ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು – Kannada News | Woman Cancels Marriage Day After, Chooses Lover, Hamirpur Shocker

ಹಮೀರ್​ಪುರ, ಫೆಬ್ರವರಿ 25: ಮದುವೆ ಎಂಬುದು ಮಕ್ಕಳಾಟವಲ್ಲ, ಇತ್ತೀಚಿನ ದಿನಗಳಲ್ಲಿ ಯಾರನ್ನೋ ಇಷ್ಟ ಪಟ್ಟು ಇನ್ಯಾರನ್ನೋ ಮದುವೆ(Marriage)ಯಾಗಿ, ಬಳಿಕ ಗಂಡನನ್ನು ಕೊಲೆ ಮಾಡಿಸುವ ಪ್ರಕರಣಗಳು ಸಾಕಷ್ಟು ನಮ್ಮ ಕಣ್ಣಮುಂಣದಿವೆ. ಇಲ್ಲೊಬ್ಬ ಮಹಿಳೆ ಮದುವೆಯ ಮರುದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪತಿ ಬಿಟ್ಟು ಪ್ರೇಮಿಯೊಂದಿಗೆ ಬದುಕುವುದಾಗಿ ಹೇಳಿದ್ದಾಳೆ.

ಮದುವೆಯಾದ ಮರುದಿನವೇ ಮಹಿಳೆ ಗಂಡನ ಬಿಟ್ಟು ಪ್ರೇಮಿಯ ಜತೆ ಬದುಕುವುದಾಗಿ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಮದುವೆಯಾದ ಮರುದಿನ ಬೆಳಿಗ್ಗೆ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ಬದಲು ತನ್ನ ಪ್ರೇಮಿಯೊಂದಿಗೆ ವಾಸಿಸಲು ಬಯಸುವುದಾಗಿ ಹೇಳಿದ್ದು, ಕೆಲವೇ ಗಂಟೆಗಳಲ್ಲಿ ವಿವಾಹ ಕೊನೆಗೊಂಡಿತ್ತು.

ಮಂಗಳವಾರ ತಡರಾತ್ರಿ ವಿವಾಹವಾದ ಮಹಿಳೆಯನ್ನು ಪತಿಯ ಮನೆಗೆ ಕರೆದೊಯ್ಯಲಾಯಿತು, ಆದರೆ ಮದುವೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿ ಬೆಳಗಿನ ಜಾವ ಪೊಲೀಸ್ ಠಾಣೆಗೆ ತೆರಳಿದ್ದರು ಎನ್ನಲಾಗಿದೆ.
ಅಲ್ಲಿ, ಕುಟುಂಬದ ಒತ್ತಡದಿಂದ ತನ್ನ ಮೇಲೆ ಬಲವಂತವಾಗಿ ಮದುವೆ ಮಾಡಲಾಗಿದೆ ಮತ್ತು ಬದಲಿಗೆ ತನ್ನ ಪ್ರೇಮಿಯೊಂದಿಗೆ ವಾಸಿಸಲು ಬಯಸಿರುವುದಾಗಿ ಆಕೆ ಅಧಿಕಾರಿಗಳಿಗೆ ಹೇಳಿದ್ದಾಳೆ.

ಪೊಲೀಸರು ಎರಡೂ ಕುಟುಂಬಗಳನ್ನು ಠಾಣೆಗೆ ಕರೆಸಿ ಹಲವಾರು ಗಂಟೆಗಳ ಕಾಲ ಕೌನ್ಸೆಲಿಂಗ್ ನಡೆಸಿದರು. ರಾಜಿ ಮಾಡಿಕೊಳ್ಳುವ ಪ್ರಯತ್ನಗಳ ಬಿಟ್ಟು, ಮಹಿಳೆ ತನ್ನ ನಿರ್ಧಾರದ ಬಗ್ಗೆ ದೃಢವಾಗಿ ನಿಂತಿದ್ದಳು. ಯಾವುದೇ ಹಿಂದಿನ ಸಂಬಂಧದ ಬಗ್ಗೆ ತಿಳಿದಿರಲಿಲ್ಲ ಮತ್ತು ಅವಳ ಇಚ್ಛೆ ಮೊದಲೇ ತಿಳಿದಿದ್ದರೆ ಈ ಮದುವೆಯೇ ಆಗುತ್ತಿರಲಿಲ್ಲ ಎಂದು ವರ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ

ಒಟ್ಟಿಗೆ ಬಾಳುವ  ಯಾವುದೇ ಸಾಧ್ಯತೆ ಇಲ್ಲದ ಕಾರಣ, ಎರಡೂ ಕಡೆಯವರು ಅದೇ ದಿನ ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗಲು ಒಪ್ಪಿಕೊಂಡರು. ಮಹಿಳೆ ತನ್ನ ಕುಟುಂಬದೊಂದಿಗೆ ಹಿಂತಿರುಗಿದಳು, ಆದರೆ ವರನ ಕುಟುಂಬವು ಔಪಚಾರಿಕವಾಗಿ ಮದುವೆ ರದ್ದು ಮಾಡಲು ಕ್ರಮಗಳನ್ನು ಪ್ರಾರಂಭಿಸಿತು.
ಎರಡೂ ಕಡೆಯವರು ಬೇರೆಯಾಗಲು ಒಪ್ಪಿಕೊಂಡಿದ್ದಾರೆ. ಮಹಿಳೆ ತನ್ನ ಕುಟುಂಬದೊಂದಿಗೆ ಹಿಂತಿರುಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ.

ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ, ಅಸ್ತಿತ್ವ ಮತ್ತು ಸಂಬಂಧದ ನಡುವಿನ ಸಂಘರ್ಷಕ್ಕೆ ವೇದಿಕೆ ಸಜ್ಜಾಗಿದೆ. ಒಂದೇ ತಿಂಗಳಲ್ಲಿ ಈ ಧಾರಾವಾಹಿ ಎಂಟಕ್ಕೂ ಅಧಿಕ ತಿರುವುಗಳನ್ನು ಪಡೆದುಕೊಂಡಿತ್ತು. ಈ ಮೂಲಕ ವೇಗವಾಗಿ ಧಾರಾವಾಹಿಯ ಕಥೆಸಾಗುತ್ತಿದೆ ಎಂಬುದರ ಸೂಚನೆ ಇದಾಗಿದೆ. ಈಗ ಮತ್ತೊಂದ ಟ್ವಿಸ್ಟ್‌ ಜೊತೆಗೆ ಆಗಮಿಸಲಾಗುತ್ತಿದೆ.

ಭದ್ರ ಮತ್ತು ವಿನಂತಿ ಒಂದೇ ಹಾಸಿಗೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಇದು ವಿರೋಧಿಗಳ ಪ್ಲ್ಯಾನ್. ಇವರ ಸಂಸಾರ ಹಾಳು ಮಾಡಲು ನಡೆದಿರುವ ಕುತಂತ್ರ. ಈ ಹಠಾತ್ ಬೆಳವಣಿಗೆಯಿಂದ ಕುಪಿತನಾದ ಭದ್ರನ ತಂದೆ ಶಿವರಾಮೇಗೌಡ ಮಗ ಹಾಗೂ ವಿನಂತಿ ಜೊತೆ ಮದುವೆ ಮಾಡಿಸಲು ಮುಂದಾಗಿದ್ದಾನೆ.

ಈ ವೇಳೆ ವಿದ್ಯಾಳ ಮುಂದೆ ಎರಡು ಕಠಿಣ ಆಯ್ಕೆಗಳನ್ನು ಮಾವ ಇಟ್ಟಿದ್ದಾನೆ. ವಿಚ್ಛೇದನ ಕೊಡೋದು ಹಾಗೂ ಶೇ.50 ಆಸ್ತಿ ಪಡೆದು ಮನೆಯಿಂದ ಹೊರ ಹೋಗುವುದು ಅಥವಾ ಭದ್ರನ ಮೊದಲ ಪತ್ನಿಯಾಗಿ ಮನೆಯಲ್ಲೇ ಉಳಿದುಕೊಳ್ಳಬೇಕು. ಈಗ ವಿದ್ಯಾಳು, ಭದ್ರನ ಎರಡನೇ ಮದುವೆಗೆ ಸಮ್ಮತಿಸಿ, ಮನೆಯಲ್ಲೇ ಉಳಿಯೋದಾಗಿ ಹೇಳಿದ್ದಾನೆ.

ಇದನ್ನೂ ಓದಿ: ಕಲರ್ಸ್ ಕನ್ನಡ ‘ಯಜಮಾನ’ ಧಾರಾವಾಹಿಗೆ ಯಮುನಾ ಶ್ರೀನಿಧಿ ಎಂಟ್ರಿ

ಇಡೀ ಪ್ರಪಂಚವೇ ಭದ್ರನ ಮೇಲೆ ಬೆರಳು ತೋರಿಸುತ್ತಿದ್ದರೂ, ತನ್ನ ಪತಿಯ ಮೇಲೆ ವಿದ್ಯಾಳಿಗೆ ಅಚಲವಾದ ನಂಬಿಕೆಯಿದೆ. ತನ್ನ ಗಂಡನ ವಿರುದ್ಧ ದೊಡ್ಡ ಪಿತೂರಿ ನಡೆದಿದೆ ಎಂಬ ಸತ್ಯವನ್ನು ಅರಿತಿರುವ ವಿದ್ಯಾ, ಆಸ್ತಿ ಅಥವಾ ರಾಜಿ ಯಾವುದಕ್ಕೂ ಬಗ್ಗದೆ ತನ್ನ ಮೌಲ್ಯಗಳಿಗಾಗಿ ನಿಂತಿದ್ದಾಳೆ. ಇದು ಸುಳ್ಳು ಎಂಬುದನ್ನು ಆಕೆ ಸಾಬೀತು ಮಾಡುವಳಿದ್ದಾಳೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ – Kannada News | Vijay Devarakonda And Rashmika Mandanna Education qualification Who is more educated

ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ವಿವಾಹ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಲಿದೆ. ಈ ತಾರೆಯರ ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ. ವಿಜಯ್ ಮತ್ತು ರಶ್ಮಿಕಾ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತರೊಂದಿಗೆ ಈಗಾಗಲೇ ಉದಯಪುರ ತಲುಪಿದ್ದಾರೆ. ಅವರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ.

