Headlines

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ – Kannada News | Why This AI Startup Is Making Headlines for Banning Shoes at Work

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್​​ಅಪ್ ಕಂಪನಿ(Company) ಕರ್ಸರ್​ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು ಯಾಕೆ ಜಾರಿಗೆ ತಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು ಅದಕ್ಕೆ ಇಲ್ಲಿದೆ ಉತ್ತರ. ಕಂಪನಿಯ ಸಿಬ್ಬಂದಿ ಹಾಗೂ ಕಚೇರಿಗೆ ಬರುವ ಅತಿಥಿಗಳು ಯಾರೇ ಅಗಿರಲಿ, ಶೂ ಧರಿಸಿ ಒಳಗೆ ಹೋಗುವಂತಿಲ್ಲ, ಕಚೇರಿ ಹೊರಗೆ ಶೂ ತೆಗೆದಿಡಬೇಕು. ಕಚೇರಿಯ ಒಳಗೆ ಸಾಕ್ಸ್ ಅಥವಾ ಒಳಗೆ ಇಟ್ಟಿರುವ…

Read More

ಅಮರಾವತಿ ಲೈಂಗಿಕ ಹಗರಣದ ಆರೋಪಿಯನ್ನು ಎಳೆದುಕೊಂಡು ನಗರದ ರಸ್ತೆಗಳಲ್ಲಿ ಮೆರವಣಿಗೆ – Kannada News | Amravati scandal case main accused Ayan Ahmed Tanveer paraded across the city

ಅಮರಾವತಿ, ಏಪ್ರಿಲ್ 22: ಮಹಾರಾಷ್ಟ್ರದ ಅಮರಾವತಿ ಲೈಂಗಿಕ ಹಗರಣ ಪ್ರಕರಣದಲ್ಲಿ ಪೊಲೀಸರು ಇಂದು ಈ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ರಸ್ತೆಗಳಲ್ಲಿ ಎಳೆದುಕೊಂಡು ಹೋಗಿ ಮೆರವಣಿಗೆ ಮಾಡಿದ್ದಾರೆ. ಜನರಿಗೆ ಆ ಆರೋಪಿ ಯಾರೆಂದು ಗೊತ್ತಾಗಬೇಕೆಂದು ಆತನನ್ನು ಸಾರ್ವಜನಿಕರ ಮುಂದೆ ಪರೇಡ್ ಮಾಡಲಾಗಿದೆ. ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್‌ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್‌ಗಳನ್ನು…

Read More

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆಶಿ ಖರೀದಿಸಿದ ಐಷಾರಾಮಿ ಕಾರಿನ ವಿಶೇಷತೆ ಏನು? – Kannada News | DCM dk shivakumar purchased lexus lm 350h Car, here Is Price And features details

ಬೆಂಗಳೂರು, (ಫೆಬ್ರವರಿ 11): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಮನೆಗೆ ಹೊಸ ಸದಸ್ಯರ ಆಗಮನವಾಗಿದೆ. ಅರ್ಥಾತ್‌ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಲೆಕ್ಸಾಸ್ ಕಂಪನಿಯ ಹೊಸ ಐಷಾರಾಮಿ ಕಾರು ಖರೀದಿಸಿದ್ದು, ಡಿಕೆ ಶಿವಕುಮಾರ್, ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿರುವಾಗಲೇ ಇತ್ತ ಎರಡು ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಬಂದಿದೆ. ಹೌದು..ಲೆಕ್ಸಾಸ್ ಕಂಪನಿಯ ಶೋರೂಮ್ ಸಿಬ್ಬಂದಿಯೇ ಇಂದು (ಫೆಬ್ರವರಿ 11) ಕಾರನ್ನು ಹೋಮ್ ಡೆಲಿವರಿ…

Read More

ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ – Kannada News | This is why Darshan did not act in Bheema Theeradalli movie

ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ ಮಾಡಿದ್ದರು. ಅವರ ಜೊತೆ ದರ್ಶನ್ ಆಪ್ತವಾಗಿದ್ದರೂ ಕೂಡ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಹಾಗಾದ್ರೆ, ದರ್ಶನ್ (Darshan) ಜೊತೆ ಈ ಸಿನಿಮಾವನ್ನು ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಮತ್ತು ಅಣಜಿ ನಾಗರಾಜ್ ಅವರು ಉತ್ತರಿಸಿದ್ದಾರೆ. ‘ಈ ಕತೆಯನ್ನು ತಂದಿದ್ದೇ ದುನಿಯಾ ವಿಜಯ್. ಪಾತ್ರಕ್ಕಾಗಿ ವಿಜಯ್ ಅವರು ಅದಾಗಲೇ ಡ್ರೆಸ್…

