ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್ – Kannada News | Donald Trump says tariffs paid by foreign countries will ease IT burden of Americans

ವಾಷಿಂಗ್ಟನ್, ಫೆಬ್ರುವರಿ 25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ಯಾರಿಫ್ ಕ್ರಮವನ್ನು ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಅಲ್ಲಗಳೆಯುವುದನ್ನು ಮುಂದುವರಿಸಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅವರು, ಕೋರ್ಟ್ ತೀರ್ಪು ಬಹಳ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅಮೆರಿಕವನ್ನು ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅಮೆರಿಕದ ಜೊತೆ ಮಾಡಿಕೊಂಡಿರುವ ಒಪ್ಪಂದಗಳಿಂದ ಸಂತುಷ್ಟಗೊಂಡಿವೆ ಎಂದು ಟ್ರಂಪ್ ಹಂಗಿಸಿದ್ದಾರೆ.

‘ನಮ್ಮನ್ನು ಹೀನಾಯವಾಗಿ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರು ಖುಷಿಯಾಗಿದ್ದಾರೆ. ನಾವೂ ಖುಷಿಯಾಗಿದ್ದೇವೆ. ಡೆಮಾಕ್ರಾಟ್​ನವರು ಇದಕ್ಕೆ ಒಪ್ಪದಿದ್ದರೂ ಅವರಿಗೆ ಗೊತ್ತಿದೆ. ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ. ಖುಷಿ ಸುದ್ದಿ ಏನೆಂದರೆ, ಅಮೆರಿಕದ ಜೊತೆ ಒಪ್ಪಂದ ಮಾಡಿಕೊಂಡಿರುವ ದೇಶಗಳೆಲ್ಲವೂ ಅದನ್ನು ಮುಂದುವರಿಸಲು ಬಯಸುತ್ತಿವೆ,’ ಎಂದು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

ಟ್ಯಾರಿಫ್​ಗಳಿಂದ ಇನ್ಕಮ್ ಟ್ಯಾಕ್ಸ್ ಹೊರೆ ಇಳಿಯುತ್ತೆ ಎಂದ ಟ್ರಂಪ್

ಟ್ಯಾರಿಫ್ ವಿಧಿಸುವ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ಇದರಿಂದ ಅಮೆರಿಕನ್ ಪ್ರಜೆಗಳಿಗೆ ಆದಾಯ ತೆರಿಗೆ ಹೊರೆ ಕಡಿಮೆ ಆಗುತ್ತೆ ಎಂದಿದ್ದಾರೆ.

‘ಕಾಲ ಕಳೆದಂತೆ ವಿದೇಶಗಳಿಂದ ಪಾವತಿಸಲಾಗುವ ಟ್ಯಾರಿಫ್​ಗಳು ಆಧುನಿಕ ಆದಾಯ ತೆರಿಗೆ ಸಿಸ್ಟಂ ಅನ್ನು ಭರಿಸಬಲ್ಲುವು. ನಾನು ಪ್ರೀತಿಸುವ ಜನರಿಗೆ ಹಣದ ಹೊರೆಯನ್ನು ಇಳಿಸಬಲ್ಲುವು’ ಎಂದು ತಿಳಿಸಿದ ಡೊನಾಲ್ಡ್ ಟ್ರಂಪ್, ವಿದೇಶಗಳು ಅಮೆರಿಕನ್ನರ ಆದಾಯ ತೆರಿಗೆ ಪಾವತಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ?

ಡೆಮಾಕ್ರಾಟ್​ಗಳ ವಿರುದ್ಧ ಟ್ರಂಪ್ ಟೀಕೆ

‘ಡೆಮಾಕ್ರಾಟ್​ಗಳು ಕೊಲೆಗಡುಕರನ್ನು ನಮ್ಮ ದೇಶದೊಳಗೆ ಬಿಟ್ಟುಕೊಂಡರು. ಅವರ ನೀತಿಗಳು ಬೆಲೆ ಏರಿಕೆಗೆ ಕಾರಣವಾದರೆ, ನಮ್ಮ ನೀತಿಗಳು ಬೆಲೆ ತಗ್ಗಿಸುತ್ತಿವೆ. ಮೊಟ್ಟೆ ಬೆಲೆ ಶೇ. 60 ಇಳಿಕೆ ಆಗಿದೆ. ಹೋಟೆಲ್, ಬಾಡಿಗೆ, ಆಟೊಮೊಬೈಲ್, ಬೀಫ್ ಬೆಲೆಗಳು ಸಾಕಷ್ಟು ಕಡಿಮೆ ಆಗಿವೆ. ವಿದ್ಯುತ್ ಬೆಲೆ ತಗ್ಗುತ್ತಿದೆ. ಮತ್ತೊಂದು ದೊಡ್ಡ ಟ್ಯಾಕ್ಸ್ ಕಡಿತದಂತಾಗಿದೆ’ ಎಂದು ಟ್ರಂಪ್ ತಿಳಿಸಿದ್ದಾರೆ.

