Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ – Kannada News | Monkeys participating in Holi celebration

ಬಣ್ಣಗಳ ಹಬ್ಬ ಎಂದಾಗ ನೆನಪಿಗೆ ಬರುವುದೇ ಈ ಹೋಳಿ ಹಬ್ಬ (Holi). ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಟ ಆಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಸೆಲೆಬ್ರೇಶನ್‌ನಲ್ಲಿ ತೊಡಗಿದ್ದ ಜನರ ನಡುವೆ ಕೋತಿಗಳು ಕಲರ್ ಫುಲ್ ಬಣ್ಣದಲ್ಲಿ ಮಿಂದೆದ್ದಿವೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.

Shani Nirala Vlogs ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೋಳಿ ಸೆಲೆಬ್ರೇಶನ್ ದೃಶ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಜನರು ಹೋಳಿ ಸೆಲೆಬ್ರೇಶನ್‌ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಕೋತಿಗಳು ಓಕುಳಿಯಾಟ ಆಡಲು ಬಂದಿವೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ ಬಣ್ಣವನ್ನು ಎರಚುತ್ತಿದ್ದು, ಅಲ್ಲೇ ಇದ್ದವರು ಈ ದೃಶ್ಯವನ್ನು ನೋಡಿ ನಗುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು

ಈ ವಿಡಿಯೋ 6.3 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಜೈ ಶ್ರೀರಾಮ್, ಹ್ಯಾಪಿ ಹೋಳಿ ಎಂದರೆ, ಮತ್ತೊಬ್ಬರು, ಜೈ ಭಜರಂಗ್ ಬಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಕೋತಿಗಳ ಹೋಳಿ ಸೆಲೆಬ್ರೇಶನ್ ಮಸ್ತ್ ಆಗಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:59 pm, Wed, 4 March 26

Source link

ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ – Kannada News | Sukanya Samriddhi Yojana, investment period, maturity, amount, returns and other details

ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್ (Sukanya Samriddhi Yojana) ಒಂದು. ಮಹಿಳೆಯರಿಗೆಂದು ಇರುವ ಕೆಲವೇ ಸ್ಕೀಮ್​ಗಳಲ್ಲಿ ಇದೂ ಒಂದು. ಹಾಗೆಯೇ, ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಪೈಕಿ ಅತಿಹೆಚ್ಚು ಬಡ್ಡಿ ನೀಡುವ ಯೋಜನೆಗಳಲ್ಲೂ ಇದು ಇದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಡುವ ಹೂಡಿಕೆ ಮೆಚ್ಯೂರಿಟಿ ಆಗಲು ಕನಿಷ್ಠ 15 ವರ್ಷ ಆಗುವುದರಿಂದ, ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿದ ಸ್ಕೀಮ್ ಇದು.

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ?

ಸುಕನ್ಯಾ ಸಮೃದ್ಧಿ ಯೋಜನೆಯ ಸ್ಕೀಮ್ ಅನ್ನು ಯಾವುದಾದರೂ ಪೋಸ್ಟ್ ಆಫೀಸ್ ಅಥವಾ ಬ್ಯಾಂಕಿನಲ್ಲಿ ಪಡೆಯಬಹುದು. ನಿಮಗೆ ಹೆಣ್ಮಗು ಇದ್ದು ಅವಳ ವಯಸ್ಸು 10 ವರ್ಷಕ್ಕಿಂತ ಕಡಿಮೆ ಇದ್ದರೆ, ಆಕೆಯ ಹೆಸರಿನಲ್ಲಿ ಇದರ ಅಕೌಂಟ್ ತೆರೆಯಬಹುದು.