ಇವರು ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ’ದಿ ವೆಡ್ಡಿಂಗ್ ಆಫ್ ವಿರೋಶ್’ ಎಂದು ಹೆಸರು ಇಡಲಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ಹಳೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಮತ್ತು ಅವರ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇಬ್ಬರಲ್ಲಿ ಯಾರು ಹೆಚ್ಚು ಅಧ್ಯಯನ ಮಾಡಿದ್ದಾರೆ? ವಿಜಯ್ ಮತ್ತು ರಶ್ಮಿಕಾ ಅವರ ನಿಜವಾದ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಸಕ್ತಿದಾಯಕ ಚರ್ಚೆ ನಡೆಯುತ್ತಿದೆ.

ರಶ್ಮಿಕಾ ಮಂದಣ್ಣ ಕೊಡಗಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ, ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಿಂದ ಪದವಿ ಪಡೆದರು. ರಶ್ಮಿಕಾ ಮನೋವಿಜ್ಞಾನ, ಪತ್ರಿಕೋದ್ಯಮ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿಗಳನ್ನು ಪೂರ್ಣಗೊಳಿಸಿದ್ದಾರೆ.

ವಿಜಯ್ ದೇವರಕೊಂಡ ಅವರ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಹೇಳುವುದಾದರೆ ಅವರು ಅನಂತಪುರ ಜಿಲ್ಲೆಯ ಪುಟ್ಟಪರ್ತಿಯಲ್ಲಿರುವ ಸತ್ಯ ಸಾಯಿ ಹೈಯರ್ ಸೆಕೆಂಡರಿ ಶಾಲೆಯಿಂದ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅದರ ನಂತರ, ಅವರು ಹೈದರಾಬಾದ್‌ನ ಭದ್ರಕಾ ಕಾಲೇಜ್ ಆಫ್ ಕಾಮರ್ಸ್ ಮತ್ತು ಆರ್ಟ್ಸ್‌ನಿಂದ ಬಿ.ಕಾಂ ಪದವಿಯನ್ನು ಪಡೆದರು. ಇದರರ್ಥ ಇಬ್ಬರೂ ಪದವೀಧರರಾಗಿದ್ದರೂ, ಪದವಿ ಸಂಖ್ಯೆಗಳ ವಿಷಯದಲ್ಲಿ ಇಬ್ಬರೂ ಸರಿ ಸಮಾನರಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್

ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ಮದುವೆ ಆಗುತ್ತಿದ್ದಾರೆ. ಇವರ ಮದುವೆ ನೋಡಲು ಎಲ್ಲರೂ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು.

165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

ಇತ್ತ ಸೋತಿರುವ ಪಾಕಿಸ್ತಾನ್ ತಂಡ ಇನ್ನೂ ಸಹ ಟೂರ್ನಿಯಿಂದ ಹೊರಬಿದ್ದಿಲ್ಲ. ಬದಲಾಗಿ ಮುಂದಿನ ಪಂದ್ಯಗಳ ಮೂಲಕ ಸೆಮಿಫೈನಲ್​ಗೇರಬಹುದು. ಆದರೆ ಇಂತಹದೊಂದು ಅವಕಾಶ ಸೃಷ್ಟಿಯಾಗಲು ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಿದೆ.

ಪಾಕಿಸ್ತಾನ್ ತಂಡದ ಸೆಮಿಫೈನಲ್ ಸಮೀಕರಣ ಹೀಗಿದೆ:

  • ಶ್ರೀಲಂಕಾ ವಿರುದ್ಧ ಗೆಲುವು: ಪಾಕಿಸ್ತಾನ್ ತಂಡವು ಫೆಬ್ರವರಿ 28 ರಂದು ನಡೆಯಲಿರುವ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯ ಸಾಧಿಸಲೇಬೇಕು.
  • ನ್ಯೂಝಿಲೆಂಡ್​ ಸೋಲು: ಪಾಕಿಸ್ತಾನ್ ತಂಡವು ಸೆಮಿಫೈನಲ್‌ಗೆ ಸುಲಭವಾಗಿ ಅರ್ಹತೆ ಪಡೆಯಬೇಕಾದರೆ, ನ್ಯೂಝಿಲೆಂಡ್ ತಂಡವು ತನ್ನ ಉಳಿದ ಎರಡೂ ಪಂದ್ಯಗಳಲ್ಲಿ, ಅಂದರೆ ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೋಲಬೇಕು.
  • 3 ಅಂಕಗಳು: ನ್ಯೂಝಿಲೆಂಡ್ ತಂಡವು ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೋತರೆ ಒಂದು ಅಂಕದಲ್ಲೇ ಉಳಿಯಲಿದೆ. ಈ ವೇಳೆ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿ ಒಟ್ಟು 3 ಅಂಕಗಳೊಂದಿಗೆ ಸೆಮಿಫೈನಲ್​ಗೇರಬಹುದು.
  • ನೆಟ್ ರನ್ ರೇಟ್: ಒಂದು ವೇಳೆ ನ್ಯೂಝಿಲೆಂಡ್ ಒಂದು ಪಂದ್ಯ ಗೆದ್ದರೆ, ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಎರಡೂ ತಲಾ 3 ಪಾಯಿಂಟ್ ಪಡೆಯುತ್ತವೆ. ಆಗ ಪಾಕಿಸ್ತಾನವು ಉತ್ತಮ ರನ್ ರೇಟ್ ಆಧಾರದ ಮೇಲೆ ಮಾತ್ರ ಸೆಮಿಫೈನಲ್ ಪ್ರವೇಶಿಸಬಹುದು.
  • ಪಂದ್ಯ ರದ್ದಾದರೆ: ಫೆಬ್ರವರಿ 28 ರಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ್  ಗೆಲ್ಲಲೇಬೇಕು. ಒಂದು ವೇಳೆ ಈ ಪಂದ್ಯ ಸೋತರೆ ಅಥವಾ ಮಳೆಯಿಂದ ರದ್ದಾದರೆ ಪಾಕಿಸ್ತಾನ್ ಟೂರ್ನಿಯಿಂದ ಹೊರಬೀಳಲಿದೆ.

