ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ? – Kannada News | Karnataka Congress Power Sharing Row Intensifies: Key Developments on KPCC Chief Post and Dalit CM Demand

ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ (ಸಾಂದರ್ಭಿಕ ಚಿತ್ರ)Image Credit source: tv9

ಬೆಂಗಳೂರು, ಫೆಬ್ರವರಿ 25: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಒಂದೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಬಣಗಳ ನಡುವಣ ವಾಕ್ಸಮರ ಒಂದು ಕಡೆಯಾದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್​ದಾರೆ. ಏತನ್ಮಧ್ಯೆ, ಹೊಸದಾಗಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​​ಗೆ ಪತ್ರ ಬರೆದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಜತೆ ಮಂಗಳವಾರ ನಡೆದ ಪ್ರಮುಖ ರಾಜಕೀಯ ವಿದ್ಯಮಾನಗಳ ಲಿಸ್ಟ್ ಇಲ್ಲಿದೆ.

ಕೆಪಿಸಿಸಿ ಅಧ್ಯಕ್ಷ ಪಟ್ಟದ ಮೇಲೆ ಸತೀಶ್‌ ಜಾರಕಿಹೊಳಿ ಕಣ್ಣು

ಹೈಕಮಾಂಡ್ ಮುಂದೆ ಕೆಪಿಸಿಸಿ ಪಟ್ಟಕ್ಕಾಗಿ ಸಚಿವ ಸತೀಶ್ ಜಾರಕಿಹೊಳಿ ಒತ್ತಡ ಹಾಕಿದ್ದಾರೆ. ಸೋಮವಾರ ಬೆಂಬಲಿಗ ಶಾಸಕರು, 12 ಜಿಲ್ಲಾಧ್ಯಕ್ಷರನ್ನು ದೆಹಲಿಗೆ ಕರೆದೊಯ್ದಿದ್ದ ಸತೀಶ್, ಸಿದ್ದರಾಮಯ್ಯ ನಂತರ 2ನೇ ಹಂತದ ಅಹಿಂದ ನಾಯಕರು ಬೆಳೆಯಬೇಕಿದೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನಿಸಲಿ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ, ಸತೀಶ್‌ಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ. ಸತೀಶ್ ನಮ್ಮ ಲೀಡರ್ ಅವರಿಗೂ ಪಕ್ಷದ ಬಗ್ಗೆ ಅಪಾರ ಚಿಂತನೆ ಇದೆ ಅಂತಾ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ದಲಿತ ಸಿಎಂ ಕೂಗು

ಅತ್ತ ಸತೀಶ್ ಅಹಿಂದ ಉತ್ತರಾಧಿಕಾರಿಗೆ ಹಕ್ಕು ಮಂಡಿಸಿದರೆ, ಇತ್ತ ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದೆ. ದಲಿತ ಸಿಎಂ ಬಗ್ಗೆ ಚರ್ಚೆಯಾಗಲಿ ಎಂದು ಪರಮೇಶ್ವರ್ ಹೇಳಿದರೆ, ಡಿಕೆಶಿಗಿಂತ ಸಾಮರ್ಥ್ಯ ಇರುವವರು ಆಗಲಿ ಎಂದು ಉದಯ್ ಕದಲೂರು ಹೇಳಿದ್ದಾರೆ.

ದಲಿತರನ್ನು ಸಿಎಂ ಮಾಡಿ ಎಂದ ಆರ್‌ ಅಶೋಕ್‌

ನಾಯಕತ್ವ ಬದಲಾವಣೆ, ಮಂತ್ರಿ ಸ್ಥಾನಕ್ಕಾಗಿ ಶಾಸಕರ ಪತ್ರ, ದಲಿತ ಸಿಎಂ ಕೂಗಿನ ನಡುವೆ ಕೆಪಿಸಿಸಿ ಅಧ್ಯಕ್ಷ ಪಟ್ಟದ ಕಿತ್ತಾಟವೂ ಮುನ್ನಲೆಗೆ ಬರುತ್ತಿದೆ. ಕಾಂಗ್ರೆಸ್‌ ಮನೆಯೊಳಗಿನ ಬೆಂಕಿಗೆ ವಿಪಕ್ಷ ನಾಯಕ ಆರ್‌.ಅಶೋಕ್ ತುಪ್ಪ ಸುರಿದಿದ್ದಾರೆ. ದಲಿತರ ಪರ ಎನ್ನುತ್ತೀರಿ, ದಲಿತರನ್ನೇ ಸಿಎಂ ಮಾಡಿ ಎಂದಿದ್ದಾರೆ.

ಹೆಚ್ಚಿದ ಡಿಸಿಎಂ ಡಿಕೆಶಿ ಬೆಂಬಲಿಗರ ಒತ್ತಡ

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಜ್ವಾಲೆ ನಿಗಿನಿಗಿ ಎನ್ನುತ್ತಿರುವುದು ದೂರದಿಂದಲೇ ಸ್ಪಷ್ಟವಾಗಿ ಕಾಣಿಸುತ್ತಿದೆ. ಒಂದೆಡೆ ಬಜೆಟ್‌ಗೂ ಮುಂಚೆಯೇ ನಾಯಕತ್ವ ವಿಚಾರ ಇತ್ಯರ್ಥ ಆಗ್ಬೇಕು ಎಂದು ಡಿಕೆಶಿ ಪಟ್ಟು ಹಿಡಿದು ಕುಳಿತಿದ್ದಾರೆ. ಮತ್ತೊಂದೆಡೆ ಮಾರ್ಚ್ 6ಕ್ಕೆ ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ದಲಿತಾಸ್ತ್ರ, ಅಹಿಂದಸ್ತ್ರಗಳೂ ಪ್ರಯೋಗವಾಗುತ್ತಿವೆ. ಹೀಗಾಗಿ ಡಿಕೆಶಿ ಬೆಂಬಲಿತ ಶಾಸಕರು ನೇರಾನೇರವಾಗಿ ಹೈಕಮಾಂಡ್‌ಗೆ ಡೆಡ್​ಲೈನ್ ಕೊಡುವ ಕೆಲಸ ಮಾಡುತ್ತಿದ್ದಾರೆ.

ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ: ಪರಮೇಶ್ವರ್‌

ಒಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ತಮ್ಮ ನಾಯಕನ ವಿರುದ್ಧ ನಿತ್ಯವೂ ಒಂದಿಲ್ಲ ಒಂದು ರೀತಿ ಬ್ಯಾಟ್‌ ಬೀಸುತ್ತಿದ್ದಾರೆ. ಇದರ ಮಧ್ಯೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಹೊಟ್ಟೆ ತುಂಬಿದವರಿಗೆ ಅಗತ್ಯವಿಲ್ಲ: ಕದಲೂರು

ನಾಯಕತ್ವ ಬದಲಾವಣೆ ಗೊಂದಲದಿಂದಾಗಿ ಸಂಪುಟ ಪುನಾರಚನೆಗೂ ಗ್ರಹಣ ಹಿಡಿದಿದೆ. ಡಜನ್‌ಗೂ ಹೆಚ್ಚು ಸಚಿವಾಕಾಂಕ್ಷಿಗಳು ಮಂತ್ರಿ ಆಗಬೇಕು ಎಂದು ಆಸೆಗಣ್ಣಿನಿಂದ ಎದುರು ನೋಡುತ್ತಿದ್ದಾರೆ. ಈ ನಡುವೆ ಮೊದಲ ಬಾರಿ ಗೆದ್ದ 31 ಶಾಸಕರು ನಮ್ಮಲ್ಲಿ ಐವರಿಗೆ ಸಚಿವ ಸ್ಥಾನ ಕೊಡಿ ಎಂದು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಶಾಸಕ ಕದಲೂರು ಉದಯ್, ಕೆಲ ಸಚಿವರಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ. ಹೊಟ್ಟೆ ತುಂಬಿದವರಿಗೆ ಅಗತ್ಯವಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹೊಸಬರನ್ನು ನಿರ್ಲಕ್ಷಿಸಬೇಡಿ: ರವಿ ಗಣಿಗ

ಇತ್ತ ಶಾಸಕ ರವಿ ಗಣಿಗ ನಾನೂ ಪತ್ರಕ್ಕೆ ಸಹಿ ಹಾಕಿದ್ದೇನೆ. ಹೊಸದಾಗಿ ಗೆದ್ದಿದ್ದೇವೆ ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡಬೇಡಿ. ಪ್ರತಿಭಾವಂತರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

‘ಮೊದಲ ಬಾರಿಗ ಗೆದ್ದವರೆಲ್ಲರೂ ಅರ್ಹರೇ’

ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ ಸಚಿವ ನೀಡಬೇಕು ಎಂಬ ಕೂಗಿಗೆ ಮಧುಗಿರಿ ಕಾಂಗ್ರೆಸ್ ಶಾಸಕ ಕೆಎನ್‌ ರಾಜಣ್ಣ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಅತ್ತ ಗೃಹ ಸಚಿವ ಪರಮೇಶ್ವರ್ ಸಹ ಗೆದ್ದವರೆಲ್ಲರೂ ಅರ್ಹರೇ ಎಂದು ಹೇಳಿದ್ದಾರೆ.

ನಾನು ಮಂತ್ರಿ ಮಂಡಲ ಮಾಡುತ್ತೇನೆ ಎಂದಿಲ್ಲ: ಡಿಕೆಶಿ

ಹೊಸ ಪೀಳಿಗೆ ಬೆಳೆಯಬೇಕು ಎಂದಿರುವ ಡಿಕೆ ಶಿವಕುಮಾರ್, ನಾನು ಮಂತ್ರಿಮಂಡಲ ಮಾಡುತ್ತೇನೆ ಎಂದು ಹೇಳಿಲ್ಲ. ಸಿಎಂ ರಚನೆ ಮಾಡುತ್ತಾರೆ. ಲಾಬಿ ಮಾಡುವವರು ಮಾಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ! – Kannada News | Bengaluru Turning into Dumping Yard for Old Luxury Cars? Rise in Out of State Vehicles Fuels Pollution Concerns

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನಲ್ಲಿ (Bangalore) ಹೊರ ರಾಜ್ಯದ ಕಾರುಗಳ (Cars) ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ (Dehli) 10 ವರ್ಷ ಹಳೆಯ ಡಿಸೇಲ್ ಕಾರು, 15 ವರ್ಷ ಹಳೆಯ ಪೆಟ್ರೋಲ್ ಕಾರಿಗೆ ನಿಷೇಧ ಹೇರಲಾಗಿದೆ. ಅಂಥಾ ಕಾರುಗಳನ್ನು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ 20 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ಜಾರಿಯಲ್ಲಿದೆ. ಹಾಗಾಗಿ, ಹೊರ ರಾಜ್ಯದ ಐಷಾರಾಮಿ ಕಾರುಗಳನ್ನು ಇಲ್ಲಿಗೆ ತಂದು, ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ವಾಹನ ಸವಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