ಇದನ್ನೂ ಓದಿ: ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

ವರ್ಷಕ್ಕೆ ಕನಿಷ್ಠ ಹೂಡಿಕೆ 250 ರೂ ಮಾತ್ರವೇ ಇರುವುದು. ಗರಿಷ್ಠ ಹೂಡಿಕೆ ವರ್ಷಕ್ಕೆ 1.5 ಲಕ್ಷ ರೂಗೆ ಸೀಮಿತವಾಗಿರುತ್ತದೆ. ಹೂಡಿಕೆ ಅವಧಿ 15 ವರ್ಷ ಇರುತ್ತದೆ. ಬಾಲಕಿಯ ವಯಸ್ಸು 21 ವರ್ಷ ದಾಟಿದಾಗ ಹೂಡಿಕೆ ಮೆಚ್ಯೂರಿಟಿಗೆ ಬರುತ್ತದೆ. ಉದಾಹರಣೆಗೆ, ಬಾಲಕಿ ವಯಸ್ಸು 1 ವರ್ಷ ಇದ್ದಾಗ ನೀವು ಈ ಅಕೌಂಟ್ ತೆರೆದು 15 ವರ್ಷ ಹಣ ಕಟ್ಟುತ್ತೀರಿ. ನಂತರ ಕಟ್ಟಬೇಕಿಲ್ಲ. ಬಾಲಕಿಯ ವಯಸ್ಸು 21 ವರ್ಷ ಪೂರ್ಣಗೊಳ್ಳುವವರೆಗೂ ಅಕೌಂಟ್​ನಲ್ಲಿರುವ ಹಣಕ್ಕೆ ಬಡ್ಡಿ ಸಂದಾಯ ಮುಂದುವರಿಯುತ್ತಾ ಇರುತ್ತದೆ. 21 ವರ್ಷ ವಯಸ್ಸಿನ ನಂತರ ಅಕೌಂಟ್​ನಿಂದ ಹಣ ಪೂರ್ಣ ಹಿಂಪಡೆಯಬಹುದು.

ಬಾಲಕಿಯ ವಯಸ್ಸು 18 ವರ್ಷ ಪೂರ್ಣಗೊಂಡಾಗ ಪಾಕ್ಷಿಕವಾಗಿ ಹಣ ಹಿಂಪಡೆಯಲು ಅವಕಾಶ ಇರುತ್ತದೆ. ಆಕೆಯ ಶಿಕ್ಷಣ ಅಥವಾ ಮದುವೆ ವೆಚ್ಚಕ್ಕೆ ಶೇ. 50ರಷ್ಟು ಹಣವನ್ನು ವಿತ್​ಡ್ರಾ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ತಿಂಗಳಿಗೆ 1,000 ರೂ ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್?

ಸುಕನ್ಯಾ ಸಮೃದ್ಧಿ ಯೋಜನೆಯ ಅಕೌಂಟ್​ಗೆ ನೀವು ತಿಂಗಳಿಗೆ 1,000 ರೂಗಳಂತೆ ಠೇವಣಿ ಇಡುತ್ತಾ ಹೋದರೆ, ಅಂದರೆ ವರ್ಷಕ್ಕೆ 12,000 ರೂ ಹೂಡಿಕೆ ಮಾಡುತ್ತಾ ಹೋದರೆ, ಆಗ 15 ವರ್ಷದಲ್ಲಿ ನೀವು ಪಾವತಿಸುವ ಹಣ 1.8 ಲಕ್ಷ ರೂ ಆಗಿರುತ್ತದೆ. ಸದ್ಯ ಇರುವ ಶೇ. 8.2 ಬಡ್ಡಿಯೇ ಮುಂದುವರಿಯುತ್ತದೆ ಎಂದು ಪರಿಗಣಿಸಿ ಲೆಕ್ಕ ಮಾಡಿದರೆ 21 ವರ್ಷದ ಬಳಿಕ 3.74 ಲಕ್ಷ ರೂ ಬಡ್ಡಿ ಸೇರಿ ಒಟ್ಟು ಸಿಗುವ ರಿಟರ್ನ್ 5,54,206 ರೂ ಆಗಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು! – Kannada News | Bengaluru Software Engineer Suicide: Family Conflict over cooking Lead to Tragedy

