ಧೂಮಪಾನದಿಂದ ಶ್ವಾಸಕೋಶ ಮಾತ್ರವಲ್ಲ, ಮೂಳೆಗಳು ಬಲಹೀನವಾಗಿ ಫ್ರ್ಯಾಕ್ಚರ್ ಅಪಾಯ ಹೆಚ್ಚಾಗುತ್ತೆ! – Kannada News | Smoking Weakens Your Bones Too, Says Dr. Surendra Kamath

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಹೆಚ್ಚಿನವರು ಧೂಮಪಾನದಿಂದ ಹೃದಯ ಮತ್ತು ಶ್ವಾಸಕೋಶದ ಸಮಸ್ಯೆಗಳು ಮಾತ್ರ ಉಂಟಾಗುತ್ತವೆ ಎಂದು ಭಾವಿಸುತ್ತಾರೆ. ವಾಸ್ತವವಾಗಿ, ಧೂಮಪಾನವು ಮೂಳೆಗಳ ಆರೋಗ್ಯ (Bone Health) ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ದೀರ್ಘಕಾಲ ಧೂಮಪಾನ ಮಾಡುವವರಲ್ಲಿ ಆಸ್ಟಿಯೋಪೊರೋಸಿಸ್ (Osteoporosis), ಮೂಳೆ ಮುರಿತ (Fracture), ಮೂಳೆಗಳು ತಡವಾಗಿ ಜೋಡಣೆಯಾಗುವುದು (Delayed Bone Healing) ಮುಂತಾದ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಕನ್ಸಲ್ಟೆಂಟ್ ಆರ್ಥೋಪೆಡಿಕ್ ಸರ್ಜನ್ ಡಾ. ಸುರೇಂದ್ರ ಕಾಮತ್ ಅವರ ಪ್ರಕಾರ, ತಂಬಾಕು ಹೊಗೆಯಲ್ಲಿ 7,000ಕ್ಕೂ ಹೆಚ್ಚು ರಾಸಾಯನಿಕಗಳು ಇದ್ದು, ಅವುಗಳಲ್ಲಿ ಅನೇಕವು ದೇಹಕ್ಕೆ ವಿಷಕಾರಿಯಾಗಿವೆ. ಇವುಗಳು ಹೃದಯ, ಶ್ವಾಸಕೋಶ ಮತ್ತು ರಕ್ತನಾಳಗಳಷ್ಟೇ ಅಲ್ಲದೆ, ಮೂಳೆಗಳ ಬೆಳವಣಿಗೆ ಮತ್ತು ಬಲವನ್ನೂ ದುರ್ಬಲಗೊಳಿಸುತ್ತವೆ.

ಧೂಮಪಾನದಿಂದ ಮೂಳೆಗಳಿಗೆ ಹೇಗೆ ಹಾನಿಯಾಗುತ್ತದೆ?

ಧೂಮಪಾನವು ಮೂಳೆ ರಚನೆ ಮತ್ತು ಮೂಳೆ ಕ್ಷಯದ ನಡುವಿನ ಸಮತೋಲನವನ್ನು ಹಾಳು ಮಾಡುತ್ತದೆ. ಪರಿಣಾಮವಾಗಿ ಮೂಳೆ ಖನಿಜ ಸಾಂದ್ರತೆ (Bone Mineral Density – BMD) ಕಡಿಮೆಯಾಗುತ್ತದೆ ಮತ್ತು ಆಸ್ಟಿಯೋಪೊರೋಸಿಸ್ ಅಪಾಯ ಹೆಚ್ಚುತ್ತದೆ.

ಮೂಳೆ ರಚನೆ ಕಡಿಮೆಯಾಗುತ್ತದೆ: ನಿಕೋಟಿನ್ (Nicotine) ಎಂಬ ರಾಸಾಯನಿಕವು ಹೊಸ ಮೂಳೆಗಳನ್ನು ರಚನೆ ಆಸ್ಟಿಯೋಬ್ಲಾಸ್ಟ್ (Osteoblast) ಕೋಶಗಳ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ. ಇದರಿಂದ ಹೊಸ ಮೂಳೆಗಳ ಬೆಳವಣಿಗೆ ನಿಧಾನವಾಗುತ್ತದೆ.

ಕ್ಯಾಲ್ಸಿಯಂ ಹೀರಿಕೊಳ್ಳುವಿಕೆ ಕಡಿಮೆಯಾಗುತ್ತದೆ: ಧೂಮಪಾನ ಮಾಡುವವರಲ್ಲಿ ದೇಹವು ಆಹಾರದಿಂದ ಕ್ಯಾಲ್ಸಿಯಂ ಅನ್ನು ಸರಿಯಾಗಿ ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಮೂಳೆಗಳು ಕ್ರಮೇಣ ದುರ್ಬಲ ಅಥವಾ ಬಲಹೀನಗೊಳ್ಳುತ್ತವೆ.

ಹಾರ್ಮೋನ್ ಅಸಮತೋಲನ: ಮಹಿಳೆಯರಲ್ಲಿ ಈಸ್ಟ್ರೋಜನ್ ಹಾರ್ಮೋನ್ ಮಟ್ಟವು ಬೇಗ ಕಡಿಮೆಯಾಗುವುದರಿಂದ ಮೆನೋಪಾಸ್ ನಂತರ ಆಸ್ಟಿಯೋಪೊರೋಸಿಸ್ ಅಪಾಯ ಹೆಚ್ಚುತ್ತದೆ. ಪುರುಷರಲ್ಲಿಯೂ ಟೆಸ್ಟೋಸ್ಟೆರೋನ್ ಮಟ್ಟದ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: ಪ್ರಾಡಕ್ಟ್ ಲೇಬಲ್ ಓದದೆಯೇ ಖರೀದಿಸುವ ಅಭ್ಯಾಸವಿದ್ದರೆ ಹಿಡನ್ ಶುಗರ್ ಹೆಚ್ಚಾಗಬಹುದು ಎಚ್ಚರ!

ಆಕ್ಸಿಡೇಟಿವ್ ಒತ್ತಡ ಹೆಚ್ಚಾಗುತ್ತದೆ: ಧೂಮಪಾನದಿಂದ ಫ್ರೀ ರಾಡಿಕಲ್‌ಗಳು ಹೆಚ್ಚಾಗಿ ಉತ್ಪತ್ತಿಯಾಗಿ ಮೂಳೆ ಕೋಶಗಳಿಗೆ ಹಾನಿ ಉಂಟುಮಾಡುತ್ತವೆ.