ದೆಹಲಿಯಲ್ಲಿ 10 ವರ್ಷ ಬಳಸಿರುವ ಬೆಲೆ ಬಾಳುವ ಮರ್ಸಿಡಿಸ್ ಬೆಂಜ್, ಆಡಿ, ಬಿಎಂಡಬ್ಲ್ಯು, ಜಾಗ್ವಾರ್, ಸ್ಕಾರ್ಪಿಯೋ, ಫಾರ್ಚುನರ್, ರೋಲ್ಸ್ ರಾಯ್ಸ್, ರೇಂಜ್ ರೋವರ್, ಬೆಂಟ್ಲಿ ಕಾಂಟಿನೆಂಟಲ್, ಲ್ಯಾಂಡ್ ರೋವರ್ ಡಿಸ್ಕವರಿ, ಲೆಕ್ಸಸ್, ಮಾಸೆರೋಟಿ ಲೆವಾಂಟೆ, ಮಿನಿ ಕೂಪರ್ ನಂತಹ ಐಷಾರಾಮಿ ಕಾರುಗಳಿಗೆ ಬೆಂಗಳೂರು ನಗರದಲ್ಲಿ ಬೇಡಿಕೆ ಹೆಚ್ಚಾಗಿದೆ. 15 ವರ್ಷ ಬಳಸಿರುವ ನಾರ್ಮಲ್ ಕಾರುಗಳಾದ ಇನ್ನೋವಾ, ಮಾರುತಿ ಸುಜುಕಿ, ಹುಂಡೈ ಸಂಸ್ಥೆಗಳ ವಿವಿಧ ಮಾದರಿಯ ಕಾರುಗಳ ಖರೀದಿಗೆ ಗ್ರಾಹಕರು ಮುಗಿಬೀಳುತ್ತಿದ್ದಾರೆ.

ಹೊರ ರಾಜ್ಯದ ಕಾರು ಮಾರಾಟದ ಹಬ್ ಆದ ಬೆಂಗಳೂರು!

ಬೆಂಗಳೂರು ಹೊರ ರಾಜ್ಯದ ಕಾರು ಮಾರಾಟದ ಹಬ್ ಆಗಿದೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಸರ್ಕಾರ ಮತ್ತು ಸಾರಿಗೆ ಇಲಾಖೆ ಕಡಿವಾಣ ಹಾಕಬೇಕು ಎಂದು ಪರಿಸರ ತಜ್ಞರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಬೇರೆ ರಾಜ್ಯದಲ್ಲಿ ಗುಜರಿಗೆ ಹಾಕುವ ಕಾರುಗಳು ಕಡಿಮೆ ಬೆಲೆಗೆ ಸಿಗುತ್ತವೆ ಎಂದು, ನಗರಕ್ಕೆ ತಂದು ವಾಯುಮಾಲಿನ್ಯಕ್ಕೆ ಆಹ್ವಾನ ಕೊಡುತ್ತಿದ್ದಾರೆ. ಸಾರಿಗೆ ಇಲಾಖೆ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ ಪಾತ್ರ ಆಗುತ್ತದೆ. ನೀವು ಅಂದುಕೊಂಡ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸೂಕ್ತ ದಿನವಿದು. ಹೊಸ ಸಂಪಾದನೆ ಮಾರ್ಗೋಪಾಯ ಗೋಚರಿಸುತ್ತದೆ ಅಥವಾ ಬಾಕಿ ಬರಬೇಕಾದ ಹಣ ಲಭಿಸಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಪ್ರೀತಿಯಲ್ಲಿ ಇರುವವರು ನೀವು ಮಾತನಾಡುವಾಗ ಆಯ್ಕೆ ಮಾಡಿಕೊಳ್ಳುವ ಪದಗಳ ಬಗ್ಗೆ ಗಮನ ಕೊಡಿ. ಸ್ತ್ರೀರೋಗಗಳು ಅಥವಾ ತೂಕಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಣಿಸಬಹುದು, ನಿಯಮಿತ ವ್ಯಾಯಾಮ ಸಹಾಯಕವಾಗುತ್ತದೆ. ವಿದ್ಯಾರ್ಥಿಗಳಿಗೆ ಕಲಿಕೆಗೆ ಉತ್ಸಾಹ ಮೂಡುತ್ತದೆ. ಸ್ನೇಹಿತರಿಂದ ಸಹಾಯ ದೊರೆಯುವ ದಿನ ಇದಾಗಿರಲಿದೆ, ಆದರೆ ಅತಿಯಾದ ಅವಲಂಬನೆ ಬೇಡ. ಸರಳತೆ ಮತ್ತು ಸಮಾಧಾನ ಇಂದು ನಿಮ್ಮ ಶಕ್ತಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಕೆಲಸಗಳಲ್ಲಿ ಶಿಸ್ತು ಮತ್ತು ವೇಗ ಎರಡೂ ಈ ದಿನದ ಅಗತ್ಯ. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸುವುದರಿಂದ ಹೊಸ ಅವಕಾಶಗಳು ದೊರೆಯಲಿದೆ. ನಿಮ್ಮ ತೀರ್ಮಾನಗಳಿಗೆ ಸಹೋದ್ಯೋಗಿಗಳ ಬೆಂಬಲ ಇದ್ದರೂ ಅಂತಿಮವಾಗಿ ನಿರ್ಣಯ ತೆಗೆದುಕೊಳ್ಳುವಾಗ ಅಳೆದು ತೂಗಿ ಬಳಸಿ. ಹಣಕಾಸಿನಲ್ಲಿ ಬಾಕಿ ಉಳಿದ ವಿಷಯಗಳ ಪರಿಹಾರ ಕಂಡುಬರುವುದು. ಕುಟುಂಬದ ಸದಸ್ಯರ ಜತೆ ವ್ಯವಹರಿಸುವಾಗ- ಮಾತುಕತೆಯಾಡುವಾಗ ಅತಿಯಾದ ಭಾವುಕತೆ ಬೇಡ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 25ರ ದಿನಭವಿಷ್ಯ