ಸುಶ್ಮಾ ಮತ್ತು ಆಕೆಯ ಪತಿ ಪುನೀತ್ ಕುಮಾರ್Image Credit source: INDIA tv

ಬೆಂಗಳೂರು, ಮಾರ್ಚ್​ 04: ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಬ್ಬಿಗೆರೆ (Bengaluru) ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತಿದ್ದ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಅಡಿಗೆ ವಿಷಯಕ್ಕೆ ಅತ್ತೆಯಿಂದ ಕಿರುಕುಳ

ಬೆಂಗಳೂರು ನಿವಾಸಿ ಸುಶ್ಮಾ (35) ಡೆಲ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್​ನನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಮಗನೂ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳ ಕುರಿತಾಗಿ ಆಗಾಗ್ಗೆ ಕಲಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಮಂಗಳವಾರ ಅತ್ತೆ ಕಲ್ಪನಾ ಅವರೊಂದಿಗೆ ಅಡುಗೆ ಮಾಡುವ ವಿಚಾರದಲ್ಲಿ ವಾಗ್ವಾದ ಉಂಟಾಗಿತ್ತು. ಸುಶ್ಮಾ ಕುಟುಂಬದವರ ಆರೋಪದಂತೆ, ಆಕೆಯ ಅತ್ತೆ ಪದೇಪದೇ ಅಡುಗೆ ಮಾಡುವ ವಿಷಯದಲ್ಲಿ ಕಿರಿಕ್ ಮಾಡುತ್ತಿದ್ದು, ಇತರೆ ವಿಷಯಗಳಲ್ಲಿಯೂ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ!

ಈ ಪರಿಸ್ಥಿತಿಯಿಂದ ಮಾನಸಿಕವಾಗಿ ಅಸಹನೀಯಗೊಂಡ ಸುಶ್ಮಾ, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ತಿಳಿಸಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಪತಿ ಪುನೀತ್ ಕುಮಾರ್​ನನ್ನೂ ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಅತ್ತೆ ಕಲ್ಪನಾ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಪೂರ್ವಾಪರ ವಿಚಾರಗಳನ್ನು ಪೊಲೀಸರು ಸವಿಸ್ತಾರವಾಗಿ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರಧಾನಿ ಮೋದಿ ಭೇಟಿ ವೇಳೆಯೇ ಇರಾನ್ ಮೇಲೆ ದಾಳಿಗೆ ನಡೆದಿತ್ತಾ ಪ್ಲಾನ್? ಸೀಕ್ರೆಟ್ ಬಯಲು ಮಾಡಿದ ಇಸ್ರೇಲ್ – Kannada News | Was Iran Strike Planned During PM Modi’s Israel Visit? Israeli Envoy in India Reveals the Truth

ಬೆಂಜಮಿನ್ ನೆತನ್ಯಾಹು ಹಾಗೂ ಪ್ರಧಾನಿ ಮೋದಿImage Credit source: TV9 Network

ನವದೆಹಲಿ, ಮಾರ್ಚ್​ 4: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ಮೇಲೆ ಸೇನಾ ದಾಳಿ ನಡೆಸುವುದಕ್ಕೂ ಎರಡು ದಿನ ಮುನ್ನ ಪ್ರಧಾನಿ ನರೇಂದ್ರ ಮೋದಿ (Naendra Modi) ಇಸ್ರೇಲ್ ಪ್ರವಾಸದಲ್ಲಿದ್ದರು. ಇದು ಬಹಳಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ದಾಳಿ ನಡೆಸಲು ಮೋದಿ ಭೇಟಿ ವೇಳೆಯೇ ಇಸ್ರೇಲ್ ಸಿದ್ಧತೆ ನಡೆಸಿಕೊಂಡಿತ್ತಾ? ಇರಾನ್ ಮೇಲಿನ ದಾಳಿ ಕುರಿತು ಮೋದಿ ಜೊತೆ ಚರ್ಚಿಸಿತ್ತಾ? ಈ ರೀತಿಯ ಪ್ರಶ್ನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡಿದ್ದವು. ಈಗ ಅವುಗಳಿಗೆ ಸ್ಪಷ್ಟನೆ ದೊರೆತಿದೆ. ಖುದ್ದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಸ್ಪಷ್ಟನೆ ನೀಡಿದ್ದಾರೆ.