ರಕ್ತ ಪೂರೈಕೆ ಕಡಿಮೆಯಾಗುತ್ತದೆ: ಧೂಮಪಾನವು ರಕ್ತನಾಳಗಳನ್ನು ಕಿರಿದಾಗಿಸುವುದರಿಂದ ಮೂಳೆಗಳಿಗೆ ಅಗತ್ಯವಾದ ಆಮ್ಲಜನಕ ಮತ್ತು ಪೋಷಕಾಂಶಗಳು ಸಮರ್ಪಕವಾಗಿ ತಲುಪುವುದಿಲ್ಲ.

ಮೂಳೆ ಮುರಿತವಾದರೆ ಗುಣವಾಗುವುದಕ್ಕೆ ಏಕೆ ಸಮಯ ತೆಗೆದುಕೊಳ್ಳುತ್ತದೆ?

ನಿಕೋಟಿನ್ ಹೊಸ ರಕ್ತನಾಳಗಳ ಬೆಳವಣಿಗೆಯನ್ನು ತಡೆಯುತ್ತದೆ. ಇದರ ಪರಿಣಾಮವಾಗಿ:

  • ಮೂಳೆಗಳು ನಿಧಾನವಾಗಿ ಜೋಡಣೆಯಾಗುತ್ತವೆ.
  • ಗಾಯ ಗುಣಮುಖವಾಗಲು ಹೆಚ್ಚು ಸಮಯ ಬೇಕಾಗುತ್ತದೆ.
  • ಸೋಂಕಿನ ಅಪಾಯ ಹೆಚ್ಚಾಗುತ್ತದೆ.
  • ಶಸ್ತ್ರಚಿಕಿತ್ಸೆಯ ನಂತರ ಚೇತರಿಕೆ ವಿಳಂಬವಾಗಬಹುದು.

ಮೂಳೆಗಳ ಸಾಮರ್ಥ್ಯ ಹೆಚ್ಚಿಸಲು ಏನು ಮಾಡಬೇಕು?

  • ಧೂಮಪಾನವನ್ನು ಸಂಪೂರ್ಣವಾಗಿ ತ್ಯಜಿಸಿ.
  • ಕ್ಯಾಲ್ಸಿಯಂ ಸಮೃದ್ಧ ಆಹಾರ ಸೇವಿಸಿ.
  • ವಿಟಮಿನ್ ಡಿ ಕೊರತೆಯಾಗದಂತೆ ನೋಡಿಕೊಳ್ಳಿ.
  • ಪ್ರತಿದಿನ 30– 45 ನಿಮಿಷ ವ್ಯಾಯಾಮ ಮಾಡಿ.
  • ವಾಕಿಂಗ್, ಜಾಗಿಂಗ್, ತೂಕ ಎತ್ತುವ ವ್ಯಾಯಾಮ (Weight-bearing Exercise) ಮಾಡಿ.
  • ಮದ್ಯಪಾನವನ್ನು ಮಿತಿಗೊಳಿಸಿ.
  • ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಗ್ಲೆಂಡ್‌ ನೆಲದಲ್ಲಿ ಮಿಂಚಿದ ಕುಲ್ದೀಪ್ ಯಾದವ್

Source link

ಪೊಲೀಸ್ ಸೇವೆ ಜತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿರುವ ಎಸಿಪಿ ರಾಜೇಶ್‌ಗೆ ಡಿಜಿ ಪದಕ ಪ್ರದಾನ – Kannada News | CCB ACP LY Rajesh awarded dg medal for Excellent Service And Investigation

ಬೆಂಗಳೂರು, (ಜುಲೈ 24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹಾಗೂ ಸಿಸಿಬಿ ಎಸಿಪಿಯಾಗಿರುವ ಎಲ್.ವೈ. ರಾಜೇಶ್ (LY Rajesh) ಅವರಿಗೆ ಅತ್ಯುತ್ತಮ ಸೇವೆಗಾಗಿ ಪ್ರತಿಷ್ಠಿತ ಡಿಜಿ ಪದಕ ಪ್ರದಾನ ಮಾಡಲಾಗಿದೆ. ಡ್ರಗ್ಸ್​​ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಕಾರ್ಯಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪದಕ ನೀಡಿ ಗೌರವಿಸಲಾಗಿದೆ.

ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ಹೆಮ್ಮೆ ಅವರದ್ದು. ಪೊಲೀಸ್ ಸೇವೆಯ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರತಿ ವರ್ಷವೂ ಫೇಲ್ ಆಗಿರುವ ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ ವಿಶೇಷ ಶಿಬಿರವನ್ನು ಆಯೋಜನೆ ಮಾಡಿ, ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾಗಿದ್ದಾರೆ.

ಪೊಲೀಸ್ ಕೆಲಸಕ್ಕೂ ಸೈ ಸಮಾಜಮುಖಿ ಕಾರ್ಯಕ್ಕೂ ಜೈ

ಓರ್ವ ಪೊಲೀಸ್ ಅಧಿಕಾರಿಗೆ ತನ್ನ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ತಡೆ, ಆರೋಪಿಗಳ ಬಂಧನವೇ ಆದ್ಯ ಕರ್ತವ್ಯವಾಗಿರುತ್ತದೆ. ಇದನ್ನಷ್ಟೇ ತಮ್ಮ ಕರ್ತವ್ಯವೆಂದು ಭಾವಿಸದೇ ತಮ್ಮ ವ್ಯಾಪ್ತಿಯನ್ನೂ ದಾಟಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ವಿವಿಧ ರೀತಿಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಬಹಳ ವಿರಳ. ಇಂತಹ ವಿರಳ ಅಧಿಕಾರಿಗಳ ಪೈಕಿ ಗುರುತಿಸಿಕೊಂಡಿರುವವರು ರಾಜೇಶ್ . ಹೌದು…ರಾಜೇಶ್ ಅವರು ಖಾಕಿ ತೊಟ್ಟು ಕರ್ತವ್ಯ ನಿರ್ವಹಿಸುವುದಷ್ಟೇ ಅಲ್ಲದೇ, ಖಾಕಿ ಆಚೆಗೂ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವುದಕ್ಕೆ, ತನ್ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಯತ್ನಿಸುತ್ತಿದ್ದಾರೆ.