ಭಗವದ್ಗೀತೆಯ ಒಂದು ಅಧ್ಯಾಯವನ್ನಾದರೂ ಸಂಜೆಯ ಹೊತ್ತಿಗೆ ಓದುವುದಕ್ಕೆ ಪ್ರಯತ್ನಿಸಿ. ಅಥವಾ ಕೇಳಿಸಿಕೊಳ್ಳಿ. ಯಾರಿಗೆ ಉದ್ಯೋಗ, ದಾಂಪತ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿ ತೀವ್ರವಾದ ಒತ್ತಡ- ಗೊಂದಲ ಇದೆಯೋ ಅಂಥವರಿಗೆ ಇದರಿಂದ ಹೊರಗೆ ಬರುವ ಮಾರ್ಗ ಗೋಚರ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ದಿನ ಬಹುತೇಕ ಕೆಲಸಗಳಿಂದಲೇ ತುಂಬಿ ಹೋಗಲಿದೆ. ಜಾಣ್ಮೆಯ ಮತ್ತು ಮಿತವಾದ ಮಾತು ಗೌರವ ತರುತ್ತದೆ. ಇನ್ನು ಕೆಲವು ಕಡೆ ಮಾತನಾಡುವುದಕ್ಕಿಂತ ನಿಮ್ಮ ಕಾರ್ಯವೇ ಮುಖ್ಯವೆನ್ನಿಸುತ್ತದೆ. ಅಂದುಕೊಂಡಂತೆ ನಿಮಗೆ ಬರಬೇಕಾದ ಆದಾಯ ಬಾರದೆ ತಡವಾಗಲಿದೆ. ಅನಗತ್ಯ ವೆಚ್ಚಗಳನ್ನು ತಪ್ಪಿಸಿ, ಅಗತ್ಯವಿರುವಷ್ಟನ್ನು ಮಾತ್ರ ಖರ್ಚು ಮಾಡಿ. ಕುಟುಂಬದಲ್ಲಿ ಹಿರಿಯರ ಸಲಹೆ ನಿಮಗೆ ಬೆಂಬಲವಾಗಿ ಇರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಪ್ರೀತಿಯಲ್ಲಿ ನಂಬಿಕೆ ಅತ್ಯಂತ ಮುಖ್ಯ, ಅನುಮಾನದಿಂದ ನೆಮ್ಮದಿ ಹಾಳಾಗುತ್ತದೆ. ತಲೆನೋವು ಅಥವಾ ಮಾನಸಿಕ ದಣಿವು ಕಾಣಲಿದೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟ ಮಾಡಿಕೊಳ್ಳಿ. ಏಕಾಗ್ರತೆ ಸಾಧಿಸುವುದಕ್ಕೆ ಹರಸಾಹಸ ಪಡುತ್ತಿದ್ದಲ್ಲಿ ಮೊದಲಿಗೆ ಮನಸ್ಸನ್ನು ನಿಯಂತ್ರಿಸಿ. ಸ್ನೇಹಿತರೊಂದಿಗೆ ಹೆಚ್ಚಾಗಿ ವಾಗ್ವಾದ ಬೇಡ, ನೀವು ಹೇಳಬೇಕಾದ ವಿಷಯಗಳನ್ನು ಸರಳವಾಗಿ ತಿಳಿಸಿ. ದೈವಸ್ಮರಣೆಯಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ ಮತ್ತು ನೆಮ್ಮದಿಯೂ ಸಿಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಹೊಸ ಅವಕಾಶಗಳೊಂದಿಗೆ ನಿಮಗೆ ಈ ದಿನ ಆರಂಭವಾಗಲಿದೆ. ಕೆಲಸದಲ್ಲಿ ನಿಮಗೆ ಸಿಗುವಂಥ ಅವಕಾಶಗಳು ನಿಮ್ಮ ಕೌಶಲಕ್ಕೆ ಸರಿಯಾಗಿ ಹೊಂದಾಣಿಕೆ ಆಗಲಿವೆ. ಅನಗತ್ಯವಾಗಿ ಯಾವುದರಲ್ಲಿಯೂ ತಡ ಆಗುವುದನ್ನು ತಪ್ಪಿಸಿ, ಕೆಸ್ಪಷ್ಟ ಯೋಜನೆ ಇರಿಸಿಕೊಳ್ಳಿ. ಹೊಸದಾಗಿ ಹೂಡಿಕೆ ಮಾಡುವರಿಗೆ ಜಾಗ್ರತೆ ಅಗತ್ಯ. ಇನ್ನು ಇತರರ ಬಲವಂತಕ್ಕೋ ಅಥವಾ ಒತ್ತಡಕ್ಕೋ ಹಣದ ಹೂಡಿಕೆ ಮಾಡಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಬಂಧ ಗಾಢವಾಗಲಿದೆ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರ ಇರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು ಕಲಿಯಲು ಆಸಕ್ತಿ ತೋರಿಸಿ, ಕೋರ್ಸ್ ಗಳಿಗೆ ಸೇರುವ ಸಾಧ್ಯತೆ ಇದೆ. ಇನ್ನು ಓದಿನ ಜೊತೆಗೆ ಪಾರ್ಟ್ ಟೈಂ ಉದ್ಯೋಗ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಬಗೆಗಿನ ಆತ್ಮವಿಶ್ವಾಸವು ಹೆಚ್ಚಾಗಿರುತ್ತದೆ. ಕೆಲಸದಲ್ಲಿ ನಿಮ್ಮ ಆಲೋಚನೆ ಮತ್ತು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುವ ರೀತಿ ಮೆಚ್ಚುಗೆ ಪಡೆಯುತ್ತವೆ. ಒತ್ತಡವನ್ನು ಗೆಲ್ಲಲಿದ್ದೀರಿ. ಈ ಹಿಂದೆ ನೀವು ಮಾಡಿದಂಥ ದೊಡ್ಡ ಖರ್ಚುಗಳಿಗೆ ಹೇಗೆ ಹಣ ಹೊಂದಿಸುವುದು ಎಂಬ ಚಿಂತೆಯಲ್ಲಿದ್ದರೆ ಅದಕ್ಕೆ ಪರಿಹಾರ ದೊರೆಯಲಿದೆ. ನಿಮ್ಮ ಮಾತಿನಿಂದ ಕುಟುಂಬದಲ್ಲಿ ಸಾಮರಸ್ಯ, ಒಗ್ಗಟ್ಟು ತರುವಲ್ಲಿ ಯಶಸ್ಸು ಕಾಣುತ್ತೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕುಟುಂಬದಲ್ಲಿ ಸಣ್ಣ- ಪುಟ್ಟ ಮನಸ್ತಾಪ ಉಂಟಾದಲ್ಲಿ ಮೃದುವಾದ ಮಾತುಗಳನ್ನಾಡಿ, ಅದನ್ನು ಪರಿಹರಿಸುವ ಕಡೆಗೆ ಗಮನ ನೀಡಿ. ಇನ್ನು ಪ್ರೀತಿಯಲ್ಲಿ ಇರುವವರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಮಯ ಕೊಡಿ. ಜಠರಕ್ಕೆ ಸಂಬಂಧಿಸಿದಂತೆ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳಬಹುದು. ನಿಯಮಿತ ಆಹಾರ ಸೇವನೆ ಮತ್ತು ವಿಶ್ರಾಂತಿಗೆ ಪ್ರಾಮುಖ್ಯ ನೀಡಿ. ವಿದ್ಯಾರ್ಥಿಗಳಿಗೆ ಸ್ನೇಹಿತರ ಜತೆ ಒಳ್ಳೆಯ ಸಮಯ ಕಳೆಯುವ ಅವಕಾಶ ದೊರಕುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು – Kannada News | Horoscope 25 Wednesday 2026; Dina Rashi Bhavishya Today, Checkout the details here