ಇಸ್ರೇಲ್ ರಾಯಭಾರಿ ಹೇಳಿದ್ದೇನು?

ಇರಾನ್ ಮೇಲೆ ದಾಳಿ ನಡೆಸುವ ಕುರಿತು ಮೋದಿ ಇಸ್ರೇಲ್ ಭೇಟಿ ವೇಳೆ ನಮಗೇ ಗೊತ್ತಿರಲಿಲ್ಲ. ಮೋದಿ ನಿರ್ಗಮಿಸಿದ ನಂತರವೇ ಸೇನಾ ಕಾರ್ಯಾಚರಣೆಯ ಅವಕಾಶದ ಬಗ್ಗೆ ಚರ್ಚೆಯಾಗಿತ್ತು. ಮೋದಿ ಭೇಟಿ ವೇಳೆ ಪ್ರಾದೇಶಿಕ ಅಭಿವೃದ್ಧಿಯ ಬಗ್ಗೆ ಮಾತನಾಡಿದ್ದೇವೆಯೇ ಹೊರತು ಇನ್ನೇನೂ ಚರ್ಚೆ ಆಗಿಲ್ಲ. ನಮಗೆ ಗೊತ್ತಿಲ್ಲದ ವಿಷಯದ ಬಗ್ಗೆ ನಾವು ಬೇರೆಯವರೊಂದಿಗೆ ಮಾಹಿತಿ ಹಂಚಿಕೊಳ್ಳುವುದು ಸಾಧ್ಯವೇ ಎಂದು ಇಸ್ರೇಲ್ ರಾಯಭಾರಿ ರುವೆನ್ ಅಜರ್ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್​’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮೋದಿ ಭಾರತಕ್ಕೆ ತೆರಳಿದ ನಂತರ, ಇರಾನ್ ಮೇಲೆ ದಾಳಿ ಮಾಡುವ ನಿರ್ಧಾರ ತೆಗೆದುಕೊಳ್ಳಲು ಎರಡು ದಿನಗಳು ಬೇಕಾಯಿತು. ಶನಿವಾರ (ಫೆಬ್ರವರಿ 28) ಬೆಳಿಗ್ಗೆ ದಾಳಿ ನಡೆಸುವ ಬಗ್ಗೆ ಸಂಪುಟದ ಭದ್ರತಾ ಸಮಿತಿಯ ಅನುಮೋದನೆ ಪಡೆಯಲಾಯಿತು ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 25 ಮತ್ತು 26 ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಎರಡು ದಿನಗಳ ಭೇಟಿ ನೀಡಿದ್ದರು. ದಶಕಗಳ ರಾಜತಾಂತ್ರಿಕ ನಿರ್ಬಂಧವನ್ನು ಕೊನೆಗೊಳಿಸಿ ಭಾರತ-ಇಸ್ರೇಲ್ ಸಂಬಂಧಗಳನ್ನು ಸಂಪೂರ್ಣವಾಗಿ ಮುಕ್ತಗೊಳಿಸಿದ ಸಂದರ್ಭ 2017 ರಲ್ಲಿ ಮೋದಿ ಅಲ್ಲಿಗೆ ಭೇಟಿ ನೀಡಿದ್ದರು. ಅದಾದ ನಂತರ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದು ಇದೇ ಮೊದಲು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆಗಿನ ಮಾತುಕತೆಯ ನಂತರ ಎರಡೂ ದೇಶಗಳು 17 ಒಪ್ಪಂದಗಳಿಗೆ ಸಹಿ ಹಾಕಿವೆ.