ಕನ್ನಡದ ಯುವ ನಟ ಭೀಮ ಚಿತ್ರ ಖ್ಯಾತಿಯ ಜಯಸೂರ್ಯ ಅವರ ತಂದೆಯೂ ಆಗಿರುವ ರಾಜೇಶ್ ಅವರು, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡಿರುವ ರಾಜೇಶ್, ಲೋಕಾಯುಕ್ತದಲ್ಲೂ (Lokayuktha) ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ತಮ್ಮ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಸಾಕಷ್ಟು ಬದಲಾವಣೆ ತಂದಿರುವ ಇವರಿಗೆ, ಈಗಾಗಲೇ ಅನೇಕ ಪದಕಗಳು ಕೂಡಾ ಸಂದಿವೆ. ರಾಜೇಶ್ ಅವರ ಸೇವೆಗೆ ಅನೇಕ ಸಂಘ ಸಂಸ್ಥೆಗಳು ಕೂಡ ಗೌರವಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿದ್ಯಾರ್ಥಿಗಳ ಪ್ರತಿಭಟನೆ: ದೆಹಲಿಯ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ ಸೋನು ನಿಗಮ್ – Kannada News | Singer Sonu Nigam postpones his Music concert in Delhi due to NEET Student Protests CJP

ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೆಹಲಿ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳ ಪ್ರತಿಭಟನೆ (Student Protest) ಮುಂದುವರಿದಿದೆ. ಹಲವು ನಟ-ನಟಿಯರು ಹಾಗೂ ಪ್ರಮುಖ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ (Sonu Nigam) ಕೂಡ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ತಮ್ಮ ದೆಹಲಿ ಸಂಗೀತ ಕಚೇರಿಯನ್ನು ಮುಂದೂಡಿದ್ದಾರೆ.

ಜುಲೈ 25ರಂದು ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋನು ನಿಗಮ್ ಅವರ ‘ಬಾಸಿಟಿವಿಟಿ – ಸೋನು ನಿಗಮ್ ರಿಮೆಂಬರ್ಸ್ ರಫಿ’ ಹೆಸರಿನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ಪ್ರಸ್ತುತ ಸನ್ನಿವೇಶವನ್ನು ಪರಿಗಣಿಸಿ ಈ ಕಾರ್ಯಕ್ರಮವನ್ನು ಆಗಸ್ಟ್ 15ಕ್ಕೆ ಮುಂದೂಡಲಾಗಿದೆ. ಈ ಕುರಿತು ಮಾಧ್ಯಮಗಳು ಸಂಪರ್ಕಿಸಿದಾಗ, ‘ಪ್ರಸ್ತುತ ದೇಶದಲ್ಲಿರುವ ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ’ ಎಂದು ಸೋನು ನಿಗಮ್ ಸ್ಪಷ್ಟಪಡಿಸಿದ್ದಾರೆ.

ವೈರಲ್ ವೀಡಿಯೋ ಮತ್ತು ಗೊಂದಲ:

ಇದಕ್ಕೂ ಒಂದು ದಿನದ ಮುನ್ನ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರು ನೀಟ್ ಪ್ರತಿಭಟನೆಯ ಬಗ್ಗೆ ಪ್ರಶ್ನಿಸಿದಾಗ ಸೋನು ನಿಗಮ್ ಕಿರಿಕಿರಿಗೊಂಡ ದೃಶ್ಯ ವೈರಲ್ ಆಗಿತ್ತು. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಅವರು, ‘ನಾನು ಇಲ್ಲಿಗೆ ಬಂದಿರುವುದು ಯಾವುದಕ್ಕಾಗಿ? ಸಾಕು… ಈಗಲೇ ನಿಲ್ಲಿಸಿ’ ಎಂದು ಹೇಳಿ ಮಾತು ಮುಗಿಸಿದ್ದರು. ಈ ವೀಡಿಯೋ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಅವರು ತಮ್ಮ ಸಂಗೀತ ಕಾರ್ಯಕ್ರಮವನ್ನು ಮುಂದೂಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಪ್ರಸಿದ್ಧ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುಭವ್ ಸಿಂಗ್ ಬಸ್ಸಿ ಜುಲೈ 25ರಂದು ದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ತಮ್ಮ ಹಾಸ್ಯ ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಟಿಕೆಟ್ ಖರೀದಿಸಿದ ಎಲ್ಲರಿಗೂ ಹಣ ಮರುಪಾವತಿಸಲಾಗುವುದು ಎಂದು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಿ ವಶಕ್ಕೆ ಒಳಗಾಗಿದ್ದ ನಟಿ ಆಯೆಷಾ ಖಾನ್ ಮೊದಲ ಪ್ರತಿಕ್ರಿಯೆ

ನಟಿ ಸೋಹಾ ಅಲಿ ಖಾನ್ ಅವರು ತಮ್ಮ ಪಾಡ್‌ಕಾಸ್ಟ್‌ನ ಮುಂದಿನ ಸಂಚಿಕೆಯ ಬಿಡುಗಡೆಯನ್ನು ಮುಂದೂಡಿದ್ದಾರೆ. ‘ವಿದ್ಯಾರ್ಥಿಗಳು ತಮಗಾಗಿ ಮತ್ತು ಭವಿಷ್ಯಕ್ಕಾಗಿ ರಸ್ತೆಗೆ ಇಳಿದು ಹೋರಾಡುತ್ತಿದ್ದಾರೆ. ಈ ಸಮಯದಲ್ಲಿ ನಮ್ಮ ಧ್ವನಿಗಿಂತ ಅವರ ಧ್ವನಿಯೇ ಜೋರಾಗಿ ಕೇಳಿಸಬೇಕು, ಹಾಗಾಗಿ ನಾವು ಹಿಂದಕ್ಕೆ ನಿಲ್ಲುತ್ತಿದ್ದೇವೆ’ ಎಂದು ಸೋಹಾ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ZIM: ಭಾರತ- ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Zimbabwe 2nd T20: Match Preview, Live Stream, Date, Time and Squads

ಆತಿಥೇಯ ಜಿಂಬಾಬ್ವೆ ತಂಡವನ್ನು ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್​ಗಳಿಂದ ಸುಲಭವಾಗಿ ಮಣಿಸಿದ್ದ ಟೀಂ ಇಂಡಿಯಾ (India vs Zimbabwe) ಇದೀಗ ಎರಡನೇ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಇದು ಸಾಧ್ಯವಾದರೆ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ (Shreyas Iyer) ಇದು ಮೊದಲ ಟಿ20 ಸರಣಿ ಗೆಲುವಾಗಲಿದೆ. ಹೀಗಾಗಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ಮೊದಲ ಟಿ20 ಸೋತಿರುವ ಜಿಂಬಾಬ್ವೆ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯ ಯಾವಾಗ? ಎಲ್ಲಿ? ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯ ಜುಲೈ 25 ರ ಶನಿವಾರದಂದು ನಡೆಯಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 4:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 4 ಗಂಟೆಗೆ ನಡೆಯಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಟಿ20 ಪಂದ್ಯವನ್ನು ನಾನು ಟಿವಿಯಲ್ಲಿ ಹೇಗೆ ನೋಡಬಹುದು?

ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯವನ್ನು ನೀವು Unite8 ಸ್ಪೋರ್ಟ್ಸ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಮೊಬೈಲ್​ನಲ್ಲಿ FanCode ಅಪ್ಲಿಕೇಶನ್ ಬಳಸಿ ವೀಕ್ಷಿಸಬಹುದು.

IND vs ZIM: ಸ್ಟಾರ್, ಸೋನಿ, ಹಾಟ್ ಸ್ಟಾರ್​ನಲ್ಲಿ ಪ್ರಸಾರವಾಗಲ್ಲ ಟಿ20 ಸರಣಿ! ಎಲ್ಲಿ ವೀಕ್ಷಿಸಬಹುದು?

ಉಭಯ ತಂಡಗಳು

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಾಯಾಂಕ್ ಯಾದವ್.

ಜಿಂಬಾಬ್ವೆ ತಂಡ: ಸಿಕಂದರ್ ರಝಾ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ತನಕಾ ಚಿವಂಗಾ, ಬೆನ್ ಕರನ್, ಬ್ರಾಡ್ ಇವಾನ್ಸ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮನಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಾಬಾನಿ, ಡಿಯೋನ್ ಮೈಯರ್ಸ್, ರಿಚರ್ಡ್ ನ್ಗರ್ವಾ, ನ್ಯೂಮನ್ ನ್ಯಾಮುರಿ, ಮಿಲ್ಟನ್ ಶುಂಬಾ, ಮಿಲ್ಟನ್ ಶುಂಬಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ – Kannada News | NTA terminated 47 officials in major overhaul amid NEET paper leak protests

ನವದೆಹಲಿ, ಜುಲೈ 24: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಎನ್​ಟಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಇನ್ನೂ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಸ್ಥೆಯೊಳಗೆ ಹೊಣೆಗಾರಿಕೆಯನ್ನು ಜಾರಿಗೊಳಿಸಲು ಸರ್ಕಾರವು ಕ್ರಮಗಳನ್ನು ಬಿಗಿಗೊಳಿಸುತ್ತಿದ್ದು, ವಜಾಗೊಂಡಿರುವ ಕೆಲವು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮವನ್ನೂ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳು ಹೊರಬರಲಿವೆ. ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳಿಂದಾಗಿ ವಿವಾದಕ್ಕೆ ಸಿಲುಕಿರುವ ಎನ್‌ಟಿಎ ಸಂಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: TV9 Kannada News Live: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: 47 ಅಧಿಕಾರಿಗಳನ್ನ ವಜಾ ಮಾಡಿದ ಕೇಂದ್ರ ಸರ್ಕಾರ

ನೀಟ್ ಪೇಪರ್ ಲೀಕ್ ಪ್ರಕರಣದಿಂದಾಗಿ ಎನ್‌ಟಿಎ ಕಾರ್ಯವೈಖರಿ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯನ್ನು ಸಂಪೂರ್ಣ ಪುನರ್​​ರಚನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಸ್ಥೆ ವಿಫಲವಾಗಿದೆ ಎಂದು ಟೀಕಿಸಿ ಎನ್‌ಟಿಎಯನ್ನೇ ರದ್ದುಗೊಳಿಸಬೇಕೆಂದು ಹಲವರು ಆಗ್ರಹಿಸಿದ್ದರೂ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಸಮ್ಮತಿ:

ಪೇಪರ್ ಲೀಕ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ಅವಕಾಶ ನೀಡುವ ಕರಡು ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ ಕೆಲವೇ ಗಂಟೆಗಳಲ್ಲಿ ಎನ್‌ಟಿಎ ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಮಂಜೂರಾತಿ ನೀಡಲಾಗಿದ್ದು, ಮುಂದಿನ ವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಈ ಮಸೂದೆಯು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024’ಕ್ಕೆ ತಿದ್ದುಪಡಿ ತರಲಿದ್ದು, ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಗರಿಷ್ಠ 10 ಕೋಟಿ ರೂ. ದಂಡ ವಿಧಿಸಲು ಪ್ರಸ್ತಾಪಿಸಿದೆ.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಎಂದರೇನು?:

NTA (National Testing Agency) ಎಂಬುದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಒಂದು ಸ್ವಾಯತ್ತ ಪರೀಕ್ಷಾ ಸಂಸ್ಥೆಯಾಗಿದೆ. ಭಾರತದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ, ದಕ್ಷತೆಯಿಂದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಮಾನದಂಡಗಳೊಂದಿಗೆ ನಡೆಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ಸಿಬಿಎಸ್‌ಇ (CBSE), ಯುಜಿಸಿ (UGC) ಮುಂತಾದ ಸಂಸ್ಥೆಗಳು ನಡೆಸುತ್ತಿದ್ದ ಬೃಹತ್ ಸ್ಪರ್ಧಾತ್ಮಕ ಪರೀಕ್ಷೆಗಳ ಹೊಣೆಯನ್ನು ತಗ್ಗಿಸಲು NTAಯನ್ನು ಸ್ಥಾಪಿಸಲಾಯಿತು.

NTA ನಡೆಸುವ ಪ್ರಮುಖ ಪರೀಕ್ಷೆಗಳು ಯಾವುವು?:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ದೇಶಾದ್ಯಂತ ವೈದ್ಯಕೀಯ, ಎಂಜಿನಿಯರಿಂಗ್, ನಿರ್ವಹಣೆ, ಉನ್ನತ ಶಿಕ್ಷಣ ಹಾಗೂ ಶಿಕ್ಷಕರ ಅರ್ಹತೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಅವುಗಳ ವಿವರ ಇಲ್ಲಿದೆ.

NEET (UG): ದೇಶದಾದ್ಯಂತ ಎಂ.ಬಿ.ಬಿ.ಎಸ್ (MBBS), ಬಿ.ಡಿ.ಎಸ್ (BDS), ಆಯುಷ್ (AYUSH) ಮುಂತಾದ ಪದವಿ ಹಂತದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಏಕೈಕ ರಾಷ್ಟ್ರೀಯ ಪರೀಕ್ಷೆ.

