ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ – Kannada News | PM Narendra Modi inaugurates 4th AI Impact Summit at Delhi

ನವದೆಹಲಿ, ಫೆಬ್ರುವರಿ 16: ನಾಲ್ಕನೇ ಆವೃತ್ತಿಯ ಎಐ ಇಂಪ್ಯಾಟ್ ಶೃಂಗಸಭೆಗೆ (AI Impact Summit) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇವತ್ತಿನಿಂದ ಫೆಬ್ರುವರಿ 20ರವರೆಗೂ ಐದು ದಿನಗಳ ಕಾಲ ಭಾರತ್ ಮಂಟಪಂನಲ್ಲಿ ಈ ಸಮಿಟ್​ನ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ‘ಜನತೆ, ಭೂಮಿ ಮತ್ತು ಪ್ರಗತಿ’ ಥೀಮ್​ನಲ್ಲಿ ಈ ಶೃಂಗಸಭೆ ಆಯೋಜನೆಯಾಗುತ್ತಿದೆ.

ಹಿಂದಿನ ಮೂರು ಎಐ ಇಂಪ್ಯಾಕ್ಟ್ ಸಮಿಟ್​ಗಳು ಬ್ರಿಟನ್, ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ನಡೆದಿದ್ದವು. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಸಮಾವೇಶ ನಡೆಯುತ್ತಿರುವುದು. ಸಮಾವೇಶದಲ್ಲಿ ಏಳು ಅಂಶಗಳ ಥೀಮ್ ಒಳಗೊಳ್ಳಲಾಗಿದೆ. ಮಾನವ ಸಂಪನ್ಮೂಲ, ಒಳಗೊಳ್ಳುವಿಕೆ, ನಂಬಿಕೆ, ಪುಟಿದೇಳುವಿಕೆ, ವಿಜ್ಞಾನ, ಸಂಪನ್ಮೂಲ, ಸಾಮಾಜಿಕ ಒಳಿತು, ಈ ಅಂಶಗಳ ಆಧಾರದ ಮೇಲೆ ಜಾಗತಿಕ ಸಹಭಾಗಿತ್ವಗಳನ್ನು ಸೇರಿಸುವುದಕ್ಕೆ ಗಮನ ಕೊಡಲಾಗುತ್ತದೆ.

ಇದನ್ನೂ ಓದಿ: AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಪ್ರತೀ ದಿನ ಬೇರೆ ಬೇರೆ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ. ಎಐ ಕ್ಷೇತ್ರದಲ್ಲಿ ಆಗಿರುವ ಹೊಸ ಹೊಸ ಆವಿಷ್ಕಾರಗಳ ಪ್ರದರ್ಶನಗಳನ್ನು ಕಾಣಬಹುದು. ವಿವಿಧ ಸ್ಟಾರ್ಟಪ್​ಗಳು ತಮ್ಮ ಉತ್ಪನ್ನಗಳನ್ನು ತೋರ್ಪಡಿಸುತ್ತಿವೆ. 300ಕ್ಕೂ ಹೆಚ್ಚು ಪ್ರದರ್ಶಕರು ಈ ಸಮಾವೇಶದಲ್ಲಿ ಕಾರ್ಯನಿರತರಾಗಿರುತ್ತಾರೆ.

ವಿವಿಧ ದೇಶಗಳ ಪ್ರಧಾನಿ, ಅಧ್ಯಕ್ಷ ಅಥವಾ ಉನ್ನತ ಸ್ತರದ ನಾಯಕರುಗಳು, ಸಚಿವರುಗಳು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಓಪನ್ ಎಐ, ಗೂಗಲ್, ಎನ್​ವಿಡಿಯಾ, ಮೈಕ್ರೋಸಾಫ್ಟ್, ರಿಲಾಯನ್ಸ್, ಆಂಥ್ರೋಪಿಕ್ ಇತ್ಯಾದಿ ದೈತ್ಯ ಕಂಪನಿಗಳ ಪಾತಿನಿಧ್ಯವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ?

ಜಾಗತಿಕ ಟೆಕ್ ದಿಗ್ಗಜ ಸಂಸ್ಥೆಗಳು ಭಾರತದಲ್ಲಿ ಎಐ ಅಭಿವೃದ್ಧಿಗೆ ಬಂಡವಾಳ ಹೂಡಿಕೆ ಮಾಡಬಹುದು. ಭಾರತದ ಎಐ ಯೋಜನೆಗಳು ಜಗತ್ತಿನ ಗಮನ ಸೆಳೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್​​ಗೆ ಅಧಿಕೃತ ಮುಹೂರ್ತ ಫಿಕ್ಸ್ – Kannada News | Karnataka Budget 2026 session set from March 6 to 27th, here Is Details

ಬೆಂಗಳೂರು, (ಫೆಬ್ರವರಿ 16): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ಮಧ್ಯೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ (Karnataka Budget 2026) ದಿನಾಂಕ ಫಿಕ್ಸ್​​ ಆಗಿದೆ. ಹಣಕಾಸು ಖಾತೆಯನ್ನ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ ಇಂದು (ಫೆಬ್ರವರಿ 16) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿದ್ದರಾಮಯ್ಯ

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್​ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ನಡೆಯಲಿರುವ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಈಗಾಗಲೇ 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಸಕಲ ಸಿದ್ಧತೆ ನಡೆಸುತ್ತಿದ್ದು, ಸರಣಿ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇನ್ನು ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿಯೇ ಅತಿಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಅನ್ನೋ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ.

ಇದನ್ನೂ ಓದಿ: ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು

ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ದೇವರಾಜ ಅರಸು ಅವರು 2,789 ದಿನ ಅಂದ್ರೆ 7 ವರ್ಷ- 239 ದಿನಗಳ (ಎರಡು ಅವಧಿ) ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಕೂಡ ಈಗಾಗಲೇ 7 ವರ್ಷ 239 ದಿನ ಪೂರೈಸಿ ಅರಸು ದಾಖಲೆ ಮುರಿದಿದ್ದಾರೆ.

ಕಾಂಗ್ರೆಸ್​ ಪಕ್ಷದ ಪ್ರಬಲ ನಾಯಕ ಸಿದ್ದರಾಮಯ್ಯ ಅವರು ತಮ್ಮದೇ ವರ್ಚಸ್ಸು, ಚಾತುರ್ಯತೆಯಿಂದ ಬೆಳೆದು ಬಂದಿದ್ದಾರೆ. 2013 ರಿಂದ 2018 ರವರ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ರು. ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದರು. ಬಳಿಕ ಮೇ 20, 2023 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಸಿವಾಗುವುದು ಕಡಿಮೆ ಆಗಿದ್ಯಾ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಗಂಭೀರ ಕಾಯಿಲೆ ಬರುವ ಮುನ್ಸೂಚನೆಯಾಗಿರಬಹುದು – Kannada News | Sudden Loss of Appetite: A Warning Sign?

