ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

Source link

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​ ಪಾರ್ಸಲ್ ತಂದುಕೊಡುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕುಣಿಗಲ್​​ಗೆ ಎಂಟ್ರಿ ಕೊಟ್ಟಿದ್ದ ಬೇಲೂರು ಪೋಲೀಸರು, ಮನೆ ಬಳಿ ಬರುತ್ತಿದ್ದಂತೆ ಡೇವಿಡ್​​ ಮತ್ತು ಪ್ರಿಯಾಂಕಾ ಲಾಕ್​​ ಆಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು! – Kannada News | India has embarrassed us by giving bowling to Rinku Singh

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದಿದೆ. ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಆದರೆ ಅತ್ತ ಈ ಬಾರಿ ಪಾಕಿಸ್ತಾನ್ ತಂಡ ಸೋತಿರುವುದು ಬರೋಬ್ಬರಿ 61 ರನ್​ಗಳ ಅಂತರದಿಂದ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ಚಾನೆಲ್​ಗಳಲ್ಲಿ ಚರ್ಚೆಗಳು ನಡೆದಿದ್ದವು. ಈ ಚರ್ಚೆಯ ನಡುವೆ ಪಾಕ್ ಚಾನೆಲ್ ಆ್ಯಂಕರ್ ನೀಡಿರುವ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ.

ಈ ಪ್ಯಾನೆಲ್ ಚರ್ಚೆಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ ಕ್ರಿಕೆಟಿಗರು ಕಾಣಿಸಿಕೊಂಡಿದ್ದರು. ಈ ಚರ್ಚೆಯ ನಡುವೆ ಈ ಬಾರಿಯ ಸೋಲಿನ ಅತ್ಯಂತ ಮುಜುಗರ ಸಂಗತಿಯೆಂದರೆ ಅವರು ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿರುವುದು ಎಂದು ಆ್ಯಂಕರ್ ವ್ಯಂಗ್ಯವಾಡಿದ್ದಾರೆ.

ಹೈವೋಲ್ಟೇಜ್ ಪಂದ್ಯದಲ್ಲಿ ರಿಂಕು ಸಿಂಗ್​ನಂತಹ ಪಾರ್ಟ್ ಟೈಮ್ ಬೌಲರ್​ಗಳಿಂದ ಓವರ್ ಮಾಡಿಸಿ ಟೀಮ್ ಇಂಡಿಯಾ ಪಾಕಿಸ್ತಾನದ ಮರ್ಯಾದೆಯನ್ನೇ ಕಳೆದಿದ್ದಾರೆ. ಇದು ಅತ್ಯಂತ ಮುಜುಗರದ ವಿಷಯ ಎಂದು ಪಾಕ್ ಆ್ಯಂಕರ್ ಹೇಳುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಅಂದಹಾಗೆ ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಒಂದು ಓವರ್ ಎಸೆದಿದ್ದರು. ಹಾಗೆಯೇ ತಿಲಕ್ ವರ್ಮಾ 2 ಓವರ್​ಗಳನ್ನು ಬೌಲಿಂಗ್ ಮಾಡಿದ್ದರು. ಅಂದರೆ ಟೀಮ್ ಇಂಡಿಯಾ ಪಾಕ್ ವಿರುದ್ಧ ಮೂರು ಓವರ್​ಗಳನ್ನು ಪಾರ್ಟ್ ಟೈಮ್ ಬೌಲರ್​ಗಳಿಂದಲೇ ಹಾಕಿಸಿದ್ದರು. ಇದಾಗ್ಯೂ 18 ಓವರ್​ ಆಡಿದ್ದ ಪಾಕಿಸ್ತಾನ್ ತಂಡ ಕಲೆಹಾಕಿದ್ದು ಕೇವಲ 114 ರನ್​ ಮಾತ್ರ.