ಮೇಷ ರಾಶಿ:

ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು.

ವೃಷಭ ರಾಶಿ:

ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ.

ಮಿಥುನ ರಾಶಿ:

ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ದೈಹಿಕ ಕಾರ್ಯವು ಅಧಿಕವಾಗಲಿದೆ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ವಾಹನ ಚಾಲನೆಯಲ್ಲಿ ಉದ್ವೇಗ ಬೇಡ. ಇರುವ ಸಾಲವನ್ನು ತೀರಿಸಿಕೊಳ್ಳಲುಬೇಕಾದ ಯೋಜನೆ ಮಾಡಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ ರಾಶಿ:

ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಸಿಗಬೇಕಾದ ಹಣವು ವಿಳಂಬವಾಗಿ ಸಿಗುವುದು. ಎಲ್ಲರೆದುರು ಸಭ್ಯರಂತೆ ತೋರುವಿರಿ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು.

ಸಿಂಹ ರಾಶಿ:

ಪರೋಪಕಾರವೂ ಇವತ್ತಿನ ಮುಖ್ಯ ಕಾರ್ಯಗಳಲ್ಲಿ ಒಂದಾಗಬಹುದು. ಹೊಸ ಗೃಹವನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ದೊರೆತದ್ದನ್ನು ದೊರೆತಂತೆ ಹಿಂದಿರುಗಿಸುವಿರಿ. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ವಿದೇಶದ ವ್ಯಾಪಾರದಲ್ಲಿ ಏರಿಳಿತವಾಗಬಹುದು.

ಕನ್ಯಾ ರಾಶಿ:

ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಆಪ್ತರಿಂದ ನಿರೀಕ್ಷಿತ ಸಹಾಯ ಸಿಗದೇ ಬೇಸರ. ಆದರೆ ಅದನ್ನು ಹೇಳಲೂ ಭಯ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ಅಧಃಪತನದ ಬಗ್ಗೆ ಅಂದಾಜು ಸಿಗಲಿದೆ. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು.

ತುಲಾ ರಾಶಿ:

ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವನ್ನು ಚೆನ್ನಾಗಿಟ್ಟುಕೊಳ್ಳಿ. ಮನೆಯವರಿಗೆ ಹಣವನ್ನು ನೀಡಲಾಗದೇ ಅನ್ಯರಿಗೆ ನೀಡುವಿರಿ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಾಲಿಗೆಯನ್ನು ಹರಿಬಿಡುವಾಗ ಅದು ಎಷ್ಟು ದೂರವೂ ಹೋಗಬಹುದು.

ವೃಶ್ಚಿಕ ರಾಶಿ:

ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ನಿಮ್ಮ ಸಹನೆಯ ಮಿತಿ ಮೀರುವ ಸಾಧ್ಯತೆ ಇದೆ. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಅನಂತರ ದುಃಖಿಸಿದರೆ ಪ್ರಯೋಜನವಾಗದು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು.

ಧನು ರಾಶಿ:

ಪ್ರೀತಿಯನ್ನು ನೀವು ಬಹಳ ಸೂಕ್ಷ್ಮವಾಗಿ ಮುಂದುವರಿಸಬೇಕಾಗುವುದು. ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಅತ್ಯಂತ ಸಂಭ್ರಮ ಪಡುವಿರಿ. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು.

ಮಕರ ರಾಶಿ:

ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಹೋದರಿಗೆ ನಿಮ್ಮಂದ ಅಪೇಕ್ಷಿತ ಸಹಾಯವು ಸಿಗಲಿದೆ. ಹಳೆಯ ವಾಹನದ ಮಾರಾಟ ಮಾಡಿ ಹೊಸ ವಾಹನವನ್ನು ಖರೀದಿಸುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ. ಎಷ್ಟು ಅವಶ್ಯಕವೋ ಅಷ್ಟನ್ನು ಮಾತ್ರ ಮಾಡಿ. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು.

ಕುಂಭ ರಾಶಿ:

ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ. ಪ್ರಭಾವಿ ವ್ಯಕ್ತಿಗಳ ಸಲಹೆಯಿಂದ ನೀವು ಅಂದುಕೊಂಡ ದಾರಿಯು ಸುಗಮವಾಗುವುದು.