ಕೆಲವರಿಗೆ ಇದ್ದಕ್ಕಿದ್ದಂತೆ ಹಸಿವು (Appetite) ಕಡಿಮೆಯಾಗುವುದು ಸಹಜ. ಅದಕ್ಕಾಗಿಯೇ ಜನ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ರೀತಿ ಮಾಡಬಾರದು. ಏಕೆಂದರೆ ಇದು ಗಂಭೀರ ಸಮಸ್ಯೆಯ ಸಂಕೇತವೂ ಆಗಿರಬಹುದು. ಇದನ್ನು ಆಯಾಸ (Fatigue), ಹವಾಮಾನ ಅಥವಾ ದಿನಚರಿಯಲ್ಲಿನ ಬದಲಾವಣೆ ಎಂದು ಗಂಭೀರವಾಗಿ ಪರಿಗಣಿಸದಿದ್ದರೆ ಇದಕ್ಕೆ ತಕ್ಕ ದಂಡ ತೆರಬೇಕಾದ ಸಮಯ ಬರಬಹುದು. ಹೌದು, ಹಸಿವು ದೇಹದ ಅಗತ್ಯತೆ ಮತ್ತು ಆಂತರಿಕ ಸಮತೋಲನವನ್ನು ಸಂಕೇತಿಸುತ್ತದೆ. ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ, ಹಸಿವಾಗುವುದು ಸಹಜ. ಯಾವುದೇ ನಿರ್ದಿಷ್ಟ ಕಾರಣವಿಲ್ಲದೆ ಹಸಿವು ಕಡಿಮೆಯಾಗುತ್ತಿದ್ದರೆ, ಅದು ದೇಹದ ಶಕ್ತಿ, ರೋಗನಿರೋಧಕ ಶಕ್ತಿ ಮತ್ತು ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದನ್ನು ತಡೆಗಟ್ಟುವುದು ಬಹಳ ಮುಖ್ಯವಾಗಿದೆ. ಈ ವಿಷಯದ ಕುರಿತ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ಊಟ ಮಾಡದಿದ್ದರೆ ದೌರ್ಬಲ್ಯ, ತಲೆತಿರುಗುವಿಕೆ, ಕಿರಿಕಿರಿ ಮತ್ತು ಕೆಲಸದಲ್ಲಿ ಏಕಾಗ್ರತೆಯ ಕೊರತೆಯಂತಹ ಸಮಸ್ಯೆಗಳು ಉಂಟಾಗುತ್ತದೆ. ಜೊತೆಗೆ ದೇಹವು ಕ್ರಮೇಣ ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಅಷ್ಟೇಅಲ್ಲ, ದೈನಂದಿನ ಕೆಲಸಗಳು ಸಹ ಭಾರವೆಂದು ಭಾಸವಾತ್ತವೆ. ದೀರ್ಘಕಾಲದ ಹಸಿವಿನ ಕೊರತೆಯು ತೂಕ ನಷ್ಟ ಮತ್ತು ಪೌಷ್ಟಿಕಾಂಶದ ಕೊರತೆಗೆ ಕಾರಣವಾಗಬಹುದು. ಇದು ಚರ್ಮ, ಕೂದಲು ಮತ್ತು ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಯಾವುದೇ ಸ್ಪಷ್ಟ ಕಾರಣವಿಲ್ಲದೆ ವ್ಯಕ್ತಿಗೆ ದಣಿದ ಮತ್ತು ಆಲಸ್ಯದ ಅನುಭವ ಆಗಬಹುದು. ಆದ್ದರಿಂದ, ಹಸಿವಿನಲ್ಲಿನ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಮಯಕ್ಕೆ ಸರಿಯಾಗಿ ಅವುಗಳ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ.

ಹಸಿವಿನ ಕೊರತೆಯು ಯಾವ ಕಾಯಿಲೆಯ ಸಂಕೇತ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ನಿರಂತರವಾಗಿ ಹಸಿವು ಕಡಿಮೆಯಾಗುವುದು ಕೆಲವು ಆಂತರಿಕ ಕಾಯಿಲೆಗಳಿಗೆ ಸಂಬಂಧಿಸಿರಬಹುದು. ಅನಿಲ, ಆಮ್ಲೀಯತೆ ಅಥವಾ ಉಬ್ಬುವಿಕೆಯಂತಹ ಜೀರ್ಣಕಾರಿ ಸಮಸ್ಯೆಗಳು ಹಸಿವನ್ನು ಕಡಿಮೆ ಮಾಡಬಹುದು. ಥೈರಾಯ್ಡ್ ಅಸ್ವಸ್ಥತೆಗಳು ದೇಹದ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರಬಹುದು, ಇದು ಆಹಾರ ಸೇವಿಸಬೇಕು ಎಂಬ ಬಯಕೆಯನ್ನೇ ಕಡಿಮೆ ಮಾಡುತ್ತದೆ. ರಕ್ತಹೀನತೆಯ (ಕಬ್ಬಿಣದ ಕೊರತೆ) ಸಂದರ್ಭಗಳಲ್ಲಿ, ದೌರ್ಬಲ್ಯ ಮತ್ತು ಆಯಾಸವು ಸಾಮಾನ್ಯವಾಗಿ ಹಸಿವು ಕಡಿಮೆ ಮಾಡುವುದಕ್ಕೆ ಕಾರಣವಾಗುತ್ತದೆ. ಅಷ್ಟೇಅಲ್ಲ, ಯಕೃತ್ತು ಅಥವಾ ಮೂತ್ರಪಿಂಡಗಳಿಗೆ ಸಂಬಂಧಿಸಿದ ಸಮಸ್ಯೆಗಳು, ದೀರ್ಘಕಾಲದ ಸೋಂಕುಗಳು ಅಥವಾ ಹಾರ್ಮೋನುಗಳ ಅಸಮತೋಲನಗಳು ಸಹ ಹಸಿವಾಗದಿರುವುದಕ್ಕೆ ಕಾರಣವಾಗಬಹುದು. ಜೊತೆಗೆ ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಅಂಶಗಳು ಸಹ ಹಸಿವನ್ನು ನಿಗ್ರಹಿಸಬಹುದು.