 

Source link

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗ್ಯಾಕಂದ್ರು ಸಚಿವ ಮಹದೇವಪ್ಪ! – Kannada News | Leadership Change Row in Congress: HC Mahadevappa ‘Tail Wagging the Dog’ Remark Sparks Debate

ಬೆಂಗಳೂರು, ಫೆಬ್ರವರಿ 16: ಹಿರಿಯ ಸಚಿವ ಹೆಚ್​ಸಿ ಮಹದೇವಪ್ಪ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಮತ್ತು ಹೈಕಮಾಂಡ್ ಮಧ್ಯಪ್ರವೇಶದ ಅಗತ್ಯತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಮಹದೇವಪ್ಪ ಅವರು ಅದಕ್ಕೆ ನೇರವಾಗಿ ಉತ್ತರಿಸದೆ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದರು. ‘ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದರು. ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಲು ಮುಂದಾದ ಮಹದೇವಪ್ಪ, ತಾವು ಹೈಕೋರ್ಟ್ ಹೇಳಿದ್ದನ್ನಷ್ಟೇ ಹೇಳಿದ್ದು. ಯಾವುದೇ ಅನಗತ್ಯ ಗೊಂದಲ ಸೃಷ್ಟಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದರು. ಆದಾಗ್ಯೂ, ಅವರ ಈ ಮಾತುಗಳು ಆಡಳಿತಾರೂಢ ಪಕ್ಷದೊಳಗಿನ ಅಸಮಾಧಾನವನ್ನು ಪ್ರತಿಬಿಂಬಿಸುತ್ತಿವೆ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ. ಅಂದರೆ ಶಿವರಾತ್ರಿಯಂದು ಪಂದ್ಯ ಗೆದ್ದರೆ ಭಾರತ ವಿಶ್ವಕಪ್ ಗೆಲ್ಲುವುದಿಲ್ಲ ಎಂಬ ಪ್ರತೀತಿ ಇದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದಿನ ಅಂಕಿ ಅಂಶಗಳನ್ನು ಮುಂದಿಡಲಾಗುತ್ತಿದೆ. ಕಾಕತಾಳೀಯ ಎಂಬಂತೆ ಈ ಹಿಂದೆ ಭಾರತ ತಂಡವು ಶಿವರಾತ್ರಿಯ ದಿನದಂದು ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದರೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ.

  • 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ಅಮೋಘ ಗೆಲುವು ದಾಖಲಿಸಿತ್ತು. ಮಹಾ ಶಿವರಾತ್ರಿ ದಿನ ನಡೆದಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ವಿಜಯ ಸಾಧಿಸಿತ್ತು.
  • 2015ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಶಿವರಾತ್ತಿಯಂದು ನಡೆದಿದ್ದ ಆ ಪಂದ್ಯವನ್ನು ಟೀಮ್ ಇಂಡಿಯಾ 76 ರನ್​ಗಳಿಂದ ಗೆದ್ದುಕೊಂಡಿದ್ದರು.

ಈ ಎರಡೂ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಎರಡೂ ವಿಶ್ವಕಪ್​ಗಳಲ್ಲೂ ಆಸ್ಟ್ರೇಲಿಯಾ ವಿರುದ್ಧವೇ ಸೋಲನುಭವಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

  • 2003 ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 125 ರನ್​ಗಳ ಅಂತರದಿಂದ ಹೀನಾಯ ಸೋಲನುಭವಿಸಿತ್ತು.
  • 2015 ರ ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿತ್ತು.

ಅಂದರೆ ಶಿವರಾತ್ರಿಯಂದು ಭಾರತ ತಂಡ ಪಾಕಿಸ್ತಾನ್ ವಿರುದ್ಧ ಗೆದ್ದಾಗ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೇ ಕಾಕತಾಳೀಯತೆಯನ್ನು ಮುಂದಿಟ್ಟುಕೊಂಡು ಈ ಬಾರಿ ಭಾರತ ತಂಡ ಕಪ್ ಗೆಲ್ಲುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ

ಆದರೆ ಈ ಬಾರಿ ಬಲಿಷ್ಠ ಪಡೆಯನ್ನೇ ಹೊಂದಿರುವ ಟೀಮ್ ಇಂಡಿಯಾ ಎಲ್ಲಾ ಕಾಕತಾಳೀಯತೆಗಳನ್ನು ಬದಿಗಿರಿಸಿ ವಿಶ್ವ ಚಾಂಪಿಯನ್​ ಆಗಿ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

Source link

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್ – Kannada News | Cyber Fraudsters Target Bengaluru Police Commissioner: Fake Facebook Account Created to Demand Money

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ.

ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ ಮೂಲಕ ಹಣ ಕೇಳುವ ಯತ್ನ ನಡೆದಿದೆ ಎನ್ನಲಾಗಿದೆ. ಮೊದಲಿಗೆ ನಂಬಿಕೆ ಮೂಡಿಸಿ ನಂತರ ಹಣ ದೋಚುವ ಉದ್ದೇಶದಿಂದಲೇ ಈ ಖಾತೆ ಸೃಷ್ಟಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ರೀತಿಯ ವಂಚನೆ ಇದೇ ಮೊದಲಲ್ಲ. ಈ ಹಿಂದೆ ಕೂಡ ಅಲೋಕ್ ಕುಮಾರ್ ಹಾಗೂ ಭೀಮಾಶಂಕರ ಅವರ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯಲಾಗಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ

ಈ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಖಾತೆಗಳನ್ನು ಸೃಷ್ಟಿಸಿದವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರ ಹೆಸರಿನ ಖಾತೆಗಳನ್ನು ಕಂಡಕೂಡಲೇ ನಂಬುವ ಮೊದಲು ಪರಿಶೀಲನೆ ನಡೆಸಿ ಪೂರ್ವಾಪರ ತಿಳಿದುಕೊಳ್ಳಬೇಕು. ಸಂಶಯಾಸ್ಪದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್ – Kannada News | Rashid Khan Creates New World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​​ನಲ್ಲಿ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಕೂಡ 700 ವಿಕೆಟ್ ಪಡೆದಿರಲಿಲ್ಲ. ಈ ಹಿಂದೆ ಮೂವರು ಬೌಲರ್​ಗಳು 600 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಆರು ನೂರರ ಪಟ್ಟಿಯಿಂದ ರಶೀದ್ ಖಾನ್ ಏಳು ನೂರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ತನ್ನ 27ನೇ ವಯಸ್ಸಿನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. 

ಟಿ20 ಕ್ರಿಕೆಟ್​ನಲ್ಲಿ ಈವರೆಗೆ 513ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ 11794 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 12961 ರನ್ ನೀಡಿ ಬರೋಬ್ಬರಿ 700 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 700 ವಿಕೆಟ್ ಕಬಳಿಸಿದ ವಿಶ್ವದ ಮೊದಲ ಹಾಗೂ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಎರಡನೇ ಬೌಲರ್ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (631) ಹೆಸರಿನಲ್ಲಿದೆ. ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವಿಂಡೀಸ್​ನ ಸುನಿಲ್ ನರೈನ್ ಇದ್ದು, ಈವರೆಗೆ 613 ವಿಕೆಟ್ ಕಬಳಿಸಿದ್ದಾರೆ. ಅಂದರೆ ಇಲ್ಲಿ ಸುನಿಲ್ ನರೈನ್ ನಿವೃತ್ತಿಯಂಚಿನಲ್ಲಿರುವ ಕಾರಣ ರಶೀದ್ ಖಾನ್ ಅವರ ಈ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗುವುದಿಲ್ಲ ಎಂದೇ ಹೇಳಬಹುದು.

Published On – 1:53 pm, Mon, 16 February 26

Source link

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Source link

ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ – Kannada News | PM Modi Interview: Private Sector’s Quality Focus Key to Viksit Bharat and Manufacturing Growth

ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು ಒತ್ತಿ ಹೇಳಿದರು.

ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಧಿಸಲು ಉದ್ಯಮದ ಸಾಮರ್ಥ್ಯಗಳಿಗೆ ಅನುಗುಣವಾಗಿ ನಾವೀನ್ಯತೆ ಮತ್ತು ದೊಡ್ಡ ಹೂಡಿಕೆಗಳ ಪ್ರಾಮುಖ್ಯತೆ ಬಗ್ಗೆ ಮಾತನಾಡಿದ್ದಾರೆ. ಕೈಗಾರಿಕೀಕರಣ ಮತ್ತು ನಗರೀಕರಣದೊಂದಿಗೆ, ಗ್ರಾಮೀಣ ಪ್ರದೇಶದ ಅನೇಕ ಯುವಕರು ನಗರಗಳಿಗೆ ತೆರಳಿ ಜಾಗತಿಕವಾಗಿ ಸಂಪರ್ಕ ಹೊಂದಿದ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಹಿಂದಿನ ಸರ್ಕಾರಗಳು ಉತ್ಪಾದನಾ ವಲಯದಲ್ಲಿ ಕೆಲಸ ಮಾಡಲಿಲ್ಲ: ಪ್ರಧಾನಿ ಮೋದಿ
ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಈ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು, ದುರದೃಷ್ಟವಶಾತ್, ಹಿಂದಿನ ಸರ್ಕಾರಗಳು ಈ ದಿಕ್ಕಿನಲ್ಲಿ ಹೆಚ್ಚಿನ ಕೆಲಸ ಮಾಡಲಿಲ್ಲ. ಆದರೆ ನಾವು ನಮ್ಮ ವಿಧಾನವನ್ನು ಬದಲಾಯಿಸಿದ್ದೇವೆ. ಅಭಿವೃದ್ಧಿ ಹೊಂದಿದ ಭಾರತದ ನಮ್ಮ ದೃಷ್ಟಿಕೋನಕ್ಕೆ ಉತ್ಪಾದನೆ ಯಾವಾಗಲೂ ಕೇಂದ್ರವಾಗಿದೆ. ಯಾವುದೇ ದೇಶವು ಕೇವಲ ಗ್ರಾಹಕರಾಗಿರುವುದರಿಂದ ವೇಗವಾಗಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಅವರು ಜಾಗತಿಕ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಉತ್ಪಾದಕರಾಗಬೇಕು.

ಮತ್ತಷ್ಟು ಓದಿ: ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ

ಇದಕ್ಕಾಗಿಯೇ ಮೇಕ್ ಇನ್ ಇಂಡಿಯಾವನ್ನು ಪ್ರಾರಂಭಿಸಲಾಯಿತು. ಕಾಲಾನಂತರದಲ್ಲಿ, ಉತ್ಪಾದನೆ-ಸಂಬಂಧಿತ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಪ್ರಯತ್ನಗಳು ಭಾರತದ ಕೈಗಾರಿಕಾ ನೆಲೆಯನ್ನು ಪುನರ್ನಿರ್ಮಿಸುತ್ತಿವೆ, ಜಾಗತಿಕ ಮೌಲ್ಯ ಸರಪಳಿಗಳಲ್ಲಿ ನಮ್ಮನ್ನು ಸಂಯೋಜಿಸುತ್ತಿವೆ ಮತ್ತು ಗಮನಾರ್ಹ ಉದ್ಯೋಗವನ್ನು ಸೃಷ್ಟಿಸುತ್ತಿವೆ. ನಮ್ಮ ಯುವಕರು ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ನಾವು ಸಹಾಯ ಮಾಡುತ್ತಿದ್ದೇವೆ. ಫಲಿತಾಂಶಗಳು ನಮ್ಮೆದುರೇ ಕಾಣುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತ ಹಿಂದಿನ ರಫ್ತು ದಾಖಲೆಗಳನ್ನು ಮುರಿದಿದೆ: ನರೇಂದ್ರ ಮೋದಿ

ಭಾರತದ ಸರಕುಗಳ ರಫ್ತು ಹಿಂದಿನ ದಾಖಲೆಗಳನ್ನು ಮುರಿದಿದೆ. ಒಂದು ದಶಕದ ನಂತರ, ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ಉತ್ಪಾದಕ ರಾಷ್ಟ್ರವಾಗಿದೆ. ಇದಕ್ಕೂ ಮೊದಲು, ಭಾರತ ತನ್ನ ಎಲ್ಲಾ ಮೊಬೈಲ್ ಫೋನ್‌ಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಜಾಗತಿಕವಾಗಿ ಪ್ರಸಿದ್ಧವಾದ ಫೋನ್ ಬ್ರ್ಯಾಂಡ್‌ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ.

ಭಾರತವು ಔಷಧಗಳ ವಿಶ್ವಾಸಾರ್ಹ ಪೂರೈಕೆದಾರ , ನಮ್ಮ ಎಲೆಕ್ಟ್ರಾನಿಕ್ಸ್ ಉತ್ಪಾದನೆಯೂ ಬೆಳೆದಿದೆ. ಜವಳಿ, ಎಂಜಿನಿಯರಿಂಗ್ ಸರಕುಗಳು ಮತ್ತು ರಾಸಾಯನಿಕಗಳಲ್ಲಿ ಇದೇ ರೀತಿಯ ಪ್ರಗತಿಯನ್ನು ಕಾಣಬಹುದು. ಒಂದು ಕಾಲದಲ್ಲಿ ಲಘುವಾಗಿ ಪರಿಗಣಿಸಲಾಗಿದ್ದ ಕ್ಷೇತ್ರಗಳಲ್ಲಿ ಈ ಬದಲಾವಣೆ ಸ್ಪಷ್ಟವಾಗಿ ಗೋಚರಿಸುತ್ತದೆ.