ಮೀನ ರಾಶಿ:

ವ್ಯಾಪಾರವು ಕೆಲವು ತಿರುವನ್ನು ಪಡೆಯಬಹುದು. ಪರರ ಮೇಲಿನ ಅನುಮಾನದಿಂದ ಸಮಯ ಹಾಳು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ಕಛೇರಿಗೆ ವಿರಾಮವಿದ್ದರೂ ತುರ್ತು ಮೀಟಿಂಗ್ ಗೆ ಹಾಜಾರಾಗಬೇಕಾದೀತು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ. ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಅಷ್ಡಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವೈಧೃತಿ, ಕರಣ : ಬವ ಸೂರ್ಯೋದಯ – 06 – 44 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭ ಕಾಲ : ರಾಹು 12:38 – 14:06, ಯಮಗಂಡ ಕಾಲ 08:13 – 09:41, ಗುಳಿಕ ಕಾಲ 11:09 – 12:38

-ಲೋಹಿತ ಹೆಬ್ಬಾರ್ – 8762924271 (what’s app only)

Source link

SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ – Kannada News | SBI SCO Recruitment 2026: 116 AVP and Deputy Manager Posts Apply by March 15!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 116 ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 23 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮಾರ್ಚ್ 15ರ ವರೆಗೆ ಅವಕಾಶವಿದೆ.

ಹುದ್ದೆಯ ವಿವರ:

  • ಸಹಾಯಕ ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆ: 12
  • ಡೆಪ್ಯೂಟಿ ಮ್ಯಾನೇಜರ್ (ಐಎಸ್ ಆಡಿಟ್) ಹುದ್ದೆಗಳ ಸಂಖ್ಯೆ: 104

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಬಿಇ/ಬಿಟೆಕ್/ಎಂಎಸ್ಸಿ ಉತ್ತೀರ್ಣರಾಗಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ಕೆಲಸದ ಅನುಭವವನ್ನು ಹೊಂದಿರಬೇಕು. ಸಹಾಯಕ ಉಪಾಧ್ಯಕ್ಷ ಹುದ್ದೆಗಳಿಗೆ, ಅಭ್ಯರ್ಥಿಗಳ ವಯಸ್ಸು ಜನವರಿ 31, 2026 ರಂತೆ 21 ರಿಂದ 45 ವರ್ಷಗಳ ನಡುವೆ ಇರಬೇಕು. ಉಪ ವ್ಯವಸ್ಥಾಪಕ (ಐಎಸ್ ಆಡಿಟ್) ಹುದ್ದೆಗಳಿಗೆ, ಜನವರಿ 31, 2026 ರಂತೆ 25 ರಿಂದ 35 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಸಹಾಯಕ ಉಪಾಧ್ಯಕ್ಷ ಹುದ್ದೆಗಳಿಗೆ ವರ್ಷಕ್ಕೆ 50 ಲಕ್ಷ ರೂ. ಮತ್ತು ಉಪ ವ್ಯವಸ್ಥಾಪಕ (ಐಎಸ್ ಆಡಿಟ್) ಹುದ್ದೆಗಳಿಗೆ ನಿಯಮಗಳ ಪ್ರಕಾರ ವೇತನ ಮತ್ತು ಭತ್ಯೆಯಾಗಿ 50 ಲಕ್ಷ ರೂ. ಪಾವತಿಸಲಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ – Kannada News | Australia Women Dominate India in 1st ODI, Leads Series 1 0 | Harmanpreet, Mandhana Fifties

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ (India Women vs Australia Women) ಈ ಮೊದಲು ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಪ್ರವಾಸವನ್ನು ಶುಭಾರಂಭ ಮಾಡಿತ್ತು. ಅದರಂತೆ ಉಭಯ ತಂಡಗಳ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದ್ದು, ಇಂದು ನಡೆದ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ( Smriti Mandhana) ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಆಸ್ಟ್ರೇಲಿಯಾ ತಂಡಕ್ಕೆ 50 ಓವರ್‌ಗಳಲ್ಲಿ 215 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ತಂಡವು 4 ವಿಕೆಟ್‌ಗಳನ್ನು ಕಳೆದುಕೊಂಡು 70 ಎಸೆತಗಳು ಬಾಕಿ ಇರುವಾಗಲೇ ಜಯ ಸಾಧಿಸಿತು.

ಭಾರತಕ್ಕೆ ಕಳಪೆ ಆರಂಭ

ಟಾಸ್ ಗೆದ್ದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದಾಗ್ಯೂ, ಭಾರತದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಒಂದು ರನ್ ಕೂಡ ಗಳಿಸದೆ ವಿಕೆಟ್ ಒಪ್ಪಿಸಿದರು. ನಂತರ, ಸ್ಕೋರ್ 25 ತಲುಪಿದಾಗ, ತಂಡವು ಶೆಫಾಲಿ ವರ್ಮಾ ಅವರನ್ನು ಕಳೆದುಕೊಂಡಿತು. ಮೂರನೇ ವಿಕೆಟ್ ರೂಪದಲ್ಲಿ ಜೆಮಿಮಾ ರೊಡ್ರಿಗಸ್ ಔಟ್ ಆದಾಗ ತಂಡವು 50 ರನ್‌ಗಳ ಗಡಿ ಕೂಡ ದಾಟಿರಲಿಲ್ಲ. ಹೀಗಾಗಿ ತಂಡವು 11.2 ಓವರ್‌ಗಳಲ್ಲಿ 52 ರನ್‌ಗಳಿಗೆ ಈ ಮೂರು ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡಿತು.