ಇದನ್ನೂ ಓದಿ: ಶುಗರ್ ರಿಪೋರ್ಟ್ ನಾರ್ಮಲ್ ಬಂದ್ರೂ ಸುಸ್ತು ಅನಿಸುವುದಕ್ಕೆ ಈ ಹಿಡನ್ ಡಯಾಬಿಟಿಸ್ ಲಕ್ಷಣ ಕಾರಣವೇ?

ಈ ಸ್ಥಿತಿ ದೀರ್ಘಕಾಲದವರೆಗೆ ಮುಂದುವರಿದರೆ, ಅದನ್ನು ದೇಹ ನೀಡುತ್ತಿರುವ ಎಚ್ಚರಿಕೆಯ ಸಂಕೇತವೆಂದು ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಹಸಿವು ಕಡಿಮೆಯಾಗುವ ಸಮಸ್ಯೆ ಎರಡರಿಂದ ಮೂರು ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ, ತ್ವರಿತ ತೂಕ ನಷ್ಟ, ನಿರಂತರ ದೌರ್ಬಲ್ಯ ಅಥವಾ ತಲೆತಿರುಗುವಿಕೆ ಅಥವಾ ಊಟದ ನಂತರ ವಾಂತಿಯಾಗುತ್ತಿದ್ದರೆ ಅಥವಾ ಬಂದಂತೆ ಭಾಸವಾಗುತ್ತಿದ್ದರೆ, ವೈದ್ಯರನ್ನು ಆದಷ್ಟು ಬೇಗ ಭೇಟಿ ಮಾಡುವುದು ಒಳ್ಳೆಯದು.

ಹಸಿವು ಕಡಿಮೆಯಾಗದಂತೆ ತಡೆಯಲು ಏನು ಮಾಡಬಹುದು?

ಹಸಿವು ಚೆನ್ನಾಗಿ ಆಗಲು, ಪ್ರತಿದಿನ ನಿಯಮಿತ ಸಮಯಕ್ಕೆ ಊಟ ಮಾಡಬೇಕು. ದೀರ್ಘಕಾಲದವರೆಗೆ ಹಸಿವಿನಿಂದ ಇರಬಾರದು. ಹಣ್ಣು, ತರಕಾರಿ ಮತ್ತು ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್‌ಗಳನ್ನು ಒಳಗೊಂಡಿರುವ ಆಹಾರವನ್ನು ಸೇವನೆ ಮಾಡಬೇಕು. ಡೀಪ್-ಫ್ರೈಡ್ ಮತ್ತು ಜಂಕ್ ಫುಡ್ ತಿನ್ನುವುದನ್ನು ನಿಲ್ಲಿಸಬೇಕು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು ಮತ್ತು ನಿದ್ರೆ ಚೆನ್ನಾಗಿ ಮಾಡಬೇಕು. ಇದೆಲ್ಲದರ ಜೊತೆಗೆ ಪ್ರತಿದಿನ ಸ್ವಲ್ಪ ನಡೆಯುವುದು ಅಥವಾ ಲಘು ವ್ಯಾಯಾಮ ಮಾಡಬೇಕು. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ಒತ್ತಡವನ್ನು ಕಡಿಮೆ ಮಾಡಲು, ಯೋಗ, ಧ್ಯಾನ ಅಥವಾ ನೀವು ಇಷ್ಟಪಡುವ ಕೆಲಸ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ – Kannada News | Hours after resignation to Congress Bhupen Borah says reconsidering decision Rahul Gandhi Steps In

ನವದೆಹಲಿ, ಫೆಬ್ರವರಿ 16: ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವದ ಹಸ್ತಕ್ಷೇಪದ ನಂತರ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸುತ್ತಿರುವುದಾಗಿ ಅಸ್ಸಾಂ (Assam) ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಹೇಳಿದ್ದಾರೆ. ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಭೂಪೇನ್ ಬೋರಾ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್, ರಾಜೀನಾಮೆಗೆ ಕಾರಣವಾದ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಭೂಪೇನ್ ಅವರೊಂದಿಗೆ ವಿವರವಾದ ಚರ್ಚೆಗಳನ್ನು ನಡೆಸಿದೆ ಎಂದು ಹೇಳಿದರು. ”ಪಕ್ಷದ ನಾಯಕರು ಭೂಪೇನ್ ಬೋರಾ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ

”ಇದು ನಮ್ಮ ಆಂತರಿಕ ವಿಷಯ. ಅವರನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಅವರ ರಾಜೀನಾಮೆಯನ್ನು ಹಿಂಪಡೆಯಲು ಒಪ್ಪಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಭೂಪೇನ್ ಬೋರಾ ಅವರು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದ ಹೈಕಮಾಂಡ್​​ನಿಂದ ಹೆಚ್ಚು ಸಮಯವನ್ನು ಕೋರಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು?

ತಮ್ಮ ನಿವಾಸದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಭೂಪೇಂದ್ರ ಬೋರಾ, “ನನ್ನ ಹಳೆಯ ಸಹೋದ್ಯೋಗಿಗಳು ಮತ್ತು ಪಕ್ಷದ ಹೈಕಮಾಂಡ್ ನಾಯಕರು ನನ್ನ ಮನೆಗೆ ಬಂದಿದ್ದರು. ನಾನು ಅವರನ್ನು ಗೌರವಿಸುತ್ತೇನೆ. ನನ್ನ ಕುಟುಂಬದೊಂದಿಗೆ ಮಾತನಾಡಲು ಮತ್ತು ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ನಾಳೆ ಬೆಳಿಗ್ಗೆವರೆಗೆ ಸಮಯ ಕೇಳಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ENG vs ITA: ಇಟಲಿ ವಿರುದ್ಧ ಇಂಗ್ಲೆಂಡ್​ಗೆ ಪ್ರಯಾಸದ ಗೆಲುವು; ಸೂಪರ್​ 8 ಸುತ್ತಿಗೆ ಎಂಟ್ರಿ – Kannada News | T20 World Cup 2026: England Edges Spirited Italy in Thriller; Jacks Shines