JEE Main: ಎನ್‌ಐಟಿ (NIT), ಐಐಐಟಿ (IIIT) ಹಾಗೂ ಇತರ ಪ್ರಮುಖ ತಾಂತ್ರಿಕ ಸಂಸ್ಥೆಗಳಲ್ಲಿ ಬಿ.ಇ, ಬಿ.ಟೆಕ್ (B.E/B.Tech) ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ. ಜೊತೆಗೆ ಇದು ಐಐಟಿ (IIT) ಪ್ರವೇಶದ JEE Advanced ಪರೀಕ್ಷೆಗೆ ಅರ್ಹತಾ ಪರೀಕ್ಷೆಯಾಗಿದೆ.

CUET (Common University Entrance Test): ದೇಶದ ಕೇಂದ್ರೀಯ ಮತ್ತು ಇತರ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪದವಿ (UG) ಮತ್ತು ಸ್ನಾತಕೋತ್ತರ (PG) ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪರೀಕ್ಷೆ.

UGC NET: ಸಹಾಯಕ ಪ್ರಾಧ್ಯಾಪಕ ಹುದ್ದೆ (Assistant Professor) ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಅರ್ಹತೆಗಾಗಿ ನಡೆಸುವ ಪರೀಕ್ಷೆ.

CMAT ಮತ್ತು GPAT: ಮ್ಯಾನೇಜ್‌ಮೆಂಟ್ (MBA) ಮತ್ತು ಫಾರ್ಮಸಿ (M.Pharm) ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳು.

CSIR UGC-NET: ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಜೆಆರ್‌ಎಫ್ (JRF) ಮತ್ತು ಉಪನ್ಯಾಸಕ ಹುದ್ದೆಯ ಅರ್ಹತೆಗಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸಂಬಂಧಿಸಿದಂತೆ ಆಗಾಗ ಕೇಳಲಾಗುವ ಪ್ರಮುಖ ಪ್ರಶ್ನೆಗಳು ಮತ್ತು ಅವುಗಳ ಉತ್ತರಗಳು ಹೀಗಿವೆ:

ಪ್ರಶ್ನೆ: NTA ಎಂದರೇನು ಮತ್ತು ಇದರ ಮುಖ್ಯ ಕೆಲಸವೇನು?

ಉತ್ತರ: NTA (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ಎಂಬುದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಭಾರತದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ನಡೆಸುವ ಪ್ರಮುಖ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಇದರ ಮುಖ್ಯ ಕೆಲಸವಾಗಿದೆ.

ಪ್ರಶ್ನೆ: NTAಯನ್ನು ಯಾವಾಗ ಸ್ಥಾಪಿಸಲಾಯಿತು?

ಉತ್ತರ: NTAಯನ್ನು 2017ರ ನವೆಂಬರ್‌ನಲ್ಲಿ ಸ್ಥಾಪಿಸಲಾಯಿತು. ಇದಕ್ಕೂ ಮೊದಲು ಪರೀಕ್ಷೆಗಳನ್ನು ನಡೆಸುತ್ತಿದ್ದ ಸಿಬಿಎಸ್‌ಇ (CBSE) ಮತ್ತು ಯುಜಿಸಿ (UGC)ಯಂತಹ ಸಂಸ್ಥೆಗಳ ಮೇಲಿನ ಹೊರೆಯನ್ನು ತಗ್ಗಿಸಲು ಇದನ್ನು ಜಾರಿಗೆ ತರಲಾಯಿತು.

ಪ್ರಶ್ನೆ: NTA ನಡೆಸುವ ಅತ್ಯಂತ ಪ್ರಮುಖ ಪರೀಕ್ಷೆಗಳು ಯಾವುವು?

ಉತ್ತರ: NTA ದೇಶದ ಬೃಹತ್ ಪರೀಕ್ಷೆಗಳಾದ NEET (UG), JEE (Main), CUET (UG & PG), UGC-NET ಮುಂತಾದ ಪರೀಕ್ಷೆ ನಡೆಸುತ್ತದೆ.

ಪ್ರಶ್ನೆ: NTA ಪರೀಕ್ಷೆಗಳನ್ನು ಯಾವ ರೂಪದಲ್ಲಿ ನಡೆಸಲಾಗುತ್ತದೆ?

ಉತ್ತರ: NTA ನಡೆಸುವ ಹೆಚ್ಚಿನ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತ (CBT – Computer Based Test) ಮಾದರಿಯಲ್ಲಿರುತ್ತವೆ. ಆದರೆ, NEET (UG)ಯಂತಹ ಕೆಲವು ಪರೀಕ್ಷೆಗಳನ್ನು ಪೆನ್ ಮತ್ತು ಪೇಪರ್ (OMR) ರೂಪದಲ್ಲಿ ನಡೆಸಲಾಗುತ್ತದೆ.

ಪ್ರಶ್ನೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಅಭ್ಯಾಸಕ್ಕಾಗಿ NTA ನೀಡುವ ಸೌಲಭ್ಯವೇನು?

ಉತ್ತರ: ಕಂಪ್ಯೂಟರ್ ಜ್ಞಾನವಿಲ್ಲದ ಅಥವಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ NTA ದೇಶಾದ್ಯಂತ ‘ಟೆಸ್ಟ್ ಪ್ರಾಕ್ಟೀಸ್ ಸೆಂಟರ್‌ಗಳನ್ನು’ ಸ್ಥಾಪಿಸಿದೆ. ವಿದ್ಯಾರ್ಥಿಗಳು ಇಲ್ಲಿಗೆ ತೆರಳಿ ಉಚಿತವಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಅಭ್ಯಾಸ ಮಾಡಬಹುದು.

ಪ್ರಶ್ನೆ: NTA ಅಧಿಕೃತ ವೆಬ್‌ಸೈಟ್ ಯಾವುದು?

ಉತ್ತರ: NTAಯ ಅಧಿಕೃತ ವೆಬ್‌ಸೈಟ್: nta.ac.in

Source link

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ! – Kannada News | New Car Prices to Rise From Next Month, Buyers Rush to Book Vehicles This Month

ಬೆಂಗಳೂರು, ಜುಲೈ 24: ಜಿಎಸ್ಟಿ- 2.0 ಜಾರಿಯಾದ ಮೇಲೆ ಹೊಸ ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಇದೀಗ ಯುದ್ದದ ಎಫೆಕ್ಟ್​ನಿಂದ ಕಚ್ಚಾವಸ್ತುಗಳ ಬೆಲೆ ಏರಿಕೆ (Car Price Hike) ಆಗಿದ್ದು, ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಮೇಲೆ 50 ರಿಂದ 60 ಸಾವಿರ ರೂ.ಯಷ್ಟು ಹೆಚ್ಚಳವಾಗಲಿದ್ದು, ಹೀಗಾಗಿ ಜನರು ಈ ತಿಂಗಳೇ ಕಾರು ಬುಕ್ಕಿಂಗ್ ಮಾಡಲು ಮುಂದಾಗಿದ್ದಾರೆ.