‘ನನಗೆ ಮೊದಲು ಅಮೆರಿಕ. ನಾವು ಪ್ರೀತಿಸೋದು ಅಮೆರಿಕವನ್ನು. ಬೈಡನ್ ಹಾಗೂ ಅವರ ಭ್ರಷ್ಟ ಜೊತೆಗಾರರ ಅಡಿಯಲ್ಲಿ ಅಮೆರಿಕ ಮುರಿದುಬೀಳುವ ಹಂತಕ್ಕೆ ಹೋಗಿತ್ತು’ ಎಂದು ಟ್ರಂಪ್ ಸಿಡಿಗುಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ – Kannada News | Animal Sacrifice Banned at Davanagere Durgambika Jatre; DC and SP Camp Overnight to Ensure Strict Enforcement

ದಾವಣಗೆರೆ, ಫೆಬ್ರವರಿ 25: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ. ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು ಅತ್ಯಂತ ಭಕ್ತಿಪರವಶರಾಗಿ, ಮೂಢನಂಬಿಕೆಗಳಿಂದ ದೂರವಾಗಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಡಿಸಿ ಹಾಗೂ ಎಸ್​​ಪಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ-ಪಾಕಿಸ್ತಾನ ಯುದ್ಧ ನಾನು ನಿಲ್ಲಿಸದಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಾಯ್ತಿದ್ರು ಎಂದ ಟ್ರಂಪ್ – Kannada News | Did Trump Credit US for Saving Pakistan PM, Social Media Reacts

ವಾಷಿಂಗ್ಟನ್, ಫೆಬ್ರವರಿ 25: ನಾನು ಮಧ್ಯಪ್ರವೇಶಿಸಿ ಭಾರತ-ಪಾಕಿಸ್ತಾನ ಯುದ್ಧವನ್ನು ತಡೆಯದಿದ್ದರೆ ಅಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್​​ ಸಾಯುತ್ತಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದ ಸಮಯದಲ್ಲಿ ಈ ವಿಷಯದ ಕುರಿತು ಮಾತನಾಡಿದ್ದಾರೆ. ಎರಡೂ ದೇಶಗಳ ಸ್ಥಿತಿ ಎಷ್ಟು ಹದಗೆಟ್ಟಿತ್ತೆಂದರೆ ಅದು ಪರಮಾಣು ಯುದ್ಧಕ್ಕೆ ಕಾರಣವಾಗುತ್ತಿತ್ತು.

ಇದರಿಂದ ಸುಮಾರು 35 ಮಿಲಿಯನ್ ಜನರು ಪ್ರಾಣ ಕಳೆದುಕೊಳ್ಳಬಹುದಿತ್ತು ಮತ್ತು ಪಾಕಿಸ್ತಾನದ ಪ್ರಧಾನಿ ಕೂಡ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಟ್ರಂಪ್ ತಮ್ಮನ್ನು ಹೀರೋ ಎಂದು ಬಿಂಬಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ.

ಕಳೆದ ಕೆಲವು ತಿಂಗಳುಗಳಿಂದ ತಮ್ಮ ಆಡಳಿತವು ಎರಡು ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಲು ವ್ಯಾಪಾರ ಒಪ್ಪಂದಗಳು ಸುಂಕದ ಒತ್ತಡವ್ನು ಬಳಸಿಕೊಂಡಿದ್ದಾರೆ. ಆದರೂ ಭಾರತ-ಪಾಕ್ ನಡುವೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ನಡೆದಿಲ್ಲ ಎಂದು ಭಾರತ ಈ ಹಿಂದೆ ಸ್ಪಷ್ಟಪಡಿಸಿದೆ.
ಮೇ 2025ರಲ್ಲಿ 26 ಜನರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಪ್ರತಿದಾಳಿ ನಡೆಸಿತು.

ಮತ್ತಷ್ಟು ಓದಿ: ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಆಪರೇಷನ್ ಸಿಂಧೂರ್ ಅಡಿಯಲ್ಲಿ, ಭಾರತ ನಿಯಂತ್ರಣ ರೇಖೆಯಾದ್ಯಂತ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿತ್ತು. ನಂತರ ಪಾಕಿಸ್ತಾನ ಡ್ರೋನ್ ಮತ್ತು ಯುಸಿಎವಿ ದಾಳಿಗಳನ್ನು ಪ್ರಯತ್ನಿಸಿತು. ಆದರೆ ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆಗಳು ವಿಫಲಗೊಳಿಸಿದವು. ಸೇನೆ, ವಾಯುಪಡೆ ಮತ್ತು ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿ, ಪಾಕಿಸ್ತಾನವನ್ನು ತೀವ್ರವಾಗಿ ಸೋಲಿಸಿದವು.ಇದರ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಯಿತು ಮತ್ತು ಜಾಗತಿಕ ಕಳವಳ ಕೂಡ ಉಂಟಾಯಿತು.