2026 ರ ಟಿ20 ವಿಶ್ವಕಪ್ ದಿನ ಕಳೆದಂತೆ ರೋಚಕ ಘಟ್ಟದತ್ತ ಸಾಗುತ್ತಿದೆ. ಈ ಆವೃತ್ತಿಯಲ್ಲಿ ಕೆಲವು ಬಲಿಷ್ಠ ತಂಡಗಳು ನಿರಸ ಪ್ರದರ್ಶನ ನೀಡುತ್ತಿದ್ದರೆ, ಕೆಲವು ದುರ್ಬಲ ತಂಡಗಳು ಗಮನಾರ್ಹ ಪ್ರದರ್ಶನ ನೀಡುತ್ತಿವೆ. ಕಳಪೆ ಪ್ರದರ್ಶನ ನೀಡುತ್ತಿರುವ ಬಲಿಷ್ಠ ತಂಡಗಳ ಪೈಕಿ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ಕೂಡ ಸೇರಿದೆ. ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್‌, ಈ ಮೂರು ಪಂದ್ಯಗಳನ್ನು ಕೂದಲೆಳೆ ಅಂತರದಿಂದ ಗೆದ್ದುಕೊಂಡು ಸೋಲಿನಿಂದ ಪಾರಾಗಿದ್ದು ಮಾತ್ರವಲ್ಲದೆ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇಂದು ನಡೆದ ಇಟಲಿ ವಿರುದ್ಧದ ಪಂದ್ಯದಲ್ಲೂ ಇಂಗ್ಲೆಂಡ್​ಗೆ ಏಕಪಕ್ಷೀಯವಾಗಿ ಗೆಲುವು ದಕ್ಕಲಿಲ್ಲ. ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿರುವ ಇಟಲಿ ಕೂಡ ಇಂಗ್ಲೆಂಡ್ ವಿರುದ್ಧ ಕೆಚ್ಚೆದೆಯ ಹೋರಾಟ ನೀಡಿತಾದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ.

ಮತ್ತೆ ಎಡವಿದ ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿಯೂ ಇಂಗ್ಲೆಂಡ್ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ಪರ ಫಿಲ್ ಸಾಲ್ಟ್ ತಂಡಕ್ಕೆ ತ್ವರಿತ ಆರಂಭ ನೀಡಿದರು, ಅವರು ಬಂದ ತಕ್ಷಣ ಕೆಲವು ಬೌಂಡರಿಗಳನ್ನು ಬಾರಿಸಿದರು. ಆದರೆ ಜೋಸ್ ಬಟ್ಲರ್ ಅವರ ಕಳಪೆ ಫಾರ್ಮ್ ಈ ಪಂದ್ಯದಲ್ಲೂ ಮುಂದುವರೆಯಿತು. ಆದಾಗ್ಯೂ, ಸಾಲ್ಟ್ ಔಟಾದ ನಂತರ, ಇಂಗ್ಲೆಂಡ್‌ನ ವಿಕೆಟ್‌ಗಳು ಒಂದೊಂದಾಗಿ ಬೀಳಲು ಪ್ರಾರಂಭಿಸಿದವು. ಇದರ ಪರಿಣಾಮವಾಗಿ ಕೇವಲ 105 ರನ್‌ಗಳಿಗೆ ನಾಯಕ ಹ್ಯಾರಿ ಬ್ರೂಕ್ ಸೇರಿದಂತೆ ತಂಡದ ಅರ್ಧದಷ್ಟು ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡರು.

ಈ ವೇಳೆ ಜೊತೆಯಾದ ಸ್ಯಾಮ್ ಕರನ್ ಮತ್ತು ವಿಲ್ ಜ್ಯಾಕ್ಸ್ ತಂಡದ ಇನ್ನಿಂಗ್ಸ್ ನಿಭಾಯಿಸಿ, ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಕರನ್ ಔಟಾದ ನಂತರವೂ ಅದ್ಭುತ ಫಾರ್ಮ್ ಮುಂದುವರೆಸಿದ ವಿಲ್ ಜ್ಯಾಕ್ಸ್, ಕೇವಲ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿ ತಂಡವನ್ನು 202 ರನ್​ಗಳಿಗೆ ಕೊಂಡೊಯ್ದರು. ಇಟಲಿ ಪರ ಗ್ರಾಂಟ್ ಸ್ಟೀವರ್ಟ್ ಮತ್ತು ಕ್ರಿಶನ್ ಕಲುಗಮಗೆ ತಲಾ ಎರಡು ವಿಕೆಟ್ ಪಡೆದರು.

ಇಟಲಿಗೆ ಆರಂಭಿಕ ಆಘಾತ

ಈ ಗುರಿ ಬೆನ್ನಟ್ಟಿದ ಇಟಲಿಗೆ ಜೋಫ್ರಾ ಆರ್ಚರ್ ಮೊದಲ ಓವರ್‌ನಲ್ಲಿ ಎರಡು ವಿಕೆಟ್‌ ಕಬಳಿಸಿ ಆಘಾತ ನೀಡಿದರು. ನಂತರ ಕೇವಲ ನಾಲ್ಕು ಓವರ್‌ಗಳಲ್ಲಿ ಮೂರು ವಿಕೆಟ್‌ಗಳು ಬಿದ್ದವು. ಆದರೆ ಆ ಬಳಿಕ ಜೊತೆಯಾದ ಜಸ್ಟಿನ್ ಮೊಸ್ಕಾ ಮತ್ತು ಬೆನ್ ಮಾನೆಂಟಿ ಇಂಗ್ಲಿಷ್ ಬೌಲರ್‌ಗಳ ಬೆವರಿಳಿಸಿ 92 ರನ್‌ಗಳ ಸ್ಫೋಟಕ ಪಾಲುದಾರಿಕೆಯನ್ನು ರೂಪಿಸಿದರು. ಮಾನೆಂಟಿ ಕೇವಲ 22 ಎಸೆತಗಳಲ್ಲಿ ಇಟಲಿ ಪರ ವೇಗದ ಅರ್ಧಶತಕವನ್ನು ಬಾರಿಸಿದರು. ವಿಲ್ ಜ್ಯಾಕ್ಸ್ ಅಂತಿಮವಾಗಿ ಮಾನೆಂಟಿಯನ್ನು ಔಟ್ ಮಾಡುವ ಮೂಲಕ ಈ ಪಾಲುದಾರಿಕೆಯನ್ನು ಮುರಿದರು.