Read More

ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ – Kannada News | Gilli’s Popularity Exploited? Chandrachud Condemns “Drama” in His Name

ಯಾರಾದರೂ ಒಬ್ಬರು ಹೆಸರು ಮಾಡುತ್ತಿದ್ದಾರೆ ಎಂದರೆ ಅದರ ಲಾಭ ಪಡೆಯಲು ಕೆಲವರು ಮುಂದಾಗುತ್ತಾರೆ. ಅವರ ಜನಪ್ರಿಯತೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ನಡೆಯುತ್ತದೆ. ಗಿಲ್ಲಿ ವಿಷಯದಲ್ಲಿ ಹೀಗೆಯೇ ಆಗುತ್ತಿದೆ ಎಂದು ಸುದೀಪ್ (Sudeep) ಆಪ್ತ, ಬಿಗ್ ಬಾಸ್ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಹಾರೈಸಿರೋ ಅವರು, ಗಿಲ್ಲಿ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟವನ್ನು ಖಂಡಿಸಿದ್ದಾರೆ. ಇದೇ ಮೊದಲ ಬಾರಿಗೆ ತಮ್ಮದೇ ಯೂಟ್ಯೂಬ್ ಚಾನೆಲ್ ಪಾಡ್​​ಕಾಸ್ಟ್​​ನಲ್ಲಿ ಚಕ್ರವರ್ತಿ ಮಾತನಾಡಿದ್ದಾರೆ. ‘ಕಾಲಾಪತ್ಥರ್ ಸಿನಿಮಾದಲ್ಲಿ ಗಿಲ್ಲಿ ನನ್ನ ಜೊತೆ…

Read More

ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ – Kannada News | Bengalurus Footpath Clearance Drive Continues: Street Vendors Protest in RT Nagar

ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ…

Read More

‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿಯ (Rakshit Shetty) ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ (ಮಾರ್ಚ್ 28) ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ ಎಂದಿದ್ದಾರೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ. ‘ಉಳಿದವರು ಕಂಡಂತೆ’…

Read More

ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ – Kannada News | Jailer Siddaramappa Dies In Dharwad, Wife alleges On DGP Alok Kumar

ಧಾರವಾಡ, (ಜೂನ್ 12): ಅಮಾನತುಗೊಂಡು ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆಗೊಂಡಿದ್ದ ಜೈಲರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಕಾರಾಗೃಹದ ಕ್ವಾರ್ಟರ್ಸ್​ ನಲ್ಲಿ ನಡೆದಿದೆ. ಸಿದ್ದರಾಮಪ್ಪ ವಡ್ಡರ್(37) ಆತ್ಮಹತ್ಯೆ ಮಾಡಿಕೊಂಡ ಜೈಲರ್. ಕರ್ತವ್ಯಲೋಪ ಹಿನ್ನೆಲೆಯಲ್ಲಿ 2 ತಿಂಗಳ ಹಿಂದೆ ಸಿದ್ದರಾಮಪ್ಪನನ್ನು ಅಮಾನತ್ತು ಮಾಡಲಾಗಿತ್​ತು. ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಸಹ ಮೈಸೂರಿನಲ್ಲಿ ವರದಿ ಮಾಡಿಕೊಂಡಿರಲಿಲ್ಲ. ಬದಲಿಗೆ ನೇಣಿಗೆ ಶರಣಾಗಿದ್ದಾನೆ. ಇನ್ನು ಈ ಆತ್ಮಹತ್ಯೆಗೆ ಕಾರಗೃಹ ಡಿಜಿಪಿ ಅಲೋಕ್ ಕುಮಾರ್ ಕಾರಣ…

Read More

ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!

ಬೀದರ್, ಜೂನ್ 6: ನ್ಯಾಯಾಲಯದ ಆದೇಶವಾಗಿದ್ದರೂ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಿಗದಿತ ಪರಿಹಾರ ಮೊತ್ತ ನೀಡಲು ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಬೀದರ್ ನ್ಯಾಯಾಲಯ ಭಾರಿ ಶಾಕ್ ನೀಡಿದೆ. ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಸಂಸ್ಥೆಗೆ ಸೇರಿದ ಬಸ್ಸನ್ನೇ ಜಪ್ತಿ ಮಾಡಲಾಗಿದೆ. 2021 ರ ಆಗಸ್ಟ್ 15 ರಂದು ಭಾಲ್ಕಿ ತಾಲೂಕಿನ ಟೆಕ್ನಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ರೇಖಾ ಸುನೀಲ್ (35)…

Read More