ಅಂದರೆ ಈಗಾಗಲೇ ಸೆಮಿಫೈನಲ್​ಗೆ ಪ್ರವೇಶಿಸಿರುವ ಇಂಗ್ಲೆಂಡ್ ತಂಡದ ಮುಂದಿನ ಗೆಲುವು ಪಾಕ್ ತಂಡದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆಲ್ಲುವುದನ್ನು ಪಾಕಿಸ್ತಾನ್ ಎದುರು ನೋಡಬೇಕು.

ಇದನ್ನೂ ಓದಿ: ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

ಇನ್ನು ನ್ಯೂಝಿಲೆಂಡ್ ವಿರುದ್ಧ ಶ್ರೀಲಂಕಾ ಗೆದ್ದರೆ ಪಾಕಿಸ್ತಾನ್ ತಂಡದ ಹಾದಿ ಸುಗಮವಾಗಲಿದೆ. ಏಕೆಂದರೆ ಈ ಗೆಲುವಿನೊಂದಿಗೆ ಲಂಕಾ ಪಡೆ ಪಡೆಯಲಿರುವುದು ಕೇವಲ 2 ಪಾಯಿಂಟ್ಸ್ ಮಾತ್ರ. ಅಲ್ಲದೆ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 3 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

Source link

ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ – Kannada News | ABVP Protests at Azim Premji University Over Alleged Anti National Activities, Letter Sent to Amit Shah Seeking Action

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ.

ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ ಕ್ಷಮೆಯಾಚಿಸಬೇಕು ಎಂದು ಎಬಿವಿಪಿ ಆಗ್ರಹಿಸಿತು. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಬಿವಿಪಿ ಪತ್ರ ಬರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡು ಚುನಾವಣೆ, ಹೊಸ ಪಕ್ಷ ರಚಿಸುವುದಾಗಿ ಘೋಷಿಸಿದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ – Kannada News | Tamil Nadu Election: VK Sasikala forms new Dravidian party, targets AIADMK ahead of Tamil Nadu elections

ಚೆನ್ನೈ, ಫೆಬ್ರವರಿ 25: ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ(Sasikala) ಮಂಗಳವಾರ ಹೊಸ ದ್ರಾವಿಡ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಇದೇ ಏಪ್ರಿಲ್​-ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ 78ನೇ ಜನ್ಮ ದಿನಾಚರಣೆಯಂದು ಅವರು ಪಕ್ಷದ ಧ್ವಜವನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಶಶಿಕಲಾ ಮಾತನಾಡಿ, ತಮ್ಮ ಮಾಜಿ ಸಹೋದ್ಯೋಗಿ ಮತ್ತು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಮಗೆ ದ್ರೋಹ ಬಗೆದಿದ್ದಾರೆ, ಅವರ ನಾಯಕತ್ವದಲ್ಲಿ ಪಕ್ಷವು ಅವನತಿ ಕಂಡಿದೆ ಎಂದು ಹೇಳಿಕೊಂಡಿದ್ದಾರೆ. ಒಂದು ಕಾಲದಲ್ಲಿ ಎಐಎಡಿಎಂಕೆಯ ಹಂಗಾಮಿ ಪ್ರಧಾನ ಕಾರ್ಯದರ್ಶಿ ಮತ್ತು ಜಯಲಲಿತಾ ಅವರ ಆಪ್ತ ಸಹಾಯಕರಾಗಿದ್ದ ಶಶಿಕಲಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಒಳಗಾದ ಬಳಿಕ ಅವರನ್ನು ಪಕ್ಷದಿಂದ ಹೊರಹಾಕಲಾಯಿತು.
ನಾನು ಕಳೆದ 9 ವರ್ಷಗಳಿಂದ ಮೌನವಾಗಿದ್ದರೆ ಅದು ತಮಿಳುನಾಡಿನ ಜನರಿಗೆ ಮಾಡಿದ ದ್ರೋಹವಾಗುತ್ತಿತ್ತು, ಆದ್ದರಿಂದ ತಮಿಳುನಾಡಿನ ಜನರು ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಗಾಗಿ ನಾವು ಹೊಸ ಯುವನ್ನು ಪ್ರಾರಂಭಿಸಲಿದ್ದೇವೆ, ನಾವು ಹೊಸ ಪಕ್ಷವನ್ನು ಕಟ್ಟಲಿದ್ದೇವೆ ಎಂದು ಘೋಷಿಸಿದ್ದಾರೆ.