ಹೋರಾಟ ಬಿಡದ ಇಟಲಿ

ಸ್ವಲ್ಪ ಸಮಯದ ನಂತರ ಮೊಸ್ಕಾ ಕೂಡ ಆದಿಲ್ ರಶೀದ್‌ಗೆ ಬಲಿಯಾದರು. 16 ನೇ ಓವರ್‌ನಲ್ಲಿ ಸತತ ಎರಡು ವಿಕೆಟ್‌ಗಳನ್ನು ಕಬಳಿಸಿದ ಸ್ಯಾಮ್ ಕರನ್ ಇಟಲಿ ವೇಗಕ್ಕೆ ಬ್ರೇಕ್ ಹಾಕಿದರು. ಆದರೆ ಕಥೆ ಇಲ್ಲಿಗೆ ಮುಗಿಯಲಿಲ್ಲ. ಈ ವೇಳೆ ಬ್ಯಾಟಿಂಗ್​ಗೆ ಬಂದ ಗ್ರಾಂಟ್ ಸ್ಟೀವರ್ಟ್ ಸಿಕ್ಸರ್‌ಗಳ ಸುರಿಮಳೆಗೈದರು. ಜೋಫ್ರಾ ಆರ್ಚರ್ ಅವರ ಓವರ್‌ನಲ್ಲಿ ಎರಡು ಸಿಕ್ಸರ್‌ಗಳು ಮತ್ತು 18 ನೇ ಓವರ್‌ನಲ್ಲಿ ಆದಿಲ್ ರಶೀದ್ ಅವರ ಓವರ್​ನಲ್ಲಿ ಮೂರು ಸಿಕ್ಸರ್‌ಗಳನ್ನು ಸಿಡಿಸಿದರು. ಹೀಗಾಗಿ ಕೊನೆಯ ಎರಡು ಓವರ್‌ಗಳಲ್ಲಿ ಇಟಲಿ ಗೆಲುವಿಗೆ 30 ರನ್‌ ಬೇಕಿದ್ದವು. ಆದರೆ ಈ ವೇಳೆ ದಾಳಿಗಿಳಿದ ಕರನ್ 19ನೇ ಓವರ್‌ನಲ್ಲಿ ಕೇವಲ ಐದು ರನ್‌ಗಳನ್ನು ಬಿಟ್ಟುಕೊಟ್ಟು ಸ್ಟೀವರ್ಟ್ ಅವರ ವಿಕೆಟ್ ಪಡೆದರು. ಅಂತಿಮವಾಗಿ ಇಟಲಿ ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ 178 ರನ್‌ಗಳಿಗೆ ಆಲೌಟ್ ಆಯಿತು

Source link

ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್ – Kannada News | Vijayalakshmi Dhanveer visit Darshan in Parappana Agrahara Jail on his birthday

ಇಂದು (ಫೆಬ್ರವರಿ 16) ನಟ ದರ್ಶನ್ (Darshan) ಅವರ ಹುಟ್ಟುಹಬ್ಬ. ಆದರೆ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಬೇಸರ ಇದೆ. ಒಂದು ವೇಳೆ ದರ್ಶನ್ ಅವರು ಹೊರಗಡೆ ಇದ್ದಿದ್ದರೆ ಜನ್ಮದಿನದ ಸಂಭ್ರಮ ಜೋರಾಗಿ ಇರುತ್ತಿತ್ತು. ಇಂದು ಪತ್ನಿ ವಿಜಯಲಕ್ಷ್ಮಿ (Vijayalakshmi Darshan), ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ, ನಟ ಧನ್ವೀರ್ ಮತ್ತು ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಪ್ರಮುಖ ಆರೋಪಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ – Kannada News | More Than 5 Lakh Devotees Participate in Hubballi Siddarudha Rathotsava

ಹುಬ್ಬಳ್ಳಿ, ಫೆಬ್ರವರಿ 16: ಸುಪ್ರಸಿದ್ಧ ಸಿದ್ಧಾರೂಢರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದಾರೆ. ಎತ್ತ ನೋಡಿದರೂ ಜನ ಸಾಗರವೇ ಕಾಣುತ್ತಿದ್ದು, ಸುಮಾರು ಐದು ಲಕ್ಷ ಭಕ್ತರು ರಥೋತ್ಸವ ಕಣ್ತುಂಬಿಕೊಂಡಿದ್ದಾರೆ. ರಥೋತ್ಸವದ ವೇಳೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಲಾಗಿದ್ದು, ಸಿದ್ದಾರೂಢ ಮಹರಾಜ ಕಿ ಜೈ ಎಂಬ ಘೋಷಣೆಗಳು ಭಕ್ತರಿಂದ ಮೊಳಗಿವೆ. ಮಹಾರಥೋತ್ಸವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಶೇಷ ಸೇವೆ ನಡೆದಿದ್ದು, ಭಕ್ತರಿಗೆ ನಿನ್ನೆ ಮತ್ತು ಇಂದು ಮುಂಜಾನೆ ಸೇರಿ ಒಂದು ಲಕ್ಷ ಸೆಟ್ ದೋಸೆ ವಿತರಣೆ ಮಾಡಲಾಗಿದೆ. ರಸ್ತೆಯುದ್ದಕ್ಕೂ ಅನ್ನ ಪ್ರಸಾದ, ಮಜ್ಜಿಗೆ, ಹಣ್ಣುಗಳ ವಿತರಣೆ ಭರದಿಂದ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು – Kannada News | Haveri’s Har Ghar Jal Failure: Neshvi Villagers Lack Water Despite 50 Lakh Scheme

ಹಾವೇರಿ, ಫೆಬ್ರವರಿ 16: ಗ್ರಾಮೀಣ ಭಾಗದ ಊರುಗಳಲ್ಲಿ ಮನೆ ಮನೆಗೆ ಕುಡಿಯುವ ನೀರು (water) ಕೊಡುವ ಉದ್ದೇಶದಿಂದ ಹರ್ ಘರ್ ಜಲ್ ಯೋಜನೆಯನ್ನ (Har Ghar Jal project) ಜಾರಿಗೆ ತಂದಿದೆ. ಆದರೆ ಕೋಟ್ಯಂತರ ರೂ ವೆಚ್ಚದಲ್ಲಿ ಮಾಡಿದ ಯೋಜನೆ ಸದ್ಯ ಹಳ್ಳ ಹಿಡಿದು ಹೋಗಿದೆ. ಕಾಮಗಾರಿ ಮಾಡಿ ಐದು ವರ್ಷ ಕಳೆದರೂ ಮನೆಗೆ ನೀರು ಬರುತ್ತಿಲ್ಲ. ಸಾರ್ವಜನಿಕ ನಳದಲ್ಲಿ ನೀರು ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ನೆಶ್ವಿ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನ ಜಾರಿಗೊಳಿಸಲಾಗಿದೆ. ಗ್ರಾಮದ 600ಕ್ಕೂ ಅಧಿಕ ಮನೆಗಳಿಗೆ ಜಲಜೀವನ್ ಮಿಷನ್ ನಳಗಳನ್ನ ಹಾಕಲಾಗಿದೆ. ಆದರೆ ಈಗ ಮನೆಗಳಿಗೆ ನೀರು ಬರುತ್ತಿಲ್ಲ. ಸಾರ್ವಜನಿಕ ನಳಗಳಲ್ಲಿ ನೀರು ತುಂಬುವ ಪರಸ್ಥಿತಿ ಬಂದಿದೆ. ಇನ್ನೂ ಕೆಲವು ಜನಪ್ರತಿನಿಧಿಗಳ ಮನೆಗಳ ಮುಂದೆ ನಳಗಳು‌ ಇವೆ.‌ ಜನರು ಮಾತ್ರ ನೀರು ತರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ

ನೆಶ್ವಿ ಗ್ರಾಮದಲ್ಲಿ ಗುತ್ತಿಗೆದಾರ ಕೆಲಸ ಮಾಡಿ ಐದು ವರ್ಷ ಕಳೆದಿದೆ. ಅಲ್ಲದೆ ಗ್ರಾಮ ಪಂಚಾಯತಿಯಿಂದ ಎನ್​ಓಸಿ ಸಹ ನೀಡಲಾಗಿದೆ. ನೀರು ಬಾರದೆ ಹೇಗೆ ಎನ್​ಓಸಿ ಕೊಟ್ಟಿದ್ದಾರೆ. 50 ರಿಂದ 100 ಕುಟುಂಬಗಳ ನಡುವೆ ಒಂದು ಸಾರ್ವಜನಿಕ ನಳ ಇದ್ದು, ಅದರಲ್ಲಿ ಒಂದು ಗಂಟೆಗಳ ಕಾಲ ನೀರು ಹಿಡಿಯುವ ಪರಸ್ಥಿತಿ ಬಂದಿದೆ. ಅಲ್ಲದೇ ಮನೆ ಮನೆಗೆ ಅಳವಡಿಸಿರುವ ನಳಗಳು ತಕ್ಕು ಹಿಡಿದು ಹಾಳಾಗುತ್ತಿವೆ. ಗುತ್ತಿಗೆದಾರ ನಮ್ಮ ಕೆಲಸ ಮುಗಿದಿದೆ. ನಮ್ಮದು ಏನೋ ಇಲ್ಲ ಅಂತಾರೆ. ಈಗ ಅಧಿಕಾರಿಗಳು ಮಾತ್ರ ಇವತ್ತು, ನಾಳೆ ಅಂದು ಜನರನ್ನ ಓಡಿಸುತ್ತಾರೆ. ಗುತ್ತಿಗೆದಾರ ಮತ್ತು ಪಿಡಿಓ ಸೇವೆ ಗ್ರಾಮ ಪಂಚಾಯತಿ ಸದಸ್ಯರ ಹೊಂದಾಣಿಕೆಯಿಂದ ನೀರು ಬರುತ್ತಿಲ್ಲ. ಸರ್ಕಾರದ ಕೋಟ್ಯಂತರ ರೂ ಹಾಳು ಮಾಡಿದ್ದಾರೆ ಎಂದು ಸ್ಥಳೀಯರಾದ ಚನ್ನಬಸಪ್ಪ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್

ಒಟ್ಟಿನಲ್ಲಿ ಸರ್ಕಾರದ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಕುಡಿಯುವ ನೀರು ಮನೆಮನೆಗೂ ಬರಲಿ ಅನ್ನೋ ಉದ್ದೇಶದಿಂದ ಮಾಡಿದ್ದಾರೆ. ಅದರೆ ಈಗ ಪಿಡಿಓ ಮತ್ತು ಅಧಿಕಾರಿಗಳ ಯಡವಟ್ಟಿನಿಂದ ನೀರು ಬಾರದೇ ಜನರು ಪರದಾಡುತ್ತಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚತ್ತುಕೊಂಡು ಗುತ್ತಿಗೆದಾರ ವಿರುದ್ಧ ಕ್ರಮ ತೆಗೆದುಕೊಂಡು ನೀರು ಹರಿಸುವ ಕೆಲಸ ಮಾಡಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ 9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು? – Kannada News | Bagepalli Congress MLA Subba Reddy elect Invalidates: What did BJP defeated candidate C Muniraju says

ಎಸ್.ಎನ್.ಸುಬ್ಬಾರೆಡ್ಡಿ, ಸಿ.ಮುನಿರಾಜುImage Credit source: tv9 kannada

ಬೆಂಗಳೂರು, ಫೆಬ್ರವರಿ 16: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ (Subba Reddy) ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನಿಂದ ನನಗೆ ಖುಷಿಯಿದೆ, ನ್ಯಾಯ ಸಿಕ್ಕಿದೆ. ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸಾವಿರಾರು ಕೋಟಿ ರೂ ಹಗರಣವಿದೆ. ಕೋರ್ಟ್​ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರಿಂದ ತೀರ್ಪು ಬಂದಿದೆ. ಈ ತೀರ್ಪಿನಿಂದ ನ್ಯಾಯಾಲಯದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ದೂರುದಾರ, ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೇಳಿದ್ದಾರೆ.

ಎಸ್.ಎನ್. ಸುಬ್ಬಾರೆಡ್ಡಿ ವಿರುದ್ಧ ಸಿ. ಮುನಿರಾಜು ವಾಗ್ದಾಳಿ

ನಗರದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು, ತಪ್ಪು ಮಾಹಿತಿ ಕೊಟ್ಟು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ವಂಚನೆ ಮಾಡಿದ್ದನ್ನು ಅರ್ಜಿ ಸಲ್ಲಿಸಿದ್ದೆವು. ಜನರಿಗೆ ಮೋಸ ಮತ್ತು ಸರ್ಕಾರಕ್ಕೆ ವಂಚನೆ ಮಾಡಿರುವುದರಿಂದ ಅವರು ಇಂದು ವಜಾ ಆಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2023ರ ಅಫಿಡವಿಟ್​ನಲ್ಲಿ ಹಿಂದಿನ ಅಫಿಡವಿಟ್​ ಅನ್ನೇ ಹಾಗೆ ತಂದು ಹಾಕಿದ್ದರು. 9 ಜಿಎಸ್​​ಟಿ ಇದ್ದರೂ ಒಂದೇ ಜಿಎಸ್​ಟಿ ತೋರಿಸಿದ್ದಾರೆ. ಆ ಮೂಲಕ ಜಿಎಸ್​​ಟಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ವಾಸದ ಮನೆ, ಕಮರ್ಷಿಯಲ್ ಕಟ್ಟಡ, ಬಾರ್​ಗಳ ತೆರಿಗೆಯನ್ನು ನಾಲ್ಕೈದು ವರ್ಷಗಳಿಂದ ಬಿಬಿಎಂಪಿಗೆ ಕಟ್ಟಿರಲಿಲ್ಲ. ಹಿಂದೊಮ್ಮೆ 100 ಕೋಟಿ ರೂ ಜಿಎಸ್​​ಟಿ ಇದ್ದರೂ ಅದನ್ನು 25 ಕೋಟಿಗೆ ಆದೇಶ ಮಾಡಿಸಿಕೊಂಡು ಬೋಗಸ್ ಮಾಡಿಸಿಕೊಂಡಿದ್ದರಂತೆ. ಅವರ ಆಸ್ತಿಗಳನ್ನು ಮುಚ್ಚಿಟ್ಟಿದ್ದರು ಎಂದಿದ್ದಾರೆ.