ಭಾರತದ ನಿಲುವೇನು?
ಭಾರತ-ಪಾಕಿಸ್ತಾನ ಸಂಘರ್ಷವನ್ನು ನಿಲ್ಲಿಸುವಲ್ಲಿ ಯಾವುದೇ ಮೂರನೇ ರಾಷ್ಟ್ರದ ಪಾತ್ರವಿಲ್ಲ ಎಂದು ಭಾರತ ನಿರಂತರವಾಗಿ ಸಮರ್ಥಿಸಿಕೊಂಡಿದೆ. ಭಾರತದ ಪ್ರಕಾರ, ಅಮೆರಿಕದ ಒತ್ತಡದಿಂದಾಗಿ ಅಲ್ಲ, ಎರಡೂ ದೇಶಗಳ ನಡುವಿನ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮಟ್ಟದಲ್ಲಿ ನಡೆದ ಮಾತುಕತೆ ನಂತರ ಮಿಲಿಟರಿ ಕ್ರಮವನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯ ಮತ್ತು ಯಾವುದೇ ಹೊರಗಿನ ಮಧ್ಯಸ್ಥಿಕೆಯನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ತಮ್ಮ ಭಾಷಣದಲ್ಲಿ ಟ್ರಂಪ್ ತಮ್ಮ ಆಡಳಿತವು ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಇರಾನ್ ಬಗ್ಗೆ ಹೇಳುವುದಾದರೆ ಅವರು ರಾಜತಾಂತ್ರಿಕಪರಿಹಾರವನ್ನು ಬಯಸುತ್ತಾರೆ, ಆದರೆ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿ ಮಾಧ್ಯಮದವರು ರಶ್ಮಿಕಾರ ಮದುವೆ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಬೈ ಹೇಳಿ ಹೊರಟಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ.

ವಾಸ್ತು ಶಾಸ್ತ್ರದ ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳಿದ್ದರೆ ಅಥವಾ ಕೆಲವು ಸ್ಥಿತಿಗಳಿದ್ದರೆ ಅದು ಬಡತನ, ಆಲಸ್ಯ ಮತ್ತು ನಕಾರಾತ್ಮಕ ಆಲೋಚನೆಗಳಿಗೆ ಕಾರಣವಾಗುತ್ತದೆ. ಅಡಿಗೆಮನೆಯನ್ನು ಸಾಮಾನ್ಯವಾಗಿ ಆಗ್ನೇಯ (ಸೌತ್ ಈಸ್ಟ್) ದಿಕ್ಕಿನಲ್ಲಿ ನಿರ್ಮಿಸಲು ಆದ್ಯತೆ ನೀಡಲಾಗುತ್ತದೆ, ನಂತರ ವಾಯುವ್ಯ (ನಾರ್ತ್ ವೆಸ್ಟ್) ದಿಕ್ಕನ್ನು ಆಯ್ಕೆ ಮಾಡಲಾಗುತ್ತದೆ. ಅಡುಗೆ ಮಾಡುವಾಗ ಸೂರ್ಯನ ಕಡೆ ಮುಖ ಮಾಡುವುದು ಶುಭ ಎಂದು ಪರಿಗಣಿಸಲಾಗುತ್ತದೆ.

ಅಡಿಗೆಮನೆಯಲ್ಲಿ ಗಮನಹರಿಸಬೇಕಾದ ನಾಲ್ಕು ಪ್ರಮುಖ ಅಂಶಗಳು ಇಲ್ಲಿವೆ:

ಉಳಿದ ಅಥವಾ ಹಾಳಾದ ಆಹಾರ:

ಅಡುಗೆ ಮಾಡಿದ ಆಹಾರವನ್ನು ಎಲ್ಲರೂ ಸೇವಿಸಿದ ನಂತರ, ಉಳಿದ ಆಹಾರವನ್ನು ಅತಿಯಾಗಿ ಕಾಯಿಸಬಾರದು ಅಥವಾ ಹಾಳಾಗಲು ಬಿಡಬಾರದು. ಆಹಾರ ಹಾಳಾಗಲು ಬಿಟ್ಟರೆ ಅದು ಮನೆಯಲ್ಲಿ ದಾರಿದ್ರ್ಯವನ್ನು ಹೆಚ್ಚಿಸುತ್ತದೆ. ಉಳಿದ ಒಳ್ಳೆಯ ಆಹಾರವನ್ನು ಪ್ರಾಣಿ-ಪಕ್ಷಿಗಳಿಗೆ ನೀಡಬಹುದು ಅಥವಾ ಹಸಿದವರಿಗೆ ಹಂಚಬಹುದು. ಆಹಾರ ಹಾಳಾಗಲು ಬಿಡುವುದು ಎಂದಿಗೂ ಒಳ್ಳೆಯದಲ್ಲ. ಇದು ಶ್ರೀಮಂತರು ಮತ್ತು ಬಡವರು ಎಲ್ಲರಿಗೂ ಅನ್ವಯಿಸುತ್ತದೆ

ಮುರಿದ ಪಾತ್ರೆಗಳು:

ಅಡಿಗೆಮನೆಯಲ್ಲಿ ಮುರಿದ ಅಥವಾ ಒಡೆದ ಪಾತ್ರೆಗಳನ್ನು ಇಡಬಾರದು ಅಥವಾ ಬಳಸಬಾರದು. ತೂತಾದ, ಕೆಟ್ಟಿರುವ ಅಥವಾ ಒಡೆದ ಪಾತ್ರೆಗಳನ್ನು ಇಟ್ಟುಕೊಂಡರೆ ಮನೆಯಲ್ಲಿ ಖರ್ಚು ಜಾಸ್ತಿಯಾಗುತ್ತದೆ ಮತ್ತು ಹಣ ಎಲ್ಲಿ ಹೋಗುತ್ತಿದೆ ಎಂದು ತಿಳಿಯುವುದಿಲ್ಲ. ಮುರಿದ ಪಾತ್ರೆಗಳು ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತವೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಸಿಂಕ್‌ನಲ್ಲಿ ಉಳಿದ ಆಹಾರದೊಂದಿಗೆ ಪಾತ್ರೆಗಳು:

ಸಿಂಕ್‌ನಲ್ಲಿ ಆಹಾರ ಪದಾರ್ಥಗಳೊಂದಿಗೆ ಪಾತ್ರೆಗಳನ್ನು ಹೆಚ್ಚು ಹೊತ್ತು ಇಡಬಾರದು. ಊಟ ಮಾಡಿದ ತಟ್ಟೆ ಅಥವಾ ಇತರ ಪಾತ್ರೆಗಳಲ್ಲಿ ಉಳಿದಿರುವ ಆಹಾರವನ್ನು ಕೂಡಲೇ ವಿಲೇವಾರಿ ಮಾಡಬೇಕು. ಆಹಾರದ ಅವಶೇಷಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಪ್ರಾಣಿಗಳಿಗೆ ಅಥವಾ ಪಕ್ಷಿಗಳಿಗೆ ಹಾಕಬೇಕು. ಸಿಂಕ್‌ನಲ್ಲಿ ಆಹಾರ ಪದಾರ್ಥಗಳು ಹಾಗೆಯೇ ಉಳಿದಿದ್ದರೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದು ಮನೆಯಲ್ಲಿ ಗಂಡ-ಹೆಂಡತಿಯ ನಡುವೆ ಕಲಹಗಳಿಗೆ ಸಹ ಕಾರಣವಾಗಬಹುದು.

ಅಡಿಗೆಮನೆಯಲ್ಲಿ ಕಸ:

ಅಡಿಗೆಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಡಬೇಕು. ಈರುಳ್ಳಿ ಸಿಪ್ಪೆ, ಬೆಳ್ಳುಳ್ಳಿ ಸಿಪ್ಪೆ, ತರಕಾರಿ ತುಂಡುಗಳು ಅಥವಾ ಯಾವುದೇ ಕಸವನ್ನು ಅಡಿಗೆಮನೆಯಲ್ಲಿ ಹಾಗೆಯೇ ಬಿಡಬಾರದು. ಕಸವನ್ನು ಸರಿಯಾಗಿ ವಿಲೇವಾರಿ ಮಾಡದಿದ್ದರೆ ಅನಾರೋಗ್ಯ ಕಾಡುತ್ತದೆ. ಅಲ್ಲದೆ, ಇಂತಹ ಅಶುದ್ಧ ಅಡಿಗೆಮನೆಗೆ ಲಕ್ಷ್ಮಿ ದೇವಿಯು ಪ್ರವೇಶಿಸುವುದಿಲ್ಲ. ಸ್ವಚ್ಛತೆ ಇಲ್ಲದ ಅಡಿಗೆಮನೆಯಲ್ಲಿ ತಯಾರಿಸಿದ ಆಹಾರ ಸೇವಿಸಿದವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು ಎಂದು ಗುರೂಜಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you find the hidden dog in this picture\\\

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲು ನೀಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮನೆಯ ಮುದ್ದಿನ ಪ್ರಾಣಿಯನ್ನು ಹುಡುಕಲು ನೀವು ರೆಡಿ ಇದ್ದೀರಾ.

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೋಡಿದಾಗ ನಿಮಗೆ ಭ್ರಮೆ ಉಂಟಾಗಬಹುದು. ಮನೆಯ ಡ್ರಾಯಿಂಗ್ ರೂಮ್‌ನ ನೋಟವನ್ನು ಕಾಣಬಹುದು. ಈ ಕೋಣೆಯಲ್ಲಿ ಹತ್ತು ಹಲವು ವಸ್ತುಗಳು ಇವೆ. ಅದರ ನಡುವೆ ಶ್ವಾನವೊಂದು ಅಡಗಿ ಕುಳಿತಿದೆ. ನೀವು ಕಣ್ಣು ಬಿಟ್ಟು ಈ ರೂಮ್‌ನಲ್ಲಿರುವ ನಾಯಿಯನ್ನು ಹುಡುಕಬೇಕು.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ

ಶ್ವಾನ ನಿಮ್ಮ ಕಣ್ಣಿಗೆ ಬಿದ್ದಿತೇ?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಶ್ವಾನವನ್ನು ಹುಡುಕುವುದು ಹೇಳಿದ್ದಷ್ಟು ಸುಲಭವಲ್ಲ. ನೀವು ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಮುದ್ದಿನ ಶ್ವಾನವು ಎಲ್ಲಿದೆ ಎಂದು ಪತ್ತೆ ಹಚ್ಚಲು ನಿಮಗೆ ಸಾಧ್ಯವಾಗಿಲ್ಲವೇ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು, ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಚಿತ್ರವನ್ನು ಗಮನಿಸಿ. ಏನೇ ಮಾಡಿದ್ರು ಶ್ವಾನವು ನಿಮ್ಮ ಕಣ್ಣಿಗೆ ಕಾಣಿಸಿಲ್ಲ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಶ್ವಾನ ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:27 am, Wed, 25 February 26

Source link

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! – Kannada News | Chikkamagaluru Elephant Menace: Curfew in 12 Villages After Two Deaths

ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !

ಚಿಕ್ಕಮಗಳೂರು, ಫೆಬ್ರವರಿ 25: ತಾಲೂಕಿನಲ್ಲಿ ಕಾಡಾನೆಗಳ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಆಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಾಲೂಕಿನ (Chikkamagaluru) ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ನಾಳೆವರೆಗೆ (ಫೆಬ್ರವರಿ 26)ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.

ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಇಬ್ಬರು ಬಲಿ

ಕೆಲ ದಿನಗಳ ಹಿಂದಷ್ಟೇ ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ನಾಗೇಶ್ ಗೌಡ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ ಬಲಿಯಾಗಿದ್ದರು. ಈ ಘಟನೆ ನಡೆದು ಒಂದು ವಾರದಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಹೊಸಪೇಟೆ ಮೂಲದ ಬೋರಮ್ಮ (34)ಎಂಬ ಕಾರ್ಮಿಕ ಮಹಿಳೆಯೂ ಅಸುನೀಗಿದ್ದರು. ಈ ಘಟನೆಗಳ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಯಶಸ್ವಿಗೊಂಡು ಕಿಲ್ಲರ್ ಸಲಗ ಸೆರೆಯಾಗಿತ್ತು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದ್ದು, ಮುಂದೆ ಈ ರೀತಿಯ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

ಇದನ್ನೂ ಓದಿ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ?

ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ, ವಸ್ತಾರೆ, ಮತ್ತಾವರ, ದಂಬದಹಳ್ಳಿ, ನಲ್ಲೂರು, ಕಾರೇಮನೆ, ಉಕ್ಕುಂದ, ಗಡಬನಹಳ್ಳಿ, ಜೋಳದಾಳು, ಚಿಕ್ಕೊಳಲೆ, ತಳಿಹಳ್ಳ, ಶಿರಗುಂದದಲ್ಲಿ ಜನರ ಸುರಕ್ಷತೆಗಾಗಿ ನಿಷೇಧಾಜ್ಞೆ ಹೊರಡಿಸಲಾಗಿದೆ. ವಿಶೇಷವಾಗಿ ಚಿಕ್ಕೊಳಲೆ ಅರಣ್ಯ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡುಬಿಟ್ಟಿರುವುದು ಪತ್ತೆಯಾಗಿದ್ದು, ಅವುಗಳ ಚಲನವಲನಗಳ ಮೇಲೆ ಅರಣ್ಯ ಇಲಾಖೆ ಹದ್ದಿನಕಣ್ಣು ಇಟ್ಟಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಶ್ವಾನ ದಳದ ಸಹಾಯದಿಂದ ಕಾಡಾನೆಗಳ ಸಂಚಾರದ ದಿಕ್ಕು ಹಾಗೂ ಚಲನೆಗಳನ್ನು ಗಮನಿಸಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅನಾವಶ್ಯಕ ಸಂಚಾರ ಮಾಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳುವವರು ತಾತ್ಕಾಲಿಕವಾಗಿ ತಡೆಯಬೇಕೆಂದು ಸೂಚಿಸಲಾಗಿದೆ. ರಾತ್ರಿ ವೇಳೆ ಮನೆಗಳ ಹೊರಗೆ ಓಡಾಡದಂತೆ ಹಾಗೂ ಗುಂಪುಗಳಲ್ಲಿ ಮಾತ್ರ ಸಂಚರಿಸುವಂತೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ.

ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತೆರಳುತ್ತಿದ್ದಾರೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಸಂಸತ್ತು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಸ್ರೇಲ್ ಸಂಸತ್ತಿನ ಸ್ಪೀಕರ್ ಅಮೀರ್ ಒಹಾನಾ ನೆಸ್ಸೆಟ್‌ನ ಫೋಟೋವನ್ನು ಹಂಚಿಕೊಂಡು, ಇಂದು ರಾತ್ರಿ, ನೆಸ್ಸೆಟ್ ಅನ್ನು ಭಾರತೀಯ ಧ್ವಜದ ಬಣ್ಣಗಳಲ್ಲಿ ಬೆಳಗಿಸಲಾಗುತ್ತದೆ, ಇದು ಪ್ರಧಾನಿ ಮೋದಿಗೆ ನಾವು ಕೊಡುತ್ತಿರುವ ಗೌರವ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯನ್ನು ಇಸ್ರೇಲ್ ಸಂಸತ್ತು, ನೆಸ್ಸೆಟ್‌ನಿಂದ ಹಿಡಿದು ಪ್ರಮುಖ ಪತ್ರಿಕೆಗಳವರೆಗೆ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.

