Headlines

ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ: ಪತ್ನಿಯ ಹರಕೆ ಸಲ್ಲಿಸಲು ಪತಿಯ ಪ್ರೀತಿಯ ಆಸರೆ – Kannada News | Oxygen Cylinder Carried for Mayakka Devi Darshan: Husband’s Love Helps Ailing Wife Fulfil Vow at Chinchali Jatra

ಚಿಕ್ಕೋಡಿ, ಫೆಬ್ರವರಿ 5: ಅಚಲವಾದ ಶ್ರದ್ಧೆ, ಭಕ್ತಿ, ನಂಬಿಕೆ ಇದ್ದರೆ ಯಾವುದೂ ಅಡ್ಡಿಯಾಗಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಮಾಯಕ್ಕಾ ದೇವಿ ಜಾತ್ರೆಯಲ್ಲಿ ಕಂಡು ಬಂದ ಅಪರೂಪದ ವಿದ್ಯಮಾನ ಸಾಕ್ಷಿಯಾಗಿದೆ. ತೀವ್ರ ಉಸಿರಾಟದ ತೊಂದರೆ ಇದ್ದರೂ ಪತ್ನಿಯ ಇಚ್ಛೆಯನ್ನು ನೆರವೇರಿಸಲು ಪತಿ ಆಕ್ಸಿಜನ್ ಸಿಲಿಂಡರ್ ಜೊತೆಗೇ ಬಂದು ದೇವಿಯ ದರ್ಶನ ಮಾಡಿಸಿದ್ದು ಭಕ್ತರ ಮನಸೂರೆಗೊಳ್ಳುವಂತೆ ಮಾಡಿದೆ. ಭಾರತ ಹುಣ್ಣಿಮೆ ಪ್ರಯುಕ್ತ ನಡೆಯುತ್ತಿರುವ ಚಿಂಚಲಿ ಮಾಯಕ್ಕಾ ದೇವಿ ಜಾತ್ರೆಗೆ ಲಕ್ಷಾಂತರ ಭಕ್ತರು ಬರುತ್ತಿದ್ದಾರೆ. ಭಕ್ತಸಾಗರದ…

Read More

Afghanistan-Pakistan Conflict: ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ಯುದ್ಧ ಸ್ಥಿತಿ, ದಾಳಿ, ಪ್ರತಿ ದಾಳಿ, ತಾಲಿಬಾನ್ ಕ್ರಮದಿಂದ ಬೆರಗಾದ ಪಾಕ್ – Kannada News | Violent Border Clashes Erupt Between Pakistan and Afghan Forces

ಇಸ್ಲಾಮಾಬಾದ್, ಫೆಬ್ರವರಿ 27: ಪಾಕಿಸ್ತಾನ(Pakistan) ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿಗಳು ಎದುರಾಗುತ್ತಿವೆ. ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 55 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಹೇಳಿದೆ. ಪಾಕಿಸ್ತಾನ ಕೂಡ ತರಾತುರಿಯಲ್ಲಿ ಮತ್ತೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಅಫ್ಘಾನ್ ಸೈನಿಕರ ದಾಳಿಯ ನಂತರ, ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾದಲ್ಲಿನ ತಾಲಿಬಾನ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಕೆಲವೊಮ್ಮೆ ಪಾಕಿಸ್ತಾನ ರಕ್ತದೊಂದಿಗೆ ಹೋಳಿ ಆಡುತ್ತಿದ್ದರೆ, ಕೆಲವೊಮ್ಮೆ ಅಫ್ಘಾನಿಸ್ತಾನ ಸೇಡಿನ ಬೆಂಕಿಯಲ್ಲಿ…

Read More

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ – Kannada News

ಬೆಂಗಳೂರು, ಜೂನ್ 6: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು ವಾಪಸ್ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ಮುನಿಯಪ್ಪ ಹಾಗೂ ರಾಮಲಿಂಗಾ…

Read More

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?

ಮಂಗಳೂರು, ಮಾರ್ಚ್​ 27: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಕೊಲೆಗೆ ನೈಜ ಕಾರಣವೇನೆಂಬುದು ತಿಳಿಯಬೇಕಿದೆ. ಆರಿಫ್ ಬೈಕ್​ಗೆ ಕಾರಿನಿಂದ ಡಿಕ್ಕಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿಶೀಟರ್ ಆಗಿದ್ದ ಆರಿಫ್, ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ…

Read More

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ…

Read More

CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್

IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಸಂಜು ಸ್ಯಾಮ್ಸನ್ (48) ಸ್ಫೋಟಕ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಆಯುಷ್ ಮ್ಹಾತ್ರೆ ಕೂಡ 17 ಎಸೆತಗಳಲ್ಲಿ 38 ರನ್ ಚಚ್ಚಿದ್ದರು. ಇವರ…

Read More

‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ – Kannada News | Gunshots fired at director Rohit Shetty Mumbai home in Juhu

ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ (Firing) ಮಾಡಲಾಗಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ (Rohit Shetty) ನಿವಾಸ ಇದೆ. ಶನಿವಾರ (ಜನವರಿ 31) ರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಕೃತ್ಯ ಎಸಗಿದವರು ಯಾರು ಎಂಬುದು ಇನ್ನೂ ಪತ್ತೆ ಆಗಿಲ್ಲ. ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾಗಿರುವ ಮುಂಬೈ…

Read More

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್ – Kannada News

ರಾಕಿಂಗ್ ಸ್ಟಾರ್ ಯಶ್ ಅವರು (ಯಶ್) ಕೇವಲ ಹೀರೋ ಆಗಿ ಮಾತ್ರವಲ್ಲ, ಮಾನವೀಯತೆ ತೋರುವ ವ್ಯಕ್ತಿಯಾಗಿಯೂ ಇಷ್ಟ ಆಗುತ್ತಾರೆ. ಅಭಿಮಾನಿಗಳು ಕೊಟ್ಟಷ್ಟೇ ಪ್ರೀತಿಯನ್ನು ಇವರು ಕೊಡುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಈಗಾಗಲೇ ಸಿಕ್ಕಿವೆ. ಇತ್ತೀಚೆಗೆ ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಯಶ್ ಅವರು ವಿಡಿಯೋ ಕಾಲ್​​ ಮೂಲಕ ಮಾತನಾಡಿದ್ದಾರೆ. ಅಭಿಮಾನಿಗೆ ಅವರು ಧೈರ್ಯ ತುಂಬಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಪ್ರಶಂಸೆಗೆ ಕಾರಣವಾಗಿದೆ. ಯಶ್ ಅವರು ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟಕ್ಕೆ…

Read More

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ…

Read More

Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ – Kannada News | Man Depicting Prahlad Enters Holi Bonfire in Mathura, Claims 45 Day Fast

ಮಥುರಾ, ಮಾರ್ಚ್​ 03: ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೃಹತ್ ಬೆಂಕಿಯ ಗೋಪುರದ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುವುದು ಮಾತ್ರವಲ್ಲದೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More