ಸ್ಮೃತಿ- ಹರ್ಮನ್‌ ಅರ್ಧಶತಕ

ಒಂದು ತುದಿಯಲ್ಲಿ ವಿಕೆಟ್‌ಗಳು ಬೀಳುತ್ತಿದ್ದಂತೆ, ಸ್ಮೃತಿ ಮಂಧಾನ ಇನ್ನೊಂದು ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್, ಸ್ಮೃತಿಗೆ ಅತ್ಯುತ್ತಮ ಬೆಂಬಲ ನೀಡಿದರು. ಇವರಿಬ್ಬರ ನಡುವೆ ಉತ್ತಮ ಜೊತೆಯಾಟ ಬೆಳೆಯಲಾರಂಭಿಸಿತು. ಇದೇ ವೇಳೆ ಸ್ಮೃತಿ ಕೂಡ ತಮ್ಮ ಅರ್ಧಶತಕವನ್ನು ಪೂರೈಸಿದರಾದರೂ ತಮ್ಮ ಸ್ಕೋರ್ ಅನ್ನು ಮತ್ತಷ್ಟು ವಿಸ್ತರಿಸಲು ಸಾಧ್ಯವಾಗಲಿಲ್ಲ.

ಸ್ಮೃತಿ ಮಂಧಾನ 68 ಎಸೆತಗಳಲ್ಲಿ 7 ಬೌಂಡರಿಗಳ ಸಹಾಯದಿಂದ 58 ರನ್ ಗಳಿಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಸ್ಮೃತಿ ಔಟಾದ ನಂತರ, ಹರ್ಮನ್‌ಪ್ರೀತ್ ತಂಡದ ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರಾದರೂ ದೀಪ್ತಿ ಶರ್ಮಾ ಮತ್ತು ರಿಚಾ ಘೋಷ್ ಅವರಿಂದ ಅವರಿಗೆ ಹೆಚ್ಚಿನ ಬೆಂಬಲ ಸಿಗಲಿಲ್ಲ. ಪರಿಣಾಮವಾಗಿ, ಭಾರತ ತಂಡಕ್ಕೆ 50 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗಲಿಲ್ಲ ಮತ್ತು ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವಾಗಲಿಲ್ಲ. ನಾಯಕಿ ಹರ್ಮನ್ ಪ್ರೀತ್ ಕೌರ್ 84 ಎಸೆತಗಳಲ್ಲಿ 53 ರನ್ ಗಳಿಸುವ ಮೂಲಕ ತಂಡವನ್ನು214 ರನ್‌ಗಳಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

T20 World Cup: 12 ತಂಡಗಳು, 33 ಪಂದ್ಯಗಳು; ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಆಸ್ಟ್ರೇಲಿಯಾಕ್ಕೆ ಏಕಪಕ್ಷೀಯ ಗೆಲುವು

ಗೆಲುವಿಗೆ 215 ರನ್​ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಮಹಿಳಾ ತಂಡವು 38.2 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ಗಳ ನಷ್ಟಕ್ಕೆ ಬೆನ್ನಟ್ಟಿತು. ನಾಯಕಿ ಅಲಿಸಾ ಹೀಲಿ ಅದ್ಭುತ ಅರ್ಧಶತಕ ಬಾರಿಸಿದರೆ, ಬೆತ್ ಮೂನಿ ಕೂಡ 76 ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಿದರು. ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಇದೀಗ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ! – Kannada News | Mental Depression and Family Issues: 25 Year Old Vishal’s Suicide, Mother’s Attempt in K’taka

ಹಾರೋಹಳ್ಳಿ, ಫೆ.24 : ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮರಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮರಿಗೌಡನದೊಡ್ಡಿ ಗ್ರಾಮದ ನಿವಾಸಿ ವಿಶಾಲ್ (25) ಎಂಬುವವರು ಜಕ್ಕಸಂದ್ರ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದ ನಂತರ ವಿಶಾಲ್ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರ ಜೊತೆಗೆ ಕೌಟುಂಬಿಕ ಸಮಸ್ಯೆಗಳೂ ಅವರನ್ನು ಕಾಡುತ್ತಿದ್ದವು.