ಇದನ್ನೂ ಓದಿ:ಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇದೆಲ್ಲ ಆಗಿ ಮೋದಿ ಭಾರತಕ್ಕೆ ಬಂದ ನಂತರ ಫೆಬ್ರವರಿ 28 ರಂದು, ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆ ನಡೆಸಿ ಇರಾನ್ ಮೇಲೆ ದಾಳಿ ಮಾಡಿವೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಈಗಲೂ ಮುಂದುವರಿಯುತ್ತಿದೆ. ಅಣ್ವಸ್ತ್ರ ಸಂಬಂಧಿತ ಮಾತುಕತೆ ಸ್ಥಗಿತಗೊಂಡ ನಂತರ ಮತ್ತು ಇರಾನ್ ಪರಮಾಣು ಚಟುವಟಿಕೆಗಳನ್ನು ಪುನರಾರಂಭಿಸಿದೆ ಎಂಬ ಹೇಳಿಕೆಯ ನಂತರ ‘ಆಪರೇಷನ್ ಎಪಿಕ್ ಫ್ಯೂರಿ’ ಎಂದು ಹೆಸರಿಸಲಾದ ಜಂಟಿ ಕಾರ್ಯಾಚರಣೆ ಆರಂಭವಾಯಿತು. ಇರಾನ್ ಮೇಲಿನ ಸೇನಾ ದಾಳಿಯಲ್ಲಿ ಈವರೆಗೆ 700 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! – Kannada News | Hubballi 24 Kg Silver Heist: Rs 59 Lakh Jewelry Stolen in Daring Daylight Robbery

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ!

ಹುಬ್ಬಳ್ಳಿ, ಮಾರ್ಚ್​ 04: ನಗರದಲ್ಲಿ ಹಾಡ ಹಗಲೇ ಸುಮಾರು 59 ಲಕ್ಷ ರೂಪಾಯಿ ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ (Hubli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ಅವನ ಗ್ಯಾಂಗ್ ಸೇರಿ ಈ ಕೃತ್ಯವೆಸಗಿಎಬಹುದಯ ಎಂಬ ಶಂಕೆ ವ್ಯಕ್ತವಾಗಿದೆ.

ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಆರೋಪಿ

ಬೆಂಗಳೂರು ಮೂಲದ ವ್ಯಾಪಾರಿ ಆಶಿಷ್ ಕುಮಾರ್​ಗೆ ಸೇರಿದ ಬೆಳ್ಳಿ ಆಭರಣಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಅಮೀತ್ ಪುರೋಹಿತ್ ಹಾಗೂ ಯೋಗೀಶ್ ಸಿಂಗ್​ಗೆ ನೀಡಲಾಗಿತ್ತು. ಮಾಲೀಕರು ತಮ್ಮದೇ ಕಾರಿನಲ್ಲಿ ಒಟ್ಟು 29 ಕೆಜಿ ಬೆಳ್ಳಿ ಆಭರಣಗಳನ್ನು ನೀಡಿ ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಮಾರಾಟ ಮಾಡಲು ಸೂಚಿಸಿದ್ದರು. ಅದರಲ್ಲಿ 3.167 ಕೆಜಿ ಆಭರಣಗಳನ್ನು ಮಾರಾಟ ಮಾಡಲಾಗಿದ್ದು, ಉಳಿದ 24.760 ಕೆಜಿ ಆಭರಣಗಳನ್ನು ಮಾರಾಟ ಮಾಡಲು ಆರೋಪಿಗಳು ಹುಬ್ಬಳ್ಳಿಗೆ ಬಂದಿದ್ದರು.