ಯುದ್ಧದ ಎಫೆಕ್ಟ್​: ಕಾರುಗಳ ಬೆಲೆ ಏರಿಕೆ

ಜಿಎಸ್ಟಿ 2-0 ಜಾರಿಯಾದ ಮೇಲೆ ಕಾರುಗಳ ಮೇಲೆ 50 ರಿಂದ 1 ಲಕ್ಷ ರೂ.ವರೆಗೆ, ದ್ವಿಚಕ್ರ ವಾಹನಗಳ ಮೇಲೆ 10 ರಿಂದ 20 ಸಾವಿರ ರೂ.ವರೆಗೆ ಬೆಲೆ ಕಡಿಮೆ ಆಗಿತ್ತು. ಈ ಹಿನ್ನೆಲೆ ಹೊಸ ವಾಹನ ಖರೀದಿ ಮಾಡುವವರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗಿತ್ತು. ಇದೀಗ ಯುದ್ಧದ ಎಫೆಕ್ಟ್​ನಿಂದ ಕಚ್ಚಾ ವಸ್ತುಗಳ ಬೆಲೆ ಏರಿಕೆ ಆಗಿರುವ ಹಿನ್ನೆಲೆ, ಹೊಸ ಕಾರುಗಳ ಮೇಲೆ ಎಕ್ಸ್ ಶೋ ರೂಂ ಬೆಲೆ ಮೇಲೆ 45 ರಿಂದ 50 ಸಾವಿರ ರೂ.ವರೆಗೆ ಏರಿಕೆ ಆದರೆ, ಆನ್-ರೋಡ್ ಬೆಲೆ ಮೇಲೆ 15 ರಿಂದ 20 ರೂ.ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ. ಅಂದರೆ ಹೊಸ ಕಾರು ಕೊಳ್ಳುವವರಿಗೆ 60 ರಿಂದ 70 ಸಾವಿರ ರೂ. ಹೆಚ್ಚಾಗಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ

ಇನ್ನು ಕಳೆದ ಕೆಲ ತಿಂಗಳಿನಿಂದ ಕಾರುಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಲೇ ಇದೆ. ಆಗಸ್ಟ್​ ತಿಂಗಳಿನಿಂದ ಹೊಸ ದರ ಜಾರಿ ಆಗಲಿದೆ. ವಾಹನ ತಯಾರಿಕಾ ಸಂಸ್ಥೆಗಳು ತಮ್ಮ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಕೆಯ ಹಾದಿ ಹಿಡಿದಿವೆ. ಪ್ರತಿ ಮಾಡೆಲ್​ಗಳ ಮೇಲೆ 20 ರಿಂದ 50 ಸಾವಿರ ರೂ. ದರ ಏರಿಕೆ ಆಗುವ ಸಾಧ್ಯತೆ ಇದೆ.

ಐಷಾರಾಮಿ ಕಾರುಗಳ ಬೆಲೆ ಏರಿಕೆ ಇಲ್ಲ

ಐಷಾರಾಮಿ ಕಾರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎನ್ನಲಾಗುತ್ತಿದೆ. ಸಾಮಾನ್ಯ ಜನರು ಖರೀದಿ ಮಾಡುವ ಕಾರುಗಳ ಮೇಲೆ ಮಾತ್ರ ಬೆಲೆ ಏರಿಕೆ ಆಗಲಿದೆ. ಅಂದರೆ 10ರಿಂದ 15 ಲಕ್ಷದೊಳಗಿನ ಕಾರುಗಳ ಬೆಲೆ ಹೆಚ್ಚಳವಾಗಲಿದೆ.

ಗ್ರಾಹಕರು ಹೇಳಿದ್ದಿಷ್ಟು 

ಈ ಬಗ್ಗೆ ಗ್ರಾಹಕರಾದ ವೆಂಕಟ್ ಅವರು ಮಾತನಾಡಿದ್ದು, ‘ಮುಂದಿನ ತಿಂಗಳಿನಿಂದ ಕಾರಿನ ಬೆಲೆ ಏರಿಕೆ ಆಗಲಿರುವ ಹಿನ್ನೆಲೆ, ನಾವು ಈ ತಿಂಗಳೇ ಕಾರು ಬುಕ್ ಮಾಡಿದ್ದೇವೆ. ಇದರಿಂದ ನಮಗೆ ತುಂಬಾ ಹಣ ಉಳಿತಾಯವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಒಂದೇ ವರ್ಷದಲ್ಲಿ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ

ಒಟ್ಟಿನಲ್ಲಿ ಜಿಎಸ್​​ಟಿ ಕಡಿಮೆ ಆದ ಮೇಲೆ ಕಾರುಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು, ಆದರೆ ಮುಂದಿನ ತಿಂಗಳಿನಿಂದ ಕಾರುಗಳ ಮೇಲೆ ಬೆಲೆ ಏರಿಕೆ ಆಗ್ತಿರೋದ್ರಿಂದ ಒಂದಷ್ಟು ಗ್ರಾಹಕರಿಗೆ ಹೊರೆ ಆಗುವುದಂತು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿದ್ಯಾರ್ಥಿ ಪ್ರತಿಭಟನೆ: ಮೌನ ವಹಿಸಿದ್ದಕ್ಕೆ ಕಾರಣ ತಿಳಿಸಿದ ಆಮಿರ್ ಖಾನ್ ಪುತ್ರಿ ಇರಾ ಖಾನ್ – Kannada News | Aamir Khan Daughter Ira Khan explains why she did not speak about CJP student protests