ಕಳೆದ ದಶಕದಲ್ಲಿ ಭಾರತದಲ್ಲಿ ಆಟಿಕೆ ರಫ್ತು ವೇಗವಾಗಿ ಬೆಳೆದಿದೆ ಎಂದು ಅವರು ಹೇಳಿದರು. ನಮ್ಮ ಯುವ ನಾವೀನ್ಯಕಾರರು ಭಾರತದಲ್ಲಿ ಸ್ಟಾರ್ಟ್‌ಅಪ್ ಕ್ರಾಂತಿಯನ್ನು ಹುಟ್ಟುಹಾಕಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾವು ಒಂದು ದಶಕದೊಳಗೆ ಕೆಲವೇ ನೂರು ಸ್ಟಾರ್ಟ್‌ಅಪ್‌ಗಳಿಂದ 200,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಬೆಳೆದಿದ್ದೇವೆ. ನಾವು ಇವುಗಳನ್ನು ತಂತ್ರಜ್ಞಾನ ಸ್ಟಾರ್ಟ್‌ಅಪ್‌ಗಳೆಂದು ಭಾವಿಸುತ್ತೇವೆ, ಆದರೆ ಅವುಗಳಲ್ಲಿ ಹಲವು ಉತ್ಪಾದನೆಗೆ ಸಂಬಂಧಿಸಿದ ಸ್ಟಾರ್ಟ್‌ಅಪ್‌ಗಳಾಗಿವೆ. ಇವು ನಮ್ಮ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ. ಉತ್ಪಾದನೆಯಲ್ಲಿನ ಬೆಳವಣಿಗೆಯು ನಮ್ಮ ಯುವಕರಿಗೆ ಗಮನಾರ್ಹ ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸಿದೆ.

2026 ರ ಬಜೆಟ್ ಉತ್ಪಾದನಾ ಕಾರ್ಯತಂತ್ರವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ:ನರೇಂದ್ರ ಮೋದಿ
ಇದಲ್ಲದೆ, 2026 ರ ಬಜೆಟ್ ಉತ್ಪಾದನಾ ಕಾರ್ಯತಂತ್ರವನ್ನು ಮುನ್ನಡೆಸುತ್ತದೆ. ಇದು ವಲಯವನ್ನು ಬಲಪಡಿಸುತ್ತದೆ.ಬಜೆಟ್2026 ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದರು.

ಎಂಎಸ್​ಎಂಇ ಬಗ್ಗೆ ಪ್ರಧಾನಿ ಹೇಳಿದ್ದೇನು?
ಭಾರತದ ಬಲವಾದ ಉತ್ಪಾದನೆ, ಸೇವೆ ಮತ್ತು ಎಂಎಸ್‌ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ವಲಯವು ಭಾರತವು ತನ್ನದೇ ಆದ ನಿಯಮಗಳ ಮೇಲೆ 38 ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾತುಕತೆ ನಡೆಸಲು ಅನುವು ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಜವಳಿ, ಚರ್ಮ, ರಾಸಾಯನಿಕಗಳು, ಕರಕುಶಲ ವಸ್ತುಗಳು, ಆಭರಣಗಳು ಮತ್ತು ಇತರ ವಲಯಗಳಲ್ಲಿನ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸಲು ನಮ್ಮ ಮುಕ್ತ ವ್ಯಾಪಾರ ಒಪ್ಪಂದಗಳ ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸರ್ಕಾರಿ ಬಜೆಟ್​ಗಳು ಕೇವಲ ಲೆಕ್ಕಪತ್ರಗಳ ದಾಖಲೆಯಲ್ಲ
ಸರ್ಕಾರಿ ಬಜೆಟ್‌ಗಳು ಕೇವಲ ಲೆಕ್ಕಪತ್ರ ದಾಖಲೆಗಳಲ್ಲ, ಬದಲಾಗಿ ದೇಶದ ದೀರ್ಘಕಾಲೀನ ಅಭಿವೃದ್ಧಿಯ ಮಾರ್ಗಸೂಚಿಯಾಗಿದೆ .ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಉತ್ಪನ್ನಗಳು ಹಿಂದಿನ ಎಲ್ಲಾ ರಫ್ತು ದಾಖಲೆಗಳನ್ನು ಮುರಿದಿದೆ.