ನಾನು ಅರ್ಜಿ ಹಾಕಿದ ಮೇಲೆ ಸರ್ಕಾರಕ್ಕೆ ಜಿಎಸ್​​ಟಿ ತೆರಿಗೆ ಕಟ್ಟಿದ್ದಾರೆ

ಪುತ್ರಿಯ ಹೆಸರಿನಲ್ಲಿರುವ ಜಮೀನು ವಿವರ ತೋರಿಸಿರಲಿಲ್ಲ. ಪತ್ನಿಯ ಹೆಸರಿನಲ್ಲಿ ಜಮೀನು ಮತ್ತು ಕಂಪನಿ ಇದ್ದರೂ ತೋರಿಸಿರಲಿಲ್ಲ. ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ 23 ಲಕ್ಷ ರೂ. ದುಡ್ಡು ಕೊಟ್ಟಿದ್ದು ತೋರಿಸಿರಲಿಲ್ಲ. ವೈ.ಎ. ನಾರಾಯಣಸ್ವಾಮಿ ಅವರಿಗೂ 28 ಲಕ್ಷ ರೂ ದುಡ್ಡು ಕೊಟ್ಟಿದ್ದು ತೋರಿಸಿಕೊಂಡಿಲ್ಲ. ನಾನು ಅರ್ಜಿ ಹಾಕಿದ ಮೇಲೆ ಸರ್ಕಾರಕ್ಕೆ ಜಿಎಸ್​​ಟಿ ತೆರಿಗೆ ಕಟ್ಟಿದ್ದಾರೆ. ಸಣ್ಣಪುಟ್ಟ ತಪ್ಪಾಗಿದೆ ಎಂದು ಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ ಎಂದರು.

ಬೇನಾಮಿ ಆಸ್ತಿಗಳನ್ನು ತೆಗೆದುಕೊಂಡು ಎಂ.ಬಿ. ಪಾಟೀಲ್ ಹತ್ತಿರ ಕುಳಿತುಕೊಂಡು ಕಡಿಮೆ ಹಣಕ್ಕೆ ಫಿಕ್ಸ್ ಮಾಡಿಕೊಂಡಿದ್ದಾರೆ. ಸಾವಿರಾರು ರೂ ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ನನ್ನನ್ನು ವಿಜೇತ ಎಂದು ಘೋಷಣೆ ಮಾಡಲು ನಾವು ಕೇಳಿದ್ದೆವು. ಕಾನೂನಿನಲ್ಲಿ ಅವಕಾಶ ಇದ್ದರೂ ನ್ಯಾಯಾಧೀಶರು ಅದನ್ನು ಮಾನ್ಯ ಮಾಡಿಲ್ಲ. ನಮ್ಮ ವಕೀಲರು ಮತ್ತು ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ಹೋರಾಟ ನಿರ್ಧರಿಸಲಾಗುವುದು. ಉಪಚುನಾವಣೆ ಎದುರಾದರೆ ನಾನು ರೆಡಿ ಇದ್ದೇನೆ, ಆದರೆ ಅದು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಸಿ. ಮುನಿರಾಜು ಹೇಳಿದ್ದಾರೆ.

ಕಾಂಗ್ರೆಸ್​ ವಿರುದ್ಧ ಆರ್​​.ಅಶೋಕ್​ ಕಿಡಿ

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ವಿಚಾರವಾಗಿ ಎಕ್ಸ್​ ಖಾತೆ ಮೂಲಕ ಕಾಂಗ್ರೆಸ್​ ವಿರುದ್ಧ ಆರ್​.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೋಟ್ ಚೋರಿ ಕಹಾ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ! ರಾಹುಲ್ ಗಾಂಧಿ ಅವರು ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಎಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮಕ್ಕೆ ಯಾರಾದರೂ ಪಿತಾಮಹ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ಪೂರ್ವಜರು ಎಂದು ವಾಗ್ದಾಳಿ ಮಾಡಿದ್ದಾರೆ.

ಹಿರಿಯ ವಕೀಲ ನಳೀನಿ ಮಾಯಗೌಡ ಹೇಳಿದ್ದಿಷ್ಟು 

ಇನ್ನು ಟಿವಿ9ಗೆ ಹಿರಿಯ ವಕೀಲ ನಳೀನಿ ಮಾಯಗೌಡ ಹೇಳಿಕೆ ನೀಡಿದ್ದು, ಸುಬ್ಬಾರೆಡ್ಡಿ ಅವರು ಪ್ರಾಪರ್ಟಿ ಡಿಸ್ಕ್ಲೋಸ್ ಮಾಡಿರಲಿಲ್ಲ. ಜಿಎಸ್​​ಟಿ ಫೈಲ್ ಮಾಡಿರಲಿಲ್ಲ. ಇದೇ ಕಾರಣಕ್ಕಾಗಿ ಸುಬ್ಬಾರೆಡ್ಡಿ ಅವರನ್ನ ಹೈಕೋರ್ಟ್ ಅಸಿಂಧು ಮಾಡಿದೆ. ಇದರ ಜೊತೆ ನನ್ನನ್ನ ಶಾಸಕನಾಗಿ ಘೋಷಣೆ ಮಾಡಿ ಎಂದು ಮುನಿರಾಜು ಅವರು ಕೇಳಿದರು. ಈಗ ಎರಡೂವರೆ ವರ್ಷ ವಾದ ಮಾಡಿ ಕೋರ್ಟ್ ಅಸಿಂಧು ಮಾಡಿದೆ. ಶಾಸಕರನ್ನ ಅನರ್ಹ ಮಾಡಿದೆ, ಈಗ ಅವರು ಶಾಸಕರು ಅಲ್ಲ. ಒಂದು ವೇಳೆ ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್​ಗೆ ಹೋದರೆ ಹೈಕೋರ್ಟ್ ಆದೇಶ ಸ್ಟೇ ಆಗಬಹುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Bengaluru ED Raid: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