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ (CJP Student Protests) ಕುರಿತು ಕಳೆದ ಕೆಲವು ದಿನಗಳಿಂದ ಬಾಲಿವುಡ್‌ನ ಹಲವು ತಾರೆಯರು ಧ್ವನಿ ಎತ್ತಿದ್ದಾರೆ. ಸಲ್ಮಾನ್ ಖಾನ್, ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ ಮತ್ತು ಕರೀನಾ ಕಪೂರ್ ಸೇರಿದಂತೆ ಅನೇಕ ಪ್ರಮುಖರು ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಪಿ (CJP) ಪ್ರತಿಭಟನೆಯನ್ನು ಬೆಂಬಲಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ, ಈ ವಿಷಯದಲ್ಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡದಿದ್ದ ಆಮಿರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan), ತಾವು ಮೌನವಾಗಿದ್ದಕ್ಕೆ ಕಾರಣವೇನೆಂಬುದನ್ನು ಸ್ಪಷ್ಟಪಡಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೀರ್ಘ ವೀಡಿಯೋ ಒಂದನ್ನು ಹಂಚಿಕೊಂಡಿರುವ ಇರಾ ಖಾನ್ ಅವರು, ಈ ವಿಷಯದ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ ‘ನಾನು ಮಾನಸಿಕ ಆರೋಗ್ಯದ ಕುರಿತು ಸದಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇನೆ ಮತ್ತು ಆ ವಿಷಯಗಳ ಬಗ್ಗೆ ಮಾತನಾಡಿದಾಗಲೆಲ್ಲಾ ಜನರ ಗಮನವನ್ನು ಕೋರುತ್ತೇನೆ. ಮಾನಸಿಕ ಆರೋಗ್ಯ ಎಂಬುದು ಜೀವನದ ಪ್ರತಿಯೊಂದು ಭಾಗದಲ್ಲೂ ಮುಖ್ಯ. ಆದರೆ, ನಾನು ಈ ಪ್ರತಿಭಟನೆಯ ಬಗ್ಗೆ ಮಾತನಾಡದೇ ಇರಲು ಕೆಲವು ನಿರ್ದಿಷ್ಟ ಕಾರಣಗಳಿವೆ’ ಎಂದು ವೀಡಿಯೋದ ಆರಂಭದಲ್ಲಿ ಇರಾ ತಿಳಿಸಿದ್ದಾರೆ.

‘ಸುದ್ದಿ ಮತ್ತು ವೀಡಿಯೋಗಳಿಂದ ದೂರವಿರುತ್ತೇನೆ’

ತಮ್ಮ ಮೌನಕ್ಕೆ ಕಾರಣವನ್ನು ವಿವರಿಸಿದ ಇರಾ ಖಾನ್ ಅವರು, ‘ಮೊದಲನೆಯದಾಗಿ, ಈ ವಿಷಯದಲ್ಲಿ ಚರ್ಚೆಗೆ ಹೊಸದಾಗಿ ಸೇರಿಸಲು ನನ್ನ ಬಳಿ ಏನೂ ಇಲ್ಲ ಎನಿಸಿತು. ಮುಖ್ಯವಾಗಿ ನಾನು ಸುದ್ದಿಗಳನ್ನು ನೋಡಿ ತಕ್ಷಣಕ್ಕೆ ಭಾವುಕಳಾಗುವುದಿಲ್ಲ. ಯಾವುದೇ ರೀತಿಯ ಹಿಂಸಾಚಾರ ಅಥವಾ ಪ್ರತಿಭಟನೆಯ ವೀಡಿಯೋಗಳನ್ನು ನಾನು ನೋಡುವುದಿಲ್ಲ. ಪ್ರತಿಭಟನೆ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ. ಆದರೆ ಅವುಗಳನ್ನು ಭಾವುಕವಾಗಿ ನನ್ನ ಮನಸ್ಸಿಗೆ ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಅದು ನನ್ನನ್ನು ತೀವ್ರವಾಗಿ ಕಾಡುತ್ತದೆ. ನಾನು ಅಸಹಾಯಕಳಾಗುತ್ತೇನೆ. ವ್ಯವಸ್ಥೆಯ ಹೊರತಾಗಿ ಅಥವಾ ಯಾವುದೇ ವ್ಯವಸ್ಥೆಯ ಹಂಗಿಲ್ಲದೆ ಒಬ್ಬ ವ್ಯಕ್ತಿಯಾಗಿ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಹೇಗೆ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರತ್ತ ನಾನು ಗಮನ ಹರಿಸುತ್ತೇನೆ. ಇದು ಅತ್ಯುತ್ತಮ ಮಾರ್ಗ ಎಂದು ನಾನು ಹೇಳುತ್ತಿಲ್ಲ, ಆದರೆ ನಾನು ಅನುಸರಿಸುವುದು ಇದನ್ನೇ’ ಎಂದಿದ್ದಾರೆ.

‘ಸಹೋದರಿಯ ವೀಡಿಯೋ ನೋಡಿ ಗಾಬರಿಯಾಗಿದ್ದೆ’

ಇದೇ ವೇಳೆ ತಮ್ಮ ಕುಟುಂಬದ ಅನುಭವವೊಂದನ್ನು ಹಂಚಿಕೊಂಡ ಇರಾ, ‘ಸುದ್ದಿ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿರುವ ಕಾರಣ ನನಗೆ ಈ ಬಗ್ಗೆ ಯಾವುದೇ ಭಾವನೆಗಳು ಮೂಡಿರಲಿಲ್ಲ. ಆದರೆ ಯಾರೋ ಒಬ್ಬರು ನನಗೆ ರೀಲ್ಸ್‌ ಒಂದನ್ನು ಕಳುಹಿಸಿ, ಅದರಲ್ಲಿ ನನ್ನ ಸಹೋದರಿ ಇದ್ದಾಳೆ ಮತ್ತು ಆಕೆಯನ್ನು ಪ್ರತಿಭಟನೆಯಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದಾಗ ನಾನು ತೀವ್ರವಾಗಿ ಗಾಬರಿಯಾಗಿದ್ದೆ. ಆದರೆ ಆಕೆ ಸುರಕ್ಷಿತವಾಗಿದ್ದಾಳೆ ಎಂದು ತಿಳಿದ ತಕ್ಷಣ ನಾನು ಮತ್ತೆ ನನ್ನ ಕೆಲಸಕ್ಕೆ ಮರಳಿದೆ. ನಾನು ಈ ಬಗ್ಗೆ ಮಾತನಾಡದಿರುವುದು ನನಗೆ ಕಾಳಜಿಯಿಲ್ಲ ಎಂಬ ಅರ್ಥವನ್ನು ನೀಡಿದ್ದರೆ ಕ್ಷಮಿಸಿ, ಅದು ನನ್ನ ಉದ್ದೇಶವಾಗಿರಲಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ‘ಮನೆಗೆ ವಾಪಸ್ ಹೋಗಿ’: ಮೋದಿ ಟ್ವೀಟ್ ಬಳಿಕ ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಈ ಪ್ರತಿಭಟನೆಯು ಪರೀಕ್ಷೆಗಳಿಗೆ ಸಂಬಂಧಿಸಿದ್ದು ಎಂಬ ಅರಿವು ನನಗಿದೆ ಎಂದಿರುವ ಇರಾ, ಮಾತುಕತೆ ಮತ್ತು ಭಿನ್ನಾಭಿಪ್ರಾಯಗಳಿಗೆ ಸದಾ ಜಾಗವಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಸುದ್ದಿಗಳಿಂದ ಕಣ್ಣು ಮುಚ್ಚಿ ಕುಳಿತುಕೊಳ್ಳುವುದು ಕೂಡ ಒಂದು ಸೌಲಭ್ಯವೇ ಆಗಿದೆ. ನನ್ನ ಮೌಲ್ಯಗಳಿಗೆ ತಕ್ಕಂತೆ ನಾನು ಹೇಗೆ ಸಹಾಯ ಮಾಡಲು ಸಾಧ್ಯ ಎಂಬುದನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ’ ಎಂದು ಅವರು ವೀಡಿಯೋದ ಕ್ಯಾಪ್ಷನ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೋ ರೂಟ್​ಗೆ ಮತ್ತೆ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕತ್ವ – Kannada News | Joe Root to Return as England Test Captain? ECB Search Nears End After Stokes’ Exit