ಶಶಿಕಲಾ ಅವರು ಕಪ್ಪು, ಬಿಳಿ ಮತ್ತು ಕೆಂಪು ಬಣ್ಣದ ಹೊಸ ಪಕ್ಷದ ಧ್ವಜವನ್ನು ಅನಾವರಣಗೊಳಿಸಿದರು, ಇದರಲ್ಲಿ ಸಿಎನ್ ಅಣ್ಣಾದೊರೈ, ಎಂಜಿ ರಾಮಚಂದ್ರನ್ ಮತ್ತು ಜಯಲಲಿತಾ ಚಿತ್ರಗಳಿವೆ. ಸಧ್ಯಕ್ಕೆ ತಾವು ಪಕ್ಷದ ಧ್ವಜವನ್ನಷ್ಟೇ ಅನಾವರಣಗೊಳಿಸುತ್ತಿರುವುದಾಗಿ ಪಕ್ಷದ ಹೆಸರು ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೂಡಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್

2026ರ ಮೊದಲಾರ್ಧದಲ್ಲಿ 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ. ನಾನು ಜೈಲಿನಲ್ಲಿದ್ದಾಗ, ಜೈಲು ಅಧಿಕಾರಿಗಳು ನನಗೆ 15 ದಿನಗಳ ಪೆರೋಲ್ ನೀಡಿದರು. ಆದರೆ, ಚೆನ್ನೈ ಆಯುಕ್ತರು ಜೈಲು ಎಸ್‌ಪಿಯನ್ನು ಸಂಪರ್ಕಿಸಿ, ಮುಖ್ಯಮಂತ್ರಿಗಳು ನನಗೆ ಐದು ದಿನಗಳಿಗಿಂತ ಹೆಚ್ಚು ಪೆರೋಲ್ ನೀಡಬಾರದು ಎಂದು ಆದೇಶಿಸಿದ್ದಾರೆ ಎಂದು ತಿಳಿಸಿದರು.

ನನ್ನ ಪತಿ ನಿಧನರಾದಾಗಲೂ, ಆರಂಭದಲ್ಲಿ 15 ದಿನಗಳನ್ನು ನೀಡಲಾಗಿದ್ದರೂ, ನಂತರ ಅವರು ಕೇವಲ 10 ದಿನಗಳನ್ನು ಮಾತ್ರ ನೀಡುವುದಾಗಿ ನಮಗೆ ತಿಳಿಸಿದರು. ನಾನು ಮುಖ್ಯಮಂತ್ರಿಯನ್ನಾಗಿ ಮಾಡಿದ ವ್ಯಕ್ತಿಯೇ ನನ್ನ ಬೆನ್ನಿಗೆ ಇರಿದಿದ್ದ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಎಐಎಡಿಎಂಕೆ ಹತ್ತು ಬಾರಿ ಸೋಲನ್ನು ಎದುರಿಸಿದೆ ಮತ್ತು ಒಂದೇ ಒಂದು ಚುನಾವಣೆಯನ್ನು ಸಹ ಗೆದ್ದಿಲ್ಲ. ವಿರೋಧ ಪಕ್ಷದ ಕಾರ್ಯವೈಖರಿ ಅತ್ಯಂತ ಕಳಪೆಯಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:45 am, Wed, 25 February 26

Source link

ಅಯ್ಯಪ್ಪ ಮಾಲೆ ಧರಿಸಿ ಎಣ್ಣೆ ಪಾರ್ಟಿಯಲ್ಲಿ ಭಾಗಿ: ರಾಮ್ ಚರಣ್ ವಿರುದ್ಧ ಟೀಕೆ – Kannada News | Did Ram Charan attend party while wearing Ayyappa Mala