ದಿ ಜೆರುಸಲೇಂ ಪೋಸ್ಟ್​ನಲ್ಲಿ ಹಿಂದಿ ಹಾಗೂ ಹಿಬ್ರೂ ಭಾಷೆಯಲ್ಲಿ ನಮಸ್ತೆ ಎಂದು ತನ್ನ ಮುಖಪುಟದಲ್ಲಿ ನಮಸ್ತೆ ಎಂದು ಬರೆದಿದ್ದು ಎರಡು ಪ್ರಾಚೀನ ರಾಷ್ಟ್ರಗಳು ಹೊಸ ಅಧ್ಯಾಯವನ್ನು ಪ್ರಾರಂಭಿಸಲಿವೆ ಎಂದು ಬರೆಯಲಾಗಿದೆ.

ಮತ್ತಷ್ಟು ಓದಿ: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಮತ್ತು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ.ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ ಮತ್ತು ಭದ್ರತೆ, ಕೃಷಿ, ನೀರು ನಿರ್ವಹಣೆ, ವ್ಯಾಪಾರ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ಅವಕಾಶಗಳ ಕುರಿತು ಚರ್ಚಿಸಲಿದ್ದಾರೆ.

ಭಾರತ ಮತ್ತು ಇಸ್ರೇಲ್ ದೀರ್ಘಕಾಲದಿಂದ ವಿಶ್ವಾಸಾರ್ಹ ಪಾಲುದಾರರಾಗಿದ್ದು, ಹಲವಾರು ಬಿಕ್ಕಟ್ಟುಗಳ ಸಮಯದಲ್ಲಿ ಈ ವಿಶ್ವಾಸವನ್ನು ಸಾಬೀತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಒಪ್ಪಂದವು ಭಾರತ-ಇಸ್ರೇಲ್ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಮಟ್ಟಕ್ಕೆ ಏರಿಸುವ, ಭದ್ರತೆ, ರಕ್ಷಣೆ ಮತ್ತು ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ನೆಸ್ಸೆಟ್ ಹೆಸರು ಎಲ್ಲಿಂದ ಬಂತು?
ನೆಸ್ಸೆಟ್ ಎಂಬುದು ಇಸ್ರೇಲಿ ಸಂಸತ್ತಿನ ಹೆಸರು, ಇದರ ಅರ್ಥ ಸಭೆ, ನೆಸ್ಸೆಟ್ ಒಂದು ಏಕಸಭೆಯ ಶಾಸಕಾಂಗ. ನೆಸ್ಸೆಟ್ ಎಂಬ ಹೆಸರು ಪ್ರಾಚೀನ ಹೀಬ್ರೂ ಪದ ಹಾಗ್ಡೋಲಾದಿಂದ ಬಂದಿದೆ, ಇದರರ್ಥ ಯಹೂದಿ ಸಂಪ್ರದಾಯದಲ್ಲಿ ಮಹಾ ಸಭೆ. ಇದನ್ನು 120 ವಿದ್ವಾಂಸರು, ಚಿಂತಕರು ಮತ್ತು ಪ್ರವಾದಿಗಳ ಸಭೆ ಎಂದು ಪರಿಗಣಿಸಲಾಗಿದೆ.

ಇಸ್ರೇಲಿ ಸಂಸತ್ತು , ನೆಸ್ಸೆಟ್ , ಎಲ್ಲಾ ಕಾನೂನುಗಳನ್ನು ಅಂಗೀಕರಿಸುತ್ತದೆ. ಇದು ಅಧ್ಯಕ್ಷ ಮತ್ತು ಪ್ರಧಾನಿಯ ಆಯ್ಕೆ ಮಾಡುತ್ತದೆ. ಇದು ಸಚಿವ ಸಂಪುಟವನ್ನು ಆಯ್ಕೆ ಮಾಡುತ್ತದೆ ಮತ್ತು ಸರ್ಕಾರದ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಇದು ರಾಜ್ಯ ನಿಯಂತ್ರಕರನ್ನು ಸಹ ಆಯ್ಕೆ ಮಾಡುತ್ತದೆ.

ಭಾರತದಲ್ಲಿ, ಪ್ರಧಾನ ಮಂತ್ರಿಯನ್ನು ಜನರು ಆಯ್ಕೆ ಮಾಡುತ್ತಾರೆ, ಅವರು ಅತಿ ದೊಡ್ಡ ಬಹುಮತದ ಪಕ್ಷದ ನೇತೃತ್ವ ವಹಿಸುತ್ತಾರೆ. ರಾಷ್ಟ್ರಪತಿಯನ್ನು ಸಂಸತ್ತಿನ ಎರಡೂ ಸದನಗಳ ಚುನಾಯಿತ ಪ್ರತಿನಿಧಿಗಳು ಪರೋಕ್ಷ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತಾರೆ.