ಫೆಬ್ರವರಿ 28ರಂದು ಲ್ಯಾಮಿಂಗ್ಟನ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಸಮೀಪದ ಆಭರಣ ಅಂಗಡಿಗೆ ತೆರಳಿದ ವೇಳೆ, ಕಾರಿನಲ್ಲಿ ಇದ್ದ ಎರಡು ಬ್ಯಾಗ್‌ಗಳಲ್ಲಿ ಕಾಲ್ಗೆಜ್ಜೆ, ಕತ್ತಿನ ಚೈನ್, ಬ್ರಾಸ್‌ಲೇಟ್, ಕೈಕಡಗ ಸೇರಿದಂತೆ ವಿವಿಧ ಬೆಳ್ಳಿ ಆಭರಣಗಳನ್ನು ಆರೋಪಿಗಳು ಗಮನಿಸಿದ್ದರು. ಈ ವೇಳೆ ಯೋಗೀಶ್ ಸಿಂಗ್ ಕಾರಿನ ಕೀಲಿಯನ್ನು ಪಡೆದು ಕಾರನ್ನು ಲಾಕ್ ಮಾಡಿ, ಬೆಳ್ಳಿ ಆಭರಣಗಳಿದ್ದ ಎರಡು ಬ್ಯಾಗ್‌ಗಳನ್ನು ಕದ್ದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು! – Kannada News | Miscreant cheats man of Rs 60 thousand in the guise of helping withdraw cash at ATM In Raichur

ರಾಯಚೂರು, (ಮಾರ್ಚ್ 04): ಎಟಿಎಂ ಪಿನ್ (ಪಾಸ್​ವರ್ಡ್​​) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗುತ್ತಾರೆ. ಅದರಂತೆ ರಾಯಚೂರಿನಲ್ಲಿ ವ್ಯಕ್ತಿಯೋರ್ವ ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಲು ಬೇರೆಯವನ ಸಹಾಯಕ ಪಡೆದುಕೊಂಡು 64,000 ಕಳೆದುಕೊಂಡಿದ್ದಾರೆ. ಹೌದು…ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್​​ನಲ್ಲಿ ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ..

ಫೆಬ್ರವರಿ 26ರಂದು ಭೀಮಪ್ಪ ಎನ್ನುವ ವ್ಯಕ್ತಿ ಎಟಿಎಂನಿಂದ ಹಣ ಡ್ರಾಮಾಡಿಕೊಳ್ಳಲು ಹೋಗಿದ್ದಾನೆ. ಆದ್ರೆ, ಗೊತ್ತಾಗಿದ್ದಾಗ ಬೇರೊಬ್ಬರಿಗೆ ಹಣ ತೆಗೆದುಕೊಡಲು ಎಟಿಎಂ ಪಿನ್ ಸಹ ಹೇಳಿದ್ದಾನೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕ, ಭೀಮಪ್ಪನಿಗೆ ಬದಲಿಗೆ ಎಟಿಎಂ ಕಾರ್ಡ್ ನೀಡಿ ನಂತರ ಬೇರೆ ಕಡೆ ಹೋಗಿ ಭೀಮಪ್ಪನ ಎಟಿಎಂನಿಂದ 64,000 ಹಣ ಡ್ರಾ ಮಾಡಿಕೊಂಡಿದ್ದಾನೆ. ಬಳಿಕ ಬ್ಯಾಂಕ್​ಗೆ ತೆರಳಿ ಸಿಬ್ಬಂದಿಯನ್ನು ವಿಚಾರಿಸಿದಾಗ ಮೋಸಹೋಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಭೀಮಪ್ಪ ನೀಡಿದ ದೂರಿನ ಅನ್ವಯ ಮುದಗಲ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸಿದ್ದಾರೆ.

Source link

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು – Kannada News | Stampede Erupts During Fire Ritual at Temple Festival in Nalgonda

ನಲ್ಗೊಂಡ, ಮಾರ್ಚ್​ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ತೆಲಂಗಾಣದ ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.

ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು ಪೂರ್ಣ ಪ್ರಮಾಣದ ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು ಹಾಗೂ ಮೂವರು ಬೌಲರ್​ಗಳನ್ನು ಕಣಕ್ಕಿಳಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಮತ್ತು ಐದನೇ ಕ್ರಮಾಂಕಗಳಲ್ಲಿ ಸೂರ್ಯಕುಮಾರ್ ಯಾದವ್  ಹಾಗೂ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.