ಅಲ್ಲು ಅರ್ಜುನ್ (Allu Arjun) ಅವರ ಸಹೋದರ ಅಲ್ಲು ಸಿರೀಶ್ ಮದುವೆ ಆಗುತ್ತಿದ್ದಾರೆ. ಆದರೆ ಮದುವೆಗೆ ಮುನ್ನ ಪಾರ್ಟಿಗಳ ಮೇಲೆ ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದಾರೆ ಅಲ್ಲು ಸಿರೀಶ್. ಇತ್ತೀಚೆಗಷ್ಟೆ ವಿದೇಶದಲ್ಲಿ ಕ್ರೂಸ್ ಒಂದರಲ್ಲಿ ಅದ್ಧೂರಿ ಪಾರ್ಟಿ ಮಾಡಿದರು. ಪಾರ್ಟಿಯಲ್ಲಿ ಅಲ್ಲು ಅರ್ಜುನ್ ಸಹ ಭಾಗವಹಿಸಿದ್ದರು. ಅದಾದ ಬಳಿಕ ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ಅವರು ಸಹೋದರ ಅಲ್ಲು ಸಿರೀಶ್ ಅವರಿಗಾಗಿ ಪಾರ್ಟಿ ಆಯೋಜಿಸಿದ್ದರು. ಮದ್ಯ, ನೃತ್ಯ ಎಲ್ಲವೂ ಇದ್ದ ಪಾರ್ಟಿ ಇದಾಗಿತ್ತು. ಆದರೆ ಈ ಪಾರ್ಟಿಯಲ್ಲಿ ರಾಮ್ ಚರಣ್ ಭಾಗವಹಿಸಿದ್ದರು. ಅದೂ ಅಯ್ಯಪ್ಪ ಮಾಲಧಾರಿಯಾಗಿ!

ಹೌದು, ಅಲ್ಲು ಅರ್ಜುನ್, ಸಹೋದರನಿಗಾಗಿ ಆಯೋಜಿಸಿದ್ದ ಕಾಕ್​​ಟೇಲ್ ಪಾರ್ಟಿಯಲ್ಲಿ ರಾಮ್ ಚರಣ್ ಭಾಗಿ ಆಗಿದ್ದರು. ರಾಮ್ ಚರಣ್ ಪಾರ್ಟಿಯಲ್ಲಿ ಭಾಗಿ ಆಗಿರುವ ವಿಡಿಯೋವನ್ನು ಸಹ ಅಲ್ಲು ಸಿರೀಶ್ ಹಂಚಿಕೊಂಡಿದ್ದಾರೆ. ಆದರೆ ರಾಮ್ ಚರಣ್, ಅಯ್ಯಪ್ಪ ಮಾಲಧಾರಿಯಾಗಿ ಮದ್ಯದ ಪಾರ್ಟಿಯಲ್ಲಿ ಭಾಗಿ ಆಗಿದ್ದರ ಬಗ್ಗೆ ಹಲವರು ಟೀಕೆ ವ್ಯಕ್ತಪಡಿಸಿದ್ದಾರೆ. ಆದರೆ ನಿಜವಾಗಿಯೂ ಅಲ್ಲಿ ನಡೆದಿದ್ದೇನು ಎಂಬುದನ್ನು ಅಲ್ಲು ಸಿರೀಶ್ ವಿವರಿಸಿದ್ದಾರೆ.

ಮಾಲಧಾರಿಯಾಗಿ ರಾಮ್ ಚರಣ್ ಪಾರ್ಟಿಯಲ್ಲಿ ಭಾಗವಹಿಸಿದ ಬಗ್ಗೆ ಪ್ರಶ್ನೆಗಳು ಎದ್ದಂತೆ, ಕಮೆಂಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಸಿರೀಶ್, ‘ಸ್ವಾಮಿಯವರು (ರಾಮ್ ಚರಣ್) ಯಾರೂ ಸಹ ಮದ್ಯವನ್ನು ಮುಟ್ಟುವ ಮೊದಲೇ ಅವರು ಬಂದು ಶುಭ ಹಾರೈಸಿ ಹೊರಟು ಬಿಟ್ಟರು’ ಎಂದಿದ್ದಾರೆ. ಆ ಮೂಲಕ ಪಾರ್ಟಿಯ ಆರಂಭದಲ್ಲೇ ಬಂದ ರಾಮ್ ಚರಣ್ ಎಲ್ಲರಿಗೂ ಶುಭ ಹಾರೈಸಿ ಹೊರಟಿದ್ದಾರೆ ಆ ಮೂಲಕ ಅವರು ಮಾಲಧಾರಿಯಾಗಿ ಯಾವುದೇ ಕೆಟ್ಟ ಚಟುವಟಿಕೆಯ ಭಾಗ ಆಗಿಲ್ಲ ಎಂಬುದನ್ನು ಖಾತ್ರಿ ಪಡಿಸಿದ್ದಾರೆ.

ಇದನ್ನೂ ಓದಿ:ಅಲ್ಲು ಅರ್ಜುನ್ ಮೇಲೆ 42 ನಿಯಮಗಳ ಆರೋಪ ಮಾಡಿ ಕ್ಷಮೆ ಕೇಳಿದ ಮಹಿಳೆ

ಅಲ್ಲು ಸಿರೀಶ್ ಅವರು ರಾಮ್ ಚರಣ್ ಅವರಿಗೆ ಸ್ವಂತ ಮಾವನ ಮಗ ಇಬ್ಬರದ್ದೂ ಬಹಳ ಹತ್ತಿರದ ಸಂಬಂಧದ ಕುಟುಂಬ. ಅಲ್ಲು ಅರ್ಜುನ್ ಮತ್ತು ಅಲ್ಲು ಸಿರೀಶ್ ಅವರ ತಂದೆ, ರಾಮ್ ಚರಣ್ ತಾಯಿಯ ಸ್ವಂತ ಸಹೋದರ. ಹಾಗಾಗಿ ಮದುವೆ ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ತಪ್ಪದೇ ಭಾಗಿ ಆಗುವ ಒತ್ತಡ ಇದ್ದೇ ಇದೆ. ಅಲ್ಲದೆ ರಾಮ್ ಚರಣ್ ಮತ್ತು ಅಲ್ಲು ಸಹೋದರರು ಚಿಕ್ಕಂದಿನಿಂದಲೂ ಬಹಳ ಆಪ್ತರು.