ಮೆಡಿಟರೇನಿಯನ್ ಸಮುದ್ರ ಮತ್ತು ಡೆಡ್ ಸೀ ನಡುವಿನ ಜೂಡಿಯನ್ ಪರ್ವತಗಳಲ್ಲಿ ನೆಲೆಸಿರುವ ಜೆರುಸಲೆಮ್‌ನ ನೆರೆಹೊರೆಯ ಕಿರ್ಯತ್ ಹಮೆಮ್ಶಾಲಾ ಸ್ಥಳದಲ್ಲಿರುವ ಗಿವತ್ ರಾಮ್‌ನಲ್ಲಿರುವ ಕಟ್ಟಡದಲ್ಲಿ ನೆಸ್ಸೆಟ್ ಇದೆ. ಜನವರಿ 20 ರಂದು ನಡೆದ ಚುನಾವಣೆಗಳ ನಂತರ, ಮೊದಲ ನೆಸ್ಸೆಟ್ ಫೆಬ್ರವರಿ 14, 1948 ರಂದು ಸಭೆ ಸೇರಿತು. 2017 ರಲ್ಲಿ ಐತಿಹಾಸಿಕ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್‌ಗೆ ನೀಡುತ್ತಿರುವ ಎರಡನೇ ಭೇಟಿ ಇದು. ಇದು ಅವರ ಮೂರನೇ ಅವಧಿಯಲ್ಲಿ ಅವರ ಮೊದಲ ಭೇಟಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:06 am, Wed, 25 February 26

Source link

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಅನುಭವಿಸಿದ್ದಾರೆ.

22 ವರ್ಷದ ಯುವಕ ಮತ್ತು ಆತನ ಗೆಳತಿ ಬೆಂಗಳೂರಿನಿಂದ ಪ್ರಯಾಣಿಸಲು ಖಾಸಗಿ ಸ್ಲೀಪರ್ ಬಸ್‌ನಲ್ಲಿ 3 ಬರ್ತ್‌ಗಳನ್ನು ಬುಕ್ ಮಾಡಿದ್ದರು. ಹೆಚ್ಚು ಜಾಗವಿರಲಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದರು. ಆದರೆ ಬಸ್ ಹತ್ತಿದ ನಂತರ ಕಂಡಕ್ಟರ್ ಇವರಿಬ್ಬರನ್ನು ಒಟ್ಟಿಗೆ ಕುಳಿತುಕೊಳ್ಳದಂತೆ ತಡೆದಿದ್ದಾರೆ. ಇಬ್ಬರೂ ವಯಸ್ಕರಾಗಿದ್ದರೂ ಮತ್ತು ಅಧಿಕೃತ ಟಿಕೆಟ್ ಹೊಂದಿದ್ದರೂ, ಕಂಡಕ್ಟರ್ ಇಬ್ಬರನ್ನು ಪ್ರತ್ಯೇಕ ಸೀಟುಗಳಲ್ಲಿ ಮಲಗುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

“ನಿಮ್ಮ ಪೋಷಕರಿಗೆ ಫೋನ್ ಮಾಡಿ” ಇಲ್ಲವೆಂದರೆ “ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಕಂಡಕ್ಟರ್ ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಜೋಡಿ, ವಿವಾದ ಬೇಡವೆಂದು ದೂರ ಕುಳಿತಿದ್ದಾರೆ.ಈ ಘಟನೆ ರೆಡ್ಡಿಟ್‌ನಲ್ಲಿ ಪೋಸ್ಟ್ ಆದ ಬೆನ್ನಲ್ಲೇ ನೂರಾರು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. “ಕಂಡಕ್ಟರ್ ನೀವು ಖಾಲಿ ಬಿಟ್ಟಿದ್ದ ಒಂದು ಸೀಟನ್ನು ಬೇರೆಯವರಿಗೆ ಮಾರಿ ಹಣ ಮಾಡಲು ಈ ರೀತಿ ನಾಟಕ ಆಡಿರಬಹುದು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. “ವಯಸ್ಕರು ಒಟ್ಟಿಗೆ ಪ್ರಯಾಣಿಸುವುದು ಕಾನೂನುಬಾಹಿರವಲ್ಲ. ನೀವು ಟಿಕೆಟ್ ಹಣ ಪಾವತಿಸಿರುವಾಗ ನಿಮ್ಮ ಸೀಟಿನ ಮೇಲೆ ಕಂಡಕ್ಟರ್‌ಗೆ ಯಾವುದೇ ಹಕ್ಕಿಲ್ಲ” ಎಂದು ಒಬ್ಬರು ಹೇಳಿದ್ದಾರೆ. ಖಾಸಗಿ ಬಸ್‌ಗಳಿಗಿಂತ ಕೆಎಸ್ಆರ್‌ಟಿಸಿ (KSRTC) ಸ್ಲೀಪರ್ ಬಸ್‌ಗಳು ಸುರಕ್ಷಿತ ಮತ್ತು ಅಲ್ಲಿ ಇಂತಹ ನೈತಿಕ ಪೊಲೀಸ್‌ಗಿರಿ ನಡೆಯುವುದಿಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಪೋಷಕರಿಗೆ ಕರೆ ಮಾಡುವುದಾಗಿ ಬೆದರಿಸಿದಾಗ ‘ಮಾಡಿ’ ಎಂದು ಧೈರ್ಯವಾಗಿ ಹೇಳಬೇಕಿತ್ತು. ನೀವು ಯಾವುದೇ ತಪ್ಪು ಮಾಡದಿದ್ದಾಗ ಹೆದರುವ ಅಗತ್ಯವಿಲ್ಲ ಎಂದು ಮತ್ತೊಬ್ಬರು ಸಲಹೆ ನೀಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | Who should be win and who should be loss for Team India?