ಪ್ರೀತಿಯ ಮಗ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಕ್ಕೊಳಗಾದ ತಾಯಿ ಗೌರಮ್ಮ, ತಾವೂ ಸಹ ಜೀವನ ಅಂತ್ಯಗೊಳಿಸಲು ಮುಂದಾಗಿದ್ದಾರೆ. ತಕ್ಷಣವೇ ಗಮನಿಸಿದ ಸ್ಥಳೀಯರು ಅವರನ್ನು ರಕ್ಷಿಸಿದ್ದು, ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ವಿಶಾಲ್ ಅವರ ಕುಟುಂಬಕ್ಕೆ ಸಾವು ಹೊಸತಲ್ಲ. ಸುಮಾರು ನಾಲ್ಕು ವರ್ಷಗಳ ಹಿಂದೆ ವಿಶಾಲ್ ಅವರ ತಂದೆ ಕೂಡ ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಮಗನೂ ತಂದೆಯ ಹಾದಿಯನ್ನೇ ಹಿಡಿದಿರುವುದು ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.ಘಟನೆಗೆ ಸಂಬಂಧಿಸಿದಂತೆ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಶೃತಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಶೃತಿ ಸಾವಿಗೆ ವೈದ್ಯರೇ ಕಾರಣ ಎಂದು ಆಸ್ಪತ್ರೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಶೃತಿಗೆ ಐದು ವರ್ಷದ ಗಂಡು ಮಗುವಿದ್ದು, ಇದೀಗ ಹೆಣ್ಣು ಮಗು ಜನಿಸಿತ್ತು. ಇದರಿಂದ ಕುಟುಂಬಸ್ಥರು ಸಹ ಸಂತಸಗೊಂಡಿದ್ದರು. ಆದ್ರೆ, ಈ ಸತೋಷ ಬಹಳ ಹೊತ್ತು ಇರಲಿಲ್ಲ. ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಶೃತಿ(30) ಅವರಿಗೆ ಮರುದಿನ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಹೆರಿಗೆಯೂ ಆಗಿದ್ದು, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶೃತಿ ಕೆಲವೇ ಸಮಯದಲ್ಲಿ ಕೋಮಾಗೆ ಹೋಗಿದ್ದಾರೆ. ಆಗ ಅಗತ್ಯ ಚಿಕಿತ್ಸೆ ನೀಡಿದ ವೈದ್ಯರು ಅರೋಗ್ಯ ಬಿಗಡಾಯಿಸುತ್ತಿದೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಆಗ ಪತಿ ಪುನೀತ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಮಾರ್ಗಮದ್ಯೆಯೇ ಶೃತಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ಹಾಸನದ ಸರ್ಕಾರಿ ಆಸ್ಪತ್ರೆ, ದೊಡ್ಡ ಕಟ್ಟಡ ಸುಸಜ್ಜಿತ ಹೆರಿಗೆ ವ್ಯವಸ್ಥೆ, ತಜ್ಞ ವೈದ್ಯರೂ ಇರ್ತಾರೆ ಎಂದು ಕುಟುಂಬಸ್ಥರು ನಂಬಿದ್ದರು. ಹೀಗಾಗಿ ಫೆಬ್ರವರಿ 21ರ ಶನಿವಾರ ನಡು ರಾತ್ರಿಯಲ್ಲಿ ಹೆರಿಗೆ ನೋವು ಎಂದು ಒದ್ದಾಡಿದಾಕೆಯನ್ನ ಹಿಮ್ಸ್​​ಗೆ ಕರೆತಂದಿದ್ದರು. ಮರುದಿನ ಹೆರಿಗೆಯೂ ಆಗಿತ್ತು. ಆದ್ರೆ, ದುರ್ವೈವ ಮುದ್ದಾದ ಮಗುವಿಗೆ ಜನ್ಮ ಕೊಟ್ಟ ತಾಯಿ ಕರುಳ ಬಳ್ಳಿಯನ್ನ ಕಣ್ತುಂಬಿಕೊಳ್ಳೋ ಮೊದಲೇ ಸಾವನ್ನಪ್ಪಿದ್ದಾಳೆ. ವೈದ್ಯರ ನಿರ್ಲಕ್ಷ್ಯ, ಸರಿಯಾದ ಚಿಕಿತ್ಸೆ ನೀಡದೆ ತಾತ್ಸಾರ ಮಾಡಿದ್ದೇ ಶೃತಿ ಸಾವಿಗೆ ಕಾರಣ ಎಂದು ಸಂಬಂಧಿಕರು ಆರೊಪಿಸಿದ್ದಾರೆ.

ನನ್ನ ಪತ್ನಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಶನಿವಾರ ರಾತ್ತಿ ಬಂದು ಭಾನುವಾರದ ಮಧ್ಯಾಹ್ನದ ವರೆಗೂ ಯಾವ ವೈದ್ಯರು ಬಂದು ನೋಡಲಿಲ್ಲ. ಹೊಟ್ಟೆ ನೋವು ಎಂದರೆ ಇಲ್ಲಿನ ಸಿಬ್ಬಂದಿ ಬಾಯಿಗೆ ಬಂದಂತೆ ಮಾತನಾಡಿದ್ರು. ವೈದ್ಯರಾದ ಸುಮಾ ಅವರು ಹೆರಿಗೆ ಮಾಡಿಸಿದ್ದು, ದಿಢೀರ್ ರಕ್ತ ಬೇಕು ಎಂದು ಹೇಳಿದ್ರು. ಎಲ್ಲವನ್ನು ಹೊಂದಿಸಿಕೊಟ್ಟರೂ ಪತ್ನಿ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಇಲ್ಲಿಂದ ಸಾಗ ಹಾಕಿದ್ರು ಎಂದು ಗೋಳಾಡಿದರು. ಆದ್ರೆ, ಆರೋಪವನ್ನು ಆಸ್ಪತ್ರೆ ಆಡಳಿತ ಮಂಡಳಿ ಅಲ್ಲಗಳೆದಿದೆ.

ವೈದ್ಯರು ಹೇಳಿದ್ದೇನು?

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿಮ್ಸ್ ಶಸ್ತ್ರ ಚಿಕಿತ್ಸಕ, ಈ ಹಿಂದೆ ಅವರು ನಮ್ಮ ಆಸ್ಪತ್ರೆಗೆ ಬಂದಿರಲಿಲ್ಲ. ರಾತ್ರಿ ವೇಳೆ ಬಂದರೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಯಲ್ಲಿ ಯಾವುದೇ ನಿರ್ಲಕ್ಷ್ಯ ಆಗಿಲ್ಲ. ಮಹಿಳೆಗೆ ಹಠಾತ್ ಹೃದಯ ಸ್ಥಂಭನ ಆಗಿ ಕೋಮಾಗೆ ಹೋಗಿ ಸಮಸ್ಯೆ ಎದುರಾಗಿದೆ. ಆಸ್ಪತ್ರೆಯ ಸಿಬ್ಬಂದಿ ಅಥವಾ ವೈದ್ಯರಿಂದ ಯಾವುದೇ ಸಮಸ್ಯೆ ಆಗಿಲ್ಲ. ಮಗು ಕೂಡ ನಮ್ಮದೇ ಆಸ್ಪತ್ರೆಯ ಐಸಿಯುನಲ್ಲಿದ್ದು ಆರೈಕೆ ಮಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಮೂಲಕ ಶೃತಿ ಕುಟುಂಬಸ್ಥರ ಆರೋಪವನ್ನು ಅಲ್ಲಗಳೆದಿದ್ದಾರೆ.

ಒಟ್ಟಿನಲ್ಲಿ ಮತ್ತೊಂದು ಜೀವಕ್ಕೆ ಉಸಿರು ನೀಡಿ, ತನ್ನ ಕರುಳ ಬಳ್ಳಿಯನ್ನ ಕಣ್ತುಂಬಿಕೊಳ್ಳೋ ಮೊದಲೇ ತಾಯಿ ಸಾವನ್ನಪ್ಪಿರುವುದು ದುರಂತ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ

Source link

Exit mobile version