ರಾಮ್ ಚರಣ್ ಮಹಾನ್ ಅಯ್ಯಪ್ಪ ಭಕ್ತರಾಗಿದ್ದಾರೆ. ಪದೇ ಪದೇ ಅವರು ಮಾಲಧಾರಣೆ ಮಾಡುತ್ತಲೇ ಇರುತ್ತಾರೆ. ಮಾಲಧಾರಣೆ ಮಾಡಿದಾಗ ಚಪ್ಪಲಿ ಸಹ ಧರಿಸದೆ ಬಹಳ ಕಟ್ಟುನಿಟ್ಟಿನಿಂದ ನಿಯಮಗಳನ್ನು ಪಾಲನೆ ಮಾಡುತ್ತಾರೆ. ಸಿನಿಮಾ ಪ್ರಚಾರವಿರಲಿ ಏನೇ ಇರಲಿ ನಿಯಮಗಳನ್ನು ತಪ್ಪಿಸುವುದಿಲ್ಲ. ಅಯ್ಯಪ್ಪನ ಮಹಾನ್ ಭಕ್ತರಾಗಿರುವ ರಾಮ್ ಚರಣ್, ಮಾಲೆಗೆ ಅಪಚಾರ ಆಗುವಂತೆ ನಡೆದುಕೊಳ್ಳುತ್ತಾರೆ ಎನ್ನಲಾಗದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:45 am, Wed, 25 February 26

Source link

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Sets Unwanted Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..!

Source link

Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ? – Kannada News | Daily Devotional: What will Happen if you cross lemon placed in a junction

ಬೆಂಗಳೂರು, ಫೆಬ್ರವರಿ​ 25: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ, ಮೂರು ಅಥವಾ ನಾಲ್ಕು ರಸ್ತೆಗಳು ಸೇರುವ ಜಾಗಗಳಲ್ಲಿ ರಂಗೋಲಿ, ನಿಂಬೆಹಣ್ಣು, ಅರಿಶಿನ-ಕುಂಕುಮ, ಕುಂಬಳಕಾಯಿ, ತೆಂಗಿನಕಾಯಿ, ಸಣ್ಣ ಮಡಕೆಗಳು ಅಥವಾ ದೀಪಗಳನ್ನು ಇಟ್ಟು ವಿಶೇಷ ಪೂಜೆಗಳನ್ನು ಮಾಡುವುದನ್ನು ಗಮನಿಸಿರುತ್ತೇವೆ. ಇವುಗಳ ಹಿಂದಿನ ಉದ್ದೇಶದ ಬಗ್ಗೆ ಅನೇಕರಿಗೆ ಕುತೂಹಲವಿರುತ್ತದೆ.

ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ. ಮೊದಲನೆಯದಾಗಿ, ದೃಷ್ಟಿ ತೆಗೆಯಲು. ಕೆಲವರು ಚೊಂಬು, ಸಗಣಿಯ ದೀಪಗಳನ್ನು ಸಹ ಇಡುತ್ತಾರೆ. ಎರಡನೆಯದಾಗಿ, ವಾಹನ ಅಪಘಾತಗಳು ನಡೆದ ಸ್ಥಳಗಳಲ್ಲಿ ಶಾಂತಿ ಮತ್ತು ಶುದ್ಧೀಕರಣಕ್ಕಾಗಿ ಪೂಜೆ ಮಾಡಲಾಗುತ್ತದೆ. ಮೂರನೆಯದಾಗಿ, ದೀರ್ಘಕಾಲದ ಕಾಯಿಲೆಗಳು, ನಿರಾಸಕ್ತಿ, ಬೇಜವಾಬ್ದಾರಿತನ, ನೆನಪಿನ ಶಕ್ತಿ ಕಡಿಮೆಯಾದಾಗ ದೇಹದಿಂದ ಋಣಾತ್ಮಕ ಮತ್ತು ದುಷ್ಟ ಶಕ್ತಿಗಳನ್ನು ಹೊರಹಾಕಲು ಈ ರೀತಿಯ ಪೂಜೆಗಳನ್ನು ಮಾಡುತ್ತಾರೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Source link

ನಾಯಿ ಕಚ್ಚಿತ್ತು, ರೇಬಿಸ್ ಬರಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡು ಬ್ಯಾಂಕ್ ನೌಕರ – Kannada News | Rabies Fear Suicide: Kalyan Bank Employee Dies After Dog Bite Prevention and Facts

