತೆಗೆ ದೊಡ್ಡ ಇಂಧನವಾಗಿದೆ.

ಉತ್ಪಾದನಾ ವಲಯದ ಕ್ರಾಂತಿ: ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಮತ್ತು ಪಿಎಲ್‌ಐ (PLI) ಯೋಜನೆಗಳ ಕಾರಣದಿಂದಾಗಿ ಉತ್ಪಾದನೆ ಮತ್ತು ರಫ್ತು ವಲಯಗಳು ದೇಶದ ಜಿಡಿಪಿಗೆ ದೊಡ್ಡ ಕೊಡುಗೆ ನೀಡುತ್ತಿವೆ ಎಂದು ಎಡಿಬಿ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕಾಗ್ನಿಜೆಂಟ್​ನಲ್ಲಿ 15,000 ಮಂದಿ ಲೇ ಆಫ್ ಸಾಧ್ಯತೆ; ಫ್ರೆಷ್​ವರ್ಕ್ಸ್​ನಲ್ಲಿ ಶೇ. 11 ಮಂದಿಗೆ ಕಾದಿದೆ ಶಾಕ್

ಸುಧಾರಿಸುತ್ತಿರುವ ಬ್ಯಾಂಕಿಂಗ್ ಮತ್ತು ವಿತ್ತೀಯ ನೀತಿ

ಭಾರತದ ಬ್ಯಾಂಕಿಂಗ್ ವ್ಯವಸ್ಥೆಯು ಕಳೆದ ಕೆಲವು ವರ್ಷಗಳಲ್ಲಿ ಅತ್ಯಂತ ಸುರಕ್ಷಿತ ಮತ್ತು ಲಾಭದಾಯಕ ಹಂತಕ್ಕೆ ತಲುಪಿದೆ ಎಂದು ಮೂಡೀಸ್ ಒತ್ತಿಹೇಳಿದೆ. ಬ್ಯಾಂಕುಗಳ ಬ್ಯಾಲೆನ್ಸ್ ಶೀಟ್‌ಗಳು ಸುಧಾರಿಸಿದ್ದು, ಕೈಗಾರಿಕಾ ವಲಯಕ್ಕೆ ಸಾಲದ ಹರಿವು ಹೆಚ್ಚಾಗಿದೆ. ಇದರೊಂದಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಣದುಬ್ಬರವನ್ನು (Inflation) ಯಶಸ್ವಿಯಾಗಿ ನಿಯಂತ್ರಣದಲ್ಲಿಟ್ಟಿರುವುದು ದೇಶದ ಒಟ್ಟಾರೆ ಆರ್ಥಿಕ ಭದ್ರತೆಗೆ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.

ಜಾಗತಿಕ ಹೂಡಿಕೆಗೆ ಭಾರತವೇ ಮೊದಲ ಆದ್ಯತೆ

ಜಾಗತಿಕ ಪೂರೈಕೆ ಸರಪಳಿಯಲ್ಲಿ (Global Supply Chain) ಜಗತ್ತಿನ ದೊಡ್ಡ ಕಂಪನಿಗಳು ಈಗ ‘ಚೀನಾ ಪ್ಲಸ್ ಒನ್’ (China + 1) ತಂತ್ರವನ್ನು ಅಳವಡಿಸಿಕೊಳ್ಳುತ್ತಿದ್ದು, ಅದಕ್ಕೆ ಭಾರತವೇ ಅತ್ಯಂತ ಸೂಕ್ತ ಹಾಗೂ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿದೆ. ಈ ಜಾಗತಿಕ ಹೂಡಿಕೆಯು ಭಾರತದ ಸುದೀರ್ಘ ಬೆಳವಣಿಗೆಗೆ ದಾರಿಯಾಗಲಿದೆ ಎಂದು ಈ ಹಣಕಾಸು ಸಂಸ್ಥೆಗಳು ಭವಿಷ್ಯ ನುಡಿದಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Multiple Vehicle Pile Up Near Dabaspet on Bengaluru–Tumakuru Highway; Two Critical, Over 10 Injured

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ: ಸಿಡಿದೆದ್ದೆ ಕರವೇ – Kannada News | Railway Department not allowing Kannada in Railway Promotion Exam: Karnataka Rakshana Vedike sparks

