Headlines

ಬಿಡುಗಡೆ ಆಗಿ ತಿಂಗಳಿಗೂ ಮುಂಚೆಯೇ ಒಟಿಟಿಗೆ ಬಂದ ಪ್ರಭಾಸ್ ಸಿನಿಮಾ – Kannada News | The Raja Saab movie releasing on OTT soon here is the date

ಪ್ರಭಾಸ್ (Prabhas), ಭಾರತದ ಅತಿ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್. ‘ಬಾಹುಬಲಿ’ ಸಿನಿಮಾ ಸರಣಿಯ ಬಳಿಕ ಪ್ರಭಾಸ್ ರೇಂಜ್ ಬಹಳ ಎತ್ತರಕ್ಕೇರಿದೆ. ಯಾವ ಮಟ್ಟಿಗೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ನೂರಾರು ಕೋಟಿ ಗಳಿಕೆ ಮಾಡುತ್ತವೆ. ಹಾಗೆಂದ ಮಾತ್ರಕ್ಕೆ ಕೆಟ್ಟ ಸಿನಿಮಾಗಳು ಸೂಪರ್ ಹಿಟ್ ಆಗಿಯೇ ತೀರುತ್ತವೆ ಎಂದೇನೂ ಇಲ್ಲ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಸಹ ಕೆಟ್ಟ ಸಿನಿಮಾ ನೀಡಿದರೆ ಸೋಲುವುದು ಖಾತ್ರಿ ಎಂಬುದಕ್ಕೆ ಪ್ರಭಾಸ್ ಅವರ ಇತ್ತೀಚೆಗಿನ ಸಿನಿಮಾ ಉದಾಹರಣೆ ಆಗಿದೆ. ಪ್ರಭಾಸ್…

Read More

ಹೆಣ್ಣು ಮಗುವಿಗೆ ಜನ್ಮ ನೀಡಿದ ಅಟ್ಲಿ ಪತ್ನಿ ಪ್ರಿಯಾ; ಸಂಭ್ರಮದಲ್ಲಿ ‘ರಾಕಾ’ ಸಿನಿಮಾ ನಿರ್ದೇಶಕ – Kannada News | Raaka director Atlee wife Priya welcomed second child Baby Girl

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ (Priya Atlee) ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ (Raaka) ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ…

Read More

ರಾಧಾ-ರಾಣವ್ ಪ್ರೀತಿ ಶುರುವಾಗಿದ್ದು ಹೇಗೆ? ಬಿಚ್ಚಿಟ್ಟ ಕಿರುತೆರೆ ನಟಿ – Kannada News | Amruthadhare Fame Radha Bhagavati Reveals Her Love Story with Ranav Gowda in Viral Interview

ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಕಿರುತೆರೆಯ ಜನಪ್ರಿಯ ಜೋಡಿ ರಾಧಾ ಭಗವತಿ ಹಾಗೂ ರಾಣವ್ ಗೌಡ ಅವರ ಹೊಸ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಯೂಟ್ಯೂಬ್‌ನ ‘ರಾಜೇಶ್ ರಿವೀಲ್ಸ್’ ಸಂದರ್ಶನದಲ್ಲಿ ಭಾಗಿಯಾಗಿರುವ ರಾಧಾ, ತಮಗೆ ರಾಣವ್ ಮೇಲಿನ ಪ್ರೀತಿ ಹೇಗೆ ಶುರುವಾಯಿತು ಎಂಬ ಆಸಕ್ತಿದಾಯಕ ರಹಸ್ಯವನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಸೆಟ್‌ನಲ್ಲಿ ರಾಣವ್ ಕಾಣದಿದ್ದಾಗ ಕಾಡಿದ ವಿರಹ! ಸಂದರ್ಶನದಲ್ಲಿ ತಮ್ಮ ಪ್ರೇಮಕಥೆಯ ದಿನಗಳನ್ನು ನೆನಪಿಸಿಕೊಂಡಿರುವ ರಾಧಾ ಭಗವತಿ, ಮೊದಲಿಗೆ ನಾನೇ ಅವರನ್ನ ಇಷ್ಟಪಟ್ಟಿದ್ದು’ ಎಂದು ಮುಗುಳ್ನಗುತ್ತಲೇ…

Read More

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!

ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ. ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ ಸಿರಿಗೆರೆ ತರಳುಬಾಳು…

Read More

ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

ರೈಲ್ವೆ ನಿಲ್ದಾಣದ ಚಿತ್ರImage Credit source: PTI ನವದೆಹಲಿ, ಜೂನ್ 1: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ರೈಲುಗಳಲ್ಲಿ ಹೆಚ್ಚುತ್ತಿರುವ ಭಾರಿ ಜನಸಂದಣಿಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು (Indian Railways) ಇಂದಿನಿಂದ (ಜೂನ್ 1, 2026) ಟಿಕೆಟ್ ಬುಕಿಂಗ್ ಮತ್ತು ಪ್ರಯಾಣದ ನಿಯಮಗಳಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಲಿವೆ. ಈ ನಿಯಮಗಳ ಪೈಕಿ ವೈಟಿಂಗ್ ಲಿಸ್ಟ್ ಟಿಕೆಟ್​ಗಳ ಸಂಖ್ಯೆಗೆ ಮಿತಿ ಹಾಕುವುದೂ ಒಂದು….

Read More

ಓಮನ್ ಕರಾವಳಿಯಲ್ಲಿ 24 ಭಾರತೀಯ ನಾವಿಕರಿದ್ದ ಹಡಗಿನಲ್ಲಿ ಬೆಂಕಿ ಅವಘಡ – Kannada News

ನವದೆಹಲಿ, ಜೂನ್ 8: ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಸರಕು ಹಡಗಿನ ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. 24 ಭಾರತೀಯ ನಾವಿಕರು ಈ ಹಡಗಿನಲ್ಲಿದ್ದರು. ಈ ದಾಳಿಯು ಹಡಗಿನ ಎಂಜಿನ್ ಕೋಣೆಯಲ್ಲಿ ಭಾರಿ ಸ್ಫೋಟಕ್ಕೆ ಕಾರಣವಾಯಿತು. ಇದರಿಂದ ಹಡಿಗಿನಲ್ಲಿ ಬೆಂಕಿ ಹೊತ್ತಿಕೊಂಡಿತು, ಇದು ಸಿಬ್ಬಂದಿಗಳಲ್ಲಿ ಭೀತಿಯನ್ನುಂಟುಮಾಡಿತು. ಇರಾನ್ (Iran) ಮತ್ತು ಇಸ್ರೇಲ್ ನಡುವಿನ ಯುದ್ಧವು ಪುನರಾರಂಭಗೊಂಡಿರುವ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ಮಧ್ಯೆ ಈ ಘಟನೆ ನಡೆದಿದೆ. ವರದಿಗಳ…

Read More

‘ದೃಶ್ಯಂ 3’ ಹೇಗಿದೆ? ನೆಟ್ಟಿಗರು ಕೊಟ್ಟ ಪಾರದರ್ಶಕ ವಿಮರ್ಶೆ ಇಲ್ಲಿದೆ – Kannada News | Drishyam 3 X Review Mohanlal Movie Get mixed reviews on Twitter

ಮಲಯಾಳಂ ಚಿತ್ರರಂಗದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ‘ದೃಶ್ಯಂ’ ಸರಣಿಯ ಮೂರನೇ ಭಾಗ ‘ದೃಶ್ಯಂ 3’ ಇಂದು (ಮೇ 21) ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಜೀತು ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್ ಮತ್ತೊಮ್ಮೆ ಜಾರ್ಜ್‌ಕುಟ್ಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್ ಮತ್ತು ಆಶಾ ಶರತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಸಿನಿಮಾ ವೀಕ್ಷಿಸಿದ ಒಂದು ವರ್ಗದ ಪ್ರೇಕ್ಷಕರು ಚಿತ್ರದ ಕಥೆ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಆರ್​. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…

Read More

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mars Enters Taurus: Daily Horoscope for All 12 Zodiac Signs on July 22, 2026 by Dr Basavaraj Guruji

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ…

Read More