ಕಲ್ಯಾಣ್, ಫೆಬ್ರವರಿ 25: ನಾಯಿ ಕಚ್ಚಿದ್ದಕ್ಕೆ ರೇಬಿಸ್(Rabies) ಬರಬಹುದೆಂದು ಹೆದರಿ ಬ್ಯಾಂಕ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​​ನಲ್ಲಿ ನಡೆದಿದೆ. ಮೃತರನ್ನು 30 ವರ್ಷದ ಆಯುಷ್ ವಿಶ್ವನಾಥ್ ಅಮೀನ್. ಕಲ್ಯಾಣ್ ಪೂರ್ವದ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅವರು ಸಹಜೀವನ್ ಸೊಸೈಟಿಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ಅವರು ಕಳೆದ ಎಂಟು ವರ್ಷಗಳಿಂದ ಭಾರತ್ ಬ್ಯಾಂಕಿನ ಥಾಣೆ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು.

ಕೆಲವು ದಿನಗಳ ಹಿಂದೆ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಅಮೀನ್ ಅವರ ಕಾಲಿಗೆ ಬೀದಿ ನಾಯಿ ಕಚ್ಚಿತ್ತು, ಘಟನೆಯ ನಂತರ ಅವರು ಕೇವಲ ಒಂದು ರೇಬಿಸ್ ನಿರೋಧಕ ಇಂಜೆಕ್ಷನ್ ತೆಗೆದುಕೊಂಡಿದ್ದರು.ಕಳೆದ ನಾಲ್ಕು ದಿನಗಳಿಂದ ಅವರ ನಡವಳಿಕೆಯಲ್ಲಿ ಅಸಾಮಾನ್ಯ ಬದಲಾವಣೆಗಳನ್ನು ಕುಟುಂಬ ಸದಸ್ಯರು ಗಮನಿಸಿದ್ದರು. ಭಾನುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳದಿಂದ ಒಂದು ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಂಡಿದ್ದಾರೆ, ಅದರಲ್ಲಿ ಅವರು ರೇಬಿಸ್ ಲಕ್ಷಣಗಳು ಕಾಣಿಸಿಕೊಂಡಿರುವ ಬಗ್ಗೆ ಬರೆದಿದ್ದರು.

ಕೊಲ್ಸೆವಾಡಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ವರದಿ (ಎಡಿಆರ್) ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಗುರವ್ ದೃಢಪಡಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ರೇಬಿಸ್ ಖಂಡಿತವಾಗಿಯೂ ಮಾರಕ ಹೌದು, ಆದರೆ ಸರಿಯಾದ ಪಿಇಪಿ ಲಸಿಕೆ ತೆಗೆದುಕೊಳ್ಳುವ ಮೂಲಕ ಅದನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಮಾನಸಿಕ ಭಯವು ಕೆಲವೊಮ್ಮೆ ರೋಗಕ್ಕಿಂತ ಹೆಚ್ಚು ಅಪಾಯಕಾರಿಯಾಗಬಹುದು, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಬೇಕಾಗುತ್ತದೆ.

ಸೋಂಕಿನ ನಂತರ ಲಕ್ಷಣಗಳು ಕಾಣಿಸಿಕೊಳ್ಳಲು ಒಂದರಿಂದ ಮೂರು ತಿಂಗಳುಗಳು ತೆಗೆದುಕೊಳ್ಳಬಹುದು. ಒಮ್ಮೆ ಲಕ್ಷಣಗಳು ಕಾಣಿಸಿಕೊಂಡರೆ, ರೋಗವು ಗಂಭೀರವಾಗಬಹುದು. ಈ ರೋಗವು ಮೆದುಳು ಮತ್ತು ಬೆನ್ನುಹುರಿಯ ಮೇಲೆ ನೇರವಾಗಿ ದಾಳಿ ಮಾಡುತ್ತದೆ.

ಮತ್ತಷ್ಟು ಓದಿ: Video: ತಾನು ರಕ್ಷಿಸಿದ ನಾಯಿಯಿಂದಲೇ ಪ್ರಾಣಬಿಟ್ಟ ಕಬಡ್ಡಿ ಆಟಗಾರ ಬ್ರಿಜೇಶ್

ಈ ರೋಗದ ಪ್ರಮುಖ ಆರಂಭಿಕ ಲಕ್ಷಣಗಳೆಂದರೆ ಕಚ್ಚಿದ ಸ್ಥಳದಲ್ಲಿ ತುರಿಕೆ, ಸುಡುವಿಕೆ ಅಥವಾ ಮರಗಟ್ಟುವಿಕೆಯ ಅನುಭವ, ಸೌಮ್ಯ ಜ್ವರ ಮತ್ತು ತಲೆನೋವು ಉಂಟಾಗಬಹುದು. ಹಸಿವು ಕಡಿಮೆಯಾಗುವುದು ಅಥವಾ ಗಂಟಲು ನೋವು, ಆಯಾಸ ಮತ್ತು ಸ್ನಾಯು ನೋವುಗಳು ಸಹ ಆರಂಭಿಕ ಲಕ್ಷಣಗಳಾಗಿರಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:13 am, Wed, 25 February 26

Source link

Exit mobile version