ಸುಧಾರಣೆಯೇ ಎನ್ ಡಿಎ ಸರ್ಕಾರದ ಬದ್ಧತೆ:  ಪ್ರಧಾನಿ ಮೋದಿ
ಯುಪಿಎ ಸರ್ಕಾರದ ಆರ್ಥಿಕ ದುರಾಡಳಿತವನ್ನು ಪ್ರಧಾನಿ ಮೋದಿ ತೀವ್ರವಾಗಿ ಟೀಕಿಸಿದರು.ಇದರಿಂದಾಗಿ ಭಾರತವು ಇತರ ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ವಿಶ್ವಾಸದಿಂದ ಮಾತುಕತೆ ನಡೆಸಲು ಸಾಧ್ಯವಾಗಲಿಲ್ಲ.ಯುಪಿಎ ಆಡಳಿತದ ಅವಧಿಯಲ್ಲಿ, ವ್ಯಾಪಾರ ಒಪ್ಪಂದದ ಮಾತುಕತೆಗಳು ಪ್ರಾರಂಭವಾಗಿ ನಂತರ ಮುರಿದು ಬೀಳುತ್ತಿದ್ದವು.ಅನೇಕ ದೇಶಗಳೊಂದಿಗೆ ದೀರ್ಘ ಮಾತುಕತೆಗಳ ಹೊರತಾಗಿಯೂ, ಯಾವುದೇ ಕಾಂಕ್ರೀಟ್ ಫಲಿತಾಂಶಗಳನ್ನು ಸಾಧಿಸಲಾಗಲಿಲ್ಲ.ಸುಧಾರಣೆಯು ಎನ್ ಡಿಎ ಸರ್ಕಾರದ ಬದ್ಧತೆಯಾಗಿದೆ.

ಭಾರತದಲ್ಲಿ ಕಂಪ್ಯೂಟಿಂಗ್ ಸಾಮರ್ಥ್ಯ ಮತ್ತು ಡೇಟಾ ಸೆಂಟರ್ ಮೂಲಸೌಕರ್ಯವನ್ನು ವಿಸ್ತರಿಸುವ ಮೂಲಕ ಭಾರತವು ಅಭಿವೃದ್ಧಿ ಹೊಂದುತ್ತಿರುವ AI ಪರಿಸರ ವ್ಯವಸ್ಥೆಗೆ ಅಡಿಪಾಯ ಹಾಕುತ್ತಿದೆ. ಮುಂದಿನ ದಶಕಗಳಲ್ಲಿ ಪ್ರಧಾನಿ ಮೋದಿ ಮೂರು ಪ್ರಮುಖ ಸುಧಾರಣೆಗಳಿಗೆ ಆದ್ಯತೆಗಳನ್ನು ವಿವರಿಸಿದ್ದಾರೆ.

ಭಾರತದ ಪ್ರಗತಿಗೆ ಮಹಿಳೆಯರ ನೇತೃತ್ವ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಮಹಿಳೆಯರ ಕಲ್ಯಾ ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸರ್ಕಾರದ ನೀತಿಗಳು ಮತ್ತು ನಿರ್ಧಾರಗಳ ಹಿಂದಿನ ಪ್ರಮುಖ ಮಾರ್ಗದರ್ಶಿ ಶಕ್ತಿ ಮಹಿಳೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಮತ್ತು ಮಹಿಳೆಯರು ದೇಶದ ಪ್ರಗತಿಯನ್ನು ಮುನ್ನಡೆಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed

ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲವರು ತಾವಾಗಿಯೇ ಹೊರಬರುವಲ್ಲಿ ಯಶಸ್ವಿಯಾದರು, ಆದರೆ ಅನೇಕರು ಒಳಗೆ ಸಿಲುಕಿಕೊಂಡು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version