ಮತ್ತೊಂದೆಡೆ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಲಭಿಸಲಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಕಾಣಿಸಿಕೊಳ್ಳುವುದು ಖಚಿತ. ಹಾಗೆಯೇ ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ವೇಗಿಗಳಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇರಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್
  • ಸೂರ್ಯಕುಮಾರ್ ಯಾದವ್ (ನಾಯಕ)
  • ತಿಲಕ್ ವರ್ಮಾ
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ಅಕ್ಷರ್ ಪಟೇಲ್
  • ವರುಣ್ ಚಕ್ರವರ್ತಿ
  • ಜಸ್​ಪ್ರೀತ್ ಬುಮ್ರಾ
  • ಅರ್ಷದೀಪ್ ಸಿಂಗ್.

ಇದನ್ನೂ ಓದಿ: ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ – Kannada News | Drug Influenced Miscreants Vandalise Car in Shivamogga, Case Registered

ಶಿವಮೊಗ್ಗ, ಮಾರ್ಚ್​ 04: ನಗರದಲ್ಲಿ ಗಾಂಜಾ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾದಕ ವಸ್ತುವಿನ ಅಮಲಿನಲ್ಲಿ ದುಷ್ಕರ್ಮಿಗಳು ಹೊಸ ಕಾರನ್ನು ಜಖಂಗೊಳಿಸಿರುವ ಘಟನೆ ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾರಿನ ಮಾಲೀಕ ಸುರೇಶ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ಈ ಕಾರನ್ನು ಖರೀದಿಸಿದ್ದರು ಎನ್ನಲಾಗಿದೆ. ಈ ಪ್ರದೇಶದಲ್ಲಿ ಗಾಂಜಾ ಸೇದುವುದು, ಕುಡಿಯುವುದು, ಗಲಾಟೆ ಮಾಡುವುದು, ಹಾಗೂ ಜನರಿಗೆ ತೊಂದರೆ ನೀಡುವುದು ಸಾಮಾನ್ಯವಾಗಿದೆ. ಬೈಕ್‌ಗಳನ್ನು ಜಖಂಗೊಳಿಸುವುದು, ಪೆಟ್ರೋಲ್ ಕಳವು ಮಾಡುವುದು ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಈ ಪುಂಡರ ಹಾವಳಿಯಿಂದ ಬೇಸತ್ತ ಸ್ಥಳೀಯ ನಿವಾಸಿಗಳು ತಮಗೂ ಮತ್ತು ತಮ್ಮ ಆಸ್ತಿಪಾಸ್ತಿಗಳಿಗೂ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ. ಇಂದು ಕಾರುಗಳಿಗೆ ಹಾನಿ ಮಾಡಿರುವ ಇವರು ನಾಳೆ ತಮ್ಮ ಕುಟುಂಬಗಳಿಗೂ ತೊಂದರೆ ನೀಡಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಂದಿಯಲ್ಲಿ ರಾಯನ ಪಾತ್ರಕ್ಕೆ ಯಶ್​​ನಿಂದಲೇ ಡಬ್ಬಿಂಗ್? ಮುಂಬೈ ಸ್ಟುಡಿಯೋದಲ್ಲಿ ಯಶ್ ಇರೋದೇಕೆ? – Kannada News | Yash Oversees Toxic Hindi Dubbing: Sachin Gole Returns as KGF Voice Artist

ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ‘ಟಾಕ್ಸಿಕ್’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಜವಾಬ್ದಾರಿಗಳನ್ನು ಅವರು ಹೆಗಲಮೇಲೆ ಹಾಕಿಕೊಂಡು ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಮಲಯಾಳಂನ ಗೀತು ಮೋಹನ್​ ದಾಸ್ ಜೊತೆ ಸೇರಿ, ಜವಾಬ್ದಾರಿ ಹಂಚಿಕೊಂಡು ಯಶ್ . ಈಗ ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ನಡೆಯುತ್ತಿದೆ. ಹಾಗಾದರೆ ಯಶ್ ಅವರೇ ಹಿಂದಿಗೂ ಡಬ್ ಮಾಡುತ್ತಿದ್ದಾರಾ? ಯಶ್ ಮುಂಬೈ ಡಬ್ಬಿಂಗ್ ಸ್ಟುಡಿಯೋದಲ್ಲಿ ಕುಳಿತಿದ್ದು ಏಕೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ‘ಟಾಕ್ಸಿಕ್’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗಾಗಲೇ ಅವರು ಕನ್ನಡ ವರ್ಷನ್​​ಗೆ ಡಬ್ಬಿಂಗ್ ಮುಗಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರು ಹಿಂದಿ ವರ್ಷನ್​ ಕಡೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರ ಸದ್ಯ ತನ್ನ ರಿಲೀಸ್ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಿಕೊಂಡಿದೆ. ಸದ್ಯ ಯಶ್ ಅವರು ಹಿಂದಿ ವರ್ಷನ್ ಅನ್ನು ಉತ್ತಮವಾಗಿ ಮಾಡುವ ಉದ್ದೇಶ ಹೊಂದಿದ್ದಾರೆ. ಈ ಕಾರಣದಿಂದ ಅವರು ಡಬ್ಬಿಂಗ್​​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಹಿಂದಿ ವರ್ಷನ್​​ಗೆ ಯಶ್ ಡಬ್ಬಿಂಗ್ ಮಾಡುತ್ತಿಲ್ಲ. ಬದಲಿಗೆ ಹಿರಿಯ ಕಲಾವಿದ ಸಚಿನ್ ಗೋಲೆ ಅವರು ಧ್ವನಿ ನೀಡುತ್ತಿದ್ದಾರೆ. ಅವರು ಈ ಮೊದಲು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರದ ರಾಕಿ ಪಾತ್ರಕ್ಕೆ ವಾಯ್ಸ್ ಕೊಟ್ಟಿದ್ದರು. ‘ಕೆಜಿಎಫ್ 2’ ರಿಲೀಸ್ ವೇಳೆ ಯಶ್​​ಗೆ ಹಿಂದಿ ವರ್ಷನ್​ಗೆ ಧ್ವನಿ ಕೊಡೋ ಬಗ್ಗೆ ಕೋರಿಕೆ ಬಂದಿತ್ತು. ಆಗ ಯಶ್ ಈ ಬಗ್ಗೆ ಪ್ರತಿಕ್ರಿಯಿಸಿದ್ದರು.

ಹಿಂದಿ ಪ್ರೇಕ್ಷಕರಿಗೆ ಯಶ್ ಎಂದಾಗ ಸಚಿನ್ ಧ್ವನಿಯೇ ನೆನಪಾಗುತ್ತದೆ. ಹೀಗಾಗಿ, ಧ್ವನಿ ಬದಲಿಸಿದರೆ ಪ್ರೇಕ್ಷಕರು ಅದನ್ನು ಒಪ್ಪಿಕೊಳ್ಳದೆ ಇರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸಚಿನ್ ಅವರೇ ಧ್ವನಿ ನೀಡಲಿ ಎಂದು ಯಶ್ ಹೇಳಿದ್ದರು. ಈ ಕಾರಣದಿಂದ ‘ಟಾಕ್ಸಿಕ್’ ಚಿತ್ರಕ್ಕೂ ಯಶ್ ಅವರನ್ನೇ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..

ಸದ್ಯ ಯಶ್ ಅವರು ಮುಂಬೈನ ಡಬ್ಬಿಂಗ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರು ಸಚಿನ್ ಅವರಿಗೆ ಡೈಲಾಗ್ ಡೆಲಿವರಿಗೆ, ಡೈಲಾಗ್​​ ಅಲ್ಲಿ ಭಾವನೆ ತುಂಬಲು ಸಹಕಾರಿ ಆಗುತ್ತಿದ್ದಾರೆ. ಇದು ಅವರ ಸಿನಿಮಾ ಪ್ರೇಮವನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version