ಬೆಂಗಳೂರು, ಮೇ 06: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಹೊರಡಿಸಿರುವ ಎಲ್​ಡಿಸಿಇ ಪ್ರಮೋಷನ್ ಪರೀಕ್ಷೆಗಳ ಅಧಿಸೂಚನೆಯಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ನೋಟಿಫಿಕೇಶನ್​​ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಅಂದರೆ, ರಾಜ್ಯಾದ್ಯಂತ ರೈಲುಗಳನ್ನು ಸಂಚಾರ ‌ಮಾಡಲು ಬಿಡುವುದಿಲ್ಲ. ರಾಜ್ಯದ ಎಲ್ಲಾ ರೈಲ್ವೆ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಈ ವಿಚಾರವನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್! – Kannada News | Mysuru city corporation introduced New Plan For control People Peeing In Public Places

ಮೈಸೂರು, (ಮೇ 06): ಸಿಕ್ಕ ಸಿಕ್ಕ ಗೋಡೆ ಮೇಲೆ ಸೂಸು ಮಾಡೋರಿಗೆ ಬುದ್ದಿಕಲಿಸಲು ಮೈಸೂರಿನ (mysuru) ಸಬರ್ಬ್ ಬಸ್ ಸ್ಟ್ಯಾಂಡ್ ಬಳಿ ಈ ರೀತಿಯ ಮಿರರ್ ಅನ್ನು ಕಾಂಪೌಂಡ್ ಗೆ ಅಳವಡಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ ಗೆ ಕನ್ನಡಿ ಮಾದರಿ ರಿಫ್ಲೆಕ್ಷನ್ ಅಳವಡಿಕೆ ಮಾಡಲಾಗಿದೆ. ಈ ಮೂಲಕ ಖಾಲಿ ಕಾಂಪೌಂಡ್ ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಬ್ರೇಕ್‌ಗೆ ಹಾಕಲು ಪಾಲಿಕೆ (mysuru city corporation)  ಈ ಹೊಸ ಐಡಿಯಾ ಮಾಡಿದೆ. 80 ಮೀಟರ್ ಕಾಂಪೌಂಡ್ ಗೆ ಸ್ಟೇನ್ ಲೆಸ್ ಸ್ಟೀಲ್ ರಿಫ್ಲಕ್ಷನ್ ಅಳವಡಿಕೆ ಮಾಡಲಾಗಿದ್ದು, ಸ್ಟೇನ್ ಲೆಸ್ ಸ್ಟೀಲ್ ಮೂಲಕ ಕನ್ನಡಿ‌ ಮಾದರಿ ಪ್ರತಿಬಿಂಬ ಕಾಣುವಂತೆ ಹಾಕಲಾಗಿದೆ. ಅದರ‌ ಮುಂದೆ ನಿಂತರೆ ಸಂಪೂರ್ಣ ಚಿತ್ರಣ ಹಿಂಬದಿಯವರಿಗೆ ಕಾಣುತ್ತದೆ. ರಾತ್ರಿ ವೇಳೆ ಸ್ಟ್ರೀಟ್ ಲೈಟ್ ಆನ್ ಆಗುತ್ತಿದಂತೆ ಬಲ್ಬ್ ಕೂಡ ಆನ್ ಆಗುತ್ತದೆ. ಸುಮಾರು 9.5 ಲಕ್ಷ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಸದ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನಲ್ಲೇ ಈ ಯೋಜನೆಗೊಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗರ್ವನರ್‌! – Kannada News | Tamil Nadu Governor Not Convinced Vijay’s TVK Has Majority, Oath Unlikely Tomorrow

ಚೆನ್ನೈ, (ಮೇ 06): ತಮಿಳುನಾಡು (Tamil Nadu) ವಿಧಾನಸಭೆಯಲ್ಲಿ ದಳಪತಿ ವಿಜಯ್ (Vijay) ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದರು. ಇನ್ನೊಂದೆಡೆ ನಾಳೆಯೇ (ಮೇ 07) ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಸಕಲ ಸಿದ್ಧತೆಗಳನ್ನ ಕೈಗೊಂಡಿದ್ದರು. ಇದಕ್ಕೆ ನೆಹರು ಕ್ರೀಡಾಂಗಣದಲ್ಲಿ (Jawaharlal Nehru Stadium) ಭರ್ಜರಿ ಸಿದ್ಧತೆಗಳು ನಡೆದಿವೆ.

ಆದ್ರೆ, ವಿಜಯ್ ನೀಡಿರುವ ನಂಬರ್ (ಬಹುಮತಕ್ಕೆ ಬೇಕಾದ ಸಂಖ್ಯೆ)​​ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತೃಪ್ತರಾಗಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅನುಮತಿ ಕೊಟ್ಟಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆ ವಿಜಯ್ ಪ್ರಮಾಣ ವಚನ ಕನಸು ನುಚ್ಚು ನೂರಾಗಿದೆ.

ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್

Source link

Exit mobile version