ಎರಡು ಕೋಟಿ ರೂ.ಯಷ್ಟು ತೆರಿಗೆ ಕಟ್ಟಿಲ್ಲ, ಶಾಸಕರು ಆಗಿರುವವರೇ ಟ್ಯಾಕ್ಸ್ ಕಟ್ಟಿಲ್ಲ ಎಂದು ವಾದ ಮಾಡಿದಿದ್ದೇವೆ. ಹೀಗಾಗಿ ಇವರನ್ನ ಮುಂದುವರಿಯುವುದಕ್ಕೆ ಬಿಡಬಾರದು ಎಂದು ವಾದಿಸಿದ್ದೇವೆ. ಸುಪ್ರೀಂ ಕೋರ್ಟ್​ನವರು ಕೂಡ ನಮ್ಮ ವಾದಕ್ಕೆ ಅವರು ತೀರ್ಪು ಕೊಡಬಹುದು. ಇಲ್ಲಂದರೆ ಹೊಸ ಚುನಾವಣೆಗೆ ಹೋಗಬಹುದು. ಮುನಿರಾಜು ಗೆಲುವು ಅಂತ ಕೋರ್ಟ್ ಹೇಳಿಲ್ಲ, ಇದಕ್ಕೆ ಕಾರಣವೂ ಕೊಟ್ಟಿಲ್ಲ. ಎರಡನೇ ಅತೀ ಹೆಚ್ಚು ಮತ ತೆಗೆದುಕೊಂಡಿದ್ಧು ಮುನಿರಾಜು ಅವರು. ಅವರು ತೀರ್ಮಾನ ಮಾಡಿದರೆ ಸುಪ್ರೀಂ ಕೋರ್ಟ್​ಗೆ ಹೋಗಬಹುದು. ಗೆಜೆಟ್ ನೋಟಿಫಿಕೇಶನ್ ಆದರೆ ಅನರ್ಹ ಎಂದು ಆದೇಶ ಆಗುತ್ತದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನನ್ನಿಂದ ತಪ್ಪಾಗಿದೆ: ತ್ರಿಷಾ ಬಗ್ಗೆ ಮಾತನಾಡಿ ಕ್ಷಮೆ ಕೇಳಿದ ಬಿಜೆಪಿ ಮುಖಂಡ ನೈನಾರ್ ನಾಗೇಂದ್ರನ್ – Kannada News | Nainar Nagendran apologises for remark on Trisha and Thalapathy Vijay

ಖ್ಯಾತ ನಟಿ ತ್ರಿಷಾ (Trisha Krishnan) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಈಗ ಕ್ಷಮೆ ಕೇಳಿದ್ದಾರೆ. ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ (Thalapathy Vijay) ಬಗ್ಗೆ ಟೀಕೆ ಮಾಡುವಾಗ ನಾಗೇಂದ್ರನ್ ಅವರು ನಾಲಿಗೆ ಹರಿಬಿಟ್ಟಿದ್ದರು. ‘ವಿಜಯ್ ಅವರಿಗೆ ರಾಜಕೀಯದ ಅನುಭವ ಕಡಿಮೆ. ರಾಜಕೀಯದ ಅನುಭವ ಆಗಬೇಕಾದ್ರೆ ತ್ರಿಷಾ ಮನೆಯಿಂದ ವಿಜಯ್ ಹೊರಬರಲಿ’ ಎಂದು ನೈನಾರ್ ನಾಗೇಂದ್ರನ್ (Nainar Nagendran) ಹೇಳಿದ್ದರು. ಅವರ ಆ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಒಂದು ದಿನದ ಬಳಿಕ ಅವರು ಕ್ಷಮೆ ಕೇಳಿದ್ದಾರೆ.

ನೈನಾರ್ ನಾಗೇಂದ್ರನ್ ಅವರ ಹೇಳಿಕೆಗೆ ತಮಿಳುನಾಡಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ನಾಗೇಂದ್ರನ್ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರು ಕಟು ಶಬ್ದಗಳಲ್ಲಿ ಖಂಡಿಸಿದ್ದರು. ‘ಉನ್ನತ ಸ್ಥಾನದಲ್ಲಿರುವವರಿಂದ ಇಂತಹ ಮಾತು ನಿರೀಕ್ಷಿಸಿರಲಿಲ್ಲ’ ಎಂದು ತ್ರಿಷಾ ಕೃಷ್ಣನ್ ಹೇಳಿದ್ದರು. ನೈನಾರ್ ನಾಗೇಂದ್ರನ್ ವಿರುದ್ಧ ಡಿಎಂಕೆ, ಕಾಂಗ್ರೆಸ್ ಕೂಡ ಆಕ್ರೋಶ ವ್ಯಕ್ತಪಡಿಸಿತ್ತು.

ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಗೌರವವಿಲ್ಲ ಎಂದು ಡಿಎಂಕೆ ನಾಯಕರು ಟೀಕಿಸಿದ್ದರು. ರಾಜಕೀಯ ಸಂಘರ್ಷದ ನಡುವೆ ತ್ರಿಷಾ ಹೆಸರು ಎಳೆದುತಂದಿದ್ದಕ್ಕೆ ಖಂಡನೆ ವ್ಯಕ್ತವಾಗಿತ್ತು. ಬಳಿಕ ಕೆ. ಅಣ್ಣಾಮಲೈ, ವಾನತಿ ಶ್ರೀನಿವಾಸನ್ ಅವರ ಸೂಚನೆ ಮೇರೆಗೆ ನೈನಾರ್ ನಾಗೇಂದ್ರನ್ ಕ್ಷಮೆ ಕೇಳಿದ್ದಾರೆ. ‘ನನ್ನ ಹೇಳಿಕೆ ತಪ್ಪು ಅರ್ಥದಿಂದ ಕೂಡಿದೆ’ ಎಂದು ನೈನಾರ್ ನಾಗೇಂದ್ರನ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ

‘ತಪ್ಪಾಗಿ ನಾನು ಹೇಳಿಕೆ ನೀಡಿದ್ದೆ. ಕೆ. ಅಣ್ಣಾಮಲೈ ಮತ್ತು ವಾನತಿ ಶ್ರೀನಿವಾಸನ್ ಅವರು ಈ ವಿಷಯದ ಬಗ್ಗೆ ನನ್ನ ಬಳಿ ಮಾತನಾಡಿದರು. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ’ ಎಂದು ನೈನಾರ್ ನಾಗೇಂದ್ರನ್ ಅವರು ಕ್ಷಮೆ ಯಾಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version