Headlines

ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ – Kannada News | Mangaluru Illegal Mining: Pallamajalu Villagers Demand Action Against Blasting and Flood Risk

ಮಂಗಳೂರು, ಫೆಬ್ರವರಿ 25: ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ…

Read More

ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್ – Kannada News | Donald Trump says tariffs paid by foreign countries will ease IT burden of Americans

ವಾಷಿಂಗ್ಟನ್, ಫೆಬ್ರುವರಿ 25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ಯಾರಿಫ್ ಕ್ರಮವನ್ನು ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಅಲ್ಲಗಳೆಯುವುದನ್ನು ಮುಂದುವರಿಸಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅವರು, ಕೋರ್ಟ್ ತೀರ್ಪು ಬಹಳ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅಮೆರಿಕವನ್ನು ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅಮೆರಿಕದ ಜೊತೆ ಮಾಡಿಕೊಂಡಿರುವ ಒಪ್ಪಂದಗಳಿಂದ ಸಂತುಷ್ಟಗೊಂಡಿವೆ ಎಂದು ಟ್ರಂಪ್ ಹಂಗಿಸಿದ್ದಾರೆ. ‘ನಮ್ಮನ್ನು ಹೀನಾಯವಾಗಿ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರು ಖುಷಿಯಾಗಿದ್ದಾರೆ. ನಾವೂ ಖುಷಿಯಾಗಿದ್ದೇವೆ….

Read More

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ – Kannada News | Animal Sacrifice Banned at Davanagere Durgambika Jatre; DC and SP Camp Overnight to Ensure Strict Enforcement

ದಾವಣಗೆರೆ, ಫೆಬ್ರವರಿ 25: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ. ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು…

Read More

ಭಾರತ-ಪಾಕಿಸ್ತಾನ ಯುದ್ಧ ನಾನು ನಿಲ್ಲಿಸದಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಾಯ್ತಿದ್ರು ಎಂದ ಟ್ರಂಪ್ – Kannada News | Did Trump Credit US for Saving Pakistan PM, Social Media Reacts

ವಾಷಿಂಗ್ಟನ್, ಫೆಬ್ರವರಿ 25: ನಾನು ಮಧ್ಯಪ್ರವೇಶಿಸಿ ಭಾರತ-ಪಾಕಿಸ್ತಾನ ಯುದ್ಧವನ್ನು ತಡೆಯದಿದ್ದರೆ ಅಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್​​ ಸಾಯುತ್ತಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದ ಸಮಯದಲ್ಲಿ ಈ ವಿಷಯದ ಕುರಿತು ಮಾತನಾಡಿದ್ದಾರೆ. ಎರಡೂ ದೇಶಗಳ ಸ್ಥಿತಿ ಎಷ್ಟು ಹದಗೆಟ್ಟಿತ್ತೆಂದರೆ ಅದು ಪರಮಾಣು ಯುದ್ಧಕ್ಕೆ ಕಾರಣವಾಗುತ್ತಿತ್ತು. ಇದರಿಂದ ಸುಮಾರು 35 ಮಿಲಿಯನ್ ಜನರು ಪ್ರಾಣ ಕಳೆದುಕೊಳ್ಳಬಹುದಿತ್ತು ಮತ್ತು ಪಾಕಿಸ್ತಾನದ ಪ್ರಧಾನಿ ಕೂಡ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ…

Read More

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು,…

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you find the hidden dog in this picture\\\

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲು ನೀಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮನೆಯ…

Read More

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! – Kannada News | Chikkamagaluru Elephant Menace: Curfew in 12 Villages After Two Deaths

ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! ಚಿಕ್ಕಮಗಳೂರು, ಫೆಬ್ರವರಿ 25: ತಾಲೂಕಿನಲ್ಲಿ ಕಾಡಾನೆಗಳ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಆಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಾಲೂಕಿನ (Chikkamagaluru) ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ನಾಳೆವರೆಗೆ (ಫೆಬ್ರವರಿ 26)ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ. ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಇಬ್ಬರು ಬಲಿ ಕೆಲ ದಿನಗಳ…

Read More

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….

Read More

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ…

Read More