Headlines

ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಬೆಂಗಳೂರು, ಮಾ.30: ಕರ್ನಾಟಕ ರಾಜ್ಯವು ಈ ತಿಂಗಳು ತನ್ನ ಇತಿಹಾಸದಲ್ಲೇ ಅತಿ ಹೆಚ್ಚಿನ ವಿದ್ಯುತ್ ಬೇಡಿಕೆಯನ್ನು ಎದುರಿಸುತ್ತಿದೆ. ಬಿಸಿಲಿನ ತಾಪ ಮತ್ತು ಹೆಚ್ಚುತ್ತಿರುವ ಎಸಿ (AC) ಬಳಕೆ ಹೈಟೆಕ್ ಸಿಟಿ ಬೆಂಗಳೂರನ್ನು ಅಕ್ಷರಶಃ ವಿದ್ಯುತ್ ಗುಳುಂ ಮಾಡುವ ದೈತ್ಯನನ್ನಾಗಿ ಮಾಡಿದೆ. ಈ ತಿಂಗಳು ರಾಜ್ಯದ ಒಟ್ಟು ವಿದ್ಯುತ್ ಬಳಕೆ 373.6 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ, ಇದು ಇದುವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. ಒಂದು ಸಣ್ಣ ರಾಜ್ಯ ಬಳಸುವಷ್ಟು ವಿದ್ಯುತ್ ಅನ್ನು ಕೇವಲ ಬೆಂಗಳೂರು ನಗರವೊಂದೇ ಬಳಸುತ್ತಿದೆ. ನಗರದ…

Read More

ದಾವಣಗೆರೆ: ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಗೆ ಬಂದ ಚುನಾವಣಾ ಸಿಬ್ಬಂದಿಗೆ ಸ್ಥಳದಲ್ಲೇ ಹೆಲ್ತ್ ಚೆಕಪ್

ದಾವಣಗೆರೆ, ಏಪ್ರಿಲ್ 8: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430 ಮಂದಿ ಚುನಾವಣಾ ಸಿಬ್ಬಂದಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಿದೆ. ಹೃದಯಾಘಾತ, ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತಗಟ್ಟೆಗಳಲ್ಲೇ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಆರೋಗ್ಯ ಸಮಸ್ಯೆಗಳಿಂದ ಮತಗಟ್ಟೆಗೆ ಬರಲು…

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​​ 14: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾಕೆ ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಿಗೆ ದೈವಿಕ ಅನುಗ್ರಹವಿರುತ್ತದೆ ಎಂದು ನಂಬಲಾಗಿದೆ. ಅಂತಹ ಪ್ರಮುಖ ಸ್ಥಳಗಳಲ್ಲಿ ಹೊಸ್ತಿಲು ಕೂಡ ಒಂದು. ಹೊಸ್ತಿಲಲ್ಲಿ ಮಹಾಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ…

Read More

ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ. ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಇದು ರೈಲ್ವೆ ಬೋಗಿನಾ ಅಥ್ವಾ ಮನೇನಾ, ಕೋಚ್ ತುಂಬಾ ಒಳ ಉಡುಪುಗಳನ್ನು ನೇತು ಹಾಕಿದ ಮಹಿಳೆಯರು

ಮನಿಹಾರಿ, ಏಪ್ರಿಲ್ 1: ಒಮ್ಮೆ ಈ ರೈಲ್ವೆ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎನ್ನುವ ಅನುಮಾನ ಮೂಡುತ್ತದೆ. ಯಾಕೆಂದರೆ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಘಟನೆ ಮನಿಹಾರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಪ್ರಜ್ಞೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ರೈಲ್ವೆ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಶ್ನೆಯೂ…

Read More

ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ – Kannada News | Referring developments in Venezuela, Asaduddin Owaisi asks PM Modi to capture Mumbai Attack Mastermind in Pakistan

ನವದೆಹಲಿ, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nocolas Maduro) ಅವರನ್ನು ಅಮೆರಿಕದ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಸೆರೆಹಿಡಿದಿರುವ ಘಟನೆಗೆ ಜಾಗತಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕದಲ್ಲಿರುವ ಪರಿಸ್ಥಿತಿ ಮತ್ತು ಬೆಳವಣಿಗೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ (Asaduddin Owaisi) ಅವರು ನಿಲೋಲಾಸ್ ಮಡುರೊ ಬಂಧಿಸಿದ ರೀತಿಯಲ್ಲೇ 2009ರ ಮುಂಬೈ ದಾಳಿ ಘಟನೆಯ ಸಂಚುಕೋರರನ್ನೂ ಸೆರೆ ಹಿಡಿಯಬೇಕೆಂದು…

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು – Kannada News | New Zealand players checks Abhishek Sharma’s bat

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ…

Read More