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸ್ಥಿತಿ ಪ್ರಸ್ತುತ ನಿರ್ಣಾಯಕ ಹಂತದಲ್ಲಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋತ ನಂತರ, ಸೆಮಿಫೈನಲ್‌ಗೇರಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮುಖ್ಯವಾಗಿವೆ. ಅದರಂತೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು. ಈ ಗೆಲುವುಗಳ ಹೊರತಾಗಿಯೂ ಭಾರತ ತಂಡ ನೇರವಾಗಿ ಸೆಮಿಫೈನಲ್​ಗೇರುತ್ತೆ ಎಂದೇಳಲಾಗುವುದಿಲ್ಲ.

ಏಕೆಂದರೆ ಸೆಮಿಫೈನಲ್ ರೇಸ್​ನಲ್ಲಿ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳಿವೆ. ಹೀಗಾಗಿ ಈ ಮೂರು ತಂಡಗಳಿಗೂ ಮುಂದಿನ ಮ್ಯಾಚ್​ಗಳು ನಿರ್ಣಾಯಕ. ಅದರಲ್ಲೂ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿದಿರುವ ಟೀಮ್ ಇಂಡಿಯಾಗೆ ಎದುರಾಳಿ ತಂಡಗಳ ಫಲಿತಾಂಶಗಳು ಕೂಡ ಇಲ್ಲಿ ಮುಖ್ಯವಾಗುತ್ತದೆ. ಹಾಗಿದ್ರೆ ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು ಎಂದು ನೋಡುವುದಾದರೆ…

  • ಝಿಂಬಾಬ್ವೆ ತಂಡವು ಮುಂದಿನ ಪಂದ್ಯಗಳಲ್ಲಿ ಸೋಲುವುದನ್ನು ಟೀಮ್ ಇಂಡಿಯಾ ಎದುರು ನೋಡಬೇಕು.
  • ವೆಸ್ಟ್  ಇಂಡೀಸ್ ತಂಡ ಸೌತ್ ಆಫ್ರಿಕಾ ವಿರುದ್ಧ ಸೋತರೆ ಟೀಮ್ ಇಂಡಿಯಾ ಹಾದಿ ಸುಗಮ.
  • ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ಗೆಲ್ಲಬೇಕು.

ಅಂದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ವಿರುದ್ಧ ಗೆದ್ದರೆ ಭಾರತ ತಂಡಕ್ಕೆ ನೆಟ್ ರನ್ ರೇಟ್ ಪರಿಗಣನೆಗೆ ಬರುವುದಿಲ್ಲ. ಏಕೆಂದರೆ ಮುಂದಿನ ಎರಡು ಮ್ಯಾಚ್​ಗಳ ಗೆಲುವುಗಳೊಂದಿಗೆ ಸೌತ್ ಆಫ್ರಿಕಾ ತಂಡವು 6 ಅಂಕಗಳೊಂದಿಗೆ ಸೆಮಿಫೈನಲ್​ಗೇರಲಿದೆ.

ಇತ್ತ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ಗೆದ್ದರೆ ಒಟ್ಟು 4 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಸೆಮಿಫೈನಲ್​ಗೇರಬಹುದು.

ಒಂದು ವೇಳೆ ವೆಸ್ಟ್ ಇಂಡೀಸ್ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆದ್ದರೆ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಬೇಕು. ಏಕೆಂದರೆ ವಿಂಡೀಸ್ ವಿರುದ್ಧ ಸೋತು ಸೌತ್ ಆಫ್ರಿಕಾ ತಂಡ ಝಿಂಬಾಬ್ವೆ ವಿರುದ್ಧ ಗೆದ್ದರೆ 4 ಅಂಕಗಳನ್ನು ಪಡೆಯಲಿದೆ.

ಇದರಿಂದ ಸೆಮಿಫೈನಲ್​ಗೇರಲು ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಪಂದ್ಯದಲ್ಲಿ ಆಫ್ರಿಕಾ ಪಡೆ ಗೆಲ್ಲುವುದನ್ನು ಟೀಮ್ ಇಂಡಿಯಾ ಎದುರು ನೋಡಲಿದೆ.

ಇನ್ನು ಸೌತ್ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ವಿರುದ್ಧ ಸೋತರೂ ಕೂಡ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಸುಗಮವಾಗಲಿದೆ.

ಇದನ್ನೂ ಓದಿ: ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..!

ಇಲ್ಲದಿದ್ದರೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲುವ ಮೂಲಕ ಮಾತ್ರ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ಇರಲಿದೆ. ಹೀಗಾಗಿಯೇ ಭಾರತ ತಂಡಕ್ಕೆ ತನ್ನ ಪಂದ್ಯಗಳಲ್ಲದೇ ಎದುರಾಳಿ ಮ್ಯಾಚ್​ ಕೂಡ ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳ ಫಲಿತಾಂಶಗಳ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್​ಗೇರುತ್ತಾ ಕಾದು ನೋಡಬೇಕಿದೆ.

Source link

Exit mobile version