ಜೋ ರೂಟ್ 65 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದು, 27 ಪಂದ್ಯಗಳಲ್ಲಿ ಗೆಲುವು ಸಾಧಿಸಿ 27 ಪಂದ್ಯಗಳಲ್ಲಿ ಸೋತಿದ್ದಾರೆ. ಹಾಗೆಯೇ ನಾಯಕನಾಗಿ ಜೋ ರೂಟ್ ಟೆಸ್ಟ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದು, 46.71 ಸರಾಸರಿಯಲ್ಲಿ 5418 ರನ್ ಗಳಿಸಿದ್ದಾರೆ, ಇದರಲ್ಲಿ 15 ಶತಕಗಳು ಸೇರಿವೆ(PC-PTI).

Source link

ನಮೋ ಕ್ರೇಜ್; ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ – Kannada News | PM Narendra Modi gained over 1 million followers on Instagram overnight after his Selfie video Release

ನವದೆಹಲಿ, ಜುಲೈ 24: ಪ್ರಧಾನಿ ನರೇಂದ್ರ ಮೋದಿ (Prime Minsiter Narendra Modi) ನಿನ್ನೆ ರಾತ್ರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ (NEET Paper Leak) ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಸೆಲ್ಫಿ ವಿಡಿಯೋ ಅಪ್​ಲೋಡ್ ಮಾಡಿದ್ದರು. ಇದಾದ ಬಳಿಕ ಅವರಿಗೆ ರಾತ್ರೋರಾತ್ರಿ 1.1 ಮಿಲಿಯನ್ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Instagram) ಅವರು ನಿನ್ನೆ ಅಪ್​ಲೋಡ್ ಮಾಡಿದ ಸೆಲ್ಫಿ ವಿಡಿಯೋ ಬಳಿಕ, ಕೇವಲ ಒಂದೇ ರಾತ್ರಿಯಲ್ಲಿ ಸುಮಾರು 11 ಲಕ್ಷ ಹೊಸ ಇನ್‌ಸ್ಟಾಗ್ರಾಮ್ ಅನುಯಾಯಿಗಳನ್ನು ಗಳಿಸಿಕೊಂಡಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಅಪ್‌ಲೋಡ್ ಮಾಡುವ ಮೊದಲು ಪ್ರಧಾನಿ ಮೋದಿ 101 ಮಿಲಿಯನ್ ಫಾಲೋವರ್ಸ್ ಹೊಂದಿದ್ದರು. ಈ ವಿಡಿಯೋ ಅಪ್‌ಲೋಡ್ ಮಾಡಿದ ನಂತರ ಆ ಸಂಖ್ಯೆ 102 ಮಿಲಿಯನ್ ದಾಟಿದೆ. ಫಾಲೋವರ್ಸ್‌ಗಳ ಈ ಹೆಚ್ಚಳವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಪ್ರಿಯತೆ ಎಷ್ಟಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ: ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ

ಮೋದಿಯ ಸೆಲ್ಫಿ ವಿಡಿಯೋ:

ನೀಟ್ (NEET) ಪರೀಕ್ಷಾ ಪೇಪರ್ ಸೋರಿಕೆ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆ, ಪ್ರಧಾನಿ ಮೋದಿ ಅವರು ನಿನ್ನೆ ಮಧ್ಯರಾತ್ರಿ ತಮ್ಮ ಮೊಬೈಲ್‌ನ ಸೆಲ್ಫಿ ಕ್ಯಾಮೆರಾದಲ್ಲಿ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಯಾವುದೇ ಅಧಿಕೃತ ಸ್ಟುಡಿಯೋ ಅಥವಾ ಪೋಡಿಯಂ ಇಲ್ಲದೆ, ನೇರವಾಗಿ ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಈ ‘ಜೆನ್-ಝಡ್’ (Gen-Z) ಶೈಲಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿತ್ತು.

ಪೇಪರ್ ಲೀಕ್ ವಿರುದ್ಧ ಕಠಿಣ ಕಾನೂನುಗಳು ಮತ್ತು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಸ್ಥಾಪನೆಯ ಕುರಿತು ಪ್ರಕಟಿಸಿದ ಈ ವಿಡಿಯೋ ಕೋಟ್ಯಂತರ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದರ ಬೆನ್ನಲ್ಲೇ ಅವರ ಇನ್‌ಸ್ಟಾಗ್ರಾಮ್ ಖಾತೆಗೆ ಲಕ್ಷಾಂತರ ಜನ ಹೊಸ ಫಾಲೋವರ್ಸ್ ಸೇರ್ಪಡೆಗೊಂಡಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿ ಅವರ ಒಟ್ಟು ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ 102 ಮಿಲಿಯನ್‌ಗೆ ತಲುಪಿದೆ.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ

ಮೋದಿಯ ಜನಪ್ರಿಯತೆ ಕಡಿಮೆಯೇನಿಲ್ಲ!:

ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಜಾಗತಿಕ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ನರೇಂದ್ರ ಮೋದಿ ಈಗಾಗಲೇ 100 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳ ಅಪರೂಪದ ಮೈಲಿಗಲ್ಲನ್ನು ದಾಟುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿಯವರ ಫಾಲೋವರ್‌ಗಳ ಸಂಖ್ಯೆ ಅಮೆರಿಕದ ಅಧ್ಯಕ್ಷ ಟ್ರಂಪ್, ಯುಕೆ ಪ್ರಧಾನಿ ಮತ್ತು ಇತರ ಜಾಗತಿಕ ನಾಯಕರಿಗಿಂತ ಹಲವು ಪಟ್ಟು ಹೆಚ್ಚಾಗಿದೆ ಎಂಬುದು ಅವರ ಜನಪ್ರಿಯತೆಯನ್ನು ಸಾರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:26 pm, Fri, 24 July 26

Source link

Exit mobile version